Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Public interest

BW Special | Election News | ‘ಡೆಮಾಕ್ರಸಿ ಅವ್ರು’ : ಪ್ರಜಾಪ್ರಭುತ್ವದ ಉಳಿವಿಗೆ ಮತದಾನದ ಮಹತ್ವ ಸಾರುವ ಪರಿಣಾಮಕಾರಿ ಕಿರುಚಿತ್ರ

ಗೌರಿಬಿದನೂರು ತಾಲೂಕಿನ ಮಣಿವಾಲದ ಗ್ರಾಮಸ್ಥರು ‘ಜನಪದರು’ ಎಂಬ ರಂಗತಂಡದ ಕಲಾವಿದರನ್ನು ಬಳಸಿಕೊಂಡು ಸರ್ಕಾರಿ ಅಧಿಕಾರಿಯಾಗಿರುವ ಆರ್.ಹರೀಶ್ ಕೇವಲ 6 ದಿನಗಳಲ್ಲಿ ‘ಡೆಮಾಕ್ರಸಿ ಅವ್ರು’ ಕಿರುಚಿತ್ರವನ್ನು ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ.

by Bengaluru Wire Desk
May 3, 2023
in Public interest, Video
Reading Time: 2 mins read
2

ಬೆಂಗಳೂರು, ಮೇ.03 www.bengaluruwire.com : ವಿಧಾನಸಭಾ ಚುನಾವಣೆ ಹೊತ್ತಿನಲ್ಲಿ ಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಚುನಾವಣಾ ಆಯೋಗ ವಾಕಥಾನ್, ಬೈಕ್ ರ್ಯಾಲಿ, ಬೀದಿ ನಾಟಕದಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇದರ ಮಧ್ಯೆ ಸರ್ಕಾರಿ ಅಧಿಕಾರಿಯೊಬ್ಬರು ತಮ್ಮ ಬಿಡುವಿಲ್ಲದ ಕೆಲಸ ನಡುವೆಯೂ ಪ್ರಜಾಪ್ರಭುತ್ವದ ಉಳಿವಿಗಾಗಿ ಮತದಾನ ಮಹತ್ವವನ್ನು ಸಾರುವ ಕಿರುಚಿತ್ರವನ್ನು ನಿರ್ಮಿಸಿ ಎಲ್ಲರಿಂದ ಸೈ ಎನಿಸಿಕೊಂಡಿದ್ದಾರೆ.

‘ಡೆಮಾಕ್ರಸಿ ಅವ್ರು’ (Democracy Avru) ಎಂಬ 9.07 ನಿಮಿಷಗಳ ಈ ಕಿರುಚಿತ್ರವನ್ನು ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಆರ್.ಹರೀಶ್ ಮೊಟ್ಟ ಮೊದಲ ಬಾರಿಗೆ ರಚಿಸಿ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶಿಸಿದ್ದಾರೆ. ಗೌರಿಬಿದನೂರಿನ ಮಣಿವಾಲ ಹಳ್ಳಿಯ ಜನರನ್ನು ಬಳಸಿಕೊಂಡು ‘ಜನಪದರು’ ಎಂಬ ರಂಗತಂಡದ ಕಲಾವಿದರನ್ನು ಬಳಸಿಕೊಂಡು ಪರಿಣಾಮಕಾರಿಯಾಗಿ ಈ ಚಿತ್ರವನ್ನು ನಿರ್ಮಿಸಲಾಗಿದೆ.

ಗೌರಿಬಿದನೂರು ತಾಲೂಕಿನ ಮಣಿವಾಲ ಹಳ್ಳಿಯಲ್ಲಿ ಡೆಮಾಕ್ರಸಿ ಅವ್ರು ಕಿರುಚಿತ್ರದ ಶೂಟಿಂಗ್ ವೊಂದರ ದೃಶ್ಯ

