Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Kannada News | ಕನ್ನಡ ನಾಮಫಲಕ ಸುಗ್ರೀವಾಜ್ಞೆ ವಾಪಸು ಆದೇಶವನ್ನು ರಾಜ್ಯಪಾಲರು ಪುನರ್ ಪರಿಶೀಲಿಸಬೇಕು : ಡಿಸಿಎಂ ಡಿ.ಕೆ.ಶಿವಕುಮಾರ್

ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಇರಬೇಕು ಎಂದು ಹೊರಡಿಸಿದ್ದ ಸುಗ್ರಿವಾಜ್ಞೆಯನ್ನು ರಾಜ್ಯಪಾಲರು ಸಹಿ ಹಾಕದೆ ಏಕೆ ವಾಪಸ್ಸು ಕಳುಹಿಸಿದ್ದಾರೆ ಎಂಬುದು ತಿಳಿದಿಲ್ಲ - ಡಿಸಿಎಂ

by Bengaluru Wire Desk
January 31, 2024
in News Wire
Reading Time: 1 min read
0

ಬೆಂಗಳೂರು, ಜ.31 www.bengaluruwire.com : “ಕನ್ನಡ ನಾಮಫಲಕ ಕಡ್ಡಾಯ ಸುಗ್ರೀವಾಜ್ಞೆ ವಾಪಸು ಕಳುಹಿಸಿರುವ ರಾಜ್ಯಪಾಲರು ಈ ಬಗ್ಗೆ ಪುನರ್ ಪರಿಶೀಲನೆ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ಕನ್ನಡ ನಾಮಫಲಕ ಕಡ್ಡಾಯ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಮಾಡದೆ ವಾಪಸ್ ಕಳುಹಿಸಿರುವ ವಿಚಾರವಾಗಿ ಮಾಧ್ಯಮದವರು ವಿಧಾನಸೌಧದ ಬಳಿ ಬುಧವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, “ಕನ್ನಡ ಭಾಷೆಯು ಭಾವಾನಾತ್ಮಕ ವಿಚಾರ. ಕರ್ನಾಟಕದಲ್ಲಿ ಇದ್ದೀರಿ, ನಮ್ಮ ರಾಜ್ಯಪಾಲರಾಗಿದ್ದೀರಿ. ಸರ್ಕಾರದ ಇಂತಹ ನೀತಿಯಲ್ಲಿ ತಪ್ಪು ಕಂಡು ಹಿಡಿಯಬಾರದು. ನಾಗರಿಕರು, ಇತರೇ ಪಕ್ಷದವರು ಈ ವಿಚಾರದಲ್ಲಿ ತಪ್ಪುಗಳಿವೆ ಎಂದು  ಅವರ ಗಮನಕ್ಕೆ ತಂದಿದ್ದಾರೆಯೇ? ಯಾರೂ ಆಕ್ಷೇಪ ಸಲ್ಲಿಸಿಲ್ಲ. ಆದ ಕಾರಣ ಮತ್ತೊಮ್ಮೆ ಆದೇಶ ಪರಿಶೀಲಿಸುವಂತೆ ಸರ್ಕಾರದ ಪರವಾಗಿ ರಾಜ್ಯಪಾಲರಲ್ಲಿ ಮನವಿ ಮಾಡುತ್ತೇನೆ” ಎಂದು ಹೇಳಿದರು.

ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಇರಬೇಕು ಎಂದು ಹೊರಡಿಸಿದ್ದ ಸುಗ್ರಿವಾಜ್ಞೆಯನ್ನು ರಾಜ್ಯಪಾಲರು ಸಹಿ ಹಾಕದೆ ಏಕೆ ವಾಪಸ್ಸು ಕಳುಹಿಸಿದ್ದಾರೆ ಎಂಬುದು ತಿಳಿದಿಲ್ಲ. ರಾಜ್ಯಪಾಲರು ವಿಧಾನಸಭೆ ಅಧಿವೇಶನ ನಡೆಯುವ ತನಕ ಕಾಯಬಾರದಿತ್ತು. ಈಗಲೇ ಸಹಿ ಮಾಡಬಹುದಿತ್ತು.

ದೇಶದ ರಕ್ಷಣೆಯ ವಿಚಾರದಲ್ಲಿ ನಮ್ಮ ಸರ್ಕಾರಗಳು ಬದ್ದವಾಗಿರುವಂತೆ, ರಾಜ್ಯದ ಗೌರವದ ವಿಚಾರದಲ್ಲೂ ನಾವು ಬದ್ದವಾಗಿದ್ದೇವೆ. ನಾಮ ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಇರಬೇಕು ಎಂದು ಸುಗ್ರಿವಾಜ್ಞೆ ಹೊರಡಿಸಲಾಗಿತ್ತು. ಕನ್ನಡ ಭಾಷೆ, ಅಸ್ಮಿತೆ ಮತ್ತು ಸಂಸ್ಕೃತಿ ರಕ್ಷಣೆ ಎಂದು ಇದನ್ನು ಕರೆಯುತ್ತೇವೆ. ಕನ್ನಡದ ವಿಚಾರವಾಗಿ ಪ್ರತಿಭಟನೆ, ಹೋರಾಟಗಳು ನಡೆಯುತ್ತಿದ್ದವು. ಇದನ್ನು ಗಮನದಲ್ಲಿ ಇಟ್ಟುಕೊಂಡು ನಾವು ಕನ್ನಡಪರ ತೀರ್ಮಾನ ತೆಗೆದುಕೊಂಡಿದ್ದೆವು. 

