Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BIG NEWS | ಡೆಂಗ್ಯೂ ಸಾಂಕ್ರಾಮಿಕ ರೋಗವೆಂದು ಅಧಿಕೃತ ಘೋಷಣೆ : ಕಾನೂನು ಉಲ್ಲಂಘಿಸಿದರೆ ನಿಮಗೆ ಬೀಳುತ್ತೆ ದಂಡ

ಕರ್ನಾಟಕ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020ಕ್ಕೆ ತಿದ್ದುಪಡಿ ತಂದು ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ

by Bengaluru Wire Desk
September 3, 2024
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಸೆ.03 www.bengaluruwire.com : ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವ ಡೆಂಗ್ಯೂ ಜ್ವರ ಹಾಗೂ ಸಂಬಂಧಿತ ರೋಗವನ್ನು ಸಾಂಕ್ರಾಮಿಕ ರೋಗವೆಂದು ರಾಜ್ಯ ಸರ್ಕಾತ ಅಧಿಕೃತವಾಗಿ ಘೋಷಿಸಿದೆ. ಇನ್ನು ಮುಂದೆ ಡೆಂಗ್ಯೂ ಹರಡುವ ಸೊಳ್ಳೆ ಉತ್ಪತ್ತಿಗೆ ಕಾರಣವಾಗುವಂತೆ ನೈರ್ಮಲ್ಯತೆ ಕಾಪಾಡದೆ ಇರುವವರಿಗೆ ದಂಡ ವಿಧಿಸಲು ಅವಕಾಶ ಕಲ್ಪಿಸಿದೆ.

ಇದಲ್ಲದೆ ಕರ್ನಾಟಕ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020ಕ್ಕೆ ತಿದ್ದುಪಡಿ ತಂದು ಕರ್ನಾಟಕ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2024 ಎಂದು ಆ.31ರ ಕರ್ನಾಟಕ ಗೆಜೆಟ್ ನಲ್ಲಿ ಅಧಿಸೂಚನೆ ಹೊರಡಿಸಿದೆ. 

ರಾಜ್ಯದಲ್ಲಿ ಡೆಂಗ್ಯೂ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ನಿಯಮಗಳನ್ನು ಜಾರಿಗೆ ತಂದಿದೆ. ತೆರೆದ ಸ್ಥಳ, ಮನೆ, ಕಟ್ಟಡ, ಖಾಲಿ ಜಾಗಗಳಲ್ಲಿ ಅನಗತ್ಯವಾಗಿ ಸೊಳ್ಳೆ ಸಂತಾನೋತ್ಪತ್ತಿ ಹರಡಲು ಅವಕಾಶ ನೀಡದಂತೆ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಡೆಂಗ್ಯುವಿನಂತಹ ಮಾರಕ ರೋಗಗಳಿಗೆ ಸೊಳ್ಳೆ ಉತ್ಪತ್ತಿಗಳಿಗೆ ಕಾರಣವಾಗುವ ನಿಂತ ನೀರನ್ನು ತೆರವುಗೊಳಿಸಿ ಸೂಕ್ತ ರಾಸಾಯನಿಕ ಸಿಂಪಡಣೆ ಇನ್ನಿತರ ಕ್ರಮಗಳನ್ನು, ಸ್ವತ್ತಿನ ಮಾಲೀಕರು ಅಥವಾ ಆ ಸ್ವತ್ತಿನ ಸ್ವಾಧೀನತೆ ಹೊಂದಿದವರು ಕೈಗೊಳ್ಳಬೇಕು. ಒಂದೊಮ್ಮೆ ಈ ನಿಯಮಗಳನ್ನು ಉಲ್ಲಂಘಿಸುವ ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ಸ್ವತ್ತಿನ ಮಾಲೀಕರಿಗೆ ದಂಡ ವಿಧಿಸಲು ತಿದ್ದುಪಡಿ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಸದ್ಯ ಬೆಂಗಳೂರು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಚಾಲ್ತಿಯಲ್ಲಿತ್ತು :

