Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW EXCLUSIVE | BBMP White topping Roads | ಬೆಂಗಳೂರಿನ ಉದ್ಯಾನನಗರಿ ಪಟ್ಟಕ್ಕೆ ಕುತ್ತು : ಬಿಳಿ ಆನೆ ಸಾಕಲು ಹೊರಟ ಬಿಬಿಎಂಪಿ ; 1200 ಕೋಟಿ ರೂ. ಬೃಹತ್ ವೆಚ್ಚದಲ್ಲಿ ಮತ್ತೆ ಕಾಂಕ್ರೀಟ್ ರಸ್ತೆ

ಆತುರಾತುರವಾಗಿ ವೈಟ್ ಟಾಪಿಂಗ್ ರಸ್ತೆ ಟೆಂಡರ್ ಕರೆಯಲು ತೆರೆಮರೆಯಲ್ಲಿ ಸಿದ್ಧತೆ | ಪರೋಕ್ಷವಾಗಿ ಭ್ರಷ್ಟರ ಜೋಬು ತುಂಬಿಸಲು, ಪಾಲಿಕೆ ಆರ್ಥಿಕ ಸಂಪನ್ಮೂಲ ಬರಿದಾಗಲು ಕಾರಣವಾಗುವ ಯೋಜನೆ | ಸದ್ಯ ಸರ್ಕಾರ 800 ಕೋಟಿ + ಪಾಲಿಕೆ 1200 ಕೋಟಿ ರೂ. ಸೇರಿ 2,000 ಕೋಟಿ ರೂ. ವೈಟ್ ಟಾಪಿಂಗ್ ಗೆ ಮೀಸಲು

by Bengaluru Wire Desk
February 2, 2024
in Bengaluru Focus, BW Special, News Wire, Public interest
Reading Time: 1 min read
0

ಬೆಂಗಳೂರು, ಫೆ.2 www.bengaluruwire.com : ರಾಜಧಾನಿ ಬೆಂಗಳೂರಿನ ಮತ್ತಷ್ಟು ರಸ್ತೆಗಳನ್ನು ಕಾಂಕ್ರಿಟ್ ಮಯ ಮಾಡಲು ಬಿಬಿಎಂಪಿ ಹೊರಟಿದೆ. ನಗರದ ಆಸ್ತಿ ತೆರಿಗೆದಾರರ ಹಣದಲ್ಲಿ ಅತಿ ವೆಚ್ಚದಾಯಕವಾದ ಸುಮಾರು 1,200 ಕೋಟಿ ರೂ. ಮೊತ್ತದ ವೆಚ್ಚದಲ್ಲಿ ಕ್ರಿಯಾ ಯೋಜನೆ ರೂಪಿಸಿ ಸರ್ಕಾರದಿಂದ ಆತುರಾತುರವಾಗಿ ಅನುಮೋದನೆ ಪಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಬ್ರ್ಯಾಂಡ್ ಬೆಂಗಳೂರು ಯೋಜನೆ ಹಿನ್ನಲೆಯಲ್ಲಿ ನಗರದ ಜನತೆಗೆ ಸುಗಮ ವಾಹನ ಸಂಚಾರ ಹಾಗೂ ಉತ್ತಮ ಪಾದಚಾರಿ ಮಾರ್ಗದ ಹೆಸರಿನಲ್ಲಿ 2023-24, 2024-25 ಹಾಗೂ 2025-26ನೇ ಇಸವಿಯಲ್ಲಿ ತಲಾ 400 ಕೋಟಿ ರೂ.ಗಳಂತೆ ಹೆಚ್ಚುವರಿ ನಿರೀಕ್ಷಿಸಿದ ಆಸ್ತಿ ತೆರಿಗೆಯನ್ನು ಆಧಾರವಾಗಿಟ್ಟುಕೊಂಡು ಪಾಲಿಕೆ ಸಂಪನ್ಮೂಲದಲ್ಲಿಯೇ ಈ ಯೋಜನೆಯನ್ನು ಕಾರ್ಯಗತ ಮಾಡಲು ರಾಜ್ಯ ಸರ್ಕಾರ ಜ.12ರಂದು ಒಪ್ಪಿಗೆ ನೀಡಿತ್ತು.‌ ಅದಕ್ಕೆ ಫೆ.1ರಂದು ನಡೆದ ಸಚಿವ ಸಂಪುಟ ಅನುಮೋದನೆಯ ಮುದ್ರೆಯು ಬಿದ್ದಂತಾಗಿದೆ.

