Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bengaluru International Film Festival2023 | ಮಾನವತೆಯ ನೂಲಿನಿಂದ ಹೆಣೆದ ‘ಕೊರಮ’ ತುಳು ಸಿನಿಮಾಗೆ ಚಿತ್ರ ರಸಿಕರು ಫಿದಾ

14 ದಿನದಲ್ಲಿ ಒಂದು ಕಲಾತ್ಮಕ ಚಿತ್ರವನ್ನು ತುಳು ನಾಡಿನ ಪರಿಸರದಲ್ಲಿ ಬಹಳ ಯೋಜಿತವಾಗಿ‌ ಮುಗಿಸಿ ಕಣ್ಣಿಗೆ- ಮನಸ್ಸಿನ ಭಾವನೆಗಳಿಗೆ ರಸಗವಳ ಉಣಬಡಿಸಿದ್ದಾರೆ ನಿರ್ದೇಶಕ ಶಿವಧ್ವಜ್

by Bengaluru Wire Desk
March 25, 2023
in Bengaluru Focus, News Wire
Reading Time: 2 mins read
0

ಬೆಂಗಳೂರು, ಮಾ.25 www.bengaluruwire.com : ಕೆಲಸಕ್ಕಿದ್ದ ಒಡೆಯನೇ ತನ್ನ ಆರಾಧ್ಯ ದೈವ ಎನ್ನುವ, ತನಗಾಗಿ ತನ್ನ ಜೀವನವನ್ನೇ ಸಮರ್ಪಿಸಿಕೊಂಡ ಕೆಲಸದವನನ್ನು, ಆತ ಕೆಲಸಗಾರ ಎನ್ನುವುದನ್ನು ಮರೆತು ಹೆಚ್ಚಿಗೆ ಪ್ರೀತಿ ತೋರಿಸುವ ಯಜಮಾನ.

ಹೀಗೆ 80 ದಶಕದಲ್ಲಿ ತುಳುನಾಡು ಪರಿಸರದಲ್ಲಿನ ಜಾತಿ ವ್ಯವಸ್ಥೆಗೆ ಮಾನವತೆಯ ನೂಲನ್ನು ಹಿಡಿದು ನಿರ್ಮಿಸಿದ ‘ಕೊರಮ’ ಚಿತ್ರ 14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ‌ ನೋಡುಗರ ಮನಸೂರೆಗೊಂಡಿತು.

ಕಳೆದ 25 ವರ್ಷಗಳಿಂದ ಕನ್ನಡ ಮತ್ತು ತುಳು ಚಿತ್ರರಂಗದಲ್ಲಿ ನಟ, ನಿರ್ದೇಶಕ, ನಿರ್ಮಾಪಕರಾಗಿ ಸೇವೆ ಸಲ್ಲಿಸುತ್ತಿರುವ ಶಿವಧ್ವಜ್ ಶೆಟ್ಟಿ ಅವರು ಬರೆದು ನಿರ್ದೇಶಿಸಿರುವ ‘ಕೊರಮ’ ಎಂಬ ತುಳು ಚಲನಚಿತ್ರ ನೋಡುಗರನ್ನು ನೆನಪಿನ ಮಳೆಯಲ್ಲಿ ತೋಯಿಸಿದ್ದಲ್ಲದೆ ಕಣ್ ರೆಪ್ಪೆಯನ್ನು ಒದ್ದೆಯಾಗಿಸಿದ್ದು ಸುಳ್ಳಲ್ಲ. ಸುಮಾರು ಎರಡು ಕಾಲು ಗಂಟೆಯ ಈ ಸಿನಿಮಾ ಮುಗಿಯುತ್ತಿದ್ದಂತೆ ಚಿತ್ರೋತ್ಸವಕ್ಕೆ ಬಂದ ವೀಕ್ಷಕರು ಚಪ್ಪಾಳೆ ತಟ್ಟಿ ತಮ್ಮ ಸಂತೋಷ ವ್ಯಕ್ತಪಡಿಸಿದರು.

