Wednesday, June 18, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಕ್ವಾಂಟಮ್ ಯುಗಕ್ಕೆ ಭಾರತ ಪ್ರವೇಶ: ಡಿಆರ್‌ಡಿಓ-ಐಐಟಿ ದೆಹಲಿಯಿಂದ ಕ್ವಾಂಟಮ್ ಸುರಕ್ಷಿತ ಸಂವಹನ ಯಶಸ್ವೀ ಪ್ರಯೋಗ

    2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

    ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

  • Bengaluru Focus
    ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

    ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

    ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire
    ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಕ್ವಾಂಟಮ್ ಯುಗಕ್ಕೆ ಭಾರತ ಪ್ರವೇಶ: ಡಿಆರ್‌ಡಿಓ-ಐಐಟಿ ದೆಹಲಿಯಿಂದ ಕ್ವಾಂಟಮ್ ಸುರಕ್ಷಿತ ಸಂವಹನ ಯಶಸ್ವೀ ಪ್ರಯೋಗ

    2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

    ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

  • Bengaluru Focus
    ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

    ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

    ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

Odisha Train Accident Updates | 20 ವರ್ಷಗಳಲ್ಲಿ ದೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ 261 ಮಂದಿ ಸಾವು : ಸ್ಥಳಕ್ಕೆ ಪಿಎಂ ಮೋದಿ ಭೇಟಿ ; 33 ರೈಲು ಸೇವೆ ರದ್ದು

ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪುನಃಸ್ಥಾಪನೆ ಕಾರ್ಯ ಆರಂಭವಾಗಿದೆ.‌ | ಅಪಘಾತ ಹಿನ್ನಲೆಯಲ್ಲಿ 33 ರೈಲುಗಳನ್ನು ರದ್ದುಪಡಿಸಿದೆ ರೈಲ್ವೇ ಇಲಾಖೆ

by Bengaluru Wire Desk
June 3, 2023
in News Wire, Public interest
Reading Time: 2 mins read
0

ಕೋಲ್ಕತಾ, ಜೂ.3 www.bengaluruwire.com :
ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲುಗಳ ಭೀಕರ ಅಪಘಾತದಲ್ಲಿ ಕನಿಷ್ಠ 261 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 900 ಜನರು ಗಾಯಗೊಂಡಿದ್ದಾರೆ. ಇಷ್ಟು ದೊಡ್ಡ ರೈಲು ಅವಘಡವು ಕಳೆದ 20 ವರ್ಷಗಳಲ್ಲಿ ನಡೆದ ದೇಶದ ಅತ್ಯಂತ ಭೀಕರ ರೈಲು ಅಪಘಾತವಾಗಿದೆ ಎಂದು ರೈಲ್ವೇ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮತ್ತು ಕಟಕ್‌ನ ಆಸ್ಪತ್ರೆಗಳಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲಿದ್ದಾರೆ. ಅಪಘಾತದಲ್ಲಿ ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಸೇರಿವೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪುನಃಸ್ಥಾಪನೆ ಕಾರ್ಯ ಆರಂಭವಾಗಿದೆ.‌

ರೈಲು ನಂ.12841 ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ರೈಲು ನಂ.12864 ಸರ್ ಎಂ ವಿಶ್ವೇಶ್ವರಯ್ಯ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಜೂ.2 ರಂದು ಸುಮಾರು 6.55 ಗಂಟೆಗೆ ಬಹನಾಗ ಬಜಾರ್ ರೈಲು ನಿಲ್ದಾಣದ ಬಳಿ ಹಳಿತಪ್ಪಿತು.

ಇತ್ತೀಚಿನ ವರ್ಷಗಳಲ್ಲೆ ಅತಿದೊಡ್ಡ ರೈಲು ದುರಂತ ನಡೆದ ಸ್ಥಳದಲ್ಲಿ ರೈಲುಗಳು ಪರಸ್ಪರ ಡಿಕ್ಕಿ ಹೊಡೆದು ನುಜ್ಜುಗುಜ್ಜಾಗಿರುವುದು.

