Tuesday, June 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP Monsoon Preparation | ಮಳೆಗಾಲದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ : ತುಷಾರ್ ಗಿರಿನಾಥ್

ಕಟ್ಟಡ  ನಿರ್ಮಾಣ ಭಗ್ನಾವಶೇಷ ಸುರಿದರೆ ದಂಡ | ಅಗ್ನಿಶಾಮಕ ಮತ್ತು ಎಸ್.ಡಿ.ಆರ್.ಎಫ್ ಜೊತೆ ಸಂಪರ್ಕ

by Bengaluru Wire Desk
May 7, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಮೇ.7 www.bengaluruwire.com : ನಗರದಲ್ಲಿ ಮಳೆಗಾಲದ ವೇಳೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಂಬಂಧ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಯಾ ವಲಯ ವ್ಯಾಪ್ತಿಯ ಅಧಿಕಾರಿಗಳು ಮಳೆಗಾಲದ ವೇಳೆ ಎಲ್ಲಿಯೂ ಸಮಸ್ಯೆಯಾಗದಂತೆ ಕ್ರಮವಹಿಸಬೇಕೆಂದು ಸೂಚಿಸಿದರು. 

ಮೆಟ್ರೊ ಕಾಮಗಾರಿ ನಡೆಯುವ ಸ್ಥಳ, ರಾಜಕಾಲುವೆ, ರಸ್ತೆ ಬದಿ ಚರಂಡಿಗಳಲ್ಲಿ ಹೂಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಬೇಕು. ನಗರದಲ್ಲಿ ಜೋರು ಮಳೆಯಾಗುವ ಸಮಯದಲ್ಲಿ ರಸ್ತೆಗಳ ಮೇಲೆ ಹೆಚ್ಚು ನೀರು ನಿಂತು ವಾಹನಗಳ ಸಂಚಾರಕ್ಕೆ ಹೆಚ್ಚು ಸಮಸ್ಯೆಯಾಗುತ್ತದೆ. ಈ ನಿಟ್ಟಿನಲ್ಲಿ ರಸ್ತೆ ಮೇಲೆ ಬೀಳುವ ನೀರು ಚರಂಡಿಗಳಿಗೆ ಸರಾಗವಾಗಿ ಹರಿದು ಹೋಗುವ ನಿಟ್ಟಿನಲ್ಲಿ ಶೋಲ್ಡರ್ ಡ್ರೈನ್ ಗಳ ಬಳಿ ಸ್ವಚ್ಚತೆ ಕಾಪಾಡಲು ಸೂಚಿಸಿದರು. 

ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು :

ಬಿಬಿಎಂಪಿಯಲ್ಲಿ ಅಧಿಕಾರಿಗಳೊಂದಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಭೆ ನಡೆಸಿದರು.

ಪಾಲಿಕೆ 8 ವಲಯಗಳು ಹಾಗೂ ಕೇಂದ್ರ ಕಛೇರಿ ಸೇರಿದಂತೆ 9 ಶಾಶ್ವತ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ಮಳೆಗಾಲದ ವೇಳೆ ತಾತ್ಕಾಲಿಕವಾಗಿ 63 ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿಕೊಂಡು, ಅಗತ್ಯವಿರುವ ಪಂಪ್‌ಸೆಟ್, ಸಲಕರಣೆಗಳು, ಗ್ಯಾಂಗ್ಸ್ ಗಳನ್ನು ಸನ್ನದ್ಧವಾಗಿಟ್ಟುಕೊಳ್ಳಬೇಕೆಂದು ಸೂಚಿಸಿದರು.

