Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP Contractors Bills | ಬ್ಲ್ಯಾಕ್ ಮೇಲ್ ಗಳಿಗೆಲ್ಲ ನಾನು ಹೆದರಲ್ಲ, ಕೆಲಸ ಮಾಡಿದ ಗುತ್ತಿಗೆದಾರರಿಗೆ ಬಿಲ್ ಪಾವತಿ ಆಗಲಿದೆ : ಡಿಸಿಎಂ ಡಿ.ಕೆ. ಶಿವಕುಮಾರ್

ಅಧಿಕಾರಿಗಳಿಗೆ ಹೇಳಿದ್ದೇವೆ, ಮೌಲ್ಯಮಾಪನ ಮಾಡಿ, ಕೆಲಸ ಆಗಿದ್ದರೆ ಬಿಲ್‌ ಮಾಡಿ ಎಂದು. ಅವರು ಆ ಕೆಲಸ ನೋಡಿಕೊಳ್ಳುತ್ತಾರೆ. ಸರ್ಕಾರ ಇರುವುದು ನೀತಿ ರೂಪಿಸಲು - ಡಿಸಿಎಂ

by Bengaluru Wire Desk
August 8, 2023
in Bengaluru Focus, Public interest
Reading Time: 1 min read
0

ಬೆಂಗಳೂರು, ಆ.8 www.bengaluruwire.com :
ರಾಜ್ಯ ಸರ್ಕಾರದ ಪ್ರಮುಖ ಇಲಾಖೆಗಳ ಬಿಲ್‌ ಪಾವತಿಗೆ ಸಂಬಂಧಪಟ್ಟಂತೆ ಆರೋಪ- ಪ್ರತ್ಯಾರೋಪಗಳು ತೀವ್ರಗೊಂಡ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಂಗಳವಾರ ಬೆಂಗಳೂರಿನಲ್ಲಿಂದು ಪ್ರಮುಖ ಸಚಿವರು ಹಾಗೂ ಶಾಸಕರ ಸಭೆ ನಡೆಸಿದರು.

ಕುಮಾರಕೃಪ ಅತಿಥಿಗೃಹದ ಬಳಿ ಸಭೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, “ಸರಿಯಾಗಿ ಕೆಲಸ ಮಾಡಿದ ಗುತ್ತಿಗೆದಾರರಿಗೆ ಬಿಲ್ ಪಾವತಿ ಆಗಲಿದೆ. ಯಾವ ಗುತ್ತಿಗೆದಾರರ ಹಿಂದೆ ಯಾರಿದ್ದಾರೆ ಅಂತಲೂ ನನಗೆ ಗೊತ್ತಿದೆ. ನಾವು ಕಾನೂನು ಪ್ರಕಾರವಾಗಿ ಕೆಲಸ ಮಾಡುತ್ತಿದ್ದು, ಇಂತಹ ಬ್ಲ್ಯಾಕ್ ಮೇಲ್ ಗಳಿಗೆಲ್ಲ ಈ ಡಿ.ಕೆ. ಶಿವಕುಮಾರ್ ಹೆದರುವುದಿಲ್ಲ” ಎಂದು ಖಡಕ್ ಸಂದೇಶ ರವಾನಿಸಿದ್ದಾರೆ.

ಗುತ್ತಿಗೆದಾರರು ತಮ್ಮ ಬಿಲ್ ಪಾವತಿ ಆಗದಿರುವ ಬಗ್ಗೆ ರಾಜ್ಯಪಾಲರಿಗೆ ಪತ್ರ ಬರೆಯುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಡಿ.ಕೆ. ಶಿವಕುಮಾರ್ ಅವರು ಉತ್ತರಿಸಿದರು.

ಡಿ.ಕೆ ಶಿವಕುಮಾರ್ ಬಿಲ್ ಹಣ ಬಿಡುಗಡೆಗೆ ದುಡ್ಡು ಕೇಳಿದ್ದಾರೆ, ಈ ಬಗ್ಗೆ ಅವರು ನಂಬಿರುವ ಅಜ್ಜನ ಮೇಲೆ ಪ್ರಮಾಣ ಮಾಡಲಿ ಎಂದು ಗುತ್ತಿಗೆದಾರರು ಹೇಳಿದ್ದಾರಲ್ಲ ಎಂಬುದರ ಬಗ್ಗೆ ಗಮನ ಸೆಳೆದಾಗ, “ನಾನು ಯಾವುದೇ ಗುತ್ತಿಗೆದಾರರಿಗೆ ಉತ್ತರ ಕೊಡಲು ಹೋಗುವುದಿಲ್ಲ. ನಾನು ಯಾರ ಬಳಿಯೂ ಮಾತನಾಡಿಲ್ಲ. ನನಗೂ ಪ್ರಜ್ಞೆ ಇದೆ, ರಾಜಕೀಯ ಗೊತ್ತಿದೆ. ಗುತ್ತಿಗೆದಾರರು ಗೊತ್ತಿದ್ದಾರೆ. ಅವರ ಹಿಂದೆ ಯಾರಿದ್ದಾರೆ, ಯಾರು ಇದನ್ನು ಹೇಳಿಸುತ್ತಿದ್ದಾರೆ ಎಂದೂ ಗೊತ್ತಿದೆ. ಅವರು ಏನು ಬೇಕಾದ್ರೂ ಮಾಡಿಕೊಳ್ಳಲಿ ಎಂದು ಡಿಸಿಎಂ ಪ್ರತಿಕ್ರಿಯಿಸಿದರು.

