Monday, June 9, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

ಬೆಂಗಳೂರಿನಲ್ಲಿ ಮಳೆ ಆರ್ಭಟ : ಸಾವಿರಾರು ಮನೆಗಳಿಗೆ ನೀರು ನುಗ್ಗಿ ಅವಾಂತರ, ಕಟ್ಟಡ ಕುಸಿದು ಹಲವು ಕಾರ್ಮಿಕರು ಸಿಲುಕಿರುವ ಶಂಕೆ ; ಕೆಂಗೇರಿಯಲ್ಲಿ ಅಣ್ಣ- ತಂಗಿ ಕಾಣೆ

ಕೆಲವು ಅಪಾರ್ಟ್ಮೆಂಟ್ ಗಳನ್ನು ಮುಂಜಾಗ್ರತೆಯ ಕ್ರಮವಾಗಿ 8 ದಿನಗಳ ಕಾಲ ಮುಚ್ಚಲು ಸೂಚನೆ | ಎಸ್ ಡಿಆರ್ ಎಫ್ ಹಾಗೂ ಎನ್ ಡಿಆರ್ ಎಫ್ ತಂಡಗಳ ನಿಯೋಜನೆ | ಕಳೆದ 48 ಗಂಟೆಗಳಿಂದ ಮಳೆ ಪೀಡಿತ ಪ್ರದೇಶದಲ್ಲಿ ನಿರಂತರ ಪರಿಹಾರ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳು | ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಾಳೆ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ

by Bengaluru Wire Desk
October 22, 2024
in Bengaluru Focus, Public interest
Reading Time: 1 min read
0
Constructing Building Collapse In Bangalore

ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು, ಹಲವು ಕಾರ್ಮಿಕರು ಕಟ್ಟಡ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು, ಅ.22 www.bengaluruwire.com : ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ನಿರಂತರ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ, ಮರ, ಮರಗಳ ಕೊಂಬೆ ಬಿದ್ದ, ರಸ್ತೆಗಳಲ್ಲಿ ನೀರು ನಿಂತಿರುವ ಸೇರಿದಂತೆ ಒಟ್ಟಾರೆ 1,328 ದೂರುಗಳು ಮಧ್ಯಾಹ್ನ 3 ಗಂಟೆಯವರೆಗೆ ಪಾಲಿಕೆಯ 8 ವಲಯ ನಿಯಂತ್ರಣ ಕೊಠಡಿಯಲ್ಲಿ ದಾಖಲಾಗಿದ್ದು, ಆ ಪೈಕಿ 590 ದೂರುಗಳನ್ನು ಪರಿಹರಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಧ್ಯೆ ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಈ ಕಟ್ಟಡ ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರಬಹುದು ಎಂದು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ. ಇನ್ನೊಂದೆಡೆ ಕೆಂಗೇರಿ ಬಳಿ ಅಪ್ರಾಪ್ತ ವಯಸ್ಸಿನ ಅಣ್ಣ ತಂಗಿ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ನಾಪತ್ತೆಯಾದವರು ಶ್ರೀನಿವಾಸ್ (13) ಹಾಗೂ ಆತನ ತಂಗಿ (11) ಎಂದು ತಿಳಿದು ಬಂದಿದೆ.

ನಗರದಲ್ಲಿ ಮಂಗಳವಾರ ಮಧ್ಯಾಹ್ನದ ಮೇಲೆ ಆರಂಭವಾದ ಮಳೆ ಸಾಕಷ್ಟು ಕಡೆಗಳಲ್ಲಿ ಅವಾಂತರ ಸೃಷ್ಟಿಸಿದೆ. ಹವಾಮಾನ ಇಲಾಖೆಯು ಮಳೆ ಆರ್ಭಟದ ಮುನ್ಸೂಚನೆ ನೀಡಿದ್ದಾರೆ. ಈ ಮಧ್ಯೆ ಮಲ್ಲೇಶ್ವರದಲ್ಲಿ ಆಟೋ ಬೈಕ್ ಗಳ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದು ವಾಹನಗಳು ಜಖಂಗೊಂಡಿದೆ. ಈ ಸಂದರ್ಭದಲ್ಲಿ ಆಟೋದಲ್ಲಿ ಒಬ್ಬರು ಮಹಿಳೆ ಹಾಗೂ ಇಬ್ಬರು ಪುರುಷರು ಇದ್ದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊರಮಾವು, ಅಗರ ಕಡೆಗಳಲ್ಲಿ ಮಳೆನೀರು ನಿಂತು ರಸ್ತೆಗಳಲ್ಲಿ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ. ಈ ಮಧ್ಯೆ ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಮುಂಜಾಗ್ರತೆಯ ದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿನ ಎಲ್ಲಾ ತಾಲೂಕಿನ ಅಂಗಡವಾಡಿ ಕೇಂದ್ರ, ಖಾಸಗಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಯಲಹಂಕ ವಲಯದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿ ಅವಾಂತರ :

