Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

HSRP Number Plate | ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಎಂಬ ಕೋಟಿ ಕೋಟಿ ಲೂಟಿ ಸ್ಕೆಚ್…! : ಸಿಎಂಗೆ ದೂರು

ಪರ್ಸಂಟೇಜ್ ಆರೋಪಗಳ ಬೆನ್ನಲ್ಲೇ 'ನಂಬರ್ ಪ್ಲೇಟ್' ಕರ್ಮಕಾಂಡ‌ | 20,000 ಕುಟುಂಬಗಳು ಬೀದಿಪಾಲು ಆತಂಕ...! | ಹೆಚ್.ಎಸ್.ಆರ್.ಪಿ ಅಕ್ರಮದ ಸಂಚು ಬಯಲು | ಸಾರಿಗೆ ಇಲಾಖೆಯಲ್ಲಿ ಕೋಟಿ ಲೂಟಿಗೆ ರಹಸ್ಯ ಸಂಚು?

by Bengaluru Wire Desk
June 27, 2023
in News Wire, Public interest
Reading Time: 1 min read
0

ಬೆಂಗಳೂರು, ಜೂ.27 www.bengaluruwire.com : ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ (HSRP) ಅಳವಡಿಸುವ ಮಹತ್ವಾಕಾಂಕ್ಷಿ ಯೋಜನೆ ಹಳಿತಪ್ಪುತ್ತಿದೆ. ಅತೀ ಸುರಕ್ಷಾ ನೋಂದಣಿ ಫಲಕ  ಯೋಜನೆಯು ಜಾರಿಗೆ ಮುನ್ನವೇ ಕೋಟ್ಯಾಂತರ ರೂಪಾಯಿ ಅವ್ಯವಹಾರಕ್ಕೆ ನಾಂದಿ ಹಾಡಿರುವ ಬಗ್ಗೆ ಮುಖ್ಯಮಂತ್ರಿ ಕಚೇರಿಯಲ್ಲಿ ದೂರು ಸಲ್ಲಿಕೆಯಾಗಿದೆ.

ಭ್ರಷ್ಟಾಚಾರ ವಿರುದ್ಧ ಸಮರ ಸಾರಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಈ ಭ್ರಷ್ಟಾಚಾರವು ಸವಾಲೆಂಬಂತಿದೆ. ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ನೀಡಿರುವ ಈ ದೂರು ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.

ಏನಿದು ಹೈ ಸೆಕ್ಯುರಿಟಿ‌ ನಂಬರ್ ಪ್ಲೇಟ್ ಕರ್ಮಕಾಂಡ? :
ವಾಹನ ಕಳ್ಳತನ ತಡೆಯುವುದು, ಕದ್ದ ವಾಹನಗಳನ್ನು ಬಳಸಿ ಕೃತ್ಯಗಳನ್ನು ನಡೆಸುವುದನ್ನು ತಡೆಯಲು ಹಾಗೂ ಕಾನೂನು ಉಲ್ಲಂಘನೆಯಂತಹಾ ಪ್ರಕರಣಗಳನ್ನು ಬೇಧಿಸಲು ಅನುಕೂಲವಾಗುವಂತೆ ಆಧುನಿಕ ವ್ಯವಸ್ಥೆಯಾಗಿ ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ ಅಳವಡಿಸುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಮುನ್ನುಡಿ ಬರೆದಿದೆ. ವಾಹನಗಳ ನಂಬರ್ ಪ್ಲೇಟ್ ನಲ್ಲಿಯೇ ಈ ತಂತ್ರಜ್ಞಾನ ಅಳವಡಿಸಲಾಗುತ್ತಿದ್ದು, ಈ ಪ್ರಕ್ರಿಯೆ ರಾಜ್ಯದಲ್ಲೂ ಜಾರಿಗೆ ಬರುತ್ತಿದೆ. ಆದರೆ ಈ ಯೋಜನೆ ಅನುಷ್ಠಾನ ಸಂದರ್ಭದಲ್ಲೇ ಅಕ್ರಮದ ವಾಸನೆ ಬಡಿದಿದೆ.

