Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP News | ಬೃಹತ್ ನೀರುಗಾಲುವೆ ಒತ್ತುವರಿ ತೆರವು ಮಾಡುವಲ್ಲಿ ವಿಫಲವಾದರೆ ಶಿಸ್ತುಕ್ರಮ : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಖಡಕ್ ವಾರ್ನಿಂಗ್!!

ಮುಖ್ಯ ಆಯುಕ್ತರಿಂದ ವಿವಧ ವಿಷಯಗಳಿ ಗೆ ಸಂಬಂಧಿಸಿದಂತೆ ಪರಿಶೀಲನಾ ಸಭೆ | 7 ದಿನಗಳಲ್ಲಿ ಕೆರೆಗಳ ಒತ್ತುವರಿ ತೆರವಿನ ಬಗ್ಗೆ ಮಾಹಿತಿ ನೀಡಲು ಡೆಡ್ ಲೈನ್ | ನಗರದಲ್ಲಿ 198 ಪ್ರವಾಹ ಪೀಡಿದ ಸೂಕ್ಷ್ಮ ಪ್ರದೇಶಗಳ ಪೈಕಿ 124 ಸ್ಥಳಗಳಲ್ಲಿ ಯಾವುದೇ ಸಮಸ್ಯೆಯಾಗದು | ಬಾಕಿ 74 ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸೂಕ್ತ ರೀತಿಯ ಕ್ರಮ

by Bengaluru Wire Desk
September 13, 2023
in Bengaluru Focus
Reading Time: 1 min read
0
ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಪಾಲಿಕೆ ಕೇಂದ್ರ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಬೆ ನಡೆಸುತ್ತಿರುವ ಚಿತ್ರ.

ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಪಾಲಿಕೆ ಕೇಂದ್ರ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಬೆ ನಡೆಸುತ್ತಿರುವ ಚಿತ್ರ.

ಬೆಂಗಳೂರು, ಸೆ.13 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆ ವಿಭಾಗ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ, ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳು ಹಾಗೂ ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರವಾಗಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರ ಅಧ್ಯಕ್ಷತೆಯಲ್ಲಿ ಬುಧವಾರ ಪಾಲಿಕೆ ಕೇಂದ್ರ ಕಛೇರಿಯಲ್ಲಿ ಸಭೆ ಜರುಗಿತು.

ಪಾಲಿಕೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿದ ಮುಖ್ಯ ಆಯುಕ್ತರು ಮೊದಲಿಗೆ, ಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆ ಬಗ್ಗೆ ಮಾತನಾಡಿ, ಮಳೆನೀರು ಕಾಲುವೆ ಒತ್ತುವರಿ ತೆರವು ಕಾರ್ಯಚರಣೆ ಸಂಬಂಧ ಆಯಾ ವಿಭಾಗಕ್ಕೆ ಸಂಬಂಧಿಸಿದಂತೆ ತಹಶಿಲ್ದಾರ್ ರವರು ತೆರವು ನೋಟೀಸ್ ಜಾರಿ ಮಾಡಬೇಕು. ಆ ನಂತರ ಆಯಾ ವಿಭಾಗದ ಕಾರ್ಯಪಾಲಕ ಅಭಿಯಂತರು ರಾಜಕಾಲುವೆಯ ಒತ್ತುವರಿ ಹಾಗೂ ಅತಿಕ್ರಮಣ ತೆರವು ಜವಾಬ್ದಾರಿ ನೀಡಲಾಗಿದೆ. ನಿಗದಿತ ಸಮಯದಲ್ಲಿ ಒತ್ತುವರಿ ತೆರವು ಕಾರ್ಯ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬುಧವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಸಭೆ ನಡೆಸಿದರು.

