Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Brand Bengaluru | “ನನ್ನ ಸ್ವತ್ತು”, ಸ್ವಯಂ ಚಾಲಿತ ನಕ್ಷೆ ಅನುಮೋದನೆ ಯೋಜನೆ ಜಾರಿ : ಡಿಸಿಎಂ ಡಿ.ಕೆ. ಶಿವಕುಮಾರ್

ನಗರದಲ್ಲಿನ ಎಲ್ಲಾ ಆಸ್ತಿಗಳ ಮರು ಸಮೀಕ್ಷೆ ನಡೆಸಿ, ಆಸ್ತಿ ಪಟ್ಟಿಯನ್ನು ಡಿಜೀಟಲೀಕರಣ ಮಾಡಲು ಡಿಸಿಎಂ ನಿರ್ಧಾರ | ಮರು ಸಮೀಕ್ಷೆ ನಂತರ ಪ್ರಸ್ತುತ ಇರುವ ತೆರಿಗೆ ಸಂಗ್ರಹಕ್ಕಿಂತ ಎರಡು- ಮೂರು ಪಟ್ಟು ಹೆಚ್ಚಾಗಲಿದೆ

by Bengaluru Wire Desk
October 9, 2023
in Bengaluru Focus, News Wire
Reading Time: 2 mins read
0

ಬೆಂಗಳೂರು, ಅ.09 www.bengaluruwire.com : “ಬ್ರ್ಯಾಂಡ್ ಬೆಂಗಳೂರು (Brand Bengaluru) ಯೋಜನೆ ಅಡಿಯಲ್ಲಿ ಬೆಂಗಳೂರಿನ ನಾಗರೀಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ‘ನನ್ನ ಸ್ವತ್ತು’, ‘ಸ್ವಯಂ ಚಾಲಿತ ನಕ್ಷೆ ಅನುಮೋದನೆ’ ಹಾಗೂ ವಾರ್ಡ್ ಮಟ್ಟದಲ್ಲಿ ‘ರಾಜಕೀಯೇತರ ಸಾರ್ವಜನಿಕ ಸಮಿತಿ’ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಬ್ರ್ಯಾಂಡ್ ಬೆಂಗಳೂರು ಯೋಜನೆಯಲ್ಲಿ ಸರ್ಕಾರ ಕೈಗೊಳ್ಳಲಿರುವ ಕ್ರಾಂತಿಕಾರಿ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು.

“ತಕ್ಷಣವೇ ಆಸ್ತಿ ತೆರಿಗೆ ಹೆಚ್ಚಳ ಮಾಡುವ ಆಲೋಚನೆ ಸರ್ಕಾರಕ್ಕಿಲ್ಲ. ಎಲ್ಲಿ ತೆರಿಗೆ ಪೋಲಾಗುತ್ತಿದೆ, ಯಾರು ಕಟ್ಟುತ್ತಿಲ್ಲ. ಹೀಗಾಗಿ ನಗರದಲ್ಲಿ ಆಸ್ತಿಗಳ ಮರು ಸಮೀಕ್ಷೆ ನಡೆಸಿ, ಆಸ್ತಿ ಪಟ್ಟಿಯನ್ನು ಡಿಜೀಟಲೀಕರಣ ಮಾಡಿ ಎಲ್ಲಾ ದಾಖಲೆಗಳು ಜನರಿಗೆ ಸುಲಭವಾಗಿ ಸಿಗುವಂತೆ ಯೋಜನೆ ರೂಪಿಸಲಾಗುವುದು. ಮರು ಸಮೀಕ್ಷೆ ಆದ ನಂತರ ಪ್ರಸ್ತುತ ಇರುವ ತೆರಿಗೆ ಸಂಗ್ರಹಕ್ಕಿಂತ ಎರಡು- ಮೂರು ಪಟ್ಟು ಹೆಚ್ಚಾಗುವ ನಿರೀಕ್ಷೆಯಿದೆ” ಎಂದು ತಿಳಿಸಿದರು.

