Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Double Decker Flyover | ಬೆಂಗಳೂರು : ಸ್ವತಃ ಕಾರು ಚಲಾಯಿಸಿ ದಕ್ಷಿಣ ಭಾರತದ ಮೊದಲ, ರಾಗಿಗುಡ್ಡ – ಸಿಲ್ಕ್ ಬೋರ್ಡ್ ಡಬಲ್ ಡೆಕರ್ ಮೇಲ್ಸೇತುವೆ ಉದ್ಘಾಟಿಸಿದ ಡಿಕೆ‌ ಶಿವಕುಮಾರ್

ಹೊಸ ಮೆಟ್ರೋ ಮಾರ್ಗಗಳು ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣ : ಡಿಸಿಎಂ | ಖಾಸಗಿ ವಲಯದ ಉದ್ಯೋಗದಲ್ಲಿ ಕಡ್ಡಾಯ ಮೀಸಲಾತಿ ಮಸೂದೆಗೆ ಕಿರಣ್ ಮಜುಂದಾರ್ ಹಾಗೂ ಮೋಹನ್ ದಾಸ್ ಪೈ ಉದ್ಯಮಿಗಳ ವಿರೋಧಕ್ಕೆ ಡಿಸಿಎಂ ಪ್ರತಿಕ್ರಿಯೆ

by Bengaluru Wire Desk
July 17, 2024
in Bengaluru Focus
Reading Time: 2 mins read
0

ಬೆಂಗಳೂರು, ಜು.17 www.bengaluruwire.com : ರಾಜ್ಯದಲ್ಲಿ ಖಾಸಗಿ ವಲಯದ ಕೈಗಾರಿಕೆಗಳು ಹಾಗೂ ಮತ್ತಿತರ ಸಂಸ್ಥೆಗಳು ಆಡಳಿತಾತ್ಮಕ ಸ್ಥಾನಗಳಲ್ಲಿ ಶೇಕಡಾ 50 ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇಕಡಾ 75 ರಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ಮೀಸಲಾತಿ ನೀಡುವುದನ್ನು ಕಡ್ಡಾಯಗೊಳಿಸುವ ಮಸೂದೆ ಮಂಡಿಸಲು ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ಈ ಬಗ್ಗೆ ಸಾಕಷ್ಟು ಪರ- ವಿರೋಧ ಕೇಳಿಬರುತ್ತಿದೆ.

ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಹಾಗೂ ಮೋಹನ್ ದಾಸ್ ಪೈ ಅವರಂತಹ ಉದ್ಯಮಿಗಳು ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿರುವ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆಗೆ ಬುಧವಾರ ಮಾತನಾಡಿ, ತಂತ್ರಜ್ಞಾನ ಉದ್ಯೋಗಗಳ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಈ ವಿಚಾರ ನಮಗೆ ಅರ್ಥವಾಗುತ್ತದೆ. ಇಂತಹ ವಿಚಾರದಲ್ಲಿ ನಾವು ವಿನಾಯಿತಿ ನೀಡುತ್ತೇವೆ. 

ಈ ಬಗ್ಗೆ ಅವರುಗಳು ಸರ್ಕಾರದ ಗಮನಕ್ಕೆ ತರಬೇಕು. ಸದನ ನಡೆಯುತ್ತಿರುವ ಸಮಯದಲ್ಲಿ ಮಸೂದೆಯ ಇತರೆ ಮಾಹಿತಿಯನ್ನು ನಾನು ಸದನದ ಹೊರಗೆ ಬಹಿರಂಗ ಪಡಿಸಲು ಆಗುವುದಿಲ್ಲ. ಸದನದಲ್ಲಿ ಎಲ್ಲಾ ಅಂಶಗಳು ಚರ್ಚೆಯಾಗಲಿ ಎಂದು ತಿಳಿಸಿದರು.

