ದಾವಣಗೆರೆ/ ಬೆಂಗಳೂರು, ಅ.5 www.bengaluruwire.com : ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೆರಿಕಾದ ಪ್ರತಿಷ್ಠಿತ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾನಿಲಯವು ಬಿಡುಗಡೆ ಮಾಡಿರುವ 2022ನೇ ಸಾಲಿನ ವಿಶ್ವದ ಟಾಪ್ ಶೇ.2 ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಬಿ.ಸಿ.ಪ್ರಸನ್ನಕುಮಾರ ಸೇರಿದಂತೆ ದಾವಣಗೆರೆ ವಿವಿಯಿಂದ 4 ವಿಜ್ಞಾನಿಗಳು ವಿಶ್ವವಿಜ್ಞಾನಿ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.


ಇವರ ಜತೆಗೆ ಅವರ ಮಾರ್ಗದರ್ಶನದಲ್ಲಿನ ನಾಲ್ಕು ಸಂಶೋಧನಾರ್ಥಿಗಳಾದ ಡಾ.ಆರ್.ಜೆ.ಪುನೀತ್ ಗೌಡ, ಡಾ.ಆರ್.ನವೀನ್ ಕುಮಾರ್, ಡಾ.ಜೆ.ಕೆ.ಮಧುಕೇಶ್ ಮತ್ತು ಡಾ.ಆರ್.ಎಸ್.ವರುಣ್ ಕುಮಾರ್ ಇವರುಗಳು ಕೂಡ ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಸ್ಟ್ಯಾನ್ ಫೋರ್ಡ್ ವಿವಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಸಂಶೋಧನೆ, ಸಂಶೋಧನಾ ವರದಿ, ಸಂಶೋಧನಾ ಉಲ್ಲೇಖಗಳು, ಲೇಖನಗಳನ್ನು ಒಳಗೊಂಡ ಹೆಚ್-ಇಂಡೆಕ್ಸ್, ಐ-ಟೆನ್ ಇಂಡೆಕ್ಸ್ ಸೇರಿದಂತೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಈ ಪಟ್ಟಿಯನ್ನು ಸಿದ್ಧಪಡಿಸುತ್ತದೆ. ಈ ಮಾನದಂಡಗಳ ಪ್ರಕಾರ ವಿಜ್ಞಾನಿಗಳನ್ನು 22 ವೈಜ್ಞಾನಿಕ ಕ್ಷೇತ್ರಗಳು ಮತ್ತು 174 ಉಪ-ಕ್ಷೇತ್ರಗಳಾಗಿ ವರ್ಗೀಕರಿಸಲಾಗಿದೆ. ಇದರಲ್ಲಿ ದಾವಣಗೆರೆ ವಿವಿಯ ಗಣಿತಶಾಸ್ತ್ರ ವಿಭಾಗದ ಪ್ರೊ. ಬಿ.ಸಿ.ಪ್ರಸನ್ನಕುಮಾರ ರವರು ಈ ವರ್ಷದ ಶ್ರೇಯಾಂಕ ಪಡೆದಿದ್ದು, ಸತತ ಮೂರನೇ ಬಾರಿಗೆ ಈ ಸ್ಥಾನ ಪಡೆದಿದ್ದಾರೆ. ಇದರ ಜತೆಗೆ ವೃತ್ತಿ ಜೀವನದ ಸಾಧನೆಯಲ್ಲಿ ಶ್ರೇಯಾಂಕವನ್ನು ಪಡೆದಿರುವುದು ಗಮನರ್ಹವಾಗಿದೆ.
ಪ್ರೊ. ಬಿ.ಸಿ.ಪ್ರಸನ್ನ ಕುಮಾರ ಮಾತ್ರವಲ್ಲದೆ ಅವರ ಮಾರ್ಗದರ್ಶದಲ್ಲಿ ಸಂಶೋಧನೆಯನ್ನು ನಡೆಸುತ್ತಿರುವ ಡಾ. ಆರ್.ಜೆ.ಪುನೀತ್ ಗೌಡ, ಡಾ. ಆರ್.ನವೀನ್ ಕುಮಾರ್, ಡಾ. ಜೆ.ಕೆ ಮಧುಕೇಶ್, ಮತ್ತು ಡಾ.ಆರ್.ಎಸ್.ವರುಣ್ ಕುಮಾರ್ ಇವರುಗಳು ಗಣಿತಶಾಸ್ತ್ರದ ಶಾಖ ಮತ್ತು ಸಮೂಹ ವರ್ಗಾವಣೆ (Mathematical Heat and Mass Transfer), ದ್ರವಚನ ಶಾಸ್ತ್ರ (Fluid Science) ವಿಷಯಗಳಲ್ಲಿ ಸಂಶೋಧನೆಯಲ್ಲಿ ತೊಡಗಿದೆ.
