Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Shivamogga Kuvempu Airport | ಶಿವಮೊಗ್ಗ: ಕುವೆಂಪು ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಯ ಯುಗಾರಂಭ

ಮಲೆನಾಡು, ಮಧ್ಯ ಕರ್ನಾಟಕ ಜಿಲ್ಲೆಗಳಿಗೆ ವರದಾನ | ಆರ್ಥಿಕ, ಕೈಗಾರಿಕಾ, ಶೈಕ್ಷಣಿಕ ರಂಗಗಳಲ್ಲಿ ಹೊಸ ಮಜಲಿಗೆ ನಾಂದಿ | ಬೆಂಗಳೂರಿನಿಂದ ಬಂದಿಳಿದ ಇಂಡಿಗೋ ಚೊಚ್ಚಲ ವಿಮಾನ | ಮುಂದಿನ ಒಂದು ವರ್ಷಗಳ ಕಾಲ ಪ್ರತಿ ಟಿಕೆಟ್ ಮೇಲೆ ₹500 ಸಬ್ಸಿಡಿ‌ |

by Bengaluru Wire Desk
August 31, 2023
in News Wire, Public interest
Reading Time: 1 min read
0

ಶಿವಮೊಗ್ಗ, ಆ.31 www.bengaluruwire.com : ಇಲ್ಲಿಂದ 15 ಕಿ.ಮೀ. ದೂರದ ಸೋಗಾನೆಯಲ್ಲಿ 450 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸುಸಜ್ಜಿತ ಕುವೆಂಪು ವಿಮಾನ ನಿಲ್ದಾಣಕ್ಕೆ ಇಂಡಿಗೋ ಸಂಸ್ಥೆಯ ವಿಮಾನವು ಗುರುವಾರ ಬಂದಿಳಿಯುವ ಮೂಲಕ ಮಲೆನಾಡು ಭಾಗದ ಪ್ರಪ್ರಥಮ ಏರ್‍‌ಪೋರ್ಟ್‌ನಲ್ಲಿ ವಿಮಾನಯಾನ ಸೇವೆಗಳು ಆರಂಭವಾದವು.

ಮಲೆನಾಡಿನ ಆರ್ಥಿಕ ಅಭಿವೃದ್ಧಿ ದೃಷ್ಟಿಯಿಂದ ಇದೊಂದು ಮಹತ್ವದ ಹೆಜ್ಜೆಯಾಗಿದೆ. ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಶಾಸಕ ಆರಗ ಜ್ಞಾನೇಂದ್ರ ಮುಂತಾದ ಗಣ್ಯರೊಂದಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 9.50ಕ್ಕೆ ಹೊರಟ ಚೊಚ್ಚಲ ವಿಮಾನವು 11.05ಕ್ಕೆ ಶಿವಮೊಗ್ಗಕ್ಕೆ ಬಂದಿಳಿಯಿತು. ಇದದರೊಂದಿಗೆ ಮಲೆನಾಡಿನಲ್ಲಿ ವೈಮಾನಿಕ ಯಾನದ ಹೊಸ ಅಧ್ಯಾಯ ಆರಂಭವಾಯಿತು.

ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದ ಸುಂದರ ನೋಟ

ಈ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ, ಈ ಪ್ರಪ್ರಥಮ ವಿಮಾನಕ್ಕೆ ವಾಟರ್ ಸೆಲ್ಯೂಟ್‌ ಮೂಲಕ ಸ್ವಾಗತ ಕೋರಿ ಸಂಭ್ರಮಾಚರಣೆ ಮಾಡಲಾಯಿತು. ಜೊತೆಗೆ ಬಂದಿಳಿದ ಎಲ್ಲ ಪ್ರಯಾಣಿಕರಿಗೂ ಸಚಿವ ಮಧು ಬಂಗಾರಪ್ಪ ಅವರಲ್ಲದೆ ವಿಮಾನ ನಿಲ್ದಾಣದ ಸಿಬ್ಬಂದಿ ಗುಲಾಬಿ ಹೂವು ಮತ್ತು ಸಿಹಿ ನೀಡಿ ಸ್ವಾಗತಿಸಿದರು.

