Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | Power Demand | ತಾಪಮಾನ ಹೆಚ್ಚಳ : ಬೆಸ್ಕಾಂ ವಿದ್ಯುತ್ ಬೇಡಿಕೆ ಬಳಕೆಯೂ ಜೋರು – ಕರೆಂಟ್ ಸರಾಸರಿ ಬೇಡಿಕೆ 7,282 ಮೆಗಾವ್ಯಾಟ್ ಏರಿಕೆ

ಕಳೆದ ವರ್ಷಕ್ಕಿಂತ ಈ ವರ್ಷದ ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಬಹುತೇಕ ದಿನಗಳಲ್ಲಿ ತಾಪಮಾನ ಏರಿಕೆಯಿಂದಾಗಿ ವಿದ್ಯುತ್ ಬೇಡಿಕೆ ಹಾಗೂ ಬಳಕೆ ಕೂಡ ಹೆಚ್ಚಾಗಿರುವುದು ಬೆಸ್ಕಾಂ ಅಧಿಕೃತ ಅಂಕಿ ಅಂಶಗಳಿಂದ ತಿಳಿದು ಬರುತ್ತದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಏಪ್ರಿಲ್ ನಲ್ಲಿ ಸರಾಸರಿ ವಿದ್ಯುತ್ ಬಳಕೆ 22.919 ದಶಲಕ್ಷ ಯೂನಿಟ್ ಗೆ ಹೆಚ್ಚಳವಾಗಿದೆ.

by Bengaluru Wire Desk
April 22, 2023
in Bengaluru Focus, BW Special, News Wire
Reading Time: 1 min read
0
ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

ಬೆಂಗಳೂರು, ಏ.22 www.bengaluruwire.com : ರಾಜ್ಯದಲ್ಲಿ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಬೆಳಗ್ಗೆ ಹೊತ್ತು ಮನೆಯೊಳಗೆ, ಕಚೇರಿಯೊಳಗೆ ಇರೋದು ಕುಕ್ಕರ್ ನಲ್ಲಿ ಹಾಕಿ ಬೇಸಿದಂತಾಗುವಷ್ಟು ತಾಪಮಾನ ಏರಿಕೆಯಾಗಿದೆ. ಇನ್ನೊಂದೆಡೆ ಬೆಂಗಳೂರು ಸೇರಿದಂತೆ ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಬಳಕೆ ಪ್ರಮಾಣವೂ ಏರಿಕೆಯಾಗುತ್ತಿದೆ. ಏಪ್ರಿಲ್ ತಿಂಗಳಿನಲ್ಲಿ ಬೆಸ್ಕಾಂನಲ್ಲಿನ ವಿದ್ಯುತ್ ಬೇಡಿಕೆಯು 18ನೇ ತಾರೀಖಿನವರೆಗೆ ಸರಾಸರಿಯಾಗಿ 7,282 ಮೆಗಾವ್ಯಾಟ್ ಗೆ ತಲುಪಿದೆ.

ಕಳೆದ ವರ್ಷ (2022) ಮಾರ್ಚ್ ತಿಂಗಳಿನಲ್ಲಿ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ವಿದ್ಯುತ್ ಬೇಡಿಕೆ ಸರಾಸರಿಯಾಗಿ 6,334 ಮೆಗಾವ್ಯಾಟ್ ನಷ್ಟಿತ್ತು. ಆದರೆ ಈ ವರ್ಷ ಇದೇ ಅವಧಿಯಲ್ಲಿ ವಿದ್ಯುತ್ ಬೇಡಿಕೆ 7,155 ಮೆ.ವ್ಯಾ ನಷ್ಟಿತ್ತು. ಅಂದರೆ ಕಳೆದ ವರ್ಷಕ್ಕೆ ಹೋಲಿಸಿದರೆ 821 ಮೆಗಾವ್ಯಾಟ್ ನಷ್ಟು ವಿದ್ಯುತ್ ಬೇಡಿಕೆ ಹೆಚ್ಚಾಗಿದೆ.

