Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP Street Dog Survey 2023 | ಬಿಬಿಎಂಪಿಯಿಂದ ಬೀದಿ ನಾಯಿಗಳ‌ ಸಮೀಕ್ಷೆ : ನಗದಲ್ಲಿವೆ 2.79 ಲಕ್ಷ ಶ್ವಾನಗಳು

2019ನೇ ಸಾಲಿನ ಬೀದಿನಾಯಿ ಸರ್ವೆಯಲ್ಲಿ 3.10 ಲಕ್ಷ ಬೀದಿನಾಯಿಗಳಿದ್ದವು | ಕಳೆದ ಸಾಲಿಗಿಂತ ಶೇ.20ರಷ್ಟು ಎಬಿಸಿ ಶಸ್ತ್ರಚಿಕಿತ್ಸೆ ಪ್ರಮಾಣ ಹೆಚ್ಚಳ

by Bengaluru Wire Desk
October 4, 2023
in Bengaluru Focus
Reading Time: 1 min read
0
ವ್ಯಗ್ರಗೊಂಡ ಶ್ವಾನದ ಸಾಂದರ್ಭಿಕ ಚಿತ್ರ

ವ್ಯಗ್ರಗೊಂಡ ಶ್ವಾನದ ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.4 www.bengaluruwire.com : ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಬಳಿಕ ಪಾಲಿಕೆಯು ಬೀದಿನಾಯಿ ಸಮೀಕ್ಷೆಯನ್ನು ಕೈಗೊಂಡಿದ್ದು ಒಟ್ಟಾರೆ 2,79,335 ಬೀದಿ ನಾಯಿಗಳು ಇರುವುದನ್ನು ಪತ್ತೆಹಚ್ಚಿದೆ.

ನಾಯಿಗಳ ಸಮೀಕ್ಷೆ ನಡೆಸಿರುವ ಬಗ್ಗೆ ಮಂಗಳವಾರ ವರದಿ ಬಿಡುಗಡೆಯ ಕುರಿತು ಬಿಬಿಎಂಪಿ ಆರೋಗ್ಯ ಇಲಾಖೆ ಹಾಗೂ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತರಾದ ತ್ರಿಲೋಕ್ ಚಂದ್ರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.

ಬಿಬಿಎಂಪಿಯ ಪಶುಪಾಲನಾ ವಿಭಾಗ ಹಾಗೂ ಕೇಂದ್ರ ಸರ್ಕಾರದ ಐಸಿಎಆರ್-ನಿವೇದಿ ಸಂಸ್ಥೆಯ ಪ್ರಧಾನ ವಿಜ್ಞಾನಿ ಡಾ.ಕೆ.ಪಿ.ಸುರೇಶ್ ಅವರ ನೇತೃತ್ವದಲ್ಲಿ ಈ ಸಮೀಕ್ಷೆಯನ್ನು ಒಟ್ಟು 100 ಸಮೀಕ್ಷೆದಾರರು ಹಾಗೂ 15 ಮೇಲ್ವಿಚಾರಕರನ್ನು ಒಳಗೊಂಡ 50 ತಂಡಗಳು ಜು.11ರಿಂದ ಆ.8ರವರೆಗೆ ಒಟ್ಟು 12 ದಿನಗಳಲ್ಲಿ ಬೀದಿ ನಾಯಿ ಸಮೀಕ್ಷೆಯನ್ನು ಕೈಗೊಳ್ಳಲಾಗಿರುತ್ತದೆ ಎಂದು ಅವರು ಹೇಳಿದ್ದಾರೆ.

ಸಮೀಕ್ಷೆಯ ವೇಳೆ ನಾಯಿಗಳ ಫೊಟೊ, ಸ್ಥಳದ ಮಾಹಿತಿಯನ್ನು ರಾಂಡಮ್ ಆಗಿ ಸ್ಯಾಂಪಲ್ ಗಳನ್ನು ಪಡೆದು ವಿಶೇಷ ಆಪ್ ಗಳಲ್ಲಿ ಮಾಹಿತಿ ಸಂಗ್ರಹಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಬೀದಿನಾಯಿಗಳ ವರದಿ ಬಿಡುಗಡೆ ಮಾಡಿದ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಮತ್ತು ಇತರರು.

