Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Sri Guru Raghvendra Sahakara Bank | ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕಲ್ಲಿ ಹಣ ಇಟ್ಟಿದ್ದ ಜನರು ಈಗ ಬೀದಿ ಬೀದಿ ಅಲೆಯುತ್ತಿದ್ದಾರೆ : ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್ ಬೇಸರ

ಗುರುರಾಘವೇಂದ್ರ ಸಹಕಾರಿ ಬ್ಯಾಂಕಿನ ಅಕ್ರಮ ಪ್ರಕರಣ : ಬಿಜೆಪಿ ಸಹಕಾರಿ ಚಿಂತನ-ಮಂಥನ ಸಭೆಯಲ್ಲಿ ಹಲ್ಲೆ ನಡೆಸಿದ ಠೇವಣಿದಾರರನ್ನೇ ಗೂಂಡಾಗಳೆಂದು ಕರೆದಿದ್ದಾರೆ. ಬಿಜೆಪಿ ಇದ್ದಾಗ ತನಿಖೆಗೆ ನೀಡಲಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ತನಿಖೆಗೆ ನೀಡಿದೆ ಎಂದು ಯು.ಬಿ.ವೆಂಕಟೇಶ್ ತಿಳಿಸಿದ್ದಾರೆ.

by Bengaluru Wire Desk
April 19, 2024
in Bengaluru Focus
Reading Time: 1 min read
0
ಬೆಂಗಳೂರಿನ ಎನ್.ಆರ್.ಕಾಲೋನಿಯಲ್ಲಿರುವ ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕಿನ ಸಾಂದರ್ಭಿಕ ಚಿತ್ರ.

ಬೆಂಗಳೂರಿನ ಎನ್.ಆರ್.ಕಾಲೋನಿಯಲ್ಲಿರುವ ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕಿನ ಸಾಂದರ್ಭಿಕ ಚಿತ್ರ.

ಬೆಂಗಳೂರು, ಏ.19 www.bengaluruwire.com : ಬಿಜೆಪಿ ಪಕ್ಷದಿಂದ ಏ.13ರಂದು ಉದಯ ಸೌಹಾರ್ದ ಸೊಸೈಟಿಯಲ್ಲಿ ಸಹಕಾರಿ ಚಿಂತನಾ- ಮಂಥನಾ ಕಾರ್ಯಕ್ರಮ ನಡೆಸಿದ್ದು, ಬಸವನಗುಡಿಯಲ್ಲಿ ತೇಜಸ್ವೀ ಸೂರ್ಯ ಮತ್ತು ಶಾಸಕ ರವಿ ಸುಬ್ರಮಣ್ಯ ಹಾಗೂ ಈ ಕಾರ್ಯಕ್ರಮಕ್ಕೆ ಗುರುರಾಘವೇಂದ್ರ ಸಹಕಾರಿ ಬ್ಯಾಂಕಿನ ಸಂತ್ರಸ್ತರು ಬಂದಿದ್ದರು. ಗುರುರಾಘವೇಂದ್ರ ಬ್ಯಾಂಕಿನ ಅಕ್ರಮ ಕುರಿತಂತೆ ಇವರ ಮೇಲೆ ಹಲ್ಲೆ ನಡೆಸಿದವರನ್ನೇ ಗೂಂಡಾಗಳು ಎಂದು ಕರೆದಿದ್ದಾರೆ. ಇದೊಂದು ವಿಪರ್ಯಾಸ. ಬಿಜೆಪಿ ಪಕ್ಷದಿಂದ ಈ ಬ್ಯಾಂಕಿನ ಸಂತ್ರಸ್ತರಿಗೆ ನ್ಯಾಯ ದೊರಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯರಾದ ಯು.ಬಿ ವೆಂಕಟೇಶ್ ಬೇಸರ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ವಕ್ತಾರರಾದ ಡಾ. ಶಂಕರ್ ಗುಹ ದ್ವಾರಕನಾಥ್ ಜೊತೆ ಶುಕ್ರವಾರ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಬಸವನಗುಡಿಯಲ್ಲಿದ್ದ ಗುರುರಾಘವೇಂದ್ರ ಸಹಕಾರಿ ಬ್ಯಾಂಕಿನ ವಿಚಾರದಲ್ಲಿ 14 ವರ್ಷಗಳಿಂದ ಆರ್ ಬಿಐ ಆಡಿಟರ್ ಗಳು ಮತ್ತು ಸ್ಥಳೀಯರು ಸೇರಿ ಅಕ್ರಮ ಎಸಗಿದ್ದಾರೆ. ಸುಮಾರು 2 ಸಾವಿರ ಕೋಟಿಯಷ್ಟು ಹಗರಣದ ಬಗ್ಗೆ ತನಿಖೆ ನಡೆಸುವಂತೆ ಈ ಹಿಂದಿನ ಬಿಜೆಪಿ ಸರ್ಕಾರ ಇದ್ದ ವೇಳೆಯಲ್ಲಿ ಸಹಕಾರಿ ಸಚಿವರಾಗಿದ್ದ ಎಸ್.ಟಿ.ಸೋಮಶೇಖರ್ ಅವರಿಗೆ ಮನವಿ ಮಾಡಿದ್ದೆವು. ಅವರು ಸಿಐಡಿ ತನಿಖೆಗೆ ನೀಡಿದ್ದೇವೆ ಹಾಗೂ 1 ಸಾವಿರ ಕೋಟಿ ಮೊತ್ತದ ಆಸ್ತಿ ಜಪ್ತಿ ಮಾಡಿದ್ದೇವೆ ಎಂದು ಹೇಳಿದ್ದರು.

