Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Modi 3.0 Budget 2024 | ಕೇಂದ್ರ ಬಜೆಟ್ 2024ರಲ್ಲಿ ಹೊಸ ತೆರಿಗೆ ಲಾಭ ಯಾರಿಗೆ? : ಬಡವರು – ಮಧ್ಯಮ ವರ್ಗಕ್ಕೆ ಒತ್ತು‌ ; ಯಾವ ವಸ್ತುಗಳು ದುಬಾರಿ ಮತ್ತು ಅಗ್ಗ?

7ನೇ ಬಾರಿ ಆಯವ್ಯಯ ಮಂಡಿಸಿದ ನಿರ್ಮಲಾ ಸೀತಾರಾಮನ್ | ಹೊಸ ತೆರಿಗೆ ಪದ್ಧತಿಯಲ್ಲಿ ಸ್ಟ್ಯಾಂಡರ್ಡ್ ಡಿಡಕ್ಷನ್ ಅನ್ನು 50 ಸಾವಿರದಿಂದ 75000 ರೂ.ಗೆ ಏರಿಕೆ | 1 ಕೋಟಿ ಕುಟುಂಬಗಳಿಗೆ ಉಚಿತ ಸೂರ್ಯಘರ್ ಸೌರ ವಿದ್ಯುತ್ ಯೋಜನೆ

by Bengaluru Wire Desk
July 23, 2024
in News Wire, Public interest
Reading Time: 2 mins read
0

ನವದೆಹಲಿ, ಜು.23 www.bengaluruwire.com : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಗಳವಾರ (ಜುಲೈ 23) ಲೋಕಸಭೆಯಲ್ಲಿ ಸತತವಾಗಿ 7ನೇ ಬಾರಿ 2024-2025ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಿದ್ದಾರೆ. ಎನ್ ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಮೇಲೆ, ಇದು ಚೊಚ್ಚಲ ಬಜೆಟ್ ಆಗಿದೆ. ಎಲ್ಲ ವರ್ಗವನ್ನು ಒಳಗೊಂಡ ವಿಸ್ತ್ರತ ಆಯವ್ಯಯ ಇದಾಗಿದೆ ಎಂದು ವಿಮರ್ಶಿಸಲಾಗುತ್ತಿದೆ.

ನಿರ್ಮಲಾ ಸೀತಾರಾಮನ್ ಅವರು, ಸರ್ಕಾರದ ಗಮನ ನೀಡಿರುವ ಒಂಬತ್ತು ಪ್ರಮುಖ ಕ್ಷೇತ್ರಗಳನ್ನು ವಿವರಿಸಿದ್ದಾರೆ:

  1. ಕೃಷಿಯಲ್ಲಿ ಉತ್ಪಾದಕತೆ ಮತ್ತು ಸ್ಥಿತಿಸ್ಥಾಪಕತ್ವ
  2. ಉದ್ಯೋಗ ಮತ್ತು ಕೌಶಲ್ಯ
  3. ಅಂತರ್ಗತ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯ
  4. ಉತ್ಪಾದನೆ ಮತ್ತು ಸೇವೆಗಳು
  5. ನಗರಾಭಿವೃದ್ಧಿ
  6. ಶಕ್ತಿ ಭದ್ರತೆ
  7. ಮೂಲಸೌಕರ್ಯ
  8. ನಾವೀನ್ಯತೆ, ಸಂಶೋಧನೆ ಮತ್ತು ಅಭಿವೃದ್ಧಿ
  9. ಮುಂದಿನ ಪೀಳಿಗೆಯ ಸುಧಾರಣೆಗಳು

ಈ ಬಾರಿಯ ಬಜೆಟ್‌ನಲ್ಲಿ ರೈತರು, ಮಹಿಳೆಯರು ಮತ್ತು ಯುವಕರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಇನ್ನೂ ಮಧ್ಯಮವರ್ಗದವರು ತೆರಿಗೆ ಬಗ್ಗೆ ಶುಭ ಸುದ್ದಿ ಸಿಗಬಹುದಾ ಎಂದು ಕಾಯುತ್ತಿದ್ದರು. ಅದರಂತೆ ಆದಾಯ ತೆರಿಗೆ ಭಾರವನ್ನು  ಮೋದಿ ಸರ್ಕಾರ ಕಡಿಮೆ ಮಾಡಿದೆ. ಹಳೆಯ ತೆರಿಗೆ ಪದ್ಧತಿ ಬಳಸುವವರಿಗೆ ಯಾವುದೇ ಬದಲಾವಣೆ ಇಲ್ಲ. ಹೊಸ ತೆರಿಗೆ ಪದ್ಧತಿ ಬಳಸುವವರಿಗೆ ಹೊಸ ಟ್ಯಾಕ್ಸ್‌ ಸ್ಲ್ಯಾಬ್‌ ಘೋಷಿಸಿಲಾಗಿದೆ.

