Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Rain Water Harvesting | ಬೆಂಗಳೂರಿನಲ್ಲಿ ಮಳೆ ನೀರು ಕೊಯ್ಲು ಅಳವಡಿಕೆ ಕಡ್ಡಾಯ : ಈ ಅಳತೆಯ ಸ್ವತ್ತಿನ ಮಾಲೀಕರಿಗೆ ಜಲಮಂಡಳಿ ನಿಯಮ ಅನ್ವಯ!! – ತಪ್ಪಿದರೆ ಬೀಳುತ್ತೆ ದಂಡ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ (ತಿದ್ದುಪಡಿ) ಕಾಯಿದೆ, 2009ರ ನಿಯಮ 72(ಎ), 2015 ಹಾಗೂ 2020ರ ಇಸವಿಯ ತಿದ್ದಪಡಿ ನಿಯಮಾವಳಿಗಳು ಏನೆನ್ನುತ್ತದೆ?

by Bengaluru Wire Desk
May 16, 2024
in Bengaluru Focus, Public interest
Reading Time: 1 min read
0

ಬೆಂಗಳೂರು ನಗರದಲ್ಲಿ ಈ ಬಾರಿ ಬೇಸಿಗೆಯಲ್ಲಿ ನೀರಿನ ಸಂಕಷ್ಟ ಏನೆಂದು ನಗರದ ಜನತೆ ಅಕ್ಷರಶಃ ಎದುರಿಸಿದ್ದಾರೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB)ಯು ಅಂತರ್ಜಲ (Underground Water) ವೃದ್ಧಿಸಲು 2400 ಚದರ ಅಡಿ ಮತ್ತು ಅದಕ್ಕಿಂತ ಹೆಚ್ಚಿನ ಸ್ಥಳವನ್ನು ಹೊಂದಿರುವ ಕಟ್ಟಡದ ಪ್ರತಿಯೊಬ್ಬ ಮಾಲೀಕರು ಮಳೆನೀರು ಕೊಯ್ಲು ಪದ್ಧತಿ (Rain Water Harvesting System) ಅಳವಡಿಸಿಕೊಳ್ಳಲು ಕಡ್ಡಾಯ ಮಾಡಿದ್ದರೂ, ಜನರು ಈ ಬಗ್ಗೆ ಹೆಚ್ಚಿನ ಗಮನ ಕೊಟ್ಟಿಲ್ಲ.

ಸರ್ಕಾರದ ಆದೇಶದನ್ವಯ ಎಪ್ರಿಲ್-2024ರ ಅಂತ್ಯಕ್ಕೆ ನಗರದಲ್ಲಿ ಕೇವಲ 1,98,323 ಮನೆ ಮಾಲೀಕರು ಮಳೆ ನೀರು ಪದ್ಧತಿಯನ್ನು ಅಳವಡಿಸಿಕೊಂಡಿರುತ್ತಾರೆ. ಈ ಪದ್ಧತಿಯನ್ನು ಅಳವಡಿಸದೇ ಇರುವ 39,414 ಸಂಪರ್ಕಗಳ ಕಟ್ಟಡಗಳಿಗೆ ಜಲಮಂಡಳಿ 2.17 ಕೋಟಿ ರೂ. ದಂಡವನ್ನು ವಿಧಿಸಿದೆ.

