Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bangalore Water Problem | ಬೆಂಗಳೂರಿನಲ್ಲಿ ಟ್ಯಾಂಕರ್ ನೀರಿಗೆ ಸದ್ಯದಲ್ಲೇ ದರ ನಿಗದಿ : ಬಿಬಿಎಂಪಿಯಲ್ಲಿ ಮಾ.1 ರಿಂದ ನೀರಿನ ಟ್ಯಾಂಕರ್ ವಾಹನಗಳ ಸ್ವಯಂ ನೋಂದಣಿಗೆ ಅವಕಾಶ

ಮಾ.7ನೇ ತಾರೀಖಿನ ಒಳಗೆ ನೀರಿನ ಟ್ಯಾಂಕರ್ ವಾಹನ ನೋಂದಣಿಗೆ ಅವಕಾಶ | ನೋಂದಣಿ ಮಾಡದಿದ್ದರೆ ಟ್ಯಾಂಕರ್ ನೀರು ಸರಬರಾಜಿಗೆ ಅವಕಾಶ ಕೊಡಲ್ಲ - ಪರಿಸ್ಥಿತಿ ನಿಯಂತ್ರಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ - ಪಾಲಿಕೆ ಚೀಫ್ ಕಮಿಷನರ್

by Bengaluru Wire Desk
February 28, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಫೆ.28 www.bengaluruwire.com : ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಒಂದೆರಡು ದಿನಗಳಲ್ಲಿ ಟ್ಯಾಂಕರ್ ನೀರು ಪೂರೈಸುವವರ ಜೊತೆ ಸಭೆ ನಡೆಸಿ, ಟ್ಯಾಂಕರ್ ನೀರಿನ ದರವನ್ನು ಅಂತಿಮವಾಗಿ ನಿಗದಿಪಡಿಸಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಇಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಜೊತೆ ಬಿಡಬ್ಲ್ಯುಎಸ್ ಎಸ್ ಬಿ ಮತ್ತು ಬಿಬಿಎಂಪಿ ಅಧಿಕಾರಿಗಳು ಜಂಟಿ ಸಭೆ ನಡೆಸಿದ ಬಳಿಕ ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಜೊತೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಒಟ್ಟಾರೆ ಸಾರಿಗೆ ಇಲಾಖೆಯ 3,500 ನೀರಿನ ಟ್ಯಾಂಕರ್ ನೋಂದಣಿಯಾಗಿದೆ. ಆದರೆ ಬಿಬಿಎಂಪಿಯಲ್ಲಿ ಕೇವಲ 60 ನೀರಿನ ಟ್ಯಾಂಕರ್ ನವರು ವ್ಯಾಪಾರ ಪರವಾನಗಿ ಪಡೆದಿದ್ದಾರೆ. ನಗರದಲ್ಲಿ ನೀರಿನ ಸಮಸ್ಯೆ ನಿಯಂತ್ರಿಸುವ ಸಲುವಾಗಿ ಮಾ.1 ರಿಂದ ಏಳನೇ ತಾರೀಖಿನ ಒಳಗೆ ಸ್ವಯಂ ನೋಂದಣಿ ಮಾಡಿಕೊಳ್ಳಬೇಕು. ಆನಂತರ ಪಾಲಿಕೆ ಅದಕ್ಕೆ ಷರತ್ತು ವಿಧಿಸುತ್ತೇವೆ. ನೀರಿನ ವ್ಯವಹಾರ ನಡೆಸುವ ಎಲ್ಲರಿಗೂ ವಾಹನ ನೋಂದಣಿ ಮಾಡಲು ಅವಕಾಶವಿದೆ. ಮಾ.7ನೇ ತಾರೀಖಿನ ಒಳಗೆ ನೀರಿನ ಟ್ಯಾಂಕರ್ ವಾಹನ ನೋಂದಣಿ ಮಾಡದಿದ್ದರೆ ನೀರು ಸರಬರಾಜು ಮಾಡಲು ಅವಕಾಶ ಮಾಡಿಕೊಡುವುದಿಲ್ಲ.

