Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

  • Bengaluru Focus

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

  • Bengaluru Focus

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Others

ವ್ಯಾಪಾರದ ಜೊತೆಗೆ ಸಾಮಾಜಿಕ ಜವಾಬ್ದಾರಿಯ ಹೊಸ ಮಾನದಂಡ ರೂಪಿಸಿದ ರುವಾರಿ ರತನ್ ಟಾಟಾ ಇನ್ನಿಲ್ಲ

ದೇಶಾದ್ಯಂತ ಕೋಟ್ಯಾಂತರ ಯುವ ಮನಸ್ಸುಗಳಿಗೆ ಸದಾ ಪ್ರೇರಣಾಶಕ್ತಿಯಾಗಿ, ಮಾದರಿ ವ್ಯಕ್ತಿಯಾಗಿ ಜೀವನ ನಡೆಸಿ ಮತ್ತೆ ಬಾರದ ಲೋಕದತ್ತ ನಡೆದು ಹೋಗಿದ್ದಾರೆ ರತನ್ ಟಾಟಾ.

by Bengaluru Wire Desk
October 10, 2024
in Others
Reading Time: 2 mins read
0

ಮುಂಬೈ, ಅ.10 www.bengaluruwire.com : ಟಾಟಾ ಗ್ರೂಪ್ (TATA Group)ಅನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದು ಜಾಗತಿಕ ಮಟ್ಟದಲ್ಲಿ ಭಾರತದ ಕೈಗಾರಿಕೆಗಳಿಗೆ ಮನ್ನಣೆ ತಂದ ದೇಶದ ಹೆಮ್ಮೆಯ ಕೈಗಾರಿಕೋದ್ಯಮಿ ರತನ್ ಟಾಟಾ (Ratan Tata) ಬುಧವಾರ ರಾತ್ರಿ ಅಸ್ತಂಗತರಾದರು.

ಭಾರತೀಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಟಾಟಾ ಗ್ರೂಪ್ ಅನ್ನು ಜಾಗತಿಕವಾಗಿ ಹೆಸರಾಂತ ಸಂಘಟಿತ ಸಂಸ್ಥೆಯಾಗಿ ಪರಿವರ್ತಿಸಿದ ಕೀರ್ತಿಗೆ ಪಾತ್ರರಾಗಿದ್ದು, ಅವರು 86 ನೇ ವಯಸ್ಸಿನಲ್ಲಿ ನಿಧನರಾದರು ಎಂದು ಕಂಪನಿಯು ಬುಧವಾರ ತಡರಾತ್ರಿ ತಿಳಿಸಿದೆ.  

ರತನ್ ಟಾಟಾ ಅವರು ಬುಧವಾರ ಮುಂಬೈನ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದರು, ಚಿಕಿತ್ಸೆ ಫಲಕಾತಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟಾಟಾಗ್ರೂಪ್, “ನಿಜವಾದ ಅಸಾಧಾರಣ ನಾಯಕರಾದ ಶ್ರೀ ರತನ್ ನೇವೆಲ್ ಟಾಟಾ ಅವರಿಗೆ ನಾವು ವಿದಾಯ ಹೇಳುತ್ತೇವೆ” ಎಂದು ಪೋಸ್ಟ್ ಮಾಡಿದೆ. ಟಾಟಾ ಸನ್ಸ್ ಅಧ್ಯಕ್ಷ ಎನ್.ಚಂದ್ರಶೇಖರನ್ ಬುಧವಾರ ತಡರಾತ್ರಿ ಕೈಗಾರಿಕೋದ್ಯಮಿಯು ನಿಧನರಾಗಿದ್ದನ್ನು ದೃಢಪಡಿಸಿದ್ದಾರೆ. ಈ ಸಂದರ್ಭದಲ್ಲಿ ಟಾಟಾ “ಸ್ನೇಹಿತ, ಮಾರ್ಗದರ್ಶಕ ಮತ್ತು ಮಾರ್ಗದರ್ಶಿ” ಆಗಿದ್ದರು ಎಂದು ಸ್ಮರಿಸಿದ್ದಾರೆ.