ಕರ್ನಾಟಕ ಹೈಕೋರ್ಟ್ ನಲ್ಲಿ ನೀಡಲಾಗಿರುವ ಕಾರ್ಯಸೂಚಿಯಂತೆ ಬೃಹತ್ ನೀರುಗಾಲುವೆ ವಿಭಾಗದ ಕಾರ್ಯಪಾಲಕ ಅಭಿಯಂತರರು 10 ದಿನಗಳಲ್ಲಿ ಹೊಸ ಒತ್ತುವರಿಗಳನ್ನು ಗುರುತಿಸಬೇಕಿದೆ.  ಇದು ಕೊನೆಯ ಅವಕಾಶವಾಗಿರುತ್ತದೆ. ಒಂದು ವೇಳೆ ಒತ್ತುವರಿ ತೆರವು ಕಾರ್ಯಾಚರಣೆ ಮಾಡುವಲ್ಲಿ ವಿಫಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿದರು. ಬೃಹತ್ ನೀರುಗಾಲುವೆಯ ಒತ್ತುವರಿಯಾಗಿದ್ದಲ್ಲಿ ಅದನ್ನು ಭೂಮಾಪಕರ ಮೂಲಕ ಸಮೀಕ್ಷೆ ನಡೆಸಿ ತಹಶೀಲ್ದಾರರ ಮೂಲಕ ಒತ್ತುವರಿದಾರರಿಗೆ ನೋಟಿಸ್ ನೀಡಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

7 ದಿನಗಳಲ್ಲಿ ಕೆರೆಗಳ ಒತ್ತುವರಿ ತೆರವಿನ ಬಗ್ಗೆ ಮಾಹಿತಿ ನೀಡಲು ಡೆಡ್ ಲೈನ್:

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೆರೆಗಳಲ್ಲಿ ಯಾವ್ಯಾವ ಕೆರೆಯಲ್ಲಿ ಒತ್ತುವರಿಯಾಗಿದೆ ಎಂಬುದರ ಬಗ್ಗೆ ಕೆರೆಗಳ ವಿಭಾಗದ ಕಾರ್ಯಪಾಲಕ ಅಭಿಯಂತರರು 3 ದಿನಗಳಲ್ಲಿ ಆಯಾ ವಲಯ ಉಪ ವಿಭಾಗಗಳಲ್ಲಿ ಬರುವ ಕಾರ್ಯಪಾಲಕ ಅಭಿಯಂತರರಿಗೆ 7 ದಿನದೊಳಗಾಗಿ ಒತ್ತುವರಿಯಾಗಿದೆಯೇ ಎಂಬುದರ ಬಗ್ಗೆ ಮಾಹಿತಿ ನೀಡಬೇಕು. ಆ ಬಳಿಕ ತಹಶೀಲ್ದಾರರು 7 ದಿನಗಳಲ್ಲಿ ಸರ್ವೇ ನಡೆಸಿ ಒತ್ತುವರಿಯಾಗಿದ್ದರೆ, ಒತ್ತುವರಿ ಮಾಡಿರುವವರಿಗೆ ನೋಟೀಸ್ ಜಾರಿಗೊಳಿಸಬೇಕು. ಅನಂತರ ಸಕ್ಷಮ ಪ್ರಾಧಿಕಾರದಡಿ ಕಾಲಾವಕಾಶ ನೀಡಿ ಆ ಸಮಯದಲ್ಲಿ ಒತ್ತುವರಿ ತೆರವಾಗದಿದ್ದಲ್ಲಿ ಕೂಡಲೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಬೆಂಗಳೂರು ಪ್ರವಾಹ ಪೀಡಿತವಾಗುವ ಸೂಕ್ಷ್ಮ ಪ್ರದೇಶಗಳ ಸಾಂದರ್ಭಿಕ ಚಿತ್ರ.

ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ:

ನಗರದಲ್ಲಿ 198 ಪ್ರವಾಹ ಪೀಡಿದ ಸೂಕ್ಷ್ಮ ಪ್ರದೇಶಗಳ ಪೈಕಿ 124 ಸ್ಥಳಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಬಾಕಿ 74 ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸೂಕ್ತ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ಮಳೆಗಾಲದ ವೇಳೆ ಯಾವುದೇ ರೀತಿಯ ಸಮಸ್ಯೆಯಾಗದಿರಲು ಆಯಾ ವಲಯ ವ್ಯಾಪ್ತಿಯ ಪಾಲಿಕೆ ಹಿರಿಯ ಅಧಿಕಾರಿಗಳು ಪ್ರಮುಖ ಪ್ರವಾಹ ಪೀಡಿದ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನಿಡಿ, ಆ ಸ್ಥಳಗಳಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ ನೀಡಲಾಯಿತು.

ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಸೂಚನೆ:

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಂಬಂಧ ಆಯಾ ವಲಯದ ಎಲ್ಲಾ ಮುಖ್ಯ ಅಭಿಯಂತರರು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಫಿಕ್ಸ್ ಮೈ ಸ್ಟ್ರೀಟ್ ತಂತ್ರಾಂಶದಲ್ಲಿ ಬರುವಂತರ ದೂರುಗಳ ಆಧಾರದ ಮೇಲೆ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಬೇಕು. ಈ ಸಂಬಂಧ ಆಯಾ ವಲಯ ವ್ಯಾಪ್ತಿಯಲ್ಲಿ ನಿಯೋಜನೆ ಮಾಡಿರುವ ಗುತ್ತಿಗೆದಾರರಿಂದ ರಸ್ತೆ ಗುಂಡಿಗಳನ್ನು ಮುಚ್ಚಬೇಕು ಹಾಗೂ ದೋಷ ಮುಕ್ತ ಅವಧಿ(ಡಿ.ಎಲ್.ಪಿ)ಯಲ್ಲಿರುವ ರಸ್ತೆಗಳಲ್ಲಿ ಗುಂಡಿಗಳು ಬಿದ್ದದ್ದರೆ ಸಂಬಂಧಪಟ್ಟ ಗುತ್ತಿಗೆದಾರರಿಂದಲೇ ರಸ್ತೆಗುಂಡಿಗಳನ್ನು ಮುಚ್ಚಿಸಬೇಕೆಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದರು.

ಸಭೆಯಲ್ಲಿ ವಿಶೇಷ ಆಯುಕ್ತರಾದ ಜಯರಾಮ್ ರಾಯಪುರ, ಡಾ.ತ್ರಿಲೋಕ್ ಚಂದ್ರ, ಡಾ.ಹರೀಶ್ ಕುಮಾರ್, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಪ್ರಹ್ಲಾದ್, ಎಲ್ಲಾ ವಲಯ ಜಂಟಿ ಆಯುಕ್ತರು, ಎಲ್ಲಾ ವಲಯ ಮುಖ್ಯ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Airport Customs | ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ : ಕ್ಯಾಪ್ಸೂಲ್ ನಲ್ಲಿ ಡ್ರಗ್ಸ್ ಹಾಗೂ ರಟ್ಟಿನ ಡಬ್ಬದಲ್ಲಿ ಚಿನ್ನದ ಪುಡಿ ಕಳ್ಳಸಾಗಾಣಿಕೆ – ಇಲ್ಲಿದೆ ಕುತೂಹಲಕಾರಿ ಮಾಹಿತಿ

Next Post

Karnataka Big News | ರಾಜ್ಯದ 195 ತಾಲೂಕುಗಳು ಬರಪೀಡಿತ : ರಾಜ್ಯ ಸರ್ಕಾರದ ಅಧಿಕೃತ ಆದೇಶ ; ಬರಪೀಡಿತ ತಾಲೂಕುಗಳ ಸಂಪೂರ್ಣ ವಿವರ ಇಲ್ಲಿದೆ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

Karnataka Big News | ರಾಜ್ಯದ 195 ತಾಲೂಕುಗಳು ಬರಪೀಡಿತ : ರಾಜ್ಯ ಸರ್ಕಾರದ ಅಧಿಕೃತ ಆದೇಶ ; ಬರಪೀಡಿತ ತಾಲೂಕುಗಳ ಸಂಪೂರ್ಣ ವಿವರ ಇಲ್ಲಿದೆ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ

RBI New Direction On Personal Loans | ಆರ್ ಬಿಐ ಹೊಸ ನಿರ್ದೇಶನ : ಸಾಲ ಮರುಪಾವತಿ ಬಳಿಕ 30 ದಿನದಲ್ಲಿ ಬ್ಯಾಂಕ್ ಗಳು ಮೂಲ ಚರ-ಸ್ಥಿರಾಸ್ತಿ ದಾಖಲೆ ಹಿಂದಿರುಗಿಸಬೇಕು

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group