Thursday, September 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Bengaluru Focus

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Bengaluru Focus

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Karnataka New Chief Minister | ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆಶಿ ಡಿಸಿಎಂ : ಕಾಂಗ್ರೆಸ್ ಅಧಿಕೃತ ಘೋಷಣೆ

ಬೆಂಗಳೂರಿನ ಕಂಠೀರವ ಸ್ಟೇಡಿಯಮ್ ನಲ್ಲಿ ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮ | ಡಿಸಿಎಂ ಹುದ್ದೆ ಅಲಂಕರಿಸಲಿರುವ ಡಿ.ಕೆ.ಶಿವಕುಮಾರ್ | 2013ರಿಂದ 2018ರ ತನಕ ಪೂರ್ತಿ ಐದು ವರ್ಷಗಳ ಕಾಲ ಆಡಳಿತ ನಡೆಸಿದ ರಾಜ್ಯದ ಮೊದಲ ಮುಖ್ಯಮಂತ್ರಿ ಎಂಬ ಖ್ಯಾತಿಗೆ ಸಿದ್ದರಾಮಯ್ಯ ಪಾತ್ರರಾಗಿದ್ದರು.|

by Bengaluru Wire Desk
May 18, 2023
in News Wire, Public interest
Reading Time: 2 mins read
0

ಬೆಂಗಳೂರು/ ನವದೆಹಲಿ, ಮೇ.18 www.benglauruwire.com : ಕಾಂಗ್ರೆಸ್ ಹೈಕಮಾಂಡ್ ಸಾಕಷ್ಟು ಸರ್ಕಸ್ ಮತ್ತು ಲೆಕ್ಕಾಚಾರ ನಡೆಸಿದ ಬಳಿಕ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರನ್ನು ಘೋಷಣೆ ಮಾಡಿದೆ. ಈ ಮೂಲಕ ಕೈ ಪಕ್ಷ ಮೇ.13ರಂದು 135 ಬಹುಮತ ಪಡೆದ ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಕಗ್ಗಂಟಿಗೆ ಮುಕ್ತಿ ಸಿಕ್ಕಂತಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತಿತರ ಹಿರಿಯ ನಾಯಕರ ಜೊತೆ ಸುಧೀರ್ಘವಾಗಿ ಚರ್ಚಿಸಿ ಅಂತಿಮವಾಗಿ, ಅಧಿಕೃತವಾಗಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ, ಡಿ.ಕೆ.ಶಿವಕುಮಾರ್ ಅವರನ್ನು ಉಪ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಿರುವುದನ್ನು ಘೋಷಿಸಿದ್ದಾರೆ.

ನವದೆಹಲಿಯಲ್ಲಿ ಗುರುವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮೊದಲ ಅವಧಿಗೆ ಸಿದ್ದರಾಮಯ್ಯ ಸಿಎಂ ಆಗಲಿದ್ದಾರೆ ಹಾಗೂ ಎರಡನೇ ಅವಧಿಗೆ ಡಿ.ಕೆ ಶಿವಕುಮಾರ್ ಸಿಎಂ ಪಟ್ಟ ಅಲಂಕರಿಸಲಿದ್ದಾರೆ. ಡಿಕೆ ಶಿವಕುಮಾರ್‌ ಅವರಿಗೆ ಸದ್ಯ  ಡಿಸಿಎಂ, ಎರಡು ಪ್ರಬಲ ಖಾತೆಯನ್ನು ನೀಡುವುದಾಗಿ ಹೈಕಮಾಂಡ್‌ ಭರವಸೆ ನೀಡಿದೆ. ಅಷ್ಟೇ ಅಲ್ಲದೇ ಲೋಕಸಭಾ ಚುನಾವಣೆ ಮುಗಿಯುವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವುದು.

