Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Basavanagudi Kadalekai Parishe | ನಾಳೆಯಿಂದ ಬಸವನಗುಡಿ ಕಡಲೆಕಾಯಿ ಪರಿಷೆ : ಶನಿವಾರದಿಂದಲೇ ಜಾತ್ರೆ ಸಡಗರ – ಭಾನುವಾರ ಫುಲ್ ರಷ್!!

ಡಿ.11ರ ಕಡೆ ಕಾರ್ತಿಕ ಸೋಮವಾರ ಸಂಜೆ 6ಕ್ಕೆ ಕೆಂಪಾಂಬುಧಿ ಕೆರೆಯಲ್ಲಿ ತೆಪ್ಪೋತ್ಸವ ನಡೆಯಲಿದೆ.

by Bengaluru Wire Desk
December 10, 2023
in Bengaluru Focus, Public interest
Reading Time: 1 min read
0

ಬೆಂಗಳೂರು, ಡಿ.10 www.bengaluruwire.com :‌ ಸಿಲಿಕಾನ್ ಸಿಟಿ ಬೆಂಗಳೂರಿನ ಐತಿಹಾಸಿಕ ಮಹತ್ವದ ದೊಡ್ಡ ಜಾತ್ರೆಯೆಂದೇ ಪರಿಗಣಿತವಾದ ಕಡಲೆಕಾಯಿ ಪರಿಷೆ ನಾಳೆಯಿಂದ ಬಸವನಗುಡಿಯಲ್ಲಿ ನಡೆಯಲಿದೆ.

ಕಾರ್ತಿಕ ಮಾಸದ ಕೊನೆಯ ಸೋಮವಾರ ದೊಡ್ಡ ಬಸವಣ್ಣ ದೇವಸ್ಥಾನದಲ್ಲಿ ಬಸವಣ್ಣನಿಗೆ ಕಡಲೆಕಾಯಿ ಹಾಗೂ ಪುಷ್ಪಗಳಿಂದ ಅಲಂಕಾರ ಮಾಡಿ ಸಿಂಗರಿಸಲಾಗುತ್ತದೆ. ಕಡಲೆಕಾಯಿಗಳಿಂದ ದೊಡ್ಡಗಣಪತಿಗೆ ಅಭಿಷೇಕ ನಡೆಯಲಿದೆ. ನಾಳೆ ಮತ್ತು ನಾಡಿದ್ದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಳಿಗ್ಗೆ ಕಡಲೆಕಾಯಿ ಪರಿಷೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ.

ಎರಡನೇ ಶನಿವಾರವಾದ ಕಾರಣ ನಿನ್ನೆ ರಜೆಯಿತ್ತು. ಹೀಗಾಗಿ ಬಸವನಗುಡಿ ಮುಖ್ಯರಸ್ತೆ, ಅಡ್ಡರಸ್ತೆಗಳಲ್ಲಿ ಕಡಲೆಕಾಯಿ ಪರಿಷೆಯ ಹಬ್ಬದ ಸಂಭ್ರಮ ಕಂಡು ಬಂದಿತ್ತು. ಅದರಲ್ಲೂ ಸಂಜೆಯ ಮೇಲೆ ದೊಡ್ಡಗಣಪತಿ ದೇವಸ್ಥಾನ ಮುಂಭಾಗದ ರಸ್ತೆ, ಬಿಎಂಎಸ್ ಮಹಿಳಾ ಕಾಲೇಜು ಹಾಗೂ ಸುತ್ತಮುತ್ತಲ ರಸ್ತೆಗಳಲ್ಲಿ ಕಡಲೆಕಾಯಿ ವ್ಯಾಪಾರಿಗಳು, ಹಸಿ ಮತ್ತು ಹುರಿದ ಕಡಲೆಕಾಯಿಗಳನ್ನು ಮಾರುತ್ತಿದ್ದರು. ಜನರೂ ತಮ್ಮ ಸ್ನೇಹಿತರು, ಬಂಧು ಬಾಂಧವರೊಂದಿಗೆ ಆಗಮಿಸಿ ರಜೆಯಿದ್ದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