ಇಲ್ಲಿಯವರೆಗೆ ಬಂದಿರುವ ಮಾಹಿತಿ ಪ್ರಕಾರ 261 ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಗೋಪಾಲ್‌ಪುರ, ಖಾಂತಪಾರಾ, ಬಾಲಸೋರ್, ಭದ್ರಕ್ ಮತ್ತು ಸೊರೊ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರೈಲ್ವೇ ಸಚಿವರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಮತ್ತು ಪುನಃಸ್ಥಾಪನೆ ಕಾರ್ಯವನ್ನು ನೋಡಿಕೊಳ್ಳುತ್ತಿದ್ದಾರೆ. ರೈಲ್ವೇ ಮಂಡಳಿಯ ಅಧ್ಯಕ್ಷರು ಕಟಕ್ ಆಸ್ಪತ್ರೆಯಲ್ಲಿದ್ದಾರೆ ಮತ್ತು ಡಿಜಿ/ಆರೋಗ್ಯ, ರೈಲ್ವೇ ಮಂಡಳಿಯು ಬಾಲಸೋರ್ ಆಸ್ಪತ್ರೆಯಲ್ಲಿ ಗಾಯಗೊಂಡಿರುವ ಪ್ರಯಾಣಿಕರ ಚಿಕಿತ್ಸೆಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ 50,000 ರೂಪಾಯಿ ಪರಿಹಾರ ನೀಡುವುದಾಗಿ ವೈಷ್ಣವ್ ಘೋಷಿಸಿದ್ದಾರೆ.

ದುರ್ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ

ರೈಲು ದುರಂತದ ಕುರಿತು ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಭೀಕರ ರೈಲು ದುರಂತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಒಂದು ದಿನದ ಶೋಕಾಚರಣೆಯನ್ನು ಘೋಷಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತದ ಬಗ್ಗೆ ತಮ್ಮ ದುಖಃ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಘೋಷಿಸಿದರು.

ಅಪಘಾತವು ಒಂದು ರೈಲು ಇನ್ನೊಂದಕ್ಕೆ ತುಂಬಾ ಬಲವಾಗಿ ಡಿಕ್ಕಿ ಹೊಡೆದು, ರೈಲು ಗಾಡಿಗಳು ಗಾಳಿಯಲ್ಲಿ ಎತ್ತರಕ್ಕೆ ಹಾರಿ ತಿರುಚಿದ ನಂತರ ಹಳಿಗಳು ಸಂಪೂರ್ಣವಾಗಿ ಜಖಂಗೊಂಡವು. ಅಲ್ಲದೆ ಮತ್ತೊಂದು ರೈಲು ಗಾಡಿಯನ್ನು ಸಂಪೂರ್ಣವಾಗಿ ಅದರ ಛಾವಣಿಯ ಮೇಲೆ ಎಸೆಯಲ್ಪಟ್ಟಿದ್ದರಿಂದ, ಪ್ರಯಾಣಿಕರ ವಿಭಾಗದ ಕೋಚ್ ಗಳಿಗೆ ತೀವ್ರ ರೀತಿಯ ಹಾನಿಯಾಯಿತು.

ಅಪಘಾತ ಸ್ಥಳದಲ್ಲಿ ಛಿದ್ರಗೊಂಡು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಗೂಡ್ಸ್ ವ್ಯಾಗನ್‌ಗಳು

ರೈಲ್ವೆ ಮಂಡಳಿ ಮೂಲಸೌಕರ್ಯ ಸದಸ್ಯರು ಹಳಿತಪ್ಪಿದ ಸ್ಥಳದಲ್ಲಿ ಉಪಸ್ಥಿತರಿದ್ದು, ಪುನಃಸ್ಥಾಪನೆ ಕಾರ್ಯವನ್ನು ನೋಡಿಕೊಳ್ಳುತ್ತಿದ್ದಾರೆ.

“ಎಲ್ಲವೂ ಅಲುಗಾಡುತ್ತಿದೆ ಮತ್ತು ಕೋಚ್ ಉರುಳುತ್ತಿರುವುದನ್ನು ನಾವು ನೋಡುತ್ತಿದ್ದೆವು” ಎಂದು ಕೋರಮಂಡಲ್-ಶಾಲಿಮಾರ್ ಎಕ್ಸ್‌ಪ್ರೆಸ್‌ನಲ್ಲಿ ಚೆನ್ನೈಗೆ ಪ್ರಯಾಣಿಸುತ್ತಿದ್ದ ದಿನಗೂಲಿ ಕೆಲಸಗಾರನೊಬ್ಬ ತನಗಾದ ಗಾಯಗಳನ್ನು ತೋರಿಸುತ್ತಾ ಹೇಳಿದರು.

