Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP News | Dengue Positive | ರಾಜ್ಯದಲ್ಲಿನ ಡೆಂಗ್ಯೂ ಪಾಸಿಟಿವ್ ಪ್ರಕರಣಕ್ಕಿಂತ ಬಿಬಿಎಂಪಿ ವ್ಯಾಪ್ತಿಯಲ್ಲೇ ಹೆಚ್ಚು : ಇದೊಂದು ಎಚ್ಚರಿಕೆಯ ಗಂಟೆ!!

2023ರ ಜನವರಿಯಿಂದ ಸೆಪ್ಟೆಂಬರ್ 2ನೇ ತಾರೀಖಿನ ವರೆಗೆ ರಾಜ್ಯದಲ್ಲಿ ಒಟ್ಟಾರೆ 6,706 ಡೆಂಗ್ಯೂ ಜ್ವರ ಪಾಸಿಟಿವ್ ಪ್ರಕರಣ ವರದಿ | ಬಿಬಿಎಂಪಿ ವ್ಯಾಪ್ತಿಯಲ್ಲಿ 3,454 | ರಾಜ್ಯದಲ್ಲಿ 3,252 ಪ್ರಕರಣ ವರದಿ

by Bengaluru Wire Desk
September 6, 2023
in Bengaluru Focus, News Wire
Reading Time: 1 min read
0
ಡೆಂಗ್ಯೂ ಜ್ವರ ಹರಡುವ ಸೊಳ್ಳೆಯ ಚಿತ್ರ. (ಚಿತ್ರ ಕೃಪೆ : ನ್ಯಾಷನಲ್ ಜಿಯೋಗ್ರಾಫಿಕ್)

ಡೆಂಗ್ಯೂ ಜ್ವರ ಹರಡುವ ಸೊಳ್ಳೆಯ ಚಿತ್ರ. (ಚಿತ್ರ ಕೃಪೆ : ನ್ಯಾಷನಲ್ ಜಿಯೋಗ್ರಾಫಿಕ್)

ಬೆಂಗಳೂರು, ಸೆ.6 www.bengaluruwire.com : ರಾಜ್ಯದಲ್ಲಿನ ಡೆಂಗ್ಯೂ ಪಾಸಿಟಿವ್ ಪ್ರಕರಣಕ್ಕೆ ಹೋಲಿಸಿದ್ರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಪಾಸಿಟಿವ್ ಪ್ರಕರಣವೇ ಹೆಚ್ಚಾಗಿರುವುದು ಆರೋಗ್ಯ ಇಲಾಖೆ ಮಾಹಿತಿಯಿಂದ ತಿಳಿದು ಬರುತ್ತದೆ. ಸಿಲಿಕಾನ್ ಸಿಟಿಯ ಪಾಲಿಗೆ ಇದೊಂದು ಎಚ್ಚರಿಕೆಯ ಗಂಟೆಯಾಗಿದೆ.

