Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW SPECIAL | Food Investigation | ರಾಜ್ಯಮಟ್ಟದ ಆಹಾರ ಜಾಗೃತಿ ಮತ್ತು ತನಿಖಾ ದಳದಿಂದ 3.5 ವರ್ಷದಲ್ಲಿ 9,675 ಟನ್ ಅಕ್ಕಿ, 1,950 ಟನ್ ರಾಗಿ, 871 ಟನ್ ಜೋಳ ವಶ!!

ರೈಲ್ ಮಿಲ್, ಪಡಿತರ ಅಂಗಡಿಗಳಲ್ಲಿದ್ದ ಜನರಿಗೆ ಹಂಚುವ ಅಕ್ಕಿ, ರಾಗಿ, ಗೋಧಿ, ಜೋಳ ಕಳ್ಳರ ಪಾಲಾಗುವುದನ್ನು ಪರಿಣಾಮಗಾರಿಯಾಗಿ ತಡೆಲಾಗಿದ್ಯಾಾ? | 2023-24 ರಲ್ಲಿ ಜೂನ್ 16ರ ತನಕ ಕೇವಲ 53 ಕಡೆ ಮಾತ್ರ ದಾಳಿ!!

by Bengaluru Wire Desk
September 12, 2023
in BW Special, News Wire, Public interest
Reading Time: 2 mins read
0
ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

ಬೆಂಗಳೂರು, ಸೆ.12 www.bengaluruwire.com : ರಾಜ್ಯ 19,935ಕ್ಕೂ ಹೆಚ್ಚಿನ ಪಡಿತರ ಅಂಗಡಿಗಳಿವೆ. ಸಾಕಷ್ಟು ರೈಸ್ ಮಿಲ್ ಗಳಿವೆ, ಆದರೆ ಇಲ್ಲಿ ಅಕ್ರಮವಾಗಿ ಅಗತ್ಯ ವಸ್ತುಗಳನ್ನು ಅಕ್ರಮ ಅವ್ಯವಹಾರವಾಗುತ್ತಲೇ ಇರುತ್ತದೆ. ಈ ನಿಟ್ಟಿನಲ್ಲಿ ರಾಜ್ಯ ಮಟ್ಟದ ಆಹಾರ ಜಾಗೃತಿ ಮತ್ತು ತನಿಖಾ ದಳವು 2020-21ರಿಂದ 2023-24ರ ಜೂನ್ 15ರ ತನಕ ಒಟ್ಟಾರೆ ರಾಜ್ಯದ ವಿವಿಧೆಡೆ 1,217 ಕಡೆಗಳಲ್ಲಿ ದಾಳಿ ನಡೆಸಿ, 65.74 ಕೋಟಿ ರೂ. ಮೌಲ್ಯದ ಅಗತ್ಯ ವಸ್ತುಗಳನ್ನು ವಶಪಡಿಸಿಕೊಂಡಿದೆ.

ಈ ದಾಳಿಯಲ್ಲಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 1,119 ಎಫ್ ಐಆರ್ ಗಳನ್ನು ದಾಖಲಿಸಲಾಗಿದೆ. ಹಾಗೂ 1,844 ಮಂದಿಯನ್ನು ಬಂಧಿಸಲಾಗಿದೆ. ಈ ಪ್ರಕರಣಗಳಲ್ಲಿ ಅಗತ್ಯ ವಸ್ತುಗಳಾದ ಅಕ್ಕಿ, ನುಚ್ಚು ಅಕ್ಕಿ, ಭತ್ತ, ಗೋಧಿ, ರಾಗಿ, ಜೋಳ, ಬೇಳೆ, ಬೇಳೆಕಾಳು, ಪೆಟ್ರೋಲ್, ಡೀಸೆಲ್ ಹಾಗೂ ಎಲ್ ಪಿಜಿ ಗ್ಯಾಸ್ ಗಳನ್ನು ಅಕ್ರಮವಾಗಿಟ್ಟುಕೊಂಡು ಪ್ರಕರಣಗಳಲ್ಲಿ ವಶಪಡಿಸಿಕೊಂಡಿದೆ. 2020-21ರಿಂದ ಮೂರುವರೆ ವರ್ಷಗಳಲ್ಲಿ 9,676 ಟನ್ ಅಕ್ಕಿಯನ್ನು, 3,104 ಟನ್ ಭತ್ತ, 294 ಟನ್ ನುಚ್ಚು ಅಕ್ಕಿಯನ್ನು, 1950 ಟನ್ ರಾಗಿಯನ್ನು, 871 ಟನ್ ಜೋಳ, 27,451 ಲೀಟರ್ ಡೀಸೆಲ್, 5,171 ಲೀ ಪೆಟ್ರೋಲ್ ಅನ್ನು ವಶಪಡಿಸಿಕೊಂಡಿದೆ.