ಅತೀ ಸುರಕ್ಷಾ ನೋಂದಣಿ ಫಲಕ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಸಂಬಂಧ ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆಯು ನಿಯಮಗಳನ್ನು ಸಿದ್ದಪಡಿಸಿದ್ದು, ಇದು ಕೇಂದ್ರ ಸರ್ಕಾರದ ಸೂಚನೆಗಳಿಗೆ ವಿರುದ್ಧವಾಗಿದೆ ಎಂಬುದು ತಜ್ಞರ ಅಭಿಪ್ರಾಯ. ಸಾರಿಗೆ ಇಲಾಖೆ ಸಿದ್ಧಪಡಿಸಿರುವ ನಿಯಮಗಳಿಂದಾಗಿ ಇಡೀ ಯೋಜನೆಯೇ ಬುಡಮೇಲಾಗಲಿದ್ದು, ಸುಮಾರು 20 ಸಾವಿರಕ್ಕೂ ಹೆಚ್ಚು ಕುಟುಂಬಗಳು ಬೀದಿಗೆ ಬೀಳಲಿವೆ ಎಂಬ ಆತಂಕವೂ ಎದುರಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಆರೋಪಿಸಿದೆ.

ವಿಶಿಷ್ಟ ತಂತ್ರಜ್ಞಾನದ ನಂಬರ್ ಪ್ಲೇಟ್ ತಯಾರಿಕೆಗೆ 20 ಕಂಪನಿಗಳಿಗೆ ಅವಕಾಶವಿದೆ :
ಹೆಚ್.ಎಸ್.ಆರ್.ಪಿ ಯೋಜನೆ ಜಾರಿಗೆ ಪೂರಕವಾಗಿ ದೇಶದಲ್ಲಿ ಹಲವಾರು ಕಂಪನಿಗಳು ಈ ವಿಶಿಷ್ಟ ತಂತ್ರಜ್ಞಾನದ ನಂಬರ್ ಪ್ಲೇಟ್ ಗಳನ್ನು ತಯಾರಿಸುತ್ತಿವೆ. ಈ ಪೈಕಿ ಸುಮಾರು 20 ಕಂಪನಿಗಳಿಗೆ ಕೇಂದ್ರ ಹೆದ್ದಾರಿ ಸಚಿವಾಲಯ ಅನುಮೋದನೆ ನೀಡಿದೆ. ಆದರೆ ಕರ್ನಾಟಕದಲ್ಲಿ ಕೇವಲ ನಾಲ್ಕು ಸಂಸ್ಥೆಗಳಿಗೆ ಈ ಹೆಚ್.ಎಸ್.ಆರ್.ಪಿ ಫಲಕ ಪೂರೈಕೆಗೆ ಅನುಮತಿ ನೀಡಲು ರಹಸ್ಯ ಸಿದ್ಧತೆ ನಡೆದಿದೆ ಎಂಬ ಸುದ್ದಿಯೇ ವಿವಾದದ ಕೇಂದ್ರಬಿಂದು. ಭಾರೀ ಭ್ರಷ್ಟಾಚಾರದ ಉದ್ದೇಶದಿಂದ ಈ ರೀತಿಯ ಅಕ್ರಮಕ್ಕೆ ಹುನ್ನಾರ ನಡೆದಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವ್ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ರಾಮ್ ಅವರು ನೀಡಿರುವ ದೂರಿನಲ್ಲಿ ಬೆಳಕು ಚೆಲ್ಲಿದ್ದಾರೆ.