ಒಂಭತ್ತು ನಿಮಿಷಗಳ ಈ ಕಿರುಚಿತ್ರದಲ್ಲಿ ರಾಜಕೀಯ ಪಕ್ಷಗಳು ಓಟಿಗಾಗಿ ಚುನಾವಣೆ ಸಂದರ್ಭದಲ್ಲಿ ಆಮಿಷ ಒಡ್ಡುವ, ಅದನ್ನು ಸ್ವೀಕರಿಸುವ ಮತದಾರರ ಮಧ್ಯೆಯೇ ಅದನ್ನು ಪ್ರಜ್ಞಾಪೂರ್ವಕವಾಗಿ ವಿರೋಧಿಸಿ ಚುನಾವಣೆಯಲ್ಲಿ ಜವಾಬ್ದಾರಿಯುತವಾಗಿ ಮತ ಚಲಾಯಿಸುವ ಅನಿವಾರ್ಯತೆಯನ್ನು ಆಮಿಷಕ್ಕೆ ಒಳಗಾಗುವ ಜನತೆಗೆ ತಿಳಿಸುವ ಪ್ರಜ್ಞಾವಂತ ಮತದಾರನ ಎಳೆಯುಳ್ಳ ಕಥಾ ಹಂದರವನ್ನು ಈ ಕಿರುಚಿತ್ರ ಹೊಂದಿದೆ. ಏಪ್ರಿಲ್ 30ರಂದು ‘ಡೆಮಾಕ್ರಸಿ ಅವ್ರು’ ಕಿರುಚಿತ್ರವನ್ನು ರೈಸಿಂಗ್ ಸನ್ ಎಂಬ ಯೂಟ್ಯೂಬ್ ಚಾನಲ್ (YOU Tube Channel) ನಲ್ಲಿ ಅಪಲೋಡ್ ಮಾಡಲಾಗಿದ್ದು, ಇದುವರೆಗೆ ಸಾವಿರಾರು ಜನರು ಇದನ್ನು ವೀಕ್ಷಿಸಿ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೊಂದು ಶಾರ್ಟ್ ಫಿಲಮ್ ಆಗಿದ್ದರೂ ಸಹ ಪ್ರಜಾಪ್ರಭುತ್ವದ ಉಳಿವಿಗೆ ಹಾಗೂ ಭದ್ರ ಬುನಾದಿಗೆ ಜವಾಬ್ದಾರಿಯುವ ಮತದಾರ ತಪ್ಪದೇ ಓಟು ಹಾಕುವ ಅನಿವಾರ್ಯತೆಯನ್ನು ಮಾರ್ಮಿಕವಾಗಿ ಹಾಗೂ ವ್ಯಂಗ್ಯವಾಗಿ ಪಾತ್ರದ ಮೂಲಕ ಅನಾವರಣ ಮಾಡುವಲ್ಲಿ ನಿರ್ದೇಶಕರು ಯಶಸ್ವಿಯಾಗಿದ್ದಾರೆ. ರಾಜ್ಯದಲ್ಲಿ ಚುನಾವಣಾ ಆಯೋಗವು ಮತದಾರರಲ್ಲಿ ಜಾಗೃತಿ ಮೂಡಿಸಲು ಇಂತಹ ಕಿರುಚಿತ್ರಗಳನ್ನು ಸಾಮಾಜಿಕ ಮಾಧ್ಯಮ, ತನ್ನ ಅಧಿಕೃತ ವೆಬ್ ಸೈಟ್, ರೇಡಿಯೋ, ಟಿವಿ, ವೆಬ್ ನ್ಯೂಸ್ ಪೋರ್ಟಲ್ ಗಳಲ್ಲಿ ಪ್ರಸಾರ ಮಾಡಿದರೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದು ಈ ಕಿರುಚಿತ್ರವನ್ನು ನೋಡಿದವರು ಯೂಟ್ಯೂಬ್ ಚಾನಲ್ ನಲ್ಲಿ ಹಾಗೂ ಸಾರ್ವಜನಿಕವಾಗಿಯೂ ಅಭಿಪ್ರಾಯಪಟ್ಟಿದ್ದಾರೆ.

ಎಲ್.ಕೆ.ಅತೀಕ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಆರ್ ಡಿಪಿಆರ್

ಈ ಕಿರುಚಿತ್ರದ ಬಗ್ಗೆ ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ಏನಂತಾರೆ? :