ಬ್ರ್ಯಾಂಡ್ ಬೆಂಗಳೂರು ಸಮಾವೇಶ ಉದ್ಘಾಟಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಿಎಂ ಕಾರ್ಯದರ್ಶಿ ಜಯರಾಮ್ ಸೇರಿದಂತೆ ಮತ್ತಿತರರು ಚಿತ್ರದಲ್ಲಿದ್ದಾರೆ.

“ಮನೆ ನಿರ್ಮಾಣದ ನಕ್ಷೆ ಅನುಮೋದನೆ (Plan Sanction)  ನೀಡುವ ವಿಚಾರದಲ್ಲಿ, ಸ್ವಯಂ ಚಾಲಿತ ನಕ್ಷೆ ಮಂಜೂರಾತಿ ಗೆ ಚಾಲನೆ ನೀಡಲು ಚಿಂತಿಸಿದ್ದೇವೆ. ಇದರಿಂದ ಮನೆ ಕತ್ತಲು ಪ್ಲಾನ್ ಅನುಮೋದನೆ ಪಡೆಯಲು ಸರ್ಕಾರಿ ಕಚೇರಿ ಅಲೆಯುವಂತಿಲ್ಲ” ಎಂದು ವಿವರಿಸಿದರು.

“ಪ್ರತಿ ವಾರ್ಡ್  ಉದ್ಯಾನವನ, ಆಟದ ಮೈದಾನಗಳ ನಿರ್ವಹಣೆಗೆ “ರಾಜಕೀಯೇತರ ಸಾರ್ವಜನಿಕರ ಸಮಿತಿ” ಮಾಡುವ ಆಲೋಚನೆಯಿದ್ದು, ಅದಕ್ಕೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಿ, ಜನರೇ ಸೇರಿ ಉದ್ಯಾನ ಮತ್ತು ಆಟದ ಮೈದಾನಗಳನ್ನು ಸ್ಥಳೀಯ ಸಿಎಸ್ಆರ್ ನಿಧಿ ಬಳಸಿ ಅಭಿವೃದ್ದಿ ಮಾಡುವ, ಒತ್ತುವರಿಯಿಂದ ರಕ್ಷಣೆ ಮಾಡುವ ಯೋಜನೆಯ ಬಗ್ಗೆ ಚಿಂತನೆ ನಡೆಯುತ್ತಿದ್ದು, ಸ್ಥಳೀಯ ಶಾಸಕರ ಬಳಿ ಚರ್ಚೆ ಮಾಡಿ ನೀತಿ ನಿರೂಪಣೆ ತಯಾರು ಮಾಡಲಾಗುವುದು” ಎಂದರು.

ಸಮಾವೇಶದಲ್ಲಿ ಬ್ರ್ಯಾಂಡ್ ಬೆಂಗಳೂರು ಲಾಂಛನ ಬಿಡುಗಡೆ ಮಾಡಲಾಯಿತು.

“ಸಂಚಾರ ದಟ್ಟಣೆ ನಿವಾರಣೆ, ತೆರಿಗೆ ಸಂಗ್ರಹ ಹೆಚ್ಚಳ, ಕಸ ವಿಲೇವಾರಿ ಈ ಮೂರು ವಿಚಾರಗಳೇ ಸರ್ಕಾರದ ಹಾಗೂ ನನ್ನ ಪ್ರಮುಖ ಗುರಿ” ಎಂದು ತಿಳಿಸಿದರು.

“ಸಾರ್ವಜನಿಕ ಕುಂದು- ಕೊರತೆ, ದೂರುಗಳ ವಿಚಾರಗಳಿಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ದಿ ಸಚಿವರ ಕಚೇರಿಯಿಂದಲೇ ನೇರವಾಗಿ ನಿರ್ವಹಣೆ ಮಾಡುವ ಆಲೋಚನೆಯಿದೆ. “ಸಹಾಯಹಸ್ತ” ಎನ್ನುವ ವೆಬ್ಸೈಟ್ ಅಭಿವೃದ್ದಿ ಮಾಡುತ್ತಿದ್ದು, ಇದರಿಂದ ನಾವೇ ನೇರವಾಗಿ ಎಲ್ಲಾ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ಅಗತ್ಯ ಪರಿಹಾರ ನೀಡುವ ಯೋಚನೆಯಿದೆ. ಜನರು ಪಾಲಿಕೆಗೆ ಮನವಿ ನೀಡಿ ಕಾಯುವ ಕೆಲಸ ಹೊಸ ಆಲೋಚನೆಯಿಂದ ತಪ್ಪುತ್ತದೆ” ಎಂದು ತಿಳಿಸಿದರು.

