Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bangalore 500 MLD Water Scarcity | “ಬೆಂಗಳೂರಿನಲ್ಲಿ ಪ್ರತಿನಿತ್ಯ 500 ಎಂಎಲ್ ಡಿ ನೀರಿನ ಕೊರತೆ” : ಮುಖ್ಯಮಂತ್ರಿ ಸಿದ್ದರಾಮಯ್ಯ

ನಗರದಲ್ಲಿನ ನೀರಿನ ಕೊರತೆ ನೀಗಿಸಲು ಸೂಕ್ತ ಕ್ರಮಕ್ಕೆ ಮುಖ್ಯಮಂತ್ರಿಗಳ ಸೂಚನೆ | ನೀರಿನ ದುರುಪಯೋಗ ತಡೆಗಟ್ಟಲು 143 ಟಾಸ್ಕ್ ಫೋರ್ಸ್ ಗಳು ಕಾರ್ಯ ನಿರ್ವಹಣೆ | ಬತ್ತಿ ಹೋಗಿರುವ ಪ್ರಮುಖ 14 ಕೆರೆಗಳನ್ನು ಭರ್ತಿ ಮಾಡಲು ಸೂಚನೆ

by Bengaluru Wire Desk
March 18, 2024
in Bengaluru Focus
Reading Time: 1 min read
0
ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

ಬೆಂಗಳೂರು, ಮಾ.18 www.bengaluruwire.com : ರಾಜಧಾನಿಗೆ ಪ್ರತಿನಿತ್ಯ ಕುಡಿಯಲು ಮತ್ತು ಕೈಗಾರಿಕೆಗಳಿಗೆ ಒಟ್ಟು 2600 ದಶಲಕ್ಷ ಲೀಟರ್ (MLD) ಎಂ.ಎಲ್. ಡಿ. ನೀರು ಅಗತ್ಯವಿದೆ. ಇದರಲ್ಲಿ 1450 ಎಂ.ಎಲ್. ಡಿ. ನೀರು ಕಾವೇರಿ ನದಿಯಿಂದ ದೊರೆಯುತ್ತಿದೆ. 650 ಎಂ ಎಲ್ ಡಿ ನೀರು ಕೊಳವೆ ಬಾವಿಯಿಂದ ದೊರೆಯುತ್ತಿದ್ದು, 500 ಎಂ.ಎಲ್ ಡಿ ನೀರಿನ ಕೊರತೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸೋಮವಾರ ಗೃಹಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳಿಂದ ಸುದೀರ್ಘವಾಗಿ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಾ, 14,000 ಸರ್ಕಾರಿ ಬೋರ್ ವೆಲ್ ಗಳಲ್ಲಿ 6900 ಬತ್ತಿವೆ. ಹೀಗಾಗಿ ಸಮಸ್ಯೆ ಆಗಿದೆ. 110 ಹಳ್ಳಿಗಳಲ್ಲಿ 55 ಹಳ್ಳಿಗಳಿಗೆ ಸಮಸ್ಯೆ ಆಗಿದೆ. ಜೂನ್ ಅಂತ್ಯಕ್ಕೆ ಕಾವೇರಿ 5 ನೇ ಹಂತದ ಕಾಮಗಾರಿ ಮುಕ್ತಾಯವಾಗಿ 775 ಎಂಎಲ್ ಡಿ (MLD) ಹೆಚ್ಚುವರಿ ನೀರು ಸಿಗತ್ತೆ. ಇದು 110 ಹಳ್ಳಿಗಳಿಗೆ ಸರಬರಾಜು ಆಗಲಿದೆ. 313 ಸ್ಥಳಗಳಲ್ಲಿ ಹೊಸದಾಗಿ ಬೋರ್ ವೆಲ್ ಕೊರೆಸುತ್ತಿದ್ದೇವೆ. 1200 ನಿಷ್ಕ್ರಿಯ ಬೋರ್ ಗಳಿಗೆ ಮರುಜೀವ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಕಾವೇರಿ, ಕಬಿನಿಯಲ್ಲಿ ಕುಡಿಯುವ ನೀರಿಗೆ ಅಗತ್ಯ ಇರುವಷ್ಟು ನೀರನ್ನು ಸಂಗ್ರಹಿಸಿದ್ದೇವೆ. ಜೂನ್ ಅಂತ್ಯದವರೆಗೂ ಸಾಕಾಗುವಷ್ಟು ನೀರು ಸಂಗ್ರಹವಿದ್ದು, ಕೃಷ್ಣರಾಜ ಸಾಗರ (KRS)ದಲ್ಲಿ 11.02 ಟಿಎಂಸಿ ಹಾಗೂ ಕಬಿನಿಯಲ್ಲಿ 9.02 ಟಿಎಂಸಿ ನೀರು ಸಂಗ್ರಹವಿದೆ. ಕೊಳೆಗೇರಿ, ಎತ್ತರದ ಪ್ರದೇಶದಲ್ಲಿ ಹಾಗೂ ಬೋರ್ ವೆಲ್ ಮೇಲೆ ಅಬಲಂಬಿತ ಪ್ರದೇಶಗಳಲ್ಲಿ ಕೆಎಂಎಫ್ (KMF) ಸೇರಿ ಎಲ್ಲಾ ಖಾಸಗಿ ಟ್ಯಾಂಕರ್ ಗಳನ್ನು ಬಳಸಲು ಹೇಳಿದ್ದೇನೆ. ಕಂಟ್ರೋಲ್ ರೂಮ್ ಗಳ ಸಂಖ್ಯೆ ಹೆಚ್ಚಿಸಿ ದೂರು‌ಬಂದ ತಕ್ಷಣ ಆ ಪ್ರದೇಶಗಳಿಗೆ ನೀರು ಸರಬರಾಜು ಮಾಡಲು ಸೂಚಿಸಲಾಗಿದೆ. ಟಾಸ್ಕ್ ಫೋರ್ಸ್ ಹೆಚ್ವಿಸಿ ದೂರುಗಳಿಗೆ ತಕ್ಷಣ ಸ್ಪಂದಿಸಲು ಹೇಳಲಾಗಿದೆ. ಪಾರ್ಕ್ ಗಳಲ್ಲಿ ಕುಡಿಯುವ ನೀರು ಬಳಸದಂತೆ ಮತ್ತು ಶುದ್ದೀಕರಿಸಿದ ನೀರು ಬಳಸುವಂತೆ ಸೂಚನೆ ನೀಡಲಾಗಿದೆ. ಕೆ.ಸಿ.ವ್ಯಾಲಿ ರೀತಿ ಬೆಂಗಳೂರಿನ‌ ಕೆರೆಗಳನ್ನೂ ಭರ್ತಿ ಮಾಡುವಂತೆ ಸೂಚನೆ ನೀಡಲಾಗಿದೆ ಎಂದರು.