ವಿಮಾನ ನಿಲ್ದಾಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಎಂ ಬಿ ಪಾಟೀಲ, ಕರ್ನಾಟಕದ ಅಭಿವೃದ್ಧಿಯ ಯಶೋಗಾಥೆಯಲ್ಲಿ ಇದೊಂದು ವಿನೂತನ ಅಧ್ಯಾಯವಾಗಿದೆ. ರಸಋಷಿ ಕುವೆಂಪು ಅವರ ಹೆಸರನ್ನು ಹೊಂದಿರುವ ಈ ವಿಮಾನ ನಿಲ್ದಾಣದಿಂದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಈ ಮೂಲಕ ಮಲೆನಾಡು ಮತ್ತು ಮಧ್ಯಮ ಕರ್ನಾಟಕದ ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕ ಬೆಳವಣಿಗೆ ಹೊಸ ಮಜಲನ್ನು ಮುಟ್ಟಲಿದೆ ಎಂದು ಬಣ್ಣಿಸಿದರು.
ಜೊತೆಗೆ, ಯೋಜನೆಯ ಕನಸು ಕಂಡು, ಅದರ ಅನುಷ್ಠಾನಕ್ಕೆ ಶ್ರಮಿಸಿದ ಯಡಿಯೂರಪ್ಪ ಮತ್ತು ಉಳಿದವರ ಪ್ರಯತ್ನಗಳನ್ನು ಉಲ್ಲೇಖಿಸಿದರು.

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದಿಳಿದ ಇಂಡಿಗೊ ವಿಮಾನದ ಚಿತ್ರ.

ಮುಂದಿನ ಒಂದು ವರ್ಷ ಕಾಲ ಶಿವಮೊಗ್ಗ- ಬೆಂಗಳೂರು ನಡುವೆ ಪ್ರಯಾಣಿಸುವ ಪ್ರತಿಯೊಬ್ಬರ ಟಿಕೆಟ್ ಮೇಲೆ 500 ರುಪಾಯಿ ಹಣವನ್ನು ರಾಜ್ಯ ಸರ್ಕಾರ ಸಬ್ಸಿಡಿ‌ ರೂಪದಲ್ಲಿ ನೀಡಲಿದೆ ಎಂದು ಸಚಿವರು ಘೋಷಿಸಿದರು.

779 ಎಕರೆ ವಿಸ್ತಾರದಲ್ಲಿ ನಿರ್ಮಿಸಿರುವ ವಿಮಾನ ನಿಲ್ದಾಣದಲ್ಲಿ ಮೂಲಯೋಜನೆಯ ವಿನ್ಯಾಸವನ್ನು ಪರಿಷ್ಕರಿಸಿ, ಏರ್‍‌ಬಸ್‌-320 ಮಾದರಿಯ ವಿಮಾನಗಳು ಕೂಡ ಬಂದಿಳಿಯುವ ಮತ್ತು ರಾತ್ರಿ ವೇಳೆ ಇಳಿಯುವ ಸೌಲಭ್ಯಗಳನ್ನು ಕೂಡ ಕಲ್ಪಿಸಲಾಗುತ್ತಿದೆ. ಇದರ ಕಾಮಗಾರಿ ಮುಗಿಯುತ್ತಿದ್ದಂತೆಯೇ ಶಿವಮೊಗ್ಗವನ್ನು ಭಾರತದ ಅಭಿವೃದ್ಧಿ ಕಾರಿಡಾರ್ ಜತೆ ಜೋಡಿಸಲಾಗುವುದು. ಇದಕ್ಕೆ ತಕ್ಕಂತೆ 3,050 ಮೀಟರ್ ಉದ್ದದ ರನ್‌ವೇ ನಿರ್ಮಿಸಲಾಗಿದ್ದು, 4,340 ಚದರ ಮೀಟರ್ ವಿಸ್ತೀರ್ಣದ ಪ್ರಯಾಣಿಕರ ಟರ್ಮಿನಲ್‌ ಹೊಂದಿದೆ ಎಂದು ಅವರು ವಿವರಿಸಿದರು.

