Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Karnataka Assembly Election | ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಪತ್ರಿಕಾಗೋಷ್ಠಿ : ರಾಜ್ಯದಲ್ಲಿದ್ದಾರೆ 5,30,85,566 ಮತದಾರರು

ಜೆಡಿಎಸ್ ಅಭ್ಯರ್ಥಿಗೆ, ವಿ.ಸೋಮಣ್ಣ ಆಮಿಷ ಒಡ್ಡಿದ ಆರೋಪ | ಆಯೋಗದಿಂದ ತನಿಖೆ ನಡೆಸಲು ಸೂಚನೆ | ಪ್ರಕರಣ ಸಾಬೀತಾದರೆ ಕಾನೂನು ಕ್ರಮ

by Bengaluru Wire Desk
April 26, 2023
in News Wire
Reading Time: 1 min read
0
ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹಾಗೂ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ರಾಜೇಂದ್ರ ಚೋಳನ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವುದು.

ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹಾಗೂ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ರಾಜೇಂದ್ರ ಚೋಳನ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವುದು.

ಬೆಂಗಳೂರು, ಏ.26 www.bengaluruwire.com : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದರ ಬೆನ್ನಲ್ಲೇ ಚುನಾವಣಾ ಆಯೋಗ ಇಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ರಾಜ್ಯದಲ್ಲಿ ಒಟ್ಟಾರೆ 5,30,85,566 ಮತದಾರರಿದ್ದಾರೆ ಎಂದು ಆಯೋಗ ತಿಳಿಸಿದೆ.

ನಗರದಲ್ಲಿ ಗುರುವಾರ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ

ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದ್ದು, ಒಟ್ಟು ಮತದಾರರ ಸಂಖ್ಯೆ 5,31,33,055 ಇದ್ದು, 2,66,82156 ಪುರುಷರ ಮತದಾರರು, 2,63,98484 ಮಹಿಳಾ ಮತದಾರರು, 4929 ಇತರೆ ಇದ್ದಾರೆ.  ಅದಕ್ಕೆ ಅಂತಿಮವಾಗಿ ನೀಡಿದ ಸಮಯದಲ್ಲಿ 16,04,285 ಹೊಸ  ಸೇರ್ಪಡೆ ಮಾಡಲಾಗಿದೆ. ಸೇವಾ ಮತದಾರರು 47,488 ಇದ್ದರೆ, 11,71,558 ಯುವ ಮತದಾರರ ಸಂಖ್ಯೆಯಿದೆ. ಒಟ್ಟಾರೆ ಜನ ಸಂಖ್ಯೆಯಲ್ಲಿ 70.15% ಮಂದಿ ಮತದಾನಕ್ಕೆ ಅರ್ಹವಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ 58,545 ಮತದಾನ ಕೇಂದ್ರವಿರಲಿದೆ. ಅಲ್ಲದೆ ಹೆಚ್ಚುವರಿಯಾಗಿ 263 ಹೆಚ್ಚುವರಿ ಮತಕೇಂದ್ರಗಳ ನಿರ್ಮಾಣ ಮಾಡಲಾಗಿದೆ. ಮತದಾರರ ಅನುಕೂಲಕ್ಕೆ ಆ್ಯಪ್ ಸಿದ್ಧಪಡಿಸಲಾಗಿದೆ. ಪ್ರತಿ 15 ನಿಮಿಷಕ್ಕೊಮ್ಮೆ ಮಾಹಿತಿ ಅಪಡೇಟ್ ಆಗಲಿದೆ ಎಂದು ತಿಳಿಸಿದ್ದಾರೆ.

1,15,709  ಇವಿಎಮ್ ಹಾಗೂ 89,379 – ವಿವಿ ಪ್ಯಾಟ್ ಅನ್ನು ಚುನಾವಣೆಗೆ ಬಳಕೆ ಮಾಡಲಾಗುತ್ತದೆ. 80 ವರ್ಷ ಮೇಲ್ಪಟ್ಟ ಮತದಾರರು ಒಟ್ಟಾರೆ 12,15,920 ಮಂದಿಯಿದ್ದು ಅದರಲ್ಲಿ 80,250 ಮತದಾರರು ಮನೆಯಿಂದಲೇ ಮತದಾನ ಆಯ್ದುಕೊಂಡಿದ್ದಾರೆ ಹಾಗೂ ವಿಕಲಚೇತನರು 19,279 ಇದ್ದು, ಇವರು ಮನೆಯಿಂದಲೇ ಏಪ್ರಿಲ್ 29 ರಿಂದ ಮೇ 6ರ ವರೆಗೆ ಮನೆಯಿಂದಲೇ ಮತದಾನಕ್ಕೆ ಅವಕಾಶವಿರಲಿದೆ. ಒಟ್ಟು 3,048 ಎನ್ ಆರ್ ಐ (NRI) ಮತದಾರರಿದ್ದಾರೆ.

