Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Caste Atrocities | ಜಾತಿ ದೌರ್ಜನ್ಯ ಪ್ರಕರಣದಲ್ಲಿ ರಾಜ್ಯದಲ್ಲಿನ ಶಿಕ್ಷೆ ಪ್ರಮಾಣ ಶೇ. 3.44 : ಜಾತಿ ದೌರ್ಜನ್ಯಗಳಿಗೆ ಕಡಿವಾಣ ಅತ್ಯಗತ್ಯ – ಮುಖ್ಯಮಂತ್ರಿ ಸಿದ್ದರಾಮಯ್ಯ

ದೌರ್ಜನ್ಯ ತಡೆಗೆ ಪೊಲೀಸ್, ಕಾನೂನು, ಸಮಾಜ ಕಲ್ಯಾಣ ಮತ್ತು ಕಂದಾಯ ಇಲಾಖೆ ನಡುವೆ ಸಮನ್ವಯ ಇರಲಿ | ಕರ್ನಾಟಕ ಪ್ರಜ್ಞಾವಂತರ ನಾಡು | ಸುಳ್ಳು ಜಾತಿ ಪ್ರಮಾಣ ಪತ್ರಗಳಿಗೆ ಪ್ರತ್ಯೇಕ ಸಭೆ - ಸಿಎಂ

by Bengaluru Wire Desk
September 7, 2023
in News Wire, Public interest
Reading Time: 1 min read
0
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಿತು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಿತು.

ಬೆಂಗಳೂರು, ಸೆ.7 www.bengaluruwire.com  : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ಕಡಿಮೆ ಮಾಡುವ ಜತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್ ಇಲಾಖೆ, ಕಾನೂನು ಇಲಾಖೆ, ಸಮಾಜ‌ಕಲ್ಯಾಣ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ 3 ಗಂಟೆಗಳ ಕಾಲ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಬಳಿಕ ಅಧಿಕಾರಿ ವರ್ಗಕ್ಕೆ ಈ ಸೂಚನೆ ನೀಡಿದರು. 

ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಜಾತಿ ದೌರ್ಜನ್ಯ ಪ್ರಕರಣಗಳಿಗೆ ಸೂಕ್ತ ನ್ಯಾಯ ಒದಗಿಸಲು ಸಾಧ್ಯ ಆಗುವುದಿಲ್ಲ ಎನ್ನುವ ಕಾರಣದಿಂದ ಎಸ್.ಸಿ ಮತ್ತು ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ,  ನಾಗರಿಕ ಹಕ್ಕು ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಸರ್ಕಾರ ಈ ಕಾಯ್ದೆಗೆ ಹೆಚ್ಚಿನ‌ ಮಹತ್ವ ನೀಡಿ ಗಂಭೀರವಾಗಿ ಪರಿಗಣಿಸುತ್ತದೆ. ಸಂತ್ರಸ್ತರಿಗೆ ರಕ್ಷಣೆ ಸಿಗಬೇಕು. ಈ ಉದ್ದೇಶ ಸಫಲವಾಗಲು ಸಮಾಜ ಕಲ್ಯಾಣ ಇಲಾಖೆ, ಪೊಲೀಸ್‌ ಇಲಾಖೆ, ಪ್ರಾಸಿಕ್ಯೂಷನ್‌ ಇಲಾಖೆ, ಕಂದಾಯ ಇಲಾಖೆ ಸಮನ್ವಯದೊಂದಿಗೆ ಕೆಲಸ ಮಾಡಬೇಕು. ಸಮನ್ವಯ ಇದ್ದಾಗ ಮಾತ್ರ ವ್ಯವಸ್ಥಿತವಾಗಿ ಈ ವರ್ಗದ ಜನರಿಗೆ ನ್ಯಾಯ ಸಿಗಲು ಸಾಧ್ಯವಾಗುತ್ತದೆ ಎಂದರು.

 ಪೊಲೀಸ್ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಎರಡು ತಿಂಗಳೊಳಗೆ ಚಾರ್ಜ್‌ ಶೀಟ್‌ ಹಾಕುವ ಬಗ್ಗೆ ಎಸ್‌.ಪಿ. ಗಳಿಗೆ, ಡಿಸಿಪಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಪೊಲೀಸರು ಜಾಗರೂಕತೆಯಿಂದ ತನಿಖೆ ಮಾಡಬೇಕು. ಇವುಗಳನ್ನು ವಿಶೇಷ ಪ್ರಕರಣ ವೆಂದು ಪರಿಗಣಿಸಿ ಶಿಕ್ಷೆ ಕೊಡಿಸಲು ಎಲ್ಲ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು.