ಶಿವಮೊಗ್ಗಕ್ಕೆ ಮೊದಲ ವಿಮಾನದಲ್ಲಿ ಪ್ರಯಾಣಿಸಿದ ಪ್ರಯಾಣಿಕರಲ್ಲಿ ಸಂತಸ ಮನೆ ಮಾಡಿತ್ತು.

ಶಿವಮೊಗ್ಗದಿಂದ ಬೆಂಗಳೂರಿಗೆ ಕನೆಕ್ಟಿಂಗ್ ವಿಮಾನಯಾನ :
ಸದ್ಯಕ್ಕೆ ಇಲ್ಲಿಂದ ಬೆಂಗಳೂರಿಗೆ ಕನೆಕ್ಟಿಂಗ್ ವಿಮಾನಯಾನ ಸೇವೆ ಲಭ್ಯವಾಗಲಿದೆ. ಬೆಂಗಳೂರನ್ನು ಕೇವಲ 60 ನಿಮಿಷಗಳಲ್ಲಿ ತಲುಪಿ, ಅಲ್ಲಿಂದ ಚೆನ್ನೈ, ಮುಂಬೈ ಮತ್ತು ದೆಹಲಿಗೆ ತೆರಳಲಿರುವ ಇಂಡಿಗೋ ಸಂಸ್ಥೆಯ ವಿಮಾನಗಳ ಮೂಲಕ ಪ್ರಯಾಣವನ್ನು ಮುಂದುವರಿಸಬಹುದು. ಉಡಾನ್‌ ಯೋಜನೆಯಡಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಸದ್ಯದಲ್ಲೇ ಅಧಿಕೃತ ವಾಗಿ ಪ್ರಕಟಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ದೆಹಲಿ, ಹೈದರಾಬಾದ್ ಸೇರಿದಂತೆ ದೇಶದ ನಾನಾ ನಗರಗಳಿಗೆ ಇಲ್ಲಿಂದ ನೇರ ವಿಮಾನಯಾನ ಆರಂಭಿಸಲಾಗುವುದು ಎಂದು ಅವರು ನುಡಿದರು.

ಮುಂದಿನ ಮೂರು ವಾರಗಳ ಟಿಕೆಟ್‌ ಬುಕಿಂಗ್ :
ವಿಮಾನಸೇವೆಗೆ ಜನರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮುಂದಿನ ಮೂರು ವಾರಗಳ ಟಿಕೆಟ್‌ ಈಗಾಗಲೇ ಬುಕಿಂಗ್‌ ಆಗಿದೆ. ಇಲ್ಲಿಂದ ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯನ್ನು ಕೇವಲ ಐದು ಗಂಟೆಗಳಲ್ಲಿ ತಲುಪಬಹುದು. ಆರ್ಥಿಕತೆಯ ಬೆಳವಣಿಗೆಗೆ ತಕ್ಕಂತೆ ನಮ್ಮ ಮೂಲಸೌಕರ್ಯ ಮತ್ತು ಅಭಿವೃದ್ಧಿ ಪರಿಕಲ್ಪನೆಗಳು ಕೂಡ ಬದಲಾಗುತ್ತಿರುತ್ತವೆ ಎಂದು ಸಚಿವರು ಹೇಳಿದರು.

ಕೆಎಸ್‌ಐಐಡಿಸಿ ಮೂಲಕ ಏರ್ ಪೋರ್ಟ್ ನಿರ್ವಹಣೆ :
ಈ ವಿಮಾನ ನಿಲ್ದಾಣವನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಎಸ್‌ಐಐಡಿಸಿ) ಮೂಲಕವೇ ನಿರ್ವಹಿಸಲಾಗುವುದು. ಇದಕ್ಕೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಈಗಾಗಲೇ ಅನುಮತಿ ನೀಡಿದೆ. ಈ ಮೂಲಕ ರಾಜ್ಯದ ಬೊಕ್ಕಸಕ್ಕೆ ಆದಾಯದ ಹೊಸ ಮೂಲವೊಂದನ್ನು ಕಂಡುಕೊಳ್ಳಲಾಗಿದೆ ಎಂದು ಅವರು ಸಚಿವ ಎಂ.ಬಿ.ಪಾಟೀಲರು ಮಾಹಿತಿ ನೀಡಿದರು.

