Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP 808 Properties Fake Khatha | ರಾಜರಾಜೇಶ್ವರಿ ನಗರ ವಲಯದಲ್ಲಿ 808 ನಕಲಿ ಖಾತೆಗಳ ಮೊತ್ತೊಂದು ಬೃಹತ್ ಹಗರಣ : ಲೋಕಾಯುಕ್ತದಲ್ಲಿ ದೂರು ದಾಖಲು

ಓಂಕಾರಮೂರ್ತಿ ಎಂಬ ಪ್ರಥಮ ದರ್ಜೆ ಗುಮಾಸ್ತನ ಪಾತ್ರವೇ ಈ ಹಗರಣದಲ್ಲಿ ಉಳಿದ ಎಲ್ಲರಿಗಿಂತಲೂ ಬಹಳ ದೊಡ್ಡದಾಗಿದೆ - ದೂರುದಾರದ ಬಿಜೆಪಿ ನಾಯಕ ಎನ್.ಆರ್.ರಮೇಶ್ ಹೇಳಿಕೆ | ಪಾಲಿಕೆ ಕಚೇರಿ ಮಧ್ಯವರ್ತಿಗಳ ಅಡ್ಡೆಯಾಗಿದೆ | ಉಪ ಆಯುಕ್ತರಾದ ಅಬ್ದುಲ್ ರಬ್ ಎಲ್ಲಾ ಕಾನೂನುಬಾಹಿರ ಕಾರ್ಯಕ್ಕೆ ಕುಮ್ಮಕ್ಕು ನೀಡಿದ ಆರೋಪ

by Bengaluru Wire Desk
March 13, 2024
in Bengaluru Focus
Reading Time: 1 min read
0

ಬೆಂಗಳೂರು, ಮಾ.13 www.bengaluruwire.com : ಬಿಬಿಎಂಪಿಯ ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ಸೃಷ್ಟಿಸಿ ನಕಲಿ ಖಾತೆಗಳನ್ನು ಅಕ್ರಮವಾಗಿ ಸ್ಕ್ಯಾನಿಂಗ್ ಮಾಡಿರುವ ಪ್ರಕರಣ ಹಸಿರಿರುವಾಗಲೇ ರಾಜರಾಜೇಶ್ವರಿನಗರ ವಾರ್ಡ್ ವ್ಯಾಪ್ತಿಯಲ್ಲಿ 808 ನಕಲಿ ಖಾತೆಗಳನ್ನು ಸೃಷ್ಟಿಸಿರುವ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. 

ರಾಜರಾಜೇಶ್ವರಿನಗರ ಉಪ ವಿಭಾಗದ ಸಹಾಯಕ ಕಂದಾಯ ಅಧಿಕಾರಿಗಳ ಕಛೇರಿಯ ವ್ಯಾಪ್ತಿಗೆ ಬರುವ ರಾಜರಾಜೇಶ್ವರಿನಗರ ವಾರ್ಡ್ ವ್ಯಾಪ್ತಿಯ ಚನ್ನಸಂದ್ರ, ಹಲಗೆವಡೇರಹಳ್ಳಿ ಮತ್ತು ಹೊಸಕೆರೆಹಳ್ಳಿ ಪ್ರದೇಶಗಳಿಗೆ ಸಂಬಂಧಿಸಿದಂತೆ ಒಟ್ಟು 808 ನಕಲಿ ಖಾತೆಗಳನ್ನು ಸೃಷ್ಟಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಗೆ 20 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣವನ್ನು ವಂಚಿಸಿದ್ದಾರೆ ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾದ ಎನ್.ಆರ್.ರಮೇಶ್ ಆರೋಪಿಸಿದ್ದಾರೆ.

ಈ ಕುರಿತಂತೆ ಅವರು ಲೋಕಾಯುಕ್ತಕ್ಕೆ ಮಾ.13ರಂದು 122 ಪುಟಗ ದಾಖಲೆಗಳೊಂದಿಗೆ ದೂರು ನೀಡಿದ್ದಾರೆ. ರಾಜರಾಜೇಶ್ವರಿನಗರ ವಾರ್ಡ್ ವ್ಯಾಪ್ತಿಯ ಕಛೇರಿಯಲ್ಲಿ ಸಹಾಯಕ ಕಂದಾಯ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದ್ದ ಅರುಣ್ ಕುಮಾರ್, ಕಂದಾಯ ಪರಿವೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಗಣೇಶ್ ಮತ್ತು ಪ್ರಥಮ ದರ್ಜೆ ಗುಮಾಸ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಓಂಕಾರಮೂರ್ತಿ ಎಂಬುವವರು ಸೇರಿಕೊಂಡು ವಾರ್ಡ್ ನಂಬರ್ 160 ಕ್ಕೆ ಸಂಬಂಧಿಸಿದ `ಎ’ ವಹಿ (‘A’ Register) ಯಲ್ಲಿ ನಕಲಿ ದಾಖಲಿಸುವಿಕೆ (Fake Entry) ಗಳನ್ನು ಮಾಡುವ ಮೂಲಕ 808 ಸ್ವತ್ತುಗಳಿಗೆ ನಕಲಿ ಖಾತೆಗಳನ್ನು ಸೃಷ್ಟಿಸಿರುತ್ತಾರೆ.

