Tuesday, June 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

KMF Milk Production | ಭೀಕರ ಬಿಸಿಲು- ಬರದಲ್ಲೂ ಪ್ರತಿನಿತ್ಯ ರಾಜ್ಯದಲ್ಲಿ ಹರಿಯುತ್ತಿದೆ ಕ್ಷೀರಸಾಗರ !! : ಕೆಎಂಎಫ್ ನಿಂದ ಹೊಸ ದಾಖಲೆ ; ಸರಾಸರಿ 80.74 ಲಕ್ಷ ಲೀ. ಹಾಲು ಉತ್ಪಾದನೆ

ಬರವಿದ್ದರೂ ಹೈನುಗಾರಿಕೆ ರೈತರಿಗೆ ನಿರಂತರ ಆದಾಯ ಮೂಲ | ಬೇಸಿಗೆ ಬಿಸಿಯ ನಡುವೆ ಕೆಎಂಎಫ್ ಐಸ್ ಕ್ರೀಮ್ ಮಾರಾಟ ಶೇ.40ರಷ್ಟು ಏರಿಕೆ

by Bengaluru Wire Desk
April 30, 2024
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಏ.30 www.bengaluruwire.com : ರಾಜ್ಯದಲ್ಲಿ ಭೀಕರ ಬರದ ನಡುವೆಯೂ ಕೆಎಂಎಫ್ ಹಾಲು ಉತ್ಪಾದನೆ (Milk Production) ಹಾಗೂ ಮಾರಾಟ (Sales)ದಲ್ಲಿ ಕೆಎಂಎಫ್ (Karnataka Milk Federation) ಹೊಸ ದಾಖಲೆ ಸೃಷ್ಟಿಸಿದೆ.

ರಾಜ್ಯದಲ್ಲಿ ಬೇಸಿಗೆ ಕಾಲ(Summer)ದಲ್ಲೂ ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಸಾಧನೆ ಮಾಡಿದೆ. ಕಳೆದ ವರ್ಷ ಏಪ್ರಿಲ್ 27ಕ್ಕೆ (77.33 ಲಕ್ಷ ಲೀ.) ಹೋಲಿಸಿದರೆ ಈ ಬಾರಿ (82.12 ಲಕ್ಷ ಲೀ.) ಶೇ.6ರಷ್ಟು ಹಾಲು ಉತ್ಪಾದನೆ ಹೆಚ್ಚಳವಾಗಿದೆ. ಹಾಲು ಉತ್ಪಾದನೆ ಮಾತ್ರವಲ್ಲದೆ ಮಾರಾಟ 51 ಲಕ್ಷ ಲೀ.‌ ನಷ್ಟಾಗಿದೆ.

2023ರಲ್ಲಿ ಜನವರಿಯಿಂದ ಏಪ್ರಿಲ್ 27ರ ತನಕ ರಾಜ್ಯದಲ್ಲಿ ಪ್ರತಿದಿನ ಸರಾಸರಿಯಾಗಿ 75.60 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದ್ದರೆ, 2024 ಇಸವಿಯಲ್ಲಿ ಜನವರಿ ಆರಂಭದಿಂದ ಏಪ್ರಿಲ್ 27ರ ತನಕ 80.74 ಲಕ್ಷ ಲೀ. ಹಾಲು ಉತ್ಪಾದನೆಯಾಗಿದೆ. ಅಂದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಸರಾಸರಿಯಾಗಿ ಶೇ.7ರಷ್ಟು ಅಂದರೆ 5.14 ಲಕ್ಷ ಲೀ. ಹಾಲು ಉತ್ಪಾದನೆಯಲ್ಲಿ ಹೆಚ್ಚಳವಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಏ.27ರಂದು 14.29 ಲಕ್ಷ ಲೀಟರ್ ಹಾಲು, ಹಾಸನದಲ್ಲಿ ನಿತ್ಯ 12.33 ಲಕ್ಷ ಲೀಟರ್, ಮಂಡ್ಯ 9.25 ಲಕ್ಷ ಲೀಟರ್, ಕೋಲಾರದಲ್ಲಿ ನಿತ್ಯ 10.22 ಲಕ್ಷ ಲೀಟರ್​​, ತುಮಕೂರಿನಲ್ಲಿ 7.72 ಲಕ್ಷ ಲೀಟರ್​, ಮೈಸೂರಿನಲ್ಲಿ 7.50 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ.

