Tuesday, June 10, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

  • Bengaluru Focus

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire
    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

  • Bengaluru Focus

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

Anywhere registration | ನಿಮ್ಮ ಆಸ್ತಿಗಳನ್ನು “ಎನಿವೇರ್” ರಿಜಿಸ್ಟ್ರೇಷನ್ ಮಾಡಿಸಬಹುದು : ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ಜಾರಿ – ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ನೀವು ಬಯಸಿದ ಕಡೆಯ ಸಬ್ ರಿಜಿಸ್ಟ್ರರ್ ಕಚೇರಿಯಲ್ಲಿ ನಿಮ್ಮ ಸ್ವತ್ತು, ದಾಖಲಾತಿಗಳನ್ನು ನೋಂದಣಿ ಮಾಡಿಸಬಹುದು.

by Bengaluru Wire Desk
August 26, 2024
in News Wire, Public interest
Reading Time: 2 mins read
0
Anywhere Registration

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಎನಿವೇರ್ ನೋಂದಣಿ ಕುರಿತ ಸಾಂದರ್ಭಿಕ ಚಿತ್ರ.

ಬೆಂಗಳೂರು, ಆ.26 www.bengaluruwire.com : ಸಾರ್ವಜನಿಕರ ಅನುಕೂಲಕ್ಕಾಗಿ ಸ್ತಿರಾಸ್ಥಿ ನೋಂದಣಿಯನ್ನು ಸುಲಭಗೊಳಿಸಲು ಬೆಂಗಳೂರಿನಲ್ಲಿ ‘ಎನಿವೇರ್ ನೋಂದಣಿ‘ (Anywhere Registration) ಪರಿಕಲ್ಪನೆಯನ್ನು ಜಾರಿಗೆ ತಂದ ಸುಮಾರು 13 ವರ್ಷಗಳ ನಂತರ, ರಾಜ್ಯ ಸರ್ಕಾರ ಇದನ್ನು ರಾಜ್ಯದ (Karnataka) ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಲು ನಿರ್ಧರಿಸಿದೆ. ಸೆಪ್ಟೆಂಬರ್‌ ಮೊದಲ ವಾರದಿಂದಲೇ ರಾಜಾದ್ಯಂತ ಜಾರಿಯಾಗಲಿದೆ.

ರಾಜ್ಯದಲ್ಲಿ ಒಟ್ಟು 35 ಜಿಲ್ಲಾನೋಂದಣಿ ಕಚೇರಿ (District Registrar Office) ಹಾಗೂ 257 ಉಪನೋಂದಣಿ ಕಚೇರಿ (Sub registrar office)ಗಳಿದ್ದು, ಸಾರ್ವಜನಿಕರು ಆಯಾ ಜಿಲ್ಲಾವ್ಯಾಪ್ತಿಯಲ್ಲಿ ಅವರು ಬಯಸಿದ ದಿನ, ಸಮಯದಲ್ಲಿ ಸ್ಥಿರಾಸ್ತಿಯನ್ನು ನೋಂದಾಯಿಸಬಹುದು. ಇದೇ ಎನಿವೇರ್ ನೋಂದಣಿಯಾಗಿದೆ.

ನೋಂದಣಿ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ಉದ್ದೇಶದಿಂದ ಈ ಹಿಂದೆ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗುವುದು ಎಂದು 2024-25ರ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿತ್ತು. ಬಜೆಟ್‌ ಮಂಡಿಸಿದ ತಿಂಗಳೊಳಗಾಗಿ “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಲಾಗಿತ್ತಾದರೂ ತಾಂತ್ರಿಕ ಕಾರಣಗಳಿಂದ ಸಾಧ್ಯವಾಗಿರಲಿಲ್ಲ. ಇದೀಗ ಈ ಸೌಲಭ್ಯವನ್ನು ಸೆಪ್ಟೆಂಬರ್‌ ಮೊದಲ ವಾರದಿಂದಲೇ ರಾಜಾದ್ಯಂತ ಹಂತ ಹಂತವಾಗಿ ಜಾರಿಯಾಗಲಿದೆ.

