Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Govt. Land Encroachment | ‘ಕಂದಾಯ ಸಚಿವರೇ ಸರ್ಕಾರಿ ಭೂ ಒತ್ತುವರಿ ತೆರವು ಕಾರ್ಯ ಬ್ಯಾಟರಾಯನಪುರ ಕ್ಷೇತ್ರದಿಂದಲೇ ಆರಂಭವಾಗಲಿ’ : ಎನ್.ಆರ್.ರಮೇಶ್

by Bengaluru Wire Desk
July 15, 2023
in Bengaluru Focus
Reading Time: 1 min read
0
ಕೋರ್ಟ್ ಚಡಿಯೇಟು ನೀಡಿದಾಗಲಷ್ಟೇ ಶಾಸ್ತ್ರಕ್ಕೆ ರಾಜಕಾಲುವೆ ಒತ್ತುವರಿ ತೆರವು ಮಾಡುವ ಬೃಹತ್ ನೀರಗಾಲುವೆ ವಿಭಾಗದ ಕಾರ್ಯಾಚರಣೆಯ ಸಾಂದರ್ಭಿಕ ಚಿತ್ರ.

ಕೋರ್ಟ್ ಚಡಿಯೇಟು ನೀಡಿದಾಗಲಷ್ಟೇ ಶಾಸ್ತ್ರಕ್ಕೆ ರಾಜಕಾಲುವೆ ಒತ್ತುವರಿ ತೆರವು ಮಾಡುವ ಬೃಹತ್ ನೀರಗಾಲುವೆ ವಿಭಾಗದ ಕಾರ್ಯಾಚರಣೆಯ ಸಾಂದರ್ಭಿಕ ಚಿತ್ರ.

ಬೆಂಗಳೂರು, ಜು.15 www.bengaluruwire.com : ಬ್ಯಾಟರಾಯನಪುರ ಕ್ಷೇತ್ರದಲ್ಲಿನ ಸಿಂಗಾಪುರ ಗ್ರಾಮ ಹಾಗೂ ಕೊಡಗಲಹಟ್ಟಿ ಗ್ರಾಮದಲ್ಲಿ ಒತ್ತುವರಿಯಾಗಿರುವ 248.5 ಎಕರೆ ವಿಸ್ತೀರ್ಣದ ಸರ್ಕಾರಿ ಜಮೀನನ್ನು ವಶಪಡಿಸಿಕೊಂಡು ರಾಜ್ಯದಲ್ಲಿ ನಡೆದಿರುವ ಭೂ ಒತ್ತುವರಿ ತೆರವು ಕಾರ್ಯಕ್ಕೆ ತಮ್ಮ ಕ್ಷೇತ್ರದಿಂದಲೇ ಚಾಲನೆ ನೀಡಬೇಕೆಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರಿಗೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಪತ್ರ ಬರೆದು ಆಗ್ರಹಿಸಿದ್ದಾರೆ.

ಸಿಂಗಾಪುರ ಗ್ರಾಮದ ಸರ್ವೆ ನಂಬರ್ 109 ರ 2,300 ಕೋಟಿ ಮೌಲ್ಯದ 226.15 ಎಕರೆ ಹಾಗೂ ಹುಣಸಮಾರನಹಳ್ಳಿ ಬಳಿಯ ಕೊಡಗಲಹಟ್ಟಿ ಗ್ರಾಮದ ಸರ್ವೆ ನಂಬರ್ 103 ರ ಸುಮಾರು 325 ಕೋಟಿ ಮೌಲ್ಯದ 22 ಎಕರೆ 35 ಗುಂಟೆ ಸರ್ಕಾರೀ ಸ್ವತ್ತುಗಳನ್ನು ವಶಪಡಿಸಿಕೊಳ್ಳಬೇಕು ಎಂದು ಜು.14ರಂದು ಪತ್ರ ಬರೆದು ಒತ್ತಾಯಿಸಿದ್ದಾರೆ.