ಅನ್ನ ಭಾಗ್ಯದ ಯೋಜನೆಯನ್ನು ಪಾರದರ್ಶಕವಾಗಿ ನಾಗರಿಕರಿಗೆ – ಸರಬರಾಜು ಮಾಡುವ ನಿಟ್ಟಿನಲ್ಲಿ ಸರ್ಕಾರವು ನ್ಯಾಯಬೆಲೆ  ಅಂಗಡಿಗಳಲ್ಲಿ ಆಧಾರ್ ಆಧಾರಿತ ಬಯೋಮೇಟ್ರಿಕ್ (E-Pos) ಮುಖಾಂತರ ವಿತರಿಸಲಾಗುತ್ತದೆ. ಆದರೂ ಹಲವು ಕಡೆಗಳಲ್ಲಿ ಅಕ್ರಮ ಮಾರ್ಗಗಳಿಂದ ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳು ಕಾಳಸಂತೆಗೆ ಅಕ್ರಮವಾಗಿ ಸೇರ್ಪಡೆಯಾಗುವುದು ಮಾತ್ರ ಸಂಪೂರ್ಣವಾಗಿ ನಿಂತಿಲ್ಲ.

ಪಡಿತರ ಆಹಾರ ಧಾನ್ಯಗಳ ಅವ್ಯವಹಾರ ತಡೆಗಟ್ಟಿ ಅರ್ಹ ಫಲಾನುಭವಿಗಳಿಗೆ ಪಡಿತರ ಆಹಾರ ಧಾನ್ಯಗಳು ತಲುಪುವುದನ್ನು  ಖಾತರಿ ಪಡಿಸಿಕೊಳ್ಳಲು 1955ರ ಅಗತ್ಯ ವಸ್ತುಗಳ ಕಾಯ್ದೆ ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಅಡಿಯಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಲಾಗಿದೆ. ಅಕ್ರಮ ತಡೆಯಲು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಜೊತೆಗೆ ಆಹಾರ, ನಾಗರಿಕ, ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಅಧಿಕಾರಿಗಳನ್ನೊಳಗೊಂಡ “ರಾಜ್ಯ ಮಟ್ಟದ ಆಹಾರ ಜಾಗೃತಿ ಮತ್ತು ತನಿಖಾ ದಳ” ವನ್ನು ರಚಿಸಲಾಗಿದೆ.

ಆದರೆ ರಾಜ್ಯ ಮಟ್ಟದ ಆಹಾರ ಜಾಗೃತಿ ಮತ್ತು ತನಿಖಾ ದಳ 2021-22ರಲ್ಲಿ 472 ಕಡೆಗಳಲ್ಲಿ ದಾಳಿ ನಡೆಸಿ 442 ಎಫ್ ಐಆರ್ ದಾಖಲಿಸಿ, 783 ಜನರನ್ನು ಬಂಧಿಸಿತ್ತು. ಈ ಪ್ರಕರಣಗಳಲ್ಲಿ 30.46 ಕೋಟಿ ರೂ. ಮೌಲ್ಯದ ಅಗತ್ಯ ವಸ್ತುಗಳ್ನು ವಶಪಡಿಸಿಕೊಂಡಿತ್ತು. ಆದರೆ 2022-23ರಲ್ಲಿ 627 ಕಡೆಗಳಲ್ಲಿ ದಾಳಿ ನಡೆಸಿ 571 ಎಫ್ ಐಆರ್ ದಾಖಲಿಸಿ 874 ಜನರನ್ನು ಬಂಧಿಸಲಾಗಿತ್ತು. ಇವರುಗಳಿಂದ  29.77 ಕೋಟಿ ರೂ. ಮೌಲ್ಯದ ಅಗತ್ಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪಡಿತರ ಚೀಟಿದಾರರ ಕುಟುಂಬಕ್ಕೆ ಆಹಾರ ಧಾನ್ಯ ವಿತರಿಸುತ್ತಿರುವ ಸಾಂದರ್ಭಿಕ ಚಿತ್ರ

