Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | BDA KEMPEGOWDA LAYOUT | ಕೆಂಪೇಗೌಡ ಬಡಾವಣೆ ನಿವೇಶನ : ಮನೆ ಕಟ್ಟಲು ಬಿಡಿಎನಿಂದ ಹೆಚ್ಚುವರಿ ಶುಲ್ಕ ವಸೂಲಿಗೆ ಮಾಲೀಕರ ವಿರೋಧ

ನಿವೇಶನ ಮೊತ್ತದಲ್ಲೇ ಮೂಲ ಅಭಿವೃದ್ಧಿ ಶುಲ್ಕ ಕಟ್ಟಿದ್ದರೂ ನಿವೇಶನದಾರರಿಂದ ಮೂಲ ಸೌಕರ್ಯ ಕಲ್ಪಿಸಲು ಹೆಚ್ಚುವರಿಯಾಗಿ ಶುಲ್ಕ ಸಂಗ್ರಹಿಸುತ್ತಿರುವುದಕ್ಕೆ ಕೆಂಪೇಗೌಡ ಬಡಾವಣೆ ಮುಕ್ತ ವೇದಿಕೆ ಖಂಡನೆ

by Bengaluru Wire Desk
July 25, 2024
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಜು.24 www.bengaluruwire.com : ಕೆಂಪೇಗೌಡ ಬಡಾವಣೆಯಲ್ಲಿ ಹಂಚಿಕೆಯಾದ ಸೈಟ್ ಗಳ ನಿವೇಶನದಾರರಿಂದ ನಿವೇಶನ ಮೌಲ್ಯದಲ್ಲಿ ಎಲ್ಲಾ ಶುಲ್ಕವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರವೇ ವಿಧಾನಸಭೆ ಅಧಿವೇಶನದಲ್ಲಿ ಇತ್ತೀಚೆಗೆ ಶಾಸಕ ಸುರೇಶ್ ಕುಮಾರ್ ಅವರ ಪ್ರಶ್ನಗೆ ಉತ್ತರಿಸುವ ಸಂದರ್ಭದಲ್ಲಿ ಹೇಳುತ್ತಿದೆ. ಆದರೆ ಬಿಡಿಎ ನಿವೇಶನದಾರರಿಂದ ದುಡ್ಡು ಮಾಡಲು ಮತ್ತೊಮ್ಮೆ ಅನವಶ್ಯಕವಾಗಿ ಹೊಸ ರೂಪದಲ್ಲಿ ಹೆಚ್ಚುವರಿ ಶುಲ್ಕ ಮಾಡುತ್ತಿರುವ ಬಗ್ಗೆ ಕೆಂಪೇಗೌಡ ಬಡಾವಣೆ ಮುಕ್ತ ವೇದಿಕೆ ವಿರೋಧ ವ್ಯಕ್ತಪಡಿಸಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಕೆಂಪೇಗೌಡ ಬಡಾವಣೆ ಹಂಚಿಕೆದಾರರಿಂದ ನಿವೇಶನ ಅಲಾಟ್ ಮೆಂಟ್ ಮಾಡುವಾಗಲೇ ನಿವೇಶನದ ಮೌಲ್ಯ ಮತ್ತು ಅಭಿವೃದ್ಧಿ ಶುಲ್ಕಗಳನ್ನು ಸೇರಿಸಿ ಕಟ್ಟಿಸಿಕೊಂಡಿರುವುದಾಗಿ ವಿಧಾನಸಭೆ ಕಲಾಪದಲ್ಲಿ ಶಾಸಕ ಸುರೇಶ್ ಕುಮಾರ್ ಅವರ ಪ್ರಶ್ನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ತರಿಸಿದ್ದಾರೆ. ಇನ್ನೊಂದೆಡೆ ನಿವೇಶನದಾರರಿಂದ ಮೂಲ ಸೌಕರ್ಯ ಕಲ್ಪಿಸಲು ಹೆಚ್ಚುವರಿಯಾಗಿ ಶುಲ್ಕ ಸಂಗ್ರಹಿಸುತ್ತಿರುವುದನ್ನು ಒಪ್ಪಿಕೊಂಡಿದೆ. ಈ ಮೂಲಕ ಬಿಡಿಎನ ದ್ವಂಧ್ವ ನೀತಿ ಅನುಸರಿಸುತ್ತಿರುವುದು ಕಂಡು ಬಂದಿದೆ ಎಂದು ಮುಕ್ತ ವೇದಿಕೆ ಟೀಕಿಸಿದೆ.

