Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | Summer Demand For AC, Refrigerator | ಬೆಂಗಳೂರಿನಲ್ಲಿ ಬೇಸಿಗೆ ಬಿಸಿಗೆ ಸಾರ್ವಜನಿಕರು ತತ್ತರ : ಎಸಿ, ರೆಫ್ರಿಜರೇಟರ್ ಗೆ ಡಿಮ್ಯಾಂಡಪ್ಪೊ ಡಿಮ್ಯಾಂಡ್!!

ರಾಜಧಾನಿಯ ದಿನದ ಗರಿಷ್ಠ ಉಷ್ಣಾಂಶ 34-35 ಡಿಗ್ರಿಗಿಂತ ಹೆಚ್ಚಾಗಿದೆ | ಬಿಸಿಗಾಳಿ, ತಾಪಮಾನ ಏರಿಕೆಯಿಂದ ಪಾರಾಗಲು ಜನರು ಎಸಿ, ಕೂಲರ್, ರೆಫ್ರಿಜರೇಟರ್ ಖರೀದಿಗೆ ಹೆಚ್ಚು ಒಲವು ತೋರುತ್ತಿದ್ದಾರೆ | ಕಳೆದ ವರ್ಷಕ್ಕೆ ಹೋಲಿಸಿದರೆ ಬೇಡಿಕೆ ಎರಡು ಮೂರು ಪಟ್ಟು ಹೆಚ್ಚಾಗಿದೆ ಎನ್ನುತ್ತಾರೆ ಷೋರೂಮ್ ನವರು.

by Bengaluru Wire Desk
April 7, 2024
in Bengaluru Focus, BW Special, Public interest
Reading Time: 1 min read
0
ನಗರದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿರುವುದರಿಂದ ಎಸಿ ಮತ್ತು ಫ್ರಿಜ್ ಗೆ ಬೇಡಿಕೆ ಹೆಚ್ಚಾಗುತ್ತಿದೆ. (ಸಾಂದರ್ಭಿಕ ಚಿತ್ರ

ನಗರದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿರುವುದರಿಂದ ಎಸಿ ಮತ್ತು ಫ್ರಿಜ್ ಗೆ ಬೇಡಿಕೆ ಹೆಚ್ಚಾಗುತ್ತಿದೆ. (ಸಾಂದರ್ಭಿಕ ಚಿತ್ರ

ಬೆಂಗಳೂರು, ಏ.07 www.benglauruwire.com : ಬೆಂಗಳೂರು ಸೇರಿದಂತೆ ದೇಶಾದ್ಯಂತ ಬೇಸಿಗೆಯಲ್ಲಿ ಉಷ್ಣಾಂಶ ಒಂದೆಡೆ ಒಂದೇ ಸಮನೆ ಏರಿಕಾಯಾಗುತ್ತಿದ್ರೆ, ಇನ್ನೊಂದು ಕಡೆ ಹವಾನಿಯಂತ್ರಿತ ಉಪಕರಣ, ಕೂಲರ್, ಫ್ಯಾನ್ ಹಾಗೂ ರೆಫ್ರಿಜರೇಟರ್ ಗಳಿಗೆ ಬೇಡಿಕೆ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಗ್ರಾಹಕ ಉಪಕರಣಗಳ ಮಾರಾಟ ಮಳಿಗೆಗಳಲ್ಲಿ, ಆನ್ ಲೈನ್ ಖರೀದಿ ಮಾಡುವ ಗ್ರಾಹಕರ ಸಂಖ್ಯೆ ಸಾಕಷ್ಟು ಪ್ರಮಾಣದಲ್ಲಿ ಏರಿಕೆಯಾಗಿದೆ.

ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಈ ಬಾರಿ ಫೆಬ್ರವರಿ ಮೂರನೇ ವಾರದಿಂದಲೇ ಉಷ್ಣಾಂಶ ಹೆಚ್ಚಾಗಿದ್ದು, ಬೇಸಿಗೆಯ ಬಿಸಿಯ ಅನುಭವ ಚಳಿಗಾಲದಲ್ಲೇ ಆರಂಭವಾದಂತಿತ್ತು. ಮಾರ್ಚ್ ನಲ್ಲಿ ಸುಡುಬಿಸಿಲಿನಲ್ಲಿ ನಗರದ ನಾಗರೀಕರು ಹೈರಾಣಾಗಿದ್ದರು. ಮನೆಯಿಂದ ಕಚೇರಿಗೆ ಟೂವೀಲರ್, ಕಾರ್, ಮೆಟ್ರೋ, ಬಸ್ ಮತ್ತಿತರ ವಾಹನಗಳಲ್ಲಿ ಹೋಗಿಬರುವವರು ಸುಸ್ತಾಗಿ ಹೋಗುತ್ತಿದ್ದಾರೆ. ಮನೆಗೆ ಬಂದರೂ ಬೆಳಗ್ಗೆಯಿಂದ ರಾತ್ರಿ ತನಕವೂ ಮೈಕೈ ಬಿಸಿಯಾಗುತ್ತಿದೆ. ಇದು ಏಪ್ರಿಲ್ ತಿಂಗಳಲ್ಲೂ ಇನ್ನೂ ಹೆಚ್ಚಾಗುತ್ತಾ ಬಂದಿದೆ.