ಬೆಂಗಳೂರಿನ ಸಾಂದರ್ಭಿಕ ಚಿತ್ರ

ಮಾರ್ಚ್ ತಿಂಗಳು ಬಿಟ್ಟು ಏಪ್ರಿಲ್ ತಿಂಗಳಿನಲ್ಲಿ ವಿದ್ಯುತ್ ಬೇಡಿಕೆ ಪ್ರಮಾಣದ ಗ್ರಾಫ್ ಮತ್ತಷ್ಟು ಏರಿಕೆಯಾಗಿದೆ. 2022ರ ಏಪ್ರಿಲ್ ನಲ್ಲಿ 18ನೇ ತಾರೀಖಿನವರೆಗೆ ವಿದ್ಯುತ್ ಬೇಡಿಕೆ ಸರಾಸರಿಯಾಗಿ 6,256 ಮೆ.ವ್ಯಾ ಇದ್ದರೆ, 2023ರ ಏಪ್ರಿಲ್ ನ ಇದೇ ಅವಧಿಯಲ್ಲಿ 7,282 ಮೆ.ವ್ಯಾ ನಷ್ಟು ಏರಿಕೆಯಾಗಿದೆ. ಅಂದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ವಿದ್ಯುತ್ ಬೇಡಿಕೆ ಸರಾಸರಿಯಾಗಿ 1,026 ಮೆ.ವ್ಯಾ ನಷ್ಟು ಏರಿಕೆಯಾಗಿದೆ.

ಏಪ್ರಿಲ್ ನಲ್ಲಿ ಸರಾಸರಿ ವಿದ್ಯುತ್ ಬಳಕೆ 22.919 ದಶಲಕ್ಷ ಯೂನಿಟ್ ಹೆಚ್ಚಳ :

ಇನ್ನು ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಬಳಕೆಯ ಸರಾಸರಿ ಪ್ರಮಾಣ 2022ರ ಮಾರ್ಚ್ ನಲ್ಲಿ 122.068 ಮಿಲಿಯನ್ ಯೂನಿಟ್ ಗೆ ತಲುಪಿದ್ದರೆ, 2023ರ ಮಾರ್ಚ್ ನಲ್ಲಿ 126.917 ದಶಲಕ್ಷ ಯೂನಿಟ್ ಗೆ ತಲುಪಿದೆ. ಅಂದರೆ ಇಲ್ಲಿ ವಿದ್ಯುತ್ ಬಳಕೆಯ ಪ್ರಮಾಣ ಕಳೆದ ವರ್ಷಕ್ಕಿಂತ 4.849 ದಶಲಕ್ಷ ಯೂನಿಟ್ ಹೆಚ್ಚಳವಾಗಿದೆ. ಇನ್ನು ಏಪ್ರಿಲ್ ನಲ್ಲಿ ವಾತಾವರಣದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ವಿದ್ಯುತ್ ಬಳಕೆಯ ಪ್ರಮಾಣವು ಹೆಚ್ಚಾಗಿದೆ. 2022ರ ಏಪ್ರಿಲ್ (ಏ.1ರಿಂದ 18ರ ತನಕ) ನಲ್ಲಿ ವಿದ್ಯುತ್ ಬಳಕೆಯ ಪ್ರಮಾಣ ಸರಾಸರಿಯಾಗಿ ದಿನಕ್ಕೆ 115.715 ದಶಲಕ್ಷ ಯೂನಿಟ್ ನಷ್ಟಿದ್ದರೆ, ಈ ವರ್ಷ ಇದೇ ಅವಧಿಯಲ್ಲಿ ಬಳಕೆಯು 138.634 ದಶಲಕ್ಷ ಯೂನಿಟ್ ನಷ್ಟಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ವಿದ್ಯುತ್ ಬಳಕೆಯು ಪ್ರತಿ ದಿನ ಸರಾಸರಿ 22.919 ಮಿಲಿಯನ್ ಯೂನಿಟ್ ನಷ್ಟು ಹೆಚ್ಚಾಗಿದೆ.

ವ್ಯವಸಾಯ ಭೂಮಿಗೆ ಪಂಪ್ ಸೆಟ್ ಮೂಲಕ ನೀರು ಹರಿಸುತ್ತಿರುವ ಪ್ರಾತಿನಿಧಿಕ ಚಿತ್ರ

ಬೆಂಗಳೂರಿನ ಏಪ್ರಿಲ್ ಸರಾಸರಿ ವಿದ್ಯುತ್ ಬೇಡಿಕೆ 489 ಮೆ.ವ್ಯಾ ಏರಿಕೆ :