“ಅತೀವ ನಷ್ಟ ಹಾಗೂ ಮನದಾಳದ ಭಾವನೆಯೊಂದಿಗೆ ನಾವು ರತನ್ ನೇವಲ್ ಟಾಟಾ ಅವರಿಗೆ ವಿದಾಯ ಹೇಳುತ್ತೇವೆ. ಅವರ ಅಗಾಧ ಕೊಡುಗೆಗಳು ಟಾಟಾ ಸಮೂಹವನ್ನು ಮಾತ್ರವಲ್ಲದೆ ನಮ್ಮ ರಾಷ್ಟ್ರದ ರಚನೆಯನ್ನು ರೂಪಿಸಿವೆ” ಎಂದು ಟಾಟಾ ಸನ್ಸ್ ಅಧ್ಯಕ್ಷರು ಹೇಳಿದ್ದಾರೆ.

ಪ್ರಧಾನಿ ಮೋದಿಯಿಂದ ಶೃದ್ಧಾಂಜಲಿ ಸಲ್ಲಿಕೆ :

ಪ್ರಧಾನಿ ನರೇಂದ್ರ ಮೋದಿ ಅವರು ಉದ್ಯಮಿ ರತನ್ ಟಾಟಾ ಅವರೊಗೆ ತಮ್ಮ ಟ್ವೀಟ್‌ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಟಾಟಾ ಅವರನ್ನು “ದೃಷ್ಟಿವಂತ” ಎಂದು ಬಣ್ಣಿಸಿದ್ದಾರೆ. ಅಲ್ಲದೆ ತಮ್ಮ ಪೋಸ್ಟ್ ನಲ್ಲಿ ಪ್ರಧಾನಿ, “ನಾನು ಮುಖ್ಯಮಂತ್ರಿಯಾಗಿದ್ದಾಗ ಅವರನ್ನು ಗುಜರಾತ್‌ನಲ್ಲಿ ಆಗಾಗ ಭೇಟಿಯಾಗುತ್ತಿದ್ದೆ. ನಾವು ವಿವಿಧ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದೆವು. ಅವರ ದೃಷ್ಟಿಕೋನಗಳನ್ನು ನಾನು ಬಹಳ ಪುಷ್ಟೀಕರಿಸಿದ್ದೇನೆ. ನಾನು ದೆಹಲಿಗೆ ಬಂದಾಗ ಈ ಸಂವಾದಗಳು ಮುಂದುವರೆಯುತ್ತಿದ್ದವು. ನನಗೆ ವೈಯುಕ್ತಿಕವಾಗಿ ತೀವ್ರ ನೋವಾಗಿದೆ.  ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಆ ದೇವರು ನೀಡುವಂತಾಗಲಿ” ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ರತನ್ ಟಾಟಾ ಅವರು ಕೇವಲ ಉದ್ಯಮಿ ಮಾತ್ರ ಆಗಿರಲಿಲ್ಲ, ಬದಲಿಗೆ ವ್ಯಾಪಾರದೊಂದಿಗೆ ಸಾಮಾಜಿಕ ಜವಾಬ್ದಾರಿಗಳಿಗೆ ಹೊಸ ಮಾನದಂಡವನ್ನು ಸ್ಥಾಪಿಸಿದ ಭಾರತೀಯ ಉದ್ಯಮದ ಆಧಾರಸ್ತಂಭವಾಗಿದ್ದರು.  

1937ರಲ್ಲಿ ಮುಂಬೈನಲ್ಲಿ ಜನನ :

ರತನ್ ನೇವಲ್ ಟಾಟಾ ಅವರು ತಮ್ಮ ಅಜ್ಜಿ ನವಾಜ್ಬಾಯಿ ಟಾಟಾ ಅವರೊಂದಿಗಿರುವ ಅಪರೂಪದ ಫೊಟೊ.

