Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | BENGALURU NEWS | ಬಿಬಿಎಂಪಿ ಎಂಜಿನಿಯರ್ ಗಳ ಯಡವಟ್ಟು : ಹೊಸಕೆರೆಹಳ್ಳಿ ಜಂಕ್ಷನ್ ಮೇಲ್ಸೇತುವೆ ಪೂರ್ಣವಾಗಲು ಇನ್ನು 1 ವರ್ಷ ಕಾಯಬೇಕು!!! – ತಪ್ಪದ ಟ್ರಾಫಿಕ್ ಕಿರಿಕಿರಿ

ಯೋಜನೆಗೆ ಅಗತ್ಯವಾದ ಜಾಗವನ್ನು ನೈಸ್ ಸಂಸ್ಥೆಯಿಂದ ಪಡೆಯುವಲ್ಲಿ ವಿಳಂಬವಾಗಿದ್ದು, ಇಡೀ ಮೇಲ್ಸೇತುವೆ ಯೋಜನೆ ಹಳ್ಳ ಹಿಡಿಯಲು ಪ್ರಮುಖ ಕಾರಣವಾಗಿದೆ. | ಬಿಬಿಎಂಪಿ ಎಂಜಿನಿಯರ್ ಗಳ ನಿರ್ಲಕ್ಷ್ಯ ಮತ್ತು ಕಾಲಹರಣ ಧೋರಣೆಗೆ ವಾಹನ ಸವಾರರ ಹಿಡಿಶಾಪ | 380 ಮೀಟರ್ ಉದ್ದದ ಮೇಲ್ಸೇತುವೆ ಕಟ್ಟಲು ಸುಧೀರ್ಘ ಮೂರು ಮುಕ್ಕಾಲು ವರ್ಷ ಬೇಕಾ? | ಇದೇನು ವಿಶ್ವದ ಪರಮಾದ್ಭುತ ಎಂಜಿನಿಯರಿಂಗ್ ರಚನೆಯಾ?

by Bengaluru Wire Desk
December 23, 2023
in Bengaluru Focus, BW Special, Public interest
Reading Time: 2 mins read
1
ಹೊಸಕೆರೆಹಳ್ಳಿ ಜಂಕ್ಷನ್ ಕೆರೆಕೋಡಿ ರಸ್ತೆ ಬಳಿಯ ಮೇಲ್ಸೇತುವೆ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿರುವ ಸಾಂದರ್ಭಿಕ ಚಿತ್ರ.

ಹೊಸಕೆರೆಹಳ್ಳಿ ಜಂಕ್ಷನ್ ಕೆರೆಕೋಡಿ ರಸ್ತೆ ಬಳಿಯ ಮೇಲ್ಸೇತುವೆ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿರುವ ಸಾಂದರ್ಭಿಕ ಚಿತ್ರ.

ಬೆಂಗಳೂರು, ಡಿ.22 www.bengaluruwire.com : ರಾಜಧಾನಿಯ ಹೊರವರ್ತುಲ ರಸ್ತೆಯಲ್ಲಿ ಸಿಗ್ನಲ್ ಫ್ರೀ ಕಾರಿಡಾರ್ ನಿರ್ಮಿಸುವ ನಿಟ್ಟಿನಲ್ಲಿ ಹೊಸಕೆರೆ ಜಂಕ್ಷನ್ ಬಳಿಯ ಕೆರೆಕೋಡಿ ರಸ್ತೆಯಲ್ಲಿ ಬಿಬಿಎಂಪಿ ನಿರ್ಮಿಸುತ್ತಿರುವ ಮೇಲ್ಸೇತುವೆ ಯೋಜನೆ ರೂಪಿಸುವಾಗ ಕೈಗೊಂಡ ಯಡವಿಟ್ಟಿನಿಂದ ಇಲ್ಲಿನ ಮೇಲ್ಸೇತುವೆ ಪ್ರಾಜೆಕ್ಟ್ 15 ತಿಂಗಳ ಒಳಗೆ ಮುಗಿಯುವ ಬದಲು ಎರಡು ಮುಕ್ಕಾಲು ವರ್ಷವಾದರೂ ಇನ್ನು ಮುಗಿದಿಲ್ಲ.