ಹೆಚ್ಚುವರಿಯಾಗಿ 31 ಸಾವಿರ ರೂ. ಶುಲ್ಕ ಸಂಗ್ರಹಕ್ಕೆ ನಿವೇಶನದಾರರ ಬೇಸರ :

ಪ್ರಾಧಿಕಾರದ ಎಲ್ಲಾ ಹಳೆಯ ಬಡಾವಣೆಗಳಲ್ಲಿ ವಿದ್ಯುತ್, ನೀರು ಮತ್ತು ಒಳಚರಂಡಿಗಾಗಿ ರಸ್ತೆ ಅಗೆಯುವುದು  ಅನಿವಾರ್ಯ. ಇದರಿಂದ ಹಾನಿಗೊಳಗಾಗುವ ರಸ್ತೆಯನ್ನು ಸುಸ್ಥಿತಿಗೆ ತರಲು ಮನೆ ಕಟ್ಟುವವರಿಂದ ಶುಲ್ಕವನ್ನು ಪಡೆಯುವುದು ಸರಿ. ಆದರೆ ರಸ್ತೆಯನ್ನು ಅಗೆಯಲು ತಡೆಯಲು ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಈಗಾಗಲೇ ಆ ಎಲ್ಲ ಸೌಲಭ್ಯಗಳಿಗಾಗಿ ಅಂತರ್ಗತ ಕಾಮಗಾರಿಗಳಿಗೆ ಆಗುವ ಎಲ್ಲಾ ಖರ್ಚುಗಳನ್ನು ಒಳಗೊಂಡಂತಹ ನಿವೇಶನದ ಬೆಲೆಯನ್ನು ನಿವೇಶನದಾರರಿಂದ ಪಡೆದು ಕೂಡ ಮತ್ತೊಮ್ಮೆ ಹೆಚ್ಚುವರಿ 31,000 ರೂಪಾಯಿಗಳನ್ನು ಪಡೆಯುತ್ತಿರುವುದು ಸರಿಯಲ್ಲ.

ಬಿಡಿಎ ಕೇಂದ್ರ ಕಚೇರಿ ಚಿತ್ರ

ಕಟ್ಟಡದ ನಿರ್ಮಾಣ ಯೋಜನೆ ಮಂಜೂರಾತಿಗಾಗಿ ನಮ್ಮ ಕೆಲವು ಸದಸ್ಯರು ಅಭಿಯಂತರ ವಿಭಾಗವನ್ನು ಸಂಪರ್ಕಿಸಿದಾಗ  ಯೋಜನೆ ಅನುಮೋದನೆಗೆ ಮನೆ ನಿರ್ಮಾಣದ ಎಸ್ಟಿಮೇಶನ್ ಶೇ.1ರಷ್ಟು ಶುಲ್ಕಗಳೊಂದಿಗೆ ಹೆಚ್ಚುರಿಯಾಗಿ ಸುಮಾರು 31,000 ರೂ. ಅನ್ನು ರಸ್ತೆ ಕಟಿಂಗ್ ಶುಲ್ಕವನ್ನು ಪಾವತಿಸಬೇಕು ಎಂದು ಈ ನಡುವೆ ತಿಳಿಸುತ್ತಿದ್ದಾರೆ. ರಸ್ತೆ ಕಟಿಂಗ್ ಶುಲ್ಕವು ಈ ಮೊದಲು ಇದೇ ಬಡಾವಣೆಯಲ್ಲಿ ಅನುಮೋದನೆಗಳನ್ನು ಪಡೆದಿರುವ ನಿವೇಶನದಾರರಿಗೆ ಶುಲ್ಕ ವಿಧಿಸಿರುವುದಿಲ್ಲ ಎಂದು ಕೆಂಪೇಗೌಡ ಬಡಾವಣೆ ಮುಕ್ತ ವೇದಿಕೆ ಅಧ್ಯಕ್ಷ ಚನ್ನಬಸವರಾಜ ಅವರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ನಿವೇಶನಗಳಿಗೆ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರ ಸಂಗ್ರಹಿಸಿದೆ ಬಿಡಿಎ :

ಬಿಡಿಎ ನಿವೇಶನ ಹಂಚಿಕೆ ಮಾಡುವಾಗ ಕುಡಿಯುವ ನೀರು, ಸಂಸ್ಕರಿತ ನೀರು ಹಾಗೂ ಯುಜಿಡಿ ಸಂಪರ್ಕ ಕಲ್ಪಿಸಲು ಒಟ್ಟಾರೆ ನಿವೇಶನ ಮೊತ್ತದಲ್ಲೇ ಕಟ್ಟಿಸಿಕೊಂಡಿರುವುಕ್ಕೆ ದಾಖಲೆ.