ಬೆಂಗಳೂರು ಜಲಮಂಡಳಿ ಹಾಗೂ ಬಿಬಿಎಂಪಿ ಅಧಿಕಾರಿಗಳು ಬುಧವಾರ ಜಂಟಿ ಸುದ್ದಿಗೋಷ್ಠಿ‌ ನಡೆಸಿರುವ ಚಿತ್ರ.

ಬಿಬಿಎಂಪಿಯಿಂದ ಇಂತಹ ನೀರಿನ ಟ್ಯಾಂಕರ್ ಗಳ ನೋಂದಣಿಗೆ ತಂತ್ರಾಂಶ ರಚಿಸುವ ಕಾರ್ಯ ಆರಂಭವಾಗಿದೆ. ಕೆಲವು ನೀರಿನ ಟ್ಯಾಂಕರ್ ನವರ ಹತ್ತಿರ ಒಂದು ಹಂತದಲ್ಲಿ‌ ನೀರಿನ ಲೆಕ್ಕಚಾರ ಮಾತನಾಡುತ್ತಿದ್ದೇವೆ. ಟ್ಯಾಂಕರ್ ನೀರಿನ‌ ದರ ನಿಗದಿ ಬಗ್ಗೆ ಸದ್ಯದಲ್ಲೇ ನಿಗದಿ ಮಾಡುತ್ತೇವೆ. ಪಾಲಿಕೆ ರೂಪಿಸುವ ತಂತ್ರಾಂಶದಲ್ಲಿ ನೋಂದಣಿ ಮಾಡದ ನೀರಿನ ಟ್ಯಾಂಕರ್ ಗಳಿಗೆ ತೊಂದರೆಯಾಗಬಹುದು. 

ನೀರಿನ ಸಮಸ್ಯೆಯಿರುವ 110 ಹಳ್ಳಿಗಳು ಬರುವ 30 ವಾರ್ಡ್ ಗಳಲ್ಲೂ, ಪ್ರತಿಯೊಂದು ವಾರ್ಡ್ ನಲ್ಲಿ ಬೆಂಗಳೂರು ಜಲಮಂಡಳಿ ತಲಾ ಒಬ್ಬ ಎಇ ಹಾಗೂ ಪಾಲಿಕೆಯ ತಲಾ ಒಬ್ಬ ಎಇ ವಾರ್ಡ್ ಎಂಜಿನಿಯರ್ ಗಳನ್ನು ನಿಯೋಜಿಸುತ್ತೇವೆ. ಬೆಂಗಳೂರು ಜಲಮಂಡಳಿ, ನಗರ ಜಿಲ್ಲಾಧಿಕಾರಿಗಳ ಮೂಲಕ 200 ನೀರಿನ ಟ್ಯಾಂಕರ್ ಪಡೆದುಕೊಳ್ಳುತ್ತಿದ್ದೇವೆ. 100 ನೀರಿನ ಟ್ಯಾಂಕರ್ 110 ಹಳ್ಳಿಗಳಿಗೆ ಹಾಗೂ ಉಳಿದ 100 ನೀರಿನ ಟ್ಯಾಂಕರ್ ಪಾಲಿಕೆಯ ಉಳಿದ ವಾರ್ಡ್ ಗಳಿಗೆ ನೀರು ಪೂರೈಸಲಾಗುತ್ತದೆ.

ಟ್ಯಾಂಕರ್ ನೀರಿನ ದರವನ್ನು ಬಿಬಿಎಂಪಿ ಹಾಗೂ ಜಲಮಂಡಳಿ ಸಮಾಲೋಚನೆ ನಡೆಸಿ ನಿಗದಿ ಮಾಡಿದ ಬಳಿಕ, ನೀರಿನ ಟ್ಯಾಂಕರ್ ನವರು ಅದಕ್ಕಿಂತ ಹೆಚ್ಚಿನ ನೀರಿನ ದರ ಪಡೆದರೆ ಅವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಅಥವಾ ಇನ್ಯಾವುದೇ ಕಾನೂನಿನಡಿ ಕ್ರಮ ಕೈಗೊಳ್ಳಲು ನಮ್ಮ ಬಳಿ ಅವಕಾಶವಿದೆ. ಬೆಂಗಳೂರಿನ ನಾಲ್ಕು ತಾಲೂಕುಗಳನ್ನು ಬರಪೀಡಿತ ಅಂತ ಸರ್ಕಾರ ಘೋಷಣೆ ಮಾಡಿದೆ. ಸಾಕಷ್ಟು ನೀರಿನ ಸಮಸ್ಯೆ ಇರುವ ನಗರ ಪ್ರದೇಶಗಳಲ್ಲಿ 108 ದೊಡ್ಡ ಪ್ಲಾಸ್ಟಿಕ್ ನೀರಿನ ಟ್ಯಾಂಕರ್ ಇಟ್ಟು ನೀರು ಪೂರೈಸಲು ಕ್ರಮ ಕೈಗೊಂಡಿದ್ದೇವೆ ಎಂದವರು ಹೇಳಿದ್ದಾರೆ.