ಎರಡು ಗಡುವುಗಳು ಪೂರ್ಣವಾದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಇದರಿಂದಾಗಿ ಬನಶಂಕರಿಯಿಂದ ಮೈಸೂರು ರಸ್ತೆ ನಾಯಂಡಹಳ್ಳಿ ಕಡೆ ಹೋಗಿ ಬರುವ ವಾಹನ ಸವಾರರು ರೋಸಿ ಹೋಗಿದ್ದಾರೆ. ಬೆಳಗ್ಗೆ ಮತ್ತು ರಾತ್ರಿಯ ಪೀಕ್ ಹವರ್ ನಲ್ಲಿ ಈ ರಸ್ತೆಯಲ್ಲಿ ವಾಹನಗಳು ತೆವಳಿಕೊಂಡು ಓಡಾಡುತ್ತವೆ. ಈ ರಸ್ತೆಯ ಟ್ರಾಫಿಕ್ ನಲ್ಲಿ ವಾಹನ ಓಡಾಡುವವರಿಗೆ ಇಲ್ಲಿನ ಸಿಗ್ನಲ್ ಫ್ರೀ ಕಾರಿಡಾರ್ ದುಸ್ವಪ್ನದಂತೆ ಭಾಸವಾಗುತ್ತಿದೆ.

ಹೊರಕೆರೆಹಳ್ಳಿ ಜಂಕ್ಷನ್ ಬಳಿಯ ಸರ್ವೀಸ್ ರಸ್ತೆಯಲ್ಲಿ ವಾಹನ ದಟ್ಟಣೆ ಅವಧಿ ಸಂದರ್ಭ ಆಮೆಗತಿಯಲ್ಲಿ ಸಂಚರಿಸುತ್ತಿರುವ ವಾಹನಗಳ ಚಿತ್ರ.

ಆಮೆಯ ಜೊತೆಗೆ ಸ್ಪರ್ಧೆ ಏರ್ಪಡಿಸಿದರೆ ಬಹುಶ:  ಈ ರಸ್ತೆಯಲ್ಲಿ ಪೀಕ್ ಹವರ್ ನಲ್ಲಿ ಓಡಾಡುವ ವಾಹನಗಳು ಸೋಲಬಹುದು. ಆ ಪಾಟಿಯಲ್ಲಿ ವಾಹನ ಸವಾರರು ಬಂಪರ್ ಟು ಬಂಪರ್ ಟ್ರಾಫಿಕ್ ನಲ್ಲಿ ಸಾಗುತ್ತಿದ್ದಾರೆ. ಪಿಜೆಬಿ ಇಂಜಿನಿಯರಿಂಗ್ ಎಂಬ ಸಂಸ್ಥೆಗೆ 20.17 ಕೋಟಿ ರೂ. ಮೊತ್ತದ ಮೇಲ್ಸೇತುವೆ ನಿರ್ಮಾಣದ ಕಾಮಗಾರಿಯನ್ನು ಗುತ್ತಿಗೆ ನೀಡಲಾಗಿತ್ತು. ಈ ಸಂಸ್ಥೆಯವರು 2021ರ ಇಸವಿಯ ಮೇ 14ರಂದು ಕಾಮಗಾರಿ ಆರಂಭಿಸಿದ್ದರು. ಈ ಕಾಮಗಾರಿ ಪೂರ್ಣಗೊಳಿಸಲು 15 ತಿಂಗಳು ಕಾಲಾವಕಾಶ ನೀಡಿ 14-08-2022ರ ಒಳಗೆ ಕಾಮಗಾರಿ ಪೂರ್ಣಗೊಳಿಸಬೇಕಿತ್ತು. ಆದರೆ ಈ ಸಂಸ್ಥೆಯವರಿಗೆ ಪುನಃ 15-10-2023ರ ಒಳಗಾಗಿ 16 ಮೀಟರ್ ಅಗಲದ 380 ಮೀಟರ್ ಉದ್ದದ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲು ಎರಡನೇ ಅವಧಿಗೆ ಬಿಬಿಎಂಪಿ ರಸ್ತೆ ಮತ್ತು ಮೂಲಭೂತ ಸೌಕರ್ಯ ವಿಭಾಗ ಡೆಡ್ ಲೈನ್ ನೀಡಿತ್ತು.