ಬೆಂಗಳೂರು ಜಲಮಂಡಳಿ ಕೇಂದ್ರ ಕಚೇರಿಯ ಸಾಂದರ್ಭಿಕ ಚಿತ್ರ

ಬೆಂಗಳೂರು ನಗರದಲ್ಲಿರುವ ಕಟ್ಟಡಗಳಿಗೆ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರವು 2009ರ ಆಗಸ್ಟ್ 27ರಂದೇ ಅಧಿಸೂಚನೆ ಹೊರಡಿಸಿ ಆದೇಶಿಸಿತ್ತು.  ಅದರ ಪ್ರಕಾರ “ಸೆಕ್ಷನ್ 72A ರಂತೆ, ಮಳೆನೀರು ಕೊಯ್ಲು ರಚನೆಯನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ (ತಿದ್ದುಪಡಿ) ಕಾಯಿದೆ, 2009 ರ ಪ್ರಾರಂಭದ ದಿನಾಂಕದಿಂದ ಒಂಬತ್ತು ತಿಂಗಳೊಳಗೆ, 2400 ಚದರ ಅಡಿ ಮತ್ತು ಅದಕ್ಕಿಂತ ಹೆಚ್ಚಿನ ಸ್ಥಳವನ್ನು ಹೊಂದಿರುವ ಕಟ್ಟಡದ ಪ್ರತಿಯೊಬ್ಬ ಮಾಲೀಕರು ಅಥವಾ 1200 ಚದರ ಅಡಿ ಮತ್ತು ಅದಕ್ಕಿಂತ ಹೆಚ್ಚಿನ ವಿಸ್ತೀರ್ಣದಲ್ಲಿ ಕಟ್ಟಡವನ್ನು ನಿರ್ಮಿಸಲು ಪ್ರಸ್ತಾಪಿಸುವ ಪ್ರತಿಯೊಬ್ಬ ಮಾಲೀಕರು ಈ ಪದ್ಧತಿ ಅಳವಡಿಸಿಕೊಳ್ಳಬೇಕೆಂದು ತಿಳಿಸುತ್ತದೆ.

“ಇದಕ್ಕೆ ತಪ್ಪಿದಲ್ಲಿ ಮಂಡಳಿಯು ಅಂತಹ ಮಳೆನೀರು ಕೊಯ್ಲು ರಚನೆಯನ್ನು ಅಲ್ಲಿ ಅಳವಡಿಸಿ ಮಾಲೀಕರಿಂದ ಅಥವಾ ಅಲ್ಲಿರುವ ಸ್ವತ್ತಿನ ಸ್ವಾಧೀನದಾರರಿಂದ ವೆಚ್ಚವನ್ನು ಮರುಪಡೆಯುವುದು. ಉದಾಹರಣೆಗೆ ಭೂ ಕಂದಾಯ ಆದಾಯದ ಬಾಕಿ ಪಡೆಯುವಂತೆ ” ಎಂದು ಹೇಳಿದೆ.

ಇದಲ್ಲದೆ ಅಧಿಸೂಚನೆಯಂತೆ ಈ ಪದ್ಧತಿಯನ್ನು ಅಳವಡಿಸಿಕೊಳ್ಳದ ಕಟ್ಟಡಗಳಿಗೆ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ (ಮಳೆ ನೀರು ಕೊಯ್ಲು) (ತಿದ್ದುಪಡಿ) ನಿಯಮಾವಳಿಗಳು 2015 ಅನ್ನು 2016ರ ಫೆಬ್ರವರಿ 25ರಂದು ರಾಜ್ಯ ಸರ್ಕಾರದ ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ.

 (1) ಆಕ್ಟ್‌ನ ಸೆಕ್ಷನ್ 72A ಅಡಿಯಲ್ಲಿ ಸೂಚಿಸಲಾದ ದಿನಾಂಕದೊಳಗೆ ಕಟ್ಟಡದಲ್ಲಿ ಮಳೆ ನೀರು ಕೊಯ್ಲು ರಚನೆಯನ್ನು ಅಳವಡಿಸಲು ವಸತಿ ಕಟ್ಟಡದ ಮಾಲೀಕರು ವಿಫಲವಾದರೆ, ಮೊದಲ ಮೂರು ತಿಂಗಳವರೆಗೆ ಒಟ್ಟು ನೀರು ಮತ್ತು ನೈರ್ಮಲ್ಯ ಶುಲ್ಕದ ಇಪ್ಪತ್ತೈದು ಪ್ರತಿಶತದಷ್ಟು ಹೆಚ್ಚುವರಿ ಶುಲ್ಕವನ್ನು ವಿಧಿಸಲಾಗುತ್ತದೆ. ಇದಾದ ನಂತರ ಒಟ್ಟು ನೀರಿನ ಐವತ್ತು ಪ್ರತಿಶತ ಹೆಚ್ಚುವರಿ ಶುಲ್ಕಗಳು ಮತ್ತು ಕಟ್ಟಡಕ್ಕೆ ಮಳೆ ನೀರು ಕೊಯ್ಲು ರಚನೆಯನ್ನು ಒದಗಿಸುವವರೆಗೆ ನೈರ್ಮಲ್ಯ ಶುಲ್ಕಗಳನ್ನು ವಿಧಿಸಬಹುದಾಗಿದೆ. 

