Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Namma Metro News | ನಾಳೆ ಹಸಿರು ಮಾರ್ಗದಲ್ಲಿನ ಈ ಭಾಗದಲ್ಲಿ ಮೆಟ್ರೊ ರೈಲು ಸಂಚಾರ ಸಂಪೂರ್ಣ ಬಂದ್

ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

by Bengaluru Wire Desk
August 19, 2024
in Bengaluru Focus
Reading Time: 1 min read
0
Namma Metro Green Train

ಬೆಂಗಳೂರು ಸಂಚಾರ ಜಾಲದಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ನಮ್ಮ ಮೆಟ್ರೊ ಹಸಿರು ಮಾರ್ಗದಲ್ಲಿ ಸಂಚರಿಸುತ್ತಿರುವ ಮೆಟ್ರೊ ರೈಲು. (ಸಾಂದರ್ಭಿಕ ಚಿತ್ರ)

ಬೆಂಗಳೂರು, ಆ.19 www.bengaluruwire.com : ನಮ್ಮ ಮೆಟ್ರೋ ಹಸಿರು ಮಾರ್ಗದ ವಿಸ್ತರಿತ ಪ್ರದೇಶ ನಾಗಸಂದ್ರ-ಮಾದವಾರ ಮಧ್ಯೆ ಮೆಟ್ರೋ ರೈಲು ಪರೀಕ್ಷಾ ಸಂಚಾರ ಆರಂಭವಾಗಿದೆ. ರೀಚ್‌ -3 ಎತ್ತರಿಸಿದ ಮಾರ್ಗದಲ್ಲಿನ ನಾಗಸಂದ್ರದಿಂದ ಮಾದವಾರದ 3.14 ಕಿ.ಮೀ. ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆಯನ್ನು ಮುಂದುವರಿಸಲು, ಕೆಲವು ದಿನಗಳ ಕಾಲ ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ.

ಈಗಾಗಲೇ ಕನಿಷ್ಟ 5 ಕಿಮೀ ಮತ್ತು ಗರಿಷ್ಟ 35 ಕಿಮೀ ವೇಗದಲ್ಲಿ ಪರೀಕ್ಷಾರ್ಥ ಸಂಚಾರ ನಡೆಸಲಾಗಿದೆ ಎಂದು ನಮ್ಮ ಮೆಟ್ರೋ ತಿಳಿಸಿದೆ. ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ಆಗಸ್ಟ್ ತಿಂಗಳ 20, 23, 30ನೇ ತಾರೀಖು ಹಾಗೂ ಸೆಪ್ಟೆಂಬರ್ 6 ಮತ್ತು 11ನೇ ತಾರೀಖಿನಂದು ಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ.

ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ:

ಆಗಸ್ಟ್ 24ನೆಯ ತಾರೀಖು ಕೊನೆಯ ರೈಲು ಸೇವೆಯು ರಾತ್ರಿ 11.05 ಕ್ಕೆ ಬದಲಾಗಿ 10.00 ಗಂಟೆಗೆ ಪ್ರಾರಂಭವಾಗಲಿದೆ. ಇನ್ನು 25ನೇ ತಾರೀಖು ಈ ನಿಲ್ದಾಣಗಳ ಮಧ್ಯೆ ಮೊದಲ ರೈಲು ಸೇವೆಯು ಬೆಳಿಗ್ಗೆ 5 ಕ್ಕೆ ಬದಲಾಗಿ 6 ಗಂಟೆಗೆ ಪ್ರಾರಂಭವಾಗಲಿದೆ.

ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದ ಕಡೆಗೆ :

ಆಗಸ್ಟ್ 24 ರಂದು ಕೊನೆಯ ರೈಲು ಸೇವೆಯು ರಾತ್ರಿ 11.12 ಕ್ಕೆ ಪ್ರಾರಂಭವಾಗಲಿದೆ. 25ನೇ ತಾರೀಖಿನಂದುಮೊದಲ ರೈಲು ಸೇವೆಯು ಬೆಳಿಗ್ಗೆ 5.00 ಕ್ಕೆ ಪ್ರಾರಂಭವಾಗಲಿದೆ. ಇದರ ಹೊರತಾಗಿ ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ನಮ್ಮ ಮೆಟ್ರೋ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ನವೆಂಬರ್‌ ವೇಳೆಗೆ ಹೊಸ ಮಾರ್ಗ ಸಾರ್ವಜನಿಕರ ಸೇವೆಗೆ ಲಭ್ಯ? :