ಹೇಗಿದೆ ಹೊಸ ಟ್ಯಾಕ್ಸ್‌ ಸ್ಲ್ಯಾಬ್‌! :

– 0-3 ಲಕ್ಷ ರೂ. : ತೆರಿಗೆ ಇಲ್ಲ

– 3-7 ಲಕ್ಷ ರೂ. : 05 % ತೆರಿಗೆ

– 7-10 ಲಕ್ಷ ರೂ. : 10 % ತೆರಿಗೆ

– 10 -12 ಲಕ್ಷ ರೂ. : 15% ತೆರಿಗೆ

– 12 – 15 ಲಕ್ಷ ರೂ. : 20% ತೆರಿಗೆ

– 15 ಲಕ್ಷ ರೂ.ಕ್ಕಿಂತ ಹೆಚ್ಚು : 30% ತೆರಿಗೆ

ಹೊಸ ತೆರಿಗೆ ಪದ್ಧತಿ ಆಯ್ಕೆಗೇ ಹೆಚ್ಚು ಒಲವು ! :

ಇದೀಗ ಹೆಚ್ಚು ಮಂದಿ ಹೊಸ ತೆರಿಗೆ ಪದ್ಧತಿಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ವಿವಿಧ ಪಾವತಿಗಳಿಗೆ ಐದು ಪ್ರತಿಶತ ಟಿಡಿಎಸ್ ಬದಲಿಗೆ ಎರಡು ಪ್ರತಿಶತ ಟಿಡಿಎಸ್ ಅನ್ನು ಒದಗಿಸಲಾಗುತ್ತದೆ. ಮ್ಯೂಚುವಲ್ ಫಂಡ್ ಅಥವಾ ಯುಟಿಐ ಮರುಖರೀದಿಯಲ್ಲಿ ಟಿಡಿಎಸ್ ಅನ್ನು ಶೇಕಡಾ 20ರಷ್ಟು ಹಿಂಪಡೆಯಲಾಗಿದೆ. ಇ-ಕಾಮರ್ಸ್ ಆಪರೇಟರ್‌ಗಳಿಗೆ ಟಿಡಿಎಸ್ ಅನ್ನು ಶೇಕಡಾ 1 ರಿಂದ 0.1 ಕ್ಕೆ ಇಳಿಸಲಾಗಿದೆ. ಅಲ್ಲದೆ, ಟಿಡಿಎಸ್ ತುಂಬುವಲ್ಲಿ ವಿಳಂಬವನ್ನು ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

50 ಸಾವಿರ ರೂ.ನಿಂದ 75000 ರೂ.ಗೆ ಹೆಚ್ಚಳ! :

ಬಜೆಟ್ ಭಾಷಣದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ. ಬಜೆಟ್ ನಲ್ಲಿ ಮಧ್ಯಮ ವರ್ಗದವರಿಗೆ ಸರ್ಕಾರ ಉಡುಗೊರೆ ನೀಡಿದೆ. ಹೊಸ ತೆರಿಗೆ ಪದ್ಧತಿಯಲ್ಲಿ ಸ್ಟ್ಯಾಂಡರ್ಡ್ ಡಿಡಕ್ಷನ್ ಅನ್ನು 50 ಸಾವಿರದಿಂದ 75000 ರೂ.ಗೆ ಹೆಚ್ಚಿಸಲಾಗಿದೆ.

ಪಿಂಚಣಿದಾರರಿಗೆ ಕುಟುಂಬ ಪಿಂಚಣಿ ಮೇಲಿನ ಸ್ಟ್ಯಾಂಡರ್ಡ್​ ಡಿಡಕ್ಷನ್​ ಅನ್ನು 15,000 ರೂ.ಗಳಿಂದ 25,000 ರೂ.ಗೆ ಹೆಚ್ಚಿಸಲು ಉದ್ದೇಶಿಸಲಾಗಿದ್ದು, ಇದು ಸುಮಾರು 4 ಕೋಟಿ ವೇತನದಾರರು ಮತ್ತು ಪಿಂಚಣಿದಾರರಿಗೆ ಪರಿಹಾರವನ್ನು ನೀಡುತ್ತದೆ ಎಂದು ವಿತ್ತ ಸಚಿವರು ಹೇಳಿದ್ದಾರೆ.