ಈ ಎಲ್ಲಾ ಬೆಳವಣಿಗೆಗಳ ನಂತರ ನಾನು ಸೌಮ್ಯ ರೆಡ್ಡಿ, ರವಿ ಸುಬ್ರಮಣ್ಯ ಅವರು ಸೇರಿದಂತೆ ಅನೇಕರು ಸೇರಿ ಸಭೆ ಮಾಡಿದ್ದೆವು. ಅಲ್ಲಿ ಆರ್ ಬಿಐ ಅಧಿಕಾರಿಗಳನ್ನು ಪ್ರಶ್ನಿಸಿದ್ದೆ. ಪ್ರತಿ ವರ್ಷ ಆಡಿಟ್ ಮಾಡುವಾಗ ಏನು ಮಾಡುತ್ತಾ ಇದ್ದೀರಿ ಎಂದು ಪ್ರಶ್ನಸಿದ್ದೆ?  ನಿರ್ಮಲಾ ಸೀತಾರಾಮನ್ ಅವರನ್ನು ಸಂಸತ್ರಸ್ಥರು ಭೇಟಿ ಮಾಡಿ ನ್ಯಾಯಕ್ಕೆ ಆಗ್ರಹಿಸಿದಾಗ ʼನನ್ನ ಕೇಳಿ ದುಡ್ಡು ಇಟ್ಟಿದ್ರಾʼ ಎಂದು ಉಡಾಫೆಯ ಮಾತುಗಳನ್ನು ಆಡಿದ್ದರು. ರಾಘವೇಂದ್ರ ಸಹಕಾರಿ ಬ್ಯಾಂಕ್ ಅಲ್ಲಿ ಹಣ ಇಟ್ಟಿದ್ದ ಜನರು ಬೀದಿ, ಬೀದಿಗಳಲ್ಲಿ ಅಲೆಯುತ್ತಿದ್ದಾರೆ. ಬಿಜೆಪಿ ಇದ್ದಾಗ ತನಿಖೆಗೆ ನೀಡಲಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ತನಿಖೆಗೆ ನೀಡಿದೆ ಎಂದು ಬ್ಯಾಂಕಿನ ಸಂತ್ರಸ್ತರ ಪರಿಸ್ಥಿತಿ ಹಾಗೂ ಆ ಬ್ಯಾಂಕಿನ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ತೆರೆದಿಟ್ಟರು.

“ಕೇಂದ್ರ ಸರ್ಕಾರಕ್ಕೆ ಬಡವರನ್ನು ಕಾಪಾಡುವ ಬದ್ಧತೆ ಇಲ್ಲ” :

