Tuesday, June 10, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

  • Bengaluru Focus

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire
    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

  • Bengaluru Focus

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

“ಬಿಬಿಎಂಪಿಯ ಕಾಮಗಾರಿ ಸಮಾಲೋಚನೆ ಹೆಸರಲ್ಲಿ ವರ್ಷಂಪ್ರತಿ 100 ಕೋಟಿ ರೂ. ಗುಳುಂ”

by Bengaluru Wire Desk
August 27, 2024
in Bengaluru Focus, Public interest
Reading Time: 1 min read
0
BBMP Head Office Image

ಬಿಬಿಎಂಪಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ.

ಬೆಂಗಳೂರು, ಆ.27 www.bengaluruwire.com : ಕಾಮಗಾರಿ ಗುತ್ತಿಗೆಯಲ್ಲಿ, ಟೆಂಡರ್ ಮೂಲಕ ನಿರ್ವಹಿಸಿದ ಕಾಮಗಾರಿಗಳಿಗೆ ಹಣ ಪಾವತಿಸಲು ಪಾಲಿಕೆಯ ಅಧಿಕಾರಿಗಳು ನೂರಾರು ಕೋಟಿ ರೂಪಾಯಿ ಕಮಿಷನ್, ಭ್ರಷ್ಟಾಚಾರ ನಡೆಸುತ್ತಿರೋದು ಹಳೆಯ ವಿಷಯ. 

ಬಿಬಿಎಂಪಿಯ ಮುಖ್ಯ ಅಭಿಯಂತರರುಗಳು ಯೋಜನೆ ನಿರ್ವಹಣಾ ಸಮಾಲೋಚನೆ (Project Management Consultancy- PMC) ಹೆಸರಿನಲ್ಲಿ ಕೋಟ್ಯಾಂತ ರೂ. ಹಣವನ್ನು ಕೊಳ್ಳೆ ಹೊಡೆಯುತ್ತಿರುವ ವಿಷಯ ಬಹಿರಂಗವಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳುವ ಪ್ರತಿಯೊಂದು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪಿಎಂಸಿ ಕಾರ್ಯವನ್ನು ಸಂಬಂಧಪಟ್ಟ ಆಯಾ ಮುಖ್ಯ ಅಭಿಯಂತರರುಗಳೇ ಕಾನೂನು ಬಾಹಿರವಾಗಿ ನಿರ್ವಹಿಸುತ್ತಿದ್ದಾರೆ ಎಂದು ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಆರೋಪಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ವರ್ಷ ಒಂದಕ್ಕೆ ಕನಿಷ್ಠ 4 ಸಾವಿರದಿಂದ 5 ಸಾವಿರ ಕೋಟಿ ರೂಪಾಯಿಗಳಷ್ಟು ಮೊತ್ತದ ಅಭಿವೃದ್ಧಿ ಕಾರ್ಯಗಳು ಅಥವಾ ಕಾಮಗಾರಿಗಳು ನಡೆಯುತ್ತದೆ. ಇವುಗಳಿಂದ ವರ್ಷಂಪ್ರತಿ 80 ಕೋಟಿಯಿಂದ 100 ಕೋಟಿ ರೂಪಾಯಿಗಳಷ್ಟು ಮೊತ್ತ ಕೇವಲ ಪಿಎಂಸಿ ಹೆಸರಿನಲ್ಲಿ ಸಂಬಂಧಪಟ್ಟ ಆಯಾ ಮುಖ್ಯ ಅಭಿಯಂತರರುಗಳ ಜೇಬು ಸೇರುತ್ತಿದೆ. ಈ ಸಂಬಂಧ  ಕಳೆದ ಹತ್ತು ವರ್ಷಗಳಿಂದ ಇಂತಹ ಕಾನೂನು ಬಾಹಿರ ಕಾರ್ಯದಲ್ಲಿ ತೊಡಗಿಕೊಂಡಿರುವ ಎಲ್ಲಾ ಮುಖ್ಯ ಅಭಿಯಂತರರುಗಳ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ರಮೇಶ್ ಅವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಆಗ್ರಹಿಸಿದ್ದಾರೆ.