ಬತ್ತಿ ಹೋಗಿರುವ ಪ್ರಮುಖ 14  ಕೆರೆಗಳನ್ನು ಭರ್ತಿ ಮಾಡಲು ಸೂಚನೆ ನೀಡಲಾಗಿದೆ. ಇದರಿಂದ ಅಂತರ್ಜಲ ಭರ್ತಿ ಆಗಿ ಬೋರ್ ವೆಲ್ ಗಳಿಗೆ ಮರುಜೀವ ಬರುತ್ತದೆ. ಕುಡಿಯುವ ನೀರಿಗೆ ಹಣದ ಕೊರತೆ ಇಲ್ಲ. ಬೇಕಾದಷ್ಟು ಹಣವನ್ನು ಸರ್ಕಾರ ಮತ್ತು ಬಿಬಿಎಂಪಿ ಒದಗಿಸುತ್ತಿದೆ. ಪ್ರತಿ ದಿನ ಅಧಿಕಾರಿಗಳು ಸಭೆ ನಡೆಸಿ ವಾರಕ್ಕೊಮ್ಮೆ ಕ್ರಿಯಾಯೋಜನೆ ಸಿದ್ದಪಡಿಸುತ್ತಾರೆ.

ಬೆಂಗಳೂರಿನ ಕೆರೆಯೊಂದು ನೀರಿಲ್ಲದೆ ಬತ್ತಿ ಹೋಗಿರುವ ಚಿತ್ರ.