ಇದರಿಂದಾಗಿ ಕೊನೆಯ ಕ್ಷಣದ ವರೆಗೂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಹುದ್ದೆಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಆಯ್ಕೆ ಮಾಡುತ್ತಾರೆಂದು ಕಾದು ಕುಳಿತಿದ್ದ ಅವರ ಬೆಂಬಲಿಗರಿಗೆ ಬಹುದೊಡ್ಡ ನಿರಾಶೆಯಾಗಿದೆ. ಬುಧವಾರ ಸುಮಾರು 40 ನಿಮಿಷಗಳ ಕಾಲ ಸೋನಿಯಾಗಾಂಧಿಯವರ ನಿವಾಸದಲ್ಲಿ ರಾಹುಲ್ ಗಾಂಧಿಯವರ ಜೊತೆ ಮಾತುಕತೆ ನಡೆಸಿದ ಡಿ.ಕೆ.ಶಿವಕುಮಾರ್ ಮಾಧ್ಯಮದವರೊಂದಿಗೂ ಮಾತನಾಡದೆ ಕಾರು ಹತ್ತಿ ಅಲ್ಲಿಂದ ತೆರಳಿದರು. ರಾಹುಲ್ ಗಾಂಧಿ ಜೊತೆ ಮಾತುಕತೆ ಸಂದರ್ಭದಲ್ಲಿ ಡಿ.ಕೆ.ಶಿವಕುಮರ್ ವಿರುದ್ಧ ನಡೆಯುತ್ತಿರುವ ಕಾನೂನು ಪ್ರಕರಣಗಳ ಮುಂದೆ ತಮಗೆ ಹಾಗೂ ಪಕ್ಷದ ಮೇಲೆ ಬೀರುವ ಪರಿಣಾಮಗಳ ಬಗ್ಗೆಯೂ ಚರ್ಚೆ ನಡೆಯಿತು. ಒಂದು ಹಂತದಲ್ಲಿ ರಾಹುಲ್ ಗಾಂಧಿಯವರು ಇಟ್ಟ ಸೂತ್ರಕ್ಕೆ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ. ಕೊನೆಗೆ ಬುಧವಾರ ತಡರಾತ್ರಿ ವರೆಗೂ ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಚರ್ಚೆ ನಡೆಸಿ ಸಂಧಾನ ಯಶಸ್ವಿಯಾಯಿತು.

ನೂತನ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭವನ್ನು ನಗರದ ಕಂಠೀರವ ಸ್ಟೇಡಿಯಮ್ ನಲ್ಲಿ ಮೇ.20 ಮಧ್ಯಾಹ್ನ ನಡೆಯಲಿದೆ. ಈ ರಾಜ್ಯಪಾಲರಿಗೆ ಈ ಸಂಬಂಧ ಕಾಂಗ್ರೆಸ್ ಮಾಹಿತಿ ನೀಡಿದೆ. ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ 33 ಸಚಿವ ಸ್ಥಾನ ಕಲ್ಪಿಸಲು ಕಾಂಗ್ರೆಸ್ ನಿರ್ಧರಿಸಿದೆ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ಸ್ವೀಕರಿಸುತ್ತಿದ್ದು, ಅವರ ಅಪಾರ ಬೆಂಬಲಿಗರು, ರಾಜ್ಯಕ್ಕೆ ಅವರ ನೇತೃತ್ವದಲ್ಲಿ ಉತ್ತಮ ಆಡಳಿತ ಹಾಗೂ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ನಿರೀಕ್ಷೆಗಳಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆಯವರೊಂದಿಗೆ ಪ್ರದೀಪ್ ಸಿಂಗ್ ಸುರ್ಜೇವಾಲಾ, ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ (ಸಾಂದರ್ಭಿಕ ಚಿತ್ರ)

ಇನ್ನೊಂದೆಡೆ ಸಾಕಷ್ಟು ಪ್ರಯಾಸದ ಬಳಿಕ ಮುಖ್ಯಮಂತ್ರಿ ಗಾದಿ ಸಿದ್ದರಾಮಯ್ಯನವರಿಗೆ ಒಲಿದು ಬಂದಿರುವುದಕ್ಕೆ ರಾಜ್ಯದ ಹಲವು ಜಿಲ್ಲೆಗಳಲ್ಲಿರುವ ಸಿದ್ದು ಬೆಂಬಲಿಗರು ಪಟಾಕಿ ಸಿಡಿಸಿ, ಅವರ ಹೆಸರಿನಲ್ಲಿ ಘೋಷಣೆ ಕೂಗಿ, ಕೆಲವು ಕಡೆಗಳಲ್ಲಿ ಸಿದ್ದರಾಮಯ್ಯ ಅವರ ಪೋಸ್ಟರ್ ಗೆ ಹಾಲು ಸುರಿದು ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರ ತವರು ಸಿದ್ದರಾಮನ ಹುಂಡಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.

ಡಿಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ಕೈತಪ್ಪಿದ ಕಾರಣದಿಂದ ರಾಮನಗರ ಜಿಲ್ಲೆಯಲ್ಲಿ ಅವರ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಆದರೂ ಕೆಲವು ಬೆಂಬಲಿಗರು ಮೊದಲ ಬಾರಿಗೆ ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಗಳಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ಮೇ.14ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ಕುರಿತ ಸಭೆಯಲ್ಲಿ ಕಾಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯನ್ನು ಎಐಸಿಸಿ ಅಧ್ಯಕ್ಷರ ನಿರ್ಧಾರಕ್ಕೆ ಬಿಡಲು ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಇದಾದ ಬಳಿಕ ಸಿಎಂ ಹುದ್ದೆ ಆಯ್ಕೆಯ ಕಸರತ್ತು ಹೈಕಮಾಂಡ್ ಅಂಗಳಕ್ಕೆ ತಲುಪಿತ್ತು. ಈ ಬೆಳವಣಿಗೆಯಾದ ಬಳಿಕ ಸಿದ್ದರಾಮಯ್ಯ ಮೊದಲಿಗೆ ನವದೆಹಲಿಗೆ ತೆರಳಿ ತಮ್ಮದೇ ರೀತಿಯಲ್ಲಿ ಪಕ್ಷದ ಹೈಕಮಾಂಡ್ ನಾಯಕರ ಜೊತೆ ಚರ್ಚಿಸಿ ಹುದ್ದೆ ಗಿಟ್ಟಿಸಿಕೊಳ್ಳಲು ನಿರಂತರ ಪ್ರಯತ್ನಿಸಿದ್ದರು. ಇತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷಕ್ಕಾಗಿ ತಾವು ಮಾಡಿದ ಹೋರಾಟ, ಪ್ರಯತ್ನಗಳಲ್ಲವೂ ವ್ಯರ್ಥವಾಗದಂತೆ ತಡೆಯಲು ತೆರೆಮರೆಯಲ್ಲಿ ಕಾರ್ಯೋನ್ಮುಖರಾಗಿದ್ದರು. ಹೈಕಮಾಂಡ್ ಮೇ.15ರಂದೇ ನವದೆಹಲಿಗೆ ಆಹ್ವಾನ ನೀಡಿದ್ದರೂ, ಅನಾರೋಗ್ಯದ ಕಾರಣಕ್ಕೆ ಮಂಗಳವಾರ ತೆರಳಿದ್ದರು.

ಸಿದ್ದರಾಮಯ್ಯ ಖಾಸಗಿ ಮತ್ತು ರಾಜಕೀಯ ಬದುಕು :

ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ (ಸಾಂದರ್ಭಿಕ ಚಿತ್ರ)

1983ರಲ್ಲಿ ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಸ್ವತಂತ್ರ ರಾಜಕಾರಣಿಯಾಗಿ ಸ್ಪರ್ಧಿಸಿ ಗೆಲವು ಸಾಧಿಸಿದ ಸಿದ್ದರಾಮಯ್ಯ ಈವರೆಗೆ ಒಟ್ಟು 12 ಚುನಾವಣೆಗಳನ್ನು ಎದುರಿಸಿ ಆ ಪೈಕಿ 9 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಿದ್ದು ಅವರು ಹಣಕಾಸು ಸಚಿವರಾಗಿ ಇದುವರೆಗೆ 13 ಬಾರಿ ಬಜೆಟ್ ಮಂಡಿಸಿದ ದಾಖಲೆಯನ್ನು ಹೊಂದಿದ್ದಾರೆ. ಪ್ರತಿಪಕ್ಷಗಳಿಂದ ರಾಜ್ಯದ ಬೊಕ್ಕಸದ ಮೇಲೆ ಸಾಲದ ಹೆಚ್ಚಳದ ಆರೋಪಗಳ ಹೊರತಾಗಿಯೂ, ಅವರು ರಾಜ್ಯದ ಹಣಕಾಸಿನ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣಾ ಕಾಯಿದೆಯ ವ್ಯಾಪ್ತಿಯಲ್ಲಿ ಹಣಕಾಸಿನ ವಿವೇಕವನ್ನು ಕಾಪಾಡಿಕೊಳ್ಳಲು ಹೆಸರುವಾಸಿಯಾಗಿದ್ದರು.

