Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಎಚ್ಎಎಲ್ ನಿಂದ ಭಾರತೀಯ ವಾಯುಪಡೆಗೆ ಸುಖೋಯ್-30ಎಂಕೆಐ ಯುದ್ಧ ವಿಮಾನದ ಮೊದಲ AL-31FP ಏರೋ ಎಂಜಿನ್ ಹಸ್ತಾಂತರ

ಸುಖೋಯ್-30ಎಂಕೆಐ ಯುದ್ಧ ವಿಮಾನದಲ್ಲಿನ ಹಳೆಯ ಎಂಜಿನ್ ಅನ್ನು ಬದಲಾಯಿಸುವ ಕಾರ್ಯತಂತ್ರದ ಭಾಗವಾಗಿ ಎಚ್ಎಎಲ್ ಒಟ್ಟು ಎಎಲ್-31ಎಫ್ ಪಿ ವರ್ಗದ 240 ಎಂಜಿನ್ ಗಳನ್ನು ತಯಾರಿಸಲು ಭಾರತೀಯ ವಾಯುಪಡೆಯೊಂದಿಗೆ ಸೆ.09ರಂದು ಒಪ್ಪಂದಕ್ಕೆ ಸಹಿ ಹಾಕಿತ್ತು.

by Bengaluru Wire Desk
October 1, 2024
in Bengaluru Focus, News Wire, Public interest
Reading Time: 1 min read
0
Su-30MKI

ಸುಖೋಯ್-30ಎಂಕೆಐ ಯುದ್ಧ ವಿಮಾನದ ಸಾಂದರ್ಭಿಕ ಚಿತ್ರ. (ಚಿತ್ರಕೃಪೆ : ವಿಕಿಪೀಡಿಯಾ)

ಬೆಂಗಳೂರು/ಕೋರಾಪುಟ್, ಅ.1 www.bengaluruwire.com : ದೇಶದ ರಕ್ಷಣಾ ವ್ಯವಸ್ಥೆಗೆ ಬಲ ತುಂಬಿರುವ ಸುಖೋಯ್-30ಎಂಕೆಐ (Su-30MKI) ಯುದ್ಧ ವಿಮಾನದಲ್ಲಿನ ಹಳೆಯ ಎಂಜಿನ್ ಅನ್ನು ಬದಲಾಯಿಸುವ ಕಾರ್ಯತಂತ್ರದ ಭಾಗವಾಗಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಒಡಿಶಾದಲ್ಲಿನ ಕೊರಾಪುಟ್ ನಲ್ಲಿ ತಯಾರಿಸಿದ ಮೊದಲ ಎಎಲ್-31ಎಫ್ ಪಿ (AL-31FP Aero Engine) ಏರೊ ಎಂಜಿನ್ ಅನ್ನು ಭಾರತೀಯ ವಾಯು ಪಡೆ (Indian Air Force) ಗೆ ಹಸ್ತಾಂತರಿಸಿತು.

ಎಚ್ಎಎಲ್ ಒಟ್ಟು ಎಎಲ್-31ಎಫ್ ಪಿ ವರ್ಗದ 240 ಎಂಜಿನ್ ಗಳನ್ನು ತಯಾರಿಸಲು ಭಾರತೀಯ ವಾಯುಪಡೆಯೊಂದಿಗೆ ಸೆ.09ರಂದು ಒಪ್ಪಂದಕ್ಕೆ ಸಹಿ ಹಾಕಿದ್ದು, ಒಡಿಶಾದ ಕೊರಾಪುಟ್ ನಲ್ಲಿನ ಎಚ್ಎಎಲ್ ಎಂಜಿನ್ ತಯಾರಿಕಾ ಕಾರ್ಖಾನೆಯಲ್ಲಿ ಮಿಗ್ ಕಾಂಪ್ಲೆಕ್ಸ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಾಕೇತ್ ಚತುರ್ವೇದಿ, ರಕ್ಷಣಾ ಉತ್ಪಾದನೆ (Defence Production) ವಿಭಾಗದ ಕಾರ್ಯದರ್ಶಿ ಸಂಜೀವ್ ಕುಮಾರ್ ಹಾಗೂ ಎಚ್ಎಎಲ್ ಪ್ರಧಾನ ವ್ಯವಸ್ಥಾಪಕ ಡಿ.ಕೆ.ಸುನಿಲ್ ಅವರ ಸಮ್ಮುಖದಲ್ಲಿ,  ಭಾರತೀಯ ವಾಯುಪಡೆಯ ಏರ್ ವೈಸ್ ಮಾರ್ಷಲ್ ಕೆ.ಹರಿಶಂಕರ್ ಅವರಿಗೆ ಮೊದಲ ಏರೋ ಎಂಜಿನ್ ಅನ್ನು ಹಸ್ತಾಂತರಿಸಿದರು. ಇದೇ ವೇಳೆ ಕೋರಾಪುಟ್ ಎಡಿಜಿ ಆರ್.ಬಿ.ನಾಗರಾಜ ಐಎಎಫ್ ಗೆ ನೂತನ ಎಂಜಿನ್ ಗೆ ಸಂಬಂಧಿಸಿದ ದಾಖಲೆಯನ್ನು ಹಸ್ತಾಂತರಿಸಿದರು.