ಎಲ್ಲಾ ವಾಹನಗಳಲ್ಲಿ ಹೆಚ್.ಎಸ್.ಆರ್.ಪಿ ಸಾಧನ ಅಳವಡಿಕೆ ಕಡ್ಡಾಯವಾಗಿದ್ದು, ಅದನ್ನು ಪೂರೈಸಲು ವಾಹನ ತಯಾರಿಕಾ ಸಂಸ್ಥೆ ಅಥವಾ ಡೀಲರ್ ಗಳಿಗೆ ಅವಕಾಶ ಕಲ್ಪಿಸಲು ಸಾರಿಗೆ ಇಲಾಖೆಯಿಂದ ವೇದಿಕೆ ಸಿದ್ಧವಾಗಿದೆ ಎನ್ನಲಾಗಿದೆ. ವಾಸ್ತವ ಏನೆಂದರೆ, ವಾಹನ ತಯಾರಕಾರು ಹೆಚ್.ಎಸ್.ಆರ್.ಪಿ ತಯಾರಿಸುವುದಿಲ್ಲ, ಬದಲಾಗಿ ಇತರರ ತಯಾರಕರಿಂದ ಪಡೆದು ವಾಹನಗಳಿಗೆ ಅಳವಡಿಸಿ ಪೂರೈಸಬೇಕಿದೆ.

ಕೆಲವೇ ಕಂಪನಿಗಳಿಗೆ ಮಣೆ ಹಾಕಲು ರಹಸ್ಯ ತಯಾರಿ :
ಕೇಂದ್ರ ಸರ್ಕಾರದ ಪಟ್ಟಿಯಲ್ಲಿರುವ 20 ಹೆಚ್.ಎಸ್.ಆರ್.ಪಿ ತಯಾರಿಕಾ ಸಂಸ್ಥೆಗಳ ಪೈಕಿ ಒಬ್ಬರ ನಿಯಂತ್ರಣದಲ್ಲೇ ಇರುವ ಕೇವಲ 4-5 ಕಂಪನಿಗಳ ಉತ್ಪನ್ನಗಳಿಗಷ್ಟೇ ಸಾರಿಗೆ ಇಲಾಖೆ ಅನುಮತಿ ನೀಡಲು ರಹಸ್ಯ ತಯಾರಿ ನಡೆದಿದೆ. ಈ ವಿಚಾರದಲ್ಲಿ ಪಾರದರ್ಶಕ ನಡೆ ಅನುಸರಿಸದೆ ಭಾರೀ ಪ್ರಮಾಣದ ಲಂಚದ ಆಸೆಗೆ ಬಿದ್ದು ಅಧಿಕಾರಿಗಳು ಹಾಗೂ ಪ್ರಭಾವಿಗಳ ಸಂಚಿನಿಂದಾಗಿ ಇಡೀ ಯೋಜನೆಯೇ ಹಾದಿ ತಪ್ಪುವ ಸಾಧ್ಯತೆಗಳಿವೆ ಎಂದು ಲೋಕೇಶ್ ರಾಮ್ ಅವರು ಈ ದೂರಿನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿಗಳ ಕಚೇರಿಗೆ ದೂರು ಸಲ್ಲಿಕೆಯಾದ ದಾಖಲೆ

ಬ್ರಹ್ಮಾಂಡ ಭ್ರಷ್ಟಾಚಾರದ ಹಾದಿ ಈ ರೀತಿ ಇದೆ..!
‘ಹೊಸ ವಾಹನಗಳಲ್ಲಿ ಹೆಚ್.ಎಸ್.ಆರ್.ಪಿ ಗೊಂದಲ ಇಲ್ಲ. ಆದರೆ ಹಳೆಯ ವಾಹನಗಳಿಗಷ್ಟೇ ಹೆಚ್.ಎಸ್.ಆರ್.ಪಿ ಸವಾಲು ಇರುವುದು. ದೇಶದಲ್ಲಿ ಪ್ರಸಕ್ತ ಇರುವ ಸುಮಾರು 30 ಕೋಟಿ ಹಳೆಯ ವಾಹನಗಳ ಪೈಕಿ ಕರ್ನಾಟಕದಲ್ಲೇ 2 ಕೋಟಿಗಳಷ್ಟು ವಾಹನಗಳಿವೆ ಎಂದು ಅಂದಾಜಿಸಲಾಗಿದೆ’.