ಉಪ ನೋಂದಣಾಧಿಕಾರಿ ಕಛೇರಿ ಎಂದರೆ ಜನದಟ್ಟಣೆ ಸಾಮಾನ್ಯ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನಸಾಮಾನ್ಯರನ್ನು ಸರ್ಕಾರಿ ಕಛೇರಿಗಳಲ್ಲಿ ಕಾಯಿಸುವುದೂ ಸಹ ಒಂದು ರೀತಿಯ ಶೋಷಣೆ ಎಂಬುದರಲ್ಲಿ ಎರಡು ಮಾತಿಲ್ಲ. ಇದೇ ಕಾರಣಕ್ಕೆ ಬೆಂಗಳೂರಿನಲ್ಲಿ ಈಗಾಗಲೇ “ಎನಿವೇರ್ ನೋಂದಣಿ ವ್ಯವಸ್ಥೆ”ಯನ್ನು ಜಾರಿಗೊಳಿಸಲಾಗಿದೆ. ದಸ್ತಾವೇಜುಗಳ ನೋಂದಣಿಗಳಲ್ಲಿನ ವಿಳಂಬ ತಡೆಗಟ್ಟಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಿ ಕಛೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆ ಮಾಡುವುದು ಈ ಯೋಜನೆಯ ಉದ್ದೇಶ. ಇದೇ ಕಾರಣಕ್ಕೆ “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು 2011ರಲ್ಲಿ ಬೆಂಗಳೂರು ನಗರ ಜಿಲ್ಲೆಯ ಗಾಂಧಿನಗರ, ಬಸವನಗುಡಿ, ಜಯನಗರ, ಶಿವಾಜಿನಗರ ಹಾಗೂ ರಾಜಾಜಿನಗರ ಜಿಲ್ಲಾ ನೋಂದಣಿ ಕಛೇರಿಯ ವ್ಯಾಪ್ತಿಯ ಉಪನೋಂದಣಿ ಕಛೇರಿಗಳಲ್ಲಿ ಜಾರಿಗೆ ತರಲಾಗಿತ್ತು.

ಈ ಯೋಜನೆಯ ಮೂಲಕ ಆಸ್ತಿ ನೋಂದಣಿ ಸಮಯದಲ್ಲಿ ಜನಸಾಮಾನ್ಯರು  ಬೆಂಗಳೂರು ನಗರದ ಜಿಲ್ಲಾನೋಂದಣಿ ಕಛೇರಿ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಛೇರಿಯಲ್ಲಿ ಆಸ್ತಿ ನೋಂದಣಿ ಮಾಡಿಕೊಳ್ಳಲು ನೋಂದಣಿ ಕಾಯ್ದೆ-1908 (Registration act 1908) ರ ಕಲಂ (5) ಹಾಗೂ ಕಲಂ (6) ರಡಿಯಲ್ಲಿ ಅನುವುಮಾಡಿಕೊಡಲಾಗಿತ್ತು. ಎನಿವೇರ್ ನೋಂದಣಿ ವ್ಯವಸ್ಥೆಯು ಬೆಂಗಳೂರು ನಗರ ಜಿಲ್ಲೆಯಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಜನ ಸಾಮಾನ್ಯರಿಗೆ ನೋಂದಣಿ ವಿಚಾರದಲ್ಲಿ ತ್ವರಿತ ಸೇವೆ ನೀಡಲು ಈ ಯೋಜನೆ ಸಹಕಾರಿಯಾಗಿದೆ. ಜನರೂ ಸಹ ಇದರ ಉಪಯೋಗವನ್ನು ಬಳಸಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಈ ಯೋಜನೆಯನ್ನು ಇದೀಗ ರಾಜ್ಯಾದ್ಯಂತ ವಿಸ್ತರಿಸಲು ಬಜೆಟ್‌ನಲ್ಲಿ ನೀಡಿದ ಆಶ್ವಾಸನೆಯಂತೆ ಇಲಾಖೆ ಒಂದು ಹೆಜ್ಜೆ ಮುಂದೆ ಇಟ್ಟಿದೆ.

ಇದನ್ನೂ ಓದಿ :

ಅಲ್ಲದೆ, ಪ್ರಾಯೋಗಿಕವಾಗಿ ಬೆಳಗಾವಿ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಇದೇ ವರ್ಷದ ಮಾ.14ರಂದು “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು ಪರಿಚಯಿಸಿದ್ದು, ಜನರಿಂದಲೂ ಉತ್ತಮ ಸ್ಪಂದನೆ ದೊರೆತಿತ್ತು. ಪ್ರಾಯೋಗಿಕ ಯೋಜನೆಯ ಯಶಸ್ವಿಯನ್ನು ಪರಿಗಣಿಸಿ ರಾಜ್ಯಾದ್ಯಂತ ಹಂತ ಹಂತವಾಗಿ ವಿಸ್ತರಿಸಲಾಗುತ್ತಿದೆ. ಹೀಗಾಗಿ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಈ ಸೇವೆಯನ್ನು ಶೀಘ್ರದಲ್ಲೇ ರಾಜ್ಯಾದ್ಯಂತ ಚಾಲ್ತಿಗೆ ತರಲು ಉದ್ದೇಶಿಸಲಾಗಿದೆ. “ಎನಿವೇರ್ ನೋಂದಣಿ” ವ್ಯವಸ್ಥೆಯ ಅಡಿ ಯಾವುದೇ ವ್ಯಕ್ತಿಯು ನೋಂದಣಿ ದಸ್ತಾವೇಜನ್ನು ಜಿಲ್ಲೆಯ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಛೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ : Krishna Temples | ಶ್ರೀ ಕೃಷ್ಣನ ಪ್ರಧಾನ 10 ದೇವಸ್ಥಾನಗಳು ಯಾವುದು? ಈ ಪೈಕಿ ನೀವೆಷ್ಟು ದೇವಾಲಯ ನೋಡಿದ್ದೀರಾ?