ಪಾಲಿಕೆಯ 8 ವಲಯಗಳಲ್ಲಿ 2019ನೇ ಸಾಲಿನ ಬೀದಿನಾಯಿ ಸರ್ವೆಯಲ್ಲಿ 3.10 ಲಕ್ಷ ಬೀದಿನಾಯಿಗಳಿರುವುದಾಗಿ ಅಂದಾಜಿಸಲಾಗಿತ್ತು. ಅವುಗಳಲ್ಲಿ ಶೇ.51.16ರಷ್ಟು ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ (ABC)ಯಾಗಿರುವುದಾಗಿ ಅಂದಾಜಿಸಲಾಗಿತ್ತು. ಆದರೆ ಹಾಲಿ ಕೈಗೊಂಡಿರುವ ಸಮೀಕ್ಷೆಯಲ್ಲಿ ಒಟ್ಟು ಶೇ.71.85ರಷ್ಟು ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆಯಾಗಿದ್ದು, ಒಟ್ಟಾರೆಯಾಗಿ ಶೇ.20ರಷ್ಟು ಎಬಿಸಿ ಶಸ್ತ್ರಚಿಕಿತ್ಸೆ ಪ್ರಮಾಣ ಹೆಚ್ಚಳವಾಗಿದೆ. ಬೀದಿನಾಯಿ ಮರಿಗಳ ಸಂಖ್ಯೆಯು ಕಡಿಮೆಯಾಗಿದೆ. ಈ ಸಮೀಕ್ಷೆಗೆ ಒಟ್ಟಾರೆ 10 ಲಕ್ಷ ರೂ. ವೆಚ್ಚವಾಗಿದೆ ಎಂದು ತ್ರಿಲೋಕ್ ಚಂದ್ರ ಹೇಳಿದರು.

ಪ್ರತಿ ವರ್ಷ ಎಬಿಸಿ ಆಪರೇಷನ್ ಗೆ 6-7 ಕೋಟಿ ರೂ. ವೆಚ್ಚವಾಗುತ್ತಿದೆ. ನಗರದಲ್ಲಿ ಕಳೆದ ವರ್ಷದಿಂದ ನಾಯಿ ಕಡಿತ ಸಂಖ್ಯೆ ಕಡಿಮೆಯಾಗುತ್ತಿದೆ. ಈ ವರ್ಷ 15 ಸಾವಿರ ನಾಯಿಕಡಿತ ಪ್ರಕರಣಗಳು ಕಂಡು ಬಂದಿದೆ.

ನಗರದಲ್ಲಿ ಪಾಲಿಕೆ ಪ್ರಾಥಮಿಕ ಆರೋಗ್ಯ ಕೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಸ್ಪತ್ರೆಯಲ್ಲಿ ರೇಬಿಸ್ ರೋಗ ನಿರೋಧಕ ಚುಚ್ಚುಮದ್ದು ಲಭ್ಯವಿದೆ. ಮುಂದಿನ ದಿನಗಳಲ್ಲಿ ನಮ್ಮ ಕ್ಲಿನಿಕ್‌ನಲ್ಲಿ ಫ್ರಿಡ್ಜ್ ವ್ಯವಸ್ಥೆ ಮಾಡಿದ ಮೇಲೆ ಅಲ್ಲಿಯೂ ರೇಬಿಸ್ ರೋಗ ನಿರೋಧಕ ಇಂಜಕ್ಷನ್ ಸಿಗಲಿದೆ ಎಂದು ತ್ರಿಲೋಕ್ ಚಂದ್ರ ಹೇಳಿದರು.

ನಾಯಿಗಳ ಸಂಖ್ಯೆ ಸಮೀಕ್ಷೆಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ನಗರ ಪ್ರದೇಶದಲ್ಲಿ ನಾಯಿ ಸರ್ವೆಗೆ ಸಿಎಸ್ ಆರ್ ಅನುದಾನದಡಿಯಲ್ಲಿ ದ್ರೋಣ್ ಮೂಲಕ ಸಮೀಕ್ಷೆ ಮಾಡಲಾಗಿದೆ. ಈ ಸರ್ವೇ ಆಧಾರದ ಮೇಲೆ ಸದ್ಯದಲ್ಲೇ ಬೀದಿನಾಯಿ ರೇಬಿಸ್ ಚುಚ್ಚುಮದ್ದು ಹಾಗೂ ಎಬಿಸಿ ಶಸ್ತ್ರಚಿಕಿತ್ಸೆ ನಡೆಸಲು ಟೆಂಡರ್ ಸದ್ಯದಲ್ಲೇ ಕರೆಯುತ್ತೇವೆ. ಬೀದಿನಾಯಿಗಳಿಗೆ 200 ಮೈಕ್ರೋಚಿಪ್ ಅನ್ನು ಪೈಲೆಟ್ ಆಧಾರದ ಮೇಲೆ ಪಶುಪಾಲನಾ ಕಾಲೇಜಿನಿಂದ ಅಳವಡಿಸುವ ಕೆಲಸ ಆಗುತ್ತಿದೆ‌, ಜಿಯೋ ಟ್ಯಾಕಿಂಗ್ ಕಾಲರ್ ಆಧಾರಿತ ತಂತ್ರಜ್ಞಾನವನ್ನು 200 ನಾಯಿಗಳಿಗೆ ಹಾಕಲು‌ ನಿರ್ಧರಿಸಿದ್ದೇವೆ. ಇದರ ಸಾಧಕ ಭಾದಕಗಳನ್ನು ನೋಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ಸಾಕು ನಾಯಿ ಲೈಸೆನ್ಸ್ ನೀಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ಸಮೀಕ್ಷಾ ವರದಿಯು ಶೇ.98ರಷ್ಟು ನಿಖರ :

