Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | ಆಸ್ತಿ ಮಾಲೀಕರೇ ಗಮನಿಸಿ…!! ಬಿಬಿಎಂಪಿ ವ್ಯಾಪ್ತಿಯ ಸ್ವತ್ತುಗಳ ಸಂಪೂರ್ಣ ಖಾತಾ ದಾಖಲೆಗಳು ಡಿಜಿಟಲ್ ವ್ಯವಸ್ಥೆಗೆ : ಫೆಬ್ರವರಿ ಒಳಗೆ ಪೂರ್ಣ

ನ.10 ರಿಂದ ಡಿಜಿಟಲ್ ದಾಖಲೆ ಸ್ಕ್ಯಾನಿಂಗ್ ಕಾರ್ಯ ಆರಂಭ | 64 ಎಆರ್ ಒ ಕಚೇರಿಗಳಲ್ಲಿನ 5,120 'ಎ' ಖಾತಾ ಮತ್ತು 'ಬಿ' ಖಾತಾ ರಿಜಿಸ್ಟರ್ ಪುಸ್ತಕಗಳು ಡಿಜಿಟಲ್ ರೂಪಕ್ಕೆ ಬರಲಿವೆ | ಬೆಸ್ಕಾಂ ಪಟ್ಟಿಯಂತೆ ವಾಣಿಜ್ಯ ಸ್ವತ್ತುಗಳ ಸ್ಥಳ ಪರಿಶೀಲನೆ ಪುನರಾರಂಭ

by Bengaluru Wire Desk
November 17, 2023
in Bengaluru Focus, BW Special, Public interest
Reading Time: 2 mins read
0

ಬೆಂಗಳೂರು, ನ.17 www.bengaluruwire.com : ರಾಜಧಾನಿ ಬೆಂಗಳೂರಿನಲ್ಲಿ ‘ಎ’ ಖಾತಾ ಮತ್ತು ‘ಬಿ’ ಖಾತಾ ಅಕ್ರಮ ತಪ್ಪಿಸಲು ಹಾಗೂ ಸ್ವತ್ತಿನ ದಾಖಲೆಗಳನ್ನು ತ್ವರಿತವಾಗಿ ನಾಗರೀಕರಿಗೆ ನೀಡಲು ಅನುಕೂಲವಾಗುವಂತೆ ಬಿಬಿಎಂಪಿಯಲ್ಲಿ ಆಸ್ತಿ ದಾಖಲೆಗಳನ್ನು  ಡಿಜಿಟಲೀಕರಣಗೊಳಿಸಿ ಆನ್ ಲೈನ್ ವ್ಯವಸ್ಥೆಗೆ ತರುವ ಕಾರ್ಯ ಆರಂಭವಾಗಿದ್ದು ಮುಂದಿನ ವರ್ಷದ ಫೆಬ್ರವರಿ 2024ರ ಒಳಗೆ ಪೂರ್ಣವಾಗಲಿದೆ.

ಈ ನಿಟ್ಟಿನಲ್ಲಿ ನ.10 ರಿಂದ ಡಿಜಿಟಲ್ ದಾಖಲೆ ಸ್ಕ್ಯಾನಿಂಗ್ ಮಾಡುವ ಕಾರ್ಯ ಆರಂಭವಾಗಿದೆ. ಹಂತ ಹಂತವಾಗಿ ಡಿಸೆಂಬರ್ 18 ರ‌ ತನಕ ನಗರದ ವಿವಿಧ 64 ಎಆರ್ ಒ ಕಚೇರಿಗಳಲ್ಲಿನ 5,120 ‘ಎ’ ಖಾತಾ ಮತ್ತು ‘ಬಿ’ ಖಾತಾ ರಿಜಿಸ್ಟರ್ ಪುಸ್ತಕಗಳಲ್ಲಿನ ಸ್ವತ್ತಿನ ಮಾಹಿತಿಗಳನ್ನು ಸ್ಕ್ಯಾನಿಂಗ್ ಮಾಡುವ ಕಾರ್ಯ ಆರಂಭವಾಗಲಿದೆ. ಪ್ರತಿ ಎಆರ್ ಒ ಕಚೇರಿಗಳಿಗೂ ಸ್ಕ್ಯಾನಿಂಗ್ ಆರಂಭ ದಿನಾಂಕ, ಅವುಗಳ ದತ್ತಾಂಶವನ್ನು ಸರ್ಕಾರಿ ಸ್ವಾಮ್ಯದ ಎನ್ ಐಸಿ (National Informatic Science – NIC) ನಿರ್ಮಿತ ಬಿಬಿಎಂಪಿ ಸ್ವತ್ತಿನ ತಂತ್ರಾಂಶಕ್ಕೆ ದಾಖಲಿಸುವ ಹಾಗೂ  ಸ್ಕ್ಯಾನಿಂಗ್ ಕೆಲಸ ಪೂರ್ಣಗೊಳಿಸಲು ಗಡುವನ್ನು ಪಾಲಿಕೆ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಷ್ ಮೌದ್ಗಿಲ್ ನೀಡಿದ್ದಾರೆ.

ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಪ್ರಾಪರ್ಟಿ ರಿಜಿಸ್ಟರ್ ಸ್ಕ್ಯಾನಿಂಗ್ (Property Register Scanning) ಕಾರ್ಯವು ನ.18 ರಿಂದ ಡಿ.23 ರ ಒಳಗೆ ಎಲ್ಲಾ 64 ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿಗಳಲ್ಲಿ ವಿವಿಧ ದಿನಾಂಕಗಳಂದು ಪೂರ್ಣಗೊಳಿಸಲು ಗಡುವನ್ನು ನಿಗದಿಪಡಿಸಲಾಗಿದೆ.

ಯಲಹಂಕ ವಲಯದಲ್ಲಿ 430, ರಾಜರಾಜೇಶ್ವರಿ ನಗರ ವಲಯದಲ್ಲಿ 640, ಪಶ್ಚಿಮ ವಲಯದಲ್ಲಿ 780 ಸ್ವತ್ತಿನ ರಿಜಿಸ್ಟರ್, ದಕ್ಷಿಣ ವಲಯದಲ್ಲಿ 947, ಪೂರ್ವ ವಲಯದಲ್ಲಿ 1116, ಮಹದೇವಪುರದಲ್ಲಿ 408, ದಾಸರಹಳ್ಳಿಯಲ್ಲಿ 108 ಹಾಗೂ ಬೊಮ್ಮನಹಳ್ಳಿ ವಲಯದಲ್ಲಿ 689 ‘ಎ’ ಖಾತಾ ಮತ್ತು ‘ಬಿ’ ಖಾತಾ ರಿಜಿಸ್ಟರ್ ಪುಸ್ತಕಗಳನ್ನು ಸ್ಕ್ಯಾನಿಂಗ್ ಹಾಗೂ ಅದನ್ನು ಬಿಬಿಎಂಪಿ ಆಸ್ತಿ ತಂತ್ರಾಂಶಕ್ಕೆ ದಾಖಲಿಸುವ ಕೆಲಸ ನಡೆಯಲಿದೆ. ಇದಾದ ಬಳಿಕ ಪಾಲಿಕೆಯೂ ರಾಜ್ಯದ ಇತರ ಜಿಲ್ಲೆಗಳಲ್ಲಿರುವಂತೆ ಇ-ಸ್ವತ್ತು ತಂತ್ರಾಂಶದ ಮೂಲಕ ಆಸ್ತಿ‌ದಾಖಲೆಗಳನ್ನು ವಿತರಿಸಲು, ಆಸ್ತಿ ತೆರಿಗೆ ಮೌಲ್ಯಮಾಪನ, ಆಸ್ತಿ ತೆರಿಗೆ (Properry Tax) ಪಾವತಿ ಮತ್ತಿತರ ಸೇವೆಗಳನ್ನು ಪಾಲಿಕೆಯ ಇ-ಆಸ್ತಿಯ ಮೂಲಕ ನಿರ್ವಹಿಸಬಹುದು.