ರತನ್ ಟಾಟಾ ಅವರು 28 ಡಿಸೆಂಬರ್ 1937 ರಂದು ಮುಂಬೈನಲ್ಲಿ ಜನಿಸಿದರು. ಅವರು ಟಾಟಾ ಗ್ರೂಪ್ ಪರಂಪರೆಯ ಭಾಗವಾದ ವಿಶೇಷ ಕೈಗಾರಿಕೋದ್ಯಮಿ ಕುಟುಂಬದಲ್ಲಿ ಬೆಳೆದರು. ರತನ್ ಟಾಟಾ ಅವರು ಟಾಟಾ ಗ್ರೂಪ್ ಸಂಸ್ಥಾಪಕ ಜಮ್ಸೆಟ್ಜಿ ಟಾಟಾ ಅವರ ಕುಟುಂಬದಿಂದ ಬಂದವರು, ಅವರು ಭಾರತೀಯ ಉದ್ಯಮದಲ್ಲಿ ಟಾಟಾ ಬ್ರಾಂಡ್ನ ಅಡಿಪಾಯವನ್ನು ಹಾಕಿದರು. ಅವರ ತಾಯಿಯ ಹೆಸರು ಸುನು ಟಾಟಾ, ಮತ್ತು ಅವರು ನೌಶರ್ವಾಂಜಿ ಟಾಟಾ ಅವರ ಮಗ. ರತನ್ ಟಾಟಾ ಅವರ ಪೋಷಕರು ಅವರು 10 ವರ್ಷದವರಾಗಿದ್ದಾಗ ವಿಚ್ಛೇದನ ಪಡೆದರು. ಇದಾದ ಬಳಿಕ ಅವರನ್ನು ಅವರ ಅಜ್ಜಿ ನವಾಜ್ಬಾಯಿ ಟಾಟಾ ಸಾಕಿ ಸಲುಹಿದರು.

ರತನ್ ಟಾಟಾ ತಮ್ಮ ಆರಂಭಿಕ ಶಿಕ್ಷಣವನ್ನು ಮುಂಬೈನ ಕ್ಯಾಥೆಡ್ರಲ್ ಮತ್ತು ಜಾನ್ ಕಾನನ್ ಶಾಲೆಯಲ್ಲಿ ಪೂರ್ಣಗೊಳಿಸಿದರು. ತರುವಾಯ, ಅವರು ಅಮೆರಿಕಕ್ಕೆ ತೆರಳಿದರು, ಅಲ್ಲಿ ಅವರು ಕಾರ್ನೆಲ್ ವಿಶ್ವವಿದ್ಯಾಲಯದಿಂದ ಆರ್ಕಿಟೆಕ್ಚರ್ ಮತ್ತು ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. 

ಯುವಕರಾಗಿದ್ದಾಗ ರತನ್ ಟಾಟಾ

1962ರಲ್ಲಿ ವೃತ್ತಿ ಜೀವನ ಆರಂಭ :

ರತನ್ ಟಾಟಾ ಅವರು 1962 ರಲ್ಲಿ ಟಾಟಾ ಗ್ರೂಪ್‌ನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಆ ಸಂದರ್ಭದಲ್ಲಿ ಅವರು ಟಾಟಾ ಸ್ಟೀಲ್‌ನ ಜೆಮ್‌ಶೆಡ್‌ಪುರ ಸ್ಥಾವರದಲ್ಲಿ ಕೆಲಸಗಾರರೊಂದಿಗೆ ಕೆಲಸ ಮಾಡಲು ಪ್ರಾರಂಭಿಸಿದರು. ಆಗ ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಮತ್ತು ಕಾರ್ಮಿಕರೊಂದಿಗೆ ಸಂವಹನದ ಕಲೆಯ ಬಗ್ಗೆ ಕಲಿತರು.

1991ರಲ್ಲಿ ಟಾಟಾ ಗ್ರೂಪ್ ಆಡಳಿತ ಕೈಗೆತ್ತಿಕೊಂಡರು :

