Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW Special | World First LED Dome Planetarium | ಮೈಸೂರಿನಲ್ಲಿ 2024ರಲ್ಲಿ ಪೂರ್ಣವಾಗಲಿದೆ ವಿಶ್ವದ ಮೊದಲ ಎಲ್ಇಡಿ ಡೋಮ್ ಪ್ಲಾನಿಟೋರಿಯಂ ; ಇದರ ವಿಶೇಷತೆಗಳೇನು?

ವಾಣಿಜ್ಯ ಎಲ್ ಇಡಿ ಗುಮ್ಮಟವು 15 ಮೀಟರ್ ವ್ಯಾಸವನ್ನು ಹೊಂದಿದ್ದು, ನೆಲಕ್ಕೆ 15 ಡಿಗ್ರಿಯಷ್ಟು ಓರೆಯಾಗಿದೆ | 2024 ಇಸವಿಯಲ್ಲಿ ತಾರಾಲಯ ಕಾಮಗಾರಿ ಪೂರ್ಣ | ಕಾಸ್ಮೋಸ್ ಯೋಜನೆಯಡಿ ಸ್ಥಾಪಿತವಾಗುತ್ತಿರುವ ತಾರಾಲಯ

by Bengaluru Wire Desk
May 22, 2023
in BW Special, News Wire
Reading Time: 2 mins read
0
ಎಲ್ ಇಡಿ ಗೊಮ್ಮಟದಲ್ಲಿ ಅಂತರಿಕ್ಷದ ನೈಜ ಸೌಂದರ್ಯದ ಅನಾವರಣ ದೃಶ್ಯ (ಚಿತ್ರಕೃಪೆ : ಕೊನಿಕಾ ಮಿನೋಲ್ಟಾ ಇಂಕ್)

ಎಲ್ ಇಡಿ ಗೊಮ್ಮಟದಲ್ಲಿ ಅಂತರಿಕ್ಷದ ನೈಜ ಸೌಂದರ್ಯದ ಅನಾವರಣ ದೃಶ್ಯ (ಚಿತ್ರಕೃಪೆ : ಕೊನಿಕಾ ಮಿನೋಲ್ಟಾ ಇಂಕ್)

ಬೆಂಗಳುರು, ಮೇ.12 www.bengaluruwire.com : ಮೈಸೂರಿನಲ್ಲಿ ನಿರ್ಮಾಣವಾಗಲಿರುವ ವಿಶ್ವದ ಮೊತ್ತ ಮೊದಲ ಎಲ್‌ಇಡಿ ಗುಮ್ಮಟ ತಾರಾಲಯಕ್ಕೆ ಎಲ್ ಇಡಿ ಡೂಮ್ ತಂತ್ರಜ್ಞಾನದ ಗುತ್ತಿಗೆಯನ್ನು ಜಪಾನಿನ ಕೊನಿಕಾ ಮಿನೋಲ್ಟಾ ಇಂಕ್ ಒಕ್ಕೂಟಕ್ಕೆ ನೀಡಲಾಗಿದೆ ಎಂದು ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ (Indian Institute of Astrophysics – IIA) ತಿಳಿಸಿದೆ.

ಮೈಸೂರು ವಿಶ್ವವಿದ್ಯಾನಿಲಯ (University of Mysore) ದ 3 ಎಕರೆ ಜಾಗದಲ್ಲಿ ತಾರಾಲಯ ಸಂಕೀರ್ಣವನ್ನು ನಿರ್ಮಿಸಲಾಗುತ್ತಿದೆ. ಈ ವಾಣಿಜ್ಯ ಎಲ್ ಇಡಿ ಗುಮ್ಮಟವು 15 ಮೀಟರ್ ವ್ಯಾಸವನ್ನು ಹೊಂದಿದ್ದು, ನೆಲಕ್ಕೆ 15 ಡಿಗ್ರಿಯಷ್ಟು ಓರೆಯಾಗಿದೆ. ಸುಮಾರು 150 ಜನರು ಈ ಡೂಮ್ ಕೊಠಡಿಯಲ್ಲಿ ಒಟ್ಟಿಗೆ ಕುಳಿತು ಖಗೋಳ ಸೌಂದರ್ಯವನ್ನು ಸವಿಯಬಹುದು. ವಿಶ್ವವಿಜ್ಞಾನ ಶಿಕ್ಷಣ ಮತ್ತು ತರಬೇತಿ ಕೇಂದ್ರ (Cosmology Education And Research Training Center – COSMOS) ಯೋಜನೆಯಡಿಯಲ್ಲಿ ನೂತನ ಎಲ್ಇಡಿ ಡೋಮ್ ಪ್ಲಾನಿಟೋರಿಯಮ್ ನಿರ್ಮಾಣಕ್ಕೆ  ಮೈಸೂರು ವಿಶ್ವವಿದ್ಯಾಲಯ ಭೂಮಿ ನೀಡುತ್ತಿದ್ದು, ಐಐಎ ಈ ಯೋಜನೆಯನ್ನು ಕಾರ್ಯಗತಗೊಳಿಸುವ ಜವಾಬ್ದಾರಿಯನ್ನು ಹೊಂದಿದೆ. ಇದಕ್ಕಾಗಿ ಪರಸ್ಪರ ಒಪ್ಪಂದವನ್ನು ಮಾಡಿಕೊಂಡಿವೆ.