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಪಾಲಿಕೆಯಲ್ಲಿ ಈ ಹಿಂದೆ ಪೂರ್ವ ವಲಯದಲ್ಲಿ ಪ್ರಾಯೋಗಿಕವಾಗಿ ಇ-ಆಸ್ತಿ‌ ತಂತ್ರಾಂಶವನ್ನು ಜಾರಿಗೆ ತರಲಾಗಿತ್ತು. ಆದ್ರೆ ಪೂರ್ಣ ಪ್ರಮಾಣದಲ್ಲಿ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ಸಾಧ್ಯವಾಗಿರಲಿಲ್ಲ. ಹಾಗೂ ಇತರ ವಲಯಗಳಿಗೂ ಈ ವ್ಯವಸ್ಥೆಯನ್ನು ಜಾರಿಗೆ ತರಲು ಸಾಧ್ಯವಾಗದ ಕಾರಣ ಕೈಬರಹದ ಆಸ್ತಿ ದಾಖಲೆಗಳನ್ನು‌ ನೀಡುವ ಪರಿಪಾಠವಿತ್ತು. ಹಾಗೂ ಆಸ್ತಿ ವಹಿಗಳು ಡಿಜಿಟಲೀಕರಣ ಮಾಡದ ಕಾರಣ ಸಾಕಷ್ಟು ಅಕ್ರಮ ‘ಎ’ ಖಾತೆ ಮಾಡಲಾಗುತ್ತಿತ್ತು. ಈ ಅಕ್ರಮಗಳ ಪರಿಶೀಲನೆ ನಡೆಸುವ ಬಗ್ಗೆ ಕೆಲವು ತಿಂಗಳ ಹಿಂದೆ ಪಾಲಿಕೆ ಹಣಕಾಸು ವಿಶೇಷ ಆಯುಕ್ತರ ಅಧ್ಯಕ್ಷತೆಯ ಪರಿಶೀಲನಾ ಸಮಿತಿಯನ್ನು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನೇಮಕ ಮಾಡಿದ್ದರು. 

ಸಮಿತಿಯ ಸೂಚನೆ ಮೇರೆಗೆ ವಿವಿಧ ವಲಯಗಳಲ್ಲಿ‌ ಪ್ರಾಥಮಿಕ ಹಂತದಲ್ಲಿ ಎಆರ್ ಒ ಕಚೇರಿಗಳು ಬಿ ವಹಿಯಿಂದ ಎ ವಹಿಗೆ ಆಸ್ತಿಗಳನ್ನು ಅಕ್ರಮವಾಗಿ ದಾಖಲಿಸಿದ 9700ಕ್ಕೂ ಹೆಚ್ಚು ಸಂಶಯಾಸ್ಪದ ಪ್ರಕರಣಗಳನ್ನು ಪಟ್ಟಿ ಮಾಡಿದ್ದವು. ಇದನ್ನು ಸಮಿತಿಗೆ ಆ ಮೂಲಕ ಮುಖ್ಯ ಆಯುಕ್ತರಿಗೆ ಮಾಹಿತಿ ನೀಡಲಾಗಿತ್ತು. ಇಂತಹ ಪ್ರಕರಣಗಳಲ್ಲಿ ಅಕ್ರಮವಾಗಿ ‘ಎ’ ಖಾತೆಗಳಿಗೆ ಸೇರಿಸಿದ ಪ್ರಕರಣಗಳನ್ನು ಮರುಪರಿಶೀಲಿಸಿ ಪುನಃ ‘ಬಿ’ ರಿಜಿಸ್ಟರ್ ಗೆ ದಾಖಲಿಸುವಂತೆ ಮುಖ್ಯ ಆಯುಕ್ತರು ಸೂಚನೆ ನೀಡಿದ್ದರೂ, ಆ ಕೆಲಸ ಸಮರ್ಪಕವಾಗಿ ನಡೆದಿರಲಿಲ್ಲ.