ಪ್ರಸ್ತುತ ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಮಂಗಳೂರಿನ ಮಹಾನಗರ ಪಾಲಿಕೆಯಲ್ಲಿ ಮಾತ್ರ ತೆರೆದ ಸ್ಥಳ ನಿಂತ ನೀರನ್ನು ತೆರವು ಗೊಳಿಸಲು ಭೂಮಾಲೀಕರನ್ನು ಹೊಣೆಗಾರರನ್ನಾಗಿ ಮಾಡುವ ಕಾನೂನು ಜಾರಿಗೊಳಿಸಿದೆ. ಇನ್ನು ಮುಂದೆ ಕರ್ನಾಟಕ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2024ರ ಅನ್ವಯ ರಾಜ್ಯಾದ್ಯಂತ ಡೆಂಗ್ಯೂ ನಿಯಂತ್ರಿಸುವ ಹಿನ್ನಲೆಯಲ್ಲಿ ಸ್ಥಳೀಯ ಪ್ರಾಧಿಕಾರ, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗೆ ಸೂಕ್ತ ಅಧಿಕಾರವನ್ನು ಈ ತಿದ್ದುಪಡಿ ಕಾನೂನಿನಲ್ಲಿ ನೀಡಲಾಗಿದೆ. ಕಾಲ ಕಾಲಕ್ಕೆ ಈ ಅಧಿಕಾರಿಗಳು ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ಕಟ್ಟಡ, ನಿವೇಶನ, ನೀರಿನ ಟ್ಯಾಂಕ್, ಉದ್ಯಾನವನ, ಆಟದ ಮೈದಾನ ಮತ್ತಿತರ ಕಡೆಗಳಿಗೆ ತೆರಳಿ ಪರಿಶೀಲನೆ ನಡೆಸಲು ತಿದ್ದುಪಡಿ ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ.

ಡೆಂಗ್ಯೂ ಜ್ವರ ಹರಡುವ ಸೊಳ್ಳೆಯ ಚಿತ್ರ. (ಚಿತ್ರ ಕೃಪೆ : ನ್ಯಾಷನಲ್ ಜಿಯೋಗ್ರಾಫಿಕ್)

ನೋಟಿಸ್ ಪಡೆದ 24 ಗಂಟೆಯ ಒಳಗೆ ಕ್ರಮ ಕೈಗೊಳ್ಳಬೇಕು :

ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ಪ್ರದೇಶ, ಮನೆ, ಕಟ್ಟಡ, ಖಾಸಗಿ ಅಥವಾ ಸರ್ಕಾರಿ ಸ್ವತ್ತಿನ ಖಾಲಿ ನಿವೇಶನದಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದವರಿಗೆ ನೋಟಿಸ್ ನೀಡಿ 24 ಗಂಟೆಗಳ ಒಳಗೆ ಕ್ರಮ ಕೈಗೊಳ್ಳಲು ಡೆಂಗ್ಯೂ ಹರಡಲು ಕಾರಣವಾಗುವ ನಿಂತ ನೀರನ್ನು ತೆರವುಗೊಳಿಸಲು ನೋಟಿಸ್ ನೀಡಬೇಕು. ಆ ನೋಟಿಸ್ ಪಡೆದ ನಂತರ ನಿರ್ದಿಷ್ಟಪಡಿಸಿದ ಸಮಯದ ಒಳಗಾಗಿ ಸ್ವತ್ತಿನ ಬಳಕೆದಾರರು ಅಥವಾ ಮಾಲೀಕರು ಕ್ರಮ ಕೈಗೊಳ್ಳಬೇಕು.

ಇಲ್ಲದಿದ್ದರೆ ಸಂಬಂಧಿಸಿದ ಅಧಿಕಾರಿ ಡೆಂಗ್ಯೂ ಹರಡಲು ಕಾರಣವಾಗಲು ಸಾಧ್ಯತೆಯಿರುವ ಸ್ಥಳದಲ್ಲಿ ನಿಂತ ನೀರು ಹಾಗೂ ಸೊಳ್ಳೆ ಉತ್ಪತ್ತಿಯಾಗದಂತೆ ರಾಸಾಯನಿಕ ಸಿಂಪಡಣೆ ಸೇರಿದಂತೆ ಮತ್ತಿತರ ಕ್ರಮ ಕೈಗೊಳ್ಳಬೇಕು. ಹೀಗೆ ಕ್ರಮ ಕೈಗೊಂಡಾಗ ಆದ ವೆಚ್ಚವನ್ನು ಸಂಬಂಧಿಸಿದ ವ್ಯಕ್ತಿ ಅಥವಾ ಸಂಸ್ಥೆಗೆ ವಿಧಿಸಬೇಕು ಎಂದು ನಿಯಮಗಳಲ್ಲಿ ತಿಳಿಸಿದೆ.