ಇವರುಗಳ ಪೈಕಿ ಓಂಕಾರಮೂರ್ತಿ ಎಂಬ ಪ್ರಥಮ ದರ್ಜೆ ಗುಮಾಸ್ತನ ಪಾತ್ರವೇ ಎಲ್ಲರಿಗಿಂತಲೂ ಬಹಳ ದೊಡ್ಡದಾಗಿರುತ್ತದೆ. ಈ 808 ಸ್ವತ್ತುಗಳಿಗೆ ಕಾನೂನು ರೀತ್ಯಾ ಅಭಿವೃದ್ಧಿ ಶುಲ್ಕಗಳನ್ನು ಪಾವತಿಸಿಕೊಂಡು `ಎ’ ಖಾತಾಗಳನ್ನು ಮಾಡಿದ್ದೇ ಆದಲ್ಲಿ, ಅಭಿವೃದ್ಧಿ ಶುಲ್ಕದ ರೂಪದಲ್ಲಿ ಪಾಲಿಕೆಗೆ ಇಪ್ಪತ್ತು ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಸಂದಾಯವಾಗುತ್ತಿತ್ತು.

ಈ ರಾಜರಾಜೇಶ್ವರಿನಗರ ಉಪ ವಿಭಾಗದ ಸಹಾಯಕ ಕಂದಾಯ ಅಧಿಕಾರಿಗಳ ಕಛೇರಿಯಲ್ಲಿ ಬಿಬಿಎಂಪಿ ಅಧಿಕಾರಿ  ಮತ್ತು ನೌಕರರಿಗಿಂತಲೂ ಮಧ್ಯವರ್ತಿಗಳ ಹಾವಳಿಯೇ ಹೆಚ್ಚಾಗಿದ್ದು, ಪಾಲಿಕೆಗೆ ಸಂಬಂಧವೇ ಇಲ್ಲದ ಯಶವಂತ್ ಕುಮಾರ್, ವಿಜಯ್ ಕುಮಾರ್ ಮತ್ತು ಮುತ್ತುರಾಜ್ ಎಂಬ ಮಧ್ಯವರ್ತಿಗಳು ಕಛೇರಿಯ ಕಂದಾಯ ಪರಿವೀಕ್ಷಕರು ಮತ್ತು ಕಂದಾಯ ವಸೂಲಿಗಾರರ ಆಸನಗಳಲ್ಲಿ ಕುಳಿತು ಪಾಲಿಕೆಯ ದಾಖಲೆಗಳಲ್ಲಿ ತಮಗಿಷ್ಟಬಂದ ರೀತಿಯಲ್ಲಿ ಕಡತದಲ್ಲಿ ದಾಖಲಿಸುವ ಮೂಲಕ ಕಾನೂನು ಬಾಹಿರ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಅವರು ಲೋಕಾಯುಕ್ತಕ್ಕೆ ದೂರು‌ ನೀಡಿದ್ದಾರೆ.

ಈ ಮೂವರು ಬ್ರೋಕರ್ ಗಳಿಗೆ ಓಂಕಾರಮೂರ್ತಿ ಎಂಬ ಪ್ರಥಮ ದರ್ಜೆ ಗುಮಾಸ್ತ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದ್ದು, ಇವರುಗಳು ಹೇಳಿದಂತೆ ಕಂದಾಯ ಪರಿವೀಕ್ಷಕ ಗಣೇಶ್ ಮತ್ತು ಸಹಾಯಕ ಕಂದಾಯ ಅಧಿಕಾರಿಯಾದ ಅರುಣ್ ಕುಮಾರ್ ರವರು ಚಾಚೂ ತಪ್ಪದೇ ಪಾಲಿಸುತ್ತಾ ಅವರು ಮಾಡಿಕೊಟ್ಟ ನಕಲಿ ದಾಖಲೆಗಳಿಗೆ ಕಣ್ಣು ಮುಚ್ಚಿಕೊಂಡು ಸಹಿಗಳನ್ನು ಹಾಕುತ್ತಿದ್ದಾರೆ.