ಅಧಿವೇಶನದಲ್ಲಿ ಮಂಡನೆ:

“ನಾಮಫಲಗಳಲ್ಲಿ ಶೇ. 60 ಕನ್ನಡ ಇರಬೇಕು ಎನ್ನುವ ವಿಧೇಯಕವನ್ನು ವಿಧಾನಸಭೆ ಅಧಿವೇಶನಲ್ಲಿ ಮಂಡಿಸಿ ಜಾರಿಗೆ ತರುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಇನ್ನು 10-15 ದಿನಗಳಲ್ಲಿ ಅಧಿವೇಶನ ಆರಂಭವಾಗಲಿದ್ದು, ಈ ವಿಧೇಯಕ ಮಂಡನೆಯಾಗಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಈ ಮಧ್ಯೆ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ ಎಂದು ರಾಜಭವನ ಸ್ಪಷ್ಟನೆ ನೀಡಿದೆ. ಸುಗ್ರೀವಾಜ್ಞೆ ತಿರಸ್ಕರಿಸಿಲ್ಲ, ಸರ್ಕಾರಕ್ಕೆ ವಾಪಾಸ್ ಕಳುಹಿಸಲಾಗಿದೆ. ಅಧಿವೇಶನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯನ್ನು ಸರ್ಕಾರಕ್ಕೆ ವಾಪಾಸ್ ಕಳುಹಿಸಲಾಗಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಸ್ಪಷ್ಟನೆ ನೀಡಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಬಿಜೆಪಿ ಅಪಪ್ರಚಾರದ ಬಗ್ಗೆ ಬಾಲಕೃಷ್ಣ ಹೇಳಿಕೆ:

ಲೋಕಸಭೆಯಲ್ಲಿ ಹೆಚ್ಚಿನ ಸ್ಥಾನಗಳು ಕಾಂಗ್ರೆಸ್ ಗೆಲ್ಲದಿದ್ದರೆ ಗ್ಯಾರಂಟಿಗಳನ್ನು ನಿಲ್ಲಿಸಲಾಗುವುದು ಎಂಬ ಮಾಗಡಿ ಶಾಸಕ ಬಾಲಕೃಷ್ಣ ಅವರ ಹೇಳಿಕೆ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕೇಳಿದಾಗ “ಬಾಲಕೃಷ್ಣ ಅವರು ಈ ರೀತಿ ಹೇಳಿಕೆ ಕೊಟ್ಟಿಲ್ಲ. ಲೋಕಸಭೆ ನಂತರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂಬುದನ್ನು ಮಾತ್ರ ಹೇಳಿದ್ದಾರೆ”.

ಶಾಸಕ ಬಾಲಕೃಷ್ಣ ಹೇಳಿಕೆ ರಾಜ್ಯದ ಜನರಿಗೆ ಅವಮಾನ ಮಾಡಿದಂತೆ ಎನ್ನುವ ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಬಿಜೆಪಿಯವರಿಗೆ ಉತ್ತರ ನೀಡಲು ನಾನು ತಯಾರಿಲ್ಲ” ಎಂದರು.

ಫೆ.17 ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ :

ಮಂಗಳೂರಿನಲ್ಲಿ ಫೆ.17 ರಂದು ಎಐಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ. ಎಲ್ಲಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

PSI Exam Key Answers | ಪಿಎಸ್ಐ ಮರು ಪರೀಕ್ಷೆ ತಾತ್ಕಾಲಿಕ ಕೀ ಉತ್ತರ ಪ್ರಕಟ : ಕೀ ಉತ್ತರ ಹೀಗೆ ಪರಿಶೀಲಿಸಿ

Next Post

BBMP Breaking News | ಬೊಮ್ಮನಹಳ್ಳಿ ವಲಯದ ಆಸ್ತಿ ತೆರಿಗೆ ಸಂಗ್ರಹ ಲೋಪ : ಜಂಟಿ ಆಯುಕ್ತರಿಗೆ ಶೋಕಾಸ್ ನೋಟಿಸ್ – ಡಿಸಿ ವಿರುದ್ದ ವಿಚಾರಣೆ ; 6 ಎಆರ್ ಒ ಅಮಾನತಿಗೆ ಶಿಫಾರಸ್ಸು

Next Post

BBMP Breaking News | ಬೊಮ್ಮನಹಳ್ಳಿ ವಲಯದ ಆಸ್ತಿ ತೆರಿಗೆ ಸಂಗ್ರಹ ಲೋಪ : ಜಂಟಿ ಆಯುಕ್ತರಿಗೆ ಶೋಕಾಸ್ ನೋಟಿಸ್ - ಡಿಸಿ ವಿರುದ್ದ ವಿಚಾರಣೆ ; 6 ಎಆರ್ ಒ ಅಮಾನತಿಗೆ ಶಿಫಾರಸ್ಸು

RBI Shocking News | Paytm ಪಾವತಿ ಬ್ಯಾಂಕ್ ಸೇವೆಗಳ ಮೇಲೆ ನಿರ್ಬಂಧ : ಈಗ ನಿಮ್ಮ ಹಣ ಏನಾಗುತ್ತದೆ?

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d