Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW Special | APL BPL Card | ಹೊಸದಾಗಿ ಎಪಿಎಲ್ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಈ ತಿಂಗಳು ಅವಕಾಶವಿಲ್ಲ !! ಯಾಕೆ? ಇಲ್ಲಿದೆ Exclusive ಮಾಹಿತಿ

ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಆಹಾರ ಇಲಾಖೆಯ ರೇಷನ್ ಕಾರ್ಡ್ ಗಳೇ ಆಧಾರ | ರಾಜ್ಯದ 5.28 ಕೋಟಿ ರೇಷನ್ ಕಾರ್ಡ್ ಫಲಾನುಭವಿಗಳ ದತ್ತಾಂಶ ರಕ್ಷಣೆ, ಆಹಾರ ಇಲಾಖೆ ವೆಬ್ ಸೈಟ್, ಸಾಫ್ಟ್ ವೇರ್ ಕಾರ್ಯ ನಿರ್ವಹಣಾ ಸಾಮರ್ಥ್ಯ ಹೆಚ್ಚಳ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ | ಜುಲೈ ನಲ್ಲಿ ಬೇಡಿಕೆ ಆಧರಿಸಿ ಹೊಸ ಅರ್ಜಿ ಸಲ್ಲಿಕೆಗೆ ಸಿಎಂ ನಿರ್ಧಾರ

by Bengaluru Wire Desk
September 4, 2023
in BW Special, Public interest
Reading Time: 2 mins read
0
ಪಡಿತರ ಚೀಟಿದಾರರ ಕುಟುಂಬಕ್ಕೆ ಆಹಾರ ಧಾನ್ಯ ವಿತರಿಸುತ್ತಿರುವ ಸಾಂದರ್ಭಿಕ ಚಿತ್ರ

ಪಡಿತರ ಚೀಟಿದಾರರ ಕುಟುಂಬಕ್ಕೆ ಆಹಾರ ಧಾನ್ಯ ವಿತರಿಸುತ್ತಿರುವ ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.14 www.bengaluruwire.com : ರಾಜ್ಯದಲ್ಲಿ ಈಗ ಸಿದ್ದರಾಮಯ್ಯ ಸರ್ಕಾರದ 5 ಗ್ಯಾರಂಟಿ ಸ್ಕೀಮ್ ಗಳ ಜಾರಿ ಮಾಡುವತ್ತಲೇ ಎಲ್ಲರ ಚಿತ್ತ ಹರಿದಿದೆ. ಆದರೆ ಹಲವು ತಿಂಗಳುಗಳಿಂದ ಎಪಿಎಲ್, ಬಿಪಿಎಲ್ ಕಾರ್ಡಿಗೆ ಅರ್ಜಿ ಹಾಕಿ ಕುಳಿತವರಿಗೆ ಮತ್ತು ಹೊಸದಾಗಿ ಅರ್ಜಿ ಹಾಕಲು ಕಾಯುತ್ತಿರುವವರಿಗೆ ಆಹಾರ ಇಲಾಖೆಯ ವೆಬ್ ಪೋರ್ಟಲ್ ನಲ್ಲಿ ಅರ್ಜಿ ಹಾಕಲು ಇನ್ನು ಅವಕಾಶ ನೀಡಿಲ್ಲ. ಈ ತಿಂಗಳು ಆಹಾರ ಇಲಾಖೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ  ಅವಕಾಶ ನೀಡುವುದಿಲ್ಲ ಎಂದು ಆಹಾರ ಇಲಾಖೆಯ ಮೂಲಗಳು ತಿಳಿಸಿದೆ.