ಈ ಸಮೀಕ್ಷಾ ವರದಿಯು ಶೇ.98ರಷ್ಟು ನಿಖರವಾಗಿದೆ. ಪ್ರತಿ ಬಿಬಿಎಂಪಿಯನ್ನು 0.5 ಚ.ಕಿ.ಮೀ ವ್ಯಾಪ್ತಿಯ 6850 ಮೈಕ್ರೋ ಜೋನ್ ಗಳನ್ನಾಗಿ ವಿಂಗಡಣೆ ಮಾಡಿದೆವು. ಅದರಲ್ಲಿ ಶೇ.20ರಷ್ಟು ರ್ಯಾಂಡಮ್ ಸ್ಯಾಂಪಲ್ ಗಳನ್ನು ಅಂದರೆ 1,360 ಮೈಕ್ರೋ ಜೋನ್ ಗಳನ್ನು ಸಮೀಕ್ಷೆ ಮಾಡಲು ಆಯ್ಕೆ ಮಾಡಲಾಗಿದೆ. ರೀ-ರೀ ಸೈಟ್ ವಿಧಾನದಲ್ಲಿ ಒಂದೇ ಬಾರಿಗೆ ಎರಡು ಸಲ ಶ್ವಾನ ಕಂಡು ಬಂದ ಫೋಟೊಗಳನ್ನು ದತ್ತಾಂಶ ತೆಗೆದುಕೊಂಡು, ವಿಡಿಯೋ ಮಾಡಿ ವಿಶ್ಲೇಷಿಸಿ ಈ ಸಮೀಕ್ಷೆ ಕೈಗೊಳ್ಳಲಾಗಿದೆ ಎಂದು ಬೀದಿನಾಯಿ ಸರ್ವೆ ಕೈಗೊಂಡ ತಂಡದ ಪ್ರಧಾನ ವಿಜ್ಞಾನಿ ಡಾ.ಕೆ.ಪಿ.ಸುರೇಶ್ ತಿಳಿಸಿದ್ದಾರೆ.

ನಗರದ ಎಂಟು ವಲಯಗಳ ಪೈಕಿ ಮಹದೇವಪುರದಲ್ಲಿ ನಾಯಿಗಳ ಸಂಖ್ಯೆ ಹೆಚ್ಚು :

ನಗರದಲ್ಲಿರುವ ಒಟ್ಟಾರೆ 2,79,335 ನಾಯಿಗಳಿದ್ದು ಅವುಗಳ ಪೈಕಿ 1,65,341 ಗಂಡು, 82,757 ಹೆಣ್ಣು ನಾಯಿಗಳು ಹಾಗೂ ಗುರುತಿಸಲು ಸಾಧ್ಯವಾಗದ ಪ್ರಕರಣಗಳಲ್ಲಿ 31,237 ನಾಯಿಗಳಿವೆ. 8 ವಲಯಗಳ ಪೈಕಿ ಮಹದೇವಪುರದಲ್ಲಿ 58,371 ನಾಯಿಗಳಿದ್ದು ಇಡೀ ಪಾಲಿಕೆಯಲ್ಲಿ ಅತಿಹೆಚ್ಚು ಬೀದಿ ನಾಯಿಗಳನ್ನು ಹೊಂದಿದ ವಲಯವಾಗಿದೆ. ಇನ್ನು ಆರ್.ಆರ್.ನಗರ ವಲಯದಲ್ಲಿ 41,266, ಬೊಮ್ಮನಹಳ್ಳಿ 39,183, ಪೂರ್ವ ವಲಯದಲ್ಲಿ 37,685, ಯಲಹಂಕ 36,343, ದಕ್ಷಿಣ 23,241, ಪಶ್ಚಿಮ 22,025 ಹಾಗೂ ದಾಸರಹಳ್ಳಿ ವಲಯದಲ್ಲಿ 21,221 ಬೀದಿ ನಾಯಿಗಳಿವೆ ಎಂದು ಅವರು ಹೇಳಿದ್ದಾರೆ.