‘ಇಷ್ಟೂ ವಾಹನಗಳಿಗೆ ಹೆಚ್.ಎಸ್.ಆರ್.ಪಿ ಅಳವಡಿಸಬೇಕಿದ್ದು, ಇದರ ಬೆಲೆ 400ರಿಂದ 950 ರೂಪಾಯಿವರೆಗೆ ಇದೆ. ಪ್ರತೀ ಹೆಚ್.ಎಸ್.ಆರ್.ಪಿಯಲ್ಲಿ ಶೇಕಡಾ 50ರಷ್ಟು ಲಾಭವಿದ್ದು ಸುಮಾರು 500 ಕೋಟಿ ರೂಪಾಯಿ ಲಾಭವನ್ನು ದೋಚಲು ಕೆಲವು ಕಂಪನಿಗಳು ಅಡ್ಡ ದಾರಿ ಹಿಡಿದಿವೆ. ಲಂಚದ ಆಸೆಗೆ ಬಿದ್ದು ಕೆಲವು ಅಧಿಕಾರಿಗಳು ಹಾಗೂ ಪ್ರಭಾವಿಗಳು ಭಾರೀ ಅಕ್ರಮಕ್ಕೆ ಮುಂದಾಗಿದ್ದಾರೆ’ ಎಂದು ಲೋಕೇಶ್ ರಾಮ್ ಅವರ ಆರೋಪ.

ಈ ನಡುವೆ, ‘ಹೆಚ್.ಎಸ್.ಆರ್.ಪಿಯನ್ನು ವಾಹನ ತಯಾರಿಕಾ ಸಂಸ್ಥೆಗಳು ಅಥವಾ ನಿರ್ದಿಷ್ಟ ಡೀಲರುಗಳೇ ವಿತರಿಸಬೇಕೆಂಬ ನಿಯಮ ಜಾರಿಗೆ ಬಂದರೆ ಅದು ಕೂಡಾ ಕಾನೂನು ಬಾಹಿರ. ಇದರಿಂದಾಗಿ ಸಾರ್ವಜನಿಕರು ತೊಂದರೆಗೊಳಗಾಗುತ್ತಾರೆ. ಹಾಗೂ ಕೆಲ ಮಧ್ಯವರ್ತಿ ನಿಯಂತ್ರಣಾ ಮಾಫಿಯಾ ಹುಟ್ಟಿಕೊಂಡು ಮಾರುಕಟ್ಟೆಯಲ್ಲಿ ಏಕಸ್ವಾಮ್ಯದ ಅಧಿಪತ್ಯ ಸ್ಥಾಪಿಸುತ್ತದೆ’ ಎಂಬ ಆತಂಕವನ್ನು ಲೋಕೇಶ್ ರಾಮ್ ವ್ಯಕ್ತಪಡಿಸಿದ್ದಾರೆ.

20 ಸಾವಿರ ಕುಟುಂಬ ಬೀದಿಗೆ ಬೀಳುವ ಆತಂಕ :
‘ರಾಜ್ಯದಲ್ಲಿ ಪ್ರಸ್ತುತ ಸುಮಾರು 20 ಸಾವಿರ ಮಂದಿ ಜೀವನೋಪಾಯಕ್ಕಾಗಿ ವಾಹನಗಳ ನಂಬರ್ ಪ್ಲೇಟ್ ನಿರ್ವಹಣೆಯಲ್ಲಿ ತೊಡಗಿದ್ದಾರೆ. ಇದೀಗ ವಾಹನ ತಯಾರಕರು ಹಾಗೂ ಡೀಲರುಗಳೇ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ವಿತರಿಸಬೇಕೆಂಬ ನಿಯಮ ಜಾರಿಯಾದಲ್ಲಿ ಈ 20 ಸಾವಿರ ಕುಟುಂಬಗಳೂ ಬೀದಿಗೆ ಬೀಳಬಹುದು’ ಎನ್ನುತ್ತಾರೆ ಅವರು.