ನಗರದಲ್ಲಿ ಏಪ್ರಿಲ್ 6 ರಿಂದ 7ನೇ ತಾರೀಖಿನ ಬೆಳಗ್ಗೆ 8.30ರ ಅವಧಿವರೆಗೆ ಬೆಂಗಳೂರಿನ ಗರಿಷ್ಠ ಉಷ್ಣಾಂಶ ನಗರದ ಬೇರೆ ಬೇರೆ ಕಡೆಗಳಲ್ಲಿ 36.8 ಡಿಗ್ರಿಯಿಂದ 41.3 ಡಿಗ್ರಿ ತನಕವಿತ್ತು. ಇನ್ನು ಕನಿಷ್ಠ ಉಷ್ಣಾಂಶವು 20.9 ಡಿಗ್ರಿಯಿಂದ 32.8 ಡಿಗ್ರಿವರೆಗೆ ಇದೆ. ಬೇಸಿಗೆ ಬಿಸಿಗಾಳಿ, ಉಷ್ಣಾಂಶ ಹೆಚ್ಚಳದಿಂದ ಜನರು ಕೂಲ್ ಆಗಿರಲು ತಂಪು ಪಾನೀಯ, ಐಸ್ ಕ್ರೀಮ್ ಮೊರೆ ಹೋಗುತ್ತಿದ್ದಾರೆ. ಇನ್ನೊಂದು ಕಡೆ ಶೋರೂಮ್ ಗಳಲ್ಲಿ, ಆನ್ ಲೈನ್ ಮೂಲಕ ಏರ್ ಕಂಡೀಷನರ್, ಕೂಲರ್ ಉಪಕರಣ, ಫ್ಯಾನ್ ಹಾಗೂ ರೆಫ್ರಿಜರೇಟರ್ ಖರೀದಿಗೆ ಹೆಚ್ಚು ಒಲವು ತೋರುತ್ತಿದ್ದಾರೆ.

ನಗರದ ಶೋರೂಮ್ ಮಾಲೀಕರೊಬ್ಬರ ಪ್ರಕಾರ, “ನಗರದಲ್ಲಿ ಎಸಿ, ಕೂಲರ್, ಫ್ಯಾನ್ ಗಳ ಮಾರಾಟವು ಕಳೆದ ಮೂರು ವರ್ಷಗಳಲ್ಲಿಯೇ ಹೆಚ್ಚಾಗಿದೆ. ಕಳೆದ ವರ್ಷ ಏಪ್ರಿಲ್ ಮೊದಲ ಎರಡು ವಾರಗಳ ನಂತರ ಬೇಸಿಗೆ ಬಿಸಿಯ ಅನುಭವ ಆಗುತ್ತಿತ್ತು. ಆದರೆ ಈ ಬಾರಿ ಫೆಬ್ರವರಿ ಮೂರನೇ ವಾರದಿಂದಲೇ ಎಸಿ, ಕೂಲರ್, ಫ್ಯಾನ್ ಹಾಗೂ ರೆಫ್ರಿಜರೇಟರ್ ಬೇಡಿಕೆ ಹೆಚ್ಚಾಗಿದೆ. ವಾರಾಂತ್ಯದಲ್ಲಿ ಗ್ರಾಹಕರು ಹೆಚ್ಚಾಗುತ್ತಿದ್ದಾರೆ. ಬೇಡಿಕೆ 20-30 ಪ್ರತಿಶತ ಹೆಚ್ಚಾಗಿದೆ” ಎನ್ನುತ್ತಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಷ್ಣಾಂಶದ ಪ್ರಮಾಣವು 33.9 ಡಿಗ್ರಿಯಿಂದ  44 ಡಿಗ್ರಿಯಷ್ಟು ಹೆಚ್ಚಾಗಿದೆ. ಕಳೆದ ವರ್ಷ ವಾಡಿಕೆಯ ಪ್ರಮಾಣದಷ್ಟು ಮಳೆಯಾಗಿಲ್ಲ. ಈ ಬಾರಿಯೂ ಮುಂಗಾರು ಪೂರ್ವ ಮಳೆಯಾಗದೆ ಎಲ್ಲೆಡೆ ಬರ ಕಾಣಿಸಿಕೊಂಡಿದೆ. ಬೆಂಗಳೂರಿನ 5 ತಾಲೂಕುಗಳು ಬರಪೀಡಿತ ಎಂದು ರಾಜ್ಯ ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ನಗರದ ಹಲವು ಭಾಗಗಳಲ್ಲಿ ಬೋರ್ ವೆಲ್ ಗಳು ಬತ್ತಿ ಹೋಗಿವೆ. ದೇಹವನ್ನು ತಂಪಿಡಲು ಫ್ಯಾನ್, ಎಸಿ, ಕೂಲರ್, ರೆಫ್ರಿಜರೇಟರ್ ಬಳಕೆ ಹೆಚ್ಚಾಗಿರುವುದರಿಂದ ವಿದ್ಯುತ್ ಬಳಕೆಯ ಪ್ರಮಾಣವು ಏರಿಕೆಯಾಗಿದೆ.

