Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Agriculture News | ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ : ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

by Bengaluru Wire Desk
January 5, 2024
in News Wire
Reading Time: 1 min read
0

ಬೆಂಗಳೂರು, ಜ.5 www.bengaluruwire.com  : ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಮಹತ್ವದ ಘೋಷಣೆ ಮಾಡಿದರು. 

ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಡವಾಗಿ, ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು. ಹಾಗೆಯೇ ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ, ಹೊಸ ತಳಿ ಅಭಿವೃದ್ಧಿ ಹಾಗೂ ಸಿರಿಧಾನ್ಯ ರಫ್ತಿಗೆ ಅನುಕೂಲ ಆಗುವಂತೆ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹದಾಯಕವಾಗಿ ಅಗತ್ಯವಾದ ಕೇಂದ್ರವನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು. 

ಎಲ್ಲಿ ಮಳೆ ಕಡಿಮೆ ಬೀಳುತ್ತದೆಯೋ, ಭೂಮಿಯ ಫಲವತ್ತತೆ ಕಡಿಮೆ ಇರುವ ಪ್ರದೇಶಗಳಲ್ಲೂ ಬೆಳೆಯಬಹುದಾದ ಸಿರಿಧಾನ್ಯ ಉತ್ತಮ ಆರೋಗ್ಯಕ್ಕೆ ಬಹಳ ಸಹಕಾರಿ. ಇದಕ್ಕಾಗಿ ರಾಜ್ಯ ಸರ್ಕಾರ ನಿರಂತರವಾಗಿ ಸಿರಿಧಾನ್ಯ ಮೇಳವನ್ನು ಆಯೋಜಿಸುತ್ತಿದೆ ಎಂದರು. 

ಸಿರಿಧಾನ್ಯಗಳಿಂದ ಮಾಡಿದ ಅಲಂಕಾರ ಮೇಳದಲ್ಲಿ ಎಲ್ಲರನ್ನೂ ಆಕರ್ಷಿಸುತ್ತಿತ್ತು.

ಸಾರಜನಕ, ಲವಣ, ವಿಟಮಿನ್ ಮತ್ತು ನಾರಿನ ಅಂಶಗಳು ಸಿರಿಧಾನ್ಯಗಳಲ್ಲಿ ಹೆಚ್ಚಾಗಿವೆ. ಇವತ್ತಿನ ಹಲವು ಕಾಯಿಲೆಗಳಿಗೆ ರಾಸಾಯನಿಕ ಮಿಶ್ರಿತ ಆಹಾರ ಪದಾರ್ಥ ಸೇವನೆ ಕೂಡ ಒಂದು ಪ್ರಮುಖ ಕಾರಣವಾಗಿದೆ ಎಂದು ಅಧ್ಯಯನಗಳು ಹೇಳುತ್ತಿವೆ. ಇದಕ್ಕೆ ಸಾವಯವ ಸಿರಿಧಾನ್ಯ ಸೇವನೆ ಉತ್ತಮ ಪರಿಹಾರ ಆಗುತ್ತಿದೆ. 2004 ರಲ್ಲಿ ಸಾವಯವ ಕೃಷಿ ನೀತಿ, 2014 ರಲ್ಲಿ ಪರಿಷ್ಕೃತ ಸಾವಯವ ಕೃಷಿ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ. ಆ ಮೂಲಕ ಸಾವಯವ ಮತ್ತು ಸಿರಿಧಾನ್ಯ ಬೆಳೆ ಬೆಳೆಯಲು ನಮ್ಮ ಸರ್ಕಾರ ನಿರಂತರವಾಗಿ ಉತ್ತೇಜನ ನೀಡುತ್ತಿದೆ. ಇದರಿಂದ ಜನರ ಆರೋಗ್ಯಕ್ಕೂ ಬಹಳ ಸಹಕಾರಿಯಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು. 

ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024ರಲ್ಲಿ ಭಾಗವಹಿಸಿದ್ದ ಜನತೆ.

ಇತ್ತೀಚಿನ ವರ್ಷಗಳಲ್ಲಿ ಸಾವಯವ ಮತ್ತು ಸಿರಿಧಾನ್ಯ ಹೆಚ್ಚು ಜನಪ್ರಿಯ ಆಗುತ್ತಿದೆ. ಭಾರತ ಕೃಷಿ ಪ್ರಧಾನ ದೇಶವಾದ್ದರಿಂದ ಆಹಾರ ಸ್ವಾವಲಂಭನೆ ಸಾಧಿಸಲು ಇಂದಿರಾಗಾಂಧಿ ಅವರ ಅವಧಿಯಲ್ಲಿ ಹಸಿರು ಕ್ರಾಂತಿ ನಡೆಸಲಾಯಿತು. ಪ್ರತಿಯೊಬ್ಬರಿಗೂ ಆಹಾರ ಒದಗಿಸಲು ಹಸಿರು ಕ್ರಾಂತಿ ನೆರವಾಯಿತು ಎಂದರು. 

ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್,  ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್, ಉತ್ತರ ಪ್ರದೇಶ ಸರ್ಕಾರದ ಕೃಷಿ ಸಚಿವರಾದ ಸೂರ್ಯ ಪ್ರತಾಪ್ ಸಾಹಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರುಗಳಾದ ವಿನಯ್ ಕುಲಕರ್ಣಿ, ಸುಧಾಮ ದಾಸ್, ರಾಜೂಗೌಡ, ವಿನಯ್ ಕುಲಕರ್ಣಿ, ದಿನೇಶ್ ಗೂಳಿಗೌಡ, ಕೋನರೆಡ್ಡಿ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BW SPECIAL | Shakthi Scheme | ಶಕ್ತಿ ಯೋಜನೆಗೆ ಮೀಸಲಿಟ್ಟ ಹಣ 2,800 ಕೋಟಿ ರೂ. : ಆದರೆ ಈತನಕ ಕರ್ಚಾಗಿದ್ದು 3,051 ಕೋಟಿ ರೂ. !!! – ಸರ್ಕಾರಕ್ಕೆ ಹೊರೆಯಾಯ್ತಾ ಶಕ್ತಿ ಸ್ಕೀಮ್?

Next Post

ISRO Aditya L1 Mission | ಇಸ್ರೊ ಮತ್ತೊಂದು ಮೈಲಿಗಲ್ಲು : ಯಶಸ್ವಿಯಾಗಿ ಲ್ಯಾಂಗ್ರೇಜಿಯನ್ ಬಿಂದು ತಲುಪಿದ ಆದಿತ್ಯ-ಎಲ್1 ಉಪಗ್ರಹ

Next Post

ISRO Aditya L1 Mission | ಇಸ್ರೊ ಮತ್ತೊಂದು ಮೈಲಿಗಲ್ಲು : ಯಶಸ್ವಿಯಾಗಿ ಲ್ಯಾಂಗ್ರೇಜಿಯನ್ ಬಿಂದು ತಲುಪಿದ ಆದಿತ್ಯ-ಎಲ್1 ಉಪಗ್ರಹ

BBMP Property Tax | ಆಸ್ತಿ ತೆರಿಗೆ ಪಾವತಿಗೆ ಹೆಚ್ಚಿನ ಕಾಲಾವಕಾಶ, ಸರಳ ವಿಧಾನಕ್ಕಾಗಿ ಅಗತ್ಯ ಕಾನೂನು ತಿದ್ದುಪಡಿ ಮಾಡುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್ ಅಭಯ

Please login to join discussion

Like Us on Facebook

Follow Us on Twitter

Recent News

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group