ಕಾಂಗ್ರೆಸ್ ಸರ್ಕಾರದ ಪ್ರಣಾಳಿಕೆಯಂತೆ ಈ ಹಿಂದೆ ಬಿಪಿಎಲ್ ಕಾರ್ಡಿನ ಪ್ರತಿ ಸದಸ್ಯರಿಗೆ ತಿಂಗಳಿಗೆ ನೀಡುತ್ತಿದ್ದ 5 ಕೆಜಿ ಅಕ್ಕಿಯ ಬದಲಾಗಿ ತಲಾ 10 ಕೆಜಿ ಅಕ್ಕಿಯನ್ನು ಜುಲೈ 1 ರಿಂದ ನೀಡುವ ಅನ್ನಭಾಗ್ಯ ಯೋಜನೆ ಜಾರಿಗೆ ಬರುತ್ತಿದೆ. ಹೀಗಾಗಿ ಪ್ರತಿದಿನ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಕಚೇರಿಗೆ ಬಿಪಿಎಲ್ ಕಾರ್ಡ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡುವಂತೆ ಪ್ರತಿದಿನ ಸರಾಸರಿ 300 ರಿಂದ 400 ಕರೆಗಳು ಬರುತ್ತಿದೆ. ಹೀಗೆ ಸಾಕಷ್ಟು ಒತ್ತಡವಿದ್ದರೂ ಹೊಸದಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಇಲಾಖೆ ಅವಕಾಶ ನೀಡುತ್ತಿಲ್ಲ. ಇದರಿಂದಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾವಿರಾರು ರೋಗಿಗಳಿಗೆ ಬಿಪಿಎಲ್ ಕಾರ್ಡ್ ಇದ್ದಲ್ಲಿ ಒಂದು ಮಿತಿವರೆಗೆ ಉಚಿತ ಚಿಕಿತ್ಸೆ ಸೌಲಭ್ಯವಿದೆ. ಹೀಗಾಗಿ ಹೊಸದಾಗಿ ಬಿಪಿಎಲ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಸಿಗದ ಕಾರಣ ಸಾಕಷ್ಟು ರೋಗಿಗಳು ತೊಂದರೆಗೊಳಗಾಗಿದ್ದಾರೆ. ಈ ತಿಂಗಳು ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುತ್ತಿಲ್ಲ ಎಂದು ಆಹಾರ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವೆಬ್ ಪೋರ್ಟಲ್ ಚಿತ್ರ

ಕರ್ನಾಟಕದಲ್ಲಿ ಈವರೆಗೆ ಒಟ್ಟಾರೆ 1,53,070,32 ಅಂತ್ಯೋದಯ (AAY), ಆದ್ಯತಾ ಪಡಿತರ ಚೀಟಿ (BPL) ಹಾಗೂ ಆದ್ಯತಾ ಪಡಿತರ ಚೀಟಿಯಲ್ಲದ (APL) ಕಾರ್ಡ್ ಗಳಿದ್ದು, ಒಟ್ಟಾರೆ 5,28,21,734 ಫಲಾನುಭವಿಗಳಿದ್ದಾರೆ. ಆ ಪೈಕಿ 10,90,047 ಮಂದಿ ಅಂತ್ಯೋದಯ ಕಾರ್ಡ್, 1,17,27,988 ಬಿಪಿಎಲ್ ಕಾರ್ಡ್ ಹಾಗೂ 24,88,997 ಎಪಿಎಲ್ ಕಾರ್ಡ್ ಗಳನ್ನು ವಿತರಿಸಲಾಗಿದೆ.

ಇನ್ನೂ 2.42 ಲಕ್ಷ ಅರ್ಜಿಗಳಿಗೆ ಸಿಗದ ಮುಕ್ತಿ :

2019-2020ನೇ ಸಾಲಿನಲ್ಲಿ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ https://ahara.kar.nic.in/home/eservices ಹೊಸ ಪಡಿತರ ಚೀಟಿ ವಿತರಣೆಗೆ ಆನ್ ಲೈನ್ ಮೂಲಕ ಅರ್ಜಿ ಕರೆದಾಗ ಒಟ್ಟಾರೆ 1,97,338 ಜನರು ಬಿಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಆ ಪೈಕಿ ಈವರೆಗೆ 98,332 ಕಾರ್ಡ್ ವಿತರಣೆಗೆ ಮಾತ್ರ ಒಪ್ಪಿಗೆ ದೊರೆತಿದ್ದು, 99,006 ಅರ್ಜಿಗಳಿಗೆ ಇನ್ನು ಮುಕ್ತಿ ದೊರೆಕಿಲ್ಲ. ಅದೇ ರೀತಿ 2021-22ನೇ ಸಾಲಿನಲ್ಲಿ 4,23,888 ಮಂದಿ ಆನ್ ಲೈನ್ ಮೂಲಕ ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದ್ದರೆ, 2,80,568 ಕಾರ್ಡ್ ವಿತರಣೆಗೆ ಅನುಮತಿ ನೀಡಿದ್ದು, ಇನ್ನು 1,43,320 ಅರ್ಜಿಗಳು ಬಾಕಿ ಉಳಿದಿದೆ. ಅಲ್ಲಿಗೆ ಒಟ್ಟಾರೆ 2,42,326 ಅರ್ಜಿಗಳು ಬಾಕಿ ಉಳಿದಿದೆ.