ಪ್ರತಿಯೊಂದು ಕಾಮಗಾರಿಯ ಒಟ್ಟು ಮೊತ್ತದ ಶೇ.2 ರಷ್ಟು ಮೊತ್ತವನ್ನು ಪಿಎಂಸಿ ಹೆಸರಿನಲ್ಲಿ ಕಡಿತಗೊಳಿಸುವ ಮುಖ್ಯ ಅಭಿಯಂತರರುಗಳು ಅಂತಹ ಎಲ್ಲಾ ಪಿಎಂಸಿ ಕಾರ್ಯಗಳನ್ನು ತಮ್ಮ ಸಂಬಂಧಿಕರು, ಬೆಂಬಲಿಗರು ಅಥವಾ ಹಿಂಬಾಲಕರ ಮೂಲಕವೇ ನಡೆಸುತ್ತಿದ್ದಾರೆ. ಪ್ರತಿಯೊಂದು ಕಾಮಗಾರಿಯಲ್ಲಿ ಲಕ್ಷಾಂತರ ರೂಪಾಯಿಗಳನ್ನು ಕೊಳ್ಳೆ ಹೊಡೆಯುತ್ತಿರುವ ಸಂಗತಿ ಇದುವರೆವಿಗೆ ಬಿಬಿಎಂಪಿಯ ಮುಖ್ಯ ಆಯುಕ್ತರು ಹಾಗೂ ಮಾನ್ಯ ಆಡಳಿತಾಧಿಕಾರಿಗಳ ಗಮನಕ್ಕೆ ಬಾರದೇ ಇರುವುದು ನಿಜಕ್ಕೂ ದುರಾದೃಷ್ಟಕರ ಎಂದು ಟೀಕಿಸಿದ್ದಾರೆ.

ಪ್ರತಿಯೊಂದು ಕಾಮಗಾರಿಯ ಪಿಎಂಸಿ ಏಜನ್ಸಿಗಳನ್ನು ನಿಗದಿ ಮಾಡುವ ಸಂಬಂಧ ನಿಯಮಾನುಸಾರ ಪಿಎಂಸಿ ಮೊತ್ತ 5 ಲಕ್ಷಕ್ಕಿಂತಲೂ ಕಡಿಮೆ ಇದ್ದರೆ ಕೊಟೇಷನ್ (Quotation) ಮೂಲಕ ಮತ್ತು 5 ಲಕ್ಷಕ್ಕಿಂತಲೂ ಹೆಚ್ಚಿದ್ದರೆ ಟೆಂಡರ್ (Tender) ಆಹ್ವಾನಿಸಿದ ನಂತರ ಅರ್ಹರಿಗೆ ಈ ಕಾರ್ಯದ ಬಗ್ಗೆ ಕಾರ್ಯಾದೇಶ ಪತ್ರ ನೀಡಬೇಕಿರುತ್ತದೆ. ಆದರೆ ಇಲ್ಲಿ‌ ತಮ್ಮವರಿಗೆ ಪಿಎಂಸಿ ಕೆಲಸ ಕೊಡಿಸಲು ಬೇರೆ ಏಜನ್ಸಿಗಳು ಕೊಟೇಷನ್ ಕೊಡದಂತೆ ಅಥವಾ ಟೆಂಡರ್ ನಲ್ಲಿ ಭಾಗವಹಿಸದಂತೆ ಆಯಾ ಮುಖ್ಯ ಅಭಿಯಂತರರು ನೋಡಿಕೊಳ್ಳುತ್ತಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ಗುತ್ತಿಗೆದಾರರು ನಿರ್ವಹಿಸಿದ ಕಾಮಗಾರಿ ಬಿಲ್ಲುಗಳನ್ನು ಪಾವತಿ ಮಾಡುವಲ್ಲಿ ಹೆಚ್ಚಿನ ಆರ್ಥಿಕ ಶಿಸ್ತು ಹಾಗೂ ಪಾರದರ್ಶಕತೆಯನ್ನು ತರುವ ದೃಷ್ಟಿಯಿಂದ 2018ರ ಆಗಸ್ಟ್ 3ರಂದು‌ ಪಾಲಿಕೆಯ ಅಂದಿನ ಆಯುಕ್ತರು ಪಿಎಂಸಿ ಪದ್ಧತಿಯನ್ನು ಜಾರಿಗೆ ತರಲು ಆದೇಶಿಸಿದ್ದರು. ಅಂದಿನ ಆಯುಕ್ತರ ಈ ಆದೇಶವು ಕೆಲವು ಭ್ರಷ್ಟ ಮುಖ್ಯ ಅಭಿಯಂತರರುಗಳಿಗೆ ವರದಾನವಾಗಿ ಪರಿಣಮಿಸಿದ್ದು, ಅದನ್ನೇ ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ಅಪಾರ ಪ್ರಮಾಣದ ಹಣವನ್ನು ಕಾನೂನು ಬಾಹಿರವಾಗಿ ಲೂಟಿ ಮಾಡಿರುತ್ತಾರೆ.