900 ಕೋಟಿ ರೂ. ಹಣವನ್ನು ನಗರದ 70 ರಸ್ತೆಗಳಲ್ಲಿ ವೈಟ್ ಟಾಪಿಂಗ್ ನಿರ್ಮಾಣಕ್ಕೆ, 91.50 ಕೋಟಿ ರೂ., ನಾಮಕಾವಸ್ತೆಗೆ  ಮಹದೇವಪುರ ಹಾಗೂ ಬೊಮ್ಮನಹಳ್ಳಿ ವಲಯಗಳಲ್ಲಿ ತಲಾ 6 ರಸ್ತೆಗಳಂತೆ ಒಟ್ಟು 12 ರಸ್ತೆಗಳ ಡಾಂಬರೀಕರಣ, ಮಳೆನೀರು ಮೋರಿ ಅಭಿವೃದ್ಧಿ ಹಾಗೂ 200 ಕೋಟಿ ರೂ. ಹಣವನ್ನು ರಾಜಕಾಲುವೆ ರಕ್ಷಣೆ, ಅಭಿವೃದ್ಧಿ ಹಾಗೂ ಬಫರ್ ಜೋನ್‌ನಲ್ಲಿ ಹೊಸದಾಗಿ ರಸ್ತೆ ನಿರ್ಮಾಣ ಮತ್ತು ಟಾರ್ ಹಾಕಲು ಹಣ ನಿಗದಿಪಡಿಸಲಾಗಿದೆ.

ಈಗಾಗಲೇ ರಾಜ್ಯ ಸರ್ಕಾರ ಬಿಬಿಎಂಪಿ ವ್ಯಾಪ್ತಿಯಲ್ಲಿನ ಪ್ರಮುಖ ರಸ್ತೆಗಳಲ್ಲಿ 800 ಕೋಟಿ ರೂ. ವೆಚ್ಚದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೊಂಡಿದೆ. ಅದರ ಜೊತೆಗೆ ಪಾಲಿಕೆ ಸ್ವಂತ ಸಂಪನ್ಮೂಲ 1,200 ಕೋಟಿ ಸೇರಿದರೆ ಒಟ್ಟಾರೆ ಬರೋಬ್ಬರಿ 2,000 ಕೋಟಿ ರೂ. ವೆಚ್ಚದಲ್ಲಿ ನಗರದ ರಸ್ತೆಗಳಿಗೆ ಶಾಶ್ವತವಾಗಿ ಕಾಂಕ್ರಿಟ್ ಮಯವಾಗುತ್ತೆ. ಕಾಂಕ್ರೀಟ್ ರಸ್ತೆಯಿಂದಾಗುವ ದುಷ್ಪರಿಣಾಮಗಳಲ್ಲಿ ರಸ್ತೆಯಲ್ಲಿ ನೀರು ಇಂಗದಿರುವುದು ಪ್ರಮುಖ ಸಮಸ್ಯೆಯಾಗಿದೆ. ವೈಟ್ ಟಾಪಿಂಗ್ ರಸ್ತೆಗಳಿಂದ ಪರಿಸರದ ಮೇಲಾಗುವ ದುಷ್ಪರಿಣಾಮದ ಬಗ್ಗೆ ಅಧ್ಯಯನ ಅಗತ್ಯವಿದೆ.

ಸರ್ಕಾರದ ಆದೇಶ ಪ್ರತಿ

ದೊಡ್ಡ ಯೋಜನೆಯಲ್ಲಿ ಸಣ್ಣ ಗುತ್ತಿಗೆದಾರರಿಗೆ ಅವಕಾಶವೇ ಇಲ್ಲ :

1200 ಕೋಟಿ ರೂ. ನಷ್ಟು ದೊಡ್ಡ ಮೊತ್ತದ ಯೋಜನೆಯಲ್ಲಿ ಪಾಲಿಕೆಯ ಸಣ್ಣ ಗುತ್ತಿಗೆದಾರರು ಟೆಂಡರ್ ನಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ.‌ ಯಾಕಂದ್ರೆ ಇಲ್ಲಿ ಪ್ರತಿ ಕಾಮಗಾರಿಗಳ ಪ್ಯಾಕೇಜ್ ಕನಿಷ್ಠ ಮೊತ್ತ 100 ಕೋಟಿ ರೂ.ಗಳಿಗಿಂತ ಕಡಿಮೆಯಿರಬಾರದು ಎಂದು ಸರ್ಕಾರ ಷರತ್ತು ವಿಧಿಸಿದೆ.