1991 ರಲ್ಲಿ, ಜೆಆರ್‌ಡಿ ಟಾಟಾ ನಿವೃತ್ತರಾದ ಬಳಿಕ, ರತನ್ ಟಾಟಾ ಅವರು ಟಾಟಾ ಗ್ರೂಪ್‌ನ ಆಡಳಿತ ಕೈಗೆತ್ತಿಕೊಂಡರು. ಆ ಸಮಯದಲ್ಲಿ, ಟಾಟಾ ಗ್ರೂಪ್ ಕೆಲವು ಸಾಂಪ್ರದಾಯಿಕ ಮತ್ತು ಸುರಕ್ಷಿತ ವ್ಯವಹಾರಗಳ ಮೇಲೆ ಮಾತ್ರ ತನ್ನ ಗಮನ ಕೇಂದ್ರೀಕರಿಸಿತ್ತು. ಆದರೆ ರತನ್ ಟಾಟಾ ಅವರ ಆಲೋಚನೆ ಬಹಳ ವಿಭಿನ್ನವಾಗಿತ್ತು. ಅವರು ತಮ್ಮ ಉದ್ಯಮ ಸಮೂಹವನ್ನು ಜಾಗತಿಕ ಹಂತಕ್ಕೆ ಕೊಂಡೊಯ್ಯಲು ಬಯಸಿದ್ದರು. ಅವರ ನಾಯಕತ್ವದಲ್ಲಿ ಟಾಟಾ ಗ್ರೂಪ್ ಅನೇಕ ಆವಿಷ್ಕಾರಗಳನ್ನು ಮಾಡಿತು ಮತ್ತು ಹೊಸ ಕ್ಷೇತ್ರಗಳಿಗೆ ಉದ್ಯಮ ತೆರೆದುಕೊಂಡು ವಿಸ್ತರಣೆಯಾಯಿತು. ಒಟ್ಟಾರೆ ದೇಶಾದ್ಯಂತ ಕೋಟ್ಯಾಂತರ ಯುವ ಮನಸ್ಸುಗಳಿಗೆ ಕೇವಲ ಉದ್ಯಮ ಮತ್ತು ವ್ಯಾಪಾರಕ್ಕೆ ಸೀಮಿತವಾಗದೆ ಸಮಾಜವನ್ನು ಸುಧಾರಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟು ಸ್ಪೂರ್ತಿ ಸೆಲೆಯಾಗಿದ್ದರು.

ಅವರ ಬದುಕು ಮುಂದಿನ ಜನಾಂಗಕ್ಕೆ ಮಾದರಿಯಾಗುವಂತೆ ಜೀವನ ನಡೆಸಿ ಮತ್ತೆ ಬಾರದ ಲೋಕದತ್ತ ನೆಡೆದಿದ್ದಾರೆ.

ಮಾನವೀಯತೆ ಹಾಗೂ ಪ್ರಾಣಿ ಪ್ರೀತಿಯ ಬಗ್ಗೆ ರತನ್ ಟಾಟಾ ಅವರು ಪೋಸ್ಟ್ ಮಾಡಿದ ಈ ಕೆಳಕಂಡ, ಇದೊಂದು ಸಂದೇಶ ಸಾಕು ಎಲ್ಲವನ್ನು ಮನದಟ್ಟು ಮಾಡಲು :

Now that the monsoons are here, a lot of stray cats and dogs take shelter under our cars. It is important to check under our car before we turn it on and accelerate to avoid injuries to stray animals taking shelter. They can be seriously injured, handicapped and even killed if we… pic.twitter.com/BH4iHJJyhp

— Ratan N. Tata (@RNTata2000) July 4, 2023

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW REALITY CHECK | ಕುಂದಾಪುರ ರೈಲು ನಿಲ್ದಾಣಕ್ಕೆ ಸಾರ್ವಜನಿಕ ಸಾರಿಗೆ ಕೊರತೆ : ಖಾಸಗಿ ಆಟೋ- ಟ್ಯಾಕ್ಸಿಗಳದ್ದೇ ದರ್ಬಾರ್!!

Next Post

ದಸರಾ ಧಮಾಖಾ ; ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ 6,498 ಕೋಟಿ ರೂ. ತೆರಿಗೆ ಹಂಚಿಕೆ

Next Post
ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

ದಸರಾ ಧಮಾಖಾ ; ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ 6,498 ಕೋಟಿ ರೂ. ತೆರಿಗೆ ಹಂಚಿಕೆ

Fortified rice | ದೇಶದಲ್ಲಿ ರಕ್ತಹೀನತೆ ಹೋಗಲಾಡಿಸಲು ಕೇಂದ್ರದ ಪಡಿತರ ಅಕ್ಕಿಗೆ ಶೇ.1ರಷ್ಟು ಪೌಷ್ಟಿಕಾಂಶ ಸೇರ್ಪಡೆ

Please login to join discussion

Like Us on Facebook

Follow Us on Twitter

Recent News

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d