ಇನ್ನೊಬ್ಬ ಬದುಕುಳಿದವರ ಪ್ರಕಾರ, “ಸೀಳಿರುವ ಲೋಹದ ಅವಶೇಷಗಳ ಮೇಲೆ ಕತ್ತರಿಸಿದ ಕೈಕಾಲುಗಳು ಚದುರಿಹೋಗಿದ್ದವು ಎಂದಿದ್ದಾರೆ. “ರೈಲು ಹಳಿತಪ್ಪಿದಾಗ ನಾನು ಮಲಗಿದ್ದೆ. ಸುಮಾರು 10-15 ಜನರು ನನ್ನ ಮೇಲೆ ಬಿದ್ದಿದ್ದರು. ನಾನು ಕೋಚ್‌ನಿಂದ ಹೊರಬಂದಾಗ, ಸುತ್ತಲೂ ಕೈಕಾಲುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದನ್ನು ನೋಡಿದೆ. ಇಲ್ಲಿ ಒಂದು ಕಾಲು, ಅಲ್ಲಿ ಒಂದು ಕೈ, ಹಲವು ಮುಖಗಳು ವಿರೂಪಗೊಂಡಿತ್ತು” ಬದುಕುಳಿದವರೊಬ್ಬರು ರಣಭೀಕರ ಮೃತ್ಯು ಬಂದೆರಗಿದ ಸಂದರ್ಭದವನ್ನು ತೆರೆದಿಟ್ಟರು.

ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಈಗ ಆ ಸ್ಥಳದಲ್ಲಿ ರೈಲು ಸೌಕರ್ಯಗಳನ್ನು ಪುನಃಸ್ಥಾಪನೆ ಮಾಡುವ ಕಾರ್ಯದತ್ತ ಗಮನ ಹರಿಸಲಾಗಿದೆ ಎಂದು ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ತಿಳಿಸಿದ್ದಾರೆ.

ಒಡಿಶಾಗೆ ರಾಜ್ಯ ಸರ್ಕಾರದ ಪ್ರತಿನಿಧಿಯಾಗಿ ಹೊರಟ ಸಂತೋಷ್ ಲಾಡ್ :
ಬೆಂಗಳೂರು ಎಚ್ ಎಎಲ್ ವಿಮಾನ ನಿಲ್ದಾಣದಿಂದ ವಿಮಾನದಲ್ಲಿ ಸಚಿವ ಸಂತೋಷ್ ಲಾಡ್, ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಾದ ಮನೋಜ್ ರಾಜನ್ ಸೇರಿದಂತೆ ಐದು ಮಂದಿಯ ತಂಡ ಕರ್ನಾಟಕವನ್ನು ಪ್ರತಿನಿಧಿಸಿ ಘಟನೆ ನಡೆದ ಸ್ಥಳಕ್ಕೆ ತೆರಳಿ ರಾಜ್ಯದ ಪ್ರಯಾಣಿಕರ ಸಂಬಂಧಿಕರ ಜೊತೆ ಸಂವಹನ ಹಾಗೂ ಪರಿಹಾರ ಕೈಗೊಳ್ಳಲು ಮಧ್ಯಾಹ್ನ 2.30ಕ್ಕೆ ತೆರಳಿದರು.

ಖರಗ್ ಪುರ ವಿಭಾಗದಲ್ಲಿ ಶುಕ್ರವಾರ ಸಂಜೆ ನಡೆದ ಭೀಕರ ಅಪಘಾತದ ಹಿನ್ನಲೆಯಲ್ಲಿ ಈ ಕೆಳಕಂಡ 33 ರೈಲುಗಳನ್ನು ಜೂ.3 ಹಾಗೂ 4ರಂದು ರದ್ದುಪಡಿಸಲಾಗಿದೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

Congress 5 Guarantee Schemes | ಕಾಂಗ್ರೆಸ್ ಐದು ಗ್ಯಾರಂಟಿ ಇದೇ ಆರ್ಥಿಕ ವರ್ಷದಲ್ಲಿ ಜಾರಿ : ಸಿಎಂ ಸಿದ್ದರಾಮಯ್ಯ – ಯೋಜನೆಯ ಷರತ್ತುಗಳೇನು ಗೊತ್ತಾ?

Next Post

ಸಮಾಜದಲ್ಲಿ‌ ಜ್ಞಾನ ಮತ್ತು ವೈಚಾರಿಕ ಪ್ರಜ್ಞೆ ಬೆಳೆಯಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಸಮಾಜದಲ್ಲಿ‌ ಜ್ಞಾನ ಮತ್ತು ವೈಚಾರಿಕ ಪ್ರಜ್ಞೆ ಬೆಳೆಯಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಧಾನಸೌಧದ ಸಾಂದರ್ಭಿಕ ಚಿತ್ರ

Guarantee Schemes Guidelines | 'ಯುವನಿಧಿ' ಮತ್ತು 'ಅನ್ನಭಾಗ್ಯ' ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ : ಗ್ಯಾರಂಟಿ ಷರತ್ತುಗಳೇನು? ಇಲ್ಲಿದೆ ಮಾಹಿತಿ

Please login to join discussion

Like Us on Facebook

Follow Us on Twitter

Recent News

ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

June 18, 2025

ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

June 18, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

June 18, 2025

ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

June 18, 2025
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

June 17, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d