ಇನ್ನೊಂದೆಡೆ ನಗರದ ಮತ್ತೊಂದು ಗ್ರಾಹಕ ಸರಕುಗಳನ್ನು ಮಾರಾಟ ಮಾಡುವ ಷೋರೂಮ್ ನವರು, “ಈ ಬಾರಿ ಬೆಂಗಳೂರಿನಲ್ಲಿ ಬೇಸಿಗೆಯ ಬಿಸಿ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಗ್ರಾಹಕರು ಫ್ಯಾನ್, ಎಸಿ, ರೆಫ್ರಿಜರೇಟರ್ ಖರೀದಿಸಲು ಮುಗಿಬೀಳುತ್ತಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಇವುಗಳ ಬೇಡಿಕೆ ಮೂರುಪಟ್ಟು ಹೆಚ್ಚಾಗಿದೆ. ಕೆಲವೊಮ್ಮೆ ಗ್ರಾಹಕರು ಕೇಳಿದ ಉತ್ಪನ್ನವನ್ನು ಹೊಂದಿಸಲು ಕಷ್ಟವಾಗುತ್ತಿದೆ. ಸಾಮಾನ್ಯವಾಗಿ ನಗರದಲ್ಲಿ ಬೇಸಿಗೆ ಕಾಲದಲ್ಲಿ ಈ ಪ್ರಮಾಣದ ಬೇಡಿಕೆ ಕಂಡು ಬರುತ್ತಿರಲಿಲ್ಲ. ಆದರೆ ಈ ಬಾರಿ ಇವುಗಳಿಗೆ ಸಾಕಷ್ಟು ಬೇಡಿಕೆ ಹೆಚ್ಚಾಗಿದೆ” ಎಂದು ಹೇಳಿದ್ದಾರೆ.

“ವಾತಾವರಣದಲ್ಲಿ ತೇವಾಂಶ ಸಂಪೂರ್ಣವಾಗಿ ಕಡಿಮೆಯಾಗಿದೆ. ಉಷ್ಣಾಂಶ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಮಧ್ಯಾಹ್ನದ ಹೊತ್ತಿರಲಿ, ಬೆಳಗ್ಗೆಯೇ ಮನೆಯಿಂದ ಹೊರಹೋಗಲು ಬಹಳ ಕಷ್ಟವಾಗುತ್ತದೆ. ಸೇಲ್ಸ್ ಮ್ಯಾನ್ ಆಗಿರುವುದರಿಂದ ಹೊರಗೆ ಹೋಗದೆ ವಿಧಿಯಿಲ್ಲ. ಮನೆಗೆ ಫ್ಯಾನ್ ಗಾಳಿ ಸಾಕಾಗುತ್ತಿಲ್ಲ ಎಂದು ಒಂದು ವಾರದ ಹಿಂದೆ ಕೂಲರ್ ಖರೀದಿಸಿ ತರಬೇಕಾಯಿತು” ಎಂದು ಹೇಳುತ್ತಾರೆ ಎನ್.ಆರ್.ಕಾಲೋನಿ ನಿವಾಸಿ ವೆಂಕಟೇಶ್.