ಇನ್ನು ಅಧಿನಿಯಮದ ಸೆಕ್ಷನ್ 72A ಅಡಿಯಲ್ಲಿ ಸೂಚಿಸಲಾದ ದಿನಾಂಕದೊಳಗೆ ಕಟ್ಟಡದಲ್ಲಿ ಮಳೆ ನೀರು ಕೊಯ್ಲು ರಚನೆಯನ್ನು ಒದಗಿಸಲು ವಸತಿ ರಹಿತ ಕಟ್ಟಡದ ಮಾಲೀಕರು ವಿಫಲವಾದರೆ, ಒಟ್ಟು ನೀರಿನ ಐವತ್ತು ಪ್ರತಿಶತದಷ್ಟು ಹೆಚ್ಚುವರಿ ಶುಲ್ಕವನ್ನು ವಿಧಿಸಲಾಗುತ್ತದೆ.  ಮತ್ತು ಮೊದಲ ಮೂರು ತಿಂಗಳುಗಳ ನೈರ್ಮಲ್ಯ ಶುಲ್ಕಗಳು ಮತ್ತು ನಂತರ ಕಟ್ಟಡಕ್ಕೆ ಮಳೆ ನೀರು ಕೊಯ್ಲು ರಚನೆಯನ್ನು ಒದಗಿಸುವವರೆಗೆ ಒಟ್ಟು ನೀರಿನ ಮತ್ತು ನೈರ್ಮಲ್ಯ ಶುಲ್ಕಗಳ ನೂರು ಪ್ರತಿಶತ ಹೆಚ್ಚುವರಿ ಶುಲ್ಕಗಳನ್ನು ವಿಧಿಸಲು ಜಲಮಂಡಳಿಗೆ ಅವಕಾಶವಿದೆ.

ಆದರೆ ಇಲ್ಲಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಳ್ಳದ ವ್ಯಕ್ತಿಗಳಿಗೆ ಕೇಳುವ ಅವಕಾಶವನ್ನು ನೀಡದ ಹೊರತು ಮೇಲಿನಂತೆ ಯಾವುದೇ ಹೆಚ್ಚುವರಿ ನೀರು ಮತ್ತು ನೈರ್ಮಲ್ಯ ಶುಲ್ಕಗಳನ್ನು ವಿಧಿಸಲಾಗುವುದಿಲ್ಲ” ಎಂದು ತಿಳಿಸಲಾಗಿದೆ.

ಮಳೆನೀರು ಕೊಯ್ದು ಪದ್ಧತಿಯನ್ನು ಅಳವಡಿಸಿಕೊಳ್ಳಲು ಸಾರ್ವಜನಿಕರಿಗೆ ಎಲ್ಲಾ ಮಾಹಿತಿಯನ್ನು ತಲುಪಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಸಹಯೋಗದೊಂದಿಗೆ ಬಿಡಬ್ಲ್ಯುಎಸ್ಎಸ್ ಬಿ 2011 ರಲ್ಲಿ ಜಯನಗರ 5 ನೇ ಬ್ಲಾಕ್‌ನಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಮಳೆನೀರು ಸುಗ್ಗಿ ಕೇಂದ್ರವನ್ನು ಹಾಗೂ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. ಹಾಗೂ ಈ ಕೇಂದ್ರದಲ್ಲಿ 26 ಬಗೆಯ ಮಳೆನೀರು ಕೊಯ್ದು ಪದ್ಧತಿಯ ಮಾದರಿಗಳನ್ನು ಅಳವಡಿಸಲಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ನಗರ ಪ್ರಶಸ್ತಿ ಪಡೆದುಕೊಂಡಿರುತ್ತದೆ. ಅಧಿಕಾರಿಗಳು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ನಿಯಮಿತವಾಗಿ ಇಲ್ಲಿಗೆ ಭೇಟಿ ನೀಡುತ್ತಾರೆ. ಅವರಿಗೆ ಮಳೆ ನೀರು ಕೊಯ್ಲು ಹೇಗೆ ಕಾರ್ಯನಿರ್ವಹಿಸುತ್ತವೆ ಮತ್ತು ಅವುಗಳ ಅನುಕೂಲಗಳ ಕುರಿತು ಡೆಮೊಗಳನ್ನು ನೀಡಲಾಗುತ್ತಿದೆ.