ಕರ್ನಾಟಕದ ವಿವಿಧ ಚುನಾವಣಾ ಜಿಲ್ಲೆಗಳಲ್ಲಿನ ಮತದಾರರ ಸಂಖ್ಯೆಯ ವಿವರ

ಜೆಡಿಎಸ್ ಅಭ್ಯರ್ಥಿಗೆ ವಿ.ಸೋಮಣ್ಣ ಆಮಿಷ ಒಡ್ಡಿದ ಆರೋಪ : ಆಯೋಗದಿಂದ ತನಿಖೆ

ಮಾಜಿ ಸಚಿವ ವಿ.ಸೋಮಣ್ಣ ಚಾಮರಾಜನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿ, ಚುನಾವಣೆ ಕಣದಿಂದ ಹಿಂದೆ ಸರಿಯಲು ಆಮಿಣ ಒಡ್ಡಿರುವ ವಿಚಾರದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಮನೋಜ್ ಕುಮಾರ್ ಮೀನಾ ಉತ್ತರಿಸುತ್ತಾ, ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ, ಜೆಡಿಎಸ್ ಅಭ್ಯರ್ಥಿಗೆ ಚುನಾವಣಾ ಕಣದಿಂದ ಹಿಂದೆ ಸರಿಯಲು ಆಮಿಷ ಒಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡಲು ಸ್ಥಳೀಯ ಚುನಾವಣಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಕುರಿತು ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ, ಅಧಿಕೃತ ಅಭ್ಯರ್ಥಿ ದೂರು ನೀಡಿಲ್ಲ, ಸೋಮಣ್ಣ ಮೊಬೈಲ್ ಆಡಿಯೋ ‌ಅಸಲಿಯತ್ತಿನ ಬಗ್ಗೆ ಪರಿಶೀಲನೆ ಮಾಡಬೇಕಿದೆ. ಈ ಕುರಿತು ಇಬ್ಬರಿಗೂ ನೋಟಿಸ್ ನೀಡುತ್ತೇವೆ. ಅವರ ಹೇಳಿಕೆ‌ ನೀಡಿದ ಬಳಿಕ ಪರಿಶೀಲನೆ ನಡೆಸುತ್ತೇವೆ. ಅಲ್ಲದೆ ಸ್ವಯಂಪ್ರೇರಿತ ದೂರು ದಾಖಲಿಸುವ ಕುರಿತು ಪರಿಶೀಲನೆ ನಡೆಸುತ್ತೇವೆ ಎಂದು ಸಿಇಒ ಮನೋಜ್ ಕುಮಾರ್ ಮೀನಾ ಹೇಳಿದ್ದಾರೆ.

ಚುನಾವಣಾ ನಿಯಮ ಉಲ್ಲಂಘನೆ ದೂರುಗಳ ವಿವರ :

ಚುನಾವಣಾ ನಿಯಮ ಉಲ್ಲಂಘಿಸಿದ ಪ್ರಕರಣದಲ್ಲಿ ಒಟ್ಟು ಒಟ್ಟು 673 ಕೇಸ್ ಗಳು ದಾಖಲಿಸಲಾಗಿದೆ. ರ್ಯಾಲಿ,ಸಾರ್ವಜನಿಕ ಸಭೆ,ಅನಧಿಕೃತ ಪ್ರಚಾರ ಮಾಡಿರುವ 53 ಪ್ರಕರಣ ದಾಖಲು. ಗುಂಪು ಘರ್ಷಣೆ 15 ಕೇಸ್, ಧಾರ್ಮಿಕ ಸಂಸ್ಥೆಗಳ ದುರುಪಯೋಗ 15 ಕೇಸ್, ಅನಧಿಕೃತ ಧ್ವನಿವರ್ಧಕ ಬಳಕೆ,ವಾಹನ ಬಳಕೆ 34 ಕೇಸ್ ದಾಖಲು, ದ್ವೇಷ ಬಿತ್ತುವ ಭಾಷಣ ಮಾಡಿರುವವರ ವಿರುದ್ಧ ಐದು ಕೇಸ್ ದಾಖಲು, ಕರ್ನಾಟಕ ಓಪನ್ ಪ್ಲೇಸ್ ನಿಯಮ ಉಲ್ಲಂಘನೆ 75 ಕೇಸ್ ದಾಖಲು,

ಮತದಾರರಿಗೆ ಹಣ ಹಂಚಿಕೆ 309 ಕೇಸ್ ದಾಖಲು, ಸಾಮಾಜಿಕ ಜಾಲತಾಣ ಉಲ್ಲಂಘನೆ ಕುರಿತು 34 ಕೇಸ್ ದಾಖಲು ಹಾಗೂ ಉಳಿದಂತೆ ಬೇರೆ ಚುನಾವಣಾ ನಿಯಮಗಳ ಉಲ್ಲಂಘನೆ ಬಗ್ಗೆ 50 ಕೇಸ್ ದಾಖಲಾಗಿದೆ.