ಕರ್ನಾಟಕದ ಖಾಸಗಿ ಕಂಪನಿಗಳಲ್ಲೂ ಕನ್ನಡಿಗರಿಗೆ ಉದ್ಯೋಗಗಳ ಮೀಸಲಾತಿ ಕುರಿತ ಮಸೂದೆ ಕುರಿತು ಮಾತನಾಡಿದ್ದು, ಕರ್ನಾಟಕದಲ್ಲಿ ಕನ್ನಡಿಗರ ಸ್ವಾಭಿಮಾನವನ್ನು ಎತ್ತಿ ಹಿಡಿಯಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಖಾಸಗಿ ಮಳಿಗೆಗಳಲ್ಲಿ ಕನ್ನಡ ನಾಮಫಲಕ ವಿಚಾರ ಹಾಗೂ ನಮ್ಮ ಧ್ವಜ, ಭಾಷೆ, ಸಂಸ್ಕೃತಿ, ಕಡತಗಳಲ್ಲಿ ಕನ್ನಡ ಬಳಕೆ ಸೇರಿದಂತೆ ರಾಜ್ಯದಲ್ಲಿ ಮುಂದೆ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಇಂತಿಷ್ಟು ಉದ್ಯೋಗ ಮೀಸಲಿಡುವವರೆಗೂ ನಮ್ಮ ಸರ್ಕಾರ ಕೆಲಸ ಮಾಡುತ್ತದೆ. ಈ ಬಗ್ಗೆ ನಿಟ್ಟಿನಲ್ಲಿ ಮಸೂದೆ ತಂದಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಂಜೆಯ ನಂತರ ಜಯನಗರದ ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ವರೆಗೆ ಡಬಲ್ ಡೆಕರ್ ಮಾರ್ಗದಲ್ಲಿ ವಾಹನಗಳ ಪ್ರಾಯೋಗಿಕ ಸಂಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಖುದ್ದು ಕಾರು ಚಲಾಯಿಸುವ ಮೂಲಕ ಇಂದು ಚಾಲನೆ ನೀಡಿದರು. 

ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವತಃ ತಾವೇ ಕಾರು ಚಲಾಯಿಸಿಕೊಂಡು ಡಬಲ್ ಡೆಕರ್ ಫ್ಲೈಓವರ್ ನಲ್ಲಿ ವಾಹನಗಳ ಪ್ರಾಯೋಗಿಕ ಸಂಚಾರಕ್ಕೆ ಚಾಲನೆ ನೀಡಿದರು.

 ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಗಿಗುಡ್ಡ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಲೂಪ್‌ಗಳು ಮತ್ತು ಇಳಿಜಾರುಗಳೊಂದಿಗೆ ಸಂಚಾರ ದಟ್ಟಣೆ ಕಡಿಮೆ ಮಾಡಲು ರೈಲ್ ಕಮ್ ರೋಡ್ ಮೇಲ್ಸೇತುವೆ (ಡಬಲ್ ಡೆಕ್ಕರ್) ನಿರ್ಮಿಸಲಾಗಿದೆ ಎಂದು ಹೇಳಿದರು.

ಹೊಸ ಮೆಟ್ರೋ ಮಾರ್ಗಗಳು ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣ: 

“ಮುಂದಿನ ದಿನಗಳಲ್ಲಿ ಹೊಸ ಮೆಟ್ರೊ ಮಾರ್ಗಗಳನ್ನು ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣ ಮಾಡಲಾಗುವುದು. ಇಂದಿನ ದಿನಗಳಲ್ಲಿ ಭೂಸ್ವಾಧೀನ ಮಾಡಿಕೊಳ್ಳುವುದು ಕಷ್ಟದ ಕೆಲಸ. ಡಬಲ್ ಡೆಕ್ಕರ್ ಮಾದರಿಯಿಂದ ಸಂಚಾರ ದಟ್ಟಣೆ ಸೇರಿದಂತೆ ಅನೇಕ ಉಪಯೋಗಗಳಿವೆ. ಹೆಚ್ಚು ಖರ್ಚಾದರೂ ಈ ಮಾದರಿ ಬೆಂಗಳೂರಿಗೆ ಅನುಕೂಲ” ಎಂದರು.