ಭಾನುವಾರ ಜನಜಂಗುಳಿ ಹೆಚ್ಚಳ ನಿರೀಕ್ಷೆ :

ಶನಿವಾರ ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ‌ ಜನಜಂಗುಳಿ ಕಂಡುಬಂದ ದೃಶ್ಯ

ಸೋಮವಾರ ಪರಿಷೆಗೆ ಬರಲಾಗದವರು ರಜಾದಿನವಾದ ಭಾನುವಾರವಾದ ಇಂದೂ ಸಹ ಬಸವನಗುಡಿಯತ್ತ ಜನಸಾಗರ ಹರಿದು ಬರುವ ನಿರೀಕ್ಷೆಯಿದೆ. ಶನಿವಾರದಿಂದಲೇ ಪರಿಷೆ ನಡೆಯುವ ಸ್ಥಳದ ಸುತ್ತಮುತ್ತ ಬೀದಿ ಬದಿ ವ್ಯಾಪಾರಿಗಳ ರಸ್ತೆ ಮಧ್ಯೆ, ಇಕ್ಕೆಲಗಳಲ್ಲಿ ಕಡಲೆಕಾಯಿ, ದಿನ ಬಳಕೆಯ ವಸ್ತುಗಳು, ಬಲೂನು, ಆಟಿಕೆ ಸಾಮಾನುಗಳು, ಗೃಹೋಪಯೋಗಿ ವಸ್ತುಗಳು, ಅಲಂಕಾರಿಕೆ ವಸ್ತುಗಳ ಮಳಿಗೆ, ಬಗೆ ಬಗೆಯ ತಿಂಡಿ-ತಿನಿಸುಗಳ ಮಳಿಗೆಗಳು ತೆರೆದ ಕಾರಣ ವ್ಯಾಪಾರವೂ ಬಿರುಸುಗೊಂಡಿತ್ತು. ರಸ್ತೆ ಮಧ್ಯೆ ಜನ ಸಂಚಾರ ಹೆಚ್ಚಾದ ಕಾರಣ ವಾಹನ ಸಂಚಾರಕ್ಕೆ ತೊಡಕಾಗಿತ್ತು. ಹೀಗಾಗಿ ಈ ರಸ್ತೆಗಳಲ್ಲಿ ವಾಹನಗಳನ್ನು ಪರ್ಯಾಯ ರಸ್ತೆಗಳತ್ತ ಸಂಚಾರಿ ಪೊಲೀಸರು ಬಿಟ್ಟು ಜನರ ಓಡಾಟಕ್ಕೆ ಅನುವು ಮಾಡಿಕೊಡುತ್ತಿದ್ದರು.

ಗ್ರಾಹರನ್ನು ಸೆಳೆಯಲು ಸಾವಯವ ಬೆಲ್ಲದಿಂದ ಅಲಂಕಾರ :

ಸಾವಯವ ಬೆಲ್ಲದಿಂದ ಅಲಂಕೃತವಾಗಿರುವ ಮಳಿಗೆ

ಪರಿಷೆಯಲ್ಲಿ ಭದ್ರತೆಗಾಗಿ ಆಯಕಟ್ಟಿನ ಸ್ಥಳದಲ್ಲಿ ಸಿಸಿಟಿ ಕ್ಯಾಮೆರಾವನ್ನು ಅಳವಡಿಸಿಲಾಗಿದೆ. ಸಂಚಾರಿ ಮತ್ತು ಸಿವಿಲ್ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ದೊಡ್ಡಗಣಪತಿ ದೇವಸ್ಥಾನದ ಮುಂಭಾಗದ ದ್ವಾರದಲ್ಲಿ ಸಾವಯವ ಬೆಲ್ಲದ ಸ್ಟಾಲ್ ನಲ್ಲಿ ತರಹೇವಾರಿ ಬೆಲ್ಲದ ಅಚ್ಚು ಹಾಗೂ ಪುಡಿ ಬೆಲ್ಲದಿಂದ ಆಲದ ಮನೆ, ವಿವಿಧ ಪ್ರತಿಕೃತಿ, ಕಡಲೆಕಾಯಿ ಹಾಗೂ ಬೆಲ್ಲದಿಂದ ಬಸವಣ್ಣನನ್ನು ಅಲಂಕಾರ ಮಾಡಲಾಗಿದೆ. ಇದು ನೋಡುಗರನ್ನು ಸೆಳೆಯುತ್ತಿದೆ.