2017ರಲ್ಲೇ ಸಿಎಸ್ ಉನ್ನತ ಮಟ್ಟದ ಸಮಿತಿ ಶಿಫಾರಸ್ಸು :

ಮುಖ್ಯ ಕಾರ್ಯದರ್ಶಿ ನೇತೃತ್ವದ ಉನ್ನತ ಮಟ್ಟದ ಸಮಿತಿಯು 2017ರಲ್ಲಿ ಎಲ್ಲ ನಗರ ಪಾಲಿಕೆಯಲ್ಲಿ ಡೆಂಗ್ಯೂ ತಡೆಗಟ್ಟಲು ನಾಗರೀಕ ಬೈಲಾ ಆಳವಡಿಕೆ ಮಾಡುವಂತೆ ಶಿಫಾರಸು ಮಾಡಿತ್ತು. ಇದರಲ್ಲಿ ಖಾಸಗಿ ಜಾಗದಲ್ಲಿ ಸೊಳ್ಳೆಗಳು ಉತ್ಪತ್ತಿಯಾದರೆ ಅದನ್ನು ನಾಶಗೊಳಿಸುವ ಜವಾಬ್ದಾರಿ ಆ ಜಾಗದ ಮಾಲೀಕರದ್ದಾಗಿದೆ ಎಂದಿತ್ತು. ರಾಜ್ಯ ಸರ್ಕಾರವೂ ಸಹ ನಗರ ಸ್ಥಳೀಯಾಡಳಿತದಲ್ಲಿ ಬೈಲಾ ಅಳವಡಿಸಿಕೊಳ್ಳಲು ಸೂಚನೆ ನೀಡಿತ್ತು. ಇದೀಗ ರಾಜ್ಯಾದ್ಯಂತ ಡೆಂಗ್ಯೂ ಒಂದು ಸಾಂಕ್ರಾಮಿಕ ರೋಗವೆಂದು ಘೋಷಿಸಿ ಕರ್ನಾಟಕ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020ಕ್ಕೆ ತಿದ್ದುಪಡಿ ತಂದಿದೆ. ನಿಯಮ ಉಲ್ಲಂಘಿಸಿದರೆ ಸ್ವತ್ತಿನ ಮಾಲೀಕರೂ ಅಥವಾ ಸ್ವಾಧೀನದಾರಿಗೂ ದಂಡ ವಿಧಿಸಬಹುದಾಗಿದೆ.

ಕಾನೂನು ಉಲ್ಲಂಘಿಸಿದರೆ ವಿಧಿಸುವ ದಂಡದ ಪ್ರಮಾಣ :

ಮನೆಗಳಿಗೆ (ಒಳಾಂಗಣ ಮತ್ತು ಹೊರಾಂಗಣ ಎರಡೂ ಒಳಗೊಂಂತೆ) ನಗರ ಪ್ರದೇಶದಲ್ಲಿ 400 ರೂ., ಗ್ರಾಮಾಂತರ ಪ್ರದೇಶದಲ್ಲಿ 200 ರೂ. ದಂಡ ವಿಧಿಸಲಾಗುತ್ತದೆ.

ವಸತಿ ಪ್ರಕಾರಗಳು, ಆರೋಗ್ಯ ಸೌಲಭ್ಯಗಳು, ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು, ತಿನಿಸುಗಳು, ಲಾಡ್ಜ್‌ಗಳು, ರೆಸಾರ್ಟ್‌ಗಳು, ಹೋಂಸ್ಟೇಗಳು, ಅಮ್ಯೂಸ್‌ಮೆಂಟ್ ಪಾರ್ಕ್‌ಗಳು, ಮಾಲ್‌ಗಳು, ಸೂಪರ್ ಮಾರ್ಕೆಟ್‌ಗಳು, ಸಣ್ಣಪುಟ್ಟ ಅಂಗಡಿಗಳು, ಟೆಂಡರ್ ತೆಂಗಿನಕಾಯಿ ಮಾರಾಟಗಾರರು, ಕಾರ್ಖಾನೆಗಳು, ಕೈಗಾರಿಕೆಗಳು ರಿಪೇರಿ ಅಂಗಡಿಗಳು ಸೇರಿದಂತೆ ವಾಣಿಜ್ಯ ಸಂಸ್ಥೆಗಳು, ಕಚೇರಿಗಳು, ಶಾಲೆಗಳು ಮತ್ತು ಕಾಲೇಜುಗಳು  ಘನತ್ಯಾಜ್ಯ ಸಂಗ್ರಹ ಯಾರ್ಡ್‌ಗಳು, ಸಸ್ಯ ನರ್ಸರಿ, ಸಿನಿಮಾ ಥಿಯೇಟರ್, ಕನ್ವೆನ್ಷನ್ ಹಾಲ್‌ಗಳು, ಅಂತಹ ಯಾವುದೇ ಇತರ ರಚನೆಗಳು ಸೇರಿದಂತೆ ಇನ್ನಿತರರಿಗೆ ನಗರ ಪ್ರದೇಶದಲ್ಲಿ 1,000 ರೂ., ಗ್ರಾಮಾಂತರ ಪ್ರದೇಶದಲ್ಲಿ 500 ರೂ. ದಂಡ ವಿಧಿಸಲಾಗುತ್ತದೆ.