ನಗರದಲ್ಲಿ 2023-24ನೇ ಸಾಲಿನ ಪಾಲಿಕೆ ಬಜೆಟ್ ನಲ್ಲಿ ಘೋಷಣೆ ಮಾಡಿದ ಶೇ.30ರಷ್ಟು ಅಂಶಗಳು ಅನುಷ್ಠಾನ ಆಗಿಲ್ಲ ಎನ್ನುತ್ತಿವೆ ಉನ್ನತ ಮೂಲಗಳು. ಯೋಜನೆ ಗೆ ಟೆಂಡರ್ ಪಡೆಯಲು ಹಾಗೂ ಯೋಜನೆ ಅನುಷ್ಠಾನ ಹಾಗೂ ಬಿಲ್ ಪಡೆಯಲು ಅಧಿಕಾರಿ ಮತ್ತು ಜನಪ್ರತಿನಿಧಿಗಳು ಪರ್ಸೆಂಟೇಜ್ ಪಡೆಯುತ್ತಿದ್ದಾರೆ ಎಂಬ ವಿಪಕ್ಷಗಳ ಆರೋಪದ ನಡುವೆಯೇ ಬೆಂಗಳೂರಿನ ನಗರ ಯೋಜನಾ ತಜ್ಞರು, ಪರಿಸರ ತಜ್ಞರು ರಸ್ತೆಗಳಿಗೆ ಕಾಂಕ್ರಿಟ್ ಹಾಕುವ ವೈಟ್ ಟಾಪಿಂಗ್ ಯೋಜನೆ ಬಗ್ಗೆ ಆಕ್ಷೇಪ ಎತ್ತಿದ್ದಾರೆ. ಪ್ರತಿ ಕಿಲೋಮೀಟರ್‌ಗೆ 75 ಲಕ್ಷದಿಂದ 1 ಕೋಟಿ ರೂಪಾಯಿ ವೆಚ್ಚದ ಡಾಂಬರೀಕರಣಕ್ಕೆ ಹೋಲಿಸಿದರೆ ಪ್ರಸ್ತುತ ಬಿಬಿಎಂಪಿಯು ಒಂದು ಕಿಲೋಮೀಟರ್ ರಸ್ತೆಯ ವೈಟ್-ಟಾಪ್‌ಗೆ ಸರಾಸರಿಯಾಗಿ 9 ರಿಂದ 10 ಕೋಟಿ ರೂ. ವೆಚ್ಚ ಮಾಡುತ್ತಿದೆ. ಹೀಗಿದ್ದರೂ ಕಾಂಗ್ರೆಸ್ ಸರ್ಕಾರ ಹಿಂಬಾಗಿಲಿನಿಂದ ಸಾರ್ವಜನಿಕರು ಹಾಗೂ ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಮೂಲಸೌಕರ್ಯ ಕಲ್ಪಿಸುವ ಹೆಸರಿನಲ್ಲಿ ಜನರ ತೆರಿಗೆ ಹಣವನ್ನು ಅನವಶ್ಯಕವಾಗಿ ವ್ಯರ್ಥ ಮಾಡಲು ಹೊರಟಿದೆ.

ಆತುರಾತುರವಾಗಿ ಟೆಂಡರ್ ಕರೆದು ಕಾಮಗಾರಿಗೆ ಕ್ರಮ :

ಈ ಯೋಜನೆಗೆ ಆದಷ್ಟು ಶೀಘ್ರದಲ್ಲೆ ಸಮಗ್ರ ಯೋಜನಾ ವರದಿ ಸಿದ್ಧಪಡಿಸಿ ಟೆಂಡರ್ ಕರೆದು, ಆ ಸಂದರ್ಭದಲ್ಲೇ ತಾಂತ್ರಿಕ ಮೌಲ್ಯಮಾಪನ ನಡೆಸಿ, ಒಂದೇ ಬಾರಿಗೆ ಟೆಂಡರ್ ಹಾಗೂ ಸರ್ಕಾರದ ಆಡಳಿತಾತ್ಮಕ ಅನುಮೋದನೆ ಪಡೆಯಬೇಕೆಂದು ಜ.12ರ ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 

ಎಸ್ಕ್ರೂ ಖಾತೆಯಲ್ಲಿಟ್ಟ ಹಣ ಅನ್ಯ ಉದ್ದೇಶಕ್ಕೆ ಬಳಸುವಂತಿಲ್ಲ :