ಒಡಿಶಾದ ಕೊರಾಪುಟ್ ನಲ್ಲಿನ ಎಚ್ಎಎಲ್ ಎಂಜಿನ್ ತಯಾರಿಕಾ ಕಾರ್ಖಾನೆಯಲ್ಲಿ ಮಿಗ್ ಕಾಂಪ್ಲೆಕ್ಸ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಾಕೇತ್ ಚತುರ್ವೇದಿ ಭಾರತೀಯ ವಾಯುಪಡೆಯ ಏರ್ ವೈಸ್ ಮಾರ್ಷಲ್ ಕೆ.ಹರಿಶಂಕರ್ ಅವರಿಗೆ ಮೊದಲ ಏರೋ ಎಂಜಿನ್ ಅನ್ನು ಹಸ್ತಾಂತರಿಸಿದರು.

ಸೆಪ್ಟೆಂಬರ್ 2 ರಂದು ರಕ್ಷಣೆಗೆ ಸಂಬಂಧಿಸಿದ ಕ್ಯಾಬಿನೆಟ್ ಸಮಿತಿಯು ₹26,000 ಕೋಟಿಗೆ (US$3.1 ಶತಕೋಟಿ) ಇಂತಹ 240 ಎಂಜಿನ್‌ಗಳನ್ನು ಖರೀದಿಸಲು ಅನುಮೋದನೆ ನೀಡಿತ್ತು. ಅದರ ಮುಂದುವರೆದ ಭಾಗವಾಗಿ ಸೆ.9ರಂದು ಎಚ್ಎಎಲ್ ಮತ್ತು ಐಎಎಫ್ ನಡುವೆ ಒಪ್ಪಂದಕ್ಕೆ ಸಹಿ ಹಾಕಿದ್ದು, 8 ನೇ ವರ್ಷಗಳಲ್ಲಿ 240 ಏರೋ ಎಂಜಿನ್ ಗಳನ್ನು ಎಚ್ಎಎಲ್ ನ ಕೊರಾಪುಟ್ ನಲ್ಲಿ ತಯಾರಿಸಿ ವಾಯುಪಡೆಗೆ ನೀಡಲಾಗುತ್ತದೆ. ಈ ಎಂಜಿನ್ ಗಳಲ್ಲಿ ಶೇ.54ರಷ್ಟು ಸ್ವದೇಶಿ ತಂತ್ರಜ್ಞಾನವಿದೆ ಎಂದು ಮೂಲಗಳು ತಿಳಿಸಿವೆ.

