Monday, June 16, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

    Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

    ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

    ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

    ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

  • Bengaluru Focus
    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

    ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire
    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

    Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

    ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

    ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

    ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

  • Bengaluru Focus
    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

    ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

#Save Uliya Island | ಅವಧಿ ಮುಗಿದ ಪರ್ಮಿಟ್, ಹೊಸ ಅಕ್ರಮ ಮರಳು ದಂಧೆ?  ‘ಉಳಿಯ’ ದ್ವೀಪದ ಅಳಿವಿಗೆ ಅಧಿಕಾರಿಗಳ ಸಾಥ್? ಮುಖ್ಯ ಕಾರ್ಯದರ್ಶಿಗೆ ದೂರು

by Bengaluru Wire Desk
September 30, 2024
in News Wire, Public interest
Reading Time: 1 min read
0
Nethravathi River Bed

ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ ನದಿ ತಟದ ಸಾಂದರ್ಭಿಕ ಚಿತ್ರ.

ಮಂಗಳೂರು, ಸೆ.30 www.bengaluruwire.com : ಕರಾವಳಿ ಜಿಲ್ಲೆಗಳಲ್ಲಿ ತಾಂಡವವಾಡುತ್ತಿರುವ ಮರಳು ಮಾಫಿಯಾ ವಿರುದ್ಧ ರಣಕಹಳೆ ಮೊಳಗಿದೆ. ಮಂಗಳೂರು ಹೊರವಲಯದ ‘ಉಳಿಯ’ ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಹಾಗೂ ಮರಳು ಮಾಫಿಯಾ ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಸೋಮವಾರ ಸರ್ಕಾರದ ಮುಖ್ಯಕಾರ್ಯದರ್ಶಿಗೆ ದೂರು ಸಲ್ಲಿಕೆಯಾಗಿದೆ.

ಕರಾವಳಿಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಗಣಿಕಾರಿಗೆಯಿಂದಾಗಿ ನೇತ್ರಾವತಿ ನದಿಯ ನಡುಗಡ್ಡೆಯಾಗಿರುವ ಉಳ್ಳಾಲ ತಾಲೂಕಿನ ಪಾವೂರು ಸಮೀಪದ ‘ಉಳಿಯ ದ್ವೀಪ’ ಅವನತಿಯ ಅಂಚಿನಲ್ಲಿದೆ. ಇದೇ ವೇಳೆ, ದಕ್ಷಿಣ ಕನ್ನಡ ಜಿಲ್ಲೆ (Dakshina Kannada) ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಈ ದಂಧೆಗೆ ನೇರ, ಪರೋಕ್ಷ ಅವಕಾಶ ನೀಡುವ, ಅಕ್ರಮ ಮರಳು ಸಾಗಾಟಕ್ಕೆ ಅವಕಾಶ ಮಾಡಿಕೊಡುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಹಿರಿಯ ಪತ್ರಕರ್ತರೂ ಆದ ಪರಿಸರ ಹೋರಾಟಗಾರ ಆಲ್ವಿನ್ ಮೆಂಡೋನ್ಸಾ ಅವರು ಈ ದೂರನ್ನು ಸಲ್ಲಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯು, ನದಿಯನ್ನು ಆವರಿಸಿಕೊಂಡಿರುವ ಪ್ರದೇಶವಾಗಿದೆ. ಕುಮಾರಧಾರ, ನೇತ್ರಾವತಿ, ಫಲ್ಗುಣಿ, ನಂದಿನಿ ಸಹಿತ ಹಲವಾರು ನದಿಗಳು ಕರಾವಳಿ ಜನರ ಜೀವನಾಡಿಯಾಗಿದ್ದು, ಇದೀಗ ಸರ್ಕಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಜಲಮೂಲಕ್ಕೆ ಸಂಚಕಾರ ಎದುರಾಗಿದೆ. ಕರ್ನಾಟಕ ಕರಾವಳಿಯ ದೊಡ್ಡ ನದಿಗಳಲ್ಲಿ ಒಂದಾಗಿರುವ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದು, ಮರಳು ಮಾಫಿಯಾದ ದಂಧೆಯಿಂದಾಗಿ ನೇತ್ರಾವತಿ ನದಿಯ ನಡುಗಡ್ಡೆಯಾಗಿರುವ ಉಳ್ಳಾಲ ತಾಲೂಕಿನ ಪಾವೂರು ಸಮೀಪದ ‘ಉಳಿಯ ದ್ವೀಪ’ ಅವನತಿಯ ಅಂಚಿನಲ್ಲಿದೆ.