ಕಣದಲ್ಲಿರುವ ಅಭ್ಯರ್ಥಿಗಳೆಷ್ಟು? :

ರಾಜ್ಯದಲ್ಲಿ ಒಟ್ಟು 2,613 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ, ಪುರುಷರು – 2,427, ಮಹಿಳೆಯರು – 185, ಇತರರು – 1 ಇದ್ದಾರೆ. ರಾಜ್ಯದಲ್ಲಿ ಅತಿ ಕಡಿಮೆ ಅಭ್ಯರ್ಥಿಗಳಿರುವ ಕ್ಷೇತ್ರಗಳು – 5 ಜನ ಅಭ್ಯರ್ಥಿಗಳಿರುವ ಕ್ಷೇತ್ರಗಳೆಂದರೆ,  ಯಮಕನಮರಡಿ (st), ದೇವದುರ್ಗ (st), ತೀರ್ಥಹಳ್ಳಿ, ಕುಂದಾಪುರ, ಕಾಪು, ಮಂಗಳೂರು, ಬಂಟ್ವಾಳ ಆಗಿದೆ. ಇನ್ನು ಅತಿಹೆಚ್ಚು ಅಂದರೆ 24 ಜನ ಅಭ್ಯರ್ಥಿಗಳಿರುವ ವಿಧಾನಸಭಾ ಕ್ಷೇತ್ರವೆಂದರೆ ಬಳ್ಳಾರಿ ನಗರವಾಗಿದೆ. ಈ ಬಾರಿ 11,71,558 ಯುವ ಮತದಾರರಿದ್ದಾರೆ. ಒಂದು ವಿವಿ ಪ್ಯಾಟ್ ನಲ್ಲಿ NOTA ಸೇರಿದಂತೆ 16 ಆಯ್ಕೆಗಳು ಇರಲಿದೆ. 15ಕ್ಕಿಂತ ಹೆಚ್ಚಿನ ಅಭ್ಯರ್ಥಿಗಳು ಕಣದಲ್ಲಿದ್ದರೆ ಹೆಚ್ಚುವರಿ ಪ್ಯಾಟ್ ಬಳಕೆ ಮಾಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10,808 ಅತಿ ಹೆಚ್ಚು 80 ವರ್ಷ ಮೇಲ್ಪಟ್ಟ ಮತದಾರರಿದ್ದಾರೆ.

ಚುನಾವಣಾ ಆಯೋಗ ಮೇ.10ರ ಬುಧವಾರ ಮತದಾನ ಸಮಯವನ್ನು ಬೆಳಗ್ಗೆ 7ರಿಂದ ಸಂಜೆ 6:30ರ ತನಕ ನಿಗದಿಪಡಿಸಿದೆ.

WhatsApp Join our WhatsApp Channel
Previous Post

Zero Shadow Day | ಬೆಂಗಳೂರಿನಲ್ಲಿ‌ ಮಂಗಳವಾರ ಕಂಡು ಬರಲಿದೆ ಖಗೋಳ ಕೌತುಕ : ಶೂನ್ಯ ನೆರಳಿನ ದಿನ ಎಂದರೇನು ಗೊತ್ತಾ?

Next Post

PM Modi Virtual Meeting | ರಾಜ್ಯದ 67 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಸಂವಾದ ಯಶಸ್ವಿ

Next Post

PM Modi Virtual Meeting | ರಾಜ್ಯದ 67 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಸಂವಾದ ಯಶಸ್ವಿ

ಚಿನ್ನ, ನಗದು ವಸ್ತುವಿನ ಸಾಂದರ್ಭಿಕ ಚಿತ್ರ

IncomeTAX Cash Limit | ನೀವು ಮನೆಯಲ್ಲಿ ಎಷ್ಟು ಹಣವನ್ನು ಸಂಗ್ರಹಿಸಿಡಬಹುದು? ತಕ್ಷಣವೇ ಹೊಸ ಮಿತಿಯನ್ನು ಪರಿಶೀಲಿಸಿ ಇಲ್ಲದಿದ್ದರೆ ಐಟಿ ದಾಳಿಯಾಗಬಹುದು!!

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group