“ತೇಜಸ್ವಿ ಸೂರ್ಯ ಒಳ್ಳೆಯ ಲೋಕಸಭಾ ಸದಸ್ಯರಾಗಲೇ ಇಲ್ಲ. ಅನಂತಕುಮಾರ್ ಅವರು ಕೇಂದ್ರಕ್ಕೂ ರಾಜ್ಯಕ್ಕೂ ಕೊಂಡಿಯಾಗಿದ್ದರು. ಬಿಜೆಪಿಯ ಯುವ ಮೋರ್ಚಾವನ್ನೇ ಹಾಳು ಮಾಡಿದ ಕೀರ್ತಿ ತೇಜಸ್ವಿ ಸೂರ್ಯನಿಗೆ ಸಲ್ಲಬೇಕು. ಆತನಿಗೆ ಮಸಾಲೆ ದೋಸೆ ತಿನ್ನೋದು, ಇಂಜೆಕ್ಷನ್ ಮಾರೋದು ಇಷ್ಟೇ ಕೆಲಸ. ಗುರು ರಾಘವೇಂದ್ರ ಬ್ಯಾಂಕ್ ಅನ್ನು ಯಾವುದಾದರೂ ಬ್ಯಾಂಕ್ ಜೊತೆ ವಿಲೀನ ಮಾಡಿ ಬಡವರನ್ನು ಕಾಪಾಡಬಹುದಿತ್ತು. ಪ್ರಶ್ನಿಸಿದರೆ ಆರ್ ಬಿಐ ಅನುಮತಿ ನೀಡಿಲ್ಲ ಎಂದು ಹೇಳುತ್ತಾರೆ. ಕೇಂದ್ರ ಸರ್ಕಾರಕ್ಕೆ ಬಡವರನ್ನು ಕಾಪಾಡುವ ಬದ್ಧತೆ ಇಲ್ಲ” ಎಂದು ಯುಬಿ ವೆಂಕಟೇಶ್ ವಾಗ್ದಾಳಿ ನಡೆಸಿದ್ದಾರೆ. ಶೋಭಾ ಕರಂದ್ಲಾಜೆ ಅವರು ಇತ್ತೀಚೆಗೆ ನಡೆದ ನಗರ್ತ ಪೇಟೆಯ ಗಲಭೆಯಲ್ಲಿ ಎ2 ಆಗಿದ್ದಾರೆ. ಆದರೆ ನಾಮಪತ್ರ ಸಲ್ಲಿಸುವ ವೇಳೆ ಈ ಮಾಹಿತಿಯನ್ನು ಮರೆಮಾಚಿದ್ದಾರೆ ಇದನ್ನು ಚುನಾವಣಾ ಆಯೋಗದ ಗಮನಕ್ಕೆ ತರಲಾಗಿದೆ. ಈಗಾಗಲೇ ನಾಮಪತ್ರ ಅಂಗೀಕಾರವಾಗಿದೆ, ಆದ ಕಾರಣ ನ್ಯಾಯಲಯದಲ್ಲಿ ಇದರ ಬಗ್ಗೆ ಪ್ರಶ್ನೆ ಮಾಡಿದ್ದೇವೆ.

ಕೆಪಿಸಿಸಿ ವಕ್ತಾರರಾದ ಡಾ. ಶಂಕರ್ ಗುಹ ದ್ವಾರಕನಾಥ್ ಜೊತೆ ಶುಕ್ರವಾರ ಜಂಟಿ ಮಾಧ್ಯಮಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್ ಮಾತನಾಡಿದರು.

“ಠೇವಣಿದಾರರನ್ನೇ ಗೂಂಡಾ ಎಂದು ಕರೆದಿದ್ದಾರೆ” :

ವಿಧಾನ ಪರಿಷತ್ ಚುನಾವಣೆ ವೇಳೆ ಠೇವಣಿದಾರರಿಗೆ ಹಣ ಕೊಡಿಸುತ್ತೇನೆ ಎಂದು ಹೇಳಿದ್ದರು. ಆದರೆ ಈಗ ಏನೂ ಇಲ್ಲದಂತಾಗಿದೆ. ತೇಜಸ್ವೀ ಸೂರ್ಯ ಅವರದ್ದು ಕೇವಲ ಸುಳ್ಳಿನ ಭರವಸೆ. ಅನ್ಯಾಯಕ್ಕೆ ಒಳಗಾದ ಠೇವಣಿದಾರರನ್ನು ಗೂಂಡಾ ಎಂದು ಕರೆದಿದ್ದಾರೆ. ಇದೇನಾ ಬಿಜೆಪಿ ಸಂಸ್ಕೃತಿ. ಪ್ರವೀಣ್ ನೆಟ್ಟಾರು ಹತ್ಯೆಯಾದಾಗ ಈಗ ಬಿಜೆಪಿ ಸರ್ಕಾರವಿದೆ, ಕಾಂಗ್ರೆಸ್ ಸರ್ಕಾರ ಇದ್ದಿದರೆ ಕಲ್ಲು ಹೊಡೆಯಬಹುದಿತ್ತು ಎಂದು ಹೇಳಿದವರು ನೀವು. ಇದು ಅಯೋಗ್ಯತನದ ಪರಮಾವಧಿ. ಸಹಕಾರಿ ಚಿಂತನಾ- ಮಂಥನಾ ಸಭೆಯಲ್ಲಿ ಹಿರಿಯ ನಾಗರಿಕರಿಗೆ ಹಲ್ಲೆ ಮಾಡಿದ್ದೀರಲ್ಲ, ಯಾರು ಗೂಂಡಾ ಎಂಬುದು ಇದರಿಂದ ತಿಳಿಯುತ್ತದೆಯಲ್ಲವೇ? ಎಂದು ಕೆಪಿಸಿಸಿ ವಕ್ತಾರರಾದ ಡಾ. ಶಂಕರ್ ಗುಹ ದ್ವಾರಕನಾಥ್ ಪ್ರಶ್ನಸಿದ್ದಾರೆ.