ಯಲಹಂಕದ ಕೇಂದ್ರೀಯ ವಿಹಾರ ಪ್ರದೇಶದಲ್ಲಿ ಮಳೆಹಾನಿ ಪ್ರದೇಶದಲ್ಲಿ ಬೋಟ್ ಬಳಸಿ ನಿವಾಸಿಗಳ ಸಂರಕ್ಷಣೆಯಲ್ಲಿ ತೊಡಗಿರುವ ರಾಜ್ಯ ವಿಪತ್ತು ನಿರ್ವಹಣಾ ಸಿಬ್ಬಂದಿ.

ಇಲ್ಲಿನ ನರಸಾಪುರ ಕೆರೆ ಮತ್ತು ದೊಡ್ಡಬೊಮ್ಮಸಂದ್ರ ಕೆರೆ ತುಂಬಿ ಕೋಡಿ ಮೂಲಕ ಬರುವ ನೀರು ನೀರುಗಾಲುವೆಗಳಲ್ಲಿ ತುಂಬಿ ಹರಿಯುತ್ತಿದೆ. ಇದರ ಪರಿಣಾಮವಾಗಿ ಬ್ಯಾಟರಾಯನಪುರ ವ್ಯಾಪ್ತಿಯ ಭದ್ರಪ್ಪ ಲೇಔಟ್, ಬಾಲಾಜಿ ಲೇಔಟ್, ಸುರಭಿ ಲೇಔಟ್, ಸೋಮೇಶ್ವರ ಬಡಾವಣೆ ಸೇರಿದಂತೆ ಹಲವು ಕಡೆಗಳಲ್ಲಿ ಜಲಾವೃತವಾಗಿದೆ.

ಇನ್ನು ಯಲಹಂಕ ವಲಯದಲ್ಲಿ ಮಳೆಯಿಂದಾಗಿ ವಿದ್ಯಾರಣ್ಯಪುರ, ಬ್ಯಾಟರಾಯನಪುರ ಉಪವಿಭಾಗ, ಕೊಡಿಗೇನಹಳ್ಳಿ, ಯಲಹಂಕ ಉಪವಿಭಾಗ ಹಾಗೂ ಯಲಹಂಕ ಉಪನಗರ ಉಪವಿಭಾಗದಲ್ಲಿ ಒಟ್ಟಾರೆ 1030 ಮನೆಗಳಿಗೆ ನೀರು ನುಗ್ಗಿದೆ. ಇದರಿಂದಾಗಿ ಸಾಮಾನ್ಯ ಜನರು ತೊಂದರೆ ಅನುಭವಿಸುವಂತಾಗಿದೆ. ಯಲಹಂಕ ವಲಯದಲ್ಲಿನ ಭದ್ರಪ್ಪ ಲೇಔಟ್/ಟಾಟಾನಗರ, ಬಸವಸಮಿತಿ (ತಿಂಡ್ಲು ರಸ್ತೆ). ಕೇಂದ್ರೀಯ ವಿಹಾರ್ ಅಪಾರ್ಟ್ ಮೆಂಟ್ ಕಡೆಗಳಲ್ಲಿ ಅಗ್ನಿ ಶಾಮಕ ವಾಹನ, ಜನರೇಟರ್, ಫ್ಲೋಟಿಂಗ್ ಪಂಪ್ ಗಳು, ಬೋಟ್ ಮತ್ತಿತರ ಸಿಬ್ಬಂದಿ ಮತ್ತು ಸಾಧನಗಳನ್ನು ಬಿಬಿಎಂಪಿ ಅಧಿಕಾರಿಗಳು ನಿಯೋಜಿಸಿದ್ದಾರೆ. ಇದಲ್ಲದೆ ತೊಂದರೆಗೊಳಿಗಾದ ಸಾರ್ವಜನಿಕರಿಗಾಗಿ ಯಲಹಂಕ ವಿಭಾಗ, ಬ್ಯಾಟರಾಯನಪುರ ವಿಭಾಗದಲ್ಲಿ ನೀರಿನ ಬಾಟಲ್ ಹಾಗೂ ಊಟ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ.

