Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Cyber Crime News | ನಿಮ್ಮ ದುಡಿಮೆಯ ಹಣ ಸೈಲೆಂಟಾಗಿ ಸೈಬರ್ ವಂಚಕರ ಪಾಲಾಗುತ್ತಿದೆ ಎಚ್ಚರ : OTP ಬರದಂತೆ ಹಣ ಕದಿಯುವ ಖತರ್ ನಾಕ್ ಸೈಬರ್ ವಂಚಕರು!!: ಈ ಸಮಸ್ಯೆಗೆ ಇಲ್ಲಿದೆ ಪರಿಹಾರ

ದೇಶದಲ್ಲಿ 2019 ರಲ್ಲಿ 44,735, ಅದೇ ರೀತಿ 2020ನೇ ಇಸವಿಯಲ್ಲಿ 50,035 ಮತ್ತು 2021 ರಲ್ಲಿ 52,974 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿದೆ ಎನ್ನುತ್ತದೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ.

by Bengaluru Wire Desk
October 13, 2023
in News Wire, Public interest
Reading Time: 1 min read
0
Online Use

ಸೈಬರ್ ಕ್ರೈಮ್ ಕುರಿತ ಗ್ರಾಫಿಕ್ ಚಿತ್ರ (ಸಾಂದರ್ಭಿಕ ಚಿತ್ರ)

ಬೆಂಗಳೂರು, ಅ.13 www.bengaluruwire.com : ಸೈಬರ್ ಕ್ರೈಮ್ ನಲ್ಲಿ ಇತ್ತೀಚೆಗೆ ಬ್ಯಾಂಕ್ ಖಾತೆ ಹೊಂದಿದವರ ಗಮನಕ್ಕೆ ಬಾರದೆ ಎಷ್ಟೋ ಜನರು ಹಣ ಕಳೆದುಕೊಳ್ಳುತ್ತಿರುವ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಹಣಕಾಸು ವಹಿವಾಟು ನಡೆಸುವವರು ಸೈಬರ್ ಅಪರಾಧ ಮಾಡುವವರ ಜಾಲಕ್ಕೆ ಸುಲಭವಾಗಿ ಸಿಕ್ಕಿಬೀಳುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಆಧಾರ್ ಕಾರ್ಡ್ ನೋಂದಾಯಿಸುವಾಗ ನಾವು ನೀಡಿದ ಬಯೋಮೆಟ್ರಿಕ್ಸ್ (ಬರಳಚ್ಚು) ಕಾರಣ ಎನ್ನುತ್ತಿದ್ದಾರೆ ಸೈಬರ್ ಕ್ರೈಮ್ ಪೊಲೀಸರು.

ಆಧಾರ್ ಕಾರ್ಡ್ ದತ್ತಾಂಶವನ್ನು ಬಳಸಿಕೊಂಡು ಆಧಾರ್ ಆಧಾರಿತ ಪಾವತಿ ವ್ಯವಸ್ಥೆ (Aadhar Enable Payment System – AEPS) ಮೂಲಕ ಹಣ ಪಾವತಿ, ಹಣ ತೆಗೆಯುವುದು, ನಗದು ಬಾಕಿ ವಿಚಾರಣೆ, ಹಣದ ಸಣ್ಣ ವಹಿವಾಟು ವಿವರ, ನಗದು ವರ್ಗಾವಣೆ, ದೃಢೀಕರಣ, ಭೀಮ್ ಆಧಾರ್ ಪೇ, ಇ-ಕೆವೈಸಿ, ಮೊಬೈಲ್ ಸಿಮ್ ಖರೀದಿ ಹೀಗೆ ಹಲವು ಸೇವೆಗಳನ್ನು ಪಡೆಯಬಹುದು. ಸೈಬರ್ ವಂಚಕರು ಆಧಾರ್ ಕಾರ್ಡ್ ನಲ್ಲಿರುವ ವ್ಯಕ್ತಿಯ ವೈಯುಕ್ತಿಕ ವಿವರವಾದ ಫಿಂಗರ್ ಪ್ರಿಂಟ್ (ಬೆರಳಚ್ಚು) ದತ್ತಾಂಶವನ್ನೇ ಕದ್ದು (Hack) ಆ ಮೂಲಕ ಯಾವುದೇ ಮೊಬೈಲ್ ಒಂದು ಬಾರಿಯ ಪಾಸ್ ವರ್ಡ್ (OTP) ಸಹಾಯವಿಲ್ಲದೇ, ವ್ಯಕ್ತಿಯ ಬ್ಯಾಂಕ್ ಖಾತೆ ಅಥವಾ ಹಣಕಾಸು ಸಂಸ್ಥೆಗಳಲ್ಲಿಟ್ಟ, ವ್ಯಾಲೇಟ್ ನಲ್ಲಿರುವ ಹಣವನ್ನು ದೋಚುತ್ತಿದ್ದಾರೆ.