ಉದ್ಯೋಗದಾತರ ಎನ್ ಪಿಎಸ್ ಕೊಡುಗೆ ಪ್ರಮಾಣ ಏರಿಕೆ :

ಕಂಪನಿಗಳು ಅಥವಾ ಉದ್ಯೋಗದಾತರು ತಮ್ಮ ಉದ್ಯೋಗಿಗಳ ಎನ್ ಪಿಎಸ್ ಖಾತೆಗಳಿಗೆ ಕೊಡುಗೆಗಳನ್ನು ನೀಡುವ ಮೂಲಕ ತೆರಿಗೆ ಪ್ರಯೋಜನಗಳನ್ನು ಪಡೆಯಲು ಅವಕಾಶವನ್ನು ಹೊಂದಿರುತ್ತಾರೆ.

“ಸಾಮಾಜಿಕ ಭದ್ರತೆಯ ಪ್ರಯೋಜನಗಳನ್ನು ಸುಧಾರಿಸಲು, ಉದ್ಯೋಗದಾತರು ಎನ್‌ಪಿಎಸ್‌ಗೆ ಖರ್ಚು ಮಾಡುವ ಕಡಿತವನ್ನು ಉದ್ಯೋಗಿಯ ವೇತನದ ಶೇ.10 ರಿಂದ 14ರ ಪ್ರತಿಶತಕ್ಕೆ ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ. ಹಾಗೆಯೇ, ಈ ವೆಚ್ಚವನ್ನು ಖಾಸಗಿ ಉದ್ಯೋಗಿಗಳ ಆದಾಯದಿಂದ ಸಂಬಳದ ಶೇಕಡಾ 14 ರವರೆಗೆ ಕಡಿತಗೊಳಿಸಲಾಗುತ್ತದೆ.  ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಿಕೊಳ್ಳುವ ವಲಯ, ಸಾರ್ವಜನಿಕ ವಲಯದ ಬ್ಯಾಂಕುಗಳು ಮತ್ತು ಉದ್ಯಮಗಳಿಗೆ ಒದಗಿಸಲಾಗುವುದು ಎಂದು ಹಣಕಾಸು ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

ಈ ಬಾರಿಯ ಮುಂಗಡ ಪತ್ರದಲ್ಲಿ ಯಾವೆಲ್ಲಾ ವಸ್ತುಗಳು ದುಬಾರಿ, ಯಾವೆಲ್ಲಾ ಅಗ್ಗವಾಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಯಾವುದು ಅಗ್ಗವಾಗಲಿದೆ ?:

ಕ್ಯಾನ್ಸರ್‌ ಔಷಧ, ಪೆಟ್ರೋಲ್‌ ದರ 2 ರೂ. ಇಳಿಕೆ, ಮೊಬೈಲ್‌ ಫೋನ್‌, ಆಮದು ಚಿನ್ನ, ಬೆಳ್ಳಿ ಮತ್ತು ಪ್ಲಾಟಿನಂ, ಚರ್ಮದ ವಸ್ತುಗಳು, ಸಮುದ್ರ ಆಹಾರ ಉತ್ಪನ್ನಗಳು, ವಿದ್ಯುತ್‌ ತಂತಿ, ಎಕ್ಸರೇ ಮೆಷಿನ್‌, ಸೋಲಾರ್‌ ಪ್ಯಾನಲ್

ಯಾವುದು ದುಬಾರಿಯಾಗುತ್ತೆ ?:

ವಿದ್ಯುತ್‌ ಉಪಕರಣ, ಪ್ಲಾಸ್ಟಿಕ್‌, ಬಟ್ಟೆ, ಮೊಬೈಲ್‌ ಟವರ್, 10 ಲಕ್ಷ ರೂ.ಗಿಂತ ಹೆಚ್ಚಿನ ಮೌಲ್ಯದ ಅಧಿಸೂಚಿತ ಸರಕುಗಳ ಮೇಲೆ ಶೇ. 1 ರಷ್ಟು ಟಿಸಿಎಸ್​ ವಿಧಿಸಲು ಸರ್ಕಾರ ಪ್ರಸ್ತಾಪ.