ಈ ನಡುವೆ ನಿರಂತರ ಮಳೆಯಿಂದಾಗಿ ತೊಂದರೆಗೊಳಗಾಗಿರುವ ಅಪಾರ್ಟ್ ಮೆಂಟ್ ಗಳನ್ನು 8 ದಿನಗಳ ಕಾಲ ಮುಚ್ಚಲು ನಿರ್ದೇಶನ ನೀಡಲಾಗಿದೆ. ಅಧಿಕಾರಿಗಳ ತಂಡ ಮಳೆಪೀಡಿತ ಪ್ರದೇಶಗಳಲ್ಲಿ ನಿರಂತರವಾಗಿ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಎಸ್ ಡಿಆರ್ ಎಫ್ ಹಾಗೂ ಎನ್ ಡಿಆರ್ ಎಫ್ ತಂಡಗಳ ನಿಯೋಜನೆ :

ಮಳೆಹಾನಿ ಪೀಡಿತ ಯಲಹಂಕ ವಲಯದಲ್ಲಿ ತೊಂದರೆಗೊಳಿಗಾದ ಸಾರ್ವಜನಿಕರಿಗೆ ಕುಡಿಯುವ ನೀರು ಹಾಗೂ ಆಹಾರ ವಿತರಿಸುತ್ತಿರುವ ಬಿಬಿಎಂಪಿ ಸಿಬ್ಬಂದಿ.

“ಚೌಡೇಶ್ವರಿ ನಗರದಲ್ಲಿ 150 ಎಂಎಂ ಮಳೆಯಾಗಿದೆ. ಇನ್ನು ಕೆಲವು ಕಡೆಗಳಲ್ಲಿ ವಾಡಿಕೆಗಿಂತ ಶೇ 300ರಷ್ಟು ಹೆಚ್ಚಿನ ಮಳೆಯಾಗಿದೆ. ಈ ವಿಚಾರವಾಗಿ ಅಧಿಕಾರಿಗಳು ವರದಿ ನೀಡಿದ್ದಾರೆ. ಕೆಲವು ಪ್ರದೇಶದ ಜನರಿಗೆ ಸ್ಥಳಾಂತರ ಮಾಡಲು ಹೇಳಿದ್ದೇವೆ. ಕೇಂದ್ರಿಯ ವಿದ್ಯಾಲಯ ಹಾಗೂ ಟಾಟಾನಗರದಿಂದ ಸುಮಾರು 600 ಕುಟುಂಬಗಳನ್ನು ಸ್ಥಳಾಂತರಗೊಳಿಸಲು ಹೇಳಿದ್ದೇವೆ. 5 ಎಸ್ ಡಿಆರ್ ಎಫ್ ಹಾಗೂ ಎನ್ ಡಿಆರ್ ಎಫ್ ತಂಡಗಳ ನಿಯೋಜನೆ ಮಾಡಲಾಗಿದೆ. ಕಳೆದ 48 ಗಂಟೆಗಳಿಂದ ನಮ್ಮ ಅಧಿಕಾರಿಗಳ ತಂಡ ಮಳೆ ಪೀಡಿತ ಪ್ರದೇಶಗಳಲ್ಲಿ ನಿರಂತರವಾಗಿ ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ.  ಈಗ ಪರಿಹಾರ ಕಾರ್ಯ ನಡೆಯುವುದು ಮುಖ್ಯವೇ ಹೊರತು, ನಾನು ಸ್ಥಳಕ್ಕೆ ಭೇಟಿ ನೀಡುವುದಲ್ಲ” ಎಂದು ಮಾಹಿತಿ ನೀಡಿದರು.