ಆದರೆ ಡಿಸೆಂಬರ್ ತಿಂಗಳು ಮುಗಿಯುತ್ತಾ ಬಂದರೂ ಈವರೆಗೆ ಒಟ್ಟಾರೆ ಮೇಲ್ಸೇತುವೆ ಕಾಮಗಾರಿಯಲ್ಲಿ ಶೇ.72ರಷ್ಟು ಭೌತಿಕ ಪ್ರಗತಿ ಹಾಗೂ ಶೇ.63ರಷ್ಟು ಹಣಕಾಸು ಪ್ರಗತಿಯನ್ನಷ್ಟೇ ಸಾಧಿಸಲಾಗಿದೆ. ಹೀಗಾಗಿ ಬನಶಂಕರಿಯಿಂದ ನಾಯಂಡಹಳ್ಳಿ ಮಧ್ಯೆಯಿರುವ ಈ ರಸ್ತೆಯಲ್ಲಿ ಸಿಗ್ನಲ್ ಫ್ರೀ ಇರಲಿ, ಹೆಜ್ಜೆ ಹೆಜ್ಜೆಗೂ ಹೊಸಕೆರೆ ಹಳ್ಳಿ ಜಂಕ್ಷನ್ ದಾಟುವಷ್ಟರಲ್ಲಿ ವಾಹನ ಸವಾರರು ಹೈರಾಣಾಗಿರುತ್ತಾರೆ.

ಬಿಬಿಎಂಪಿ ಎಂಜಿನಿಯರ್ ಗಳ ಯಡವಟ್ಟು :

ಅಸಲಿಗೆ ಹೊಸಕೆರೆ ಹಳ್ಳಿ ಜಂಕ್ಷನ್ ನಾಲ್ಕು ರಸ್ತೆಗಳನ್ನು ಹೊಂದಿದ ಇಂಗ್ಲೀಷಿನ ಎಕ್ಸ್ ಆಕಾರವನ್ನು ಪ್ರತಿನಿಧಿಸುವಂತಿದೆ. ಈ ರಸ್ತೆಯಲ್ಲಿ ಸಿಗ್ನಲ್ ಫ್ರೀ ಕಾರಿಡಾರ್ ಹಿನ್ನಲೆಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕಾಗಿ ಯೋಜನೆ ರೂಪಿಸುವಾಗ ಬಿಬಿಎಂಪಿಯ ಎಂಜಿನಿಯರ್ ಗಳು ಹಾಗೂ ಹಿರಿಯ ಅಧಿಕಾರಿಗಳು ಮಾಡಿದ ಆ ಒಂದು ಯಡವಟ್ಟು ಈ ಯೋಜನೆ ಪೂರ್ಣಗೊಳ್ಳಲು ಮತ್ತೆ ಕನಿಷ್ಠ ಒಂದು ವರ್ಷ ಬೇಕಾಗಬಹುದು. ಏಕೆಂದರೆ ಸದ್ಯ ಹೊಸಕೆರೆಹಳ್ಳಿ ಕಡೆಯಿಂದ ಹಾಗೂ ಗಿರಿನಗರ ಕಡೆಯಿಂದ ಬಂದು ನಾಯಂಡಹಳ್ಳಿ ಕಡೆಗೆ ಹೋಗುವ ವಾಹನ ಸವಾರರ ಅನುಕೂಲಕ್ಕಾಗಿ ಪ್ರಸ್ತುತ ಮೇಲ್ಸೇತುವೆ ಜಾಗದ ಪಕ್ಕದಲ್ಲಿ ರಸ್ತೆ ವಿಸ್ತರಿಸಿ ಅಲ್ಲಿ 8 ಮೀಟರ್ ಅಗಲ ಹಾಗೂ 40 ಮೀಟರ್ ಉದ್ದದ ಏಕಮುಖ ಮಾರ್ಗದ ಮತ್ತೊಂದು ಪುಟ್ಟ ಮೇಲ್ಸೇತುವೆಯನ್ನು ನಿರ್ಮಿಸಬೇಕಿದೆ. ಈ ಕಿರು ಮೇಲ್ಸೇತುವೆ ಬರುವ ಜಾಗ ನೈಸ್ ರಸ್ತೆಯ ಆಸ್ತಿಯಾಗಿದ್ದು, ಆ ಸಂಸ್ಥೆಯ ಜೊತೆ ನಿರಂತರವಾಗಿ ಸಂಪರ್ಕ ಇಟ್ಟುಕೊಂಡು ಜಾಗವನ್ನು ಬಿಬಿಎಂಪಿಯ ಯೋಜಿತ ಕಾಮಗಾರಿಗೆ ಕೊಡಿಸಲು ವಿಳಂಬವಾಯಿತು.