ಅಷ್ಟೇ ಅಲ್ಲ, ವಾಹನ ತಯಾರಕರು, ವಿತರಕರಷ್ಟೇ ಹೆಚ್.ಎಸ್.ಆರ್.ಪಿ ಪೂರೈಸುವ ನಿಯಮ ಜಾರಿಯಾಗಿದ್ದೇ ಆದಲ್ಲಿ ಅಂತಹಾ ವಾಹನ ಮಾಲೀಕರು ಬದಲಿ ಹೆಚ್.ಎಸ್.ಆರ್.ಪಿಗಾಗಿ ತಾವು ಹಿಂದೆ ಖರೀದಿಸಿದ ಸ್ಥಳಕ್ಕೆ ಹೋಗಬೇಕಾಗುತ್ತದೆ. ಇದರಿಂದಾಗಿ 500 ರೂಪಾಯಿಯ ಹೆಚ್.ಎಸ್.ಆರ್.ಪಿ ಖರೀದಿಸಲು ಸಾವಿರಾರು ರೂಪಾಯಿ ಖರ್ಚುಮಾಡಬೇಕೆ ಎಂಬ ಪ್ರಶ್ನೆ ಮೂಡಿದೆ.  ಒಂದೊಮ್ಮೆ ವಿತರಕರು ತಮ್ಮ ಸಂಸ್ಥೆಯನ್ನು ಮುಚ್ಚಿದ್ದರೆ ವಾಹನ ಮಾಲೀಕರಿಗೆ ಪರ್ಯಾಯ ಮಾರ್ಗ ಇಲ್ಲದಂತಾಗುತ್ತದೆ ಎಂಬುದು ಅವರ ಅಭಿಪ್ರಾಯ.

2001ರಲ್ಲೇ ಸುರಕ್ಷಾ ಕ್ರಮ ಜಾರಿ ಬಗ್ಗೆ ಚಿಂತನೆ :
2001ರಲ್ಲೇ ಈ ಸುರಕ್ಷಾ ಕ್ರಮ ಜಾರಿ ಬಗ್ಗೆ ಚಿಂತನೆ ನಡೆದಿತ್ತು. ಕಳೆದೊಂದು ದಶಕದಲ್ಲಿ ಈ ಯೋಜನೆ ಜಾರಿಯ ಪ್ರಕ್ರಿಯೆ ನಡೆಯಿತಾದರೂ, ಅಕ್ರಮದ ಆರೋಪ ಹಿನ್ನಲೆಯಲ್ಲಿ ಕಾನೂನು ಹೋರಾಟ ಹಾಗೂ ಮಾಧ್ಯಮಗಳ ವರದಿಗಳ ಹಿನ್ನೆಲೆಯಲ್ಲಿ ಅಕ್ರಮಗಳಿಗೆ ಬ್ರೇಕ್ ಬಿದ್ದಿದೆ. ಈ ನಡುವೆ ವರ್ಷದ ಹಿಂದಷ್ಟೇ, ತಪ್ಪುಗಳನ್ನು ಸರಿಪಡಿಸುವುದಾಗಿ ಸರ್ಕಾರವು ಹೈಕೋರ್ಟಿಗೆ ತಿಳಿಸಿದೆ. ಆದರೆ, ಪ್ರಭಾವಿಗಳ ಗುಂಪು ನಿಗೂಢವಾಗಿ ತಂತ್ರಗಾರಿಕೆ ಮೂಲಕ ಯೋಜನೆಯನ್ನು ಕಬಳಿಸಲು ಪ್ರಯತ್ನವನ್ನು ಮುಂದುವರಿಸಿದೆ ಎಂದು ಅವರು ಈ ದೂರಿನ ಮೂಲಕ ನೂತನ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ  ಗಮನಸೆಳೆದಿದ್ದಾರೆ.