2023ರ ಜನವರಿಯಿಂದ ಸೆಪ್ಟೆಂಬರ್ 2ನೇ ತಾರೀಖಿನ ವರೆಗೆ ರಾಜ್ಯದಲ್ಲಿ ಒಟ್ಟಾರೆ 6,706 ಡೆಂಗ್ಯೂ ಜ್ವರ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಆ ಪೈಕಿ ಬಿಬಿಎಂಪಿ ವ್ಯಾಪ್ತಿಯಲ್ಲಿ 3,454 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇನ್ನು ಪಾಲಿಕೆ ಹೊರತುಪಡಿಸಿ ರಾಜ್ಯದಲ್ಲಿ 3,252 ಪ್ರಕರಣಗಳು ಕಂಡು ಬಂದಿದೆ. ಇದನ್ನು ಗಮನಿಸಿದರೆ ವರ್ಷಂಪ್ರತಿ ಕೋಟ್ಯಾಂತರ ರೂಪಾಯಿ ನಗರದ ಸಮುದಾಯ ಆರೋಗ್ಯದ ಮೇಲೆ ಕರ್ಚು ಮಾಡುವ ಪಾಲಿಕೆ ಸಾರ್ವಜನಿಕ ಆರೋಗ್ಯ ವಿಭಾಗ ಎಷ್ಟರ ಮಟ್ಟಿಗೆ ಕಾರ್ಯನಿರ್ವಹಿಸುತ್ತಿದೆ ಎಂಬುದು ಇದರಿಂದ ಗೊತ್ತಾಗುತ್ತದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ಜುಲೈ ತಿಂಗಳಿಗೆ ಹೋಲಿಸಿದ್ರೆ ಆಗಸ್ಟ್ ಮತ್ತು ಸೆಪ್ಟೆಂಬರ್ ಆರಂಭದಿಂದ ಹೆಚ್ಚಾಗಿರುವುದು ಕಂಡು ಬಂದಿದೆ. ಜೂನ್ ತಿಂಗಳಿನಲ್ಲಿ ಕೇವಲ 25 ಪ್ರಕರಣಗಳಿದ್ದರೆ, ಜುಲೈ ತಿಂಗಳಿನಲ್ಲಿ 1,649 ಪ್ರಕರಣಗಳು ಕಂಡು ಬಂದಿತ್ತು. ಆದರೆ ಆಗಸ್ಟ್ ತಿಂಗಳಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ  2,374ನಷ್ಟು ವರದಿಯಾಗಿತ್ತು. ಆದರೆ ಸೆಪ್ಟೆಂಬರ್ 1ರಿಂದ 3ನೇ ತಾರೀಖಿನವರೆಗೆ ಕೇವಲ ಮೂರು ದಿನದಲ್ಲಿ ಈ ಪ್ರಮಾಣ 181ಕ್ಕೆ ತಲುಪಿದೆ. ರಸ್ತೆ, ಖಾಲಿ ನಿವೇಶನ, ಗುಂಡಿ ಬಿದ್ದ ತೆರೆದ ನೀರಿನ ಸ್ಥಳದಲ್ಲಿ ಸೊಳ್ಳೆಗಳು ಜಾಸ್ತಿ ಕಾಣಿಸಿಕೊಳ್ಳುತ್ತಿದೆ. ಆ ಮೂಲಕ ನಾಗರೀಕರು ಡೆಂಗ್ಯೂ ಕಾಯಿಲೆಗೆ ಒಳಗಾಗುತ್ತಿರುವುದು ಬಿಬಿಎಂಪಿ ಸಾರ್ವಜನಿಕ ಆರೋಗ್ಯ ವಿಭಾಗದವರು ನೀಡಿರುವ ಅಂಕಿ ಅಂಶಗಳಿಂದ ತಿಳಿದು ಬಂದಿದೆ.

2022ರ ಇಡೀ ವರ್ಷಕ್ಕಿಂತ ಈ ಬಾರಿ, 8 ತಿಂಗಳಲ್ಲಿ ಡೆಂಗ್ಯೂ ಪಾಸಿಟಿವ್  ಬಿಬಿಎಂಪಿಯಲ್ಲಿ ಹೆಚ್ಚಳ :

2022ರ ಇಸವಿಯಲ್ಲಿ ಇಡೀ ವರ್ಷದಲ್ಲಿ ಕರ್ನಾಟಕ ರಾಜ್ಯದಲ್ಲಿ ಒಟ್ಟಾರೆ 5,522 ಪ್ರಕರಣಗಳು ವರದಿಯಾಗಿತ್ತು. ಅದರಲ್ಲಿ ಬಿಬಿಎಂಪಿಯೊಂದರಲ್ಲೇ 1,058 ಪ್ರಕರಣಗಳು ಹಾಗೂ 4,464 ಡೆಂಗ್ಯೂ ಪಾಸಿಟಿವ್ ಪ್ರಕರಣ ರಾಜ್ಯದಲ್ಲಿ ಕಂಡು ಬಂದಿತ್ತು. ಆದರೆ ಈ ಬಾರಿ ಕೇವಲ 8 ತಿಂಗಳು ಮೂರು ದಿನದಲ್ಲಿ 6,706 ಡೆಂಗ್ಯೂ ಪಾಸಿಟಿವ್ ಪ್ರಕರಣ ಕಂಡು ಬಂದಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕ ಆರೋಗ್ಯ ವಿಭಾಗದ ಮೇಲೆ ಹೆಚ್ಚಿನ ಜವಾಬ್ದಾರಿಯಿರೋದು ತಿಳಿದು ಬರುತ್ತದೆ.

ಡೆಂಗ್ಯೂ ನಿಯಂತ್ರಣದ ಬಗ್ಗೆ ಸಾರ್ವಜನಿಕ ಆರೋಗ್ಯ ವಿಭಾಗದ ನಿರ್ಲಕ್ಷ್ಯ?:

ಸಾಮಾನ್ಯವಾಗಿ ಮಳೆಗಾಲದಲ್ಲಿ ಡೆಂಗ್ಯೂ ಮತ್ತು ಚಿಕನ್ ಗುನ್ಯಾ ಪ್ರಕರಣಗಳು ಕಂಡು ಬರುವುದು ಸರ್ವೇ ಸಾಮಾನ್ಯ. ಈ ವಿಚಾರ ಗೊತ್ತಿದ್ದರೂ, ಪಾಲಿಕೆ ಆರೋಗ್ಯ ವಿಭಾಗದ ಸಮುದಾಯ ಆರೋಗ್ಯ ತಂಡ ಡೆಂಗ್ಯೂ ನಿಯಂತ್ರಿಸಲು ಹೆಚ್ಚಾಗಿ ಆಸಕ್ತಿ ವಹಿಸದೆ, ಇದೀಗ ಡೆಂಗ್ಯೂ ಪ್ರಕರಣ ಕಳೆದ ಒಂದು ವಾರದಿಂದ ಹೆಚ್ಚಾಗಿರುವ ಹಿನ್ನಲೆಯಲ್ಲಿ ದಿಢೀರ್ ಎಂದು ಎಚ್ಚೆತ್ತುಕೊಂಡು ನಗರದ 198 ವಾರ್ಡ್ ಗಳಲ್ಲಿ ಡೆಂಗ್ಯೂ ನಿಯಂತ್ರಿಸುವ ಸಲುವಾಗಿ ಅರಿವು ಮೂಡಿಸುವ ಹಾಗೂ ಔಷಧಿ ಸಿಂಪಡಣೆ ಕಾರ್ಯಕ್ರಮವನ್ನು ತೀವ್ರವಾಗಿ ಹೆಚ್ಚಿಸುತ್ತಿರುವುದಾಗಿ ತಿಳಿಸಿದೆ. ಆರೋಗ್ಯ ಇಲಾಖೆಯ ಉದಾಸೀನ ಕಾರ್ಯದ ಬಗ್ಗೆ ಹಿರಿಯ ಅಧಿಕಾರಿಗಳು, ನಾಗರೀಕ ಕ್ಷೇಮಾಭಿವೃದ್ಧಿ ಸಂಘಗಳು ತೀವ್ರವಾಗಿ ತರಾಟೆ ತೆಗೆದುಕೊಂಡಿವೆ ಎಂದು ತಿಳಿದು ಬಂದಿದೆ.

ಔಷಧಿ ಸಿಂಪಡಣೆ – ಜಾಗೃತಿ ಕಾರ್ಯಕ್ರಮವೆಂಬ ಶೋ ಆಫ್ :

ಬಿಬಿಎಂಪಿ ಸಾರ್ವಜನಿಕ ಆರೋಗ್ಯದ ಮುಖ್ಯ ಆರೋಗ್ಯಾಧಿಕಾರಿ ಡಾ.ಬಾಲಸುಂದರ್ (ಬಲದಿಂದ ಎರಡನೆಯವರು) ಮತ್ತು ಅವರ ವೈದ್ಯಕೀಯ ತಂಡ, ಆಶಾ ಕಾರ್ಯಕರ್ತೆಯರು ನಗರದ ಪ್ರದೇಶವೊಂದರಲ್ಲಿ ಡೆಂಗ್ಯೂ ಜ್ವರ ಕುರಿತಂತೆ ಅರಿವು ಮೂಡಿಸಿದರೆನ್ನಲಾದ ಚಿತ್ರ.

ನಗರದಲ್ಲಿ ತೀವ್ರತರ ಸೊಳ್ಳೆ ನಿಯಂತ್ರಣ ಕಾರ್ಯವನ್ನು ಮುಂದಿನ ಆದೇಶದವರೆಗೆ ಮುಂದುವರೆಸಲಾಗುತ್ತದೆ. ಜೊತೆಗೆ ಡೆಂಗ್ಯೂ ಕುರಿತಂತೆ ಶಾಲಾ ಕಾಲೇಜುಗಳಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಮುಂದುವರಿದು, ನೀರು ನಿಂತ ಸ್ಥಳಗಳಲ್ಲಿ ಮತ್ತು ಮೋರಿಗಳಿಗೆ ಔಷಧಿ ಸಿಂಪಡಣೆ ಕಾರ್ಯ ಮಾಡಲಾಗುತ್ತದೆ. ಪಾಲಿಕೆಯ ಕಸದ ವಾಹನಗಳಲ್ಲಿಯೂ ಸಹ ಧ್ವನಿವರ್ಧಕಗಳ ಮೂಲಕ ಡೆಂಗ್ಯೂ ಬಗ್ಗೆ ಅರಿವು ಮೂಡಿಸುವ ಪ್ರಚಾರ ಮಾಡಿಸಲಾಗುತ್ತಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸಾರ್ವಜನಿಕ ಆರೋಗ್ಯ ವಿಭಾಗದ ಮುಖ್ಯ ಆರೋಗ್ಯಾಧಿಕಾರಿಯಾದ ಡಾ. ಬಾಲಸುಂದರ್ ಅವರು ತಿಳಿಸಿದ್ದಾರೆ.

