Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Odisha Train Accident Updates | 20 ವರ್ಷಗಳಲ್ಲಿ ದೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ 261 ಮಂದಿ ಸಾವು : ಸ್ಥಳಕ್ಕೆ ಪಿಎಂ ಮೋದಿ ಭೇಟಿ ; 33 ರೈಲು ಸೇವೆ ರದ್ದು

ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪುನಃಸ್ಥಾಪನೆ ಕಾರ್ಯ ಆರಂಭವಾಗಿದೆ.‌ | ಅಪಘಾತ ಹಿನ್ನಲೆಯಲ್ಲಿ 33 ರೈಲುಗಳನ್ನು ರದ್ದುಪಡಿಸಿದೆ ರೈಲ್ವೇ ಇಲಾಖೆ

by Bengaluru Wire Desk
June 3, 2023
in News Wire, Public interest
Reading Time: 2 mins read
0

ಕೋಲ್ಕತಾ, ಜೂ.3 www.bengaluruwire.com :
ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲುಗಳ ಭೀಕರ ಅಪಘಾತದಲ್ಲಿ ಕನಿಷ್ಠ 261 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 900 ಜನರು ಗಾಯಗೊಂಡಿದ್ದಾರೆ. ಇಷ್ಟು ದೊಡ್ಡ ರೈಲು ಅವಘಡವು ಕಳೆದ 20 ವರ್ಷಗಳಲ್ಲಿ ನಡೆದ ದೇಶದ ಅತ್ಯಂತ ಭೀಕರ ರೈಲು ಅಪಘಾತವಾಗಿದೆ ಎಂದು ರೈಲ್ವೇ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮತ್ತು ಕಟಕ್‌ನ ಆಸ್ಪತ್ರೆಗಳಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲಿದ್ದಾರೆ. ಅಪಘಾತದಲ್ಲಿ ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಸೇರಿವೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪುನಃಸ್ಥಾಪನೆ ಕಾರ್ಯ ಆರಂಭವಾಗಿದೆ.‌

ರೈಲು ನಂ.12841 ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ರೈಲು ನಂ.12864 ಸರ್ ಎಂ ವಿಶ್ವೇಶ್ವರಯ್ಯ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಜೂ.2 ರಂದು ಸುಮಾರು 6.55 ಗಂಟೆಗೆ ಬಹನಾಗ ಬಜಾರ್ ರೈಲು ನಿಲ್ದಾಣದ ಬಳಿ ಹಳಿತಪ್ಪಿತು.

ಇತ್ತೀಚಿನ ವರ್ಷಗಳಲ್ಲೆ ಅತಿದೊಡ್ಡ ರೈಲು ದುರಂತ ನಡೆದ ಸ್ಥಳದಲ್ಲಿ ರೈಲುಗಳು ಪರಸ್ಪರ ಡಿಕ್ಕಿ ಹೊಡೆದು ನುಜ್ಜುಗುಜ್ಜಾಗಿರುವುದು.

ಇಲ್ಲಿಯವರೆಗೆ ಬಂದಿರುವ ಮಾಹಿತಿ ಪ್ರಕಾರ 261 ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಗೋಪಾಲ್‌ಪುರ, ಖಾಂತಪಾರಾ, ಬಾಲಸೋರ್, ಭದ್ರಕ್ ಮತ್ತು ಸೊರೊ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರೈಲ್ವೇ ಸಚಿವರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಮತ್ತು ಪುನಃಸ್ಥಾಪನೆ ಕಾರ್ಯವನ್ನು ನೋಡಿಕೊಳ್ಳುತ್ತಿದ್ದಾರೆ. ರೈಲ್ವೇ ಮಂಡಳಿಯ ಅಧ್ಯಕ್ಷರು ಕಟಕ್ ಆಸ್ಪತ್ರೆಯಲ್ಲಿದ್ದಾರೆ ಮತ್ತು ಡಿಜಿ/ಆರೋಗ್ಯ, ರೈಲ್ವೇ ಮಂಡಳಿಯು ಬಾಲಸೋರ್ ಆಸ್ಪತ್ರೆಯಲ್ಲಿ ಗಾಯಗೊಂಡಿರುವ ಪ್ರಯಾಣಿಕರ ಚಿಕಿತ್ಸೆಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ 50,000 ರೂಪಾಯಿ ಪರಿಹಾರ ನೀಡುವುದಾಗಿ ವೈಷ್ಣವ್ ಘೋಷಿಸಿದ್ದಾರೆ.