ಯಾವ ಅಳತೆಯ ಕಟ್ಟಡ ನಿರ್ಮಾಣ ಅಥವಾ ಸ್ವತ್ತಿನ ಮಾಲೀಕರಿಗೆ ಈ ಪದ್ಧತಿ ಅನ್ವಯ? :

ಬೆಂಗಳೂರು ನಗರದಲ್ಲಿರುವ ಕಟ್ಟಡಗಳಿಗೆ ಮಳೆ ನೀರು ಕೊಯ್ದು ಪದ್ಧತಿ ಅಳವಡಿಸಿಕೊಳ್ಳಲು ಬಿ.ಬಿ.ಎಂ.ಪಿ. ವ್ಯಾಪ್ತಿಯಲ್ಲಿ ಬರುವ 216 ಚದರ ಮೀಟರ್ ಹಾಗೂ ಅದಕ್ಕಿಂತ ಮೇಲ್ಪಟ್ಟು ವಿಸ್ತೀರ್ಣವುಳ್ಳ ನಿವೇಶನದಲ್ಲಿ ಈಗಾಗಲೇ ಕಟ್ಟಡವನ್ನು ನಿರ್ಮಿಸಿದವರಿಗೆ ಮತ್ತು ಹೊಸದಾಗಿ ಕಟ್ಟಡವನ್ನು 108 ಚದರ ಮೀಟರ್ ಮತ್ತು ಹಾಗೂ ಅದಕ್ಕಿಂತ ಮೇಲ್ಪಟ್ಟು ವಿಸ್ತೀರ್ಣದಲ್ಲಿ ನಿರ್ಮಿಸಿದ್ದರೆ ಕಡ್ಡಾಯವಾಗಿ ಮಳೆ ನೀರು ಕೊಯ್ದು ಅಳವಡಿಸಬೇಕೆಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾಯ್ದೆ ಸೆಕ್ಷನ್ 72(ಎ) ಗೆ 2009 ರಲ್ಲಿ ತಿದ್ದುಪಡಿ ತರಲಾಗಿರುತ್ತದೆ. ಈ ಪದ್ಧತಿಯನ್ನು ಅಳವಡಿಸಿಕೊಳ್ಳದೆ ಇರುವ ಕಟ್ಟಡಗಳಿಗೆ ಪ್ರತಿ ತಿಂಗಳಿನ ಬಿಲ್ಲಿನಲ್ಲಿ ಹೆಚ್ಚುವರಿಯಾಗಿ ದಂಡವನ್ನು ವಿಧಿಸಲಾಗುತ್ತಿರುತ್ತದೆ.

ಮುಂದುವರೆದಂತೆ, ಮಳೆ ನೀರಿನ ಸಂಗ್ರಹಣೆ ಹಾಗೂ ಮರುಬಳಕೆಗಾಗಿ ಮತ್ತು ಅಂತರ್ಜಲ ವೃದ್ಧಿಸಲು ಬೆಂಗಳೂರು ಜಲಮಂಡಳಿ ನಿಯಮ 72(ಎ) ಗೆ 2020ರ ಇಸವಿಯ ಮೇ.06 ರಂದು ಈ ಕೆಳಕಂಡಂತೆ ತಿದ್ದುಪಡಿಯನ್ನು ತರಲಾಗಿದೆ :

* ಕಟ್ಟಡದ ತಾರಸಿ / ಮೇಲ್ಛಾವಣಿಯ ಮೇಲೆ ಬೀಳುವ ಮಳೆ ನೀರು ಸಂಗ್ರಹಣೆಗಾಗಿ ಹಾಗೂ ಮರು ಬಳಕೆಗಾಗಿ ನೆಲದಡಿಯ ಸಂಪ್ ಟ್ಯಾಂಕ್ ಸಾಮರ್ಥ್ಯವನ್ನು ಪ್ರತಿ ಚದರ ಮೀಟರ್ ಗೆ 20 ಲೀಟರ್‌ನಿಂದ 60 ಲೀಟರ್‌ ಗೆ ಹೆಚ್ಚಿಸಲಾಗಿದೆ.

