Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ಉಲ್ಲಾಳು ಕೆರೆಯಲ್ಲಿ ಬಿಬಿಎಂಪಿ- ಕೆಎಸ್ ಪಿಸಿಬಿ ಅಧಿಕಾರಿಗಳ ಜಂಟಿ ಪರಿಶೀಲನೆ ; ನೀರಿನ ಗುಣಮಟ್ಟ ಸುಧಾರಣೆಗೆ ಕ್ರಮ

ಉಲ್ಲಾಳು ಕೆರೆಯಲ್ಲಿನ ಕಲುಷಿತ ನೀರಿನ ಶುದ್ಧೀರಣಕ್ಕಾಗಿ ನೈಸರ್ಗಿಕವಾಗಿ ತಯಾರಿಸಿದ ಬೊಕಾಸಿ ಬಾಲ್ ಗಳನ್ನು ಬಳಕೆ | ಕೆರೆ ನೀರಿನ ವಿಷಕಾರಿ ಅಂಶಗಳ ನಿವಾರಣೆಗೆ ಬಿಬಿಎಂಪಿ ಕ್ರಮ | ಸ್ಥಗಿತವಾಗಿದ್ದ ಕೆರೆ ಕಾಮಗಾರಿ ಆರಂಭಕ್ಕೆ ಗುತ್ತಿಗೆದಾರರಿಗೆ ಸೂಚನೆ

by Bengaluru Wire Desk
January 13, 2024
in Bengaluru Focus, BW Special, Public interest
Reading Time: 1 min read
0
ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು, ಆ.30 www.bengaluruwire.com : ಬಿಬಿಎಂಪಿಯ ರಾಜರಾಜೇಶ್ವರಿ ನಗರ ವಲಯದ ಉಲ್ಲಾಳು ಕೆರೆಯಲ್ಲಿ ಮೀನುಗಳ ಮಾರಣಹೋಮ ಕುರಿತಂತೆ ಆ.28ರಂದು ಬೆಂಗಳೂರು ವೈರ್ ಸುದ್ದಿ ಪ್ರಸಾರದ ಬಳಿಕ ಎಚ್ಚೆತ್ತುಕೊಂಡಿರುವ ಪಾಲಿಕೆ ಕೆರೆ ವಿಭಾಗದ ಎಂಜಿನಿಯರ್ ಗಳು, ಬೆಂಗಳೂರು ಜಲಮಂಡಳಿ ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಬುಧವಾರ ಕೆರೆಗೆ ಭೇಟಿ ನೀಡಿ ಜಂಟಿ ತಪಾಸಣೆ ನಡೆಸಿದರು.

ಇದೇ ಸಂದರ್ಭದಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿರುವುದರ ಬಗ್ಗೆ ಹಿಂದಿನ ಕಾರಣ ತಿಳಿಯಲು, ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ನವೀನ್ ಕೆರೆಯ ನೀರಿನ ಮಾದರಿಯನ್ನು ಸಂಗ್ರಹಿಸಿದರು. ಉಲ್ಲಾಳ ಕೆರೆಯಲ್ಲಿ ಸತ್ತು ಹೋಗಿದ್ದ ಮೀನುಗಳಿಂದ ಸಾಕಷ್ಟು ದುರ್ವಾಸನೆ ಬರುತ್ತಿದ್ದು ಅದನ್ನು ನಿಯಂತ್ರಿಸಲು ಜೆಸಿಬಿ ಯಂತ್ರದ ಮೂಲಕ ಪಾಲಿಕೆ ಸಿಬ್ಬಂದಿ ಅವುಗಳನ್ನು ತೆರವುಗೊಳಿಸಿದರು.