ಕೊಳಚೆ ಹಾಗೂ ಇನ್ನಿತರೆ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ನಮ್ಮ ಕ್ಲಿನಿಕ್ ವೈದ್ಯರ ತಂಡ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ತಂಡಗಳನ್ನು ರಚಿಸಿಕೊಂಡು ಡೆಂಗ್ಯೂ ಪ್ರಕರಣಗಳ ಪತ್ತೆ ಹಚ್ಚುವ ಸಮೀಕ್ಷೆ ನಡೆಸಲಾಗುತ್ತಿದೆ. ಇದರ ಮೇಲ್ವಿಚಾರಣೆಯನ್ನು ಸಂಬಂಧಪಟ್ಟ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಉಲ್ಲಾಳ ವಾರ್ಡಿನ ನಿವಾಸಿ ವಿನೋದ್ ಅವರನ್ನು ಬೆಂಗಳೂರು ವೈರ್, ಪಾಲಿಕೆ ಸಾರ್ವಜನಿಕ ಆರೋಗ್ಯ ವಿಭಾಗ ಡೆಂಗ್ಯೂ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ನೀರು ನಿಂತ ಸ್ಥಳಗಳಲ್ಲಿ ಮತ್ತು ಮೋರಿಗಳಿಗೆ ಔಷಧಿ ಸಿಂಪಡಣೆ ಕಾರ್ಯ ಮಾಡುತ್ತಿದೆಯಾ ಎಂದು ಪ್ರಶ್ನಿಸಿದಾಗ, “ನೀರು ನಿಂತ ಸ್ಥಳಗಳಲ್ಲಿ ಮತ್ತು ಮೋರಿಗಳಿಗೆ ಔಷಧಿ ಸಿಂಪಡಣೆಯನ್ನು ಬಿಬಿಎಂಪಿ ಸಿಬ್ಬಂದಿ ಎಲ್ಲೆಡೆ ಮಾಡುತ್ತಿಲ್ಲ. ಕೇವಲ ತೋರಿಕೆಗೆ ಯಾವತ್ತೋ ಒಮ್ಮೆ ಹೀಗೆ ಬಂದು ಹಾಗೆ ಹೋಗಿ ಸಿಂಪಡಣೆ ಶಾಸ್ತ್ರ ಮಾಡುತ್ತಾರಷ್ಟೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW Special | BBMP BTM Layout Wholesale Transfers | ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಪಾಲಿಕೆ ಕಂದಾಯ ವಿಭಾಗದ “ಹೋಲ್ ಸೇಲ್” ಟ್ರಾನ್ಸ್ ಫರ್ಸ್ : ವರ್ಗಾವಣೆಗೆ ಕಾರಣ ನಿಗೂಢ

Next Post

Caste Atrocities | ಜಾತಿ ದೌರ್ಜನ್ಯ ಪ್ರಕರಣದಲ್ಲಿ ರಾಜ್ಯದಲ್ಲಿನ ಶಿಕ್ಷೆ ಪ್ರಮಾಣ ಶೇ. 3.44 : ಜಾತಿ ದೌರ್ಜನ್ಯಗಳಿಗೆ ಕಡಿವಾಣ ಅತ್ಯಗತ್ಯ – ಮುಖ್ಯಮಂತ್ರಿ ಸಿದ್ದರಾಮಯ್ಯ

Next Post
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಿತು.

Caste Atrocities | ಜಾತಿ ದೌರ್ಜನ್ಯ ಪ್ರಕರಣದಲ್ಲಿ ರಾಜ್ಯದಲ್ಲಿನ ಶಿಕ್ಷೆ ಪ್ರಮಾಣ ಶೇ. 3.44 : ಜಾತಿ ದೌರ್ಜನ್ಯಗಳಿಗೆ ಕಡಿವಾಣ ಅತ್ಯಗತ್ಯ – ಮುಖ್ಯಮಂತ್ರಿ ಸಿದ್ದರಾಮಯ್ಯ

ಡೆಂಗ್ಯೂ ಮುನ್ಸೂಚನಾ ತಂತ್ರಾಂಶ ಕಾರ್ಯತಂತ್ರದ ಭಾಗದ ಸಾಂದರ್ಭಿಕ ಚಿತ್ರ.

IISC Dengue Forecasting Software | ಐಐಎಸ್ ಸ್ಸಿ ವಿಜ್ಞಾನ ಸಂಸ್ಥೆಯಿಂದ ಡೆಂಗ್ಯೂ ಮುನ್ಸೂಚನಾ ತಂತ್ರಾಂಶ : ನಾಳೆ ಬಿಡುಗಡೆ – ಇದರ ವಿಶೇಷತೆಗಳೇನು ಗೊತ್ತಾ?

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d