ಈ ಬಗ್ಗೆ ಪೊಲೀಸರು, ಗಣಿ ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ತಮಗೇನೂ ಗೊತ್ತಿಲ್ಲ ಎಂಬಂತಿದ್ದಾರೆ. ಈ ಕುರಿತಂತೆ, ಜಿಲ್ಲಾ ಉಸ್ತುವಾರಿ ಸಚಿವರಿಗೂ ದೂರು ಸಲ್ಲಿಕೆಯಾಗಿದೆ. ಆದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕುರಿತ ಸಮಗ್ರ ವರದಿಯೊಂದಿಗೆ ಪರಿಸರ ಹೋರಾಟಗಾರ ಆಲ್ವಿನ್ ಮೆಂಡೋನ್ಸಾ, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ.

ಅಧಿಕಾರಿಗಳ ಹಾಗೂ ಸ್ಥಳೀಯ ರಾಜಕಾರಣಿಗಳ ಕುಮ್ಮಕ್ಕಿನಿಂದಾಗಿ ಮರಳು ಮಾಫಿಯಾ ದಂಧೆಕೋರರು ಉಳಿಯ ದ್ವೀಪದಲ್ಲಿ ನಿರಂತರವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದು, ನಡುಗಡ್ಡೆಯ ಬಹುಪಾಲು ನೆಲ ನದಿಯ ಪಾಲಾಗಿದೆ. ಇದರಿಂದಾಗಿ ಉಳಿಯ ದ್ವೀಪದಲ್ಲಿನ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಈ ಬಗ್ಗೆ ದ್ವೀಪದ ನಿವಾಸಿಗಳು ಸ್ಥಳೀಯ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಪೊಲೀಸರಿಗೆ ದೂರು ನೀಡಿದರೂ ಪೊಲೀಸರು ಅಕ್ರಮವನ್ನು ತಡೆಯುವ ಬದಲು, ದೂರು ನೀಡಿದವರ ಬಗ್ಗೆ ದಂಧೆಕೋರರಿಗೆ ಮಾಹಿತಿ ನೀಡಿ ಬೆದರಿಕೆ ಒಡ್ಡುವ ಪ್ರಕರಣಗಳು ನಡೆಯುತ್ತಿದೆ.

ಉಳಿಯ ದ್ವೀಪ ಸಮೀಪ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಕುರಿತ ಚಿತ್ರ. (ಚಿತ್ರಕೃಪೆ : ದೂರುದಾರರು ಒದಗಿಸಿದ ಚಿತ್ರ)

“ಬಹುತೇಕ ಮರಳು ದಂಧೆಕೋರರು ಸ್ಥಳೀಯ ಶಾಸಕರೇ ತಮಗೆ ಬೆಂಗಾವಲಾಗಿ ನಿಂತಿದ್ದಾರೆ ಎಂದು ಹೇಳಿ ಸ್ಥಳೀಯರನ್ನು ಬೆದರಿಕೆಯೊಡ್ಡುತ್ತಿದ್ದಾರೆ” ಎಂದು ಆಲ್ವಿನ್ ಮೆಂಡೋನ್ಸಾ ಅವರು ತಮ್ಮ ದೂರಿನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

“ಕೆಲವು ದಿನಗಳಿಂದ ಉಳಿಯ ದ್ವೀಪದ ನಿವಾಸಿಗಳು ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ದ್ವೀಪ ಪ್ರದೇಶದ ನಿವಾಸಿಗಳು ಮಂಗಳೂರಿನಲ್ಲೂ ಬೃಹತ್ ಪ್ರತಿಭಟನೆ ನಡೆಸಿ, ಉಳಿಯ ದ್ವೀಪದ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ನಿಲ್ಲಿಸುವಂತೆ ಆಗ್ರಹಿಸಿದ್ದರು. ಮಂಗಳೂರಿನ ಮಿನಿ ವಿಧಾನಸೌಧದ ಎದುರು ಪ್ರತಿಭಟನಾ ಸಮಾವೇಶ ನಡೆಸಿ ಜಿಲ್ಲಾಡಳಿತ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಲವು ಬಾರಿ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.”