ಇದಕ್ಕೆ ಪರಿಹಾರವೇನು? :

ತಾವು ಕಷ್ಟಪಟ್ಟು ಕೂಡಿಟ್ಟ ಹಣವನ್ನು ಸೈಬರ್ ವಂಚಕರು ಹ್ಯಾಕ್ ಮಾಡುತ್ತಿರುವುದನ್ನು ತಪ್ಪಿಸಲು, https://myaadhaar.uidai.gov.in ಎಂಬ ವೆಬ್ ಸೈಟ್ ಮೂಲಕ ನಿಮ್ಮ ಹಾಗೂ ನಿಮ್ಮ ಕುಟುಂಬದವರ ಬಯೋಮೆಟ್ರಿಕ್ ಲಾಕ್ ಮಾಡಬಹುದು ಅಥವಾ ನಿಮ್ಮ ಹತ್ತಿರದ ಸ್ಥಳೀಯ ಆಧಾರ್ ಸೇವಾ ಕೇಂದ್ರಕ್ಕೆ ತೆರಳಿ ನಿಮ್ಮ ಆಧಾರ್ ಕಾರ್ಡ್ ಬಯೋಮೆಟ್ರಿಕ್ ಅನ್ನು ಲಾಕ್ ಮಾಡಿಸಿ, ಸಾಧ್ಯವಾದಷ್ಟು ಫಿಂಗರ್ ಪ್ರಿಂಟ್ ಕೋರುವ ಯಾವುದೇ ಮೊಬೈಲ್ ಅಪ್ಲಿಕೇಷನ್ ಅನ್ನು ನಿಮ್ಮ ಮೊಬೈಲ್ ನಲ್ಲಿ ಬಳಕೆ ಮಾಡದಿದ್ದರೆ ಒಳಿತು. ಒಂದು ವೇಳೆ ನೀವು ಎಇಪಿಎಸ್ ಮೂಲಕ ವಂಚನೆಗೆ ಒಳಗಾದಲ್ಲಿ ತಕ್ಷಣವೇ 1930 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಅಥವಾ https://cybercrime.gov.in ವೆಬ್ ಸೈಟ್ ನಲ್ಲಿ ನೇರವಾಗಿ ದೂರು ದಾಖಲಿಸಬಹುದು.

ಬಳ್ಳಾರಿ ಜಿಲ್ಲೆಯ ಪೊಲೀಸ್ ಅಧೀಕ್ಷಕರು ಅ.10ರಂದು ಆಧಾರ್ ಆಧಾರಿತ ಬಯೋಮೆಟ್ರಿಕ್ ದತ್ತಾಂಶ ಬಳಸಿಕೊಂಡು ಸೈಬರ್ ವಂಚನೆಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಹೆಚ್ಚಿನ ಗಮನವಹಿಸುವಂತೆ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ.

ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ದೇಶದಲ್ಲಿ 2021ರಲ್ಲಿ 53 ಸಾವಿರ ಸೈಬರ್ ಅಪರಾಧ ಪ್ರಕರಣ ದಾಖಲು :