ಮರ ಕಟಾವು ತಂಡಗಳು ಸದಾ ಸನ್ನದ್ಧ :

ನಗರದಲ್ಲಿ ಮಳೆಗಾಲದ ವೇಳೆ ಬಿದ್ದಂತಹ ಮರಗಳು ಹಾಗೂ ರೆಂಬೆ ಕೊಂಬೆಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸುವ ಸಲುವಾಗಿ 28 ತಂಡಗನ್ನು ಕಾರ್ಯನಿರ್ವಹಿಸುತ್ತಿವೆ. ಅದರ ಜೊತೆಗೆ ಹೆಚ್ಚುವರಿಯಾಗಿ 6 ತಂಡಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಅದಲ್ಲದೇ ರಸ್ತೆಗಳಲ್ಲಿ ಬಿದ್ದಂತಹ ಮರಗಳನ್ನು ಕೂಡಲೆ ತೆರವುಗೊಳಿಸಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ದೃಷ್ಠಿಯಿಂದ ವಲಯವಾರು 8 ದ್ವಿಚಕ್ರ ವಾಹನಗಳ ತಂಡಗಳನ್ನು ನಿಯೋಜನೆ ಮಾಡಿಕೊಳ್ಳಲಾಗುತ್ತದೆ. 

ಮರ, ರೆಂಬೆ ಕೊಂಬೆ ತೆರವು ಕಾರ್ಯಾಚರಣೆಗಾಗಿ 8 ಟ್ರ್ಯಾಕ್ಟರ್, 2 ಜೆಸಿಬಿ, 2 ಕ್ರೇನ್, ಅವಶ್ಯಕ ಸಲಕರಣೆಗಳು ಹಾಗೂ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಬಿದ್ದಂತಹ ಮರ, ರೆಂಬೆ-ಕೊಂಬೆಗಳ ವಿಲೇವಾರಿಗಾಗಿ ಆಯಾ ವಲಯಗಳಲ್ಲಿ ಡಂಪಿಂಗ್ ಯಾರ್ಡ್ಗಳ ವ್ಯವಸ್ಥೆ ಮಾಡಿಕೊಳ್ಳಲು ಉಪ ಅರಣ್ಯ ಸಂರಕ್ಷಾಧಿಕಾರಿಗೆ ಸೂಚನೆ ನೀಡಿದರು.

ಅಗ್ನಿಶಾಮಕ ಮತ್ತು ಎಸ್.ಡಿ.ಆರ್.ಎಫ್ ಜೊತೆ ಸಂಪರ್ಕ :

ಮಳೆಗಾಲದ ವೇಳೆ ಪಾಲಿಕೆಯ ಜೊತೆ ಅಗ್ನಿ ಶಾಮಕ ಠಾಣೆ ಹಾಗೂ ಎಸ್.ಡಿ.ಆರ್.ಎಫ್ ಇಲಾಖೆಗಳು ಕೈಜೋಡಿಸಲಿದ್ದಾರೆ. ಈ ಸಂಬಂಧ ಆಯಾ ವಲಯ ಆಯುಕ್ತರು ಅಗ್ನಿ ಶಾಮಕ ಠಾಣೆ ಸ್ಥಳಗಳಿಗೆ ಭೇಟಿ ನೀಡಿ ಸದರಿ ಇಲಾಖೆಗಳ ಜೊತೆ ನಿತ್ಯ ಸಂಪರ್ಕದಲ್ಲಿರಬೇಕು. ತುರ್ತು ಪರಿಸ್ಥಿತಿಯ ವೇಳೆ ಸದರಿ ಇಲಾಖೆಗಳ ಸಹಾಯ ಪಡೆದು ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕೆಂದು ಸೂಚನೆ ನೀಡಿದರು.