“ಪಾವೂರು ಉಳಿಯ, ರಾಣಿಪುರ, ಉಳ್ಳಾಲ ಹೊಯಿಗೆ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿದ್ದು, ರಾಣಿಪುರ ಉಳಿಯದಲ್ಲಿ ಮನೆಗಳು ಅಪಾಯದಲ್ಲಿವೆ. ಜಿಲ್ಲಾಡಳಿತ ಮರಳುಗಾರಿಕೆ ನಿಷೇಧಿಸಬೇಕೆಂದು ಆಗ್ರಹಿಸಿದ್ದಾರೆ. ಉಳ್ಳಾಲ, ಕೋಣಾಜೆ, ವಾಮಂಜೂರು ಠಾಣೆಗಳ ವ್ಯಾಪ್ತಿಯ ಪೊಲೀಸರು ಅಕ್ರಮ ಮರಳುಗಾರರ ಜತೆ ಶಾಮೀಲಾಗಿರುವ ಕಾರಣ ದ್ವೀಪ ನಾಶವಾಗುತ್ತಿದೆ. ರಾತ್ರೋರಾತ್ರಿ ಸಾಲುಗಟ್ಟಲೆ ಟಿಪ್ಪರ್‌ಗಳು ಪೊಲೀಸರೆದುರೇ ಸಾಗುತ್ತಿದ್ದರೂ ಕ್ರಮ ಆಗುತ್ತಿಲ್ಲ ಎಂದು ಮುಖಂಡರು ಆರೋಪಿಸಿದ್ದಾರೆ” ಎಂದು ಸರ್ಕಾರದ ಗಮನ ಸೆಳೆದಿದ್ದಾರೆ.

“ಈ ಮರಳು ಮಾಫಿಯಾದ ಕರಾಳ ಬಾಹು ನೇತ್ರಾವತಿ ನದಿಯನ್ನಷ್ಟೇ ಅಲ್ಲ, ದಕ್ಷಿಣ ಕನ್ನಡ ಜಿಲ್ಲೆಯ ಫಲ್ಗುಣಿ, ನಂದಿನಿ, ಕುಮಾರಧಾರ, ಗುಂಡ್ಯ ಹೊಳೆ ಸಹಿತ ಇತರ ನದಿಗಳನ್ನೂ ಆವರಿಸಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳೂ ತಮಗೇನೂ ಸಂಬಂಧವೇ ಇಲ್ಲ ಎಂಬಂತಿದ್ದಾರೆ. ಹಿಂದಿನ ಜಿಲ್ಲಾಧಿಕಾರಿಗಳು ಆಗಾಗ್ಗೆ ದಾಳಿ ನಡೆಸಿ ಅಕ್ರಮ ಮರಳು ದಂಧೆಕೋರರನ್ನು ಎಚ್ಚರಿಸುವ ಪ್ರಯತ್ನ ಮಾಡುತ್ತಿದ್ದರಾದರೂ, ಹಾಲಿ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಕೊಡದಿರುವುದು ವಿಷಾದದ ಸಂಗತಿ” ಎಂದು ಆಲ್ವಿನ್ ಮೆಂಡೋನ್ಸಾ ಅವರು ದೂರಿನಲ್ಲಿ ವಿಷದ ವ್ಯಕ್ತಪಡಿಸಿದ್ದಾರೆ.