“ಸಂಚಾರ ದಟ್ಟಣೆ ಕಡಿಮೆ ಮಾಡಲು ಮೇಲ್ಸೆತುವೆ, ಮೆಟ್ರೋ ಹಾಗೂ ಸುರಂಗ ರಸ್ತೆ ಈ ಮೂರು ಬಗೆಯ ಪರಿಹಾರ ಮಾತ್ರ ಇರುವುದು. ಈಗ ರಸ್ತೆ ಅಗಲೀಕರಣ ಕಷ್ಟದ ಕೆಲಸ, ಭೂಸ್ವಾದೀನದ ಬೆಲೆ ಹೊಸ ಕಾನೂನು ಬಂದ ನಂತರ ಹೆಚ್ಚಳವಾಗಿದೆ. ಜನ ನಮಗೆ ಸಹಕಾರ ನೀಡುವುದು ಸಹ ಕಷ್ಟವಾಗುತ್ತದೆ. ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಹೆಚ್ಚು ಸಂಚಾರ ದಟ್ಟಣೆ ಉಂಟಾಗುತ್ತಿರುವ ಐಟಿ ಪಾರ್ಕ್ ಉದ್ಯೋಗಿಗಳ ಕಚೇರಿ ಸಮಯ ಹಾಗೂ ಶಾಲೆಗಳ ಸಮಯದಲ್ಲಿ ಬದಲಾವಣೆ ಬಗ್ಗೆ ಚರ್ಚೆ ನಡೆಸಲು ಸಂಚಾರಿ ಪೊಲೀಸ್ ವಿಭಾಗಕ್ಕೆ ಸೂಚಿಸಲಾಗಿದ್ದು, ಅವರು ಚರ್ಚೆ ನಡೆಸಿ ಒಂದು ತೀರ್ಮಾನಕ್ಕೆ ಬಂದು ವರದಿ ಸಲ್ಲಿಸಲಿದ್ದಾರೆ” ಎಂದು ತಿಳಿಸಿದರು.

ಬೆಂಗಳೂರಿನ ಸ್ಥೂಲ ಚಿತ್ರಣದ ಪ್ರತಿಕೃತಿಯ ಬಗ್ಗೆ ನಗರಾಭಿವೃದ್ಧಿ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ವಿವರಿಸುತ್ತಿರುವ ಚಿತ್ರ.

“ರಾಜಕಾಲುವೆ ವಿಚಾರವಾಗಿ ಬಿಬಿಎಂಪಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ನೀರು ಹರಿಯಲು ಎಲ್ಲೆಲ್ಲಿ ತೊಡಕುಂಟಾಗಿದೆ ಅಲ್ಲೆಲ್ಲಾ ಮುಂಚಿತವಾಗಿಯೇ ಒತ್ತುವರಿ ತೆರವುಗೊಳಿಸಲು ಸೂಚಿಸಲಾಗಿದೆ” ಎಂದು ಹೇಳಿದರು.

