Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Wayanad Landslides | ವಯನಾಡ್ ಭೂಕುಸಿತ ಪೀಡಿತ ಸ್ಥಳದಲ್ಲಿ ಸೇನಾ ಕಾರ್ಯಾಚರಣೆ : ಸಂಪರ್ಕ ಕಡಿತಗೊಂಡ ಸ್ಥಳಕ್ಕೆ ರಾತ್ರಿ ಬೆಳಗಾಗುವುದರ ಒಳಗೆ ಸೇತುವೆ ನಿರ್ಮಿಸಿದ ಭಾರತೀಯ ಸೇನೆ!! ; ಮುಂದುವರೆದ ಶೋಧ ಕಾರ್ಯ

ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 270ಕ್ಕೆ ಏರಿಕೆಯಾಗಿದ್ದರೆ, 200ಕ್ಕೂ ಹೆಚ್ಚು ಜನರು ನಾಪತ್ತೆ.

by Bengaluru Wire Desk
August 1, 2024
in News Wire, Public interest
Reading Time: 2 mins read
0

ಭಾರತೀಯ ಸೇನೆಯಿಂದ ತಾತ್ಕಾಲಿಕ ಸೇತುವೆ ನಿರ್ಮಸಿರುವ ಚಿತ್ರ.

ವಯನಾಡ್, ಆ.1 www.bengaluruwire.com : ಕೇರಳದ ವಯನಾಡು ಜಿಲ್ಲೆಯ ಚೂರಲ್‌ಮಲೆ, ಮುಂಡಕ್ಕೆ ಸೇರಿ 4 ಗ್ರಾಮಗಳ ವ್ಯಾಪ್ತಿಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭೀಕರ ಭೂಕುಸಿತದ ಪರಿಣಾಮದಿಂದಾಗಿ ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 270ಕ್ಕೆ ಏರಿಕೆಯಾಗಿದ್ದರೆ, 200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು, ಸೇನೆಯು ರಕ್ಷಣಾ ಕಾರ್ಯ ಪ್ರಾರಂಭಿಸಿದ್ದು, ಅವರ ಪತ್ತೆಗಾಗಿ ಹುಡುಕಾಟ ಮುಂದುವರೆಸಲಾಗಿದೆ.

ಭಾರತೀಯ ಸೇನೆ ಮತ್ತು ಬೆಂಗಳೂರು ಪೋಲೀಸ (Bangalore Police) ರ ನಡುವಿನ ಸಮನ್ವಯತೆಯಿಂದ ಕೇರಳದಲ್ಲಿ ಬ್ರಿಡ್ಜಿಂಗ್ ಕಾರ್ಯಾಚರಣೆಗಳನ್ನು ಯಶಸ್ವಿಯಾಗಿ ಪೂರ್ಣಗೊಂಡಿದೆ. ವಯನಾಡ್‌ನಲ್ಲಿ ಭಾರತೀಯ ಸೇನೆಯ ಎಲ್ಲಾ ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿ ವಹಿಸಿರುವ ಮೇಜರ್ ಜನರಲ್ ವಿಟಿ ಮ್ಯಾಥ್ಯೂ ಅವರು ಇಂದು ಬೆಳಿಗ್ಗೆ ಕೇರಳದ ಮುಖ್ಯಮಂತ್ರಿಯನ್ನು ಭೇಟಿ ಮಾಡಿ, ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಅವರಿಗೆ ಮತ್ತು ರಾಜ್ಯ ಸಚಿವ ಸಂಪುಟಕ್ಕೆ ಮಾಹಿತಿ ನೀಡಿದರು.

ಕಡಿಮೆ ಸಮಯದಲ್ಲಿ ಸೇತುವೆ ನಿರ್ಮಾಣ ಸೇರಿದಂತೆ ಸೇನೆಯ ಪ್ರಯತ್ನಗಳನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಶ್ಲಾಘಿಸಿದರು. ಸೇನೆಯ ಪ್ರಯತ್ನಗಳನ್ನು ಸಚಿವ ಸಂಪುಟವೂ ಶ್ಲಾಘಿಸಿದೆ. 