ಕೊರಮನ ನಟನೆಯಲ್ಲಿ ಮೋಹನ್ ಶೇಣಿ ಅಮೋಘ ನಟನೆ ಪ್ರದರ್ಶಿಸಿ ಮಿಂಚಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಮೂಲತಃ ನೀನಾಸಂ ವಿದ್ಯಾರ್ಥಿಯಾಗಿ ನಟನೆಯಲ್ಲಿ ಸಾಕಷ್ಟು ಅನುಭವ ಹೊಂದಿರುವ ಮೋಹನ್ ಕೊರಮನ ಪಾತ್ರಕ್ಕೆ ಜೀವ ತುಂಬಿದ್ದಾರೆ.

ಕೊರಮ ನ ಪಾತ್ರದಲ್ಲಿ ಮೋಹನ್ ಶೇಣಿ

‘ನನ್ನ ಬಾಲ್ಯದಿಂದಲೂ ನಮ್ಮ ನೆಲದಲ್ಲಿ ಕಂಡದ್ದನ್ನು ಚಿತ್ರಕ್ಕೆ ಕಥಾಹಂದರವಾಗಿ ಆಯ್ಕೆ ಮಾಡಿಕೊಂಡಿದ್ದೆ. ಪ್ರತಿ ಪಾತ್ರ ವರ್ಗವನ್ನು ನಿಧಾನವಾಗಿ ತೋರಿಸುತ್ತಾ ಅಂತ್ಯದಲ್ಲಿ ಸಿನಿಮಾಗೆ ಟ್ವಿಸ್ಟ್ ಕೊಡಲು ಸ್ವಲ್ಪ ಸಮಯ ಬೇಕಾಗುತ್ತದೆ. ಈ ಹಿಂದೆ ಭೂತಕೋಲದಲ್ಲಿ ‘ಗಗ್ಗರ’ ತುಳು ಸಿನಿಮಾ ಮಾಡಿದ್ದೆ ಅದು ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪಡೆದಿತ್ತು.‌ ಕೇವಲ 14 ದಿನಗಳಲ್ಲಿ ಈ ಸಿನಿಮಾವನ್ನು ಬಹಳ ಸಮಯವನ್ನು ಹೊಂದಿಸಿಕೊಂಡು ಯೋಜಿತವಾಗಿ ಈ ಸಿನಿಮಾ ನಿರ್ಮಿಸಿದ್ದೇವೆ’ ಎಂದು ಶಿವಧ್ವಜ್ ಹೇಳಿದರು.

ಮಂಜಯ್ಯ ಹೆಗ್ಗಡೆ ಮಗನ ಮದುವೆಯ ಕಾರ್ಯಕ್ರಮ ಒಂದು ದೃಶ್ಯ

‘ಕೊರಮ ಗ್ರಾಮದ ಮುಖಂಡ ಮಂಜಯ್ಯ ಹೆಗ್ಗಡೆ ಅವರ ಬಲಗೈ ಬಂಟನಂತೆ ಕೆಲಸ ಮಾಡುತ್ತಾನೆ. ಮತ್ತು ಈ ಕೆಲಸ ಬಿಟ್ಟರೆ ತನಗೆ ಗುರುತು ಸಿಗುವುದಿಲ್ಲ ಎನ್ನುವಷ್ಟು ಆ ಮನೆಯ ಮೇಲೆ ಅವಲಂಬಿತನಾಗಿರುತ್ತಾನೆ.  ಮಂಜಯ್ಯ ಹೆಗ್ಗಡೆಯವರ ಮಗ ಕೊರಮನನ್ನು ಒಂದಿನಿತು ಇಷ್ಟಪಡುವುದಿಲ್ಲ. ಮಂಜಯ್ಯ ಹೆಗ್ಗಡೆಯವರ ಮಗನಿಗೆ ಮದುವೆ ಆಗದ ಹೊರತು ಕೊರಮ ಮದುವೆಯ ಯೋಚನೆ ಮಾಡುವುದಿಲ್ಲ’.