2023-24ರಲ್ಲಿ ಕೇವಲ 53 ಕಡೆ ಮಾತ್ರ ದಾಳಿ!! :

ಕಳೆದ ಮೂರವರೆ ವರ್ಷಗಳಿಂದ 2021-22 ಹಾಗೂ 2022-23ರನೇ ಸಾಲಿನಲ್ಲಿ ಮಾತ್ರ ರಾಜ್ಯ ಮಟ್ಟದ ಆಹಾರ ಜಾಗೃತಿ ಮತ್ತು ತನಿಖಾ ದಳ ಉತ್ತಮವಾಗಿ ಕಾರ್ಯನಿರ್ವಹಿಸಿತ್ತು. ಆದರೆ 2023-24ರ ಐದೂವರೆ ತಿಂಗಳಿನಲ್ಲಿ ತನಿಖಾ ದಳ ಕೇವಲ 53 ಕಡೆಗಳಲ್ಲಿ ಮಾತ್ರ ದಾಳಿಯನ್ನು ನಡೆಸಿ, 46 ಎಫ್ ಐಆರ್ ಗಳನ್ನು ದಾಖಲಿಸಿ, 82 ಜನರನ್ನು ಬಂಧಿಸಿದೆ. ಕೇವಲ 2.91 ಕೋಟಿ ಮೌಲ್ಯದ ಅಗತ್ಯ ವಸ್ತುಗಳನ್ನು ಮಾತ್ರ ವಶಪಡಿಸಿಕೊಳ್ಳಲು ಸಾಧ್ಯವಾಗಿದೆ. ಅಲ್ಲಗೆ ರಾಜ್ಯ ಮಟ್ಟದ ಆಹಾರ ಜಾಗೃತಿ ಮತ್ತು ತನಿಖಾ ದಳ ಪರಿಣಾಮಕಾಯಾಗಿ ಕೆಲಸ ನಿರ್ವಹಿಸದಿರುವುದು ಉನ್ನತ ಮೂಲಗಳು ನೀಡಿದ ಅಂಕಿ ಅಂಶಗಳಿಂದ ತಿಳಿದು ಬರುತ್ತಿದೆ.

ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ್ದ ಸಚಿವರು :

10-07-2023ರಂದು ವಿಧಾನಪರಿಷತ್ತಿನಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಚಿವರಾಜ ಕೆ.ಎಚ್.ಮುನಿಯಪ್ಪ ಲಿಖಿತ ಉತ್ತರದಲ್ಲಿ, ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955 ರ ಅಡಿಯಲ್ಲಿ 1,202 ಪ್ರಕರಣ ಪತ್ತೆ ಹಚ್ಚಲಾಗಿದೆ. ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 1104 ಎಫ್ ಐಆರ್ ದಾಖಲಿಸಿ, 1814  ಜನರನ್ನು ಬಂಧಿಸಿ ಮೊಕದ್ದಮೆ ದಾಖಲು ಮಾಡಲಾಗಿದೆ. ಆದರೆ ಕಳೆದ ಮೂರು ವರ್ಷಗಳಲ್ಲಿ ಯಾವುದೇ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿರುವುದಿಲ್ಲ ಎಂದು ಸದನಲ್ಲಿ ಹೇಳಿದ್ದರು.