ನಾವು ಕಾನೂನು ಪ್ರಕಾರ ಕೆಲಸ ಮಾಡ್ತಿದ್ದೀವಿ. ಈ ರೀತಿಯ ಬೆದರಿಕೆ, ಬ್ಲಾಕ್‌ಮೇಲ್‌ ಗೆ ನಾನು ಜಗ್ಗುವುದಿಲ್ಲ. ರಾಜ್ಯಪಾಲರಿಗೆ ಪತ್ರ ಕೊಡೋದು, ರಾಷ್ಟ್ರಪತಿಗೆ ಪತ್ರ ಕೊಡೋದು, ಪ್ರಧಾನಿಗಳನ್ನ ಭೇಟಿ ಆಗೋದು ಅವರಿಗೆ ಬಿಟ್ಟ ವಿಚಾರ. ಆವರು ಏನು ಬೇಕಾದರೂ ಮಾಡಿಕೊಳ್ಳಲಿ.” ಎಂದರು.

ನಿಮ್ಮ ಮೇಲೆ ಒತ್ತಡ ಹಾಕಲು ಈ ರೀತಿ ಮಾಡುತ್ತಿದ್ದಾರಾ ಎಂಬ ಪ್ರಶ್ನೆಗೆ, “ನನಗೆ ಯಾವ ಒತ್ತಡ ಇದೆ, ಯಾರು ಒತ್ತಡ ಹಾಕುತ್ತಾರೆ, ಯಾರು ಹೆದರಿಸುತ್ತಾರೆ ನನಗೆ? ನನಗೆ ಹೆದರಿಸೋಕೆ ಆಗುತ್ತಾ? ಯಾವುದೇ ಒತ್ತಡ ಬರಲಿ, ಅದನ್ನು ತಡೆದುಕೊಳ್ಳುವ ಶಕ್ತಿ ನನಗಿದೆ. ಈ ಗುತ್ತಿಗೆದಾರರ ವಿಚಾರಕ್ಕೆಲ್ಲ ನಾನು ಪ್ರತಿಕ್ರಿಯೆ ನೀಡೋಕೆ ಹೋಗಲ್ಲ” ಎಂದು ಹೇಳಿದರು.

ಗುತ್ತಿಗೆದಾರರು ಕುಮಾರಸ್ವಾಮಿ ಅವರನ್ನು ಯಾವ ಕಾರಣಕ್ಕೆ ಭೇಟಿ ಮಾಡಿದ್ದರು ಎಂಬ ಪ್ರಶ್ನೆಗೆ, “ಭೇಟಿ ಮಾಡಲಿ ಬಿಡಿ, ನಾವು ವಿರೋಧ ಪಕ್ಷದಲ್ಲಿ ಇದ್ದಿದ್ದರೆ, ನಮ್ಮನ್ನು ಕೂಡ ಭೇಟಿ ಮಾಡುತ್ತಿರಲಿಲ್ಲವೇ? ಇದನ್ನು ತಪ್ಪು ಎಂದು ಹೇಳಲು ಆಗುತ್ತದೆಯೇ? ಇದು ಅತ್ಯಂತ ಸಾಮಾನ್ಯ ಸಂಗತಿ. ರಾಜಕಾರಣಿಗಳು, ವಿರೋಧ ಪಕ್ಷಗಳು ಇರುವುದೇ ಇಂತಹ ಕೆಲಸ ಮಾಡೋಕೆ, ಮಾಡಲಿ ಬಿಡಿ” ಎಂದು ಉತ್ತರಿಸಿದರು.