“ಕೆಲವು ಅಪಾರ್ಟ್ಮೆಂಟ್ ಗಳನ್ನು ಮುಂಜಾಗ್ರತೆಯ ಕ್ರಮವಾಗಿ 8 ದಿನಗಳ ಕಾಲ ಮುಚ್ಚಲು ಸೂಚನೆ ನೀಡಲಾಗಿದೆ. 20-25 ಹೆಚ್ ಪಿ ಯಂತ್ರಗಳನ್ನು ಹಾಕಿ ಚರಂಡಿ ಸ್ವಚ್ಛಗೊಳಿಸಲಾಗುತ್ತಿದೆ. 20 ಕಡೆಗಳಲ್ಲಿ ನೀರನ್ನು ತೆಗೆಯಲಾಗುತ್ತಿದೆ. ಪ್ರಕೃತಿಯನ್ನು ತಡೆದು ನಿಲ್ಲಿಸಲು ಆಗುವುದಿಲ್ಲ. ದುಬೈನಲ್ಲಿ ಪ್ರವಾಹ, ದೆಹಲಿಯಲ್ಲಿ ಮಾಲಿನ್ಯದ ವಿಚಾರ ನೀವು ನೋಡುತ್ತಿದ್ದೀರಿ. ನಮ್ಮ ತಂಡ ಹಗಲಿರುಳು ಶ್ರಮಿಸುತ್ತಿದೆ. ನಾನು ಕೂಡ ಪರಿಹಾರ ಕಾರ್ಯಗಳ ಪರಿಶೀಲನೆ ಮಾಡಿದ್ದೇನೆ. ಪಶ್ಚಿಮ ಮತ್ತು ದಕ್ಷಿಣ ಭಾಗದಲ್ಲಿ ಹೆಚ್ಚು ಸಮಸ್ಯೆಯಾಗಿದೆ. ದಾಸರಹಳ್ಳಿಯಲ್ಲಿ ಟ್ಯಾಂಕ್ ಒಡೆದಿದೆ. ಮಹದೇವಪುರ ವಲಯದಲ್ಲಿ 5 ಬಡಾವಣೆಗಳು ಸಮಸ್ಯೆಗೆ ಸಿಲುಕಿವೆ. ಈ ಎಲ್ಲಾ ಸಮಸ್ಯೆಗಳನ್ನು ನಾವು ಬಗೆಹರಿಸುತ್ತೇವೆ” ಎಂದರು.

ಇಬ್ಬರು ಮಕ್ಕಳು ಕೆರೆಯಲ್ಲಿ ಕೊಚ್ಚಿ ಹೋಗಿರುವ ಬಗ್ಗೆ ಕೇಳಿದಾಗ, “ನಾನು ಈ ವಿಚಾರ ನೋಡಿದೆ. ಆ ತಾಯಿಯ ಗೋಳು ಕಂಡೆ. ಮಕ್ಕಳ ಶೋಧ ಕಾರ್ಯ ನಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

#Eletric Two Wheelers | ಮಧ್ಯಮ ವರ್ಗಕ್ಕೆ ಸರಿಹೊಂದುವ ಟಾಪ್-5 ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು

Next Post

ಭಾರತದ ಎಸ್ ಡಿಐ ಏರ್ ಫೋರ್ಸ್ : ಜಾಗತಿಕ ಮಟ್ಟದಲ್ಲಿ ಏರ್ ಫೋರ್ಸ್ ಸಾಫ್ಟ್ ವೇರ್ ಉತ್ಕೃಷ್ಟತೆ ಸಾಧಿಸಿದ ವಿಶ್ವದ ಮೊದಲ ಸಂಸ್ಥೆ ಎಂಬ ಗರಿ

Next Post
ತೇಜಸ್ ಯುದ್ಧ ವಿಮಾನದ ಸಾಂದರ್ಭಿಕ ಚಿತ್ರ.

ಭಾರತದ ಎಸ್ ಡಿಐ ಏರ್ ಫೋರ್ಸ್ : ಜಾಗತಿಕ ಮಟ್ಟದಲ್ಲಿ ಏರ್ ಫೋರ್ಸ್ ಸಾಫ್ಟ್ ವೇರ್ ಉತ್ಕೃಷ್ಟತೆ ಸಾಧಿಸಿದ ವಿಶ್ವದ ಮೊದಲ ಸಂಸ್ಥೆ ಎಂಬ ಗರಿ

ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ರಾಮಪುರ ಕೆರೆ ತುಂಬಿ ಕೋಡಿ ಹರಿಯುತ್ತಿರುವ ದ್ರೋಣ್ ಕ್ಯಾಮರಾ ಚಿತ್ರ.

BW EXCLUSIVE | 83 ಕೆರೆಗಳು ತುಂಬಿದರೂ ಸಂತೋಷಪಡುವ ಸ್ಥಿತಿಯಲ್ಲಿಲ್ಲ ಬೆಂಗಳೂರು : ಯಲಹಂಕ, ಮಹದೇವಪುರ ವಲಯಗಳಲ್ಲಿ ಮಳೆಹಾನಿಗೆ ನಿಖರ ಕಾರಣಗಳೇನು? ಪಾಲಿಕೆ ಎಡವಿದ್ದೆಲ್ಲಿ?

Please login to join discussion

Like Us on Facebook

Follow Us on Twitter

Recent News

ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

June 8, 2025
ವಿಧಾನಸೌಧದ ಸಾಂದರ್ಭಿಕ ಚಿತ್ರ

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

June 8, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

June 8, 2025
ವಿಧಾನಸೌಧದ ಸಾಂದರ್ಭಿಕ ಚಿತ್ರ

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

June 8, 2025

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d