ಕಂದಾಯ ಸಚಿವ ಕೃಷ್ಣಭೈರೇಗೌಡ

‘ಪ್ರಸ್ತುತ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ದಿನಾಂಕ ಜು.12 ರಂದು ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರೊಬ್ಬರ ಪ್ರಶ್ನೆಗೆ ಉತ್ತರಿಸಿರುವ ತಾವು, ರಾಜಧಾನಿ ಬೆಂಗಳೂರು ಮಹಾನಗರ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಒತ್ತುವರಿಯಾಗಿರುವ ಸರ್ಕಾರೀ ಜಮೀನುಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುವುದಾಗಿ ಹೇಳಿಕೆ ನೀಡಿದ್ದೀರ. ತಮ್ಮ ಈ ಹೇಳಿಕೆಯನ್ನು ನಾವು ಮುಕ್ತವಾಗಿ ಸ್ವಾಗತಿಸುತ್ತೇವೆ’.

‘ಆದರೆ, ಸ್ವತಃ ರಾಜ್ಯದ ಕಂದಾಯ ಸಚಿವರಾಗಿರುವ ತಾವು  ಮೊದಲು ತಾವು ಪ್ರತಿನಿಧಿಸುತ್ತಿರುವ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಬಳಿಸಲ್ಪಟ್ಟಿರುವ ಸಾವಿರಾರು ಕೋಟಿ ಮೌಲ್ಯದ ಸರ್ಕಾರಿ ಸ್ವತ್ತುಗಳನ್ನು ಸರ್ಕಾರೀ ನೆಲಗಳ್ಳರಿಂದ ತೆರವುಗೊಳಿಸಿ, ಸರ್ಕಾರದ ವಶಕ್ಕೆ ಪಡೆಯುವ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ವಿನಂತಿಸಿಕೊಳ್ಳುತ್ತೇನೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ

‘ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ – 11 (ಕುವೆಂಪುನಗರ ವಾರ್ಡ್) ರ ವ್ಯಾಪ್ತಿಯ ಸಿಂಗಾಪುರ ಗ್ರಾಮದ ಸರ್ವೆ ನಂಬರ್ 109 ರ ಸುಮಾರು 2,300 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ 226.15 ಎಕರೆಗಳಷ್ಟು ವಿಸ್ತೀರ್ಣದ ಸರ್ಕಾರೀ ಸ್ವತ್ತುಗಳನ್ನು ಹಲವಾರು ಮಂದಿ ಸರ್ಕಾರೀ ನೆಲಗಳ್ಳರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಕೆ ಮಾಡಿರುವ ವಿಷಯವನ್ನು ದಾಖಲೆಗಳ ಸಹಿತ ಈ ಹಿಂದೆಯೇ ತಮ್ಮ ಗಮನಕ್ಕೆ ತರಲಾಗಿತ್ತು.’

‘ಹಾಗೆಯೇ, ತಮ್ಮದೇ ಕ್ಷೇತ್ರದ ಜಾಲ ಹೋಬಳಿ, ಹುಣಸಮಾರನಹಳ್ಳಿ ತಾಲ್ಲೂಕು ಪಂಚಾಯಿತಿಯ ಕೊಡಗಲಹಟ್ಟಿ ಗ್ರಾಮದ ಸರ್ವೆ ನಂಬರ್ 103 ರ ಸುಮಾರು 325 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ 22 ಎಕರೆ 35 ಗುಂಟೆ ಸರ್ಕಾರೀ ಸ್ವತ್ತನ್ನು ತಮ್ಮ ಹಿಂಬಾಲಕರಲ್ಲಿ ಒಬ್ಬರಾಗಿರುವ ಮತ್ತು ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರಾಗಿರುವ ಸುಜಾತ ಶ್ರೀನಿವಾಸ್ ರವರ ಪತಿ ಶ್ರೀನಿವಾಸ್ ರವರು ಮತ್ತು ಅವರ ಹಿಂಬಾಲಕರು ಕಬಳಿಸಿರುವ ಬಗ್ಗೆಯೂ ಈ ಹಿಂದೆಯೇ ದಾಖಲೆಗಳ ಸಹಿತ ತಮ್ಮ ಗಮನಕ್ಕೆ ತರಲಾಗಿತ್ತು ಹಾಗೂ ಈ ಸಂಬಂಧ ವಿವಿಧ ತನಿಖಾ ಸಂಸ್ಥೆಗಳಲ್ಲಿ ದೂರುಗಳನ್ನೂ ಸಹ ದಾಖಲಿಸಲಾಗಿರುತ್ತದೆ.’