ಎಲ್ ಇಡಿ ಡೋಮ್ ಪರದೆಯ ಪಾರ್ಶ್ವ ನೋಟ (ಚಿತ್ರಕೃಪೆ : ಕೊನಿಕಾ ಮಿನೋಲ್ಟಾ ಇಂಕ್)
ಮೈಸೂರು ವಿಶ್ವವಿದ್ಯಾಲಯದ ಸಾಂದರ್ಭಿಕ ಚಿತ್ರ

ಕೊನಿಕಾ ಮಿನೋಲ್ಟಾ ಇಂಕ್ ಒಕ್ಕೂಟದಲ್ಲಿ ಫ್ರಾನ್ಸಿನ ಆರ್ ಎಸ್ಎ ಕಾಸ್ಮೋಸ್, ಭಾರತದ ಆರ್ಬಿಟ್ ಆನಿಮೇಟ್ ಸಂಸ್ಥೆಗಳಿದ್ದು, ಕೋಲ್ಕೊತಾದ ಕೊತಾರಿ ಅಂಡ್ ಅಸೋಸಿಯೇಟ್ಸ್ ಸಂಸ್ಥೆಯವರು ಕ್ಯಾಂಪಸ್ ಮತ್ತು ಕಟ್ಟಡದ ವಾಸ್ತುಶಿಲ್ಪ ವಿನ್ಯಾಸ ಕೈಗೊಳ್ಳುತ್ತಿದ್ದು, ಅಂತಿಮ ಹಂತದಲ್ಲಿದೆ. ಕಟ್ಟಡ ಕಾಮಗಾರಿ ನಡೆಸುವ ಸಂಸ್ಥೆಯನ್ನು ಅಂತಿಮಗೊಳಿಸುವ ಕಾರ್ಯ ನಡೆಯುತ್ತಿದೆ. 2024 ಇಸವಿಯಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಐಐಎ ಮಾಹಿತಿ ನೀಡಿದೆ.

ಇಂಡಿಯನ್ ಇನ್ಸಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ನಿರ್ದೇಶಕರಾದ ಅನ್ನಪೂರ್ಣ ಸುಬ್ರಮಣ್ಯಂ ನೇತೃತ್ವದಲ್ಲಿ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗುತ್ತಿದೆ. ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ, ಕೇಂದ್ರ ಅಣುಶಕ್ತಿ ಸಚಿವಾಲಯ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸಂಸದರ ಸ್ಥಳೀಯ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಎಲ್ ಇಡಿ ಡೋಮ್ ತಾರಾಲಯ ಯೋಜನೆ ಜಾರಿಗೊಳ್ಳುತ್ತಿದೆ ಎಂದು ಐಐಎ ವಿಜ್ಞಾನಿಗಳು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಎಲ್ಇಡಿ ಡೋಮ್ ಪ್ಲಾನಿಟೋರಿಯಂ ವಿಶೇಷತೆಗಳು :

ಎಲ್ ಇಡಿ ಡೋಮ್ ತಂತ್ರಜ್ಞಾನದಲ್ಲಿ ಕಂಡು ಬರುವ ದೃಶ್ಯಗಳು (ಚಿತ್ರಕೃಪೆ : ಕೊನಿಕಾ ಮಿನೋಲ್ಟಾ ಇಂಕ್)