ಒಂದಷ್ಟು ಜನ ಗುತ್ತಿಗೆದಾರರು ಗುಂಪು ಕಟ್ಟಿಕೊಂಡು ಸರ್ಕಾರದ ವಿರುದ್ದ ಪದೇ, ಪದೇ ಹೇಳಿಕೆ ನೀಡುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ “ಏನಾದ್ರೂ ಎತ್ತಿಕಟ್ಟಲಿ, ಏನ್‌ ಬೇಕಾದ್ರೂ ಮಾಡಲಿ, ನಾನು ಯಾರಿಗೂ ಪ್ರಮಾಣ ಮಾಡಬೇಕಾಗಿಲ್ಲ. ಕಾನೂನು ಏನು ಹೇಳಿದೆಯೋ, ಅದೇ ಉತ್ತರ. ಕೆಲಸ ಮಾಡಿದ್ದರೆ ಬಿಲ್‌ ಕೊಡುತ್ತೇವೆ, ಕೆಲಸ ಮಾಡಲಿಲ್ಲ ಅಂದರೆ ಬಿಲ್‌ ಕೊಡುವುದಿಲ್ಲ.

ಇವತ್ತು ಅರ್ಜಿ ಕೊಟ್ಟರು, ನಾಳೆ ಟೆಂಡರ್‌ ಆಯಿತು, ಒಂದು ತಿಂಗಳಲ್ಲಿ 1 ಸಾವಿರ ಕೋಟಿ ರೂ. ಕೆಲಸ ಮಾಡಲು ಆಗುತ್ತಾ ನೀವೇ ಹೇಳಿ. ಅಧಿಕಾರಿಗಳಿಗೆ ಹೇಳಿದ್ದೇವೆ, ಮೌಲ್ಯಮಾಪನ ಮಾಡಿ, ಕೆಲಸ ಆಗಿದ್ದರೆ ಬಿಲ್‌ ಮಾಡಿ ಎಂದು. ಅವರು ಆ ಕೆಲಸ ನೋಡಿಕೊಳ್ಳುತ್ತಾರೆ. ಸರ್ಕಾರ ಇರುವುದು ನೀತಿ ರೂಪಿಸಲು. ಹಾಗಾಗಿ ನಾವು ಬಿಲ್ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದರು.

ಹಿಂದೆ ನೀವು ನಲವತ್ತು ಪರ್ಸೆಂಟ್‌ ಆರೋಪ ಮಾಡಿದ್ದರಲ್ಲ ಅದರ ಬಗ್ಗೆ ಏನು ಹೇಳುವಿರಿ ಎನ್ನುವ ಪ್ರಶ್ನೆಗೆ, “ಹೌದು ನಾವು ಆರೋಪ ಮಾಡಿದ್ದು ಸತ್ಯ, ತನಿಖೆಗೆ ಪತ್ರ ಕೊಟ್ಟಿದ್ದು, ತನಿಖೆ ಮಾಡುತ್ತಿರುವುದು, ಅಶ್ವಥ್‌ ನಾರಾಯಣ್‌ ತನಿಖೆ ಮಾಡಿ ಎಂದು ಹೇಳಿದ್ದರು. ಹಿಂದೆ ಮುಖ್ಯಮಂತ್ರಿಗಳಾಗಿದ್ದಾಗ ಬೊಮ್ಮಾಯಿ ಅವರು ತನಿಖೆ ಮಾಡುತ್ತೇವೆ ಎಂದು ಹೇಳಿದ್ದರು. ಲೋಕಾಯುಕ್ತ ಅವರು 130 ಕೋಟಿ ರೂ. ಹಣವನ್ನು ಬಿಲ್‌ ಇಲ್ಲದೆ ಹಣ ಕೊಟ್ಟಿದ್ದಾರೆ ಎಂದು ವರದಿ ನೀಡಿರುವುದು, ಅಧಿಕಾರಿಗಳನ್ನು ಅಮಾನತು ಮಾಡಿರುವುದು ಎಲ್ಲವೂ ಸತ್ಯ” ಎಂದು ಹೇಳಿದರು.

ಗುತ್ತಿಗೆದಾರರು ಬಿಜೆಪಿ ಮೇಲೆ ಆರೋಪ ಮಾಡಿದ್ದರು, ಈಗ ನಿಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ, “ಗುತ್ತಿಗೆದಾರರು ನನ್ನ ಬಳಿಯೂ ಬಂದಿದ್ದರು, ಕೆಲಸ ಮಾಡಿದ್ದರೆ ನಿಮಗೆ ಹಣ ಸಿಗುತ್ತದೆ ಎಂದು ಅವರಿಗೆ ಹೇಳಿದೆ. ಬಿಲ್‌ ಕೊಡೋದಕ್ಕೂ ಒಂದು ಪ್ರಕ್ರಿಯೆ ಇದೆ. ಎರಡು, ಮೂರು ವರ್ಷ ಕಾದಿಲ್ಲವೇ ಅವರು? ಜಲಸಂಪನ್ಮೂಲ ಇಲಾಖೆಯಲ್ಲಿ ಇರುವುದು 600 ಕೋಟಿ ರೂ. ಆದರೆ 25 ಸಾವಿರ ಕೋಟಿ ಬಿಲ್‌ ಇದೆ. ಎಲ್ಲಿಂದ ಕೊಡುವುದು? ಕೆಲಸ ಮಾಡದವರಿಗೆಲ್ಲ ದುಡ್ದು ಕೊಡಲು ಆಗುತ್ತದೆಯೇ?” ಎಂದು ಮರುಪ್ರಶ್ನಿಸಿದರು.

