Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Karnataka Assembly Election 2023 Bangalore Updates | ರಾಜ್ಯದಲ್ಲಿ ಪ್ರಜಾತಂತ್ರ ಹಬ್ಬ : ಇಲ್ಲಿದೆ ಮತದಾನ ಪ್ರಮಾಣದ ಮಾಹಿತಿ

ಬೆಳಗ್ಗೆ 9.00 ಗಂಟೆಯವರೆಗೆ ರಾಜ್ಯದಲ್ಲಿ ಶೇ.8.26ರಷ್ಟು ಮತದಾನ | 11ಕ್ಕೆ ಶೇ.20.99ರಷ್ಟು ಮತದಾನ | ಮಧ್ಯಾಹ್ನ 1.00ಕ್ಕೆ ಸರಾಸರಿ ಅಂದಾಜು ಶೇ.37.25ರಷ್ಟು ಮತ ಚಲಾವಣೆ | ಮಧ್ಯಾಹ್ನ 3 ಗಂಟೆಯ ವರೆಗೆ ಸರಾಸರಿ ಶೇ.52.18ರಷ್ಟು ಮತದಾನ | ರಾಜ್ಯದಲ್ಲಿ ಸಂಜೆ 5 ಗಂಟೆಯ ವರೆಗೆ ಸರಾಸರಿ ಶೇ.65.69ರಷ್ಟು ಮತದಾನ | ಒಟ್ಟಾರೆ ಸರಾಸರಿ ಶೇ.69.95 ವೋಟಿಂಗ್

by Bengaluru Wire Desk
May 10, 2023
in News Wire, Public interest
Reading Time: 3 mins read
0
ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಸಾಂದರ್ಭಿಕ ಚಿತ್ರ

ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.10 www.bengaluruwire.com : ಐದು ವರ್ಷಗಳಿಗೊಮ್ಮೆ ಬರುವ ಪ್ರಜಾತಂತ್ರದ ಹಬ್ಬವಾದ ವಿಧಾನಸಭಾ ಚುನಾವಣೆಗೆ ಇಂದು ಬೆಳಗ್ಗೆಯಿಂದಲೇ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 58,545 ಮತಗಟ್ಟೆಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ರಾಜ್ಯದಲ್ಲಿ ಸರಾಸರಿ ಶೇ.69.95ರಷ್ಟು ಮತದಾನವಾಗಿದೆ. ಈ ಮತದಾನವು ಅಂಚೆಮತಗಳನ್ನು ಒಳಗೊಂಡಿರುವುದಿಲ್ಲ.

ಸಂಜೆ 5 ಗಂಟೆಯವರೆಗೆ ರಾಜ್ಯದಲ್ಲಿ ಶೇ.65.69ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 3 ಗಂಟೆಯ ವರೆಗೆ ಸರಾಸರಿ ಶೇ.52.18ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 1 ಗಂಟೆಯ ವರೆಗೆ ಸರಾಸರಿ ಶೇ.37.25ರಷ್ಟು ಮತದಾನವಾಗಿದ್ದರೆ. ಬೆಳಗ್ಗೆ 11.00ರ ತನಕ ಒಟ್ಟಾರೆ ಶೇ.20.99ರಷ್ಟು ಮತದಾನವಾಗಿತ್ತು. ಅಲ್ಲದೆ 9.00ರ ತನಕ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಅಂದಾಜು ಶೇ.8.21ರಷ್ಟು ಮತದಾನವಾಗಿತ್ತು.

ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿರುವ ಮತದಾರರು

ಜನತಂತ್ರದ ಹಬ್ಬದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಹೆಚ್ಚಾಗಿ ಭಾಗವಹಿಸಿ ಮತದಾನ ಮಾಡಿ ಹೆಚ್ಚಿನ ಪ್ರಮಾಣದಲ್ಲಿ ಜನರು ತಮ್ಮ ಹಕ್ಕು ಚಲಾಯಿಸಬೇಕು ಎಂದು ಚುನಾವಣಾ ಆಯೋಗ ಹಾಗೂ ಸ್ಥಳೀಯ ಜಿಲ್ಲಾಡಳಿತಗಳು ಈ ಬಾರಿ ಸಾಕಷ್ಟು ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಈ ಬಾರಿಯ ಚುನಾವಣೆಯಲ್ಲಿ ಒಟ್ಟು 5,31,33,054 ಮತದಾರರಿದ್ದಾರೆ. ಅದರಲ್ಲಿ 11,71,558 ಯುವ ಮತದಾರರು, 5.71,281 ಅಂಗವಿಕಲ ಮತದಾರರು, 80 ವರ್ಷ ಮೇಲ್ಪಟ್ಟ 12,15,920 ಮತದಾರರಿದ್ದಾರೆ. 4 ಲಕ್ಷ ಒಟ್ಟು ಮತಗಟ್ಟೆ ಸಿಬ್ಬಂದಿಯು ಸರಾಗ ಮತದಾನಕ್ಕಾಗಿ ಕರ್ತವ್ಯದಲ್ಲಿದ್ದಾರೆ.

ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 97,13,349 ಒಟ್ಟು ಮತದಾರರಿದ್ದಾರೆ. ಅದರಲ್ಲಿ 50,24,775 ಪುರುಷ, 46,86,813 ಮಹಿಳಾ ಮತದಾರರಿದ್ದಾರೆ. 1,761 ಲೈಂಗಿಕ ಅಲ್ಪಸಂಖ್ಯಾತರು, 2,37,206 ಮಂದಿ 80 ವರ್ಷ ಮೇಲ್ಪಟ್ಟವರು, 1,43,536 ಯುವ ಮತದಾರರು, 25,790 ಅಂಗವಿಕಲರು ಹಾಗೂ 2,107 ಅನಿವಾಸಿ ಭಾರತೀಯ ಮತದಾರರಿದ್ದಾರೆ. ಒಟ್ಟಾರೆ ವಿವಿಧ ರಾಜಕೀಯ ಪಕ್ಷಗಳು, ಸ್ವತಂತ್ರ್ಯ ಅಭ್ಯರ್ಥಿಗಳು ಸೇರಿದಂತೆ ಒಟ್ಟಾರೆ 389 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಂಗಳೂರಿನಲ್ಲಿ 2013 ಹಾಗೂ 2018ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕ್ರಮವಾಗಿ ಶೇ.62 ಹಾಗೂ ಶೇ.57ರಷ್ಟು ಮತದಾನವಾಗಿತ್ತು.

ರಾಜಧಾನಿಯ ಯಕ್ಷಗಾನ ಥೀಮ್ ಆಧಾರಿತ ಮತಕೇಂದ್ರದಲ್ಲಿ ಮತದಾನ ಮಾಡಿ ಮಹಿಳಾ ಮತದಾರರೊಬ್ಬರು ಫೊಟೋಗೆ ಪೋಸ್ ನೀಡಿದರು.

ಮತದಾರರನ್ನು ಮತಕೇಂದ್ರದತ್ತ ಆಕರ್ಷಿಸಲು ಮತ್ತು ಮತದಾನ ಮಾಡುವಂತೆ ಉತ್ತೇಜಿಸಲು ಚುನಾವಣಾ ಆಯೋಗವು ನಗರದ ಕೆಲವು ಮತಕೇಂದ್ರಗಳಲ್ಲಿ ಪಿಂಕ್ ಬೂತ್, ಸಾಂಸ್ಕೃತಿಕ ಬೂತ್, ಐಟಿ ಬೂತ್, ಯಕ್ಷಗಾನ ಬೂತ್, ಬೆಂಗಳೂರಿನ ಸ್ಮಾರಕಗಳ ಥೀಮ್ ಆಧಾರಿತ ಬೂತ್, ಅರಣ್ಯ, ಕನ್ನಡ ಸಾಹಿತ್ಯ, ಚುನಾವಣಾ ಜಾಗೃತಿ ಸೇರಿದಂತೆ ಮತ್ತಿತರ ವಿವಿಧ ವಿಷಯಾಧಾರಿತ ಬೂತ್ ಗಳನ್ನು ತೆರೆದಿತ್ತು.