ಪ್ರಸ್ತುತ ಐದು ಕಾಲು ಕಿ.ಮೀ ಉದ್ದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಸುಮಾರು 450  ಕೋಟಿ ರೂಪಾಯಿ ಖರ್ಚಾಗಿದೆ. ಈಗಿನ ಲೆಕ್ಕಾಚಾರ ನೋಡಿದರೆ ಹೆಚ್ಚೇನಿಲ್ಲ‌ ನಾನು, ಮುಖ್ಯಮಂತ್ರಿಗಳು ಹಾಗೂ ರಾಮಲಿಂಗಾರೆಡ್ಡಿ ಅವರು ಅನೇಕ ವಿಚಾರಗಳನ್ನು ಚರ್ಚೆ ನಡೆಸಿದ್ದೇವೆ. ಡಬಲ್ ಡೆಕ್ಕರ್ ಯೋಜನೆ ಜಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಾರಣ.  ಬೆಂಗಳೂರಿನಲ್ಲಿ ಎಲ್ಲೆಲ್ಲಿ ಈ ಯೋಜನೆ ಜಾರಿಯಾದರೂ ಅದನ್ನು ರಾಮಲಿಂಗಾರೆಡ್ಡಿ ಮಾಡೆಲ್ ಎಂದು ಹೇಳುತ್ತೇನೆ.

ಬೆಂಗಳೂರಿನಲ್ಲಿ 100 ಕಿ.ಮೀ ಉದ್ದ ಸಿಗ್ನಲ್‌ ಫ್ರೀ ಕಾರಿಡಾರ್ ಮಾಡಲು 120- 150 ಕೋಟಿ ರೂ. ಖರ್ಚಾಗುತ್ತದೆ ಎಂದು ಅಧಿಕಾರಿಗಳು ಅಂದಾಜು ವೆಚ್ಚ ತಿಳಿಸಿದ್ದಾರೆ‌. ವಿಶ್ವದರ್ಜೆ ಗುಣಮಟ್ಟದ ಡಬಲ್ ಡೆಕ್ಕರ್ ನಿರ್ಮಾಣ ಮಾಡಿದ್ದೇವೆ. ಬಿಬಿಎಂಪಿ ಮತ್ತು ಬಿಎಂಆರ್ ಸಿಎಲ್ ಈ ಯೋಜನೆಯ ವೆಚ್ಚವನ್ನು ಹಂಚಿಕೊಳ್ಳುತ್ತಾರೆ” ಎಂದರು.

5, 745 ಕೋಟಿ ರೂ. ವೆಚ್ಚದಲ್ಲಿ ಪೇಸ್ 2 ಯೋಜನೆ :

ಹೊಸೂರು ರಸ್ತೆ ಕಡೆ ತೆರಳುವ ಸುಮಾರು ಶೇ 30 ರಷ್ಟು ನಾಗರೀಕರಿಗೆ ಡಬಲ್ ಡೆಕ್ಕರ್ ನಿಂದ ಉಪಯೋಗವಾಗಲಿದೆ. ಎಲೆಕ್ಟ್ರಾನಿಕ್ ಸಿಟಿ, ಎಚ್ ಎಸ್, ಆರ್ ಲೇಔಟ್, ಮಹದೇವಪುರ ವಾಸಿಗಳಿಗೆ ಬಹಳ ಅನುಕೂಲವಾಗಲಿದೆ. 5 ಪಥಗಳುಳ್ಳ ಸುಮಾರು 9.5 ಕಿಮೀ ಉದ್ದವಿರುವ 5,745 ಕೋಟಿ ವೆಚ್ಚದಲ್ಲಿ ಆರ್ ವಿ ನಗರ ಮಹದೇವಪುರ ಎಲಿವೇಟೆಡ್ ಪೇಸ್ 2 ಯೋಜನೆಯನ್ನು ಜಾರಿಗೆ ಕಾರ್ಯಕ್ರಮ ರೂಪಿಸಲಾಗಿದೆ” ಎಂದರು.