ನಗರದಲ್ಲಿ ಲಾರಿ ಅಸೋಸಿಯೇಷನ್ ಭಾಗವಾಗಿ ನೀರಿನ ಟ್ಯಾಂಕರ್ ನವರು ನೀರು ಪೂರೈಕೆ ಮಾಡುತ್ತಿದ್ದಾರೆ. ಬೇಸಿಗೆ ಬರುವ ಮುನ್ನವೇ ನೀರಿನ ದರ ಕಳೆದ 15-20 ದಿನಗಳಿಂದ ಏರಿಕೆಯಾಗಿದೆ. 

ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಮಾತನಾಡುತ್ತಾ, ನಗರದಲ್ಲಿನ ನೀರಿನ ಸಮಸ್ಯೆ ತಲೆದೋರಿರುವ ಕಡೆ ಬಿಡಬ್ಲ್ಯುಎಸ್ ಎಸ್ ಬಿ 136 ನೀರಿನ ಟ್ಯಾಂಕರ್ ವಾಹನದ ಮೂಲಕ ಉಚಿತವಾಗಿ ಕಾವೇರಿ ನೀರು ಸರಬರಾಜು ಮಾಡುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ತ್ಯಾಜ್ಯ ಸಂಸ್ಕರಣಾ ನೀರು ಬಳಕೆ ಮಾಡುತ್ತಿದ್ದಂತೆ ಬೆಂಗಳೂರಿನ ಅಂತರ್ಜಲ ಮಟ್ಟ ಹೆಚ್ಚಿಸಲು ನಗರದ 186 ಕೆರೆಯಲ್ಲಿ ಹಲವು ಕರೆಗಳಲ್ಲಿ ತ್ಯಾಜ್ಯ ನೀರು ಸಂಸ್ಕರಿಸಿ ಅವುಗಳನ್ನು ಕೆರೆ ತುಂಬಿಸುವ ಕೆಲಸದ ಪೈಕಿ 7 ಕೆರೆಗಳಲ್ಲಿ ಈ ಪೈಲೆಟ್ ಯೋಜನೆ ಮಾಡುತ್ತಿದ್ದೇವೆ. ನಗರದ ಉಳಿದ 179 ಕೆರೆಗಳಿಗೂ ಈ ಯೋಜನೆ ಹಮ್ಮಿಕೊಳ್ಳುತ್ತೇವೆ. ಕಾವೇರಿ 1472 ದಶಲಕ್ಷ ಲೀ. ನೀರು ಸದ್ಯ ಪಂಪ್ ಮಾಡ್ತಿದ್ದೇವೆ. ಮೊನ್ನೆ ಪ್ರಮುಖ ಕಾಮಗಾರಿ ನಡೆಸಿ ನೀರು ಸೋರಿಕೆ ತಡೆದು 8 ದಶಲಕ್ಷ ಲೀ. ನೀರು ಲಭ್ಯವಾಗುತ್ತಿದೆ. ಅದನ್ನು ಬಳಸಿಕೊಳ್ಳುತ್ತೇವೆ‌ ಎಂದು ಅವರು ಹೇಳಿದರು.