ಈ ಯೋಜನೆ ಕಾರ್ಯಾರಂಭ ಮಾಡಿದ ದಿನಾಂಕದಿಂದ ಪಾಲಿಕೆ ಕಂದಾಯ ವಿಭಾಗದಲ್ಲಿ ಸಂಗ್ರಹವಾಗುವ ಹೆಚ್ಚುವರಿ ಆಸ್ತಿ ತೆರಿಗೆ ಹಣವನ್ನು ಪ್ರತ್ಯೇಕವಾಗಿ ಈ ಯೋಜನೆಗಾಗಿಯೇ ಎಸ್ಕ್ರೂ ಖಾತೆ ತೆರೆದು ಪ್ರತಿ ತಿಂಗಳು 1/12 ಭಾಗದಷ್ಟು ಹಣವನ್ನು ವರ್ಗಾಯಿಸಬೇಕು. ಯಾವುದೇ ಕಾರಣಕ್ಕೂ ಇದರಲ್ಲಿನ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುವಂತಿಲ್ಲ. ಹಾಗೊಮ್ಮೆ ಬಳಸಬೇಕಾದ ಪರಿಸ್ಥಿತಿ ಬಂದರೆ ಆರ್ಥಿಕ ಇಲಾಖೆ ಹಾಗೂ ಸಚಿವ ಸಂಪುಟದ ಪೂರ್ವಾನುಮತಿ ಪಡೆಯಬೇಕೆಂದು ಷರತ್ತಿನಲ್ಲಿ ತಿಳಿಸಲಾಗಿದೆ.

ಯೋಜನೆ ಜಾರಿಯಿಂದ ಆದಾಯ ಕೊರತೆಯಾದರೆ ಪಾಲಿಕೆಯೇ ಜವಾಬ್ದಾರಿ!! :

ಬಿಬಿಎಂಪಿಯು ತನ್ನ ಆದಾಯದಲ್ಲಿ ವಾರ್ಷಿಕ 400 ಕೋಟಿ ರೂ.ಗಳ ಹೆಚ್ಚುವರಿ ಆದಾಯವನ್ನು ನಿರೀಕ್ಷಿಸಿರುವುದರಿಂದ, ಪಾಲಿಕೆಯು ತನ್ನ ತೆರಿಗೆ ವ್ಯಾಪ್ತಿಯನ್ನು ವಿಸ್ತರಿಸಲು ಮತ್ತು ಸೋರಿಕೆಯನ್ನು ತಪ್ಪಿಸಲು ಹೆಚ್ಚು ದಕ್ಷತೆಯಿಂದ ಮತ್ತು ಪರಿಣಾಮಕಾರಿಯಾಗಿ ತೆರಿಗೆ ಆದಾಯವನ್ನು ಹೆಚ್ಚಿಸಿಕೊಳ್ಳಲು ಲಭ್ಯವಿರುವ ಎಲ್ಲಾ ಮಾರ್ಗೋಪಾಯಗಳನ್ನು ಕೈಗೊಳ್ಳಬೇಕು. 

ಈ ಯೋಜನೆಯ ಜಾರಿಯಿಂದಾಗಿ ಸಂಬಳ ಮತ್ತು ಇನ್ನಿತರೆ ವೆಚ್ಚಗಳು ಸೇರಿದಂತೆ ಉದ್ಭವಿಸಬಹುದಾದ ಯಾವುದೇ ಅನುದಾನದ ಕೊರತೆ ಎದುರಾದರೆ ಅದಕ್ಕೆ ಬಿಬಿಎಂಪಿಯೇ ಜವಾಬ್ದಾರಿಯಾಗಿರುತ್ತದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಯಾವುದೇ ಬಾಧ್ಯತೆ ಇರುವುದಿಲ್ಲ ಅಂತ ಹೇಳಿ ಸರ್ಕಾರ ಜಾರಿಕೊಂಡಿದೆ.

ಮಳೆ ಬಾರದೆ ರಸ್ತೆಗುಂಡಿ ಸಮಸ್ಯೆ ಅಷ್ಟಾಗಿ ಬಾಧಿಸಿಲ್ಲ :