ಈ ಪದ್ಧತಿ ಜಾರಿ ಮಾಡಿದ ನಂತರ ಇದುವರೆಗೂ ಸುಮಾರು 500 ಕೋಟಿ ರೂಪಾಯಿಗಳಿಗೂ ಹೆಚ್ಚು ಮೊತ್ತವನ್ನು ಪಿಎಂಸಿ ಪದ್ಧತಿ ಅಡಿಯಲ್ಲಿ ಬಿಡುಗಡೆ ಮಾಡಲಾಗಿದೆ. ಇದರ ಪೈಕಿ ಶೇ. 90 ರಷ್ಟು ಹಣವನ್ನು ನಾಲ್ಕೈದು ಪ್ರಾಮಾಣಿಕ ಮುಖ್ಯ ಅಭಿಯಂತರರುಗಳನ್ನು ಹೊರತುಪಡಿಸಿ ಮಿಕ್ಕೆಲ್ಲಾ ಮುಖ್ಯ ಅಭಿಯಂತರರುಗಳು ತಮ್ಮ ರಕ್ತ ಸಂಬಂಧಿಕರುಗಳಿಗೆ, ಹಿಂಬಾಲಕರಿಗೆ, ಮತ್ತು ಅನುಯಾಯಿಗಳಿಗೆ ನಿಯಮಬಾಹಿರವಾಗಿ ಪಿಎಂಸಿ ಪದ್ಧತಿಯ ಟೆಂಡರ್ ಗಳನ್ನು ಮಾಡಿಕೊಡುವ ಮೂಲಕ ಕೋಟ್ಯಾಂತರ ರೂ. ಹಣವನ್ನು ಲಪಟಾಯಿಸಿರುತ್ತಾರೆ ಎಂದು ಎನ್.ಆರ್.ರಮೇಶ್ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಕೂಡಲೇ, ಕಳೆದ ಹತ್ತಾರು ವರ್ಷಗಳಿಂದ ನಿತ್ಯ ನಿರಂತರವಾಗಿ ನಡೆಯುತ್ತಿರುವ ಈ ಬೃಹತ್ ಅಕ್ರಮದ ತನಿಖೆಯನ್ನು ಸಿಐಡಿ (CID)ಗೆ ವಹಿಸಬೇಕೆಂದು ಆಗ್ರಹಿಸಿ ಸರ್ಕಾರಕ್ಕೆ ಪತ್ರ ಬರೆಯುವ ಸಂಬಂಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಪಾಲಿಕೆಯ ಮುಖ್ಯ ಆಯುಕ್ತರನ್ನು ಮತ್ತು ಆಡಳಿತಾಧಿಕಾರಿ ಉಮಾಶಂಕರ್ ಅವರನ್ನು ಒತ್ತಾಯಿಸಿದ್ದಾರೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

CAR DOG SQUAD | ಬೆಂಗಳೂರು : ಮಾದಕವಸ್ತು ಪತ್ತೆ ಕಾರ್ಯದಲ್ಲಿ ಎಕ್ಸ್ ಪರ್ಟ್ ಆಗಿದ್ದ ಶ್ವಾನದಳದ ಮಿಕಿ ನಾಯಿ ಸಾವು

Next Post

Telegram News | ಭಾರತದಲ್ಲಿ ಟೆಲಿಗ್ರಾಮ್ ನಿಷೇಧವಾಗುತ್ತಾ? ಕೇಂದ್ರ ಸರ್ಕಾರ ಆಪ್ ವಿರುದ್ಧ ತನಿಖೆ ಆರಂಭಿಸಿದೆ

Next Post
Telegram

Telegram News | ಭಾರತದಲ್ಲಿ ಟೆಲಿಗ್ರಾಮ್ ನಿಷೇಧವಾಗುತ್ತಾ? ಕೇಂದ್ರ ಸರ್ಕಾರ ಆಪ್ ವಿರುದ್ಧ ತನಿಖೆ ಆರಂಭಿಸಿದೆ

Property Buying

ನೀವು ಜಮೀನು, ನಿವೇಶನ, ಮನೆ ಅಥವಾ ಅಪಾರ್ಟ್ ಮೆಂಟ್ ಖರೀದಿಸುತ್ತಿದ್ದೀರಾ? ಗಮನಿಸಿ, ಈ ಎಲ್ಲಾ ಕಾನೂನು ದಾಖಲೆಗಳು ಮುಖ್ಯ

Please login to join discussion

Like Us on Facebook

Follow Us on Twitter

Recent News

ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ₹150 ಕೋಟಿ ಮೌಲ್ಯದ ಸರ್ಕಾರಿ ಭೂಮಿ ಕಬಳಿಕೆ ಯತ್ನ: ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಕೆ, ತನಿಖೆಗೆ ಆಗ್ರಹ

June 10, 2025
ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

June 9, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ₹150 ಕೋಟಿ ಮೌಲ್ಯದ ಸರ್ಕಾರಿ ಭೂಮಿ ಕಬಳಿಕೆ ಯತ್ನ: ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಕೆ, ತನಿಖೆಗೆ ಆಗ್ರಹ

June 10, 2025
ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

June 9, 2025

ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

June 9, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d