ಸಾವಿರಾರು ಮೀನುಗಳ ಸಾವನ್ನಪ್ಪಿರುವ ಉಲ್ಲಾಳು ಕೆರೆಯಲ್ಲಿ ಬಿಬಿಎಂಪಿಯ ಕೆರೆ ವಿಭಾಗ, ಕೆಎಸ್ ಪಿಸಿಬಿ ಹಾಗೂ ಬೆಂಗಳೂರು ಜಲಮಂಡಳಿಯ ಅಧಿಕಾರಿಗಳು ಬುಧವಾರ ಜಂಟಿ ತಪಾಸಣೆ ನಡೆಸಿದರು.

ಕೆರೆಯ ನೀರಿನ ಮಾದರಿ ಪರೀಕ್ಷೆಗೆ ಕೊಂಡೊಯ್ದ ಕೆಎಸ್ ಪಿಸಿಬಿ :

ಉಲ್ಲಾಳು ಕೆರೆಯ ದುಸ್ಥಿತಿ ಬಗ್ಗೆ ಬೆಂಗಳೂರು ವೈರ್ ಬಿಬಿಎಂಪಿ ಕೆರೆ ವಿಭಾಗದ ಮುಖ್ಯ ಎಂಜಿನಿಯರ್ ವಿಜಯ್ ಕುಮಾರ್ ಹರಿದಾಸ್ ಅವರನ್ನು ಪ್ರಶ್ನಿಸಿದಾಗ, “ಉಲ್ಲಾಳು ಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿರುವುದನ್ನು ಇದೀಗ ತೆರವುಗೊಳಿಸಲಾಗಿದೆ. ಮೀನುಗಳ ಸಾವಿಗೆ ಕಾರಣವಾಗಿರುವ ಅಂಶಗಳ ಬಗ್ಗೆ ತಿಳಿಯಲು ಬುಧವಾರ ಸ್ಥಳಕ್ಕೆ ಪಾಲಿಕೆ ಕೆರೆ ವಿಭಾಗದ ಎಇಇ ಮಹೇಶ್, ಬೆಂಗಳೂರು ಜಲಮಂಡಳಿಯ ಎಇಇ ಸೈಯ್ಯದ್ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ನವೀನ್ ಸ್ಥಳಕ್ಕೆ ಭೇಟಿ ನೀಡಿ ಜಂಟಿ ತಪಾಸಣೆ ನಡೆಸಿದ್ದಾರೆ. ನವೀನ್ ಅವರ ತಂಡ ಕೆರೆಯ ನೀರಿನ ಮಾದರಿಗಳನ್ನು ಲ್ಯಾಬ್ ಪರೀಕ್ಷೆಗಾಗಿ ಕೊಂಡೊಯ್ದಿದ್ದಾರೆ.”

ಕೆರೆಯಲ್ಲಿ ಮೀನುಗಾರಿಕೆ ನಿಷೇಧಕ್ಕೆ ಪಾಲಿಕೆ ಕ್ರಮ :