ಇವರೊಂದಿಗೆ ಈಗಾಗಲೇ 2022 ರಲ್ಲಿ ಕಂದಾಯ ವಸೂಲಿಗಾರರಾಗಿ ನಿವೃತ್ತರಾಗಿರುವ ಸಿದ್ದನಾಯಕ್ ಎಂಬಾತ ನಿವೃತ್ತರಾಗಿ ಒಂದೂವರೆ ವರ್ಷಗಳು ಕಳೆದರೂ ಸಹ ಪ್ರತಿನಿತ್ಯ ಕಛೇರಿಗೆ ಹಾಜರಾಗಿ ಕಛೇರಿಯ ಎಲ್ಲ ದಾಖಲೆಗಳನ್ನು ಪರಿಶೀಲಿಸುವ ಮತ್ತು ಕಡತಗಳಲ್ಲಿ ಬರೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಮೂರ್ತಿ ಅಲಿಯಾಸ್ ಕೆಂಚೇನಹಳ್ಳಿ ಮೂರ್ತಿ ಎಂಬಾತ, ವಾಟರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರೂ ಸಹ ಈ ಕಛೇರಿಯಲ್ಲಿ ಕಂದಾಯ ಅಧಿಕಾರಿಗಳ ಕಾರ್ಯವನ್ನು ಮಾಡುತ್ತಾ ಹತ್ತಾರು ಕೋಟಿ ರೂಪಾಯಿಗಳ ಆಸ್ತಿಯನ್ನು ಕಾನೂನು ಬಾಹಿರವಾಗಿ ಮಾಡಿರುತ್ತಾರೆ.

ಯಶವಂತ್ ಕುಮಾರ್, ವಿಜಯ್ ಕುಮಾರ್ ಮತ್ತು ಮುತ್ತುರಾಜ್ ಅವರುಗಳ ಎಲ್ಲಾ ಕಾನೂನು ಬಾಹಿರ ಚಟುವಟಿಕೆಗಳಿಗೆ ರಾಜರಾಜೇಶ್ವರಿನಗರ ವಲಯದ ಜಂಟಿ ಆಯುಕ್ತರ ಆಪ್ತ ಸಹಾಯಕನಾಗಿರುವ ಗುರುಶಾಂತಪ್ಪ ಎಂಬ ಮತ್ತೊಬ್ಬ ವ್ಯಕ್ತಿ ಎಲ್ಲ ರೀತಿಯ ಸಹಾಯ ಮಾಡುತ್ತಿದ್ದಾರೆ. ಈ ಗುರುಶಾಂತಪ್ಪ ಸಿಎಂಸಿ (CMC) ಅವಧಿ (2006-07) ಯಿಂದಲೂ ಇದೇ ಕಛೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ ಸಹ ಈತನನ್ನು ಬೇರೆಡೆಗೆ ವರ್ಗಾವಣೆಗೊಳಿಸಲು ಇದುವರೆವಿಗೂ ಯಾವುದೇ ಅಧಿಕಾರಿಗೆ ಸಾಧ್ಯವಾಗಿಲ್ಲ.

ರಾಜರಾಜೇಶ್ವರಿನಗರ ವಲಯದ ಉಪ ಆಯುಕ್ತರಾದ ಅಬ್ದುಲ್ ರಬ್ ರವರು ಈ ಎಲ್ಲಾ ವಂಚಕ ಅಧಿಕಾರಿಗಳು ಹಾಗೂ ನೌಕರರು ಹಾಗೂ ಮಧ್ಯವರ್ತಿಗಳ ಕಾನೂನು ಬಾಹಿರ ಕಾರ್ಯಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ.

ಮಧ್ಯವರ್ತಿಗಳು ರಾಜರಾಜೇಶ್ವರಿನಗರ ಉಪ ವಿಭಾಗದ ಸಹಾಯಕ ಕಂದಾಯ ಅಧಿಕಾರಿಗಳ ಕಛೇರಿಯ ಅಧಿಕಾರಿಗಳ ಆಸನಗಳಲ್ಲಿ ಕುಳಿತು ಪಾಲಿಕೆ ದಾಖಲೆಗಳನ್ನು ಪರಿಶೀಲಿಸುತ್ತಿರುವ ಮತ್ತು Entry ಮಾಡುತ್ತಿರುವ ಛಾಯಾಚಿತ್ರಗಳನ್ನು ಲಗತ್ತಿಸಿರುತ್ತೇನೆ.