ಜೂನ್ ಅಂತ್ಯಕ್ಕಿಂತ ಮುಂಚೆಯೇ ಅಂದರೆ ಕಾವೇರಿ 5ನೇ ಹಂತ ಕಾಮಗಾರಿ ಏಪ್ರಿಲ್ ಅಂತ್ಯಕ್ಕೆ ಮುಗಿಯಲಿದೆ. ಮೇ ತಿಂಗಳ ಆರಂಭದಿಂದ 41,000 ನೀರಿನ ಸಂಪರ್ಕ ಪಡೆದುಕೊಂಡ 110 ಹಳ್ಳಿಗಳ ಗ್ರಾಹಕರಿಗೆ ಹಾಗೂ ಇನ್ನಿತರರಿಗೆ ಕಾವೇರಿ ನೀರು ಪೂರೈಕೆ ಮಾಡುತ್ತೇವೆ. ಪ್ರಸ್ತುತ ನಗರದಲ್ಲಿ 33 ತ್ಯಾಜ್ಯ ನೀರು ಸಂಸ್ಕರಣಾ ಸ್ಥಾವರ (STP)ಗಳಿವೆ. ಇದರಿಂದ 1,380 ದಶಲಕ್ಷ ಲೀ. ನೀರು ಸದ್ಯ ಸಂಸ್ಕರಿಸಲಾಗುತ್ತಿದೆ. 33 ಎಸ್ ಟಿಪಿಗಳ ಪೈಕಿ 20 ಸ್ಥಾವರಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಇದರಿಂದ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ತ್ಯಾಜ್ಯ ನೀರು ಸಂಸ್ಕರಣೆ ಮಾಡಲು ಅನುಕೂಲವಾಗುತ್ತದೆ. ಹೀಗಾಗಿ ಈ ಕಾಮಗಾರಿಗಳೆಲ್ಲ ಮುಗಿದರೆ ಇನ್ನು ಎರಡು ವರ್ಷದಲ್ಲಿ ನಗರದಲ್ಲಿ 2,100 ದಶಲಕ್ಷ ಲೀ. ತ್ಯಾಜ್ಯ ನೀರು ಸಂಸ್ಕರಣೆ ಮಾಡಲು ಸಾಧ್ಯವಾಗಲಿದೆ ಜಲಮಂಡಳಿ ಅಧ್ಯಕ್ಷಕರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಬಿಎಂಪಿ ಆರೋಗ್ಯ ಇಲಾಖೆ ವಿಶೇಷ ಆಯುಕ್ತರು ಹಾಗೂ ರಾಜರಾಜೇಶ್ವರಿ ನಗರ ವಲಯ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್, ಸಾರಿಗೆ ಇಲಾಖೆ ಜಂಟಿ ಆಯುಕ್ತೆ ಶೋಭಾ ಹಾಗೂ ಬೆಂಗಳೂರು ಜಲಮಂಡಳಿ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BBMP Budget 2024-25 | ಬಿಬಿಎಂಪಿಯ 2024-25ನೇ ಸಾಲಿನ ಬಜೆಟ್ ನಾಳೆ ಮಂಡನೆ : ಆಯವ್ಯಯ ಗಾತ್ರ ಕಳೆದ ಬಾರಿಗಿಂತ ಶೇ.10ರಷ್ಟು ಹೆಚ್ಚಳ ನಿರೀಕ್ಷೆ

Next Post

Karnataka Power Tariff 2024-25 | ರಾಜ್ಯದಲ್ಲಿ ವಿದ್ಯುತ್ ದರ ಪರಿಷ್ಕರಣೆ ಏ.1 ರಿಂದ ಜಾರಿ : ಎಲ್ಲಾ ಗ್ರಾಹಕರಿಗೂ ಬೆಲೆ ಇಳಿಕೆಯ ಬಂಪರ್

Next Post
ಸಾಂದರ್ಭಿಕ ಚಿತ್ರ

Karnataka Power Tariff 2024-25 | ರಾಜ್ಯದಲ್ಲಿ ವಿದ್ಯುತ್ ದರ ಪರಿಷ್ಕರಣೆ ಏ.1 ರಿಂದ ಜಾರಿ : ಎಲ್ಲಾ ಗ್ರಾಹಕರಿಗೂ ಬೆಲೆ ಇಳಿಕೆಯ ಬಂಪರ್

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BBMP Budget 2024-25 Live | ಬಿಬಿಎಂಪಿ 2024-25ನೇ ಸಾಲಿನ ಆಯವ್ಯಯ ಅಂದಾಜು ಮಂಡನೆ ; ಇಂದು ಬೆಳಗ್ಗೆ 10.30ರಿಂದ ನೇರಪ್ರಸಾರ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group