ಅಮೇರಿಕಾದ ಪ್ರತಿಷ್ಠಿತ ಸ್ಟ್ಯಾನ್ ಫೋರ್ಡ್ ವಿಶ್ವವಿಜ್ಞಾನಿಗಳ ಪಟ್ಟಿಯಲ್ಲಿರುವ 4 ವಿಜ್ಞಾನಿಗಳು ಪ್ರಸುತ್ತ ರಾಜ್ಯದ ಪ್ರತಿಷ್ಠಿತ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ದಾವಣಗೆರೆಯ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಲ್ಲಿ ಡಾ. ಆರ್.ಜೆ.ಪುನೀತ್ ಗೌಡ, ಬೆಂಗಳೂರಿನ ಅಮೃತ ವಿಶ್ವವಿದ್ಯಾಪೀಠದ ಗಣಿತಶಾಸ್ತ್ರ ವಿಭಾಗದಲ್ಲಿ ಡಾ. ಆರ್.ನವೀನ್ ಕುಮಾರ್, ಡಾ.ಜೆ.ಕೆ.ಮಧುಕೇಶ್ ಮತ್ತು ಡಾ.ಆರ್.ಎಸ್. ವರುಣ್ ಕುಮಾರ್ ಇವರುಗಳು ಸಹಾಯಕ ಪ್ರಾಧ್ಯಾಪಕರುಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆಯೂ ಕೂಡ 2020 ಮತ್ತು 2021ನೇ ಸಾಲಿನಲ್ಲಿ ಬಿಡುಗಡೆಯಾದ ಪಟ್ಟಿಯಲ್ಲಿ ಪ್ರೊ.ಬಿ.ಸಿ.ಪ್ರಸನ್ನ ಕುಮಾರ, ಡಾ.ಆರ್.ಜೆ. ಪುನೀತ್ ಗೌಡ ಹಾಗೂ ಡಾ. ಆರ್.ನವೀನ್ ಕುಮಾರ್ ರವರುಗಳು ಸ್ಥಾನ ಪಡೆದಿದ್ದರು.


ವಿಜ್ಞಾನಿಗಳ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಡಾ.ಬಿ.ಸಿ.ಪ್ರಸನ್ನಕುಮಾರ, ಡಾ.ಆರ್.ಜೆ.ಪುನೀತ್ ಗೌಡ, ಡಾ. ಆರ್. ನವೀನ್ ಕುಮಾರ್, ಡಾ.ಜೆ.ಕೆ.ಮಧುಕೇಶ್ ಮತ್ತು ಡಾ.ಆರ್.ಎಸ್. ವರುಣ್ ಕುಮಾರ್ ಇವರುಗಳಿಗೆ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ ಬಿ.ಡಿ. ಕುಂಬಾರ, ಬಿಐಟಿಇ ಪ್ರಾಂಶುಪಾಲ ಡಾ.ಎಚ್.ಬಿ.ಅರವಿಂದ, ದಾವಣಗೆರೆ ಬಿಐಇಟಿ ನಿರ್ದೇಶಕ ಪ್ರೊ.ವೈ.ವೃಷಭೇಂದ್ರಪ್ಪ, ಅಮೃತ ವಿಶ್ವವಿದ್ಯಾಪೀಠದ ಕುಲಪತಿ ಶ್ರೀ ಮಾತಾ ಅಮೃತಾನಂದಮಯಿ ದೇವಿ, ಸಂಶೋಧನಾ ಡೀನ್ ಕೆ.ವಿ.ನಾಗರಾಜ್ ಹಾಗೂ ಅಮೃತ ವಿಶ್ವವಿದ್ಯಾಪೀಠ ಮತ್ತು ಆಡಳಿತ ವರ್ಗ ಈ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.