ಬೆಂಗಳೂರು ಹವಾಮಾನ ಇಲಾಖೆಯ ವಿಜ್ಞಾನಿ ಎ ಪ್ರಸಾದ್ ಪ್ರಕಾರ, ಬೆಂಗಳೂರಿನಲ್ಲಿ ಮಾರ್ಚ್ ತಿಂಗಳ ಸಾಮಾನ್ಯ ಮಳೆ 14.1 ಮಿ.ಮೀ. “ಏಪ್ರಿಲ್‌ನಲ್ಲಿ ನಮ್ಮ ಮುನ್ಸೂಚನೆಗೆ ಸಂಬಂಧಿಸಿದಂತೆ, ನಾವು ಸಾಮಾನ್ಯಕ್ಕಿಂತ ಕಡಿಮೆ ಮಳೆಯ ಮುನ್ಸೂಚನೆ ನೀಡಿದ್ದೇವೆ. ಕಳೆದ 10-15 ವರ್ಷಗಳಲ್ಲಿ, ಮಾರ್ಚ್‌ನಲ್ಲಿ ನಗರದಲ್ಲಿ ಮಳೆಯಿಲ್ಲದೆ ಎರಡು ರೀತಿಯ ನಿದರ್ಶನಗಳಿವೆ. ಏಪ್ರಿಲ್ 2 ರಂದು, ಸರಾಸರಿಯಾಗಿ 37.2 ಡಿಗ್ರಿಯಷ್ಟು ತಾಪಮಾನ ದಾಖಲಾಗಿತ್ತು. ಇದು ಕಳೆದ 15 ವರ್ಷಗಳಲ್ಲಿ ನಾಲ್ಕನೇ ಅತಿ ಹೆಚ್ಚಿನ ತಾಪಮಾನವಾಗಿದೆ. 2016 ರಲ್ಲಿ ಸಾರ್ವಕಾಲಿಕ ಗರಿಷ್ಠ ತಾಪಮಾನ 39.2 ಡಿಗ್ರಿ ಸೆಲ್ಸಿಯಸ್ ತಲುಪಿತ್ತು.  ಏಪ್ರಿಲ್‌ನಲ್ಲಿ ಸಾಮಾನ್ಯವಾಗಿ ಕಂಡುಬರುವ ಸರಾಸರಿ ಮಳೆ 61.7 ಮಿ.ಮೀ ಆಗಿದ್ದರೆ, ಒಂದೇ ದಿನದಲ್ಲಿ ಮಳೆಯ ದಾಖಲೆ 108.6 ಮಿ.ಮೀ, 2001 ರಲ್ಲಿ ದಾಖಲಾಗಿತ್ತು. ಏಪ್ರಿಲ್ 2001 ರಲ್ಲಿ ಒಟ್ಟಾರೆಯಾಗಿ 323.8 ಮಿಮೀ ಮಳೆ ದಾಖಲಾಗಿತ್ತು.”

WhatsApp Join our WhatsApp Channel
Previous Post

#Skyshow | ನೆಹರು ಪ್ಲಾನಿಟೋರಿಯಂನಲ್ಲಿ ‘ಸ್ಕೈ ಶೋ’ ಪ್ರದರ್ಶನ ಏ.7ರಿಂದ ಆರಂಭ : ಬಾಹ್ಯಾಕಾಶ ಆಸಕ್ತರಿಗೆ ಅವಕಾಶ

Next Post

Ugadi Festival Water Supply | ಯುಗಾದಿ- ರಂಜಾನ್ ಹಬ್ಬಕ್ಕೆ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಉಂಟಾಗದು : ಜಲಮಂಡಳಿ ಅಧ್ಯಕ್ಷ ಡಾ.ವಿ ರಾಮ್‌ ಪ್ರಸಾತ್‌ ಮನೋಹರ್‌

Next Post
ಬೆಂಗಳೂರಿನ ಸಾಂದರ್ಭಿಕ ಚಿತ್ರ

Ugadi Festival Water Supply | ಯುಗಾದಿ- ರಂಜಾನ್ ಹಬ್ಬಕ್ಕೆ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಉಂಟಾಗದು : ಜಲಮಂಡಳಿ ಅಧ್ಯಕ್ಷ ಡಾ.ವಿ ರಾಮ್‌ ಪ್ರಸಾತ್‌ ಮನೋಹರ್‌

#UgadiFestival | ಕ್ರೋಧಿನಾಮ ಸಂವತ್ಸರದ ಫಲಾಫಲಗಳೇನು? ಬ್ರಹ್ಮ ಜಗತ್ತನ್ನು ಸೃಷ್ಟಿ ಮಾಡಿದ ದಿನವಿದು ; ಕಾಲಜ್ಞಾನದಲ್ಲಿ ಏನಿದೆ?

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group