ಅವಶೇಷಗಳಡಿ ಸಿಲುಕಿರುವ ಮೃತದೇಹ ಹಾಗೂ ಬದುಕುಳಿದವರ ರಕ್ಷಣಾ ಕಾರ್ಯ ಕೈಗೊಂಡಿರುವ ಭಾರತೀಯ ಸೇನೆ.

ಆರು ಭಾರತೀಯ ಸೇನಾ ತುಕುಡಿಗಳು ಪರಿಹಾರ ಕಾಲಮ್‌ಗಳು, ವೈದ್ಯಕೀಯ ತಂಡಗಳು, ಶ್ವಾನದಳಗಳು ಮತ್ತು ಇಂಜಿನಿಯರ್ ಕಾರ್ಯಪಡೆಯು ಅಟ್ಟಮಲ, ಮುಂಡಕ್ಕೈ ಮತ್ತು ಚೂರಲ್‌ಮಲಾದಲ್ಲಿ ಇಂದು ಬೆಳಿಗ್ಗೆ 6.30 ಕ್ಕೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಅಟ್ಟಮಾಲ, ಮುಂಡಕ್ಕೈ ಮತ್ತು ಚೂರಲ್ಮಲಾ ಈ ಮೂರು ಸ್ಥಳಗಳಲ್ಲಿ ಇತರ ರಕ್ಷಣಾ ತಂಡಗಳ ಸಮನ್ವಯದೊಂದಿಗೆ ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ಸೇನೆಯ ವಿವಿಧ ತುಕುಡಿಗಳಿಂದ ಮಣ್ಣಿನ ಅಡಿ ಸಿಲುಕಿ ಹೊರಕ್ಕೆ ತೆಗೆದಿರುವ ಮೃತದೇಹಗಳನ್ನು ಮುಂದಿನ ಕ್ರಮಕ್ಕಾಗಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ರಕ್ಷಣಾ ಇಲಾಖೆ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದೆ.

ಬೆಂಗಳೂರಿನ ಎಂಇಜಿ ಕೇಂದ್ರದಿಂದ ರಕ್ಷಣಾ ಸಾಮಗ್ರಿಗಳನ್ನು ಭೂ ಕುಸಿತ ಪೀಡಿತ ಸ್ಥಳಕ್ಕೆ ಕೊಂಡೊಯ್ಯಲು ಪೊಲೀಸರು ನೆರವು‌ ನೀಡುತ್ತಿರುವ ಚಿತ್ರ.

ಇದನ್ನೂ ಓದಿ : BW EXCLUSIVE REPORT | Karnataka Landslide | ನಾಡಿನಲ್ಲಿ ಈ ಬಾರಿ 46 ಕಡೆ ಭೂ ಕುಸಿತ – ಸರ್ಕಾರದ ಇಚ್ಛಾಶಕ್ತಿಯ ಕುಸಿತ : 720 ಮಳೆ ಮಾಪನ ಕೇಂದ್ರಗಳೇ ಸ್ಥಗಿತ!! 7 ಜಿಲ್ಲೆಗಳ ಭವಿಷ್ಯದ ಬಗ್ಗೆ ಏನಂತಾರೆ ತಜ್ಞರು?

ರಾತ್ರಿಯಿಡೀ ಚೂರಲ್‌ಮಲಾ – ಮುಂಡೇಕ್ಕಾಯಿ ನಡುವೆ ಫುಟ್ ಬ್ರಿಡ್ಜ್ (Foot Bridge) – ಬೈಲಿ ಬ್ರಿಡ್ಜ್ (Bailey Bridge) ಪ್ಯಾನೆಲ್‌ಗಳನ್ನು ಬಳಸುವ ಸುಧಾರಿತ ತಾತ್ಕಾಲಿಕ ಸೇತುವೆ ನಿರ್ಮಿಸಿ ರಕ್ಷಣಾ ತಂಡಗಳು ಸಂಪರ್ಕ ಕಾರ್ಯ ಹಾಗೂ ಶೋಧ ಕಾರ್ಯ ಕೈಗೊಳ್ಳಲು ರಕ್ಷಣಾ ತಂಡಗಳು ಅನುಕೂಲ ಮಾಡಿಕೊಟ್ಟವು. ಸೇತುವೆ ನಿರ್ಮಾಣದಿಂದ ನದಿಯ ಇನ್ನೊಂದು ಬದಿಯಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ತ್ವರಿತವಾಗಿ ಸ್ಥಳಾಂತರಿಸಲಾಗುತ್ತಿದೆ.