ರಾಜ್ಯದಲ್ಲಿ ಶಿಕ್ಷೆ ಪ್ರಮಾಣ ಶೇ.3.44 :

ರಾಜ್ಯದಲ್ಲಿ ಶಿಕ್ಷೆ ಪ್ರಮಾಣ ಶೇ. 3.44 ರಷ್ಟಿರುವುದು ನಾಚಿಕೆಯ ಸಂಗತಿ. ಇದನ್ನು ಇನ್ನಷ್ಟು ಹೆಚ್ಚಿಸುವಂತೆ ಸೂಚಿಸಿದರು. ಪ್ರಜ್ಞಾವಂತ ಸಮಾಜವಿರುವ ನಮ್ಮ ರಾಜ್ಯದಲ್ಲಿ ಇಷ್ಟು ಕಡಿಮೆ ಇರುವುದು ತಲೆ ತಗ್ಗಿಸುವ ವಿಚಾರ. ತಹಸೀಲ್ದಾರರು, ಉಪವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಪೊಲೀಸ್‌ ವರಿಷ್ಠಾಧಿಕಾರಿಗಳು ಇದರ ಪ್ರಗತಿ ಪರಿಶೀಲನೆ ಮಾಡಬೇಕು. ಪೊಲೀಸ್‌ ವರಿಷ್ಠಾಧಿಕಾರಿಗಳು ಈ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ, ಡಿ.ಜಿ.ಪಿ. ಅವರಿಗೆ ವರದಿ ಕಳುಹಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ತಾಲ್ಲೂಕು, ಜಿಲ್ಲಾ ಮಟ್ಟದ ಕೆಡಿಪಿ ಸಭೆಗಳಲ್ಲಿ ಈ ವಿಷಯದ ಕುರಿತು ಕಡ್ಡಾಯವಾಗಿ ಪ್ರಗತಿ ಪರಿಶೀಲನೆ ಆಗಬೇಕು. ಚಾರ್ಜ್‌ ಶೀಟ್‌ ಸಲ್ಲಿಕೆಯನ್ನು ಯಾವುದೇ ಕಾರಣಕ್ಕೆ ವಿಳಂಬ ಮಾಡಬಾರದು. ಸಾಕ್ಷ್ಯ ವಿಫಲ ಆಗದಂತೆ ಪೊಲೀಸರು ಹೆಚ್ಚಿನ ಗಮನ ಕೊಡಬೇಕು.

ರಾಜಕಾರಣಿಗಳು ಈ ದೌರ್ಜನ್ಯ ಪ್ರಕರಣಗಳಲ್ಲಿ ಮಧ್ಯ ಪ್ರವೇಶಿಸದೆ ಪೊಲೀಸರಿಗೆ ಸಹಕಾರ ನೀಡಬೇಕು. ಪ್ರತಿ ಪ್ರಕರಣ ದಾಖಲಿಸುವಾಗ ಪೊಲೀಸರು ತಮ್ಮ ವಿವೇಚನೆಯನ್ನು ಬಳಸಬೇಕು. ಚಾರ್ಜ್‌ ಶೀಟ್‌ ಸಲ್ಲಿಕೆ ವಿಳಂಬವಾದರೆ ಆರೋಪಿಗಳು ಜಾಮೀನು ಪಡೆದು ಹೊರಬಂದು ಮತ್ತೊಮ್ಮೆ ಅಪರಾಧ ಎಸಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದರು.

ಹೆಚ್ಚಿನ ಪ್ರಕರಣ ಬಾಕಿಯಿರುವ ಕಡೆ ತ್ವರಿತ ನ್ಯಾಯಾಲಯ ಸ್ಥಾಪನೆ :

ಮುಂದಿನ ಸಭೆಯಲ್ಲಿ ವಿಚಾರಣೆ ಬಾಕಿ ಇರುವ ಪ್ರಕರಣಗಳ ಅವಧಿ ಮತ್ತು ಇತರ ಮಾಹಿತಿಯನ್ನು ಒದಗಿಸಬೇಕು. ಹೆಚ್ಚು ಪ್ರಕರಣಗಳು ಬಾಕಿ ಇರುವಲ್ಲಿ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಪರಿಶೀಲಿಸಲಾಗುವುದು. ಅನುಕಂಪ ಆಧಾರದ ಉದ್ಯೋಗ ನೀಡುವುದರಲ್ಲಿ 54 ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಇದೆ. ಬಹಳಷ್ಟು ಅರ್ಜಿಗಳು ತಿರಸ್ಕೃತಗೊಂಡಿವೆ. ಇದಕ್ಕೆ ಎರಡು ವರ್ಷದೊಳಗೆ ಅರ್ಜಿ ಸಲ್ಲಿಸಬೇಕೆಂಬ ಷರತ್ತಿನ ಬಗ್ಗೆ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

ಆರು ತಿಂಗಳಿಗೊಮ್ಮೆ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ :

ಈ ಬಾರಿ ಆಯವ್ಯಯದಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯವನ್ನು ಬಲಪಡಿಸುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಗೃಹ ಸಚಿವರು ನನ್ನೊಂದಿಗೆ ಚರ್ಚಿಸಿದ್ದಾರೆ. ಇದನ್ನು ಸಚಿವ ಸಂಪುಟ ಸಭೆಗೆ ಮಂಡಿಸುವಂತೆ ಸಚಿವರಿಗೆ ಸೂಚಿಸಿದರು.

ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಸಭೆ ಕರೆಯಲಾಗುವುದು. ಕಾನೂನು ಬಾಹಿರವಾಗಿ ನಡೆಯುವ ದೌರ್ಜನ್ಯಗಳನ್ನು ತಡೆಯಲು ನಮ್ಮ ಸರ್ಕಾರ ಬದ್ಧವಾಗಿದೆ. ನಿಯಮಕ್ಕೆ ತಿದ್ದುಪಡಿ ಮಾಡಿ ಈ ಸಮುದಾಯಗಳ ಎಲ್ಲ ಸಚಿವರು, ಸಂಸದರು, ಶಾಸಕರನ್ನು ಸಭೆಗೆ ಆಹ್ವಾನಿಸಲಾಗಿದೆ. ಈ ದೌರ್ಜನ್ಯ ತಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಅಧಿಕಾರಿಗಳು ತಮ್ಮ ಧೋರಣೆಯನ್ನು ಬದಲಿಸಿಕೊಂಡು ಕಾರ್ಯನಿರ್ವಹಿಸಬೇಕು. ಆರು ತಿಂಗಳಿಗೊಮ್ಮೆ ಈ ಸಭೆ ಕರೆಯುವಂತೆ ತಿಳಿಸಿದರು.

ಸಿಆರ್ ಇ ಸೆಲ್ ಗೆ ಹೆಚ್ಚಿನ ಬಲ :

ಪ್ರಸಕ್ತ ಆಯವ್ಯಯದಲ್ಲಿ ಘೋಷಿಸಿದಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (CRE cell) ಬಲ ಪಡಿಸುವ ಕುರಿತು ವರದಿ ಸಿದ್ಧಪಡಿಸಲಾಗಿದ್ದು, ಕಡತವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸುವುದಾಗಿ ಸಮಾಜ ಕಲ್ಯಾಣ ಸಚಿವರು ಸಭೆಯಲ್ಲಿ ತಿಳಿಸಿದರು. ಕಳೆದ ಐದು ವರ್ಷಗಳಲ್ಲಿ 53 ಕೊಲೆ ಪ್ರಕರಣಗಳಲ್ಲಿಯೂ ಚಾರ್ಜ್‌ ಶೀಟ್‌ ಹಾಕದಿರುವ ಕುರಿತು ಆಕ್ಷೇಪಿಸಿದ ಮುಖ್ಯಮಂತ್ರಿಗಳು, ಅಂತಹ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್‌ ನೀಡುವಂತೆ ಸೂಚಿಸಿದರು.

ಸಭೆಯಲ್ಲಿ‌ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ. ಹೆಚ್‌.ಸಿ.ಮಹಾದೇವಪ್ಪ ಹಾಗೂ ಸಚಿವರಾದ ಡಾ. ಜಿ. ಪರಮೇಶ್ವರ, ಕೆ.ಹೆಚ್. ಮುನಿಯಪ್ಪ, ಪ್ರಿಯಾಂಕ್‌ ಖರ್ಗೆ, ಆರ್.ಬಿ. ತಿಮ್ಮಾಪೂರ, ಕೆ.ಎನ್.ರಾಜಣ್ಣ, ನಾಗೇಂದ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲು ಕ್ಷೇತ್ರಗಳ ಶಾಸಕರು, ಸಂಸದರು, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BBMP News | Dengue Positive | ರಾಜ್ಯದಲ್ಲಿನ ಡೆಂಗ್ಯೂ ಪಾಸಿಟಿವ್ ಪ್ರಕರಣಕ್ಕಿಂತ ಬಿಬಿಎಂಪಿ ವ್ಯಾಪ್ತಿಯಲ್ಲೇ ಹೆಚ್ಚು : ಇದೊಂದು ಎಚ್ಚರಿಕೆಯ ಗಂಟೆ!!

Next Post

IISC Dengue Forecasting Software | ಐಐಎಸ್ ಸ್ಸಿ ವಿಜ್ಞಾನ ಸಂಸ್ಥೆಯಿಂದ ಡೆಂಗ್ಯೂ ಮುನ್ಸೂಚನಾ ತಂತ್ರಾಂಶ : ನಾಳೆ ಬಿಡುಗಡೆ – ಇದರ ವಿಶೇಷತೆಗಳೇನು ಗೊತ್ತಾ?

Next Post
ಡೆಂಗ್ಯೂ ಮುನ್ಸೂಚನಾ ತಂತ್ರಾಂಶ ಕಾರ್ಯತಂತ್ರದ ಭಾಗದ ಸಾಂದರ್ಭಿಕ ಚಿತ್ರ.

IISC Dengue Forecasting Software | ಐಐಎಸ್ ಸ್ಸಿ ವಿಜ್ಞಾನ ಸಂಸ್ಥೆಯಿಂದ ಡೆಂಗ್ಯೂ ಮುನ್ಸೂಚನಾ ತಂತ್ರಾಂಶ : ನಾಳೆ ಬಿಡುಗಡೆ – ಇದರ ವಿಶೇಷತೆಗಳೇನು ಗೊತ್ತಾ?

G-20 Bharath Mandpam | ಜಿ-20 ಶೃಂಗಸಭೆ ಸಾಕ್ಷಿಯಾಗುವ "ಭಾರತ ಮಂಟಪ"ದ ವಿಶೇಷತೆಗಳೇನು?

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d