ಹಸಿರು ಮಾರ್ಗದ ವಿಸ್ತರಿತ ಪ್ರದೇಶದಲ್ಲಿ ಪರೀಕ್ಷಾರ್ಥ ಸಂಚಾರ ಆರಂಭಿಸಿರುವ ಮೆಟ್ರೊ ರೈಲು

ವಿಶ್ವಸನೀಯ ಮೂಲಗಳ ಪ್ರಕಾರ ಅಕ್ಟೋಬರ್‌ ಅಥವಾ ನವಂಬರ್‌ನಲ್ಲಿ ಹಸಿರು ಮಾರ್ಗದ ವಿಸ್ತರಿತ ಪ್ರದೇಶದಲ್ಲಿ ವಾಣಿಜ್ಯ ಸೇವೆಗಳು ಆರಂಭವಾಗಲಿವೆ. ರೇಷ್ಮೆ ಮಂಡಳಿಯಿಂದ ನಾಗಸಂದ್ರದವರೆಗೂ ಇದ್ದ ಹಸಿರು ಮಾರ್ಗದ ನಮ್ಮ ಮೆಟ್ರೋ ಮಾರ್ಗ ಇದೀಗ ಮಾದವಾರ (Bangalore International Exhibition Centre – ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರ) ದವರೆಗೂ ವಿಸ್ತರಣೆಯಾಗಿದೆ. ಈ ಮೂಲಕ ಹಸಿರು ಮಾರ್ಗವು 34.64 ಕಿಮೀ ಉದ್ದವಾಗಲಿದೆ. , ಬೆಂಗಳೂರಿನ ಒಟ್ಟು ನಮ್ಮ ಮೆಟ್ರೋ ಮಾರ್ಗ 76.89 ಕಿಮೀ ಗೆ ವಿಸ್ತರಣೆಯಾಗಲಿದೆ. ಪ್ರಾಥಮಿಕ ಹಂತದ ಪರೀಕ್ಷೆ ಆರಂಭವಾಗಿದ್ದು, ಸುಮಾರು 15 ದಿನ ಈ ಪರೀಕ್ಷೆ ನಡೆಯಲಿದೆ. ನಂತರ 45 ದಿನಗಳ ಕಾಲ ಸಿಗ್ನಲಿಂಗ್‌, ದೂರ ಸಂಪರ್ಕ, ವಿದ್ಯುತ್‌ ಸರಬರಾಜು, ಸಾಮರ್ಥ್ಯ ಪರಿಶೀಲನೆ ಸೇರಿದಂತೆ ಸಂಚಾರಕ್ಕೆ ಅಗತ್ಯವಿರುವ ಎಲ್ಲಾ ಪರೀಕ್ಷೆಗಳು ನಡೆಯಲಿವೆ.

ನಂತರ ಗುಣಮಟ್ಟ ತಪಾಸಣಾ ಸಂಸ್ಥೆಗಳು ಸುರಕ್ಷತಾ ಪರೀಕ್ಷೆ ನಡೆಸಿ ಅಂತಿಮ ವರದಿ ನೀಡಲಿವೆ. ಈ ವರದಿಯನ್ನು ಸ್ವೀಕರಿಸಿದ ನಂತರ ರೈಲ್ವೆ ಸುರಕ್ಷತಾ ಮಂಡಳಿಯು ಅನುಮತಿ ನೀಡಲಿದೆ. ನಂತರ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಈ ನವೆಂಬರ್‌ ವೇಳೆಗೆ ಪ್ರಯಾಣಿಕರ ಸೇವೆಗೆ ನಮ್ಮ ಮೆಟ್ರೋ ಸಜ್ಜಾಗಲಿದೆ ಎಂದು ಬಿಎಂಆರ್‌ ಸಿಎಲ್‌ ಅಧಿಕಾರಿಗಳು ಹೇಳಿದ್ದಾರೆ. ಈ ಮಾರ್ಗದಲ್ಲಿ ಮಂಜುನಾಥ ನಗರ, ಚಿಕ್ಕಬಿದರಕಲ್ಲು (ಜಿಂದಾಲ್)‌, ಮಾದವಾರ ನಿಲ್ದಾಣಗಳು ಇರುತ್ತವೆ. ಈ ನಿಲ್ದಾಣಗಳ ಕಾಮಗಾರಿಯೂ ಬಹುತೇಕ ಮುಕ್ತಾಯಗೊಂಡಿದೆ. ನಾಗಸಂದ್ರ- ಮಾದವಾರ ಮಾರ್ಗ ಪೂರ್ಣಗೊಂಡರೆ ಹಸಿರು ಮಾರ್ಗದ ನಿರ್ಮಾಣ ಶೇ.100ರಷ್ಟು ಪೂರ್ಣಗೊಂಡಂತಾಗುತ್ತದೆ.