ಬರವಿದ್ದರೂ ಹೈನುಗಾರಿಕೆ ರೈತರಿಗೆ ನಿರಂತರ ಆದಾಯ ಮೂಲ :

ರಾಜ್ಯದಲ್ಲಿ ಬೇಸಿಗೆ ಪರಿಣಾಮ ಹಸಿರು ಮೇವು ಹಾಗೂ ನೀರಿಗೆ ಹಲವು ಭಾಗಗಳಲ್ಲಿ ಕೊರತೆಯಿದೆ. ಆದರೆ ಇದರ ನಡುವೆ ಹಾಲು ಉತ್ಪಾದನೆಯಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿರುವುದು ಎಲ್ಲರಲ್ಲೂ ಹುಬ್ಬೇರುವಂತೆ ಮಾಡಿದೆ. ಪರಿಣಾಮ ರಾಜ್ಯದಲ್ಲಿ ಕೆಎಂಎಫ್ ಹಾಲಿನ ಹೊಳೆಯೇ ಹರಿಸಿದೆ. ಸಾಮಾನ್ಯವಾಗಿ ಬೇಸಿಗೆ ಸಮಯದಲ್ಲಿ ಹಾಲಿನ ಉತ್ಪಾದನೆ ಕಡಿಮೆಯಾಗುತ್ತದೆ. ಆದರೆ ಈ ಬಾರಿ ಕೆಎಂಎಫ್​​ ಹಾಲಿನ ಉತ್ಪಾದನೆ ಕುಸಿಯದಂತೆ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿತ್ತು. ಇದರ ಪರಿಣಾಮವಾಗಿ ತೀವ್ರ ಬರಗಾಲ ನಡುವೆಯೂ ಹಾಲಿನ ಉತ್ಪಾದನೆ ದಾಖಲೆ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎನ್ನುತ್ತಾರೆ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್.

“ಬರಗಾಲದಿಂದಾಗಿ ರೈತರಿಗೆ ಆದಾಯದ ಮೂಲವಿಲ್ಲ. ನಿರಂತರವಾಗಿ ಆದಾಯ ಬರುವ ಮೂಲವೆಂದರೆ ಅದು ಹೈನುಗಾರಿಕೆಯೊಂದೇ. ಹೀಗಾಗಿ ರೈತರು ಹೈನುಗಾರಿಕೆ (Dairy farming) ಮೇಲೆ ಹೆಚ್ಚು ಗಮನಕೊಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟಾರೆ 25 ಲಕ್ಷ ಮಂದಿ ಹೈನುಗಾರರಿದ್ದಾರೆ. ಆ ಪೈಕಿ ಕೆಎಂಎಫ್ ಗೆ ಹಾಲು ಹಾಕುವ ಹೈನುಗಾರರ ಪ್ರಮಾಣ 8.5 ಲಕ್ಷ ದಿಂದ 9 ಲಕ್ಷವಿದೆ. ಕೆಎಂಎಫ್ ಪ್ರತಿ ಲೀ. ಗೆ 33 ರೂ. ಹಣ ನೀಡುತ್ತದೆ. ಸರ್ಕಾರವು ಪ್ರತಿ ಲೀ. ಹಾಲಿಗೆ 5 ರೂ.‌ಸಹಾಯಧನ (Subsidy) ನೀಡುತ್ತದೆ. ಅಲ್ಲಿಗೆ ಒಟ್ಟಾರೆ ರೈತರಿಗೆ ಪ್ರತಿ ಲೀಟರ್ ಗೆ 39 ರೂ.‌ ಸಿಗುತ್ತಿದೆ. ಈ ಬರ ಪರಿಸ್ಥಿತಿಯಲ್ಲೂ ಉತ್ತಮ ಹಾಗೂ ನಿರಂತರ ಆದಾಯ ಮೂಲ ಆಗಿರುವ ಕಾರಣ ಹಾಲು ಉತ್ಪಾದನೆಗೆ ರೈತರು ಶ್ರಮಿಸಿರುವ ಕಾರಣ ಹಾಲು ಸಂಗ್ರಹ ಹೆಚ್ಚಳವಾಗಿರುವ ಸಾಧ್ಯತೆಯಿದೆ” ಎಂದು ಅವರು ಬೆಂಗಳೂರು ವೈರ್ ಗೆ ಹೇಳಿದ್ದಾರೆ.