“ಘನತ್ಯಾಜ್ಯ ನಿರ್ವಹಣೆ ವಿಚಾರದಲ್ಲಿ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಯೋಜನೆ ರೂಪಿಸುತ್ತಿದ್ದೇವೆ. ಕಸವನ್ನು ಒಂದು ಕಡೆ ಮಾತ್ರ ಹಾಕಲಾಗುತ್ತಿದ್ದು ಸರಿಯಾಗಿ ವಿಂಗಡಣೆಯಾಗುತ್ತಿಲ್ಲ. ಆದ ಕಾರಣ ಪರಿಸರ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳ ಸಭೆಯನ್ನು ಮಂಗಳವಾರ (ಅ.10) ಕರೆಯಲಾಗಿದೆ. ಒಮ್ಮೆ ಕಸವನ್ನು ಒಂದು ಕಡೆ ಹಾಕಿದರೆ ಮುಂದಿನ 50 ವರ್ಷಗಳು ಆ ಸ್ಥಳದಲ್ಲಿ ಯಾವುದೇ ಯೋಜನೆಗಳನ್ನು ಹಾಕಿಕೊಳ್ಳಬಾರದು. ಆ ಸ್ಥಳದಲ್ಲೇ ಕಸವನ್ನು ಗೊಬ್ಬರ ಹಾಗೂ ವೈಜ್ಞಾನಿಕ ವಿಂಗಡಣೆ ಮಾಡಲಾಗುವುದು” ಎಂದು ಹೇಳಿದರು.

“750 ದಶಲಕ್ಷ ಲೀ. ನೀರು ಪೂರೈಸುವ ಕಾವೇರಿ 5 ನೇ ಹಂತ ಕಾಮಗಾರಿ ಮುಕ್ತಾಯ ಹಂತಕ್ಕೆ ಬಂದಿದ್ದು, ಇದರಿಂದ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿದಂತಾಗುತ್ತದೆ. 20 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಸ್ಥಾಪನೆ ಮಾಡಲಾಗುತ್ತಿದ್ದು, ಒಳಚರಂಡಿ ನೀರಿನ ಶುದ್ದೀಕರಣ ಮಾಡುವ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಅನೇಕಲ್, ಅತ್ತಿಬೆಲೆ ಹಾಗೂ 110 ಹಳ್ಳಿಗಳಿಗೆ ಶೀಘ್ರ ಕಾವೇರಿ ನೀರು ನೀಡಲಾಗುವುದು” ಎಂದು ತಿಳಿಸಿದರು.

“ಬಿಡಿಎ ಅಪಾರ್ಟ್ಮೆಂಟ್ ಮತ್ತು ನಿವೇಶನಗಳ ಕುರಿತು ಎರಡು ದಿನಗಳಲ್ಲಿ ಪತ್ರಿಕಾಗೋಷ್ಟಿ ಕರೆದು ವಿವರಣೆ ನೀಡಲಾಗುವುದು. ಇದರ ಬಗ್ಗೆ ವಿಶೇಷವಾದ ಯೋಜನೆ ರೂಪಿಸುತ್ತಿದ್ದು ಪ್ರತ್ಯೇಕ ಚರ್ಚೆ ನಡೆಸಲಾಗುವುದು” ಎಂದು ತಿಳಿಸಿದರು. 

“ಬೆಂಗಳೂರು ಯೋಜಿತವಾದ ನಗರವಲ್ಲ, ಒಂದಷ್ಟು ಭಾಗ ಮಾತ್ರ ಸಮರ್ಪಕವಾಗಿತ್ತು, ಆನಂತರ ಬೆಳೆದು, ಈಗ 28  ವಿಧಾನಸಭಾ ಕ್ಷೇತ್ರಗಳು ಒಳಗೆ ಸೇರಿಕೊಂಡಿವೆ. ಪ್ರತಿ ವರ್ಷ 2- 3 ಲಕ್ಷ ಜನರು ಹೊರಗಿನಿಂದ ಬಂದು ಬೆಂಗಳೂರು ಸೇರಿಕೊಳ್ಳುತ್ತಿದ್ದಾರೆ. 1.48  ಕೋಟಿ ಜನ ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದು ಎಲ್ಲರೂ ವಾಸಿಸುವ ಯೋಗ್ಯ ನಗರವನ್ನಾಗಿ ರೂಪಿಸಲಾಗುವುದು.