ಸ್ಪೀಡ್ ಗವರ್ನರ್, ಸುರಕ್ಷಾ ಗ್ಲಾಸ್, ಇಂಧನ ಟ್ಯಾಂಕ್, ಟೈರ್ ರೀತಿಯಲ್ಲೇ ಹೆಚ್.ಎಸ್.ಆರ್.ಪಿ ಕೂಡಾ ವಾಹನಗಳ ಸುರಕ್ಷಾ ಸಾಧನ. ಹೀಗಿರುವಾಗ ಇದನ್ನು ಪೂರೈಸುವ ಅವಕಾಶ ಕೆಲವೇ ಕಂಪನಿಗಳಿಗಷ್ಟೇ ಸೀಮಿತಗೊಳಿಸುವ ಕ್ರಮ ಸರಿಯಾದುದಲ್ಲ. ಎಲ್ಲಾ ಅನುಮೋದಿತ ಕಂಪನಿಗಳೂ ತಮ್ಮ ಉತ್ಪನ್ನಗಳನ್ನು ನೀಡುವ ಅವಕಾಶ ಸಿಗಬೇಕಿದೆ.

ಒಂದು ವೇಳೆ ಸರ್ಕಾರ ಅಥವಾ ಅಧಿಕಾರಿಗಳು ಒಳ ಒಪ್ಪಂದ ಮಾಡಿ ನಿರ್ದಿಷ್ಟ ಕಂಪೆನಿಗಳಿಗಷ್ಟೇ ಹೆಚ್ ಎಸ್ ಆರ್ ಪಿ ಪೂರೈಸುವ ಅವಕಾಶ ನೀಡಿದಲ್ಲಿ, ಸ್ಪರ್ಧಾತ್ಮಕ ದರದಲ್ಲಿ ಉತ್ತಮ ಸಾಧನವನ್ನು ಖರೀದಿಸುವ ಗ್ರಾಹಕನ ಆಯ್ಕೆ ಸ್ವಾತಂತ್ರವನ್ನೂ ಮೊಟಕುಗೊಳಿಸಿದಂತಾಗುತ್ತದೆ ಎಂದಿರುವ ಲೋಕೇಶ್ ರಾಮ್, ಈ ಸಂಬಂಧ ಭ್ರಷ್ಟಾಚಾರ ಮುಕ್ತವಾಗಿ ಯೋಜನೆ ಜಾರಿಯಾಗಬೇಕು, ಎಲ್ಲಾ ಅನುಮೋದಿತ ಕಂಪನಿಗಳ ಹೆಚ್ ಎಸ್ ಆರ್ ಪಿ ವಿತರಣೆಗೆ ರಾಜ್ಯದಲ್ಲಿ ಅವಕಾಶ ಸಿಗಬೇಕು, ಜನಸ್ನೇಹಿ ವ್ಯವಸ್ಥೆಯಲ್ಲಿ ಸ್ವಉದ್ಯೋಗಾಕಾಂಕ್ಷಿಗಳಿಗೂ ಅವಕಾಶ ಸಿಗುವಂತೆ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ವಿವಿ ವಿದ್ಯಾರ್ಥಿಗಳ ಒಕ್ಕೂಟ ಸಿಎಂ ಹಾಗೂ ಸರ್ಕಾರವನ್ನು ಆಗ್ರಹಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BJP Govt. Corruption Enquiry | ಹಿಂದಿನ ಸರ್ಕಾರದ ಪ್ರಮುಖ ಹಗರಣಗಳ ತನಿಖೆ ನಡೆಸುತ್ತೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

Gruha Jyothi Scheme | ಗೃಹ ಜ್ಯೋತಿ ಯೋಜನೆ : ಕಳೆದ 10 ದಿನಗಳಲ್ಲಿ 70.05 ಲಕ್ಷ ಗ್ರಾಹಕರ ನೋಂದಣಿ

Next Post

Gruha Jyothi Scheme | ಗೃಹ ಜ್ಯೋತಿ ಯೋಜನೆ : ಕಳೆದ 10 ದಿನಗಳಲ್ಲಿ 70.05 ಲಕ್ಷ ಗ್ರಾಹಕರ ನೋಂದಣಿ

KMF New MD | ಕೆಎಂಎಫ್ ವ್ಯವಸ್ಥಾಪಕ‌ ನಿರ್ದೇಶಕರಾಗಿ‌ ಎಂ.ಕೆ.ಜಗದೀಶ್ ನೇಮಕ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d