ರಾತ್ರಿಯಿಡೀ ಚೂರಲ್‌ಮಲಾ – ಮುಂಡೇಕ್ಕಾಯಿ ನಡುವೆ ಫುಟ್ ಬ್ರಿಡ್ಜ್ ನಿರ್ಮಿಸುವ ಆರಂಭಿಕ ಹಂತದ ಚಿತ್ರ1.

ಬೈಲಿ ಸೇತುವೆಯ ನಿರ್ಮಾಣವನ್ನು ಮದ್ರಾಸ್ ಇಂಜಿನಿಯರ್ಸ್ ಟಾಸ್ಕ್ ಫೋರ್ಸ್‌ (Madras Engineers Task Force) ನಿಂದ ಮೀಪಾಡಿ-ಚೂರ್ಮಲಾ ಮೇಲೆ ರಾತ್ರಿಯಿಡೀ ಮಾಡಲಾಯಿತು. ಸೇತುವೆಯ ಪೂರ್ಣಗೊಂಡ ನಂತರ, ಸಂಪರ್ಕ ಕಡಿತಗೊಂಡ ಪ್ರದೇಶಗಳಿಗೆ, ಹೆಚ್ಚಿನ ಇಂಜಿನಿಯರಿಂಗ್ ಉಪಕರಣಗಳನ್ನು ರಕ್ಷಣಾ ಕಾರ್ಯ ಕೈಗೊಳ್ಳುವ ಸಲುವಾಗಿ ಕೊಂಡೊಯ್ಯಲಾಗುತ್ತಿದೆ. ನದಿಯ ದಡದ ಮೂಲಕ ಅವಶೇಷಗಳ ಅಡಿ ಅಗೆದು ರಿಮೋಟ್ ಸೆನ್ಸಿಂಗ್ ತಾಂತ್ರಿಕ ಉಪಕರಣಗಳ ಮೂಲಕ‌ ಅನ್ವೇಷಿಸಿ, ಒಳಗೆ ಸಿಲುಕಿರುವವರನ್ನು ರಕ್ಷಿಸುವ ಕೆಲಸ ಮುಂದುವರೆದಿದೆ.

ರಾತ್ರಿಯಿಡೀ ಚೂರಲ್‌ಮಲಾ – ಮುಂಡೇಕ್ಕಾಯಿ ನಡುವೆ ಫುಟ್ ಬ್ರಿಡ್ಜ್ ನಿರ್ಮಿಸುವ ಆರಂಭಿಕ ಹಂತದ ಚಿತ್ರ2.

ನಿನ್ನೆ ಸಂಜೆ 7 ಗಂಟೆಗೆ ಕೇರಳ ಪೊಲೀಸ್ ಡಿಜಿ ನೇತೃತ್ವದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲು ಎಲ್ಲಾ ಇಲಾಖೆಗಳೊಂದಿಗೆ ಸಭೆ ನಡೆಸಲಾಗಿತ್ತು. ನಿನ್ನೆ ಶೋಧ ಕಾರ್ಯಾಚರಣೆಗಾಗಿ 5 ಜೆಸಿಬಿಗಳನ್ನು ಹೊಳೆಯ ಪಶ್ಚಿಮ ಭಾಗಕ್ಕೆ ಸ್ಥಳಾಂತರಿಸಲಾಗಿದತ್ತು.  ಬದುಕುಳಿದವರು ಮತ್ತು ಮೃತರ ಪತ್ತೆಗಾಗಿ ಜೆಸಿಬಿಗಳು ಇಂದು ಹೂಳು ಮತ್ತು ಅವಶೇಷಗಳನ್ನು ತೆರವುಗೊಳಿಸಲಿವೆ.  ನಿನ್ನೆ ರಾತ್ರಿ 10 ಗಂಟೆಗೆ ಪೊಲೀಸ್ ನಿಯಂತ್ರಣ ಕೊಠಡಿಯ ಪ್ರಕಾರ ಒಟ್ಟು 166 ಮಂದಿ ಮೃತಪಟ್ಟಿದ್ದರೆ, 225 ಗಾಯಗೊಂಡಿದ ಮಾಹಿತಿ ಲಭ್ಯವಾಗಿತ್ತು.‌ ಆ ಪ್ರಮಾಣ ಈಗ ಏರಿಕೆಯಾಗಿದೆ.

ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲು ಆಗಮಿಸಿದ ಸೇನಾಪಡೆ.

ಭಾರತೀಯ ಸೇನೆಯ ಬ್ರಿಡ್ಜಿಂಗ್ ಸಲಕರಣೆಗಳನ್ನು ಭೂ ಕುಸಿತಗೊಂಡ ಕೇರಳದ ಭೂ ಕುಸಿತ ಪೀಡಿತ ವಯನಾಡ್ ಸ್ಥಳಕ್ಕೆ ತಲುಪಿಸಲು ಜುಲೈ 30 ರಂದೇ ಬೆಂಗಳೂರು ಪೊಲೀಸರ ನೆರವಿನೊಂದಿಗೆ ಭಾರತೀಯ ಸೇನೆಯ ಎಂಇಜಿ (MEG) ಮತ್ತು ಸೆಂಟರ್‌ನ ಪಡೆಗಳು ರಸ್ತೆಯಲ್ಲಿನ ದಟ್ಟಣೆಯನ್ನು ತೆರವುಗೊಳಿಸಲು ಮತ್ತು ವೇಗವಾಗಿ ಚಲಿಸುವ ಲೇನ್‌ಗಳನ್ನು ಒದಗಿಸುವ ಮೂಲಕ ತ್ವರಿತವಾಗಿ ಬೆಂಗಳೂರಿನಿಂದ ತಾತ್ಕಾಲಿಕ ಸೇತುವೆ ನಿರ್ಮಾಣದ ಪರಿಕರಗಳನ್ನು ಸ್ಥಳಾಂತರಿಸಿದವು.  

ಭೂಕಿಸಿತ ಪೀಡಿತ ಸ್ಥಳದಲ್ಲಿ ಪರಿಹಾರ ಕಾರ್ಯಾಚರಣೆ ಕೈಗೊಳ್ಳಲು, ಸರಕು ಸಾಗಣೆ ವಿಮಾನದಲ್ಲಿ ತಂದಿದ್ದ ಪರಿಕರ, ಸಾಮಗ್ರಿಗಳನ್ನು ಇಳಿಸುತ್ತಿರುವುದು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Green Hydrogen Mission | ಹಸಿರು ಜಲಜನಕ ಮಿಷನ್ ಗೆ 19744 ಕೋಟಿ ರೂ. ಮೀಸಲು : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ

Next Post

Lalbagh Flower Show | ಆಗಸ್ಟ್ 8ರಿಂದ 241ನೇ ಫಲಪುಷ್ಪ ಪ್ರದರ್ಶನಕ್ಕಾಗಿ ಸಿಂಗಾರಗೊಳ್ಳುತ್ತಿದೆ ಲಾಲ್ ಬಾಗ್ : ಲಕ್ಷಾಂತರ ಹೂಗಳಲ್ಲಿದ್ದಾರೆ ಬಾಬಾ ಸಾಹೇಬ್ ಅಂಬೇಡ್ಕರ್

Next Post

Lalbagh Flower Show | ಆಗಸ್ಟ್ 8ರಿಂದ 241ನೇ ಫಲಪುಷ್ಪ ಪ್ರದರ್ಶನಕ್ಕಾಗಿ ಸಿಂಗಾರಗೊಳ್ಳುತ್ತಿದೆ ಲಾಲ್ ಬಾಗ್ : ಲಕ್ಷಾಂತರ ಹೂಗಳಲ್ಲಿದ್ದಾರೆ ಬಾಬಾ ಸಾಹೇಬ್ ಅಂಬೇಡ್ಕರ್

PRCI STATE AWARD 2024 | ನಿಮ್ಮ ಬೆಂಗಳೂರು ವೈರ್ ಮುಡಿಗೆ,  ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ 2024ರ "ರಾಜ್ಯ ಮಟ್ಟದ ಸಂವಹನ ಪ್ರಶಸ್ತಿ"ಯ ಕಿರೀಟ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d