ಅವಧಿ ಮುಗಿದ “ಪರ್ಮಿಟ್” ಹೆಸರಲ್ಲಿ ಹೊಸ ದಂಧೆ? :

“ಮರಳು ಗಣಿಗಾರಿಕೆ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೆ, ದಕ್ಷಿಣಕನ್ನಡ ಜಿಲ್ಲೆಯ ವಿವಿಧೆಡೆ ಮೀನುಗಾರಿಕೆಗೆ ಅಡ್ಡಿಯಾಗುವ ಮರಳಿನ ದಿಬ್ಬಗಳನ್ನು ಹಾಗೂ ಬೃಹತ್ ದೋಣಿಗಳ ಸಂಚಾರಕ್ಕೆ ಅಡ್ಡಿಯಾಗುವ ದಿಬ್ಬಗಳನ್ನು ತೆರವು ಮಾಡಲು ಅವಕಾಶ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಸಮುಜಾಯಿಷಿ ನೀಡುತ್ತಿದ್ದಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ನದಿಗಳಲ್ಲಿ ಆ ರೀತಿಯ ದಿಬ್ಬಗಳೇ ಇಲ್ಲ. ಆದಾಗಿಯೂ, 2023ರಿಂದ 2025ರ ವರೆಗೆ ಫಲ್ಗುಣಿ, ಕುಮಾರಧಾರ, ನೇತ್ರಾವತಿ, ಗುಂಡ್ಯಹೊಳೆ ಸಹಿತ ಕಡಲ ನಿಯಂತ್ರಣ ರಹಿತ ಪ್ರದೇಶ ( NON CRZ)ದ ಸುಮಾರು 27 ಕಡೆ 6,55,376 ಮೆಟ್ರಿಕ್ ಟನ್ ಮರಳು ಬ್ಲಾಕ್’ಗಳಿಗೆ ಟೆಂಡರ್ ಮೂಲಕ ಮರಳುಗಾರಿಕೆಗೆ ಅವಕಾಶ ನೀಡಲಾಗಿದೆ.”

“ಈ ಪರವಾನಗಿಯ ಹೊರತಾಗಿಯೂ ನೂರಾರು ಕಡೆ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿವೆ. 2023ಕ್ಕೆ ಮೊದಲು ಪಡೆದ ಪರವಾನಗಿಯನ್ನೇ ನೆಪವಾಗಿಟ್ಟು ಮಾಫಿಯಾಗಳು ಈ ಅಕ್ರಮಗಳನ್ನು ನಡೆಸುತ್ತಿವೆ. ಇದನ್ನು ಹೊರತುಪಡಿಸಿ ಹಲವೆಡೆ 167 ಮಂದಿಗೆ ಸಿಆರ್ ಜೆಡ್ ವ್ಯಾಪ್ತಿಯಲ್ಲಿ ತಲಾ 1000 ಮೆಟ್ರಿಕ್ ಟನ್ ಮರಳು ಗಣಿಗಾರಿಕೆಗೆ 2022-23 ರವರೆಗೆ ಅನುಮತಿ ನೀಡಲಾಗಿತ್ತು. ಈ ಪರವಾನಗಿ ನವೀಕರಣಗೊಳ್ಳದಿದ್ದರೂ, ಮರಳು ಸಾಗಿಸುವ ದಂಧೆ ನಡೆಯುತ್ತಿದೆ ಎಂದರೆ, ಅದಕ್ಕೆ ಅಧಿಕಾರಿಗಳ ಕೃಪೆ ಇರದೇ ನಡೆಯಲು ಸಾಧ್ಯವೇ?” ಎಂದು ಆಲ್ವಿನ್ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ನದಿ ತಿರುವು ಯೋಜನೆಯಿಂದಾಗಿ ನೇತ್ರಾವತಿ ನದಿಯಲ್ಲಿ ಮೀನು ಹಾಗೂ ಜಲಚರಗಳು ಅವನತಿಯ ಅಂಚಿನಲ್ಲಿವೆ. ಮರಳು ಅಕ್ರಮಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಹಲವಾರು ಸೇತುವೆಗಳಿಗೂ ಹಾನಿಯಾಗಿವೆ. ಅಕ್ರಮ ದಂಧೆಕೋರರಿಂದಾಗಿ ಸರ್ಕಾರದ ಬೊಕ್ಕಸಕ್ಕೂ ಸಾವಿರಾರು ಕೋಟಿ ರಾಜಸ್ವವೂ ವಂಚನೆಯಾಗಿರುವ ಅನುಮಾನ ಇದೆ ಎಂದಿರುವ ದೂರುದಾರರು, ಮರಳು ಗಣಿಗಾರಿಕೆ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೂಪಿಸಿರುವ ನಿಯಮಗಳು ಹಾಗೂ ಮಾನದಂಡಗಳನ್ನು (OFFICIAL MEMORANDUM, Ministry of Environment & Forests, No.11-83/2005-IA-III(Pt.III) Dated, 9 JUNE 2011 ಹಾಗೂ ಕರ್ನಾಟಕ ಉಪ ಖನಿಜಗಳ ರಿಯಾಯಿತಿ ನಿಯಮಗಳು,1994) ಪಾಲಿಸಲಾಗುತ್ತಿಲ್ಲ ಎಂಬ ಆರೋಪಗಳೂ ಕೇಳಿಬರುತ್ತಿವೆ. 