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರ್ಚ್ ತಿಂಗಳಿಗಿಂತ ಏಪ್ರಿಲ್ ತಿಂಗಳಿನಲ್ಲಿ ಬಿಸಿಲ ಝಳ ಹೆಚ್ಚು. ಹೀಗಾಗಿ ವಿದ್ಯುತ್ ಬೇಡಿಕೆಯಲ್ಲೂ ಹೆಚ್ಚಳವಾಗಿರುವುದನ್ನು ಕಾಣಬಹುಹುದಾಗಿದೆ. ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ ಮಾರ್ಚ್ ತಿಂಗಳಿನ ಸರಾಸರಿ ವಿದ್ಯುತ್ ಬೇಡಿಕೆ 2022ರಲ್ಲಿ 2,738 ಮೆ.ವ್ಯಾ ನಷ್ಟಿತ್ತು. ಆದರೆ 2023ರ ಮಾರ್ಚ್ ನಲ್ಲಿ 12ನೇ ತಾರೀಖಿನ ನಂತರ ನಗರದಲ್ಲಿ ಉಷ್ಣಾಂಶ ಪ್ರಮಾಣ 33 ಡಿಗ್ರಿಯಿಂದ 35 ಡಿಗ್ರಿ ಸೆಲ್ಸಿಯಸ್ ವರೆಗಿತ್ತು. ಹೀಗಾಗಿ  ಇದೇ ಅವಧಿಯಲ್ಲಿ ಸರಾಸರಿ ವಿದ್ಯುತ್ ಬೇಡಿಕೆ 3,147 ಮೆ.ವ್ಯಾ ನಷ್ಟಿತ್ತು. ಅಂದರೆ ಬೇಸಿಗೆ ಬಿಸಿಯ ಕಾರಣಕ್ಕೆ 409 ಮೆ.ವ್ಯಾ ನಷ್ಟು ವಿದ್ಯುತ್ ಬೇಡಿಕೆ ಹೆಚ್ಚಾಗಿದೆ.

ಇನ್ನು 2022ರ ಏಪ್ರಿಲ್ ತಿಂಗಳಿನಲ್ಲಿ (18ನೇ ತಾರೀಖಿನವರೆಗೆ) ಸರಾಸರಿ ವಿದ್ಯುತ್ ಬೇಡಿಕೆ ಪ್ರಮಾಣವು 2804 ಮೆಗಾವ್ಯಾಟ್ ನಷ್ಟಿದ್ದರೆ, ಈ ವರ್ಷದ ಏಪ್ರಿಲ್ ನಲ್ಲಿ 3,221 ಮೆಗಾವ್ಯಾಟ್ ನಷ್ಟು ಬೇಡಿಕೆಯಿತ್ತು. ಏಪ್ರಿಲ್ 18ನೇ ತಾರೀಖಿನ ವರೆಗೆ ಹವಾಮಾನ ಇಲಾಖೆಯ ವರದಿಯನ್ವಯ ಉಷ್ಣಾಂಶವು ಬಹು ಭಾಗ 35 ರಿಂದ 36 ಡಿಗ್ರಿ ಸೆಲ್ಸಿಯಸ್ ನಷ್ಟಿತ್ತು. ಹೀಗಾಗಿ ವಿದ್ಯುತ್ ಬೇಡಿಕೆಯು ಕಳೆದ ವರ್ಷಕ್ಕಿಂತ 489 ಮೆಗಾವ್ಯಾಟ್ ನಷ್ಟು ಏರಿಕೆಯಾಗಿತ್ತು. ವಿಧಾನಸಭೆ ಚುನಾವಣೆಯಿರುವ ಕಾರಣ ಈ ಬಾರಿ ವಿದ್ಯುತ್ ಕಡಿತ ಅಷ್ಟಾಗಿ ಜನರನ್ನು ಬಾಧಿಸುತ್ತಿಲ್ಲ. ಇಲ್ಲದಿದ್ದಲ್ಲಿ ಸಾರ್ವಜನಿಕರಿಗೆ ವಿದ್ಯುತ್ ಕಣ್ಣಮುಚ್ಚಾಲೆಯ ಬಿಸಿ ಅನುಭವಿಸಬೇಕಿತ್ತು.

ಇಂಧನ ತಜ್ಞರು ಏನಂತಾರೆ?