ಭ್ರಷ್ಟ ಸರ್ಕಾರಿ ಅಧಿಕಾರಿಗಳು, ನೌಕರರ ಹಸ್ತಕ್ಷೇಪವಿಲ್ಲದೆ ಇಷ್ಟು ದೊಡ್ಡ ಮಟ್ಟದಲ್ಲಿ ಅಗತ್ಯ ವಸ್ತುಗಳ ಅವ್ಯವಹಾರ ನಡೆಯುವುದು ಸಾಧ್ಯವಾಗದ ಮಾತು. ಇದಕ್ಕೆ ಮೇಲೆ ತಿಳಿಸಿದ ತಾಜಾ ಉದಾಹರಣೆಗಳೇ ಸಾಕ್ಷಿ. ಆದರೂ ಈ ತನಕ ಒಬ್ಬೇ ಒಬ್ಬ ಅಧಿಕಾರಿ, ಸಿಬ್ಬಂದಿ ತಪ್ಪಿತಸ್ತ ಎಂಬುದು ಪತ್ತೆಯಾಗದಿರುವುದು ದುರದೃಷ್ಟಕರ.

ಆಗಸ್ಟ್ ತಿಂಗಳಲ್ಲಿ ಶೇ.97.4ರಷ್ಟು ಹಣ ಡಿಬಿಟಿ ಮುಖಾಂತರ ವರ್ಗಾವಣೆ :

ಪಡಿತರ ಚೀಟಿಯೊಂದರ ಸಾಂದರ್ಭಿಕ ಚಿತ್ರ.

ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಅನ್ನಭಾಗ್ಯ ಯೋಜನೆಯಡಿ ಜುಲೈ 2023 ರಿಂದ ರಾಜ್ಯದಲ್ಲಿ ಅಂತ್ಯೋದಯ (AAY) ಮತ್ತು ಬಿಪಿಎಲ್ ಕಾರ್ಡ್ (PHH) ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯನ್ನು ವಿತರಿಸುವುದಾಗಿ ಘೋಷಿಸಿತ್ತು.ಈ ಅಕ್ಕಿಯ ಅಗತ್ಯವನ್ನು ಭಾರತೀಯ ಆಹಾರ ನಿಗಮ (FCI) ಯಿಂದ ಅಕ್ಕಿಯನ್ನು ಖರೀದಿಸುವ ಮೂಲಕ ಪೂರೈಸಲು ಯೋಜಿಸಲಾಗಿತ್ತು.ಆದರೆ, ಕೇಂದ್ರ ಸರ್ಕಾರ I ಜುಲೈ 2023 ರಿಂದ ಒಎಮ್ಎಸ್ಎಸ್ (ಡಿ) OMSS(D) ಅಕ್ಕಿಯ ಮಾರಾಟವನ್ನು ಸ್ಥಗಿತಗೊಳಿಸಿದೆ.

ಹೀಗಾಗಿ ರಾಜ್ಯ ಸರ್ಕಾರ  20223ರ ಜುಲೈ ನಿಂದ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ನೇರ ನಗದು ವಗಾ೯ವಣೆಯನ್ನು ಪ್ರಾರಂಭಿಸಿದೆ. ರಾಜ್ಯದಲ್ಲಿ ಒಟ್ಟು 1,03,68,897 ಕೋಟಿ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಗಳಿದ್ದು, ಅದರಲ್ಲಿ 3,62,43,064 ಸದಸ್ಯರಿದ್ದಾರೆ. ಇವರಿಗೆಲ್ಲಾ ಮಾಸಿಕವಾಗಿ ಒಟ್ಟಾರೆ 605.90 ಕೋಟಿ ರೂ. ಹಣವನ್ನು ಅವರ ನೋಂದಾಯಿತ ಬ್ಯಾಂಕ್ ಖಾತೆಗೆ ಹಾಕಲಾಗುತ್ತಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಅನ್ನಭಾಗ್ಯ ಯೋಜನೆಯಡಿ 5ಕೆಜಿ ಅಕ್ಕಿಯ ಹೆಚ್ಚುವರಿ ಪಡಿತರ ಕುರಿತು ಡಿಬಿಟಿ ವಿಧಾನದ (DBT) ಮೂಲಕ ನೇರ ಹಣ ವರ್ಗಾವಣೆ ಯನ್ನು ಶೇ.97.4ರಷ್ಟು ಪಡಿತರ ದಾರರ ಖಾತೆಗೆ ಆಗಸ್ಟ್ ತಿಂಗಳ ಹಣವನ್ನು ಪಾವತಿ ಮಾಡಲಾಗಿದೆ ಎಂದು ಇಲಾಖೆಯ ಸಚಿವರು ಹೇಳಿದ್ದಾರೆ.