ಒಪ್ಪಂದಕ್ಕೆ ಸಹಿ ಹಾಕಿದ ಎರಡು ವಾರಗಳಲ್ಲಿ ಮೊದಲ ಎಂಜಿನ್ ಅನ್ನು ತಲುಪಿಸುವಲ್ಲಿ ಎಚ್ಎಎಲ್ ನ ಪ್ರಯತ್ನಗಳನ್ನು ರಕ್ಷಣಾ ಉತ್ಪಾದನೆ ವಿಭಾಗದ ಕಾರ್ಯದರ್ಶಿ ಸಂಜೀವ್ ಕುಮಾರ್ ಮುಕ್ತಕಂಠದಿಂದ ಶ್ಲಾಘಿಸಿದರು. “ಈ ಪ್ರಮುಖ ಮೈಲಿಗಲ್ಲು ಎಚ್ಎಎಲ್ ನ ಏರೋ ಎಂಜಿನ್ ಉತ್ಪಾದನಾ ಸಾಮರ್ಥ್ಯ ಮತ್ತು ಐಎಎಫ್ ನ ಸು-30ಎಂಕೆಐ ಯುದ್ಧವಿಮಾನ ಹಾರಾಟ ಬೆಂಬಲಿಸುವ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ. ಕೋರಾಪುಟ್ ವಿಭಾಗವು ಏರೋ ಎಂಜಿನ್ ತಯಾರಿಕೆಯ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಕರಗತ ಮಾಡಿಕೊಂಡಿದೆ. ಜಾಗತಿಕ ಮಟ್ಟದ ಉನ್ನತ ಮೂಲಸೌಕರ್ಯವನ್ನು ಹೊಂದಿರುವುದು ಸಂತೋಷಕರ. ಎಚ್ಎಎಲ್ ನ ಕೋರಾಪುಟ್ ವಿಭಾಗವು ಕೇವಲ ಭಾರತೀಯ ವಾಯುಪಡೆ ಮಾತ್ರವಲ್ಲದೆ  ಜಾಗತಿಕ ಗ್ರಾಹಕರಿಗೂ ಎಂಜಿನ್ ರಫ್ತು ಮಾಡುವಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತದೆ ಎಂದು ಅವರು ಹೇಳಿದರು.

ಇದಲ್ಲದೆ ಅವರು ಕೊರಾಪುಟ್‌ನ ಉದ್ಯೋಗಿಗಳನ್ನು ಸ್ವಾವಲಂಬನೆಯ ಪ್ರಯತ್ನಗಳ ಮೇಲೆ ಕೇಂದ್ರೀಕರಿಸಲು ಮತ್ತು ಗುಣಮಟ್ಟದ 4.0 ಪ್ರಕ್ರಿಯೆಗಳನ್ನು ಅಳವಡಿಸಿಕೊಳ್ಳಲು ಕರೆ ನೀಡಿದರು.

240 ಇಂಜಿನ್‌ಗಳನ್ನು ಸಮಯೋಚಿತವಾಗಿ ತಲುಪಿಸಲು ಎಚ್ಎಎಲ್ ಬದ್ಧ :