ಬೆಂಗಳೂರಿನ ನಾಲ್ಕು ಚುನಾವಣಾ ಜಿಲ್ಲೆಗಳಲ್ಲಿ ಒಟ್ಟಾರೆ ಸರಾಸರಿ ಅಂದಾಜು ಮತದಾನ ಪ್ರಮಾಣ ಹೀಗಿದೆ : ಬೆಂಗಳೂರು ಕೇಂದ್ರದಲ್ಲಿ ಶೇ.54.45ರಷ್ಟು, ಬೆಂಗಳೂರು ಉತ್ತರದಲ್ಲಿ ಶೇ.50.02, ದಕ್ಷಿಣದಲ್ಲಿ ಶೇ.51.15 ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇ.53.71ರಷ್ಟು ಮತದಾನವಾಗಿತ್ತು. ಒಟ್ಟಾರೆ ಬೆಂಗಳೂರಿನಲ್ಲಿ ಈ ಬಾರಿ ಸರಾಸರಿಯಾಗಿ ಶೇ.52.17ರಷ್ಟು ಮತ ಚಲಾವಣೆಯಾಗಿದೆಯಷ್ಟೆ.

ಬೆಂಗಳೂರಿನ ನಾಲ್ಕು ಚುನಾವಣಾ ಜಿಲ್ಲೆಗಳಲ್ಲಿ ಸಂಜೆ 5.00 ಗಂಟೆಯವರೆಗೆ ಆದ ಸರಾಸರಿ ಅಂದಾಜು ಮತದಾನ ಪ್ರಮಾಣ ಹೀಗಿದೆ : ಬೆಂಗಳೂರು ಕೇಂದ್ರದಲ್ಲಿ ಶೇ.50.10ರಷ್ಟು, ಬೆಂಗಳೂರು ಉತ್ತರದಲ್ಲಿ ಶೇ.50.02, ದಕ್ಷಿಣದಲ್ಲಿ ಶೇ.48.63 ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇ.52.19ರಷ್ಟು ಮತದಾನವಾಗಿತ್ತು. ಒಟ್ಟಾರೆ ಬೆಂಗಳೂರಿನಲ್ಲಿ ಈ ಅವಧಿಯಲ್ಲಿ ಶೇ.50.23ರಷ್ಟು ಮತ ಚಲಾವಣೆಯಾಗಿದೆಯಷ್ಟೆ.

ಬೆಂಗಳೂರಿನ ನಾಲ್ಕು ಚುನಾವಣಾ ಜಿಲ್ಲೆಗಳಲ್ಲಿ ಮಧ್ಯಾಹ್ನ 3.00 ಗಂಟೆಯವರೆಗೆ ಆದ ಸರಾಸರಿ ಅಂದಾಜು ಮತದಾನ ಪ್ರಮಾಣ ಹೀಗಿದೆ : ಬೆಂಗಳೂರು ಕೇಂದ್ರದಲ್ಲಿ ಶೇ.40.69ರಷ್ಟು, ಬೆಂಗಳೂರು ಉತ್ತರದಲ್ಲಿ ಶೇ.41.19, ದಕ್ಷಿಣದಲ್ಲಿ ಶೇ.30.28 ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇ.41.82ರಷ್ಟು ಮತದಾನವಾಗಿತ್ತು.

ಬೆಂಗಳೂರಿನ ನಾಲ್ಕು ಚುನಾವಣಾ ಜಿಲ್ಲೆಗಳಲ್ಲಿ ಮಧ್ಯಾಹ್ನ 1.00 ಗಂಟೆಯವರೆಗೆ ಆದ ಸರಾಸರಿ ಅಂದಾಜು ಮತದಾನ ಪ್ರಮಾಣ ಹೀಗಿದೆ : ಬೆಂಗಳೂರು ಕೇಂದ್ರದಲ್ಲಿ ಶೇ.29.41ರಷ್ಟು, ಬೆಂಗಳೂರು ಉತ್ತರದಲ್ಲಿ ಶೇ.29.90, ದಕ್ಷಿಣದಲ್ಲಿ ಶೇ.30.68 ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ 31.54ರಷ್ಟು ಮತದಾನವಾಗಿತ್ತು.