“ಕೆರೆಯಲ್ಲಿ ಉಳಿದಿರುವ ನೀರಿನ ಶುದ್ಧೀಕರಣಕ್ಕಾಗಿ ‘ಬೊಕಾಸಿ ಬಾಲ್’ ಗಳನ್ನು ನೀರಿಗೆ ಹಾಕಿ, ನೈಸರ್ಗಿಕವಾಗಿ ನೀರಿನಲ್ಲಿ ಸೇರಿಸಿರುವ ವಿಷಕಾರಿ ರಾಸಾಯನಿಕ ಹಾಗೂ ಬ್ಯಾಕ್ಟೀರಿಯಾವನ್ನು ನಿವಾರಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತದೆ. ಅದೇ ರೀತಿ ಮೀನುಗಾರಿಕೆ ಇಲಾಖೆಗೆ ಪತ್ರ ಬರೆದು ಉಲ್ಲಾಳು ಕೆರೆಯಲ್ಲಿ ಮೀನುಗಾರಿಕೆ ನಿಲ್ಲಿಸುವಂತೆ ಸೂಚಿಸುತ್ತೇವೆ. ಅದೇ ರೀತಿ ಹಲವು ದಿನಗಳಿಂದ ನಿಂತಿರುವ ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಲು ಸಂಬಂಧಿಸಿದ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಲಾಗುತ್ತದೆ. ಬೆಂಗಳೂರು ಜಲಮಂಡಳಿ ವತಿಯಿಂದ ಮಲ್ಲತ್ತಹಳ್ಳಿ ಕೆರೆ ಬದಿ ಹಿಂದೆ ಇದ್ದ 5 ದಶಲಕ್ಷ ಲೀಟರ್ ಸಾಮರ್ಥ್ಯದ ತ್ಯಾಜ್ಯ ನೀರು ಸಂಸ್ಕರಣಾ ಘಟಕವನ್ನು 10 ದ.ಲ.ಲೀ ಸಾಮರ್ಥ್ಯಕ್ಕೆ ಉನ್ನತೀಕರಿಸುವ ಕಾಮಗಾರಿಗೆ ಅನುಕೂಲವಾಗುವಂತೆ ಜು.1ರಿಂದ ಉಲ್ಲಾಳ ಕೆರೆಗೆ ಸಂಸ್ಕರಿತ ನೀರು ಹರಿಯುವುದು ನಿಂತಿರುವ ಕಾರಣ ಹಾಗೂ ಮಳೆಯ ಕೊರತೆಯಿಂದ ಕೆರೆ ಬಹುತೇಕ ಬರಿದಾಗಿದೆ” ಎಂದು ಸಿಇ ವಿಜಯ್ ಕುಮಾರ್ ಹರಿದಾಸ್ ತಿಳಿಸಿದ್ದಾರೆ.

ಕಲುಷಿತಗೊಂಡಿರುವ ಉಲ್ಲಾಳ ಕೆರೆಗೆ ಬಿಬಿಎಂಪಿ ಕೆರೆ ವಿಭಾಗ ಜೈವಿಕ ರಾಸಾಯನಿಕ ಸಿಂಪಡಿಸುತ್ತಿರುವುದು.

ಬೆಳಗಿನ ಹೊತ್ತು ವಾಯು ವಿಹಾರಕ್ಕೆ ಬರುವ ನಡಿಗೆದಾರರಿಗೆ, ಸತ್ತು ಮೀನುಗಳು ಕೊಳೆತು ನಾರುತ್ತಿರುವ ಕಾರಣ ಮೂಗು ಹಿಡಿದೇ ನಡಿಗೆ ಮಾಡುವಂತಾಗಿದೆ. ಈ ಮೀನುಗಳ ಮಾರಣ ಹೋಮವಾಗಿ ನಾಲ್ಕೈದು ದಿನಗಳು‌ ಕಳೆದರೂ ಉಲ್ಲಾಳ ಕೆರೆಯ ಹೊಣೆ ಹೊತ್ತ ಬಿಬಿಎಂಪಿ‌ಕೆರೆ ವಿಭಾಗದ ಎಂಜಿನಿಯರ್ ಗಳಾಗಲಿ, ಕೆರೆಯ ನಿರ್ವಹಣೆ ಹೊಣೆಹೊತ್ತ ಗುತ್ತಿಗೆದಾರರು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರುತ್ತಿದ್ದಾರೆ ಎಂದು “ಬಿಬಿಎಂಪಿಯ ಉಲ್ಲಾಳ ಕೆರೆಯಲ್ಲಿ ಮೀನುಗಳ‌ ಮಾರಣಹೋಮ…!! ಹೇಳೋರಿಲ್ಲ ಕೇಳೋರಿಲ್ಲ!! ಅಧಿಕಾರಿಗಳೇನು ಮಾಡ್ತಿದ್ದಾರೆ!!?” ಶೀರ್ಷಿಕೆಯಡಿ ಮೊದಲಿಗೆ ಸುದ್ದಿ ಪ್ರಸಾರ ಮಾಡಿತ್ತು.