‘ಆದ ಕಾರಣ, ತಾವು ಬೆಂಗಳೂರು ಮಹಾನಗರ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಒತ್ತುವರಿಯಾಗಿರುವ ಸರ್ಕಾರೀ ಸ್ವತ್ತುಗಳನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯುವ ಕಾರ್ಯಕ್ಕೆ ತಮ್ಮ ಕ್ಷೇತ್ರದಿಂದಲೇ ಚಾಲನೆಯನ್ನು ನೀಡಬೇಕೆಂದು ಹಾಗೂ ಬೇರೆಲ್ಲಾ ರಾಜಕಾರಣಿಗಳಿಗೆ ಮೇಲ್ಪಂಕ್ತಿಯಾಗಿ ಮತ್ತು ಆದರ್ಶಪ್ರಾಯರಾಗಬೇಕು’ ಎಂದು‌
ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಹೇಳಿದ್ದಾರೆ.

‘ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಒತ್ತುವರಿಯಾಗಿರುವ ಸರ್ಕಾರೀ ಸ್ವತ್ತುಗಳನ್ನು ನಿರ್ಧಾಕ್ಷಿಣ್ಯವಾಗಿ ಮತ್ತು ನಿಷ್ಪಕ್ಷಪಾತವಾಗಿ ತೆರವುಗೊಳಿಸಿ, ಒಟ್ಟು 2,600 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ ಎರಡು ವಿವಿಧ ಸ್ಥಳಗಳಲ್ಲಿರುವ ಅತ್ಯಮೂಲ್ಯ ಸರ್ಕಾರೀ ಭೂ ಕಬಳಿಕೆ ಹಗರಣಗಳನ್ನು ಸಿಬಿಐ (CBI) ಅಥವಾ ಸಿಐಡಿ‌(CID) ತನಿಖೆಗೆ ವಹಿಸುವ ಸಂಬಂಧ ಕೂಡಲೇ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

WhatsApp Join our WhatsApp Channel
Previous Post

Malnutrition children | ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳಿಂದ 39.50 ಲಕ್ಷ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Next Post

Property Documents | ಬೆಂಗಳೂರಿನ ಆಸ್ತಿ ಮಾಲೀಕರೆ ಮನೆ ಮನೆಗೆ ಸರ್ಕಾರವೇ ಆಸ್ತಿ ದಾಖಲೆ ತಲುಪಿಸಲಿದೆ !!

Next Post

Property Documents | ಬೆಂಗಳೂರಿನ ಆಸ್ತಿ ಮಾಲೀಕರೆ ಮನೆ ಮನೆಗೆ ಸರ್ಕಾರವೇ ಆಸ್ತಿ ದಾಖಲೆ ತಲುಪಿಸಲಿದೆ !!

KSRTC News | ಅಪಘಾತದಲ್ಲಿ ಮೃತಪಟ್ಟ ಇಬ್ಬರು ಕೆಎಸ್ ಆರ್ ಟಿಸಿ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಚೆಕ್ ವಿತರಣೆ

Please login to join discussion

Like Us on Facebook

Follow Us on Twitter

Recent News

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group