ಕೊರಮನ ಮದುವೆಯಾದ ಸಂದರ್ಭದ ಚಿತ್ರ

‘ಉದ್ಯೋಗದಾತ ಮತ್ತು ಕೆಲಸಗಾರನ ನಡುವಿನ ಸಂಬಂಧವು ಬದಲಾಗುವ ಪರಿಸ್ಥಿತಿಗಳು ಚಿತ್ರದ ಕಥೆಯಾಗಿದೆ.  ನಮ್ಮ ಜೀವನದಲ್ಲಿ ಕೊರಮ ಮತ್ತು ಮಾಜಯ್ಯ ಹೆಗ್ಗಡೆ ಅವರನ್ನು ನೋಡಿದ್ದೇವೆ, ಕಥೆ ಎಲ್ಲರನ್ನು ಮುಟ್ಟುತ್ತದೆ ಎಂಬ ನಂಬಿಕೆ ಇದೆ’ ಎನ್ನುತ್ತಾರೆ ಶಿವಧ್ವಜ್ ಶೆಟ್ಟಿ.

ಬೆಂಗಳೂರು ಅಂತರರಾಷ್ಠ್ರೀಯ ಚಲನಚಿತ್ರೋತ್ಸವದ ಪ್ರದರ್ಶನದಲ್ಲಿ ಮಾತನಾಡುತ್ತಿರುವ ನಿರ್ದೇಶಕ ಶಿವಧ್ವಜ್

“ಈ ಚಿತ್ರವನ್ನು 14ನೆಯ ಬೆಂಗಳೂರು ಅಂತರರಾಷ್ಠ್ರೀಯ ಚಲನಚಿತ್ರೋತ್ಸವದ ಪ್ರದರ್ಶನಕ್ಕೆ ಆಯ್ಕೆ ಮಾಡಿದ್ದಕ್ಕೆ ಆಯ್ಕೆ ಸಮಿತಿಗೆ ಧನ್ಯವಾದ ತಿಳಿಸುತ್ತೇನೆ. ಈ ಚಿತ್ರ 80ನೇ ದಶಕದಲ್ಲಿ‌ ನಡೆಯುವ ಕಥಾ ಹಂದರವನ್ನು‌ ಹೊಂದಿದೆ.  ನಿಮ್ಮ ಅಭಿಪ್ರಾಯಗಳನ್ನು ಎದುರು ನೋಡುತ್ತಿದ್ದೇನೆ. ನಿಮಗೆ ಚಿತ್ರ ಇಷ್ಟವಾದರೆ ಅಥವಾ ಇಷ್ಟವಾಗದಿದ್ದರೆ ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಅಭಿಪ್ರಾಯ ತಿಳಿಸಿ ಎಂದು ನಟ ಹಾಗೂ ನಿರ್ದೇಶಕ ಶಿವಧ್ವಜ್ ಶೆಟ್ಟಿ ಹೇಳಿದ್ದಾರೆ.

ಒರಿಯನ್ ಮಾಲ್ ಪಿವಿಆರ್ ಆವರಣದಲ್ಲಿನ ಚಲನಚಿತ್ರೋತ್ಸವದಲ್ಲಿ ಜನಜಂಗುಳಿ

ಚಿತ್ರದ ಮೊದಲಾರ್ಧ ಸ್ವಲ್ಪ‌ ನಿಧಾನವಾಗಿ ಕರೆದೊಯ್ದರೂ, ಸೆಕೆಂಡ್ ಹಾಫ್ ನಲ್ಲಿ ಚಿತ್ರಕಥೆ ಬೇರೆಯದೇ ರೀತಿ ಕವಲೊಡೆದು ಅಂತಿಮವಾಗಿ ಸಮಾಜದಲ್ಲಿ ಕೂಡಿ‌ ಬಾಳಿದರೆ ಸ್ವರ್ಗ ಸುಖ ಎಂಬ ಸಂದೇಶವನ್ನು ನೀಡುತ್ತದೆ. ಈ ಹಂತದಲ್ಲಿ‌ ನಡೆಯುವ ಸನ್ನಿವೇಶಗಳು ಸಿನಿ ನೋಡುಗರನ್ನು ಸೀಟಿನ‌ ತುದಿಯಲ್ಲಿ ಕುಳಿತು ನೋಡುವಂತೆ ಮಾಡುವಲ್ಲಿ ಯಶಸ್ವಿಯಾಗುತ್ತದೆ. ಈ ಮೂಲಕ ‘ಕೊರಮ’ ಚಿತ್ರ ಅಂತರರಾಷ್ಟ್ರೀಯ ಪ್ರಶಸ್ತಿ ಬಾಚುವ ಎಲ್ಲ ಲಕ್ಷಣಗಳನ್ನು‌ ಹೊಂದಿದೆ.