ಐಸಿಎಆರ್-ನಿವೇದಿ ಸಂಸ್ಥೆಯ ನಿರ್ದೇಶಕರಾದ ಡಾ. ಬಲದೇವ್ ರಾಜ್ ಗುಲಾಟಿ ಮಾತನಾಡಿ, ಬೀದಿನಾಯಿಗಳ ಕಡಿತ ಔಷಧಿಯು ಪ್ರತಿ ಆರೋಗ್ಯ ಕೇಂದ್ರದಲ್ಲಿ ಇಡಬೇಕು. ಬೆಂಗಳೂರು ರಾಜ್ಯದ ಟೈರ್-1 ಸಿಟಿಯಾಗಿದ್ದು ರೇಬಿಸ್ ಮುಕ್ತ ನಗರವಾಗಬೇಕು. ರೇಬಿಸ್ ಬಗ್ಗೆ ವರದಿ ಮಾಡುವ ವ್ಯವಸ್ಥೆ ಮತ್ತಷ್ಟು ಬಲಪಡಿಸಬೇಕಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪಾಲಿಕೆ ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರಾದ ಡಾ.ಕವಿಕುಮಾರ್, ಐಸಿಎಆರ್-ನಿವೇದಿ ಸಂಸ್ಥೆಯ ಪ್ರಿನಿಪಾಲ್ ಸೈಂಟಿಸ್ಟ್ ಡಾ.ದಿವಾಕರ್ ಹೇಮಾದ್ರಿ ಅವರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

LPG Cylinders Commission Hike | ದೇಶಾದ್ಯಂತ ಅ.4ರಿಂದ ಜಾರಿಗೆ ಬರುವಂತೆ ಎಲ್ ಪಿಜಿ ವಿತರಕರ ಕಮಿಷನ್ ಹೆಚ್ಚಳ : ಗೃಹ ಬಳಕೆ ಸಬ್ಸೀಡಿ ಸಿಲಿಂಡರ್ ಗಳಿಗೆ ಅನ್ವಯ

Next Post

LCA TEJAS TWIN SEATER AIRCRAFT | ಭಾರತೀಯ ವಾಯುಪಡೆಗೆ ಮತ್ತಷ್ಟು ಬಲ : ಎಚ್ಎಎಲ್ ನಿಂದ ಮೊದಲ ಅವಳಿ ಆಸನದ ತೇಜಸ್ ಹಗುರ ಯುದ್ಧ ವಿಮಾನ ಹಸ್ತಾಂತರ

Next Post
ಎರಡು ಆಸನ ವ್ಯವಸ್ಥೆಯ ತೇಜಸ್ ಹಗುರ ಯುದ್ಧ ವಿಮಾನದ ಚಿತ್ರ.

LCA TEJAS TWIN SEATER AIRCRAFT | ಭಾರತೀಯ ವಾಯುಪಡೆಗೆ ಮತ್ತಷ್ಟು ಬಲ : ಎಚ್ಎಎಲ್ ನಿಂದ ಮೊದಲ ಅವಳಿ ಆಸನದ ತೇಜಸ್ ಹಗುರ ಯುದ್ಧ ವಿಮಾನ ಹಸ್ತಾಂತರ

ಸ್ಟ್ಯಾನ್‌ ಫೋರ್ಡ್‌ ವಿಶ್ವ ವಿದ್ಯಾಲಯದ ಕ್ಯಾಂಪಸ್ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಬ್ರಿಟಾನಿಕಾ.ಕಾಮ್)

Stanford University Worldwide Scientists | 2022ನೇ ಸಾಲಿನ ವಿಶ್ವದ ಟಾಪ್‌ ಶೇ.2 ರಷ್ಟು ವಿಜ್ಞಾನಿಗಳ ಪಟ್ಟಿ ಬಿಡುಗಡೆ : ದಾವಣಗೆರೆ ವಿವಿಯ 4 ವಿಜ್ಞಾನಿಗಳಿಗೆ ಪಟ್ಟಿಯಲ್ಲಿ ಸ್ಥಾನ

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group