ಕಡಲೆಕಾಯಿ ಪರಿಷೆಗೆ ಮಾಗಡಿ, ದೊಡ್ಡಬಳ್ಳಾಪುರ, ಕನಕಪುರ ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಮಂಡ್ಯ ಮೈಸೂರು, ತಮಿಳುನಾಡು ಸೇರಿದಂತೆ ಹಲವು ಕಡೆಗಳಿಂದ ವ್ಯಾಪಾರಿಗಳು ವಿವಿಧ ಬಗೆಯ ಕಡಲೆಕಾಯಿಗಳನ್ನು ತಂದು ಮಾರಾಟ ಮಾಡುತ್ತಿದ್ದಾರೆ. ಕಡಲೆಕಾಯಿ ಲೀಟರ್ ಗೆ 45 ರಿಂದ 50 ರೂ. ಹಾಗೂ ಒಂದು ಸೇರಿಗೆ 20 ರಿಂದ 25 ರೂ. ಸರಾಸರಿಯಾಗಿ ಮಾರಾಟ ಮಾಡಲಾಗುತ್ತಿದೆ. 

ಪರಿಷೆಯಲ್ಲಿ ಮಕ್ಕಳಿಂದ ಹಿರಿಯರವರೆಗೆ ಗಿರಿಗಿಟ್ಲೆ, ಟೊರಾಟೊರಾ ಮತ್ತಿತರ ಆಟಗಳನ್ನು ಆಡಿ ಜನರು ಸಂಭ್ರಮಪಡುತ್ತಿದ್ದಾರೆ.

ಡಿ.11ರ ಕಡೆ ಕಾರ್ತಿಕ ಸೋಮವಾರ ಸಂಜೆ 6ಕ್ಕೆ ಕೆಂಪಾಂಬುಧಿ ಕೆರೆಯಲ್ಲಿ ತೆಪ್ಪೋತ್ಸವ ನಡೆಯಲಿದೆ.  ಅದೇ ದಿನ ಸಂಜೆ ಕಹಳೆಬಂಡೆ ಉದ್ಯಾನವನದಲ್ಲಿ ಮೇಖಲಾ ಅಗ್ನಿಹೋತ್ರಿ ತಂಡದವರಿಂದ ನಾದ-ನಿನಾದ ಕಾರ್ಯಕ್ರಮ ನಡೆಯಲಿದೆ. ನರಸಿಂಹಸ್ವಾಮಿ ಉದ್ಯಾನವನದಲ್ಲಿ ಸಿರಿಕಲಾ ಮೇಳ ತಂಡದಿಂದ ಯಕ್ಷಗಾನ ಆಯೋಜಿಸಲಾಗಿದೆ. 

ಡಿ.12 ಮಂಗಳವಾರ ಸಂಜೆ ಕಹಳೆ ಬಂಡೆಯಲ್ಲಿ ನಾಟ್ಯ ಭೈರವಿ ಶಾಲೆ ತಂಡದಿಂದ ನೃತ್ಯ, ನರಸಿಂಹ ಸ್ವಾಮಿ ಉದ್ಯಾನವನದಲ್ಲಿ ಸೀತಾರಾಮ ಮುನಿಕೋಟಿ ಅವರಿಂದ ಹರಿಕಥೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಸೊಗಡಿನ ಈ ಹಬ್ಬವನ್ನು ಪ್ಲಾಸ್ಟಿಕ್ ಮುಕ್ತವಾಗಿ ಆಚರಿಸಲು ಬಿಬಿಎಂಪಿ ನಿರ್ಧರಿಸಿದೆ. ಹಾಗೂ ಪರಿಷೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ಆಗಾಗ್ಗೆ ತೆಗೆಯಲು ಈಗಾಗಲೇ ಪಾಲಿಕೆ ಪೌರಕಾರ್ಮಿಕರನ್ನು ನಿಯೋಜಿಸಲಾಗಿದೆ.