ಬೇಸಿಗೆಯಲ್ಲಿ ಈ ಬಾರಿ ಪ್ರತಿ ದಿನ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಗುರಿಯನ್ನು ಕೆಎಂಎಫ್ ಇಟ್ಟುಕೊಂಡಿತ್ತು.‌ ಆ ನಿಟ್ಟಿನಲ್ಲಿ ಹಲವು ಪರಿಣಾಮಕಾರಿ ಕ್ರಮ ಹಾಗೂ ಯೋಜನೆ  ಕೈಗೊಂಡ ಪರಿಣಾಮ ಕ್ಷೀರ ಉತ್ಪಾದನೆಯಲ್ಲಿ ಏರಿಕೆಯಾಗಿದೆ.

ಕೆಎಂಎಫ್ ಐಸ್ ಕ್ರೀಮ್ ಮಾರಾಟ ಶೇ.40ರಷ್ಟು ಏರಿಕೆ :

ಈ ಬಾರಿಯ ಬೇಸಿಗೆ ಬಿಸಿಗೆ ಜನರು ತಂಪು ಪಾನೀಯ ಹಾಗೂ ಐಸ್ ಕ್ರೀಮ್ ಸೇವನೆಗೆ ಹೆಚ್ಚು ಒತ್ತು ಕೊಡುತ್ತಿದ್ದಾರೆ. ಹೀಗಾಗಿ ಕೆಎಂಎಫ್ ಐಸ್ ಕ್ರೀಮ್ ಮಾರಾಟವು ಕಳೆದ ವರ್ಷ ಪ್ರತಿದಿನ 16,000 ಲೀ. ಮಾರಾಟಕ್ಕೆ ಹೋಲಿಸಿದರೆ ಈ ಬಾರಿ 25,000 ಲೀ. ಗೆ ಹೆಚ್ಚಾಗಿದೆ. ಅಂದರೆ ಐಸ್ ಕ್ರೀಮ್ ಮಾರಾಟ ಶೇ.40ರಷ್ಟು ಹೆಚ್ಚಾಗಿದೆ. ಕೆಎಂಎಫ್ ಬಳಿ ಸದ್ಯ ಫ್ಯಾಮಿಲಿ ಪ್ಯಾಕ್, ಕೋನ್‌ ಸೇರಿದಂತೆ  35-40 ರೀತಿಯ ಉತ್ಪನ್ನಗಳಿವೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಎಮ್ಮೆ ಹಾಲಿಗೆ ಬೇಡಿಕೆ ಕುಸಿತ :