“ಚುನಾವಣೆಗಳಲ್ಲಿ ಮತದಾನ ಎಷ್ಟು ಅಮೂಲ್ಯ ಹಾಗೂ ಅದೊಂದು ಪವಿತ್ರವಾದ ಹಕ್ಕು. ಇದನ್ನು ಯಾವುದೇ ಕಾರಣಕ್ಕೂ ಆಸೆ, ಆಮಿಷಕ್ಕೂ ಒಳಗಾಗದೆ ಮುಕ್ತವಾಗಿ ಮತದಾನ ಮಾಡಿದಾಗ ಮಾತ್ರ ಪ್ರಜಾಪ್ರಭುತ್ವ ಉಳಿಯುತ್ತೆ ಎಂಬ ಸಂದೇಶವನ್ನು ಬಹಳ ಅಚ್ಚುಕಟ್ಟಾಗಿ ಹಾಗೂ ಪರಿಣಾಮಕಾರಿಯಾಗಿ ಆ ಕಿರುಚಿತ್ರದಲ್ಲಿ ಬಿಂಬಿಸಿದ್ದಾರೆ ನಮ್ಮ ಇಲಾಖೆಯ ಇಒ ಆರ್.ಹರಿಶ್. ಈ ಕಿರುಚಿತ್ರವನ್ನು ರಾಜ್ಯದ ಪ್ರತಿ ಹಳ್ಳಿ ಹಳ್ಳಿಗಳಲ್ಲಿ ಮಾಧ್ಯಮಗಳ ಮೂಲಕ ಪ್ರಸಾರ ಮಾಡಿದಾಗ ಜನರು ಜಾಗೃತರಾಗುತ್ತಾರೆ. ಮತದಾನ ಮಾಡುವಾಗ ಪಾರದರ್ಶಕವಾಗಿ ತಮ್ಮ ಆಯ್ಕೆಯ ಪ್ರಕಾರ ಅರ್ಹ ಹಾಗೂ ನೆಚ್ಚನ ಅಭ್ಯರ್ಥಿಗೆ ಜವಾಬ್ದಾರಿಯುತವಾಗಿ ಮತದಾನ ಮಾಡಲು ಅನುಕೂಲವಾಗುತ್ತದೆ. ಹಣ, ಇತರ ಆಮಿಷಕ್ಕೆ ಒಳಗಾಗದೆ ಓಟು ಹಾಕಿ ಎಂಬ ಸಂದೇಶ ರವಾನೆ ಮಾಡುವಲ್ಲಿ ಈ ಸಿನಿಮಾ ಯಶಸ್ವಿಯಾಗಿದೆ. ಇದಕ್ಕೆ ಹರೀಶ್ ಅವರನ್ನು ಅಭಿನಂದಿಸುತ್ತೇನೆ.“

– ಎಲ್.ಕೆ.ಅತೀಕ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ

ಆರು ದಿನಗಳಲ್ಲಿ ತಯಾರಾದ ಶಾರ್ಟ್ ಫಿಲಮ್ :

ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮತದಾರ ತನ್ನ ಹಕ್ಕನ್ನು ಸೂಕ್ತ ರೀತಿಯಲ್ಲಿ ಚಲಾಯಿಸದಿದ್ದಾಗ ಇಡೀ ಪ್ರಜಾಪ್ರಭುತ್ವವೇ ಕುಸಿತಕೊಳಗಾಗುವ ಅಂಶವನ್ನು ಸಂದೇಶ ರೂಪದಲ್ಲಿ ಆರ್.ಹರೀಶ್ ತಮ್ಮ ಕಿರುಚಿತ್ರದಲ್ಲಿ ನೀಡಿದ್ದಾರೆ. ಶೇ.100ಕ್ಕೆ 100ರಷ್ಟು ಮತದಾನವಾದರೆ ಸಮಾಜಕ್ಕೆ ಆಗುವ ಲಾಭಗಳನ್ನು ಸೂಚ್ಯವಾಗಿ ಇಲ್ಲಿ ತಿಳಿಸಲಾಗಿದೆ. ಕೇವಲ ಆರು ದಿನಗಳಲ್ಲಿ ಚಿತ್ರದ ಕಥಾವಸ್ತು ಸಿದ್ಧಪಡಿಸಿ, ಚಿತ್ರಕಥೆ, ಶೂಟಿಂಗ್, ಪೋಸ್ಟ್ ಪ್ರೊಡಕ್ಷನ್ ಎಲ್ಲಾ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡಿ ಮುಗಿಸಲಾಗಿದೆ. ರೈಸಿಂಗ್ ಸನ್ ನಿರ್ಮಾಣದಲ್ಲಿ ಮೂಡಿಬಂದಿರುವ ಈ ಶಾರ್ಟ್ ಫಿಲಂ  ಸಿನಿಮಾಟೋಗ್ರಫಿ, ಸಂಕಲನವನ್ನು ಎಸ್.ವಿ.ಚಂದ್ರ, ಸಂಗೀತ ದೇಶಿ ಮೋಹನ್, ಧ್ವನಿ ನಾಗರಾಜ ಹುಲಿವನ, ಛಾಯಾಗ್ರಹಣದಲ್ಲಿ ಅಭಿ, ಗಂಗಾ ಹಾಗೂ ಸಚಿನ್ ಅವರು ಕಾರ್ಯನಿರ್ವಹಿಸಿದ್ದಾರೆ.ಮೂಲತಃ ತುಮಕೂರಿನವರಾದ ಆರ್.ಹರೀಶ್ ಬೆಂಗಳೂರಿನ ಶೇಷಾದ್ರಿಪುರ ಕಾಲೇಜಿನಲ್ಲಿ ಬಿಎಸ್ ಸಿ ಪದವಿ ಮುಗಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