ಹೊಸಕೆರೆ ಹಳ್ಳಿ ಜಂಕ್ಷನ್ ಮೇಲ್ಸೇತುವೆ ನಿರ್ಮಾಣ ಸ್ಥಳದ ನಕ್ಷೆ

ಸರ್ಕಾರದಲ್ಲೇ ಬಾಕಿ ಉಳಿದ ಫೈಲ್ :

ಸುಮಾರು 7 ಕೋಟಿ ರೂ. ಮೊತ್ತದ ಈ ಸಣ್ಣ ಮೇಲ್ಸೇತುವೆ ಕಾಮಗಾರಿ ಒಪ್ಪಿಗೆ ಪಡೆಯಲು ಬಿಬಿಎಂಪಿಯು ಇದರ ಕಡತವನ್ನು ಸರ್ಕಾರಕ್ಕೆ ಕಳುಹಿಸಿ ಐದಾರು ತಿಂಗಳಾದರೂ ಇನ್ನು ಅಲ್ಲಿಂದ ಕಡತ ಪಾಲಿಕೆಗೆ ಬಂದಿಲ್ಲ ಎಂದು ಉನ್ನತ ಮೂಲಗಳು ಬೆಂಗಳೂರು ವೈರ್ ಗೆ ಖಚಿತಪಡಿಸಿದೆ. ಈ ಪುಟ್ಟ ಮೇಲ್ಸೇತುವೆ ಕಾಮಗಾರಿ ಒಂದೊಮ್ಮೆ ಆರಂಭವಾದರೆ ಪೂರ್ಣಗೊಳ್ಳಲು ಕನಿಷ್ಠ 6 ತಿಂಗಳು ಸಮಯಾವಕಾಶ ಬೇಕಾಗುತ್ತದೆ. ಸದ್ಯ ಪ್ರಸ್ತಾವಿತ ಸಣ್ಣ ಮೇಲ್ಸೇತುವೆ ಜಾಗ ಪಕ್ಕದಲ್ಲೇ ಸರ್ವೀಸ್ ರಸ್ತೆಯಲ್ಲಿ ಬನಶಂಕರಿ ಕಡೆಯಿಂದ ನಾಯಂಡಹಳ್ಳಿ ಕಡೆಗೆ ಸಾಗುವ ವಾಹನಗಳು ಓಡಾಡುತ್ತಿವೆ. ಈ ಮೇಲ್ಸೇತುವೆ ಆರಂಭವಾಗಿ ಪೂರ್ಣಗೊಂಡ ಬಳಕವಷ್ಟೇ ಮುಖ್ಯ ಮೇಲ್ಸೇತುವೆ ಭಾಗದಿಂದ ನಾಯಂಡಹಳ್ಳಿ ಕಡೆಗೆ ಡೌನ್ ರಾಂಪ್ ಕಟ್ಟಲು ಪಿಜೆಬಿ ಇಂಜಿನಿಯರಿಂಗ್ ಸಂಸ್ಥೆಗೆ ಸಾಧ್ಯವಾಗಲಿದೆ. ಈ ಪುಟ್ಟ ಮೇಲ್ಸೇತುವೆ ತಡವಾದಷ್ಟು ಒಟ್ಟಾರೆ ಹೊಸಕೆರೆಹಳ್ಳಿ ಜಂಕ್ಷನ್ ಫ್ಲೈ ಓವರ್ ನಿರ್ಮಾಣ ಕಾರ್ಯ ಪೂರ್ಣವಾಗಲ್ಲ ಎಂದು ಹೇಳುತ್ತಾರೆ ಪಿಜೆಬಿ ಇಂಜಿನಿಯರಿಂಗ್ ಸಂಸ್ಥೆಯ ಎಂಜಿನಿಯರ್ ಒಬ್ಬರು.