ಕಳೆದ ಮೂರು ತಿಂಗಳ ಹಿಂದಷ್ಟೇ ಕರ್ನಾಟಕ ಹಾಲು ಒಕ್ಕೂಟ ರಾಜ್ಯಾಧ್ಯಂತ ಎಮ್ಮೆ ಹಾಲು ಮಾರಾಟಕ್ಕೆ ಚಾಲನೆ ನೀಡಿತ್ತು. ಆದರೆ ಇದಾದ ನಾಲ್ಕೇ ತಿಂಗಳಿಗೆ ಬೆಂಗಳೂರಿನಲ್ಲಿ ಮಾತ್ರ ಎಮ್ಮೆ ಹಾಲು ಬೇಡಿಕೆ ಇಲ್ಲದ ಕಾರಣ ಮಾರಾಟ ಸ್ಥಗಿತಗೊಳಿಸಲು ಚಿಂತನೆ ನಡೆಸಿದೆ. ಕಳೆದ ವರ್ಷ ಡಿಸೆಂಬರ್ ತಿಂಗಳಿಂದ ಎಮ್ಮೆ ಹಾಲು ಮಾರುಕಟ್ಟೆಗೆ ಕೆಎಂಎಫ್​ ಬಿಡುಗಡೆ ಮಾಡಿತ್ತು. ಎಮ್ಮೆ ಹಾಲಿಗೆ ಗ್ರಾಹಕರಿಂದ ಬೇಡಿಕೆ ಕುಸಿತ ಆಗಿರುವುದು ಕೆಎಂಎಫ್​ ಈ ನಿರ್ಧಾರಕ್ಕೆ ಕಾರಣ. ಆದರೆ ರಾಜ್ಯದಲ್ಲಿ ನಿತ್ಯ ಒಟ್ಟಾರೆ 1 ಲಕ್ಷ ಲೀಟರ್ ಎಮ್ಮೆ ಹಾಲು ಉತ್ಪಾದನೆಯಾಗುತ್ತಿದ್ದು, ಉತ್ತರ ಕರ್ನಾಟಕ, ಮಹಾರಾಷ್ಟ್ರ ಭಾಗಕ್ಕೆ ಎಮ್ಮೆ ಹಾಲು ಎಂದಿನಂತೆ ಪೂರೈಕೆಯಾಗುತ್ತಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

WhatsApp Join our WhatsApp Channel
Previous Post

Video News | ನಿಯಂತ್ರಣ ತಪ್ಪಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ಕೂತಿದ್ದ ಹೆಲಿಕಾಪ್ಟರ್ : ಸ್ವಲ್ಪದರಲ್ಲೇ ಬಚಾವ್!! ; ಯಾವುದೇ ಸಮಸ್ಯೆಯಾಗಿಲ್ಲ ಎಂದ ಸರ್ಕಾರ

Next Post

BWSSB News | ಪರಿಸರ ಸ್ನೇಹಿ ಝೀರೋ ಬ್ಯಾಕ್ಟೀರಿಯಲ್ ತ್ಯಾಜ್ಯ ಸಂಸ್ಕರಿತ ನೀರು ತಂತ್ರಜ್ಞಾನ ಅಳವಡಿಸಿಕೊಂಡ ಜಲಮಂಡಳಿ : ಐಐಎಸ್ಸಿ ಸಹಯೋಗ

Next Post

BWSSB News | ಪರಿಸರ ಸ್ನೇಹಿ ಝೀರೋ ಬ್ಯಾಕ್ಟೀರಿಯಲ್ ತ್ಯಾಜ್ಯ ಸಂಸ್ಕರಿತ ನೀರು ತಂತ್ರಜ್ಞಾನ ಅಳವಡಿಸಿಕೊಂಡ ಜಲಮಂಡಳಿ : ಐಐಎಸ್ಸಿ ಸಹಯೋಗ

Maruti Suzuki Swift | ಹೊಸ ಮಾರುತಿ ಸ್ವಿಫ್ಟ್ ಮಾಡೆಲ್ ಕಾರು ಮೇ 9ಕ್ಕೆ ದೇಶದಲ್ಲಿ ಬಿಡುಗಡೆ : ಹಲವು ವಿಶೇಷತೆ ಹೊಂದಿದ ಕಾರು ನಿಮ್ಮ ಕೈಗೆಟಕುವ ಬೆಲೆಯಲ್ಲಿ!!

Please login to join discussion

Like Us on Facebook

Follow Us on Twitter

Recent News

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

June 16, 2026

​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವ: ಚಿತ್ರನೋಟ

June 16, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

June 16, 2026

​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವ: ಚಿತ್ರನೋಟ

June 16, 2026

​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

June 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group