ದೇಶದಲ್ಲಿ ಅಪರಾಧಗಳ ಅಂಕಿ-ಅಂಶಗಳನ್ನು ಸಂಗ್ರಹಿಸಿ ಪ್ರಕಟಿಸುವ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB), ಭಾರತದಲ್ಲಿ ಸೈಬರ್ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ ಕೆಲವು ವಿವರಗಳನ್ನು ಬಹಿರಂಗಪಡಿಸಿದೆ. ಅದೇನೆಂದರೆ 2019 ರಲ್ಲಿ 44,735, ಅದೇ ರೀತಿ 2020ನೇ ಇಸವಿಯಲ್ಲಿ 50,035 ಮತ್ತು 2021 ರಲ್ಲಿ 52,974 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿದೆ ಎಂದು ತಿಳಿಸಿದೆ. ಇನ್ನು ಅದೇ ವರ್ಷಗಳಲ್ಲಿ ಸೈಬರ್ ವಂಚನೆ (Cyber Fraud) ಪ್ರಕರಣಗಳ ಸಂಖ್ಯೆ ಕ್ರಮವಾಗಿ 6,229, 10,395 ಮತ್ತು 14,007 ದಾಖಲಾಗಿದೆ. ಭಾರತೀಯ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (CERT-In, ಇದು ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯದ ಅಡಿಯಲ್ಲಿ ಬರುವ ಸಂಸ್ಥೆ)  2019ನೇ ಇಸವಿಯಲ್ಲಿ 11,58,208 ಹಾಗೂ 2020ನೇ ಇಸವಿಯಲ್ಲಿ 14,02,809 ಮತ್ತು 2021ನೇ ಸಾಲಿನಲ್ಲಿ ಒಟ್ಟು 13,91,457 ಸಂಖ್ಯೆಯ ಸೈಬರ್ ಭದ್ರತಾ ಘಟನೆಗಳು ಅಂದರೆ ಫಿಶಿಂಗ್, ದುರುದ್ದೇಶಪೂರಿತ ಮೊಬೈಲ್ ಅಪ್ಲಿಕೇಶನ್‌ಗಳು ಮತ್ತು ರಾನ್ ಸಮ್ವೇರ್ (ransomware) ಪ್ರಕರಣಗಳು ನಡೆದಿದ್ದು, ಅದನ್ನು ಸಿಇಆರ್ ಟಿ-ಇನ್ ಗಮನಿಸಿ ಅವುಗಳನ್ನು ನಿರ್ವಹಿಸಿದೆ.

ದೇಶದಲ್ಲಿರೋದು ಕೇವಲ 312 ಸೈಬರ್ ಕ್ರೈಮ್ ಸ್ಟೇಷನ್ ಗಳು :

ಇತ್ತೀಚಿನ ದಿನಗಳಲ್ಲಿ ಬ್ಯಾಂಕ್‌ಗಳು ಮತ್ತು ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಂದ (ಎನ್‌ಬಿಎಫ್‌ಐ) ಸಂಗ್ರಹಿಸಿದ ಅಧಿಕೃತ ಮಾಹಿತಿ ಬಹಿರಂಗವಾಗಿದೆ. ಬ್ಯಾಂಕ್‌ಗಳು ಮತ್ತು ಎನ್‌ಬಿಎಫ್‌ಐಗಳು ವರದಿ ಮಾಡಿದಂತೆ,  2021 ಆರ್ಥಿಕ ವರ್ಷದಲ್ಲಿ, ವಂಚನೆಯ ಪ್ರಕರಣಗಳು 7.05 ಲಕ್ಷದಷ್ಟಿದ್ದು, ಅದರ ಮೌಲ್ಯ 542.7 ಕೋಟಿ ರೂ.ಗಳಾಗಿದೆ. ಇನ್ನು ಆರ್ಥಿಕ ವರ್ಷ 2022 ರಲ್ಲಿ, ವಂಚನೆ ಪ್ರಕರಣಗಳು 12.27 ಲಕ್ಷಕ್ಕೆ ಏರಿತು, ಅದರ ಒಟ್ಟು ಮೌಲ್ಯವು 1,357.06 ಕೋಟಿ ರೂ., ಇನ್ನು 2023ನೇ ಆರ್ಥಿಕ ವರ್ಷದಲ್ಲಿ ಅವುಗಳ ಸಂಖ್ಯೆ 19.94 ಲಕ್ಷಕ್ಕೆ ಏರಿತು, ಈ ವಂಚನೆ ಪ್ರಕರಣಗಳ ಮೌಲ್ಯ 2,537.35 ಕೋಟಿ ರೂ.ಗಳಾಗಿತ್ತು. 2021 ರಲ್ಲಿ, ಎಟಿಎಂ ಮತ್ತು ಇತರರ ಪ್ರಕರಣಗಳಲ್ಲಿ ವರದಿಯಾದ ಒಟ್ಟು ವಂಚನೆಗಳ ಸಂಖ್ಯೆ ಸುಮಾರು 10.8 ಲಕ್ಷ, ವಂಚನೆಯಾದ ಮೌಲ್ಯ 1,119 ಕೋಟಿ ರೂ. ಅಂದರೆ, ಪ್ರತಿ 67,000 ಎಟಿಎಂ ವಹಿವಾಟಿಗೆ ಒಂದು ವಂಚನೆ ನಡೆಯುತ್ತಿದೆ. ಇದೊಂದು ಗಂಭೀರವಾದ ವಿಚಾರ. ಸೈಬರ್ ವಂಚನೆಗಳು ದಿನೇ ದಿನೇ ಹೆಚ್ಚಾಗುತ್ತಿದ್ದರೂ, ಭಾರತದಲ್ಲಿ ಕೇವಲ 312 ಸೈಬರ್ ಪೊಲೀಸ್ ಠಾಣೆಗಳು ಮತ್ತು ಅಪರಾಧಗಳನ್ನು ಎದುರಿಸಲು ಬಲವಾದ ಕಾನೂನುಗಳ ಕೊರತೆಯಿದೆ.