ಆ ಬಳಿಕ ಇತರ ರಾಜ್ಯ ಮಟ್ಟದ ಇಂಗ್ಲೀಷ್ ಮತ್ತು ಕನ್ನಡ ದಿನಪತ್ರಿಕೆಗಳು ಬೆಂಗಳೂರು ವೈರ್ ಕನ್ನಡ ಡಿಜಿಟಲ್ ವೆಬ್ ನ್ಯೂಸ್ ಪೋರ್ಟಲ್ ಸುದ್ದಿಯನ್ನು ಅನುಸರಿಸಿ ಉಲ್ಲಾಳ ಕೆರೆಯಲ್ಲಿ ಮೀನುಗಳ ಸತ್ತು ಹೋಗಿರುವ ಬಗ್ಗೆ ವರದಿ ಪ್ರಕಟಿಸಿದ್ದವು.

27 ಎಕರೆ ವಿಸ್ತೀರ್ಣದ ಉಲ್ಲಾಳ ಕೆರೆಯಲ್ಲಿ ಪಾಲಿಕೆಯ ಗಮನಕ್ಕೆ ಬಾರದೆ ಮೀನುಗಾರಿಕಾ ಇಲಾಖೆಯು ಬೆಂಗಳೂರು ಜಿಲ್ಲಾಧಿಕಾರಿ ಅನುಮತಿ ಮೇರೆಗೆ ಖಾಸಗಿಯವರಿಗೆ ಮೀನು ಸಾಕಲು ಅನುಮತಿ ಪಡೆದಿರುವುದರ ಬಗ್ಗೆಯೂ ಬೆಂಗಳೂರು ವೈರ್ ಆ.28ರ ವರದಿಯಲ್ಲಿ ತಿಳಿಸಿತ್ತು. ಅದೇ ರೀತಿ ಕೆರೆಯಲ್ಲಿನ ಔಗುಪ್ರದೇಶದಲ್ಲಿ ಹೂಳೆತ್ತುವ, ನಡಿಗೆ ಮಾರ್ಗ ಸರಿಪಡಿಸುವ, ಕೆರೆ ದಂಡೆಯಲ್ಲಿ ಕಲ್ಲಿನ ಬೆಂಚು ಹಾಕುವ ಮತ್ತಿತರ ಕಾರ್ಯಗಳ ಸುಮಾರು 2 ಕೋಟಿ ರೂ. ಕಾಮಗಾರಿಯು ಮಂಜೂರಾಗಿದೆ. ಈ ಪೈಕಿ ಉಲ್ಲಾಳು ಕೆರೆಯ ಜೌಗು ಪ್ರದೇಶದಲ್ಲಿ ಹೂಳೆತ್ತುವ ಕಾಮಗಾರಿ ಆರಂಭಿಸಿದ ಗುತ್ತಿಗೆದಾರರು, ಪಾಲಿಕೆಯಿಂದ ಹಳೆ ಬಿಲ್ ಬಾಕಿ ಕಾರಣದ ನೆಪ ಹೇಳಿ ಕಾಮಗಾರಿಯನ್ನು ನಿಲ್ಲಿಸಿದ್ದರು. ಈ ಬಗ್ಗೆಯೂ ಪಾಲಿಕೆ ಗಮನ ಸೆಳೆಯಲಾಗಿತ್ತು. ಇವೆಲ್ಲದರ ಬಗ್ಗೆ ಕ್ರಮ ಜರುಗಿಸುವುದಾಗಿ ಬಿಬಿಎಂಪಿ ಕೆರೆ ವಿಭಾಗದ ಚೀಫ್ ಎಂಜಿನಿಯರ್ ವಿಜಯ್ ಕುಮಾರ್ ಹರಿದಾಸ್ ಭರವಸೆ ನೀಡಿದ್ದಾರೆ.

ಉಲ್ಲಾಳು ಕೆರೆಯ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸುತ್ತಿರುವ ಅಧಿಕಾರಿ.