ವರ್ಷಂಪ್ರತಿ ಸಾವಿರಾರು ಕೋಟಿ ರೂ. ಹಣ ವೆಚ್ಚ ಮಾಡುತ್ತಿದ್ದರೂ ನಗರದ ಮುಖ್ಯ ರಸ್ತೆಗಳು, ಪಾದಚಾರಿ ಮಾರ್ಗ ಹಾಗೂ ಚರಂಡಿಗಳಾಗಲಿ ಸುಸ್ಥಿತಿಯಲ್ಲಿಲ್ಲ. 2023-24ನೇ ಸಾಲಿನ ಮಳೆಗಾಲದಲ್ಲಿ ಮಳೆಯ ಆರ್ಭಟ ಹೆಚ್ಚಿಲ್ಲದ ಕಾರಣ ದೊಡ್ಡ ದುರ್ಘಟನೆಗಳು ಸಂಭವಿಸದೆ, ರಸ್ತೆಗಳಲ್ಲಿ ಸ್ವಲ್ಪ ಮಟ್ಟಿಗೆ ವಾಹನ ಸಂಚರಿಸುವಂತಿದೆ. ಸಾರ್ವತ್ರಿಕ ವಿಧಾನಸಭೆಯ ಕಾರಣಕ್ಕೆ ಹಿಂದಿನ ಸರ್ಕಾರ, ಆಡಳಿತಾಧಿಕಾರಿಗಳ ಆಡಳಿತಾವಧಿಯಲ್ಲಿ ನಗರದ ಪ್ರಮುಖ ರಸ್ತೆಗಳಿಗೆ ಡಾಂಬರ್ ಹಾಕುವ ಶಾಸ್ತ್ರ ಮಾಡಿತ್ತು. ಆದರೂ ಕಾಮಗಾರಿ ಗುಣಮಟ್ಟದ ವಿಚಾರದಲ್ಲಿ ರಾಜಿಯಾಗಿತ್ತು ಎಂದು ಸಾಕಷ್ಟು ಆರೋಪಗಳು ಕೇಳಿಬಂದಿದ್ದವು.

ಪಾಲಿಕೆ ಒಟ್ಟಾರೆ ಸಂಪನ್ಮೂಲ 6 ಸಾವಿರ ಕೋಟಿ ರೂ.‌ದಾಟಿಲ್ಲ :

ಪಾಲಿಕೆಯ ಎಲ್ಲಾ ಮೂಲಗಳಿಂದ ಲೆಕ್ಕ ಹಾಕಿದರೂ ವರ್ಷಂಪ್ರತಿ ಆರ್ಥಿಕ ಸಂಪನ್ಮೂಲ 6,000 ಕೋಟಿ ರೂ. ಮೀರುವುದಿಲ್ಲ. ಅದರಲ್ಲೂ ಮೂಲಭೂತ ಸೌಕರ್ಯ ಕಲ್ಪಿಸುವ ಈ ಯೋಜನೆಗೆ ಆಸ್ತಿ ತೆರಿಗೆ ಸಂಗ್ರಹದ ಮೇಲೆ ಅವಲಂಬಿತವಾಗಿರೋದರಿಂದ ಹೆಚ್ಚುವರಿ ಆಸ್ತಿ ತೆರಿಗೆ ಸಂಗ್ರಹ ಸಂಪನ್ಮೂಲವನ್ನು ಇನ್ನಿತರ ಅವಶ್ಯಕ ಕಾರ್ಯಗಳಾದ ಶಿಕ್ಷಣ, ಆರೋಗ್ಯ, ಸಮಾಜ ಕಲ್ಯಾಣ, ನಗರ ನೈರ್ಮಲ್ಯತೆ, ಕುಡಿಯುವ ನೀರು ಹಾಗೂ ಬೀದಿ ದೀಪಗಳಂತಹ ಕೆಲಸಗಳಿಗೆ ಬಳಸುವುದು ತಪ್ಪುತ್ತದೆ. ಇದರಿಂದ ಆರ್ಥಿಕ ಸಂಪನ್ಮೂಲಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮುಂದೆ ದೇಹೀ ಎನ್ನುವಂತೆ ಪಾಲಿಕೆಯನ್ನು ಈ ಕ್ರಮ, ಪರಾವಲಂಬಿ ಮಾಡುವ ಹುನ್ನಾರವಲ್ಲದೆ ಮತ್ತಿನ್ನೇನಲ್ಲ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Union Budget 2024-2025 | ಕೇಂದ್ರ ಬಜೆಟ್ 2024 ಮಂಡನೆ : 3 ಕೋಟಿ ಮನೆ ನಿರ್ಮಾಣ ಗುರಿ ಶೀಘ್ರದಲ್ಲೇ ಸಾಧನೆ ; ಸಚಿವೆ ನಿರ್ಮಲಾ ಸೀತಾರಾಮನ್ 6ನೇ ಬಾರಿ ಆಯವ್ಯಯ ಮಂಡನೆ

Next Post

Bangalore Traffic ASTraM App | ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಕೃತಕ ಬುದ್ಧಿಮತ್ತೆ ಅಸ್ತ್ರಂ ಬಳಕೆ : ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ?

Next Post

Bangalore Traffic ASTraM App | ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಕೃತಕ ಬುದ್ಧಿಮತ್ತೆ ಅಸ್ತ್ರಂ ಬಳಕೆ : ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ?

Bharath Ratna 2024 | ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿ : ಪ್ರಧಾನಿ ನರೇಂದ್ರ ಮೋದಿ ಘೋಷಣೆ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d