‘ಡೆಮಾಕ್ರಸಿ ಅವ್ರು’ ಕಿರುಚಿತ್ರ ನಿರ್ದೇಶಕರು ಈ ಚಿತ್ರದ ಬಗ್ಗೆ ಏನಂತಾರೆ? :

ಆರ್.ಹರೀಶ್, ಇಒ, ಗೌರಿಬಿದನೂರು ತಾ.ಪ

’ಚುನಾವಣೆಯಲ್ಲಿ ಮತದಾರರ ಜಾಗೃತಿಗಾಗಿ ವಾಕಥಾನ್, ಬೈಕ್ ರಾಲಿ, ಅಣುಕು ಮತದಾನ ಮತ್ತಿತರ ರೀತಿಯ ಜನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಾಗ, ಏಕ ಕಾಲಕ್ಕೆ ಸಾವಿರಾರು ಜನರನ್ನು ಪರಿಣಾಮಕಾರಿಯಾಗಿ ತಲುಪಲು ಹಾಗೂ ಮತದಾನ ಪ್ರಾಮುಖ್ಯತೆ ಬಗ್ಗೆ ಮತದಾರರಿಗೆ ಮನ ಮುಟ್ಟುವಂತೆ ಹೇಳಲು ಯಾವುದಾದರೂ ಮಾರ್ಗವಿದೆಯೇ ಎಂದು ಹುಡುಕುತ್ತಿದ್ದಾಗ ಹೊಳೆದಿದ್ದೇ ಈ ಒಂದು ಕಿರುಚಿತ್ರ ನಿರ್ಮಾಣ ಮಾಡಲು ಕಾರಣವಾಯಿತು. ಇದರ ಕಾನ್ಸೆಪ್ಟ್ ಸಿದ್ಧಪಡಿಸಿ ನಮ್ಮ ಸ್ನೇಹಿತರೊಂದಿಗೆ ಚರ್ಚಿಸಿ ಚಿತ್ರಕಥೆ ಅಂತಿಮಗೊಳಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ನಾಗರಾಜ್, ಜಿ.ಪಂ ಸಿಇಒ ಪ್ರಕಾಶ್ .ಜಿ ನಿಟ್ಟಾಲಿ ಅವರು, ಗೌರಿಬಿದನೂರು ತಾಲ್ಲೂಕು ಪಂಚಾಯಿತಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಈ ಕಿರುಚಿತ್ರ ನಿರ್ಮಾಣಕ್ಕೆ ಬೆನ್ನು ತಟ್ಟಿ ಪ್ರೋತ್ಸಾಹಿಸಿದ್ದಾರೆ.”

– ಹರೀಶ್.ಆರ್, ಕಾರ್ಯನಿರ್ವಾಹಕ ಅಧಿಕಾರಿ, ಗೌರಿಬಿದನೂರು ತಾಲ್ಲೂಕು

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ವಾರ್ತಾ ಇಲಾಖೆ ನೂತನ ಆಯುಕ್ತರ ಜೊತೆ ಕೆಯುಡಬ್ಲ್ಯುಜೆ ಅಧ್ಯಕ್ಷರ ಸೌಹಾರ್ದಯುತ ಭೇಟಿ

Next Post

Bangalore Assembly Election 2023 | ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ 7 ಕೋಟಿ ರೂ. ಮೌಲ್ಯದ ಅಕ್ರಮ ಮದ್ಯ ವಶ!!!

Next Post
ಸೂಚನೆ : ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (ಸಾಂದರ್ಭಿಕ ಚಿತ್ರ)

Bangalore Assembly Election 2023 | ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ 7 ಕೋಟಿ ರೂ. ಮೌಲ್ಯದ ಅಕ್ರಮ ಮದ್ಯ ವಶ!!!

Assembly Election 2023 | ಗಂಭೀರ ಕ್ರಿಮಿನಲ್ ಪ್ರಕರಣಗಳಿರುವ 404 ಅಭ್ಯರ್ಥಿಗಳು ಕಣದಲ್ಲಿ : ಬೆಚ್ಚಿ ಬೀಳಿಸುವ ಎಡಿಆರ್ ಸಂಸ್ಥೆ ವರದಿ ಇಲ್ಲಿದೆ!!

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group