ಬ್ರ್ಯಾಂಡ್ ಬೆಂಗಳೂರು ಸಮಾವೇಶ ನಡೆದ ನಗರದ ಜ್ಞಾನಭಾರತಿ ಸಭಾಂಗಣದಲ್ಲಿ ಸೇರಿದ್ದ ಜನಸ್ತೋಮ.

ವಿದ್ಯುತ್ ಸಂಪರ್ಕಗಳು ಎಷ್ಟು ಹೆಚ್ಚಳವಾಗುತ್ತಿವೆ ಎನ್ನುವ ಆಧಾರದ ಮೇಲೆ ಅಂದಾಜು ಸಿಗುತ್ತಿದೆ. ಕುಡಿಯುವ ನೀರು, ಸಂಚಾರ ದಟ್ಟಣೆ ಸೇರಿದಂತೆ ಅನೇಕ ಸಮಸ್ಯೆಗಳು ಹೆಚ್ಚುತ್ತಿದ್ದು, ಇದರ ನಿವಾರಣೆಗೆ 8 ತಂಡಗಳನ್ನು ಮಾಡಿದ್ದು ಅವುಗಳು ನೀಡುವ ವರದಿಯ ಮೇಲೆ ಯೋಜನೆ ರೂಪಿಸಲಾಗುವುದು” ಎಂದು ತಿಳಿಸಿದರು.

ಸ್ವಂತ ಮನೆ ಕಟ್ಟುವವರಿಗೆ ಸ್ವಯಂಚಾಲಿತ ನಕ್ಷೆ ಮಂಜೂರಾತಿ ಅನುಕೂಲಕಾರಿ :

ಮನೆ ಕಟ್ಟುವಾಗ ಸ್ವಯಂಚಾಲಿತ ನಕ್ಷೆ ಮಂಜೂರಾತಿ ಹೇಗೆ ಕೆಲಸ ಮಾಡುತ್ತದೆ ಎಂದು ಕೇಳಿದಾಗ, “ಬೆಂಗಳೂರಿನಲ್ಲಿ ಬಿಡಿಎಯಿಂದ ಹಂಚಿಕೆ ಮಾಡುತ್ತಿರುವ ದೊಡ್ಡ ನಿವೇಶನಗಳಲ್ಲಿ 50/ 60 ಅಳತೆಯ ನಿವೇಶನಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತಿದೆ. ಸದಾಶಿವನಗರ ಹಾಗೂ ಎರಡು ಮೂರು ಕಡೆ ಮಾತ್ರ ದೊಡ್ಡ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ.

ಪ್ರಮಾಣಿಕೃತ ಯೋಜನಾ ತಜ್ಞರು, ವಿನ್ಯಾಸಕಾರರೇ ಯೋಜನೆ ತಯಾರಿಸಿ ಅಪ್ಲೋಡ್ ಮಾಡಿದರೆ, ಆ ಯೋಜನೆ ಸರಿಯಾಗಿದ್ದರೆ ಕಂಪ್ಯೂಟರ್ ಅದನ್ನು ಪ್ರಮಾಣೀಕರಿಸಿ ಒಪ್ಪಿಗೆ ನೀಡುತ್ತದೆ. ಇದರಿಂದ ಜನರು ಕಚೇರಿಗೆ ಅಲೆಯುವುದು ತಪ್ಪುತ್ತದೆ. ನಿಗಧಿತ ಶುಲ್ಕ ಪಾವತಿ ಮಾಡಿದರೆ ಸಾಕು, ನೇರವಾಗಿ ಯೋಜನೆಯ ನಕ್ಷೆ ಕೈ ಸೇರುತ್ತದೆ. ಅಪಾರ್ಟ್ ಮೆಂಟ್ ನಿರ್ಮಾಣಕ್ಕೆ ಇದು ಅನ್ವಯವಾಗುವುದಿಲ್ಲ. ಸ್ವಂತ ಮನೆ ಕಟ್ಟುವವರಿಗೆ ಇದು ಹೆಚ್ಚು ಉಪಯೋಗವಾಗುತ್ತದೆ. ಎಲ್ಲಾ ಕಟ್ಟಡ ವಾಸ್ತುಶಿಲ್ಫಿಗಳಿಗೆ ಅವಕಾಶವಿಲ್ಲ. ಪ್ರಮಾಣೀಕೃತರಿಗೆ ಮಾತ್ರ ಅವಕಾಶ” ಎಂದು ತಿಳಿಸಿದರು.