ಇಂದು ನಡೆದ ಬೆಂಗಳೂರು ಸಚಿವರು, ಶಾಸಕರ ಜತೆಗಿನ ಸಭೆ ಬಗ್ಗೆ ಕೇಳಿದಾಗ, “ಶಾಸಕರ ಕ್ಷೇತ್ರಗಳ ಸಮಸ್ಯೆಗಳು, ಕಳೆದ ಸರ್ಕಾರ ಮಾಡಿದ್ದ ತಾರತಮ್ಯಗಳ ಬಗ್ಗೆ ಚರ್ಚೆ ಮಾಡಿ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಆರ್ಥಿಕ ಸ್ಥಿತಿ ಗಮನದಲ್ಲಿಟ್ಟುಕೊಂಡು ಯಾವ ಕೆಲಸಗಳನ್ನು ಆದ್ಯತೆ ಮೇರೆಗೆ ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು.

ಡಿಸಿಎಂ ಡಿ ಕೆ ಶಿವಕುಮಾರ್ ಅವರು ನೇತೃತ್ವದಲ್ಲಿ ನಡೆದ ಬೆಂಗಳೂರು ನಗರದ ಸಚಿವರು, ಶಾಸಕರ ಸಭೆಯಲ್ಲಿ ರಾಮಲಿಂಗರೆಡ್ಡಿ, ಕೆ.ಜೆ ಜಾರ್ಜ್, ದಿನೇಶ್ ಗುಂಡೂರಾವ್, ಬೈರತಿ ಸುರೇಶ್, ಜಮೀರ್ ಅಹ್ಮದ್ ಖಾನ್, ರಿಜ್ವಾನ್ ಅರ್ಶದ್, ಎ.ಸಿ ಶ್ರೀನಿವಾಸ್, ಶಿವಣ್ಣ, ಶರತ್ ಬಚ್ಚೇಗೌಡ, ಎನ್ಎ. ಹ್ಯಾರಿಸ್, ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.

WhatsApp Join our WhatsApp Channel
Previous Post

BW Special | BBMP Works Inquiry Committee | ಬಿಬಿಎಂಪಿ ಅಕ್ರಮ ಕಾಮಗಾರಿಗಳ ತನಿಖೆಗಾಗಿ ನಾಲ್ಕು ಪ್ರತ್ಯೇಕ ತನಿಖಾ ಸಮಿತಿಗಳನ್ನು ರಚಿಸಿದ ರಾಜ್ಯ ಸರ್ಕಾರ

Next Post

Bangalore Illegal Advt. Ban | ಬೆಂಗಳೂರಿನಲ್ಲಿ ಮೂರ್ನಾಲ್ಕು ದಿನಗಳಲ್ಲಿ ಅನಧಿಕೃತ ಫ್ಲೆಕ್ಸ್- ಬ್ಯಾನರ್ ನಿರ್ಬಂಧ ಜಾರಿ : ರೂಲ್ಸ್ ಬ್ರೇಕ್ ಗೆ 50 ಸಾವಿರ ರೂ. ದಂಡ

Next Post

Bangalore Illegal Advt. Ban | ಬೆಂಗಳೂರಿನಲ್ಲಿ ಮೂರ್ನಾಲ್ಕು ದಿನಗಳಲ್ಲಿ ಅನಧಿಕೃತ ಫ್ಲೆಕ್ಸ್- ಬ್ಯಾನರ್ ನಿರ್ಬಂಧ ಜಾರಿ : ರೂಲ್ಸ್ ಬ್ರೇಕ್ ಗೆ 50 ಸಾವಿರ ರೂ. ದಂಡ

ಸಮುದ್ರ ತೀರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವಿರುವ ಚಿತ್ರ (ಸಾಂದರ್ಭಿಕ ಚಿತ್ರ)

Karnataka Coastline Plastic Pollution | ರಾಜ್ಯದ ಕರಾವಳಿಯಲ್ಲಿ ಪ್ರತಿದಿನ 50 ಟನ್ ಪ್ಲಾಸ್ಟಿಕ್ ಕಡಲ ಒಡಲು ಸೇರುತ್ತಿದೆ!! : ಇದು ಸಮುದ್ರ ಜೀವಿಗಳ ಪಾಲಿಗೆ ಮರಣ ಶಾಸನ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group