“ವಸಿಷ್ಠ ಸೊಸೈಟಿಯ ಕಥೆಯನ್ನು ಮುಗಿಸಲಾಯಿತು. ರಾಘವೇಂದ್ರ ಮತ್ತು ವಸಿಷ್ಠ ಬ್ಯಾಂಕ್ ಗಳ  ಕಾರ್ಯಕ್ರಮಗಳಲ್ಲಿ ಮದುಮಕ್ಕಳಂತೆ ನೀವು ಮತ್ತು ನಿಮ್ಮ ಚಿಕ್ಕಪ್ಪ ರವಿ ಸುಬ್ರಮಣ್ಯ ಓಡಾಡುತ್ತಾ ಇದ್ದೀರಿ. ಬ್ಯಾಂಕ್ ಮುಳುಗಿ ಹೋದಾಗ ಅದನ್ನು 6 ತಿಂಗಳ ಕಾಲ ನಡೆಸಲು ಅಕ್ರಮ ಮಾಡಿದವರಿಗೆ ಹೇಗೆ ಅವಕಾಶ ನೀಡಲಾಯಿತು. ಅಂದಿನ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಏಕೆ ಆರೋಪಿಗಳನ್ನು ಬಂಧಿಸಲಿಲ್ಲ. ಇಲ್ಲಿ ಯಾರನ್ನು ಕಾಪಾಡಲಾಗುತ್ತಿದೆ. ಶೇ 75 ರಷ್ಟು ಜನರಿಗೆ ಡಿಐಸಿಜಿ ಹಣ ಕೊಡಿಸಿದ್ದೇನೆ ಎಂದು ಸುಳ್ಳು ಹೇಳುತ್ತಿದ್ದಾರೆ. ಇದು ಕೇವಲ 46 ಸಾವಿರದಷ್ಟು ನೇರ ಠೇವಣಿದಾರರ ಹಣವಲ್ಲ. ಸುಮಾರು 120 ಸೊಸೈಟಿಗಳು 500 ಕೋಟಿಯಷ್ಟು ಹೂಡಿಕೆ ಮಾಡಿದ್ದವು, ಒಟ್ಟಾರೆ 2 ಲಕ್ಷಕ್ಕೂ ಹೆಚ್ಚು ಜನರ ಅನ್ಯಾಯಕ್ಕೆ ಒಳಗಾಗಿದ್ದಾರೆ. ಇವರಿಗೆಲ್ಲಾ ಒಂದೇ ಒಂದು ರೂಪಾಯಿ ಸಿಕ್ಕಿಲ್ಲ. ವಸಿಷ್ಠ, ಗುರು ಸಾರ್ವಭೌಮ ಸೊಸೈಟಿಯ ಗ್ರಾಹಕರಿಗೆ ಏನೂ ಸಿಕ್ಕಿಲ್ಲ” ಎಂದು ಅವರು ದೂರಿದ್ದಾರೆ.

ಬಿಜೆಜೆಪಿಯಲ್ಲಿ ಯಾರು ಹೆಚ್ಚು ಸುಳ್ಳು ಹೇಳುತ್ತಾರೆಯೋ ಅವರನ್ನು ಹಂತ, ಹಂತವಾಗಿ ಎತ್ತರದ ಸ್ಥಾನಕ್ಕೆ ಕೂರಿಸಲಾಗುತ್ತದೆ. ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು? ಏಪ್ರಿಲ್ 15 ರಂದು ತ್ರಿಶೂರ್ ಅಲ್ಲಿ ಕುರುವಣ್ಣೂರು ಬ್ಯಾಂಕ್ ನಲ್ಲಿ ನಡೆದ ಹಗರಣವನ್ನು ಅಲ್ಲಿನ ಸರ್ಕಾರದ ಮೇಲೆ ಹಾಕಿದರು. ಕರ್ನಾಟಕದಲ್ಲಿ ಹಗರಣ ನಡೆದಿದ್ದು ಬಿಜೆಪಿ ಇದ್ದಾಗ. ಇದರ ಬಗ್ಗೆ ಮಾತನಾಡಿ ಮೋದಿ ಅವರೇ. ಕರ್ನಾಟಕದ ಜನರ ಬಗ್ಗೆ ನಿಮಗೆ ಕಾಳಜಿ ಇಲ್ಲವೇ? ಎಂದು ಡಾ.ಶಂಕರ್ ಗುಹ ವಾಗ್ದಾಳಿ ನಡೆಸಿದರು.