ವಿಸ್ತರಿತ ಕಿರು ಮೇಲ್ಸೇತುವೆ ಮುಗಿದರಷ್ಟೆ ಮುಖ್ಯ ಮೇಲ್ಸೇತುವೆ ಪೂರ್ಣ :

ರಸ್ತೆ ವಿಸ್ತರಿಸಿ ಏಕಮುಖ ಮೇಲ್ಸೇತುವೆ ನಿರ್ಮಾಣ ಕಾರ್ಯ ಆರಂಭವಾದರೆ, ಅದಕ್ಕೆ ಪರ್ಯಾಯವಾಗಿ ನಾಯಂಡಳಹಳ್ಳಿಯಿಂದ ಬನಶಂಕರಿ ಕಡೆಗೆ ಸಾಗುವ ಒಂದು ಭಾಗದಲ್ಲಿ ಪ್ಯಾನಲ್ ನಿರ್ಮಿಸುವ ಕೆಲಸವನ್ನು ನಾವು ಪ್ರಾರಂಭಿಸುತ್ತೇವೆ. ಆಗ ಸಮಯಾವಧಿ ಹೆಚ್ಚು ಹಿಡಿಯುವುದಿಲ್ಲ. ವೈಡನಿಂಗ್ ರೋಡ್ ಫ್ಲೈಓವರ್ ನಿರ್ಮಾಣ ಮುಗಿದ ಬಳಿಕ ಆ ಮೇಲ್ಸೇತುವೆ ಮೇಲೆ ಸರ್ವೀಸ್ ರಸ್ತೆಯಲ್ಲಿ ಚಲಿಸುವ ವಾಹನವನ್ನು ಓಡಾಡಲು ಅವಕಾಶ ಮಾಡಿಕೊಟ್ಟು, ಬಳಿಕ ನಾಯಂಡಹಳ್ಳಿಯಿಂದ ಬನಶಂಕರಿ ಕಡೆಗೆ ಚಲಿಸುವ ಮಾರ್ಗದಲ್ಲಿನ ಮೇಲ್ಸೇತುವೆ ಭಾಗದಲ್ಲಿ ಪ್ಯಾನೆಲ್ ನಿರ್ಮಿಸಿ ರಾಂಪ್ ಮಾಡಲು ಸಾಧ್ಯವಾಗುತ್ತದೆ ಎಂದು ಅವರು ವಸ್ತುಸ್ಥಿತಿಯನ್ನು ವಿವರಿಸಿದ್ದಾರೆ.

ಒಟ್ಟಾರೆ ಹೊಸಕೆರೆಹಳ್ಳಿ ಜಂಕ್ಷನ್ ಕೆರೆ ಕೋಡಿ ರಸ್ತೆ ಬಳಿ ನಿರ್ಮಿಸುತ್ತಿರುವ ಫ್ಲೈಓವರ್ ಪೂರ್ಣವಾಗಲು ಡಿಸೆಂಬರ್ 2024ರ ತನಕ ಕಾಯಬೇಕಿದೆ ಎಂದು ಬಿಬಿಎಂಪಿ ಮುಖ್ಯ ಪ್ರಧಾನ ಎಂಜಿನಿಯರ್ ಹಾಗೂ ರಸ್ತೆ ಮತ್ತು ಮೂಲಭೂತ ಸೌಕರ್ಯ ವಿಭಾಗದ ಪ್ರಧಾನ ಎಂಜಿನಿಯರ್ ಪ್ರಹ್ಲಾದ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಅರ್ಧಕ್ಕೆ ನಿಂತಿರುವ ಹೊಸಕೆರೆ ಹಳ್ಳಿ ಮೇಲ್ಸೇತುವೆ ಪಿಲ್ಲರ್ ನಿರ್ಮಾಣ ಕಾಮಗಾರಿಯ ಚಿತ್ರ.

ವಾಹನ ಸವಾರರು ಏನಂತಾರೆ? :

“ಬೆಳಗ್ಗೆ 8 ರಿಂದ 10 ಗಂಟೆ ಹಾಗೂ ಸಂಜೆ 5 ರಿಂದ 8 ಗಂಟೆಯವರೆಗೆ ವಾಹನ ದಟ್ಟಣೆ ಅವಧಿಯಲ್ಲಿ ಕಾರ್, ಟೂವೀಲರ್, ಬಸ್ ನವರು ಬ್ರೇಕ್ ಹಾಕಿ ಹಾಕಿ ಕೈಕಾಲು ನೋಯಿಸಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ವಾಹನಗಳು ಒಂದಕ್ಕೊಂದು ಹಿಂಬದಿಯಿಂದ ಡಿಕ್ಕಿ ಹೊಡೆಯುತ್ತಾ, ಜಗಳವಾಗುವ ಸನ್ನಿವೇಶಗಳು ಆಗಾಗ ನಡೆಯುತ್ತಿರುತ್ತದೆ. ಆದಷ್ಟು ಶೀಘ್ರದಲ್ಲೇ ಈ ಮೇಲ್ಸೇತುವೆ ಕಾಮಗಾರಿಯನ್ನು ಬಿಬಿಎಂಪಿಯವರು ಪೂರ್ಣಗೊಳಿಸಬೇಕು” ಎನ್ನುತ್ತಾರೆ ಈ ರಸ್ತೆಯಲ್ಲಿ ಪ್ರತಿದಿನ ಸಾಗುವ ವಾಹನ ಸವಾರ ಗಿರೀಶ್.

“ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ” :

“ಬೆಂಗಳೂರು ಹೊರವರ್ತುಲ ರಸ್ತೆಯಲ್ಲಿ ಬರುವ ಹೊಸಕೆರೆಹಳ್ಳಿ ಜಂಕ್ಷನ್ ಬಳಿಯ ಮೇಲ್ಸೇತುವೆ ನಿರ್ಮಾಣ ಕಾರ್ಯ ವಿಳಂಬವಾಗಿರುವುದು ಇದೀಗ ಗಮನಕ್ಕೆ ಬಂದಿದೆ. ಈ ಭಾಗದಲ್ಲಿ ಪ್ರಸ್ತುತ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿ ವಿಳಂಬಕ್ಕೆ ಪಕ್ಕದಲ್ಲೇ ಏಕಮುಖ ಮಾರ್ಗದ ಮತ್ತೊಂದು ಕಿರು ಗ್ರೇಡ್ ಸಪರೇಟರ್ ನಿರ್ಮಾಣ ಸಂಬಂಧ ಕಡತ ಒಪ್ಪಿಗೆಗಾಗಿ ಸರ್ಕಾರಕ್ಕೆ ಸಲ್ಲಿಸಿದ್ದು, ಯಾವ ಹಂತದಲ್ಲಿದೆ ಎಂಬುದರ ಬಗ್ಗೆ ಪರಿಶೀಲಿಸಿ ಮೇಲ್ಸೇತುವೆ ಯೋಜನೆ ಪೂರ್ಣಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ.”

  • ಹರೀಶ್ ಕುಮಾರ್, ವಿಶೇಷ ಆಯುಕ್ತರು (ಯೋಜನೆ), ಬಿಬಿಎಂಪಿ

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Karnataka Energy News | ಕರ್ನಾಟಕಕ್ಕೆ ಪ್ರತಿಷ್ಠಿತ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ : ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಕ್ರೆಡಲ್ ಸಂಸ್ಥೆ

Next Post

TTD Vaikunta Ekadasi News | ತಿರುಪತಿ ತಿರುಮಲ ದೇವಾಲಯದಲ್ಲಿ ವೈಭವದ ವೈಕುಂಠ ಏಕಾದಶಿ ದರ್ಶನ : ಡಿ.23ರಿಂದ ಜ.1ರ ತನಕ ವೈಕುಂಠ ದ್ವಾರ ಪ್ರವೇಶಕ್ಕೆ ಅವಕಾಶ!! ಇಲ್ಲಿದೆ ಫುಲ್ ಡಿಟೇಲ್ಸ್

Next Post
ತಿರುಪತಿ ತಿರುಮಲ ದೇವಸ್ಥಾನದ ಮುಂಭಾಗ ಶ್ರೀ ವೆಂಕಟೇಶ್ವರನ ವೈಕುಂಠ ಏಕಾದಶಿ ದರ್ಶನಕ್ಕಾಗಿ ಬೆಳಗ್ಗೆಯೇ ದೇವಸ್ಥಾನದ ಮುಂಭಾಗ ಜಮಾಯಿಸಿದ್ದ ಭಕ್ತರ ಜನಸಾಗರ.

TTD Vaikunta Ekadasi News | ತಿರುಪತಿ ತಿರುಮಲ ದೇವಾಲಯದಲ್ಲಿ ವೈಭವದ ವೈಕುಂಠ ಏಕಾದಶಿ ದರ್ಶನ : ಡಿ.23ರಿಂದ ಜ.1ರ ತನಕ ವೈಕುಂಠ ದ್ವಾರ ಪ್ರವೇಶಕ್ಕೆ ಅವಕಾಶ!! ಇಲ್ಲಿದೆ ಫುಲ್ ಡಿಟೇಲ್ಸ್

Hanuma Jayanthi | ಹನುಮ ಜಯಂತಿ : ಪ್ರಾಣದೇವರು ಜಾಗೃತವಾಗಿರುವ ಹೊಳೆ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ!!!

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d