ಯೋಜನೆಯಿಂದ ಆಗುವ ಅನುಕೂಲಗಳು :

ಈ ನೂತನ ಯೋಜನೆಯು ಸಾರ್ವಜನಿಕರಿಗೆ ಉಪಯುಕ್ತ ವ್ಯವಸ್ಥೆಯಾಗಿರಲಿದೆ. ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ಮತ್ತು ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವನ್ನು ತಡೆಗಟ್ಟಿ ಸಾರ್ವಜನಿಕರ ಸಮಯ ಉಳಿಸಿ ಕಚೇರಿಯ ಜನದಟ್ಟಣೆಯನ್ನು ನಿಯಂತ್ರಿಸುತ್ತದೆ. ಅಲ್ಲದೆ, ಕಛೇರಿ ನೋಂದಣಿ ಕೆಲಸವನ್ನೂ ಜಿಲ್ಲೆಯಾದ್ಯಂತ ಎಲ್ಲಾ ಕಚೇರಿಗಳಿಗೂ ಸಮಾನವಾಗಿ ಹಂಚಿಕೆ ಮಾಡಲು ಈ ಯೋಜನೆ ಸಹಕಾರಿಯಾಗಿರಲಿದೆ.

ಕಂದಾಯ ಸಚಿವರು ಹೀಗಂತಾರೆ :

“ಎನಿವೇರ್ ನೋಂದಣಿ ವ್ಯವಸ್ಥೆ”ಯನ್ನು ರಾಜ್ಯದ ಎಲ್ಲಾ ಕಡೆ ಹಂತ ಹಂತವಾಗಿ ಜಾರಿಗೊಳಿಸುತ್ತಿದ್ದು, ಸಬ್ ರಿಜಿಸ್ಟ್ರಾರ್ ಕಚೇರಿಗಳನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ನಿಟ್ಟಿನಲ್ಲಿ ಮತ್ತೊಂದು ಕ್ರಾಂತಿಕಾರಕ  ಹೆಜ್ಜೆಯಾಗಿದೆ. ಈ ಮೂಲಕ ಜನರಿಗೆ ಸರಳ ಮತ್ತು ಸುಲಭ ಆಡಳಿತ ನೀಡುವುದೇ ನಮ್ಮ ಧ್ಯೇಯ ಎಂಬುದನ್ನು ಮತ್ತೊಮ್ಮೆ ತಿಳಿಸಲು ಇಚ್ಚಿಸುತ್ತೇನೆ” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

Krishna Temples | ಶ್ರೀ ಕೃಷ್ಣನ ಪ್ರಧಾನ 10 ದೇವಸ್ಥಾನಗಳು ಯಾವುದು? ಈ ಪೈಕಿ ನೀವೆಷ್ಟು ದೇವಾಲಯ ನೋಡಿದ್ದೀರಾ?

Next Post

CAR DOG SQUAD | ಬೆಂಗಳೂರು : ಮಾದಕವಸ್ತು ಪತ್ತೆ ಕಾರ್ಯದಲ್ಲಿ ಎಕ್ಸ್ ಪರ್ಟ್ ಆಗಿದ್ದ ಶ್ವಾನದಳದ ಮಿಕಿ ನಾಯಿ ಸಾವು

Next Post
Bangalore CAR South Dog Died

CAR DOG SQUAD | ಬೆಂಗಳೂರು : ಮಾದಕವಸ್ತು ಪತ್ತೆ ಕಾರ್ಯದಲ್ಲಿ ಎಕ್ಸ್ ಪರ್ಟ್ ಆಗಿದ್ದ ಶ್ವಾನದಳದ ಮಿಕಿ ನಾಯಿ ಸಾವು

BBMP Head Office Image

"ಬಿಬಿಎಂಪಿಯ ಕಾಮಗಾರಿ ಸಮಾಲೋಚನೆ ಹೆಸರಲ್ಲಿ ವರ್ಷಂಪ್ರತಿ 100 ಕೋಟಿ ರೂ. ಗುಳುಂ"

Please login to join discussion

Like Us on Facebook

Follow Us on Twitter

Recent News

ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

June 9, 2025

ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

June 9, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

June 9, 2025

ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

June 9, 2025

Inspirational News | ಎನ್‌ಸಿಸಿ ಕೆಡೆಟ್‌ಗಳ ಎವರೆಸ್ಟ್ ವಿಜಯ: ಅಸಾಧ್ಯವನ್ನು ಸಾಧಿಸಿದ ಹದಿಹರೆಯದ ವೀರರು : ಕೆಡೆಟ್ ಗಳ ಅನುಭವ ಇಲ್ಲಿದೆ

June 9, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d