* ಇನ್ನು ಅಂತರ್ಜಲ ವೃದ್ಧಿಸಲು ನಡೆದಾಡುವ ಮತ್ತು ಬಯಲು ಪ್ರದೇಶದಲ್ಲಿ ಪ್ರತಿ ಚದರ ಮೀಟರ್ ಗೆ ಮಳೆ ನೀರು ಇಂಗು ಗುಂಡಿಗಳ ನಿರ್ಮಾಣ ಸಂಗ್ರಹ ಸಾಮರ್ಥ್ಯವನ್ನು 10 ಲೀಟರ್‌ನಿಂದ 30 ಲೀಟರ್ ಗೆ ಹೆಚ್ಚಿಸಲಾಗಿದೆ.

ಬೆಂಗಳೂರು ಜಲಮಂಡಳಿಗೆ ಒಳಪಡುವ ಎಲ್ಲಾ ನೆಲಮಟ್ಟದ ಜಲಗಾರ, ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಲ್ಲಿ, ಕಛೇರಿ ಮತ್ತು ವಸತಿ ಗೃಹಗಳಲ್ಲಿ ಮಳೆ ನೀರು ಕೊಯ್ದು ಪದ್ಧತಿಯನ್ನು ಈಗಾಗಲೇ ಅಳವಡಿಸಿಕೊಳ್ಳಲಾಗಿರುತ್ತದೆ. ಒಟ್ಟಿನಲ್ಲಿ ಭವಿಷ್ಯದ ಬೆಂಗಳೂರಿನ ನೀರಿನ ಅವಶ್ಯಕತೆಗಳಿಗಾಗಿ ನೀರಿನ ಸಂರಕ್ಷಣೆ, ಮಿತ ಬಳಕೆ ಹಾಗೂ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆ ಆವಶ್ಯಕವಾಗಿದೆ.

WhatsApp Join our WhatsApp Channel
Previous Post

Cauvery 5th Phase | 110 ಗ್ರಾಮಗಳಲ್ಲಿ ಕಾವೇರಿ ನೀರಿನ ಸಂಪರ್ಕ ಗ್ರಾಹಕರ ಮನೆ ಬಾಗಿಲಿಗೆ : ಡಾ.ವಿ ರಾಮ್‌ ಪ್ರಸಾತ್‌ ಮನೋಹರ್‌

Next Post

T20 World Cup – Nandini | ನಂದಿನಿ ಲಾಂಛನ ಸ್ಕಾಟ್ಲೆಂಡ್ ಐಸಿಸಿ ಪುರುಷರ ಟಿ-20 ಕ್ರಿಕೆಟ್‌ ವಿಶ್ವಕಪ್‌ ಜೆರ್ಸಿಯಲ್ಲಿ ಅನಾವರಣ!!

Next Post
ಐಸಿಸಿ T-20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಜೆರ್ಸಿಯಲ್ಲಿ ನಂದಿನಿ ಬ್ರಾಂಡ್ ಲಾಂಛನವಿರುವ ಚಿತ್ರ.

T20 World Cup - Nandini | ನಂದಿನಿ ಲಾಂಛನ ಸ್ಕಾಟ್ಲೆಂಡ್ ಐಸಿಸಿ ಪುರುಷರ ಟಿ-20 ಕ್ರಿಕೆಟ್‌ ವಿಶ್ವಕಪ್‌ ಜೆರ್ಸಿಯಲ್ಲಿ ಅನಾವರಣ!!

Space Science | ಬೆಂಗಳೂರಿಗರೇ ಆಕಾಶದಲ್ಲಿನ ವಿಸ್ಮಯ ನೋಡಬೇಕಾ? : ನೆಹರು ತಾರಾಲಯ ನಿಮಗಾಗಿ ಟೆಲಿಸ್ಕೋಪ್ ಲೈಬ್ರೆರಿ ವ್ಯವಸ್ಥೆ ಕಲ್ಪಿಸಿದೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group