ಈಶ್ವರಿದಾಸ್ ಶೆಟ್ಟಿ ಮತ್ತು ರಾಜೇಶ್ವರಿ ರೈ ಚಿತ್ರವನ್ನು ನಿರ್ಮಿಸಿದ್ದಾರೆ.  ಚಿತ್ರವನ್ನು ಅಡ್ಯಾರ್ ಮಾಧವ ನಾಯಕ್ ಅವರು ಪ್ರಸ್ತುತಪಡಿಸಿದ್ದಾರೆ.  ಮೋಹನ್ ಶೇಣಿ, ಬಿಂದು ರಕ್ಷಿದಿ, ಗುರು ಹೆಗಡೆ, ರೂಪ ವರ್ಕಾಡಿ, ಲಕ್ಷ್ಮಣ್ ಕುಮಾರ್ ಮಲ್ಲೂರು, ಜಿನಪ್ರಸಾದ್, ದಿವ್ಯಶ್ರೀ ನಾಯಕ್ ಮತ್ತಿತರರು ತಾರಾಗಣದಲ್ಲಿದ್ದಾರೆ.  ಚಿತ್ರದಲ್ಲಿನ ಬಹುತೇಕ ಕಲಾವಿದರು ಸ್ಥಳೀಯರು.  ಸುರೇಶ್ ಭೈರಸಂದ್ರ ಅವರ ಛಾಯಾಗ್ರಹಣವಿದೆ.

ಈ ಸಿನಿಮಾ ಸಹಜತೆಯನ್ನು ಕೊನೆಯವರೆಗೂ ಕಾಯ್ದುಕೊಂಡಿದೆ. ಸುಮಾರು ಎರಡು ಗಂಟೆ ಕಳೆದು ಹೋಗಿದ್ದೆ ತಿಳಿಯದಾಯಿತು. ಇಂತಹ ಸಿನಿಮಾ ಆಯ್ಕೆ ಮಾಡಿದ ಆಯ್ಕೆ ಸಮಿತಿಗೆ ಧನ್ಯವಾದ ಎಂದು ಕಲಾವಿದೆ ರಾಧಾ ರಾಮಚಂದ್ರ ಹೇಳಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Congress Candidates First List | ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ – ಇಲ್ಲಿದೆ ಪೂರ್ಣ ಮಾಹಿತಿ

Next Post

BW SPECIAL | ಬೆಂಗಳೂರು ವಿವಿಯಲ್ಲಿ ಸತ್ತ ಸ್ಥಿತಿಯಲ್ಲಿ ಅಪರೂಪದ ಕಾಡುಪಾಪ ಪತ್ತೆ : ಜೀವವೈವಿಧ್ಯತೆಯ ಕುರುಹಿಗೆ ಮತ್ತೊಂದು ಸಾಕ್ಷಿ

Next Post

BW SPECIAL | ಬೆಂಗಳೂರು ವಿವಿಯಲ್ಲಿ ಸತ್ತ ಸ್ಥಿತಿಯಲ್ಲಿ ಅಪರೂಪದ ಕಾಡುಪಾಪ ಪತ್ತೆ : ಜೀವವೈವಿಧ್ಯತೆಯ ಕುರುಹಿಗೆ ಮತ್ತೊಂದು ಸಾಕ್ಷಿ

ಮಿಂಟೋ ಆಸ್ಪತ್ರೆಯ ನೇತ್ರಾಧಿಕಾರಿ ಡಾ.ಎಂ.ವೆಂಕಟೇಶ್ ಗೆ ಅತ್ಯುತ್ತಮ ಸೇವಾ ರತ್ನ ಪ್ರಶಸ್ತಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d