ಆದ್ದರಿಂದ, ಈ ಬೃಹತ್ ಹಗರಣವನ್ನು ಗಂಭೀರವಾಗಿ ಪರಿಗಣಿಸಿ ಮೇಲೆ ತಿಳಿಸಿರುವ ಎಲ್ಲಾ ಅಧಿಕಾರಿಗಳ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಮತ್ತು ಈ ದಾಖಲೆಗಳೊಂದಿಗೆ ಲಗತ್ತಿಸಿರುವ ಎಲ್ಲ 808 ಸ್ವತ್ತುಗಳಿಗೆ ಸಂಬಂಧಿಸಿದ ನಕಲಿ `ಎ’ ಖಾತಾಗಳನ್ನು ಕೂಡಲೇ ರದ್ದುಗೊಳಿಸುವ ಸಂಬಂಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಹಾಗೂ ಮಧ್ಯವರ್ತಿಗಳನ್ನು ಕಛೇರಿಯಲ್ಲಿ ಸರ್ಕಾರಿ ನೌಕರರು ಕುಳಿತುಕೊಳ್ಳುವ ಜಾಗದಲ್ಲಿ ಕೂರಲು ವ್ಯವಸ್ಥೆ ಮಾಡಿಕೊಟ್ಟಿರುವ ಓಂಕಾರಮೂರ್ತಿ ಎಂಬ ಪ್ರಥಮ ದರ್ಜೆ ಸಹಾಯಕ ಮತ್ತು ಈ ಬೃಹತ್ ಹಗರಣದಲ್ಲಿ ಶಾಮೀಲಾಗಿರುವ ಸಹಾಯಕ ಕಂದಾಯ ಅಧಿಕಾರಿ ಅರುಣ್ ಕುಮಾರ್, ಕಂದಾಯ ಪರಿವೀಕ್ಷಕ ಗಣೇಶ್ ಹಾಗೂ ರಾಜರಾಜೇಶ್ವರಿನಗರ ವಲಯದ ಉಪ ಆಯುಕ್ತರಾದ ಅಬ್ದುಲ್ ರಬ್ ರವರನ್ನು ಕೂಡಲೇ ಅಮಾನತುಗೊಳಿಸಿ ಇಲಾಖಾ ವಿಚಾರಣೆಗೆ ಆದೇಶಿಸಬೇಕೆಂದು ಪಾಲಿಕೆಯ ಮುಖ್ಯ ಆಯುಕ್ತರನ್ನು ಎನ್.ಆರ್.ರಮೇಶ್ ಆಗ್ರಹಿಸಿದ್ದಾರೆ. 

ಅಲ್ಲದೆ ಇವರೆಲ್ಲರ ವಿರುದ್ಧ ಭ್ರಷ್ಟಾಚಾರ, ವಂಚನೆ, ನಕಲಿ ದಾಖಲೆ ತಯಾರಿಕೆ ಮತ್ತು ಅಧಿಕಾರ ದುರುಪಯೋಗ ಪ್ರಕರಣಗಳನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Government Employees News | ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ : ತುಟ್ಟಿಭತ್ಯೆ ಶೇ.3.75 ಹೆಚ್ಚಳ : ಜ.1ರಿಂದಲೇ ಪೂರ್ವಾನ್ವಯ

Next Post

PIB Fact Check – Fake News | ಕೇಂದ್ರ ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ರಾಜೇಶ್ ಕುಮಾರ್ ಗುಪ್ತಾ, ಪ್ರಿಯಾಂಶ್ ಶರ್ಮಾ ನೇಮಕವಾಗಿಲ್ಲ : ಇದು ಸುಳ್ಳು ಸುದ್ದಿ

Next Post

PIB Fact Check - Fake News | ಕೇಂದ್ರ ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ರಾಜೇಶ್ ಕುಮಾರ್ ಗುಪ್ತಾ, ಪ್ರಿಯಾಂಶ್ ಶರ್ಮಾ ನೇಮಕವಾಗಿಲ್ಲ : ಇದು ಸುಳ್ಳು ಸುದ್ದಿ

ಬೆಂಗಳೂರಿನಲ್ಲಿರುವ ಗಾಂಧಿನಗರದ ಫ್ರೀಡಂ ಪಾರ್ಕ್ ಬಳಿಯಿರುವ ಮಲ್ಟಿಲೆವೆಲ್ ಪಾರ್ಕಿಂಗ್ ಕಟ್ಟಡದ ಚಿತ್ರ.

BW SPECIAL | ಗಾಂಧಿನಗರದಲ್ಲಿ 80 ಕೋಟಿ ರೂ. "ಮಲ್ಟಿಲೆವೆಲ್ ಗೋಲ್ ಮಾಲ್" ಪಾರ್ಕಿಂಗ್ ಪ್ರಾಜೆಕ್ಟ್ : ಕಾಂಟ್ರಾಕ್ಟರ್ ಗೆ ವಿಧಿಸಿದ್ದ 8.38 ಕೋಟಿ ರೂ. ದಂಡ ಆದೇಶ ರದ್ದಾಗಿದ್ದು ಹೇಗೆ? ಇಲ್ಲಿ ಅಧಿಕಾರ ದುರುಪಯೋಗವಾಗಿದ್ಯಾ?

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d