ಬೆಂಗಳೂರಿನ ನಾಲ್ಕು ಚುನಾವಣಾ ಜಿಲ್ಲೆಗಳಲ್ಲಿ ಬೆಳಗ್ಗೆ 11.00ಗಂಟೆಯವರೆಗೆ ಆದ ಮತದಾನ ಪ್ರಮಾಣ ಹೀಗಿದೆ : ಬೆಂಗಳೂರು ಕೇಂದ್ರದಲ್ಲಿ ಶೇ.19.30ರಷ್ಟು, ಬೆಂಗಳೂರು ಉತ್ತರದಲ್ಲಿ ಶೇ.18.34, ದಕ್ಷಿಣದಲ್ಲಿ ಶೇ.19.18 ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ 17.72ರಷ್ಟು ಮತದಾನವಾಗಿತ್ತು.

ಬೆಳಗ್ಗೆ 9.00ಗಂಟೆಯವರೆಗೆ ಆದ ಮತದಾನ ಪ್ರಮಾಣ ಹೀಗಿದೆ : ಬೆಂಗಳೂರು ಕೇಂದ್ರದಲ್ಲಿ ಶೇ.7.89ರಷ್ಟು, ಬೆಂಗಳೂರು ಉತ್ತರದಲ್ಲಿ ಶೇ.7.55, ದಕ್ಷಿಣದಲ್ಲಿ ಶೇ.9.37 ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ 9.11ರಷ್ಟು ಮತದಾನವಾಗಿತ್ತು.