ಎಚ್ಎಎಲ್ ನ ಸಿಎಂಡಿ ಡಾ. ಸುನಿಲ್ ತಮ್ಮ ಉದ್ಘಾಟನಾ ಭಾಷಣದಲ್ಲಿ, “240 ಇಂಜಿನ್‌ಗಳನ್ನು ಸಮಯೋಚಿತವಾಗಿ ತಲುಪಿಸಲು ಎಚ್ಎಎಲ್ ಬದ್ಧವಾಗಿದೆ. ಕೋರಾಪುಟ್ ವಿಭಾಗವು ಪೂರ್ವಭಾವಿಯಾಗಿ ಏರೋ ಎಂಜಿನ್ ತಯಾರಿಕೆಗೆ ಅಗತ್ಯವಾದ ಸಾಮಗ್ರಿಗಳನ್ನು ಸಂಗ್ರಹಿಸುತ್ತದೆ ಮತ್ತು ಐಎಎಫ್ ನ ನಿರೀಕ್ಷೆಗಳನ್ನು ಪೂರೈಸಲು ಸಾಮರ್ಥ್ಯ ವರ್ಧನೆಯತ್ತ ಕೆಲಸ ಮಾಡುತ್ತದೆ. ಸರ್ಕಾರವು ರೋಮಾಂಚಕ ಪರಿಸರ ವ್ಯವಸ್ಥೆಯನ್ನು ನಿರ್ಮಿಸಲು ಆತ್ಮನಿರ್ಭರತೆಯನ್ನು ರೂಪಿಸಿದೆ. ವಾಯುಯಾನ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಸಂಪೂರ್ಣ ಇಂಜಿನ್ ಉತ್ಪಾದನಾ ಪ್ರಕ್ರಿಯೆಯಲ್ಲಿ, ಮುಂದಿನ 2-3 ವರ್ಷಗಳಲ್ಲಿ ಶೇ.40 ರಿಂದ 50 ಕ್ಕಿಂತ ಹೆಚ್ಚಿನ ಕೆಲಸದ ಪಾಲನ್ನು ಭಾರತೀಯ ಕೈಗಾರಿಕೆಗಳಲ್ಲಿ ತೊಡಗಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ. ರಕ್ಷಣಾ ಸಚಿವಾಲಯದ ಬೆಂಬಲ ಮತ್ತು ಮಾರ್ಗದರ್ಶನದೊಂದಿಗೆ, ನಾವು ರಕ್ಷಣೆಯಲ್ಲಿ ಆತ್ಮನಿರ್ಭರತೆಯನ್ನು ಸಾಧಿಸಲು ಶ್ರಮಿಸುತ್ತೇವೆ ಮತ್ತು ವಿಕಸಿತ ಭಾರತದ ಕಡೆಗೆ ಎಚ್ಎಎಲ್ ಅನ್ನು ಕೊಂಡೊಯ್ಯುತ್ತೇವೆ” ಎಂದು ಅವರು ತಿಳಿಸಿದರು.

ಏರ್ ವೈಸ್ ಮಾರ್ಷಲ್ ಕೆ.ಹರಿಶಂಕರ್ ಅವರು ಮಾತನಾಡಿ, ಮಿಗ್-21 (MiG-21), ಮಿಗ್-29 (MiG-29) ಮತ್ತು ಐಎಎಫ್ ನ ಸು-30ಎಂಕೆಐ (Su-30MKI) ವರ್ಗದ ಯುದ್ಧ ವಿಮಾನಗಳನ್ನು ಬೆಂಬಲಿಸುವಲ್ಲಿ ಕೋರಾಪುಟ್ ವಿಭಾಗ ಮತ್ತು ಅದರ ಕಾರ್ಯಪಡೆಯ ಬಲವಾದ ಬದ್ಧತೆ, ಗಮನಾರ್ಹ ಕೊಡುಗೆ ಮತ್ತು ಸ್ಥಿತಿಸ್ಥಾಪಕತ್ವವನ್ನು ಶ್ಲಾಘಿಸಿದರು. 

ಸುಖೋಯ್-30ಎಂಕೆಐ ವಿಮಾನ ಹಾಗೂ ಅದರ ಎಎಲ್-31ಎಫ್ ಪಿ ವರ್ಗದ ಏರೋ ಎಂಜಿನ್ ಚಿತ್ರ. (ಚಿತ್ರಕೃಪೆ : ವಿಕಿಪೀಡಿಯಾ)

ಕೋರಾಪುಟ್ ವಿಭಾಗದ ವಿಶೇಷತೆಯೇನು?:

ಸುಖೋಯ್ ಇಂಜಿನ್ ವಿಭಾಗ, ಕೊರಾಪುಟ್ ಒಂದು ಅತ್ಯಾಧುನಿಕ ವಿಭಾಗವಾಗಿದ್ದು, ಸು-30ಎಂಕೆಐ ವಿಮಾನಕ್ಕೆ ಅಗತ್ಯವಾಗಿರುವ ಎಂಜಿನ್ ತಯಾರಿಸಲು ಕಚ್ಚಾ ವಸ್ತುಗಳ ಹಂತದಿಂದ ಅಂತಿಮ ಎಂಜಿನ್‌ನವರೆಗೆ ಎಂಜಿನ್‌ಗಳನ್ನು ತಯಾರಿಸಲು ಎಚ್ಎಎಲ್ ನಿಂದ ರಚಿಸಲಾಗಿದೆ. ಎಂಜಿನ್ ಹಸ್ತಾಂತರ ಕಾರ್ಯಕ್ರಮದಲ್ಲಿ ಎಚ್ಎಎಲ್ ನ ಎಚ್‌ಆರ್ ಮತ್ತು ಹಣಕಾಸು ನಿರ್ದೇಶಕ ಎ.ಬಿ ಪ್ರಧಾನ್, ಒಡಿಶಾ ಸರ್ಕಾರದ ಕಾರ್ಯನಿರ್ವಾಹಕ ನಿರ್ದೇಶಕ (ಕೋರಾಪುಟ್) ಎಸ್ ಎಂ ಜೆನಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸು-30ಎಂಕೆಐ ಫೈಟರ್ ಏರ್ ಕ್ರಾಫ್ಟ್ ಬಗ್ಗೆ :