ಮೈಸೂರು ಜಿಲ್ಲೆಯ ತಿ.ನರಸೀಪುರ ಸಮೀಪದ ವರುಣಾ ಹೋಬಳಿಯ ಸಿದ್ದರಾಮನಹುಂಡಿ ಎಂಬ ದೂರದ ಹಳ್ಳಿಯಲ್ಲಿ ಕುರುಬ ಗೌಡ ಸಮುದಾಯಕ್ಕೆ ಸೇರಿದ ರೈತ ಕುಟುಂಬದಲ್ಲಿ ಸಿದ್ದರಾಮೇಗೌಡ ಮತ್ತು ಬೋರಮ್ಮ ದಂಪತಿಯ ಮಗನಾಗಿ 3 ಆಗಸ್ಟ್ 1947ರಂದು ಜನಿಸಿದರು. ತಮ್ಮ ಐದು ಒಡಹುಟ್ಟಿದವರಲ್ಲಿ ಎರಡನೆಯವರಾಗಿದ್ದಾರೆ.  ತಮ್ಮ ಹತ್ತನೇ ವಯಸ್ಸಿನವರೆಗೆ ಯಾವುದೇ ಔಪಚಾರಿಕ ಶಿಕ್ಷಣವನ್ನು ಹೊಂದಿರಲಿಲ್ಲ. ಆದರೆ ಅವರ ಬಿ.ಎಸ್ಸಿ ಪದವಿಯನ್ನು ಪೂರೈಸಿದರು. ಹಾಗೂ ತಮ್ಮ ಎಲ್.ಎಲ್.ಬಿ. ಶಿಕ್ಷಣವನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ಪಡೆದರು. ಮೈಸೂರಿನಲ್ಲಿ ಚಿಕ್ಕಬೋರಯ್ಯ ಎಂಬ ವಕೀಲರ ಬಳಿ ಜ್ಯೂನಿಯರ್ ಆಗಿದ್ದ ಸಿದ್ದರಾಮಯ್ಯ ನಂತರ ಕೆಲ ಕಾಲ ಕಾನೂನು ಕಲಿತರು. ಹೀಗೆ ಪ್ರಾರಂಭಿಕ ಜೀವನದಲ್ಲಿ ಕಷ್ಟ ನಷ್ಟಗಳನ್ನು ಕಂಡಿದ್ದ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಪರವಾಗಿ ಹಲವು ಕಡೆಗಳಲ್ಲಿ ತಮ್ಮ ಹೋರಾಟ ಕೈಗೊಂಡಿದ್ದರು. ಕೊನೆಗೂ ರಾಜ್ಯದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಹುದ್ದೆಗೆ ಏರುತ್ತಿದ್ದಾರೆ.

ಡಿ.ಕೆ.ಶಿವಕುಮಾರ್ ನಡೆದು ಬಂದ ಹಾದಿ :

ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರೊಂದಿಗಿನ ಸಾಂದರ್ಭಿಕ ಚಿತ್ರ

ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ ಹಾಗೂ ಶ್ರೀಮತಿ ಗೌರಮ್ಮದಂಪತಿಯ ಪ್ರಥಮ ಪುತ್ರನಾಗಿ ಜನಿಸಿದ ಶ್ರೀ ಡಿ.ಕೆ. ಶಿವಕುಮಾರ್ (ಜನನ 15ನೇ ಮೇ 1962) ತಮ್ಮತಂದೆಯಿಂದಲೇ ನಾಯಕತ್ವದ ಗುಣಗಳನ್ನು ಪಡೆದುಕೊಂಡು ಬಂದರು. 18ನೇ ವಯಸ್ಸಿನಲ್ಲಿಯೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗವಾದ NSUI ಗೆ ಸೇರ್ಪಡೆಗೊಂಡು ಅನತಿ ಕಾಲದಲ್ಲಿಯೇ ಬೆಂಗಳೂರು ಜಿಲ್ಲೆಯ ಘಟಕದ ಅಧ್ಯಕ್ಷರಾದರು (1981-83).