ಕಳೆದ ವರ್ಷ ಸಾರ್ವತ್ರಿಕ ಚುನಾವಣೆಯಿದ್ದ ಕಾರಣ ರಾಜಕಾರಣಿಗಳ ಓಡಾಟ ಹೆಚ್ಚಾಗಿತ್ತು. ಆದರೆ ಈ ಬಾರಿ ರಾಜಕಾರಣಿಗಳ ಹಾವಳಿ ಕಡಿಮೆಯಿರುವ ಸಾಧ್ಯತೆಯಿದೆ. ಬಿಬಿಎಂಪಿಯಿಂದಲೂ ಮೇಯರ್ ಆಡಳಿತವಿದ್ದಾಗ ಕಡಲೆಕಾಯಿ ಪರಿಷೆಗೆ ತೋರುತ್ತಿದ್ದ ಆಸಕ್ತಿ ಈ ಬಾರಿ ಕಡಿಮೆ ಇರುವಂತೆ ತೋರುತ್ತಿದೆ ಎಂದು ಕಡಲೆಕಾಯಿ ಪರಿಷೆಗೆ ಪ್ರತಿವರ್ಷ ತಪ್ಪದೆ ಭೇಟಿಕೊಡುವ ಶ್ರೀನಗರದ ನಿವಾಸಿ ರಮೇಶ್ ಹೇಳುತ್ತಾರೆ.

WhatsApp Join our WhatsApp Channel
Previous Post

BW SPECIAL | BDA NEWS | ಡಾ.ಕೆ.ಶಿವರಾಮ ಕಾರಂತ ಬಡಾವಣೆ : ಜೆಸಿಸಿ ಸಮಿತಿ ಅವಧಿ ವಿಸ್ತರಣೆಗೆ ರೈತರಿಂದ ಸುಪ್ರೀಂಗೆ ಪತ್ರ – ಬಿಡಿಎನಿಂದ 28,830 ಸೈಟ್ ನಿರ್ಮಾಣ ಪೂರ್ಣ

Next Post

Karnataka News |ಕಾಂಗ್ರೆಸ್ ಸರ್ಕಾರಕ್ಕೆ ಛಡಿಯೇಟು ಕೊಡುವ ಬೃಹತ್ ಹೋರಾಟ ಡಿ.13ಕ್ಕೆ : ಹಲವು ವಿಷಯಗಳ ಬಗ್ಗೆ ಚರ್ಚೆಗೆ ಬಿಜೆಪಿ ಆಗ್ರಹ

Next Post

Karnataka News |ಕಾಂಗ್ರೆಸ್ ಸರ್ಕಾರಕ್ಕೆ ಛಡಿಯೇಟು ಕೊಡುವ ಬೃಹತ್ ಹೋರಾಟ ಡಿ.13ಕ್ಕೆ : ಹಲವು ವಿಷಯಗಳ ಬಗ್ಗೆ ಚರ್ಚೆಗೆ ಬಿಜೆಪಿ ಆಗ್ರಹ

Crime News | ಬೆಂಗಳೂರು : ಸಿಸಿಬಿ ಪೊಲೀಸರಿಂದ ಭರ್ಜರಿ ಬೇಟೆ ; ಹೊಸ ವರ್ಷದ ಪಾರ್ಟಿಗಾಗಿ ಮಾರಾಟಕ್ಕೆ ತಂದಿದ್ದ 21 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ!!

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group