ಗೃಹಲಕ್ಷ್ಮಿ ಯೋಜನೆ ಪಡೆಯಲು ರೇಷನ್ ಕಾರ್ಡಿಗೆ ಬೇಡಿಕೆ :

ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆಯೊಡತಿಗೆ ತಿಂಗಳಿಗೆ ಎರಡು ಸಾವಿರ ರೂಪಾಯಿ ಹಣವನ್ನು ಅವರ ಬ್ಯಾಂಕ್ ಖಾತೆಗೆ ರವಾನಿಸಲು ಪ್ರಮುಖವಾಗಿ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಮೂಲಕವೇ ಸೇವಾಸಿಂಧು ಪೋರ್ಟಲ್ ಮುಖಾಂತರವೇ ಜೂನ್ 15 ರಿಂದ ಜುಲೈ 15ರನತಕ ಅರ್ಜಿ ಸಲ್ಲಿಸಬೇಕು. ಈಗಾಗಲೇ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಇದ್ದವರು ಸೇವಾಸಿಂಧು ಮುಖಾಂತರ ಅರ್ಜಿ ಸಲ್ಲಿಸಲು ಸಮಸ್ಯೆಯಾಗದು. ಆದರೆ ಎಪಿಎಲ್, ಬಿಪಿಎಲ್ ಕಾರ್ಡ್ ಇಲ್ಲದವರು ಹೊಸದಾಗಿ ಪಡಿತರ ಚೀಟಿ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಅದಲ್ಲದೆ ಸದ್ಯಕ್ಕೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಅಪ್ಲೈ ಮಾಡಲು ಅವಕಾಶ ನೀಡಿಲ್ಲ. ಆಗಸ್ಟ್ 15ರಂದು ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಪ್ರಾರಂಭವಾಗುವ ತನಕ ಈ ಆನ್ ಲೈನ್ ನಲ್ಲಿ ಎಪಿಎಲ್, ಬಿಪಿಎಲ್ ಕಾರ್ಡ್ ನಡಿ ಅರ್ಜಿ ಸಲ್ಲಿಸಲು ಸರ್ಕಾರ ಈ ತಿಂಗಳು ಅವಕಾಶ ನೀಡುವ ಸಾಧ್ಯತೆಗಳಿಲ್ಲ ಎಂದು ಉನ್ನತ ಮೂಲಗಳು ಖಚಿತಪಡಿಸಿದೆ.

ಆಹಾರ ಇಲಾಖೆ ಸಾಫ್ಟ್ ವೇರ್ ಸಿಸ್ಟಮ್ ಬದಲಾವಣೆ :