ಬೆಂಗಳೂರು ವೈರ್ ತನಿಖಾ ವರದಿ ಪರಿಣಾಮ :

ಇದನ್ನೂ ಓದಿ : BW INVESTIGATION | ಬೋಗಸ್ ಖಾತೆ- ಬಂಡಲ್ ಭ್ರಷ್ಟರು ಭಾಗ-1 | ಬಿಬಿಎಂಪಿ ಯಲಚೇನಹಳ್ಳಿ ಎಆರ್ ಒ ಕಚೇರಿ : ಬ್ರೋಕರ್ – ಡೂಪ್ಲಿಕೇಟ್ ಖಾತಾ ಫ್ಯಾಕ್ಟರಿ : ಬೆಂಗಳೂರು ವೈರ್ ತನಿಖೆಯಲ್ಲಿ ಬಯಲಾಯ್ತು ನಕಲಿ ಖಾತೆಗಳು

  • BW INVESTIGATION BIG IMPACT | ಯಲಚೇನಹಳ್ಳಿ ಎಆರ್ ಒ ಕಚೇರಿ ಖಾತಾ ಅಕ್ರಮ : ಬೆಂಗಳೂರು ವೈರ್ ತನಿಖಾ ವರದಿ ಫಲಶ್ರುತಿ : ಇಡೀ ಬೆಂಗಳೂರಿನ ಪ್ರಾಪರ್ಟಿ ರಿಜಿಸ್ಟರ್ ವಲಯ ಕಚೇರಿಗಳಿಗೆ ರವಾನೆ

ಸಮಿತಿಯು ಅಕ್ರಮ ‘ಎ’ ಖಾತೆಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿರುವ ಸಂದರ್ಭದಲ್ಲೇ ಮತ್ತೆ ಮತ್ತೆ ಇದೇ ರೀತಿ ‘ಎ’ ಖಾತೆ ಮಾಡುತ್ತಿರುವ ಬಗ್ಗೆ “ಬೆಂಗಳೂರು ವೈರ್” ತನಿಖಾ ವರದಿಯಲ್ಲಿ ದಾಖಲೆ ಹಾಗೂ ಸಾಕ್ಷಿ ಸಮೇತ ನ.3ರಂದು ವರದಿ ಮಾಡಿತ್ತು. ಇದರಿಂದ ಕೂಡಲೇ ಎಚ್ಚೆತ್ತುಕೊಂಡ ಪಾಲಿಕೆ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಷ್ ಮೌದ್ಗಿಲ್ ನ.4ರ ಮಧ್ಯಾಹ್ನ 12.30ರ ಒಳಗಾಗಿ ಖಾತಾ ಸ್ವತ್ತಿನ ರಿಜಿಸ್ಟರ್‌ಗಳನ್ನು ಎಲ್ಲಾ 64 ಎಆರ್ ಒ ಕಚೇರಿಗಳಿಂದ ಆಯಾ ವಲಯ ಕಚೇರಿಗಳಿಗೆ ತಲುಪಿಸುವಂತೆ ಫರ್ಮಾನು ಹೊರಡಿಸಿದ್ದರು.

ಅದಾದ ಬಳಿಕ ಹಲವು ತಿಂಗಳಿನಿಂದ ಬಾಕಿ ಉಳಿದಿದ್ದ ಬೆಂಗಳೂರಿನಲ್ಲಿನ ಸಾರ್ವಜನಿಕರ ಸ್ವತ್ತಿನ ವಿವರಗಳನ್ನು ಡಿಜಿಟಲೀಕರಣಗೊಳಿಸುವ ಕಾರ್ಯ ಚುರುಕಾಗಿದೆ. 

ಬೆಸ್ಕಾಂ ಪಟ್ಟಿಯಂತೆ ವಾಣಿಜ್ಯ ಸ್ವತ್ತುಗಳ ಸ್ಥಳ ಪರಿಶೀಲನೆ ಪುನರಾರಂಭ :