ಆಸ್ತಿ ತೆರಿಗೆ ಸಂಗ್ರಹಕ್ಕೆ ಹೊಸ ತಂಡ :

ಸ್ವಯಂ ಆಸ್ತಿ ತೆರಿಗೆ ಘೋಷಣೆ ಹಳಿ ತಪ್ಪುತ್ತಿದೆಯೇ ಎಂದು ಕೇಳಿದಾಗ, “ಹೌದು, ಜನರು ತಮ್ಮ ಸ್ವಂತ ಆಸ್ತಿ ಘೋಷಣೆ ವೇಳೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. 5,000 ಚದರ ಅಡಿ ಕಟ್ಟಡವಿದ್ದರೆ 2,೦೦೦ ಚದರ ಅಡಿ ಮಾತ್ರ ಘೋಷಣೆ ಮಾಡಿಕೊಳ್ಳುತ್ತಿದ್ದಾರೆ. ವಿದ್ಯುತ್, ನೀರಿನ ಬಿಲ್ ಬಳಕೆಯಿಂದ ತಪ್ಪು ಆಸ್ತಿ ಘೋಷಣೆ ಮಾಡುತ್ತಿರುವುದು ತಿಳಿಯುತ್ತಿದೆ. ಶೀಘ್ರ ಈ ಸಮಸ್ಯೆ ನಿವಾರಣೆಗೆ ಯೋಜನೆ ರೂಪಿಸಲಾಗುವುದು. ಮಂಗಳೂರಿನಲ್ಲಿ ಈ ಬಗ್ಗೆ ಯೋಜನೆಯಿದ್ದು, ಎಲ್ಲದರ ಬದಲಾಗಿ ನಾನೇ ಖುದ್ದಾಗಿ ಆಸ್ತಿ ತೆರಿಗೆ ಸಂಗ್ರಹಕ್ಕೆ ಹೊಸ ತಂಡ ಮಾಡುತ್ತಿದ್ದೇನೆ” ಎಂದರು.

ರಸ್ತೆಗುಂಡಿ ಸಮಸ್ಯೆಗೆ ಮತ್ತೊಂದು ಡಿಜಿಟಲ್ ವೇದಿಕೆ ಅಗತ್ಯವೇ?:

ರಸ್ತೆಗುಂಡಿ ಸಮಸ್ಯೆಗೆ ಈಗಾಗಲೇ ಆಪ್ ಇದ್ದು, ಇಲ್ಲಿ ಬರುವ ದೂರುಗಳನ್ನೇ ನಿರ್ವಹಣೆ ಮಾಡಲು ಆಗುತ್ತಿಲ್ಲ. ಈಗ ಮತ್ತೊಂದು ಡಿಜಿಟಲ್ ವೇದಿಕೆ ಸೃಷ್ಟಿಸುವ ಅಗತ್ಯವಿದೆಯೇ ಎಂದು ಕೇಳಿದಾಗ, “ಹೊಸ ವೇದಿಕೆಯಲ್ಲಿ ಪೊಲೀಸರನ್ನು ಒಳಗೊಂಡು ಯೋಜನೆ ರೂಪಿಸಲಾಗಿದೆ. ಪ್ರತಿ ಏರಿಯಾಗಳ ಸಂಚಾರಿ ಪೊಲೀಸರು ಗಮನ ಹರಿಸಿ ಸಮಸ್ಯೆ ಇರುವ ಸ್ಥಳಗಳ ಬಗ್ಗೆ ಮಾಹಿತಿ ನೀಡುತ್ತಾರೆ. ಅನೇಕ ಕಡೆ ಸಾರ್ವಜನಿಕರು ಮಾಹಿತಿ ನೀಡುತ್ತಿದ್ದಾರೆ. ಕೆಲವು ಕಡೆ ನೀಡುತ್ತಿಲ್ಲ. ಪಾಲಿಕೆ ಹಾಗೂ ಸಂಚಾರಿ ಪೊಲೀಸ್ ಇಲಾಖೆ ಜಂಟಿಯಾಗಿ ಕೆಲಸ ಮಾಡಲಿವೆ”