ಪ್ರಾಧಿಕಾರವು ನಾಡಪ್ರಭು ಕೆಂಪೇಗೌಡ ಬಡಾವಣೆ ಯೋಜನೆಯು ಅತ್ಯಾಧುನಿಕ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಬಡಾವಣೆಯಾಗಿ ನಿರ್ಮಿಸುವ ದ್ಯೆಯೋದ್ದೇಶಗಳಿಂದ ಬಡಾವಣೆಯ ಯೋಜಿತ ಎಲ್ಲಾ ಅಂತರ್ಗತ ಮೂಲಭೂತ ಸೌಕರ್ಯಗಳಿಗೆ ತಗಲುವ ವೆಚ್ಚಗಳೊಂದಿಗೆ ಮತ್ತಿತರ ಎಲ್ಲಾ ವೆಚ್ಚಗಳನ್ನು ಸೇರಿಸಿ ನಿವೇಶನಗಳಿಗೆ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರವನ್ನು ನಿಗದಿಪಡಿಸಿ 2016, 2018ರ ಇಸವಿಯಲ್ಲಿಯೇ ಮುಂಚಿತವಾಗಿ ನಿವೇಶನದಾರರಿಂದ ಪಡೆದುಕೊಳ್ಳಲಾಗಿತ್ತು.

ರಸ್ತೆಯನ್ನು ಅಗೆದು ಹಾಳು ಮಾಡುವುದನ್ನು ತಪ್ಪಿಸಲು ಪ್ರತಿಯೊಂದು ನಿವೇಶನಗಳಿಗೂ ಭೂಗತ ವಿದ್ಯುತ್, ನೀರು, ಒಳಚರಂಡಿ ಸಂಪರ್ಕಗಳನ್ನು ಒದಗಿಸುವ ಕಾಮಗಾರಿಗಳನ್ನು ಮಾಡಲಾಗಿರುತ್ತದೆ.ಇದರಿಂದಾಗಿ ಕಟ್ಟಡ ನಿರ್ಮಿಸುವವರು  ಈ ಮೂಲಭೂತ ಸೌಕರ್ಯಗಳ ಸಂಪರ್ಕಗಳಿಗಾಗಿ ರಸ್ತೆ ಅಗೆಯುವ ಅವಶ್ಯಕತೆ , ಪ್ರಮೇಯವೇ ಬರುವುದಿಲ್ಲ. ಆದರೆ ಈ ನಡುವೆ ರಸ್ತೆ ಪುನಶ್ಚೇತನಕ್ಕೆ ಎಂದು ಹೆಚ್ಚುವರಿಯಾಗಿ 31,000 ರೂಪಾಯಿಗಳನ್ನು ಪಡೆಯುತ್ತಿರುವುದು ಖಂಡನಾರ್ಹ ಎಂದು ಅವರು ಹೇಳಿದ್ದಾರೆ.

ಬಿಡಿಎ ಹೆಚ್ಚುವರಿ ಶುಲ್ಕ ಸಂಗ್ರಹ ಪಡೆಯದಂತೆ ಸಿಎಂಗೆ ಮನವಿ :

ಈ ಮಧ್ಯೆ ಕೆಂಪೇಗೌಡ ಬಡಾವಣೆಯ ನಿವೇಶನ ಹಂಚಿಕೆದಾರರಿಂದ ಮೂಲಸೌಕರ್ಯ ಕಲ್ಪಿಸಿದ್ದಕ್ಕಾಗಿ ಹೆಚ್ಚುವರಿ ಶುಲ್ಕವನ್ನು ಪಡೆಯುವುದನ್ನು ನಿಲ್ಲಿಸುವಂತೆ ಹಾಗೂ ಎಂಟು ವರ್ಷಗಳ ನಂತರ ಬಿಡಿಎ ಅನಗತ್ಯ ಶುಲ್ಕಗಳನ್ನು ಹಂಚಿಕೆದಾರಿಗೆ ವಿಧಿಸಬಾರದೆಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಸುವಂತೆ ಮುಕ್ತ ವೇದಿಕೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೇ ಮೇ 14ರಂದು ಪತ್ರ ಬರೆದು ಮನವಿ ಮಾಡಿತ್ತು. ಈ ಮಧ್ಯೆ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಹೆಚ್ಚುವರಿ ಶುಲ್ಕ ಸಂಗ್ರಹದ ಬಗ್ಗೆ ಬಡಾವಣೆಯ ನಾಗರೀಕರೊಬ್ಬರು ಆರ್ ಟಿಐ ಮೂಲಕ ಕೇಳಿದ ಮಾಹಿತಿಗೆ ಬಿಡಿಎ ಅಧಿಕಾರಿಗಳು ಹೆಚ್ಚುವರಿ ಶುಲ್ಕ ಸಂಗ್ರಹ ಮಾಡುವುದನ್ನು ಸಮರ್ಥಿಸಿಕೊಂಡಿದ್ದಾರೆ.

“ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಹಂಚಿಕೆಯಾಗಿರುವ ನಿವೇಶನಗಳಲ್ಲಿ ಮನೆ ಕಟ್ಟಲು ಕುಡಿಯುವ ನೀರು, ಒಳಚರಂಡಿ ಹಾಗೂ ಶುದ್ದೀಕರಿಸಿದ ನೀರಿನ ಸಂಪರ್ಕ ಪಡೆಯಲು ನಿವೇಶನದಾರರು ಯಾವುದೇ ರಸ್ತೆ ಅಗೆತದ ಶುಲ್ಕಗಳನ್ನು ಪಾವತಿಸದಂತೆ ಈ ಯೋಜನೆಯಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳಿಗೆ ರಸ್ತೆ ಅಗೆತವಿಲ್ಲದೇ ಸಂಪರ್ಕವನ್ನು ನಿವೇಶನಕ್ಕೆ ಒದಗಿಸುವ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ. ಈ ವ್ಯವಸ್ಥೆಗೆ ಪ್ರಾಧಿಕಾರದಿಂದ ಹಣವನ್ನು ವ್ಯಯಿಸಲಾಗಿರುತ್ತದೆ.” 

“ಇದೇ ರಸ್ತೆಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿದ್ದರೆ ರಸ್ತೆಯ ಆಗೆತಕ್ಕಾಗಿ (ನೀರಿನ ವ್ಯವಸ್ಥೆ, ಶುದ್ದೀಕರಿಸಿದ ನೀರಿನ ವ್ಯವಸ್ಥೆ ಹಾಗೂ ಒಳಚರಂಡಿ ಸಂಪರ್ಕಕ್ಕೆ) ಬಿಬಿಎಂಪಿಗೆ ಸುಮಾರು ಅಂದಾಜು ರಸ್ತೆಗಳಿಗೆ ಅನುಗುಣವಾಗಿ 20,000 ರೂ. ಹಣವನ್ನು ಪಾವತಿಸಿ.

ಹೆಚ್ಚುವರಿಯಾಗಿ ಸಂಪರ್ಕಕ್ಕೆ ಸಂಬಂಧಿಸಿದ ಪೈಪ್ ಮತ್ತು ಇತರೆ ಸಾಮಾಗ್ರಿಗಳಿಗೆ ಹಣ ವ್ಯಯ ಮಾಡಬೇಕಾಗಿರುತ್ತದೆ. ಈ ವ್ಯವಸ್ಥೆಯನ್ನು ಪ್ರಾಧಿಕಾರದಿಂದ ಕಲ್ಪಿಸಲಾಗಿರುವುದರಿಂದ, ಈ ಹಣವನ್ನು ನಿವೇಶನದಾರರಿಂದ (ಮನೆ ಕಟ್ಟುವವರಿಂದ) ಪುನರ್ ಪಡೆಯುವ ಅವಶ್ಯಕತೆಯಿರುತ್ತದೆ ಹಾಗೂ ಈ ಹಣವನ್ನು ನಿವೇಶನದಾರರಿಗೆ ಒಂದು ಸಲದ ಸಂಪರ್ಕ ವ್ಯವಸ್ಥೆಗಾಗಿ 31,000 ರೂ.ಗಳನ್ನು ಹಾಗೂ ಪ್ರತ್ಯೇಕವಾಗಿ ಪ್ರೊರೇಟಾ ಚಾರ್ಜಸ್ (Prorate Charges) ಗಳನ್ನು ನಿವೇಶನಗಳ ಅಳತೆಗೆ ತಕ್ಕಂತೆ ಹಾಗೂ ನಿವೇಶನದ ಕಟ್ಟಡದ ವಿಸ್ತೀರ್ಣಗಳನ್ನು ಪರಿಗಣಿಸಿ, ಕಟ್ಟಡಕ್ಕೆ ಬೇಕಾಗಿರುವ ನೀರಿನ ಸಂಪರ್ಕದ ಆಳತೆಯ ಮೇಲೆ (Class of connection from Simm to 100mm) ಹಣವನ್ನು ಪಾವತಿಸಬೇಕಾಗಿರುತ್ತದೆ” ಎಂದು ಆರ್ ಟಿಐ ಗೆ ನೀಡಿದ ಉತ್ತರದಲ್ಲಿ ಬಿಡಿಎ ಮಾಹಿತಿ ನೀಡಿದೆ.

ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಇನ್ನೂ ಮೂಲಸೌಕರ್ಯ ಕಾಮಗಾರಿ ಪೂರ್ಣಗೊಂಡು  ರಸ್ತೆಗಳ ಡಾಂಬರೀಕರಣ ಆಗಿರುವುದಿಲ್ಲ. ಆದರೆ ಬಿಡಿಎ ಫೆಬ್ರವರಿ 2024ರಿಂದ ಮೂಲ ಸೌಕರ್ಯದ ಭಾಗವಾಗಿರುವ ನೀರಿನ ಮತ್ತು ಒಳಚರಂಡಿ ಸಂಪರ್ಕಕ್ಕೆ ಹೊಸ ಶುಲ್ಕ ವಿಧಿಸುತ್ತಿದೆ. ಪ್ರಾಧಿಕಾರವು ಹೊಸ ಹೆಸರಿನಲ್ಲಿ ಶುಲ್ಕವನ್ನು ವಿಧಿಸಲು ಪ್ರಾರಂಭಿಸಿದರೆ ಪ್ರತಿ ವರ್ಷ ನಿವೇಶನ ಮಾಲೀಕರು ಕಟ್ಟುವ ತೆರಿಗೆಗಳು ಈಗಾಗಲೇ ಬಡಾವಣೆ ಮೂಲ ಸೌಕರ್ಯ ನಿರ್ವಹಣೆಗಾಗಿ ಅಲ್ಲವೇ? ಸೇವೆಯನ್ನೇ ನೀಡದೆ ಹಣ ಪಡೆಯುವುದು ಯಾವ ನ್ಯಾಯ? ಎಂದು ಮುಕ್ತ ವೇದಿಕೆಯ ಅಧ್ಯಕ್ಷ ಚನ್ನಬಸವರಾಜ ಪ್ರಶ್ನಸಿದ್ದಾರೆ. 

ನೀರಿನ ಮೀಟರ್ ಅಳವಡಿಸುವುದಿಲ್ಲ, ನೀರು ಮತ್ತು ಒಳಚರಂಡಿ ಸಂಪರ್ಕಗಳನ್ನು ಮನೆ ಕಟ್ಟಿದ ನಂತರವೇ ಸಕ್ರಿಯಗೊಳಿಸಲಾಗುತ್ತ ಎಂದು ಹೇಳಲಾಗುತ್ತಿದೆ. ಆದರೆ ಸಂಪರ್ಕ ಶುಲ್ಕವನ್ನು ಮನೆ ಕಟ್ಟುವ ಯೋಜನೆಯ ಅನುಮೋದನೆಯ ಶುಲ್ಕದೊಂದಿಗೆ ಪಾವತಿಸಬೇಕು. ಈ ಕ್ರಮ ಸರಿಯಲ್ಲ ಎಂದು ಅವರು ಟೀಕಿಸಿದ್ದಾರೆ.

Previous Post

MLA Local area development Fund | ರಾಜ್ಯದಲ್ಲಿ 2023-24ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ : ಶೇ.100ರಷ್ಟು ಅನುದಾನ ಬಳಕೆ ಮಾಡಿದ್ದು ಮೂವರು ಶಾಸಕರು ಮಾತ್ರ!!

Next Post

NEET Vs CET | ರಾಷ್ಟ್ರ ಮಟ್ಟದ ನೀಟ್ ವ್ಯವಸ್ಥೆಗೆ ಸಡ್ಡು ಹೊಡೆದ ರಾಜ್ಯ ಸರ್ಕಾರ : ಉಭಯ ಸದನಗಳಲ್ಲಿ ಸಿಇಟಿ ಪ್ರವೇಶಾತಿಗೆ ನಿರ್ಣಯ

Next Post

NEET Vs CET | ರಾಷ್ಟ್ರ ಮಟ್ಟದ ನೀಟ್ ವ್ಯವಸ್ಥೆಗೆ ಸಡ್ಡು ಹೊಡೆದ ರಾಜ್ಯ ಸರ್ಕಾರ : ಉಭಯ ಸದನಗಳಲ್ಲಿ ಸಿಇಟಿ ಪ್ರವೇಶಾತಿಗೆ ನಿರ್ಣಯ

Nandi Hills| ನಂದಿ ಗಿರಿಧಾಮದಲ್ಲಿ ಭೂರಮೆಯ ಶೃಂಗಾರ : ಮಂಜು- ಮಳೆ ನಡುವೆ ಚುಮು ಚುಮು ಚಳಿ!!

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group