ಭವಿಷ್ಯದಲ್ಲಿ ಯಾವುದೇ ಸಂದರ್ಭದಲ್ಲೂ ನೀರಿನ ಕೊರತೆ ಆಗದಂತೆ ತಜ್ಞರ ಸಮಿತಿಯನ್ನು ರಚಿಸಲು ಕ್ರಮ ಕೈಗೊಳ್ಳಲಾಗಿದೆ. ದೂರು ಬಂದರೆ ಬಿಬಿಎಂಪಿ (BBMP), ಬಿಡಬ್ಲ್ಯೂಎಸ್ ಎಸ್ ಬಿ (BWSSB) ನವರು ಹೊಣೆ ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಬೆಂಗಳೂರಿಗೆ 500 ಎಂಎಲ್ ಡಿ (MLD) ನೀರು ಕೊರತೆ ಇದೆ. ಈ ಕೊರತೆ ನೀಗಿಸಲು  ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಬೋರ್ ವೆಲ್ ಗಳ ಮೇಲೆ ಅವಲಂಬಿತ ಜನರಿಗೆ ನೀರಿನ ತೊಂದರೆ ಆಗದಂತೆ ಕ್ರಮ ವಹಿಸಲು ಸೂಚಿಸಲಾಗಿದೆ. 1700 ನೀರಿನ ಟ್ಯಾಂಕರ್ ನೋಂದಣಿ ಆಗಿವೆ. ಮಾಲ್ ಗಳು ಸೇರಿ ಖಾಸಗಿಯಾಗಿ ಇರುವ ಬೋರ್ ವೆಲ್ ಗಳಿಂದ ಟ್ಯಾಂಕರ್ ತುಂಬಿಸಿ ನೀರು ಸರಬರಾಜು ಮಾಡಲಾಗುತ್ತಿದೆ. ಎಲ್ಲೂ ನೀರಿಗೆ ತೊಂದರೆ ಆಗದಂತೆ ಸ್ಪಷ್ಟ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಕುಡಿಯುವ ನೀರಿನ ದುಂದುವೆಚ್ಚ ಮಾಡಬಾರದು. ತಮ್ಮಲ್ಲಿನ ಹೂದೋಟಗಳಿಗೆ ಕುಡಿಯುವ ನೀರು ಬಳಸದಂತೆ ಎಚ್ಚರಿಕೆ ನೀಡಲಾಗಿದೆ. ಮಳೆನೀರು ಕೊಯ್ಲು, ಬಳಕೆ ನೀರನ್ನು ಶುದ್ದೀಕರಿಸಿ ಹೆಚ್ಚಿನ ಪ್ರಮಾಣದಲ್ಲಿ ಮರು ಬಳಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮುಖ್ಯವಾಗಿ ಕೊಳೆಗೆರಿಗಳು, ಎತ್ತರದ ಪ್ರದೇಶಗಳು ಹಾಗೂ ಬಿಬಿಎಂಪಿ ಗೆ ಹೊಸದಾಗಿ ಸೇರ್ಪಡೆಯಾದ 110 ಹಳ್ಳಿಗಳಲ್ಲಿ ಸಮಸ್ಯೆ ಆಗದಂತೆ ಸೂಚಿಸಲಾಗಿದೆ. ನೀರಿನ ದುರುಪಯೋಗ ತಡೆಗಟ್ಟಲು ಸೂಚಿಸಲಾಗಿದ್ದು, ಈ ಬಗ್ಗೆ 143 ಟಾಸ್ಕ್ ಫೋರ್ಸ್ ಗಳು ಕಾರ್ಯ ನಿರ್ವಹಿಸುತ್ತಿವೆ. ಈ ಪ್ರಮಾಣ ಹೆಚ್ಚಿಸಲು ಸೂಚನೆ ನೀಡಲಾಗಿದೆ. ಕೇಂದ್ರೀಯ ಸಹಾಯವಾಣಿ ಸಂಖ್ಯೆ 1916 ಹಾಗೂ ವಾಟ್ಸಾಪ್ ಮೂಲಕ ದೂರು ದಾಖಲಿಸಬಹುದು. ಈ ದೂರುಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಸೂಚಿಸಲಾಗಿದೆ. ಬೆಂಗಳೂರು ನಗರದ ಪ್ರಮುಖ ಕೆರೆಗಳಿಗೆ ಸಂಸ್ಕರಿಸಿದ  ನೀರು ತುಂಬಿಸುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸಲು ತಾಕೀತು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

“ನಮ್ಮಲ್ಲಿ ಹಣವಿಲ್ಲ ಎಂದು ಆರೋಪಿಸುವ ನೈತಿಕತೆ ಅವರಿಗಿಲ್ಲ” :

ರಾಜ್ಯ ಸರ್ಕಾರದಲ್ಲಿ ಹಣ ಇಲ್ಲ ಎನ್ನುವ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬರಗಾಲ ಬಂದು ಐದು ತಿಂಗಳಾಯ್ತು. ಮೋದಿಯವರು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಒಂದೇ ಒಂದು ಪೈಸೆ ಹಣ ಕೊಟ್ಟಿಲ್ಲ. ಏಕೆ? 18,171 ಕೋಟಿ ಬರ ಪರಿಹಾರ ಹಣ ಕೇಳಿದ್ದೆವು. ಒಂದು ರೂಪಾಯಿಯನ್ನೂ ಕೊಡಲಿಲ್ಲ.  48 ಸಾವಿರ ಹೆಕ್ಟೇರ್ ನಲ್ಲಿ ಬೆಳೆ ಹಾನಿ ಆಗಿದೆ. ಬರ ಪರಿಹಾರ ಕೊಡಿ ಅಂದರೂ ಕೊಡಲಿಲ್ಲ. ಮತ್ತೆ ಮೋದಿಯವರಿಗೆ “ನಮ್ಮಲ್ಲಿ ಹಣ ಇಲ್ಲ” ಎಂದು ಆರೋಪಿಸುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ ಅವರು, ಕೇಂದ್ರದಿಂದ ನಯಾಪೈಸೆ ಬರದಿದ್ದರೂ ನಾವು ರಾಜ್ಯ ಬೊಕ್ಕಸದಿಂದಲೇ ರೈತರ ಖಾತೆಗೆ ಬರ ಪರಿಹಾರ ಹಾಕಿದ್ದೇವೆ.