“ಬೇಸಿಗೆಯಲ್ಲಿ ಸಾಮಾನ್ಯವಾಗಿ ವಿದ್ಯುತ್ ಬೇಡಿಕೆ ಮತ್ತು ಬಳಕೆ ಜಾಸ್ತಿ. ಆದರೆ ಈ ಬಾರಿ ಒಂದೆಡೆ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಳದಿಂದಾಗಿ ಜನರು ಮನೆ ಮತ್ತು ಕಚೇರಿಗಳಲ್ಲಿ ಫ್ಯಾನ್, ಹವಾನಿಯಂತ್ರಕ ಉಪಕರಣ (AC) ಬಳಕೆ ಹಾಗೂ ಕೃಷಿ ಚಟುವಟಿಕೆಗಳಿಗೆ ರೈತರು ವಿದ್ಯುತ್ ಉಪಯೋಗ ಹೆಚ್ಚಾಗಿದೆ ಹಾಗೂ ಇನ್ನಿತರ ಕಾರಣಗಳಿಂದ ವಿದ್ಯುತ್ ಬಳಸುವ ಪ್ರಮಾಣ ಏರಿಕೆಯಾಗಿದೆ. ಕೈಗಾರಿಕೆಗಳಲ್ಲಿ ಸಾಮಾನ್ಯವಾಗಿ ವರ್ಷಪೂರ್ತಿ ಉತ್ಪಾದನೆ ಪ್ರಮಾಣ ಸಾಮಾನ್ಯವಾಗಿರುತ್ತದೆ. ಹಾಗಾಗಿ ವಿದ್ಯುತ್ ಬಳಕೆಯಲ್ಲಿ ಏರಿಕೆ ಇಳಿಕೆ ಕಮ್ಮಿ. ಇದಲ್ಲದೆ ಕೋವಿಡ್ ನಂತರ ಖಾಲಿಯಿದ್ದ ಅಥವಾ ಹೊಸದಾಗಿ ನಿರ್ಮಿಸಿದ ಮನೆ, ಕಟ್ಟಡಗಳಿಗೆ ಹೆಚ್ಚೆಚ್ಚು ಜನರು ಬಂದು ಸೇರುತ್ತಿದ್ದಾರೆ. ಇದೆಲ್ಲ ಕಾರಣಗಳಿಂದಾಗಿ ವಿದ್ಯುತ್ ಬೇಡಿಕೆ ಮತ್ತು ಬಳಕೆ ಹೆಚ್ಚಾಗಿದೆ.”

ಎಂ.ಜಿ.ಪ್ರಭಾಕರ್, ಇಂಧನ ತಜ್ಞರು
WhatsApp Join our WhatsApp Channel
Previous Post

Election News | ಸಾರಿಗೆ ಅಧಿಕಾರಿಗಳ ಗೊಂದಲ : ರಾಜ್ಯ ಎಂಸಿಎಂಸಿ ಸದಸ್ಯ ಕಾರ್ಯದರ್ಶಿ ಚುನಾವಣಾ ವಾಹನ ವಶ!!

Next Post

BBMP News | ಮತದಾನ ಜಾಗೃತಿ ಮೂಡಿಸಲು ಬಿಬಿಎಂಪಿಯಿಂದ ಕಾಲ್ನಡಿಗೆ ಜಾಥ ಹಾಗೂ ಬೀದಿ ನಾಟಕ ಕಾರ್ಯಕ್ರಮ

Next Post
ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಭಾನುವಾರ ಮತದಾರರ ಜಾಗೃತಿ ಕುರಿತ ಕಾಲ್ನಡಿಗೆ ಜಾಥಾ ಮತ್ತು ಬೀದಿ ನಾಟಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಹಾಗೂ ಸಂಘದ ಅಧ್ಯಕ್ಷ ಅಮೃತ್ ರಾಜ್ ಸೇರಿದಂತೆ ಮೊದಲಾದವರು ಭಾಗವಹಿಸಿದ್ದರು.

BBMP News | ಮತದಾನ ಜಾಗೃತಿ ಮೂಡಿಸಲು ಬಿಬಿಎಂಪಿಯಿಂದ ಕಾಲ್ನಡಿಗೆ ಜಾಥ ಹಾಗೂ ಬೀದಿ ನಾಟಕ ಕಾರ್ಯಕ್ರಮ

Bangalore Qute Taxi Service | ಬೆಂಗಳೂರಿನಲ್ಲಿ ಕ್ಯೂಟ್ ಟ್ಯಾಕ್ಸಿ ಸೇವೆ ಇಂದಿನಿಂದ ಆರಂಭ : ಇದರ ಆರಂಭಿಕ ಕನಿಷ್ಠ ದರವೆಷ್ಟು ಗೊತ್ತಾ?

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group