ವ್ಯಾಟ್ಸಪ್ ಗ್ರೂಪ್‌ಗಳನ್ನು ರಚಿಸಿ :

ನಗರದಲ್ಲಿ ಮಳೆಗಾಲದ ವೇಳೆ ನಾಗರೀಕರ ಸಮಸ್ಯೆಗೆ ಕೂಡಲೇ ಸ್ಪಂದಿಸುವ ನಿಟ್ಟಿನಲ್ಲಿ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಸೇರಿದಂತೆ ಇನ್ನಿತರೆ ಇಲಾಖೆಗಳನ್ನು ಒಳಗೊಂಡಂತೆ ಆಯಾ ವಲಯದ ಉಪ ವಿಭಾಗವಾರು ವ್ಯಾಟ್ಸಪ್ ಗ್ರೂಪ್‌ಗಳನ್ನು ರಚಿಸಿಕೊಂಡು, ಅದರ ಮೂಲಕ ಬಂದಂತರ ದೂರು, ಸಮಸ್ಯೆಗಳನ್ನು ಕೂಡಲೆ ಇತ್ಯರ್ಥಪಡಿಸಬೇಕೆಂದು ಸೂಚನೆ ನೀಡಿದರು.

ಕಟ್ಟಡ  ನಿರ್ಮಾಣ ಭಗ್ನಾವಶೇಷ ಸುರಿದರೆ ದಂಡ ವಿಧಿಸಿ :

ನಗರದ ರಸ್ತೆ ಬದಿ, ಇಕ್ಕೆಲಗಳಲ್ಲಿ, ರಾಜಕಾಲುವೆಗಳು, ಅದರ ಪಕ್ಕದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಭಗ್ನಾವಶೇಷಗಳನ್ನು ಹಾಕಿದರೆ ದಂಡ ವಿಧಿಸಬೇಕು. ಈ ಸಂಬಂಧ ಕಟ್ಟಡ ಭಗ್ನಾವಶೇಷಗಳ ವಿಲೇವಾರಿ ಮಾಡುವವರ ಮೇಲೆ ಘನತ್ಯಾಜ್ಯ ವಿಭಾಗವು ಸಕ್ರಿಯವಾಗಿ ನಿಗಾವಹಿಸಿ ಅನಧಿಕೃತ ಸ್ಥಳದಲ್ಲಿ ಸುರಿಯದಂತಹವರಿಗೆ ದಂಡ ವಿಧಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ವಿಪತ್ತು ನಿರ್ವಹಣೆಯ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್, ಎಲ್ಲಾ ವಲಯ ಆಯುಕ್ತರು, ಎಲ್ಲಾ ವಲಯ ಜಂಟಿ ಆಯುಕ್ತರು, ಪ್ರಧಾನ ಅಭಿಯಂತರರು, ಎಲ್ಲಾ ವಲಯ ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Bescom News | ವಿದ್ಯುತ್ ಸಮಸ್ಯೆಯೇ? ; ಬೆಸ್ಕಾಂ ಗ್ರಾಹಕರಿಗಾಗಿ ಪರ್ಯಾಯ ವಾಟ್ಸಪ್‌ ಮತ್ತು ಎಸ್‌ಎಂಎಸ್‌ ದೂರವಾಣಿ ಸಂಖ್ಯೆಗಳ ಮಾಹಿತಿ ಇಲ್ಲಿದೆ 

Next Post

#AkshayaTritiya | ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

Next Post
ಬಾಲ್ಯ ವಿವಾಹ ಪದ್ಧತಿಯ ಸಾಂದರ್ಭಿಕ ಚಿತ್ರ.

#AkshayaTritiya | ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಸಿಬಿಐ ಲಾಂಛನ (ಸಾಂದರ್ಭಿಕ  ಚಿತ್ರ)

CBI Court | ಲಂಚ ಪ್ರಕರಣದಲ್ಲಿ ದೋಷಿ : ಜಿಎಸ್ ಟಿ ಅಧೀಕ್ಷರಾಗಿದ್ದವರಿಗೆ 3 ವರ್ಷ ಜೈಲು ಶಿಕ್ಷೆ, 5 ಲಕ್ಷ ರೂ. ದಂಡ ವಿಧಿಸಿದ ಸಿಬಿಐ ನ್ಯಾಯಾಲಯ

Please login to join discussion

Like Us on Facebook

Follow Us on Twitter

Recent News

ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

June 15, 2026

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

June 15, 2026

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group