ಮೆಜಿಸ್ಟಿಕ್ ಹಸಿರು ಮಾರ್ಗದ ಹಳಿಯ ಮೇಲೆ ಬಿದ್ದ ಇಬ್ಬರು ಬಚಾವ್ :

ಇಂದು ಮಧ್ಯಾಹ್ನ ಗಂಟೆ 1.13ರ ಸುಮಾರಿಗೆ ಹಸಿರು ಮಾರ್ಗದ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಲ್ಲಿ ಜಯನಗರದಿಂದ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ಮೂವರು ಪ್ರಯಾಣಿಕರಲ್ಲಿ (ಅಂಧರು) ಇಬ್ಬರು ಆಸ್ಮಿಕವಾಗಿ ಹಳಿ ಮೇಲೆ ಬಿದ್ದಿದ್ದಾರೆ. ಕೂಡಲೇ ಎಚ್ಚೆತ್ತ ಭದ್ರತಾ ಸಿಬ್ಬಂದಿ ತುರ್ತು ಟ್ರಿಪ್ ಸಿಸ್ಟಂ ಕಾರ್ಯಾಚರಣೆ ನಡೆಸಿ ಸಹ ಪ್ರಯಾಣಿಕರ ನೆರವಿನಿಂದ ರಕ್ಷಿಸಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ದೃಢಪಟ್ಟಿದೆ. ಮಧ್ಯಾಹ್ನ ಗಂಟೆ 1.26 ಕ್ಕೆ ಎಂದಿನಂತೆ ರೈಲು ಕಾರ್ಯಾಚರಣೆಯನ್ನು ಪುನರಾರಂಭಿಸಲಾಯಿತು.

WhatsApp Join our WhatsApp Channel
Previous Post

ರಾಜ್ಯ ಸರ್ಕಾರಿ ನೌಕರರಿಗೆ ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಟ್ಯಾಗ್‌ ಬಳಕೆ ಕಡ್ಡಾಯ : ಆದೇಶ ಹೊರಡಿಸಿದ ಸರ್ಕಾರ

Next Post

Weather News | ಬೆಂಗಳೂರಿನಲ್ಲಿ ಎಂಟತ್ತು ದಿನಗಳಿಂದ ವಿಚಿತ್ರ ವೆದರ್!! : ಮಳೆ ಬಂದರೂ ಉರಿ ಸೆಖೆಯ ಅನುಭವ : ತಜ್ಞರು ಏನಂತಾರೆ?

Next Post
Temperature

Weather News | ಬೆಂಗಳೂರಿನಲ್ಲಿ ಎಂಟತ್ತು ದಿನಗಳಿಂದ ವಿಚಿತ್ರ ವೆದರ್!! : ಮಳೆ ಬಂದರೂ ಉರಿ ಸೆಖೆಯ ಅನುಭವ : ತಜ್ಞರು ಏನಂತಾರೆ?

ರಾಷ್ಟ್ರದಲ್ಲೇ ಅತಿ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್ ಹೊಂದಿರುವ ರಾಜ್ಯ ಕರ್ನಾಟಕ : ಬಿಇಇ ವರದಿ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group