ಈ ನಡುವೆ ವಿಶೇಷ ಆಯುಕ್ತ ಮುನೀಷ್ ಮೌದ್ಗಿಲ್, ವಲಯ ಆಯುಕ್ತರು ಹಾಗೂ ಜಂಟಿ ಆಯುಕ್ತರು, ಆಸ್ತಿ ತೆರಿಗೆ ಕುರಿತಂತೆ ಸಂಶಯಾಸ್ಪದವಾಗಿ ಕಂಡುಬರುವ ವಾಣಿಜ್ಯ ಆಸ್ತಿಗಳನ್ನು ಪರಿಶೀಲಿಸುವ ಕಾರ್ಯವನ್ನು ಕಳೆದ ಒಂದು ವಾರದಿಂದ ಆರಂಭಿಸಿದ್ದಾರೆ. ಜಂಟಿ ಆಯುಕ್ತರು, ಕಂದಾಯ ಅಧಿಕಾರಿಗಳು ಹಾಗೂ ಸಹಾಯಕ‌ ಕಂದಾಯ ಅಧಿಕಾರಿಗಳು ಪ್ರತಿದಿನ ತಲಾ 5 ವಾಣಿಜ್ಯ ಸ್ವತ್ತುಗಳಿಗೆ ಭೇಟಿ ನೀಡಿ ಪರಿಶೀಲಿಸುವ ಗುರಿಯನ್ನು ಕಂದಾಯ ವಿಶೇಷ ಆಯುಕ್ತರು ವರ್ಚುವಲ್‌ ಮೀಟಿಂಗ್ ನಲ್ಲಿ‌ ನೀಡಿದ್ದಾರೆ.

ದಾಸರಹಳ್ಳಿ ವಲಯದಲ್ಲಿ ಜೋನಲ್ ಕಮಿಷನರ್ ಪ್ರೀತಿ ಗೆಹ್ಲೊತ್ ಕಂದಾಯ ಅಧಿಕಾರಿಗಳೊಂದಿಗೆ ವಾಣಿಜ್ಯ ಸ್ವತ್ತುಗಳ ಸ್ಥಳ ಪರಿಶೀಲನೆ ನಡೆಸುತ್ತಿರುವ ಚಿತ್ರ.

ಇನ್ನು ಮೌಲ್ಯಮಾಪಕರು ಹಾಗೂ ರೆವೆನ್ಯೂ ಇನ್ಸ್ ಪೆಕ್ಟರ್‌ಗಳಿಗೆ ಪ್ರತಿದಿನ ತಲಾ 25 ವಾಣಿಜ್ಯ ಆಸ್ತಿಗಳನ್ನು ಹಾಗೂ ಆ ಆಸ್ತಿ‌ಮಾಲೀಕರು ಬಿಬಿಎಂಪಿಗೆ ಕಟ್ಟುತ್ತಿರುವ ಆಸ್ತಿ ತೆರಿಗೆಗಳನ್ನು ಮರು ಪರಿಶೀಲಿಸುವ ಜವಾಬ್ದಾರಿಯನ್ನು ನೀಡಿದ್ದಾರೆ. 

ವಾಣಿಜ್ಯ ಚಟುವಟಿಕೆಗಳನ್ನು ನಡೆಸಿ ಸ್ವತ್ತುಗಳಿಗೆ ವಸತಿ ಆಸ್ತಿಗಳ ಹೆಸರಿನಲ್ಲಿ ಪ್ರಾಪರ್ಟಿ ಟ್ಯಾಕ್ಸ್ ಕಟ್ಟಿ ಪಾಲಿಕೆ ತೆರಿಗೆ ವಂಚನೆಯಾಗುತ್ತಿರುವುದನ್ನು ಪತ್ತೆ ಹಚ್ಚಲು, ಈ ಹಿಂದೆ ಪಾಲಿಕೆಯು ಬೆಸ್ಕಾಂ ನಿಂದ ವಿದ್ಯುತ್ ಪಡೆಯಲು ಕಮರ್ಷಿಯಲ್ ಮೀಟರ್ ಹಾಕಿಸಿಕೊಂಡ ಸ್ವತ್ತುಗಳ ಪಟ್ಟಿಯನ್ನು ಪಡೆದುಕೊಂಡಿತ್ತು.‌ ಅದರ ಆಧಾರದ ಮೇಲೆ ಸ್ವತ್ತುಗಳ ಪರಿಶೀಲನಾ ಕಾರ್ಯವನ್ನು ಆರಂಭಿಸಿದ್ದರೂ ಆಮೆಗತಿಯಲ್ಲಿ ಸಾಗುತ್ತಿತ್ತು. ಇದಕ್ಕೂ ನೂತನ ಕಂದಾಯ ವಿಶೇಷ ಆಯುಕ್ತರು ಟಾರ್ಗೆಟ್ ನಿಗದಿ ಮಾಡಿ ಆ ಕಾರ್ಯವು ವೇಗವಾಗಿ ನಡೆಯುವಂತೆ ಕ್ರಮ ಕೈಗೊಂಡಿದ್ದಾರೆ.