ಜನರ ಕಷ್ಟಗಳನ್ನು ಬಗೆಹರಿಸಲು ಅವರಿಗೆ ಕಾಳಜಿ ಇಲ್ಲವೇ? ಧರ್ಮದ ಹೆಸರಿನಲ್ಲಿ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟರೇ ಬೇರೆ ಏನೂ ಬರುವುದಿಲ್ಲ. ನೀವು ಈ ಬ್ಯಾಂಕ್ ಗಳಿಗೆ ಅನ್ಯಧರ್ಮಿಯರ ಹೆಸರನ್ನು ಇಟ್ಟು ಬಿಡಿ. ಆಗಲಾದರೂ ನಿಮಗೆ ಬುದ್ದಿ ಬರಬಹುದು. ರಾಘವೇಂದ್ರ ಬ್ಯಾಂಕಿನಲ್ಲಿ ಹಣವಿಟ್ಟ ಸುಮಾರು 200 ಕ್ಕೂ ಹೆಚ್ಚು ಜನ ಸತ್ತಿದ್ದಾರೆ, ಎನ್.ಆರ್ ಕಾಲೋನಿಯಲ್ಲಿ ಒಬ್ಬರು ದೇವಸ್ಥಾನದ ಬಳಿ ಭಿಕ್ಷೆ ಬೇಡುತ್ತಿದ್ದಾರೆ ಎಂದು ಬ್ಯಾಂಕಿನ ಠೇವಣಿದಾರರ ಸಂಕಷ್ಟ ಹಾಗೂ ವಾಸ್ತವ ಪರಿಸ್ಥಿತಿಯನ್ನು ತಿಳಿಸಿದ್ದಾರೆ.

WhatsApp Join our WhatsApp Channel
Previous Post

#Loksabhaelection Poll | ದೇಶಾದ್ಯಂತ 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಇಂದು : 1,625 ಅಭ್ಯರ್ಥಿಗಳಿಂದ ಅದೃಷ್ಟ ಪರೀಕ್ಷೆ

Next Post

#Bangalorekaraga | ಬೆಂಗಳೂರಿನಲ್ಲಿ ನಾಳೆ ಮಧ್ಯರಾತ್ರಿ ಹಸಿ ಕರಗ ; ವಹ್ನಿಕುಲ ಕ್ಷತ್ರಿಯರಿಂದ ಧಾರ್ಮಿಕ ಆಚರಣೆಗೆ ತಯಾರಿ : ಏ.23 ರಂದು ಕರಗ ಶಕ್ತ್ಯೋತ್ಸವ

Next Post
ಬೆಂಗಳೂರು ಕರಗ ಮಹೋತ್ಸವದ ಸಾಂದರ್ಭಿಕ ಚಿತ್ರ.

#Bangalorekaraga | ಬೆಂಗಳೂರಿನಲ್ಲಿ ನಾಳೆ ಮಧ್ಯರಾತ್ರಿ ಹಸಿ ಕರಗ ; ವಹ್ನಿಕುಲ ಕ್ಷತ್ರಿಯರಿಂದ ಧಾರ್ಮಿಕ ಆಚರಣೆಗೆ ತಯಾರಿ : ಏ.23 ರಂದು ಕರಗ ಶಕ್ತ್ಯೋತ್ಸವ

ಶನಿವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ‘ವಿಜಯ ಸಂಕಲ್ಪ’ ಸಮಾವೇಶದ ಬಳಿಕ ಬಿಜೆಪಿ ಅಭ್ಯರ್ಥಿಗಳ ಜೊತೆ ಸಾರ್ವಜನಿಕರತ್ತ ಕೈಬೀಸಿದ ಪ್ರಧಾನಿ ನರೇಂದ್ರ ಮೋದಿ. ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರು ಇದೇ ಸಂದರ್ಭದಲ್ಲಿ ಜೊತೆಗಿದ್ದರು.

BJP Vijaya Sankalpa Convention | “24*7 ಮತ್ತು 2047 ನನ್ನ ಸಂಕಲ್ಪ, ಏ.26ರಂದು ಗರಿಷ್ಠ ಮತದಾನ ಮಾಡಿ” : ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group