ಬರಗಾಲದಲ್ಲಿ ನರೇಗಾ ದಿನಗಳನ್ನು ಹೆಚ್ಚಿಸಿ ಎಂದು ಕೇಳಿದ್ದೆವು. ಇವತ್ತಿನವರೆಗೂ ಮಾಡಿಲ್ಲ. ಕೇಂದ್ರ ಸರ್ಕಾರ ಅಂದರೆ ಕೇವಲ ಸರಕು ಮತ್ತು ಸೇವಾ ತೆರಿಗೆ (GST) ತೆಗೆದುಕೊಳ್ಳುತ್ತದೆ. ತೆರಿಗೆ ಸಂಗ್ರಹಿಸಿ ತಮ್ಮಲ್ಲಿ ಇಟ್ಟುಕೊಂಡು ರಾಜ್ಯಗಳಿಗೆ ಅನ್ಯಾಯ ಮಾಡೋಕೆ ಮಾತ್ರ ಇರೋದಾ ? ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿಗೆ ಅಭ್ಯರ್ಥಿಗಳ ಕೊರತೆ ಇದೆ, ಅವರು ನಮ್ಮ ಮೇಲೆ ವೃಥಾ ಆರೋಪಿಸುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನುಡಿದಂತೆ ನಡೆದಿದ್ದೇವೆ. ಜನರ ಕೆಲಸ ಮಾಡಿದ್ದೇವೆ. ಜನರ ಭಾವನೆಗಳನ್ನು ಕೆರಳಿಸಿ ಅವರಿಗೆ ದ್ರೋಹ ಆಗಿಲ್ಲ. ಹೀಗಾಗಿ ನಾವು ಕನಿಷ್ಠ 20 ಲೋಕಸಭಾ ಸ್ಥಾನ ಗೆಲ್ಲುತ್ತೇವೆ. ರಾಮ ಮತ್ತು ಮೋದಿ ಹೆಸರಲ್ಲಿ ಚುನಾವಣೆಗೆ ಹೋಗ್ತೀವಿ ಎನ್ನುವ ಬಿಜೆಪಿ ನಾಯಕರ ಮಾತಿಗೆ ಪ್ರತಿಕ್ರಿಯಿಸಿದ ಸಿಎಂ, “ವಿಧಾನಸಭಾ ಚುನಾವಣೆಯಲ್ಲಿ ಮೋದಿಯವರು ಪ್ರಚಾರ ಮಾಡಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಮೋದಿ ಪ್ರಚಾರದ ಫಲ ಇಷ್ಟೆ” ಎಂದು ವ್ಯಂಗ್ಯವಾಡಿದರು.

WhatsApp Join our WhatsApp Channel
Previous Post

Reduced kerosene consumption | ದೇಶದಲ್ಲಿ 10 ವರ್ಷದಲ್ಲಿ ಶೇ.26ರಷ್ಟು ತಗ್ಗಿದ ಸೀಮೆಎಣ್ಣೆ ಬಳಕೆ ಪ್ರಮಾಣ

Next Post

Loksabha Election 2024 | ಒಂದು ಲಕ್ಷಕ್ಕಿಂತ ಹೆಚ್ಚು ನಗದು ಹಣ ಹಿಂಪಡೆದರೆ ಬ್ಯಾಂಕ್ ನಿಂದ ಚುನಾವಣಾ ಆಯೋಗಕ್ಕೆ ಮಾಹಿತಿ ರವಾನೆ

Next Post
ಸಾಂದರ್ಭಿಕ ಚಿತ್ರ.

Loksabha Election 2024 | ಒಂದು ಲಕ್ಷಕ್ಕಿಂತ ಹೆಚ್ಚು ನಗದು ಹಣ ಹಿಂಪಡೆದರೆ ಬ್ಯಾಂಕ್ ನಿಂದ ಚುನಾವಣಾ ಆಯೋಗಕ್ಕೆ ಮಾಹಿತಿ ರವಾನೆ

ಮಳೆಯ ಸಾಂದರ್ಭಿಕ ಚಿತ್ರ

Karnataka Weather News | ಬಿರು ಬೇಸಿಗೆ ಬೇಗೆಯ ನಡುವೆ ಮಾ.24ರ ವರೆಗೆ ಮಳೆ ಮುನ್ಸೂಚನೆ : ರಾಜ್ಯದಲ್ಲಿ ನಿಧಾನವಾಗಿ ಹೆಚ್ಚಾಗುತ್ತಿದೆ ತಾಪಮಾನ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group