ಕೆರೆ ಒತ್ತುವರಿ ತೆರವು ಕೆಲಸ ನಡೆಯುತ್ತಿದೆ :

ಕೆರೆಗಳ ಒತ್ತುವರಿ, ಕೆರೆಗಳ ನಿರ್ವಹಣೆಗೆ ಹಣ ಮತ್ತು ಇಂಜಿನಿಯರ್ ಗಳ ಕೊರತೆ  ಸೇರಿದಂತೆ ಬೆಂಗಳೂರಿನ ಕೆರೆಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿವೆಯಲ್ಲಾ ಎಂದು ಮಾಧ್ಯಮದವರು ಕೇಳಿದಾಗ, “ಈಗಾಗಲೇ ಕೆರೆ ಅಭಿವೃದ್ಧಿ ಪ್ರಾಧಿಕಾರ ಚಾಲ್ತಿಯಲ್ಲಿದೆ. ಆದ್ಯತೆಯ ಮೇರೆಗೆ ಕೆರೆಗಳನ್ನು ಸ್ವಚ್ಚಗೊಳಿಸುವ, ಒತ್ತುವರಿ ತೆರವು ಮಾಡುವ ಕೆಲಸ ನಡೆಯುತ್ತಿದೆ. ಕೆರಗಳಿಗೆ ಕೊಳಚೆ ನೀರು ಹರಿಯದಂತೆ ಕೆಲಸ ಮಾಡಲಾಗುತ್ತದೆ” ಎಂದು ಉತ್ತರಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಎನ್.ಎ.ಹ್ಯಾರೀಸ್, ದಿನೇಶ್ ಗೂಳಿಗೌಡ, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಮ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಎಂಆರ್ ಸಿಎಲ್ ಎಂ.ಡಿ. ಅಂಜುಮ್ ಪರ್ವೆಜ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್, ಬಿಬಿಎಂಪಿ ವಿಶೇಷ ಆಯುಕ್ತರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Namma Metro News | ಇಂದಿನಿಂದ ಚಲ್ಲಘಟ್ಟದಿಂದ ವೈಟ್‌ಫೀಲ್ಡ್‌ವರೆಗೆ ನೇರಳೆ ಮಾರ್ಗದಲ್ಲಿ ಸಂಪೂರ್ಣ ಮೆಟ್ರೋ ಸಂಚಾರ ಆರಂಭ : ಟಿಕೆಟ್ ದರ, ಸಮಯದ ಮಾಹಿತಿ ಇಲ್ಲಿದೆ

Next Post

Crime News | ಬೆಂಗಳೂರು : ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಬಸ್ ಶೆಲ್ಟರ್ ಕಳ್ಳತನ ಪ್ರಕರಣಕ್ಕೆ ಹೊಸ ಟ್ವಿಸ್ಟ್ ; ಅಸಲಿಗೆ ನಡೆದದ್ದೇನು?

Next Post

Crime News | ಬೆಂಗಳೂರು : ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಬಸ್ ಶೆಲ್ಟರ್ ಕಳ್ಳತನ ಪ್ರಕರಣಕ್ಕೆ ಹೊಸ ಟ್ವಿಸ್ಟ್ ; ಅಸಲಿಗೆ ನಡೆದದ್ದೇನು?

PM Narendra Modi | ಆದಿ ಕೈಲಾಸದ ಶಿಖರದ ಮುಂದೆ ಧ್ಯಾನದಲ್ಲಿ ತಲ್ಲೀನರಾದ ಪ್ರಧಾನಿ ನರೇಂದ್ರ ಮೋದಿ!!

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d