ಸಕ್ರಿಯ ಕಟ್ಟಡ ನಿರ್ಮಾಣ ಸ್ಥಳಗಳು, ನಿರ್ಮಾಣ ಕಾರ್ಯ ನಿಂತಿರುವ ಸ್ಥಳಗಳು ಮತ್ತು ಖಾಲಿ ನಿವೇಶನಗಳು ಅಥವಾ ತೆರೆದ ಭೂಮಿಗಳಲ್ಲಿ ಡೆಂಗ್ಯೂ ಹರಡಲು ಕಾರಣವಾಗುವ ಸೊಳ್ಳೆ ಉತ್ಪತ್ತಿಗೆ ಅವಕಾಶ ನೀಡುವಂತೆ ಸ್ವಚ್ಛತೆ ಕಾಪಾಡದವರಿಗೆ ನಗರ ಪ್ರದೇಶದಲ್ಲಿ 2,000 ರೂ., ಗ್ರಾಮಾಂತರ ಪ್ರದೇಶದಲ್ಲಿ 1000 ರೂ. ದಂಡ ವಿಧಿಸಲಾಗುತ್ತದೆ. 

ಗಡುವಿನೊಳಗೆ ಕ್ರಮಕೈಗೊಳ್ಳದಿದ್ದರೆ ಪ್ರತಿವಾರವೂ ಹೆಚ್ಚುವರಿ ದಂಡ :

ಬಿಬಿಎಂಪಿ ಪ್ರದೇಶ ಮತ್ತು ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಕ್ಷಮ ಪ್ರಾಧಿಕಾರವು ಸೂಚಿಸಿದ ದಂಡದ ದರಗಳು ಮೇಲಿನ ದರಗಳಿಗಿಂತ ಹೆಚ್ಚಿಸಬಹುದು. ಸಕ್ಷಮ ಪ್ರಾಧಿಕಾರದಿಂದ ನಿಂತ ನೀರು ಅಥವಾ ಡೆಂಗ್ಯೂ ಹರಡುವ ಸ್ಥಳದಲ್ಲಿ ಸ್ವಚ್ಛಗೊಳಿಸುವ ಸೂಚನೆಯನ್ನು ಸ್ವೀಕರಿಸಿದ ನಂತರವೂ ಕ್ರಮ ಕೈಗೊಳ್ಳದಿದ್ದರೆ ಪ್ರತಿವಾರಕ್ಕೂ ಹೆಚ್ಚುವರಿಯಾಗಿ, ಮೇಲೆ ನಿರ್ದಿಷ್ಟಪಡಿಸಿದ ಒಟ್ಟು ದಂಡದ ಮೊತ್ತದ ಐವತ್ತು ಪ್ರತಿಶತವನ್ನು ಹೆಚ್ಚುವರಿಯಾಗಿ ವಿಧಿಸಲು ಸಾಂಕ್ರಾಮಿಕ ರೋಗಗಳ ನಿಯಂತ್ರಣ ತಿದ್ದುಪಡಿ ಕಾಯ್ದೆ 2024ರಲ್ಲಿ ತಿಳಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Video News | ಬಿಬಿಎಂಪಿಯ ಎಲ್ಲಾ ವಲಯದಲ್ಲಿ ‘ನಂಬಿಕೆ ನಕ್ಷೆ’ ಯೋಜನೆ ಆರಂಭ : ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ರೆ ನಿಮಗೆ ಸಿಗುತ್ತೆ ಕಟ್ಟಡ ನಕ್ಷೆ

Next Post

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ : ತಾಯಿ ಸನ್ನಿಧಿಯಲ್ಲೇ ಸಭೆ ನಡೆಸಿದ ಸಿದ್ದರಾಮಯ್ಯ

Next Post

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ : ತಾಯಿ ಸನ್ನಿಧಿಯಲ್ಲೇ ಸಭೆ ನಡೆಸಿದ ಸಿದ್ದರಾಮಯ್ಯ

BW EXCLUSIVE | ಬಿಬಿಎಂಪಿ ವೆಬ್ ಸೈಟ್ ಡೊಮೈನ್ ಸಮಸ್ಯೆ : ಪರಿಹಾರಕ್ಕೆ ಗೂಗಲ್ ಮೊರೆ ; ಅಸ್ತವ್ಯಸ್ತವಾದ ನಾಗರೀಕ ಸೇವೆಗಳು 

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d