ಪ್ರಧಾನಮಂತ್ರಿ ಆವಾಸ್ ಯೋಜನೆ ನಗರ 2.0 :

ಸರ್ಕಾರವು ಬಜೆಟ್‌ನಲ್ಲಿ ಹಲವಾರು ಭೂ-ಸಂಬಂಧಿತ ಸುಧಾರಣೆಗಳ ಭಾಗವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭೂಮಿ ಅಥವಾ ‘ಭೂ-ಆಧಾರ್’ ಮತ್ತು ಎಲ್ಲಾ ನಗರ ಭೂ ದಾಖಲೆಗಳ ಡಿಜಿಟಲೀಕರಣಕ್ಕಾಗಿ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಪ್ರಸ್ತಾಪಿಸಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ (ಕೈಗೆಟಕುವ ದರದಲ್ಲಿ ವಸತಿ ಯೋಜನೆ) ಅಡಿಯಲ್ಲಿ 3 ಕೋಟಿ ಹೆಚ್ಚುವರಿ ಮನೆಗಳ ಅಭಿವೃದ್ಧಿಗೆ ₹ 10 ಲಕ್ಷ ಕೋಟಿ ರೂ. ವಿನಿಯೋಗಿಸಲಾಗುತ್ತಿದ್ದು, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಾಣ ಚಟುವಟಿಕೆಗಳು ಹೆಚ್ಚಾಗುವ ನಿರೀಕ್ಷೆಯಿದೆ ಮತ್ತು ಮಿತ್ರ ವಲಯಗಳ ಮೇಲೆ ಪರಿಣಾಮ ಬೀರಲಿದೆ. ಮಹಿಳಾ ಮನೆ ಖರೀದಿದಾರರಿಗೆ ಒತ್ತು ನೀಡುವ ಮೂಲಕ ರಾಜ್ಯಗಳಾದ್ಯಂತ ಸ್ಟ್ಯಾಂಪ್ ಡ್ಯೂಟಿಯ ತರ್ಕಬದ್ಧಗೊಳಿಸುವಿಕೆಯು ದೇಶದ ಪ್ರಮುಖ ನಗರಗಳಲ್ಲಿ ಮನೆ-ಕೊಳ್ಳುವವರ ಭಾವನೆಯನ್ನು ಹೆಚ್ಚಿಸುತ್ತದೆ ಎಂದು ರಿಯಲ್ ಎಸ್ಟೇಟ್ ತಜ್ಞರು ಹೇಳಿದ್ದಾರೆ.

ಉಚಿತ ಸೂರ್ಯಘರ್ ಸೌರ ವಿದ್ಯುತ್ ಯೋಜನೆ : 

ಉಚಿತ ಸೌರ ವಿದ್ಯುತ್ ಯೋಜನೆಯ ಬಗ್ಗೆ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, “1 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು 300 ಯುನಿಟ್ಗಳವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡಲು ಮೇಲ್ಛಾವಣಿ ಸೌರ ಫಲಕಗಳನ್ನು ಸ್ಥಾಪಿಸಲು ಪಿಎಂ ಸೂರ್ಯಘರ್ ಮುಫ್ಟ್ ಬಿಜ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯು ಅದನ್ನು ಮತ್ತಷ್ಟು ಉತ್ತೇಜಿಸುತ್ತದೆ.

WhatsApp Join our WhatsApp Channel
Previous Post

Greater Bengaluru Governance Bill | ಬಿಬಿಎಂಪಿಯಲ್ಲ “ಗ್ರೇಟರ್ ಬೆಂಗಳೂರು” : ಮಸೂದೆಗೆ ಸಚಿವ ಸಂಪುಟ  ಒಪ್ಪಿಗೆ : ಸದನದಲ್ಲಿ ಇಂದು ಡಿ.ಕೆ.ಶಿವಕುಮಾರ್ ಅವರಿಂದ ವಿಧೇಯಕ ಮಂಡನೆ : ಇಲ್ಲಿದೆ ಕಂಪ್ಲೀಟ್ ಮಾಹಿತಿ

Next Post

MLA Local area development Fund | ರಾಜ್ಯದಲ್ಲಿ 2023-24ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ : ಶೇ.100ರಷ್ಟು ಅನುದಾನ ಬಳಕೆ ಮಾಡಿದ್ದು ಮೂವರು ಶಾಸಕರು ಮಾತ್ರ!!

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

MLA Local area development Fund | ರಾಜ್ಯದಲ್ಲಿ 2023-24ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ : ಶೇ.100ರಷ್ಟು ಅನುದಾನ ಬಳಕೆ ಮಾಡಿದ್ದು ಮೂವರು ಶಾಸಕರು ಮಾತ್ರ!!

BW SPECIAL | BDA KEMPEGOWDA LAYOUT | ಕೆಂಪೇಗೌಡ ಬಡಾವಣೆ ನಿವೇಶನ : ಮನೆ ಕಟ್ಟಲು ಬಿಡಿಎನಿಂದ ಹೆಚ್ಚುವರಿ ಶುಲ್ಕ ವಸೂಲಿಗೆ ಮಾಲೀಕರ ವಿರೋಧ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group