Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಆಪರೇಷನ್ ಕಮಲ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆಗೆ ಅನುಮತಿ ಕೋರಿ ವಿಧಾನಸಭಾಧ್ಯಕ್ಷರಿಗೆ ಅರ್ಜಿ ಸಲ್ಲಿಕೆ

ಬಿ.ಎಸ್.ಯಡಿಯೂರಪ್ಪ ಹಾಗೂ 17 ಜನಪ್ರತಿನಿಧಿಗಳಿಗೆ ಮತ್ತೆ ಸಂಕಷ್ಟ

by Bengaluru Wire Desk
September 13, 2024
in News Wire
Reading Time: 1 min read
0
Karnataka Assembly

ವಿಧಾನಸಭೆಯ ಒಳಾಂಗಣದ ಸಾಂದರ್ಭಿಕ ಚಿತ್ರ.

ಬೆಂಗಳೂರು, ಸೆ.13 www.bengaluruwire.com : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಹಳೆಯ ಪ್ರಕರಣವೊಂದರಲ್ಲಿ ಮತ್ತೆ ಸಂಕಷ್ಟ ಎದುರಾಗಿದೆ. 2019ರಲ್ಲಿ ಆಪರೇಷನ್ ಕಮಲದ ಮೂಲಕ ಸಿಎಂ ಪಟ್ಟ ಯಡಿಯೂರಪ್ಪ ಹಾಗೂ ಬಿಜೆಪಿಗೆ ಹಾರಿದ್ದ 17 ಅನರ್ಹ ಶಾಸಕರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಾಗಿರುವ ಭ್ರಷ್ಟಾಚಾರದ ಆರೋಪಗಳ ಕುರಿತು ತನಿಖೆ ಆರಂಭಿಸಲು ಅಭಿಯೋಜನಾ ಮಂಜೂರಾತಿ ನೀಡುವಂತೆ ಜನಾಧಿಕಾರ ಸಂಘರ್ಷ ಪರಿಷತ್ತು ವಿಧಾನಸಭೆಯ ಸಭಾಪತಿಗಳಿಗೆ ಅರ್ಜಿ ಸಲ್ಲಿಸಿದೆ.

ಜನಪ್ರತಿನಿಧಿಗಳ ಸ್ಪೆಷಲ್ ಕೋರ್ಟಿನ ನ್ಯಾಯಾಧೀಶರು, ಅಭಿಯೋಜನಾ ಮಂಜೂರಾತಿ ಪಡೆಯಬೇಕೆಂಬ ಆದೇಶದ ಮೇರೆಗೆ 2019ರ ಆಪರೇಶನ್ ಕಮಲದಲ್ಲಿ ಭಾಗಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಪದವಿಯ ಲಾಭವನ್ನು ಪಡೆದ ಬಿ ಎಸ್ ಯಡಿಯೂರಪ್ಪ ಹಾಗೂ ಇನ್ನಿತರ 17 ಶಾಸಕರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ತನಿಖೆ ಆರಂಭಿಸುವ ಸಲುವಾಗಿ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಕಲಂ 17ಎ ಅಡಿಯಲ್ಲಿ ಅನುಮತಿ ಕೋರುವ ಅರ್ಜಿಯನ್ನು ವಿಧಾನಸಭೆಯ ಸಭಾಪತಿಗಳಿಗೆ ಸೆ.11ರಂದು ಸಲ್ಲಿಸಲಾಗಿದೆ ಎಂದು ಜನಾಧಿಕಾರ ಸಂಘರ್ಷ ಪರಿಷತ್ತಿನ ಪದಾಧಿಕಾರಿ ಆದರ್ಶ್ ಆರ್ ಅಯ್ಯರ್ ತಿಳಿಸಿದ್ದಾರೆ.

“ಆರೋಪಿತ 17 ಶಾಸಕರು ತಮ್ಮ ರಾಜಕೀಯ ಪಕ್ಷದ ಅಧಿಕೃತ ವಿಪ್ ಅನ್ನು ಉಲ್ಲಂಘಸಿ ಅಂದು ವಿಶ್ವಾಸಮತ ಯಾಚನೆ ಕಾರ್ಯದಲ್ಲಿ ಹಾಜರಾಗದೆ ತಮ್ಮ ಆದ್ಯ ಕರ್ತವ್ಯವಾದ ಮತ ಚಲಾವಣೆಯನ್ನು ಕ್ರಮಬಾಹಿರವಾಗಿ ಅನುಸರಿಸದೆ ಅನ್ಯ ಪಕ್ಷದ ಯಡಿಯೂರಪ್ಪನವರಿಗೆ ಅನುಚಿತ ಅನುಕೂಲ ಕಲ್ಪಿಸಿದ್ದಾರೆ ಎಂಬ ಆರೋಪವನ್ನು ಭ್ರಷ್ಟಾಚಾರ ನಿಗ್ರಹ (ತಿದ್ದುಪಡಿ) ಕಾಯ್ದೆ, 2018ರ ಕಲಂ 7ರ ಅಡಿಯಲ್ಲಿ ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ನ್ಯಾಯಾಧೀಶರು ತಮ್ಮ ತೀರ್ಪಿನ ಪ್ಯಾರಾ 27ರಲ್ಲಿ ಉಲ್ಲೇಖಿಸಿರುವುದು ಗಮನಾರ್ಹ ವಿಚಾರ.”