ಇದು ಪ್ರಪಂಚದಲ್ಲೇ ಮೊದಲ ಎಲ್ಇಡಿ ಡೋಮ್ ಪ್ಲಾನೆಟೋರಿಯಮ್ ಆಗಿರುತ್ತದೆ (ಮತ್ತು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತದೆ). ಪ್ರಪಂಚದಲ್ಲಿ ಈಗಿರುವ ತಾರಾಲಯಗಳಲ್ಲಿರುವುದು ನಿಷ್ಕ್ರಿಯ ಗುಮ್ಮಟ ಮತ್ತು ಪ್ರೊಜೆಕ್ಟರ್ ವ್ಯವಸ್ಥೆಯ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತವೆ. ಬೆಂಗಳೂರಿನಲ್ಲಿನ ನೆಹರು ತಾರಾಲಯದಲ್ಲಿರುವುದು ಹೈಟೆಕ್ ಪ್ರೊಜೆಕ್ಟರ್ ಮೂಲಕವೇ ಅಂತರಿಕ್ಷ ಕುರಿತ ಮಾಹಿತಿಯನ್ನು ಮೇಲ್ಮುಖವಿರುವ ಡೋಮ್ ನಲ್ಲಿ ಬಿಂಬಿಸಲಾಗುತ್ತಿದೆ.

ಹೊಸ ರೀತಿಯ ಗುಮ್ಮಟವು ನೇರವಾಗಿ ಎಲ್ಇಡಿ ದೀಪಗಳ ಫಲಕಗಳಿಂದ ಮಾಡಲ್ಪಟ್ಟಿದೆ ಹಾಗೂ ಕಂಪ್ಯೂಟರ್ ವ್ಯವಸ್ಥೆಯಿಂದ ನಿಯಂತ್ರಿಸಲ್ಪಡುತ್ತದೆ. ನಂತರ ಎಲ್ಇಡಿ ದೀಪಗಳ ಮೂಲಕ ತಾರಾಲಯ ಪ್ರದರ್ಶನವನ್ನು ಪ್ರದರ್ಶಿಸಲಾಗುತ್ತದೆ. ಎಲ್ಇಡಿ ಗುಮ್ಮಟವು ಉತ್ತಮ ಕಾಂಟ್ರಾಸ್ಟ್ ಮತ್ತು 8 ಕೆ ರೆಸಲ್ಯೂಶನ್ ಅನ್ನು ಹೊಂದಿರುತ್ತದೆ. ಇದು ಪ್ಲೇಬ್ಯಾಕ್ ವೈಶಿಷ್ಟ್ಯವನ್ನು ಸಹ ಹೊಂದಿದೆ. ಹೀಗಾಗಿ ನಮ್ಮ ಕಣ್ಣ ಮುಂದೆಯೇ ಎಲ್ಲವೂ ನೈಜವಾಗಿ ಘಟಿಸುತ್ತಿವೆಯೇನೊ ಎಂಬಂತೆ ನೋಡುಗರಿಗೆ ಭಾಸವಾಗುತ್ತದೆ.

ವಿಶ್ವದ ಮೊತ್ತ ಮೊದಲ ವಾಣಿಜ್ಯ ಎಲ್ ಇಡಿ ಡೋಮ್ :

ಸಾರ್ವಜನಿಕ ವೀಕ್ಷಣೆಗಾಗಿ ಜಪಾನ್ ನಲ್ಲಿ ಮಾತ್ರ ಇಂತಹ ವ್ಯವಸ್ಥೆಯ ಎರಡು ಎಲ್ ಇಡಿ ಡೋಮ್ ಗಳಿವೆ. ಮಾತ್ರ ಇವೆ. ಮತ್ತು ಇದು ಕೊನಿಕಾ ಮಿಸೋಲ್ಟಾ ಇಂಕ್ ಮಾರಾಟಗಾರರಿಂದ ಸ್ವತಃ ನಿರ್ವಹಿಸಲಾಗುತ್ತದೆ. ಮೈಸೂರಿನ ಈ ತಾರಾಲಯವು ಮೊದಲ ಎಲ್ಇಡಿ ಗುಮ್ಮಟವಾಗಿದ್ದು, ಮಾರಾಟಗಾರರಿಂದ ಸ್ವತಂತ್ರ ಗ್ರಾಹಕರಿಗೆ ಸರಬರಾಜು ಮಾಡಲಾಗುತ್ತಿರುವ ಮೊದಲ ಎಲ್ ಇಡಿ ಡೋಮ್ ತಂತ್ರಜ್ಞಾನವಾಗಿದೆ.