ಉಲ್ಲಾಳು ಕೆರೆಗೆ ವರ್ಷದ ಹಲವು ತಿಂಗಳುಗಳ ಕಾಲ ವಿದೇಶಿ ಹಕ್ಕಿಗಳು ಸೇರಿದಂತೆ 20ಕ್ಕೂ ಹೆಚ್ಚು ವಿವಿಧ ಜಾತಿಯ ಹಕ್ಕಿಗಳು ಆಹಾರ ಅರಸಿ ಬರುತ್ತವೆ. 13 ರಿಂದ 14ಕ್ಕೂ ಹೆಚ್ಚು ನವಿಲುಗಳು, ಆಮೆ, ಹಾವು, ಮುಂಗುಸಿ, ಅಳಿಲು ಸೇರಿದಂತೆ ಹತ್ತಾರು ಪ್ರಾಣಿ, ಪಕ್ಷಿಗಳು ಹಾಗೂ ಸರೀಸೃಪಗಳ ಆಶ್ರಯ ತಾಣವಾಗಿರುವ ಉಲ್ಲಾಳು ಕೆರೆಯ ಅಭಿವೃದ್ಧಿಗೆ ಬಿಬಿಎಂಪಿ ತನ್ನ ಬದ್ಧತೆಯನ್ನು ತೋರಿಸಬೇಕಿದೆ ಎಂಬುದು ಸ್ಥಳೀಯ ನಿವಾಸಿಗಳ ಆಗ್ರಹವಾಗಿದೆ.

ಏನಿದು ಬೊಕಾಸಿ ಬಾಲ್? :

ಬೊಕಾಸಿ ಬಾಲ್ ಗಳು ಸಾವಯವ ವಸ್ತುಗಳಾದ ಉದ್ಯಾನವನದ ಮಣ್ಣು, ಸೂಕ್ಷ್ಮ ಜೀವಾಣುಗಳು, ಕಾಕಂಬಿ ಹಾಗೂ ಭತ್ತದ ತೌಡನ್ನು ಮಿಶ್ರಣ ಮಾಡಿ ತಯಾರಿಸುವ ಒಂದು ಮುದ್ದೆಯಾಗಿದೆ. ಈ ಮುದ್ದೆಗಳನ್ನು ಕಲುಷಿತ ನೀರಿಗೆ ಮಿಶ್ರಣ ಮಾಡಿದಾಗ, ನೀರಿನಲ್ಲಿನ ಅಪಯಕಾರಿ ಬ್ಯಾಕ್ಟೀರಿಯಾ ಹಾಗೂ ವಿಷಕಾರಿ ಅಂಶಗಳನ್ನು ನಿವಾರಿಸುತ್ತದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Gruha Lakshmi Scheme | ರಾಜ್ಯದ 11 ಸಾವಿರ ಸ್ಥಳಗಳಲ್ಲಿ ವರ್ಚುವಲ್ ವಿಡಿಯೋ ಮೂಲಕ “ಗೃಹಲಕ್ಷ್ಮಿ ಯೋಜನೆ”ಗೆ ಚಾಲನೆ

Next Post

KIAL T2 International Airport | ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 : ಆ.31ರಿಂದ ಕಾರ್ಯಾಚರಣೆ ಆರಂಭ

Next Post
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್-2ರ ಹೊರನೋಟದ ಚಿತ್ರ.

KIAL T2 International Airport | ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 : ಆ.31ರಿಂದ ಕಾರ್ಯಾಚರಣೆ ಆರಂಭ

BBMP CE CM Shivakumar Died | ಬಿಬಿಎಂಪಿಯ ಅಗ್ನಿ ಅನಾಹುತ : ಗಾಯಗೊಂಡವರಲ್ಲಿ ಮುಖ್ಯ ಎಂಜಿನಿಯರ್ ಸಿ.ಎಂ.ಶಿವಕುಮಾರ್ ವಿಧಿವಶ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d