ಫೆಬ್ರವರಿಯೊಳಗೆ ಪಾಲಿಕೆ ವ್ಯಾಪ್ತಿಯ ಆಸ್ತಿಗಳ ಡಿಜಿಟಲೀಕರಣ ಕಾರ್ಯ ಪೂರ್ಣ :

“ಬಿಬಿಎಂಪಿ ವ್ಯಾಪ್ತಿಯಲ್ಲಿ ‘ಎ’ ಮತ್ತು ‘ಬಿ’ ಖಾತಾ ರಿಜಿಸ್ಟರ್ ಪುಸ್ತಕಗಳನ್ನು  ಡಿಜಿಟಲ್ ವ್ಯವಸ್ಥೆಯಡಿ ತರಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸೂಚನೆಯ ಮೇರೆಗೆ ಈ ಆಸ್ತಿ ವಹಿಗಳನ್ನು ಸ್ಕ್ಯಾನಿಂಗ್ ಮಾಡುವ ಕಾರ್ಯ ಆರಂಭವಾಗಿದೆ. ಮುಂದಿನ ವರ್ಷ ಫೆಬ್ರವರಿಯಲ್ಲಿ ಸಂಪೂರ್ಣವಾಗಿ ನಗರದ ಆಸ್ತಿಗಳ ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಗೆ ತರಲಾಗುತ್ತದೆ. ಡಿಜಿಟಲ್ ವ್ಯವಸ್ಥೆ ಅಳವಡಿಕೆಯಿಂದ ಪಾರದರ್ಶಕತೆ ತರಲು, ಭ್ರಷ್ಟಾಚಾರ ಹಾಗೂ ಮೋಸದ ಪ್ರಕರಣಗಳು ಕಡಿಮೆಯಾಗಲಿದೆ. ನಿಯಮಬದ್ಧವಾಗಿರುವ ಆಸ್ತಿಗಳಿಗೆ ಖಾತೆ ಮಾಡುವುದು ಎಂದಿನಂತೆ ಮುಂದುವರೆದಿದೆ” ಎಂದು ಕಂದಾಯ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

WhatsApp Join our WhatsApp Channel
Previous Post

ಊಹಾ ಪತ್ರಿಕೋದ್ಯಮ ಅನಾಹುತಕಾರಿ, ಸುದ್ದಿ ಮತ್ತು ವಿಶ್ಲೇಷಣೆಗಳ ನಡುವೆ ಅಂತರವೇ ಇಲ್ಲವಾಗಿದೆ : ಕೆ.ವಿ.ಪ್ರಭಾಕರ್

Next Post

BBMP News | ಬಿಬಿಎಂಪಿ ನೌಕರರ ಕನ್ನಡ ಸಂಘದಿಂದ ನಾಳೆ (ನ.18) ಡಾ.ಪುನೀತ್ ರಾಜಕುಮಾರ್ ಪ್ರಶಸ್ತಿ ಪ್ರದಾನ

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BBMP News | ಬಿಬಿಎಂಪಿ ನೌಕರರ ಕನ್ನಡ ಸಂಘದಿಂದ ನಾಳೆ (ನ.18) ಡಾ.ಪುನೀತ್ ರಾಜಕುಮಾರ್ ಪ್ರಶಸ್ತಿ ಪ್ರದಾನ

ನಮ್ಮ ಬೆಂಗಳೂರು ಹಬ್ಬದ ಆಚರಣೆಯ ಸಾಂದರ್ಭಿಕ ಚಿತ್ರ

#UnboxingBLRHabba | ಬಿಬಿಎಂಪಿ ಸಹಕಾರದೊಂದಿಗೆ "ಬೆಂಗಳೂರು ಹಬ್ಬ" ಆಚರಣೆ : ಹೇಗೆಲ್ಲಾ ನಡೆಯಲಿದೆ ಈ ವಿಶಿಷ್ಟ ಕಾರ್ಯಕ್ರಮ?

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group