ಬಿಪಿಎಲ್ ಕಾರ್ಡಿನ ಸಾಂದರ್ಭಿಕ ಚಿತ್ರ

ರಾಜ್ಯ ಸರ್ಕಾರವು ತನ್ನ ಯೋಜನೆಗಳ ಜಾರಿ, ನಿರ್ವಹಣೆಗೆ ಪ್ರಮುಖವಾಗಿ ನಾಗರೀಕರ ದತ್ತಾಂಶಕ್ಕಾಗಿ ಪ್ರಮುಖವಾಗಿ ಅವಲಂಬನೆಯಾಗಿರುವುದು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯು ವಿತರಿಸುವ ಪಡಿತರ ಚೀಟಿಯಿಂದಲೇ. ಯಾಕೆಂದರೆ ಇಲಾಖೆ ಬಳಿ ಒಟ್ಟಾರೆ 5.28 ಕೋಟಿ ಪಡಿತರ ಚೀಟಿಯ ಫಲಾನುಭವಿಗಳ ದತ್ತಾಂಶವಿದೆ. ಹೀಗಾಗಿ ಆಹಾರ ಇಲಾಖೆಯಲ್ಲಿನ ವೆಬ್ ಸೈಟ್ ಮತ್ತು ಕಾರ್ಯಾಚರಣೆ ಸಂಬಂಧ ಸಾಫ್ಟ್ ವೇರ್ ಬದಲಾವಣೆ ಹಾಗೂ ಅತ್ಯಾಧುನಿಕ ವ್ಯವಸ್ಥೆ ಅಳವಡಿಸಿಕೊಳ್ಳುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಇದೂ ಕೂಡ ಆನ್ ಲೈನ್ ಅರ್ಜಿ ಸ್ಥಗಿತಗೊಳಿಸಿರುವ ಕಾರಣಗಳಲ್ಲಿ ಒಂದಾಗಿದೆ ಎಂದು ಆಹಾರ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

2011ರ ಜನಸಂಖ್ಯಾ ಸಮೀಕ್ಷೆಯ ಆಧಾರದ ಮೇಲೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಒಟ್ಟಾರೆ 4.10 ಕೋಟಿ ಫಲಾನುಭವಿಗಳಿಗಷ್ಟೇ ಬಿಪಿಎಲ್ ಕಾರ್ಡ್ ವಿತರಿಸಲು ಅವಕಾಶವಿದೆ. ಆದರೆ ರಾಜ್ಯ ಸರ್ಕಾರವು 4.42 ಕೋಟಿ ಬಿಪಿಎಲ್ ಕುಟುಂಬದ ಫಲಾನುಭವಿಗಳಿಗೆ ಕಾರ್ಡ್ ಹಂಚಿಕೆ ಮಾಡಿ, ಆ ಮೂಲಕ ಆಹಾರ ಧಾನ್ಯ ವಿತರಿಸುತ್ತಿದೆ. ಕೇಂದ್ರದ 4.10 ಕೋಟಿ ಫಲಾನುಭವಿಗಳ ಮಿತಿಗಿಂತ ಹೆಚ್ಚಿನ ಫಲಾನುಭವಿಗಳಿಗೆ ಕರ್ನಾಟಕ ಸರ್ಕಾರವೇ ಪ್ರತಿ ವರ್ಷ ಎರಡು ಸಾವಿರ ಕೋಟಿ ರೂ. ಹಣವನ್ನು ಬಜೆಟ್ ನಲ್ಲಿ ಮೀಸಲಿಟ್ಟು ಆಹಾರ ಧಾನ್ಯ ಖರೀದಿಸಿ ವಿತರಿಸುತ್ತಿದೆ.

ಇದನ್ನೂ ಓದಿ : Electricity Bill Hike Actual Facts | ಜೂನ್ ತಿಂಗಳ ವಿದ್ಯುತ್ ಬಿಲ್ ಕಂಡು ಹೌಹಾರಿದ್ರಾ? ಇಲ್ಲಿದೆ ಬೆಸ್ಕಾಂ ಬಿಲ್ ಲೆಕ್ಕಾಚಾರದ ಮಾಹಿತಿ

ಎಪಿಎಲ್ ನಲ್ಲಿ ಶೇ.62ರಷ್ಟು ಮಂದಿಯಷ್ಟೆ ಯುಐಡಿ ಜೊತೆ ಲಿಂಕ್ :