ಶಿವಮೊಗ್ಗದಿಂದ ಹೊರಹೋಗುವ/ಒಳಬರುವ ವಿಮಾನ ಸೇವೆಗಳ ವಿವರ :
ಇಂಡಿಗೋ ವಿಮಾನವು ಶಿವಮೊಗ್ಗ ವಿಮಾನ ನಿಲ್ದಾಣದಿಂದ ಪ್ರತಿದಿನ ಬೆಳಿಗ್ಗೆ 11.25ಕ್ಕೆ ಹೊರಟು 12.25ಕ್ಕೆ ಬೆಂಗಳೂರನ್ನು ತಲುಪಲಿದೆ. ಅಲ್ಲಿಂದ ಚೆನ್ನೈ, ಮುಂಬೈ ಮತ್ತು ದೆಹಲಿಗೆ ಹೊರಡಲಿರುವ ಇಂಡಿಗೋ ವಿಮಾನಗಳ ಸೇವೆ ಪಡೆಯಬಹುದು. ಈ ಸೇವೆಯು ಸೆ.10ರಿಂದ ಲಭ್ಯವಾಗಲಿದೆ. ಇದೇ ರೀತಿಯಲ್ಲಿ ಬೆಂಗಳೂರಿನ ಕಡೆಯಿಂದ ಇದೇ ವಿಮಾನವು ಪ್ರತಿದಿನ ಬೆಳಿಗ್ಗೆ 9.55ಕ್ಕೆ ಹೊರಟು 11.05ಕ್ಕೆ ಶಿವಮೊಗ್ಗದಲ್ಲಿ ಇಳಿಯಲಿದೆ.

ಮೂಲಸೌಕರ್ಯ ಇಲಾಖೆಯ ಹೆಚ್ಚುವರಿ‌ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಎಸ್ ಐಐಡಿಸಿಯ ವ್ಯವಸ್ಥಾಪಕ ನಿರ್ದೇಶಕ ಎಂ.ಆರ್.ರವಿ ಸೇರಿದಂತೆ ಮೊದಲಾದ ಅಧಿಕಾರಿಗಳು, ಗಣ್ಯರು ಈ ಮಹತ್ವದ ಕ್ಷಣಗಳಿಗೆ ಸಾಕ್ಷಿಯಾದರು.

WhatsApp Join our WhatsApp Channel
Previous Post

Vidhana Parishad News | ವಿಧಾನಪರಿಷತ್ ಮೂವರು ನೂತನ ಸದಸ್ಯರ ಪ್ರಮಾಣ ವಚನ

Next Post

Mysore Dasara 2023 | ಮೈಸೂರು ದಸರಾ 2023 : ಅಲಕೃಂತ ಆನೆಗಳಿಗೆ ಪುಷ್ಪರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ

Next Post

Mysore Dasara 2023 | ಮೈಸೂರು ದಸರಾ 2023 : ಅಲಕೃಂತ ಆನೆಗಳಿಗೆ ಪುಷ್ಪರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ

ಸೂರ್ಯನ ಅಧ್ಯಯನಕ್ಕಾಗಿ ನಿಯೋಜಿತ ಆದಿತ್ಯ ಎಲ್-1 ಬಾಹ್ಯಾಕಾಶದಲ್ಲಿರುವ ಗ್ರಾಫಿಕ್ ಚಿತ್ರ.

ISRO Aditya L1 Launch | ಸೌರಮಂಡಲಾಧಿಪತಿ ಸೂರ್ಯಾಧ್ಯಯನಕ್ಕೆ ಸಿದ್ಧವಾಯಿತು ಆದಿತ್ಯ ಎಲ್1 : ಶ್ರೀಹರಿಕೋಟಾದಿಂದ ಸೆ.2ರಂದು ಉಡಾವಣೆ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group