ಕಾಸ್ಮೋಸ್ ಯೋಜನೆಯಡಿ ಸ್ಥಾಪಿತವಾಗುತ್ತಿರುವ ಈ ತಾರಾಲಯದಲ್ಲಿ ಖಗೋಳ ದತ್ತಾಂಶ ವಿಶ್ಲೇಷಣೆ ಕುರಿತಂತೆ ಶಾಲೆ, ಕಾಲೇಜು ಮತ್ತು ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಹಾಗೂ ವಿವಿಧ ರೀತಿಯ ಬಾಹ್ಯಾಕಾಶ ವಿಜ್ಞಾನ ಕುರಿತ ಕಾರ್ಯಕ್ರಮಗಳನ್ನು ಪ್ರದರ್ಶಿಸಲಾಗುತ್ತದೆ.

ಯೋಜನಾ ಮುಖ್ಯಸ್ಥರು ಹೇಳೋದೇನು? :

 “ಇದು ಉತ್ತಮ ರೆಸಲ್ಯೂಶನ್ ಮತ್ತು ಸೂಕ್ಷ್ಮತೆಯೊಂದಿಗೆ ವಿಶ್ವದ ಮೊದಲ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಎಲ್ಇಡಿ ಗುಮ್ಮಟ ತಾರಾಲಯವಾಗಿದೆ. ಅತ್ಯಾಧುನಿಕ ತಾರಾಲಯ ನಿರ್ಮಾಣದ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ ಮತ್ತು ಈ  ಕೇಂದ್ರವು ಮೈಸೂರು ಮತ್ತು ದೇಶದ ಉಳಿದ ವಿದ್ಯಾರ್ಥಿಗಳಿಗೆ ಆಧುನಿಕ ಖಗೋಳ ದತ್ತಾಂಶ ವಿಶ್ಲೇಷಣೆಯಲ್ಲಿ ತರಬೇತಿ ನೀಡುತ್ತದೆ. ಅಲ್ಲದೆ ವಿಶೇಷವಾಗಿ ಭಾರತವು ಭವಿಷ್ಯಕ್ಕಾಗಿ ಹಲವಾರು ದೊಡ್ಡ ದೂರದರ್ಶಕ ಯೋಜನೆಗಳನ್ನು ಯೋಜಿಸಿರುವುದರಿಂದ ಈ ಎಲ್ ಇಡಿ ತಾರಾಲಯ ನಿರ್ಮಾಣದಿಂದ ಬಹಳ ಅನುಕೂಲವಾಗಲಿದೆ.”

– ಫ್ರೊ. ಅನ್ನಪೂರ್ಣಿ ಸುಬ್ರಮಣ್ಯಂ, ಐಐಎ ನಿರ್ದೇಶಕಿ ಮತ್ತು ಕಾಸ್ಮಾಸ್ ಯೋಜನೆ ಉಸ್ತುವಾರಿ

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ಕನ್ನಡ ಸಾಹಿತ್ಯ ಪರಿಷತ್ತಿನ 2022ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳಿಗೆ 51 ಪ್ರಕಾರದ ಪುಸ್ತಕಗಳ ಆಹ್ವಾನ : ಇಲ್ಲಿದೆ ಮಾಹಿತಿ

Next Post

Mobile Sim Cards Issuing On Fake Documents | ನಕಲಿ ದಾಖಲೆ ನೀಡಿ ರಾಜ್ಯದಲ್ಲಿ 25 ಸಾವಿರ ಸಿಮ್ ಕಾರ್ಡ್ ಖರೀದಿ ಪ್ರಕರಣ ಗುರ್ತಿಸಿದ ದೂರ ಸಂಪರ್ಕ ಇಲಾಖೆ

Next Post
ವಿವಿಧ ಟೆಲಿಕಾಮ್ ಕಂಪನಿಗಳ ಸಿಮ್ ಕಾರ್ಡ್ ಸಾಂದರ್ಭಿಕ ಚಿತ್ರ

Mobile Sim Cards Issuing On Fake Documents | ನಕಲಿ ದಾಖಲೆ ನೀಡಿ ರಾಜ್ಯದಲ್ಲಿ 25 ಸಾವಿರ ಸಿಮ್ ಕಾರ್ಡ್ ಖರೀದಿ ಪ್ರಕರಣ ಗುರ್ತಿಸಿದ ದೂರ ಸಂಪರ್ಕ ಇಲಾಖೆ

Election Results Live Updates| ವಿಧಾನಸಭಾ ಚುನಾವಣಾ ಅಖಾಡ : ಇಲ್ಲಿದೆ ಫಲಿತಾಂಶದ ಸ್ಪಷ್ಟ ಚಿತ್ರಣ

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group