ಪಡಿತರ ಚೀಟಿದಾರರು ರೇಷನ್ ಕಾರ್ಡ್ ಜೊತೆಗೆ ತಮ್ಮ ವೈಯುಕ್ತಿಕ ಆಧಾರ್ ಸಂಖ್ಯೆ (UID)ಗೆ ಲಿಂಕ್ ಮಾಡಿ ಸೀಡಿಂಗ್ ಮಾಡುವುದು ಅತ್ಯಗತ್ಯವಾಗಿರುತ್ತದೆ. ರಾಜ್ಯದಲ್ಲಿ ಈವರೆಗೆ 1,28,17,641 ಬಿಪಿಎಲ್ ಕಾರ್ಡ್ ಅಡಿಯಲ್ಲಿ ಬರುವ 4,41,96,465 (ಶೇ.99ರಷ್ಟು) ಫಲಾನುಭವಿಗಳು ತಮ್ಮ ಯುಐಡಿ ಸಂಖ್ಯೆಗೆ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಸೀಡ್ ಮಾಡಿಕೊಂಡಿದ್ದಾರೆ. ಆದರೆ ರಾಜ್ಯದಲ್ಲಿನ 24,88,997 (24.88 ಲಕ್ಷ) ಎಪಿಎಲ್ ಕಾರ್ಡ್  ನಡಿ 86,23,263 (86.23 ಲಕ್ಷ) ಫಲಾನುಭವಿಗಳಿದ್ದು, ಶೇ.62ರಷ್ಟು (15,63,191 ಪಡಿತರ ಚೀಟಿಗಳು) ರೇಷನ್ ಕಾರ್ಡ್ ನ 47,14,643 (ಶೇ.54ರಷ್ಟು) ಮಂದಿ ಫಲಾನುಭವಿಗಳಷ್ಟೇ ಆಧಾರ್ ಜೊತೆ ತಮ್ಮ ರೇಷನ್ ಕಾರ್ಡ್ ಅನ್ನು ಲಿಂಕ್ ಮಾಡಿಕೊಂಡಿದ್ದಾರೆ.

ಒಟ್ಟಾರೆ ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಸಾಮಾನ್ಯರು, ಬಡ ಜನರು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಈಗಾಗಲೇ ಅರ್ಜಿ ಸಲ್ಲಿಸಿದವರು ಹಲವು ತಿಂಗಳುಗಳಾದರೂ ಅರ್ಜಿ ವಿಲೇವಾರಿಯಾಗದೆ ಪಡಿತರ ಚೀಟಿಯಿಲ್ಲದೆ, ದುಬಾರಿ ಹಣಕೊಟ್ಟು ಅಂಗಡಿಯಿಂದ ಆಹಾರ ಧಾನ್ಯ ಪಡೆದು ಜೀವನ ನಿರ್ವಹಣೆ ಮಾಡಬೇಕಾದ ದುಸ್ಥಿತಿಯಲ್ಲಿದ್ದಾರೆ. ಸರ್ಕಾರ ಈ ಬಗ್ಗೆ ಅರ್ಹ ಅರ್ಜಿದಾರರ ಅನುಕೂಲಕ್ಕಾಗಿ ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳಬೇಕಾಗಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ಕೆಂಪೇಗೌಡರ ಜಯಂತ್ಯುತ್ಸವ : ಬಿಬಿಎಂಪಿ ವಾರ್ಡ್ ಮಟ್ಟದಲ್ಲಿ ‘ಬೆಂಗಳೂರು ಹಬ್ಬ’ವಾಗಿ ಆಚರಿಸಲು ಮನವಿ

Next Post

Gruha Jyothi Scheme | ಗೃಹಜ್ಯೋತಿ ಯೋಜನೆ : ಫಲಾನುಭವಿಗಳ ರಿಜಿಸ್ಟ್ರೇಷನ್ ಜೂ.18ರಿಂದ ಆರಂಭ ; ಇಲ್ಲಿದೆ ಸಂಪೂರ್ಣ ವಿವರ

Next Post
ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

Gruha Jyothi Scheme | ಗೃಹಜ್ಯೋತಿ ಯೋಜನೆ : ಫಲಾನುಭವಿಗಳ ರಿಜಿಸ್ಟ್ರೇಷನ್ ಜೂ.18ರಿಂದ ಆರಂಭ ; ಇಲ್ಲಿದೆ ಸಂಪೂರ್ಣ ವಿವರ

Annabhagya Scheme | ರಾಜ್ಯದ 'ಅನ್ನಭಾಗ್ಯ' ಯೋಜನೆಗೆ ಅಕ್ಕಿ ನೀಡದ ಕೇಂದ್ರ : ಸಿಎಂ‌ ಸಿದ್ದರಾಮಯ್ಯ ಆರೋಪಕ್ಕೆ ಎಫ್ ಸಿಐ ನೀಡಿದ ಸ್ಪಷ್ಟನೆ ಏನು?

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Vidhana Soudha

GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group