  1. ಚುನಾವಣಾ ಜಿಲ್ಲೆ – ಬಿಬಿಎಂಪಿ ಕೇಂದ್ರ  ಶೇ.54.45 ಮತದಾನದ ಪ್ರಮಾಣ
ವಿಧಾನಸಭಾ ಕ್ಷೇತ್ರಅಂದಾಜು ಮತದಾನದ ಪ್ರಮಾಣ
ಚಾಮರಾಜಪೇಟೆ53.59%
ಚಿಕ್ಕಪೇಟೆ57.60%
ಗಾಂಧಿನಗರ57.28%
ರಾಜಾಜಿನಗರ56.65%
ರಾಜರಾಜೇಶ್ವರಿನಗರ52.56%
ಶಾಂತಿನಗರ54.33%
ಶಿವಾಜಿನಗರ56.59%
  • 2.ಚುನಾವಣಾ ಜಿಲ್ಲೆ : ಬಿಬಿಎಂಪಿ ಉತ್ತರ – ಶೇ.50.02 ಮತದಾನದ ಪ್ರಮಾಣ
ವಿಧಾನಸಭಾ ಕ್ಷೇತ್ರ               ಅಂದಾಜು ಮತದಾನದ ಪ್ರಮಾಣ
ಸಿ.ವಿ.ರಾಮನ್ ನಗರ42.10%
ಹೆಬ್ಬಾಳ52.00%
ಕೆ.ಆರ್.ಪುರ49.97%
ಮಹಾಲಕ್ಷ್ಮಿ ಲೇಔಟ್53.48%
ಮಲ್ಲೇಶ್ವರ52.93%
ಪುಲಕೇಶಿನಗರ54.79%
ಸರ್ವಜ್ಞನಗರ49.10%
  • 3.ಚುನಾವಣಾ ಜಿಲ್ಲೆ : ಬಿಬಿಎಂಪಿ ದಕ್ಷಿಣ – ಶೇ.51.15 ಮತದಾನದ ಪ್ರಮಾಣ
ವಿಧಾನಸಭಾ ಕ್ಷೇತ್ರಅಂದಾಜು ಮತದಾನದ ಪ್ರಮಾಣ
ಬಿಟಿಎಂ ಲೇಔಟ್49.15%
ಬಸವನಗುಡಿ51.77%
ಬೊಮ್ಮನಹಳ್ಳಿ45.50%
ಗೋವಿಂದರಾಜ ನಗರ53.50%
ಜಯನಗರ58.00%
ಪದ್ಮನಾಭನಗರ56.48%
ವಿಜಯನಗರ51.96%
  • 4.ಚುನಾವಣಾ ಜಿಲ್ಲೆ : ಬೆಂಗಳೂರು ನಗರ ಜಿಲ್ಲೆ  – ಶೇ.53.71 ಮತದಾನದ ಪ್ರಮಾಣ
ವಿಧಾನಸಭಾ ಕ್ಷೇತ್ರ               ಅಂದಾಜು ಮತದಾನದ ಪ್ರಮಾಣ
ಆನೇಕಲ್55.43%
ಬೆಂಗಳೂರು ದಕ್ಷಿಣ46.86%
ಬ್ಯಾಟರಾಯನಪುರ51.85%
ದಾಸರಹಳ್ಳಿ47.42%
ಮಹದೇವಪುರ55.04%
ಯಲಹಂಕ57.00%
ಯಶವಂತಪುರ63.69%
ಕೇಂದ್ರ ಚುನಾವಣಾ ಆಯೋಗವು ಮತದಾರರ ಅನುಕೂಲಕ್ಕಾಗಿ ‘ಚುನಾವಣಾ’ (Chunavana) ಆಂಡ್ರಾಯ್ಡ್ ಮೊಬೈಲ್ ಆಪ್ ಅನ್ನು ರೂಪಿಸಿದೆ. ಈ ಆ್ಯಪ್ ನಲ್ಲಿ ಮತಗಟ್ಟೆ ಸ್ಥಳ, ಮತದಾರರು ತಲುಪುವ ಮಾರ್ಗ, ಮತಗಟ್ಟೆಯಲ್ಲಿನ ಆ ಕ್ಷಣದ ಸರದಿಯ ವಿವರ, ಸಮೀಪದಲ್ಲಿರುವ ವಾಹನ ನಿಲುಗಡೆ ಸ್ಥಳ, ಅಭ್ಯರ್ಥಿಗಳ ವಿವರ ಸೇರಿದಂತೆ ಹಲವು ಮಾಹಿತಿಗಳು ಲಭ್ಯವಿದೆ. ಮತದಾರರು ಇದನ್ನು ಡೌನ್ ಲೋಡ್ ಮಾಡಿಕೊಂಡು ಇದರ ಉಪಯೋಗ ಪಡೆಯಬಹುದು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Bangalore Elections Works | ಬೆಂಗಳೂರಿನಲ್ಲಿ ನಾಳೆ ಮತದಾನಕ್ಕೆ ಪೂರ್ವ ತಯಾರಿ ಹೇಗಿದೆ ನೋಡಿ…!

Next Post

Karnataka Assembly Election 2023 Voting | ಯಾವ ಯಾವ ಸೆಲಬ್ರಿಟಿಗಳು ಮತದಾನ ಮಾಡಿದ್ದಾರೆ? ಇಲ್ಲಿದೆ ಆಸಕ್ತಿದಾಯಕ ಡಿಟೇಲ್ಸ್

Next Post
ಮಾಜಿ ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ಜಾವಗಲ್ ಶ್ರೀನಾಥ್ ಮೈಸೂರಿನ ಕುವೆಂಪು ನಗರದಲ್ಲಿನ ಜ್ಞಾನಗಂಗಾ ನಗರದಲ್ಲಿ ಮತದಾನ ಮಾಡಿ ಯುವ ಮತದಾರರೊಂದಿಗೆ ನಿಂತಿರುವ ಚಿತ್ರ.

Karnataka Assembly Election 2023 Voting | ಯಾವ ಯಾವ ಸೆಲಬ್ರಿಟಿಗಳು ಮತದಾನ ಮಾಡಿದ್ದಾರೆ? ಇಲ್ಲಿದೆ ಆಸಕ್ತಿದಾಯಕ ಡಿಟೇಲ್ಸ್

ವಾರ್ತಾ ಇಲಾಖೆ ಆಯುಕ್ತೆ ವಿನೋತ್ ಪ್ರಿಯಾರಿಂದ ವಿವಿಧ ಮತಗಟ್ಟೆಗಳಿಗೆ ಭೇಟಿ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d