ರಾನ್ ಸಮ್ವೇರ್ ಎಂದರೇನು? :

ರಾನ್ ಸಮ್ವೇರ್ ಒಂದು ರೀತಿಯ ಕ್ರಿಪ್ಟೋವೈರಲಾಜಿಕಲ್ ಮಾಲ್‌ವೇರ್ ಆಗಿದ್ದು ಅದು ವ್ಯಕ್ತಿಯೊಬ್ಬನ ವೈಯಕ್ತಿಕ ಡೇಟಾವನ್ನು ಪ್ರಕಟಿಸಲು ಅಥವಾ ಸುಲಿಗೆ ಪಾವತಿಸದ ಹೊರತು ಅವರಿಗೆ ತಮ್ಮ ಅಂತರ್ಜಾಲ ಖಾತೆಯ ಪ್ರವೇಶವನ್ನು ಶಾಶ್ವತವಾಗಿ ನಿರ್ಬಂಧಿಸುವ ಕುರಿತಂತೆ ಬೆದರಿಕೆ ಹಾಕುತ್ತದೆ.

WhatsApp Join our WhatsApp Channel
Previous Post

PM Narendra Modi | ಆದಿ ಕೈಲಾಸದ ಶಿಖರದ ಮುಂದೆ ಧ್ಯಾನದಲ್ಲಿ ತಲ್ಲೀನರಾದ ಪ್ರಧಾನಿ ನರೇಂದ್ರ ಮೋದಿ!!

Next Post

BW SPECIAL | ಬಿಬಿಎಂಪಿಯ ಕೋಟ್ಯಾಂತರ ರೂ. ಮೌಲ್ಯದ ಆಸ್ತಿಗಳು ಭೂಗಳ್ಳರ ಪಾಲು?: ಗುತ್ತಿಗೆ ಕೊಟ್ಟ 372 ಸ್ವತ್ತುಗಳ ಬಗ್ಗೆ ಪಾಲಿಕೆ ಬಳಿಯಿಲ್ಲ ಸೂಕ್ತ ಮಾಹಿತಿ!! ಬೆಂಗಳೂರು ವೈರ್ ಹೊರಗೆಡುವುತ್ತಿದೆ ಗಂಭೀರ ವಿಚಾರ

Next Post
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

BW SPECIAL | ಬಿಬಿಎಂಪಿಯ ಕೋಟ್ಯಾಂತರ ರೂ. ಮೌಲ್ಯದ ಆಸ್ತಿಗಳು ಭೂಗಳ್ಳರ ಪಾಲು?: ಗುತ್ತಿಗೆ ಕೊಟ್ಟ 372 ಸ್ವತ್ತುಗಳ ಬಗ್ಗೆ ಪಾಲಿಕೆ ಬಳಿಯಿಲ್ಲ ಸೂಕ್ತ ಮಾಹಿತಿ!! ಬೆಂಗಳೂರು ವೈರ್ ಹೊರಗೆಡುವುತ್ತಿದೆ ಗಂಭೀರ ವಿಚಾರ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದೀಪ ಬೆಳಗುವ ಮೂಲಕ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖಚಾಲನೆ ನೀಡಿದರು.  ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಸಂಪುಟ ಸದಸ್ಯರು ಪಾಲ್ಗೊಂಡಿದ್ದರು.

Mysore Dasara 2023 | ನಾಡಹಬ್ಬ ದಸರಾ ಮಹೋತ್ಸವಕ್ಕೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರಿಂದ ಚಾಲನೆ : ಸಾಂಸ್ಕೃತಿಕ ನಗರದಲ್ಲಿ ಕಳೆಗಟ್ಟಿದ ಸಂಭ್ರಮ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group