“ಅಕ್ರಮವಾಗಿ ಪಕ್ಷಾಂತರಗೊಳ್ಳುವ ಶಾಸಕರುಗಳನ್ನು ಕೇವಲ ಅನರ್ಹಗೊಳಿಸುವುದಷ್ಟೇ ಸಾಲದು ಪಕ್ಷಾಂತರದ ಕುಕೃತ್ಯದ ಹಿಂದೆ ನಡೆಯುವ ಭ್ರಷ್ಟ ಕ್ರಮಗಳು ವಿರುದ್ಧವೂ ತನಿಖೆ ಆಗದಿದ್ದರೆ ಕಾನೂನಿನ ಮೂಲ ಉದ್ದೇಶ ಪೂರೈಸುವುದಿಲ್ಲ ಮತ್ತು ಪ್ರಜಾಪ್ರಭುತ್ವ ಉಳಿಯುವುದಿಲ್ಲ. ಹಾಗಾಗಿ ಸಂಬಂಧಿತ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಆರೋಪಿತ 17 ಜನ ಜನಪ್ರತಿನಿಧಿಗಳ ವಿರುದ್ಧ ಹಾಗೂ ಇದಕ್ಕೆ ಸಹಯೋಗ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ತನಿಖೆ ನಡೆಸಲು ಅವಕಾಶ ನೀಡಬೇಕು” ಎಂದು ಅರ್ಜಿಯಲ್ಲಿ ಕೋರಿದ್ದಾಗಿ ಹೇಳಿದ್ದಾರೆ.

ವಿಶೇಷ ನ್ಯಾಯಾಲಯದ ಜನವರಿ 2020ರ ಆದೇಶದ ನಂತರ ಕೋವಿಡ್ ಲಾಕ್ ಡೌನ್ ಆರಂಭವಾಗಿ ಸುಮಾರು 2 ವರ್ಷಗಳವರೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು. ನಂತರದ ಹಲವಾರು ಹಗರಣಗಳ ಮಧ್ಯೆ ಹಾಗೂ ರಾಜ್ಯ ಮತ್ತು ಕೇಂದ್ರದ ಚುನಾವಣೆಗಳ ಭರದಲ್ಲಿ ಈ ಪ್ರಕರಣವು ಮರೆತೇ ಹೋಯಿತು. ಪ್ರಸ್ತುತದಲ್ಲಿ ಪುನಃ ಆಪರೇಷನ್ ಕಮಲ ನಡೆಯುವ ಬಗ್ಗೆ ಹೇಳಿಕೆಗಳು ಕೇಳಿಬರುತ್ತಿರುವ ಹಿನ್ನಲೆಯಲ್ಲಿ, ಹಾಗೂ ರಾಜ್ಯದಲ್ಲಿ ಪ್ರಸ್ತುತ ಅಧಿಕಾರದಲ್ಲಿರುವ ಸರ್ಕಾರ 5 ವರ್ಷಗಳ ಕಾಲ ಪೂರ್ಣವಾಗಿ ಆಡಳಿತ ನಡೆಸಿ ಆ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಲು 2019ರಲ್ಲಿ ನಡೆದ ಆಪರೇಷನ್ ಕಮಲ ಪ್ರಕರಣದಲ್ಲಿ ಯಡಿಯೂರಪ್ಪ ಹಾಗೂ ಬಿಜೆಪಿಗೆ ಹಾರಿದ್ದ 17 ಅನರ್ಹ ಶಾಸಕರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಾಗಿರುವ ಭ್ರಷ್ಟಾಚಾರದ ಆರೋಪಗಳ ಕುರಿತು ತನಿಖೆ ಆರಂಭಿಸಲು ಅಭಿಯೋಜನಾ ಮಂಜೂರಾತಿ ನೀಡುವಂತೆ ಅರ್ಜಿಯಲ್ಲಿ ಕೋರಿದ್ದಾಗಿ ಆದರ್ಶ್ ಅಯ್ಯರ್ ತಿಳಿಸಿದ್ದಾರೆ.

WhatsApp Join our WhatsApp Channel
Previous Post

ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಿರ್ಬಂಧಕ್ಕೆ ರಾಮಚಂದ್ರ ಗುಹಾ ಖಂಡನೆ : ಸೆ.15 ಒಳಗೆ ಆದೇಶ ಹಿಂಪಡೆಯಲು ಸರ್ಕಾರಕ್ಕೆ ಒತ್ತಾಯ

Next Post

ಅಂಡಮಾನ್ ನ ರಾಜಧಾನಿ ಪೋರ್ಟ್ ಬ್ಲೇರ್ ಇನ್ನು “ಶ್ರೀ ವಿಜಯಪುರಂ” : ಮರು ನಾಮಕರಣ ಮಾಡಿದ ಕೇಂದ್ರ 

Next Post

ಅಂಡಮಾನ್ ನ ರಾಜಧಾನಿ ಪೋರ್ಟ್ ಬ್ಲೇರ್ ಇನ್ನು "ಶ್ರೀ ವಿಜಯಪುರಂ" : ಮರು ನಾಮಕರಣ ಮಾಡಿದ ಕೇಂದ್ರ 

Video News | ನರೇಂದ್ರ ಮೋದಿ ನಿವಾಸಕ್ಕೆ 'ದೀಪಜ್ಯೋತಿ' ಎಂಬ ಹೊಸ ಸದಸ್ಯರ ಸೇರ್ಪಡೆ!! ಸಂಭ್ರಮಿಸಿದ ಪ್ರಧಾನಮಂತ್ರಿ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group