ದುರ್ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ

ರೈಲು ದುರಂತದ ಕುರಿತು ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಭೀಕರ ರೈಲು ದುರಂತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಒಂದು ದಿನದ ಶೋಕಾಚರಣೆಯನ್ನು ಘೋಷಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತದ ಬಗ್ಗೆ ತಮ್ಮ ದುಖಃ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಘೋಷಿಸಿದರು.

ಅಪಘಾತವು ಒಂದು ರೈಲು ಇನ್ನೊಂದಕ್ಕೆ ತುಂಬಾ ಬಲವಾಗಿ ಡಿಕ್ಕಿ ಹೊಡೆದು, ರೈಲು ಗಾಡಿಗಳು ಗಾಳಿಯಲ್ಲಿ ಎತ್ತರಕ್ಕೆ ಹಾರಿ ತಿರುಚಿದ ನಂತರ ಹಳಿಗಳು ಸಂಪೂರ್ಣವಾಗಿ ಜಖಂಗೊಂಡವು. ಅಲ್ಲದೆ ಮತ್ತೊಂದು ರೈಲು ಗಾಡಿಯನ್ನು ಸಂಪೂರ್ಣವಾಗಿ ಅದರ ಛಾವಣಿಯ ಮೇಲೆ ಎಸೆಯಲ್ಪಟ್ಟಿದ್ದರಿಂದ, ಪ್ರಯಾಣಿಕರ ವಿಭಾಗದ ಕೋಚ್ ಗಳಿಗೆ ತೀವ್ರ ರೀತಿಯ ಹಾನಿಯಾಯಿತು.

ಅಪಘಾತ ಸ್ಥಳದಲ್ಲಿ ಛಿದ್ರಗೊಂಡು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಗೂಡ್ಸ್ ವ್ಯಾಗನ್‌ಗಳು

ರೈಲ್ವೆ ಮಂಡಳಿ ಮೂಲಸೌಕರ್ಯ ಸದಸ್ಯರು ಹಳಿತಪ್ಪಿದ ಸ್ಥಳದಲ್ಲಿ ಉಪಸ್ಥಿತರಿದ್ದು, ಪುನಃಸ್ಥಾಪನೆ ಕಾರ್ಯವನ್ನು ನೋಡಿಕೊಳ್ಳುತ್ತಿದ್ದಾರೆ.

“ಎಲ್ಲವೂ ಅಲುಗಾಡುತ್ತಿದೆ ಮತ್ತು ಕೋಚ್ ಉರುಳುತ್ತಿರುವುದನ್ನು ನಾವು ನೋಡುತ್ತಿದ್ದೆವು” ಎಂದು ಕೋರಮಂಡಲ್-ಶಾಲಿಮಾರ್ ಎಕ್ಸ್‌ಪ್ರೆಸ್‌ನಲ್ಲಿ ಚೆನ್ನೈಗೆ ಪ್ರಯಾಣಿಸುತ್ತಿದ್ದ ದಿನಗೂಲಿ ಕೆಲಸಗಾರನೊಬ್ಬ ತನಗಾದ ಗಾಯಗಳನ್ನು ತೋರಿಸುತ್ತಾ ಹೇಳಿದರು.

ಇನ್ನೊಬ್ಬ ಬದುಕುಳಿದವರ ಪ್ರಕಾರ, “ಸೀಳಿರುವ ಲೋಹದ ಅವಶೇಷಗಳ ಮೇಲೆ ಕತ್ತರಿಸಿದ ಕೈಕಾಲುಗಳು ಚದುರಿಹೋಗಿದ್ದವು ಎಂದಿದ್ದಾರೆ. “ರೈಲು ಹಳಿತಪ್ಪಿದಾಗ ನಾನು ಮಲಗಿದ್ದೆ. ಸುಮಾರು 10-15 ಜನರು ನನ್ನ ಮೇಲೆ ಬಿದ್ದಿದ್ದರು. ನಾನು ಕೋಚ್‌ನಿಂದ ಹೊರಬಂದಾಗ, ಸುತ್ತಲೂ ಕೈಕಾಲುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದನ್ನು ನೋಡಿದೆ. ಇಲ್ಲಿ ಒಂದು ಕಾಲು, ಅಲ್ಲಿ ಒಂದು ಕೈ, ಹಲವು ಮುಖಗಳು ವಿರೂಪಗೊಂಡಿತ್ತು” ಬದುಕುಳಿದವರೊಬ್ಬರು ರಣಭೀಕರ ಮೃತ್ಯು ಬಂದೆರಗಿದ ಸಂದರ್ಭದವನ್ನು ತೆರೆದಿಟ್ಟರು.

ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಈಗ ಆ ಸ್ಥಳದಲ್ಲಿ ರೈಲು ಸೌಕರ್ಯಗಳನ್ನು ಪುನಃಸ್ಥಾಪನೆ ಮಾಡುವ ಕಾರ್ಯದತ್ತ ಗಮನ ಹರಿಸಲಾಗಿದೆ ಎಂದು ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ತಿಳಿಸಿದ್ದಾರೆ.

ಒಡಿಶಾಗೆ ರಾಜ್ಯ ಸರ್ಕಾರದ ಪ್ರತಿನಿಧಿಯಾಗಿ ಹೊರಟ ಸಂತೋಷ್ ಲಾಡ್ :
ಬೆಂಗಳೂರು ಎಚ್ ಎಎಲ್ ವಿಮಾನ ನಿಲ್ದಾಣದಿಂದ ವಿಮಾನದಲ್ಲಿ ಸಚಿವ ಸಂತೋಷ್ ಲಾಡ್, ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಾದ ಮನೋಜ್ ರಾಜನ್ ಸೇರಿದಂತೆ ಐದು ಮಂದಿಯ ತಂಡ ಕರ್ನಾಟಕವನ್ನು ಪ್ರತಿನಿಧಿಸಿ ಘಟನೆ ನಡೆದ ಸ್ಥಳಕ್ಕೆ ತೆರಳಿ ರಾಜ್ಯದ ಪ್ರಯಾಣಿಕರ ಸಂಬಂಧಿಕರ ಜೊತೆ ಸಂವಹನ ಹಾಗೂ ಪರಿಹಾರ ಕೈಗೊಳ್ಳಲು ಮಧ್ಯಾಹ್ನ 2.30ಕ್ಕೆ ತೆರಳಿದರು.

ಖರಗ್ ಪುರ ವಿಭಾಗದಲ್ಲಿ ಶುಕ್ರವಾರ ಸಂಜೆ ನಡೆದ ಭೀಕರ ಅಪಘಾತದ ಹಿನ್ನಲೆಯಲ್ಲಿ ಈ ಕೆಳಕಂಡ 33 ರೈಲುಗಳನ್ನು ಜೂ.3 ಹಾಗೂ 4ರಂದು ರದ್ದುಪಡಿಸಲಾಗಿದೆ.

WhatsApp Join our WhatsApp Channel
Previous Post

Congress 5 Guarantee Schemes | ಕಾಂಗ್ರೆಸ್ ಐದು ಗ್ಯಾರಂಟಿ ಇದೇ ಆರ್ಥಿಕ ವರ್ಷದಲ್ಲಿ ಜಾರಿ : ಸಿಎಂ ಸಿದ್ದರಾಮಯ್ಯ – ಯೋಜನೆಯ ಷರತ್ತುಗಳೇನು ಗೊತ್ತಾ?

Next Post

ಸಮಾಜದಲ್ಲಿ‌ ಜ್ಞಾನ ಮತ್ತು ವೈಚಾರಿಕ ಪ್ರಜ್ಞೆ ಬೆಳೆಯಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಸಮಾಜದಲ್ಲಿ‌ ಜ್ಞಾನ ಮತ್ತು ವೈಚಾರಿಕ ಪ್ರಜ್ಞೆ ಬೆಳೆಯಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಧಾನಸೌಧದ ಸಾಂದರ್ಭಿಕ ಚಿತ್ರ

Guarantee Schemes Guidelines | 'ಯುವನಿಧಿ' ಮತ್ತು 'ಅನ್ನಭಾಗ್ಯ' ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ : ಗ್ಯಾರಂಟಿ ಷರತ್ತುಗಳೇನು? ಇಲ್ಲಿದೆ ಮಾಹಿತಿ

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group