1989ರಲ್ಲಿ ಅಖಿಲ ಭಾರತೀಯಕಾಂಗ್ರೆಸ್ ಪಕ್ಷದ ಮುಖೇನ ಸಾತನೂರು ವಿಧಾನ ಸಭಾಕ್ಷೇತ್ರದಿಂದ ಸ್ಪರ್ಧಿಸಿ, ಅಭೂತಪೂರ್ವ ರೀತಿಯಲ್ಲಿ, ಕ್ಷೇತ್ರದಲ್ಲಿ ಬೇರೂರಿದ ಜನತಾದಳದ ಪ್ರಾಬಲ್ಯವನ್ನು ಮೊಟಕುಗೊಳಿಸಿದ ಡಿ.ಕೆ. ಶಿವಕುಮಾರ್ ಅತ್ಯಧಿಕ ಮತಗಳಿಂದ ಜಯಗಳಿಸಿ ವಿಧಾನಸಭೆ ಪ್ರವೇಶಿಸಿದರು. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ಶಾಸಕರಾಗಿ, ಸಚಿವರಾಗಿ ಪಕ್ಷಕ್ಕೆ ಕಂಟಕ ಬಂದಾಗಲೆಲ್ಲ ಮುಂದೆ ನಿಂತು ಹೋರಾಟ ನಡೆಸಿ 2023ರ ಚುನಾವಣೆಯಲ್ಲಿ ಪಕ್ಷ ಬಹುಮತ ಪಡೆದು ಅಧಿಕಾರ ಹಿಡಿಯುವಲ್ಲಿ ಅವರ ಅಚಲ ಹೋರಾಟ ಹಾಗೂ ಸಂಘಟನಾ ಚತುರತೆ ಪ್ರಮುಖ ಕಾರಣವಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Karnataka CM Race News | ಮುಖ್ಯಮಂತ್ರಿ ಆಯ್ಕೆ ಕಗ್ಗಂಟು ಕೊನೆಗೂ ಪರಿಹಾರ : ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

Next Post

BDA Villa Project | ಬಿಡಿಎ ನಿರ್ಮಾಣದ ಅತ್ಯಾಧುನಿಕ “ವಿಲ್ಲಾ” ಕಾಮಗಾರಿ ಅಂತಿಮ ಹಂತದಲ್ಲಿ : ಶೀಘ್ರದಲ್ಲೇ ಸಾರ್ವಜನಿಕರಿಗೆ ಹಂಚಿಕೆ

Next Post
ಯಶವಂತಪುರ ತಾಲೂಕು ದಾಸನಪುರ ಹೋಬಳಿ ಹುಣ್ಣಿಗೆರೆ ಗ್ರಾಮದಲ್ಲಿ ನಿರ್ಮಾಣವಾಗಿರುವ ವಿಲ್ಲಾ ವಸತಿ ಯೋಜನಾ ಸ್ಥಳಕ್ಕೆ ಪ್ರಾಧಿಕಾರದ ಆಯುಕ್ತ ಕುಮಾರ್ ನಾಯಕ್ ಹಾಗೂ ಪ್ರಧಾನ ಅಭಯಂತರ ಶಾಂತಾರಾಜಣ್ಣ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

BDA Villa Project | ಬಿಡಿಎ ನಿರ್ಮಾಣದ ಅತ್ಯಾಧುನಿಕ “ವಿಲ್ಲಾ” ಕಾಮಗಾರಿ ಅಂತಿಮ ಹಂತದಲ್ಲಿ : ಶೀಘ್ರದಲ್ಲೇ ಸಾರ್ವಜನಿಕರಿಗೆ ಹಂಚಿಕೆ

ಜಿಎಸ್ ಟಿ ತೆರಿಗೆ ಕುರಿತ ಗ್ರಾಫಿಕ್ಸ್ ಚಿತ್ರ (ಸಾಂದರ್ಭಿಕ ಚಿತ್ರ)

Identify Fake GST Registration Drive | ನಕಲಿ ಜಿಎಸ್ ಟಿ ನೋಂದಣಿ ವಿರುದ್ಧ ವಿಶೇಷ ಕಾರ್ಯಾಚರಣೆ : GST ಅಧಿಕಾರಿಗಳು ನಿಮ್ಮ ಸ್ಥಳಕ್ಕೆ ಬಂದಾಗ ನೀವೇನು ಮಾಡಬೇಕು? ಇಲ್ಲಿದೆ ತಜ್ಞರ ಸಲಹೆ

Please login to join discussion

Like Us on Facebook

Follow Us on Twitter

Recent News

CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

September 10, 2026

BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

September 10, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

September 10, 2026

BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

September 10, 2026

Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

September 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d