ಸಚಿವ ರಾಮಲಿಂಗರೆಡ್ಡಿ ಮಾದರಿ ಜಾರಿ :

ಬೆಂಗಳೂರು ಅಭಿವೃದ್ಧಿ ಸಚಿವನಾಗಿದ್ದೇನೆ. ಈ ಸ್ಥಾನದಲ್ಲಿ ಕಳೆದ ಆಡಳಿತ ಅವಧಿಯಲ್ಲಿ ರಾಮಲಿಂಗಾರೆಡ್ಡಿ ಅವರು ಹಾಗೂ ಬಿಎಂಆರ್ ಸಿಎಲ್ ಎಂಡಿಯಾಗಿ ಕೊರೊಲಾ ಇದ್ದರು. ಇವರಿಬ್ಬರು ಚರ್ಚೆ ನಡೆಸಿ ಹೊಸತನದ  ಡಬಲ್ ಡೆಕ್ಕರ್ ಮಾಡಲ್ ಅನ್ನು ಪರಿಚಯಿಸಿದರು. ಇದನ್ನು ಉದ್ಘಾಟನೆ ಮಾಡುವ ಭಾಗ್ಯ ನನ್ನದಾಗಿದೆ. ನಾನು ನಾಗ್ಪುರದಲ್ಲಿ ಈ ಮಾದರಿಯನ್ನು ನೋಡಿಕೊಂಡು ಬಂದಿದ್ದೇ” ಎಂದು ತಿಳಿಸಿದರು. 

“ಡಬಲ್ ಡೆಕ್ಕರ್ ಯೋಜನೆಯ ಉಪಯೋಗ ತಿಳಿಯಲು ಜನರು ಮೇಲೆ ಹಾಗೂ ಕೆಳಗೆ ಸಂಚರಿಸಿ ಅನುಭವ ಪಡೆಯಬೇಕು. ಈ ಯೋಜನೆ ವೀಕ್ಷಿಸಲು ನೂತನ ಕೇಂದ್ರ ಸಚಿವರಾದ ಮನೋಹರ್ ಲಾಲ್ ಖಟ್ಟರ್ ಅವರಿಗೂ ಮನವಿ ಮಾಡಲಾಗುವುದು. ಪ್ರಾಯೋಗಿಕ ಸಂಚಾರ ನಡೆಸಿದ ಮೇಲೆ ಒಂದಷ್ಟು ಕುಂದುಕೊರತೆಗಳು ತಿಳಿಯುತ್ತವೆ. ಇದೆಲ್ಲವನ್ನು ಬಗೆಹರಿಸಿ ಜನರ ಓಡಾಟಕ್ಕೆ ಮುಕ್ತಗೊಳಿಸಲಾಗುವುದು” ಎಂದು ಹೇಳಿದರು.

ಇದನ್ನು ಓದಿ : Private Industries Job Reservation | ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ : ಸೋಮವಾರದ ಒಳಗೆ ಮಸೂದೆ ಮಂಡನೆ ; ಕನ್ನಡಿಗರಿಗೆ ಹೇಗೆ ಅನುಕೂಲ?

ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ವರೆಗಿನ ರೈಲ್ ಕಮ್ ರೋಡ್ ಫ್ಲೈಓವರ್ 5.12 ಕಿಮೀ ಉದ್ದದ ಲೂಪ್ ಮತ್ತು ಇಳಿಜಾರುಗಳೊಂದಿಗೆ ಪೂರ್ಣಗೊಂಡಿದೆ ಎಂದರು. ರಾಗಿಗುಡ್ಡ, ಎಚ್ ಎಸ್ ಆರ್ ಲೇಔಟ್ ಮತ್ತು ಹೊಸೂರು ರಸ್ತೆಯನ್ನು ತಲುಪಲು ಸಿಗ್ನಲ್ ಮುಕ್ತ ರಸ್ತೆಯಾಗಿರುತ್ತದೆ. ಕೆಆರ್ ಪುರ ಮತ್ತು ಹೊಸೂರು ರಸ್ತೆ ಕಡೆಗೆ ಹೋಗುವ ಪ್ರಯಾಣಿಕರಿಗೆ ಸಹಾಯವಾಗಲಿದೆ ಎಂದರು.

ಈ ರಸ್ತೆಯಿಂದ ಪ್ರಯಾಣದ ಸಮಯ ಶೇ.30 ಕ್ಕಿಂತ ಹೆಚ್ಚು ಉಳಿತಾಯವಾಗಲಿದೆ. ಡಬಲ್ ಡೆಕ್ಕರ್ ಫ್ಲೈಓವರ್ ಗೆ 449 ಕೋಟಿ ರೂಪಾಯಿ ವೆಚ್ಚವಾಗಿದೆ. ಒಟ್ಟಾರೆ ಈ ರೈಲ್ ಕಮ್ ರೋಡ್ ಫ್ಲೈಓವರ್ ಬೆಂಗಳೂರಿನ ನವೀನ ಮೂಲಸೌಕರ್ಯಕ್ಕೆ ಸಾಕ್ಷಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಮಾಧ್ಯಮಗೋಷ್ಠಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಸತೀಶ್ ರೆಡ್ಡಿ, ರಾಮಮೂರ್ತಿ, ಬಿ ಎಂ ಆರ್ ಸಿ ಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್, ಬಿಬಿಎಂಪಿ ಆಡಳಿತಧಿಕಾರಿ ಉಮಾಶಂಕರ್, ಬಿಎಂಆರ್ ಡಿಎ ಆಯುಕ್ತ, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಉಪಸ್ಥಿತರಿದ್ದರು.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Private Industries Job Reservation | ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ : ಸೋಮವಾರದ ಒಳಗೆ ಮಸೂದೆ ಮಂಡನೆ ; ಕನ್ನಡಿಗರಿಗೆ ಹೇಗೆ ಅನುಕೂಲ?

Next Post

BDA Corner Sites | ಬಿಡಿಎ ರಚಿಸಿದ 73 ಬಡಾವಣೆಗಳಲ್ಲಿ ಹಂಚಿಕೆಯಾಗದೆ ಉಳಿದ ಇರೋ ಕಾರ್ನರ್ ಸೈಟ್ ಹಾಗೂ ಸಿಎ ನಿವೇಶನಗಳು ಎಷ್ಟು ಗೊತ್ತಾ? ಇಲ್ಲಿದೆ ಹೊಸ ಮಾಹಿತಿ

Next Post
ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

BDA Corner Sites | ಬಿಡಿಎ ರಚಿಸಿದ 73 ಬಡಾವಣೆಗಳಲ್ಲಿ ಹಂಚಿಕೆಯಾಗದೆ ಉಳಿದ ಇರೋ ಕಾರ್ನರ್ ಸೈಟ್ ಹಾಗೂ ಸಿಎ ನಿವೇಶನಗಳು ಎಷ್ಟು ಗೊತ್ತಾ? ಇಲ್ಲಿದೆ ಹೊಸ ಮಾಹಿತಿ

PM SVANidhi Awards | ‘ಪಿಎಂ ಸ್ವ-ನಿಧಿ' ಯೋಜನೆಯಡಿ ಬಿಬಿಎಂಪಿಗೆ ಮೆಗಾ ಮತ್ತು ಮಿಲಿಯನ್ ಪ್ಲಸ್ ನಗರಗಳಡಿ ಎರಡನೇ ರ‍್ಯಾಂಕ್

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group