ಸು-30ಎಂಕೆಐ ಫೈಟರ್ ಏರ್ ಕ್ರಾಫ್ಟ್ ಎರಡು ಆಸನಗಳ, ಟ್ವಿನ್ ಜೆಟ್ ಮಲ್ಟಿರೋಲ್ ಏರ್ ಸುಪೀರಿಯಾರಿಟಿ ಯುದ್ಧವಿಮಾನವಾಗಿದ್ದು, ರಷ್ಯಾದ ವಿಮಾನ ತಯಾರಕ ಸಂಸ್ಥೆ ಸುಖೋಯ್ ಇದನ್ನು ಅಭಿವೃದ್ಧಿಪಡಿಸಿದೆ. ಭಾರತ ಮತ್ತು ರಷ್ಯಾ ರಕ್ಷಣಾ ಒಪ್ಪಂದದ ಭಾಗವಾಗಿ, ದೇಶದಲ್ಲಿ ಭಾರತೀಯ ವಾಯುಪಡೆಗಾಗಿ (IAF) ಭಾರತದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಪರವಾನಗಿ ಪಡೆದಿದ್ದು, ದೇಶದಲ್ಲೇ ಇದನ್ನು ನಿರ್ಮಿಸುತ್ತದೆ. ಸು-30ಎಂಕೆಐ ಯುದ್ಧ ವಿಮಾನವು, ಸುಖೋಯ್ ಸು-30 (Sukhoi Su-30)ರ ರೂಪಾಂತರವಾಗಿದೆ. ಈ ಯುದ್ಧವಿಮಾನವು ಭಾರೀ ಹಾಗೂ ಎಲ್ಲಾ ಹವಾಮಾನಕ್ಕೆ ಹೊಂದಿಕೊಳ್ಳುವ, ದೀರ್ಘ-ಶ್ರೇಣಿಯ ಯುದ್ಧವಿಮಾನವಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂದಿನಿಂದ ಪರೀಕ್ಷಾರ್ಥ, ಸ್ವತ್ತಿನ ಇ-ಖಾತಾ ವಿತರಣೆ ಆರಂಭ : ಹೀಗೆ ಡೌನ್ ಲೋಡ್ ಮಾಡಿಕೊಳ್ಳಿ

Next Post

Science News | “ಧ್ವನಿ ತರಂಗಗಳು ಸಸ್ಯಗಳ ಬೆಳವಣಿಗೆ ಹೆಚ್ಚಿಸುತ್ತವೆ ; ಸೂಕ್ಷ್ಮಜೀವಿಗಳು ಸಂಗೀತಕ್ಕೆ ಪ್ರತಿಕ್ರಿಯಿಸುತ್ತವೆ”

Next Post

Science News | "ಧ್ವನಿ ತರಂಗಗಳು ಸಸ್ಯಗಳ ಬೆಳವಣಿಗೆ ಹೆಚ್ಚಿಸುತ್ತವೆ ; ಸೂಕ್ಷ್ಮಜೀವಿಗಳು ಸಂಗೀತಕ್ಕೆ ಪ್ರತಿಕ್ರಿಯಿಸುತ್ತವೆ"

Mysuru Dasara 2024 | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ : ರಾಜವಂಶಸ್ಥರ ನವರಾತ್ರಿ ಖಾಸಗಿ ದರ್ಬಾರ್ ಹೇಗಿರುತ್ತೆ?

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d