ಅವ್ಯವಹಾರ ತಡೆಗೆ ತನಿಖಾ ದಳ ಚುರುಕಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ :

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರದ ಉದ್ಯಮವಾದ ಭಾರತೀಯ ಆಹಾರ ನಿಗಮದಿಂದ ಅಕ್ಕಿಯು ಅಗತ್ಯ ಪ್ರಮಾಣದ ಅಕ್ಕಿ ಲಭ್ಯವಾಗದ ಕಾರಣ ಫಲಾನುಭವಿಗಳ ಖಾತೆಗೆ ನೇರ ನಗದು ಹಣ ವರ್ಗಾವಣೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಅಗತ್ಯ ಆಹಾರ ವಸ್ತುಗಳ ಕಳ್ಳ ಸಾಗಾಣಿಕೆ ಮೇಲೆ ಹದ್ದುಗಣ್ಣನಿಟ್ಟು, ಅಕ್ರಮವಾಗಿ ಇಂತಹ ಅಗತ್ಯ ವಸ್ತುಗಳ ಅವ್ಯವಹಾರವನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಆಹಾರ ಜಾಗೃತಿ ಮತ್ತು ತನಿಖಾ ದಳದ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಅವ್ಯವಹಾರ ಪತ್ತೆ, ದಾಳಿ ನಡೆಸುವ ಕಾರ್ಯವನ್ನು ಚುರುಕುಗೊಳಿಸುವ ಅನಿವಾರ್ಯತೆಯಿದೆ ಎಂಬ ಅಭಿಪ್ರಾಯ ನಾಗರೀಕ ವಲಯದಿಂದ ವ್ಯಕ್ತವಾಗುತ್ತಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Netherlands Investment In Karnataka | ರಾಜ್ಯದಲ್ಲಿ 200ಕ್ಕೂ ಹೆಚ್ಚು ನೆದರ್ಲೆಂಡ್ ಕಂಪನಿಗಳಿಂದ 1 ಬಿಲಿಯನ್ ಅಮೆರಿಕನ್ ಡಾಲರ್ ಹೂಡಿಕೆ : ಡಿಸಿಎಂ ಡಿ.ಕೆ.ಶಿವಕುಮಾರ್

Next Post

Airport Customs | ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ : ಕ್ಯಾಪ್ಸೂಲ್ ನಲ್ಲಿ ಡ್ರಗ್ಸ್ ಹಾಗೂ ರಟ್ಟಿನ ಡಬ್ಬದಲ್ಲಿ ಚಿನ್ನದ ಪುಡಿ ಕಳ್ಳಸಾಗಾಣಿಕೆ – ಇಲ್ಲಿದೆ ಕುತೂಹಲಕಾರಿ ಮಾಹಿತಿ

Next Post
ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಇಲಾಖೆಯ ಲಾಂಛನ. (ಸಾಂದರ್ಭಿಕ ಚಿತ್ರ)

Airport Customs | ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ : ಕ್ಯಾಪ್ಸೂಲ್ ನಲ್ಲಿ ಡ್ರಗ್ಸ್ ಹಾಗೂ ರಟ್ಟಿನ ಡಬ್ಬದಲ್ಲಿ ಚಿನ್ನದ ಪುಡಿ ಕಳ್ಳಸಾಗಾಣಿಕೆ - ಇಲ್ಲಿದೆ ಕುತೂಹಲಕಾರಿ ಮಾಹಿತಿ

ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಪಾಲಿಕೆ ಕೇಂದ್ರ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಬೆ ನಡೆಸುತ್ತಿರುವ ಚಿತ್ರ.

BBMP News | ಬೃಹತ್ ನೀರುಗಾಲುವೆ ಒತ್ತುವರಿ ತೆರವು ಮಾಡುವಲ್ಲಿ ವಿಫಲವಾದರೆ ಶಿಸ್ತುಕ್ರಮ : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಖಡಕ್ ವಾರ್ನಿಂಗ್!!

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d