ರಾಜ್ಯಾದ್ಯಂತ ಅಕ್ರಮ ಮರಳು ಗಣಿಗಾರಿಕೆ ನಿಷೇಧಕ್ಕೆ ಆಗ್ರಹ :

ಅಷ್ಟೇ ಅಲ್ಲ, ಮರಳು ಗಣಿಗಾರಿಕೆಯ ನಿರ್ವಹಣೆಗಾಗಿ ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರು, ಪೊಲೀಸ್ ಅಧಿಕಾರಿಗಳು, ತಹಸೀಲ್ದಾರರು ಸಹಿತ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ‘ಮೇಲ್ವಿಚಾರಣಾ ಸಮಿತಿಗಳು’ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪರಿಶೀಲನೆ ನಡೆಸಬೇಕು, ಎರಡು ತಿಂಗಳಿಗೊಮ್ಮೆ ಸಭೆ ನಡೆಸಿ ಪರಾಮರ್ಶೆ ನಡೆಸಬೇಕೆಂಬ ನಿಯಮವಿದ್ದರೂ ಅಧಿಕಾರಿಗಳು ಈ ವಿಚಾರದಲ್ಲಿ ಆಸಕ್ತಿ ವಹಿಸದಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಸರ್ಕಾರದ ಗಮನಸೆಳೆದಿದ್ದಾರೆ. ಇದೇ ವೇಳೆ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಈ ದಂಧೆಗೆ ನೇರ, ಪರೋಕ್ಷ ಅವಕಾಶ ನೀಡುವ, ಅಕ್ರಮ ಮರಳು ಸಾಗಾಟಕ್ಕೆ ಅವಕಾಶ ಮಾಡಿಕೊಡುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

ರಫೇಲ್ ಮೆರೈನ್ ಜೆಟ್ ಖರೀದಿಗೆ ಅಂತಿಮ ಆಫರ್ ನೀಡಿದ ಬೆನ್ನಲ್ಲೇ ಅಜಿತ್ ದೋವಲ್ ಫ್ರಾನ್ಸ್ ಗೆ ಇಂದಿನಿಂದ ಎರಡು ದಿನಗಳ ಭೇಟಿ

Next Post

ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂದಿನಿಂದ ಪರೀಕ್ಷಾರ್ಥ, ಸ್ವತ್ತಿನ ಇ-ಖಾತಾ ವಿತರಣೆ ಆರಂಭ : ಹೀಗೆ ಡೌನ್ ಲೋಡ್ ಮಾಡಿಕೊಳ್ಳಿ

Next Post
BBMP Head Office Image

ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂದಿನಿಂದ ಪರೀಕ್ಷಾರ್ಥ, ಸ್ವತ್ತಿನ ಇ-ಖಾತಾ ವಿತರಣೆ ಆರಂಭ : ಹೀಗೆ ಡೌನ್ ಲೋಡ್ ಮಾಡಿಕೊಳ್ಳಿ

Su-30MKI

ಎಚ್ಎಎಲ್ ನಿಂದ ಭಾರತೀಯ ವಾಯುಪಡೆಗೆ ಸುಖೋಯ್-30ಎಂಕೆಐ ಯುದ್ಧ ವಿಮಾನದ ಮೊದಲ AL-31FP ಏರೋ ಎಂಜಿನ್ ಹಸ್ತಾಂತರ

Please login to join discussion

Like Us on Facebook

Follow Us on Twitter

Recent News

UK F-35 Fighter Jet

ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

June 15, 2025
ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

June 15, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
UK F-35 Fighter Jet

ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

June 15, 2025
ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

June 15, 2025

BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

June 15, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d